ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​​ ಖರ್ಗೆ ಭೇಟಿಯಾಗಿದ್ದೇಕೆ ಡಿ.ಕೆ. ಶಿವಕುಮಾರ್​? – Kannada News | DCM DK Shivakumar Meets AICC President Mallikarjun Kharge Amidst Karnataka Political Speculation

ಬೆಂಗಳೂರು, ಜನವರಿ 12: ಡಿಸಿಎಂ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್​​ನ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ನವೆಂಬರ್, ಡಿಸೆಂಬರ್ ಮತ್ತು ಈಗ ಜನವರಿ ತಿಂಗಳಲ್ಲೂ ಈ ಚರ್ಚೆ ಮುಂದುವರಿದಿದೆ. ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ ದಾಖಲೆಯನ್ನು ಮುರಿದ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗಳಿದ್ದವು. ಒಕ್ಕಲಿಗ ಸಮುದಾಯದ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆಗಳು ಹಾಗೂ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿಯನ್ನು ಲೀಸ್ ಆಧಾರಿತ ಸಿಎಂ ಎಂದು ಟೀಕಿಸಿದ್ದು ಇಂತಹ ರಾಜಕೀಯ ಬೆಳವಣಿಗೆಗಳಿಗೆ ಮತ್ತಷ್ಟು ಇಂಬು ನೀಡಿದ್ದವು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ: ಡಾ.ಶೆಲ್ವಪಿಳೈ ಅಯ್ಯಂಗಾರ್ – Kannada News | What Happens When Gold Treasure is Found in Lakkundi? Dr. Shalvapillai Iyengar Explains Legalities

ಗದಗ, ಜ.12: ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಕುರಿತು ಇತಿಹಾಸ ತಜ್ಞರಾದ ಡಾ.ಶೆಲ್ವಪಿಳೈ ಅಯ್ಯಂಗಾರ್ ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಅವರು ಭಾರತದ ನಿಧಿ ಕಾನೂನುಗಳ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಒಂದು ವೇಳೆ ಖಾಸಗಿ ಸ್ಥಳದಲ್ಲಿ ಚಿನ್ನ ದೊರೆತರೆ ಮತ್ತು ಅದು 100 ವರ್ಷಕ್ಕಿಂತ ಹಳೆಯದಾಗಿದ್ದರೆ ಅಥವಾ ಪಾರಂಪರಿಕ ಮೌಲ್ಯವನ್ನು ಹೊಂದಿದ್ದರೆ, ಅದನ್ನು ಭಾರತ ಸರ್ಕಾರ ವಶಪಡಿಸಿಕೊಳ್ಳುತ್ತದೆ. ದೇಶದ ಸಂವಿಧಾನವು ಇತಿಹಾಸ ಮತ್ತು ಪರಂಪರೆಯನ್ನು ಉಳಿಸುವ ಕುರಿತು ವಿಧಿಗಳನ್ನು ಹೊಂದಿರುವುದರಿಂದ, ಇಂತಹ ಐತಿಹಾಸಿಕ ಮೌಲ್ಯದ ವಸ್ತುಗಳು ಸರ್ಕಾರಕ್ಕೆ ಸೇರುತ್ತವೆ. ಯಾವುದೇ ನಿಧಿಯನ್ನು ಪತ್ತೆ ಮಾಡಿದವರು ಪ್ರಾಮಾಣಿಕವಾಗಿ ಅದನ್ನು ಸರ್ಕಾರಕ್ಕೆ ಒಪ್ಪಿಸಿದರೆ, ಅದರ ಮೌಲ್ಯದ ಆಧಾರದ ಮೇಲೆ ಅವರಿಗೆ ಬಹುಮಾನ ನೀಡುವ ಅವಕಾಶ ಕಾನೂನಿನಲ್ಲಿ ಇದೆ. ಜಿಲ್ಲಾಧಿಕಾರಿಗಳು ಮೊದಲು ನೋಟಿಸ್ ಹೊರಡಿಸಿ, ಯಾರಿಗಾದರೂ ಮಾಲೀಕತ್ವದ ಹಕ್ಕುಗಳಿದ್ದರೆ ಅದನ್ನು ಸಾಬೀತುಪಡಿಸಲು ಅವಕಾಶ ನೀಡುತ್ತಾರೆ. ಆದರೆ, 100 ವರ್ಷಕ್ಕಿಂತ ಹಳೆಯದಾದ ನಿಧಿಗೆ ಮಾಲೀಕತ್ವ ಸಾಧಿಸುವುದು ಅಸಾಧ್ಯ. ಪುರಾತತ್ವಶಾಸ್ತ್ರಜ್ಞರು, ನಾಣ್ಯಶಾಸ್ತ್ರಜ್ಞರು ಮತ್ತು ಚಿನ್ನದ ಮೌಲ್ಯಮಾಪಕರು ಇದರ ಪ್ರಾಚೀನತೆ ಮತ್ತು ಮೌಲ್ಯವನ್ನು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್ – Kannada News | Bangalore Woman’s Incomplete Ejipura Flyover Magnet Sparks humor, X post goes viral

ಬೆಂಗಳೂರಿನ ಮಹಿಳೆ ಖರೀದಿಸಿದ್ರು ಅಪೂರ್ಣ ಈಜಿಪುರ ಫ್ಲೈಓವರ್ ಮ್ಯಾಗ್ನೆಟ್! ಎಕ್ಸ್ನಲ್ಲಿ ಪೋಸ್ಟ್ ವೈರಲ್

ಬೆಂಗಳೂರು, ಜನವರಿ 12: ಎಂಟು ವರ್ಷಗಳ ನಂತರವೂ ನಿರ್ಮಾಣ ಹಂತದಲ್ಲಿರುವ ಬೆಂಗಳೂರಿನ ಈಜಿಪುರ ಫ್ಲೈಓವರ್ ಕುರಿತ ಎಕ್ಸ್ ಪೋಸ್ಟ್ ಒಂದು ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಅಪೂರ್ಣ ಫ್ಲೈಓವರ್ ಅನ್ನು ಚಿತ್ರಿಸುವ ಕಸ್ಟಮ್ ಫ್ರಿಡ್ಜ್ ಮ್ಯಾಗ್ನೆಟ್ ಅನ್ನು ಖರೀದಿಸಿದ್ದು, ಅದರ ಫೋಟೋವನ್ನು X ನಲ್ಲಿ ಹಂಚಿಕೊಂಡಿದ್ದಾರೆ.

ಮಹಿಳೆ ತಮ್ಮ ಎಕ್ಸ್ ಖಾತೆಯಲ್ಲಿ ಬಸವನಗುಡಿ ಮತ್ತು ಅರ್ಧಂಬರ್ಧ ನಿರ್ಮಾಣವಾದ ಈಜಿಪುರ ಫ್ಲೈಓವರ್​ನ ಕಸ್ಟಮ್ ಮ್ಯಾಗ್ನೆಟ್​ನ ಫೋಟೋವನ್ನು ಹಂಚಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಹಾಸ್ಯದ ಅಲೆಯೆಬ್ಬಿಸದೆ. ನಾನು ಬಸವನಗುಡಿ , ಜಯನಗರ ಮತ್ತು ಬೆಂಗಳೂರು ಇವುಗಳ ನಡುವೆ ಯಾವ ಮ್ಯಾಗ್ನೆಟ್ ತೆಗೆದುಕೊಳ್ಳಲಿ ಎಂದು ಸ್ವಲ್ಪ ಯೋಚನೆ ಮಾಡಿ, ಕೊನೆಗೆ ಬಸವನಗುಡಿ ಎಂದು ನಿರ್ಧರಿಸಿದೆ ಎಂದು ಪೋಸ್ಟ್ ಮಾಡಿರುವ ಮಹಿಳೆ, ನನಗೂ ಈಜಿಪುರ ಫ್ಲೈಓವರ್‌ಗೂ ತುಂಬಾ ಹತ್ತಿರದ ಸಂಬಂಧವಿದೆ. ಹಾಗಾಗಿ ಈ ಮ್ಯಾಗ್ನೇಟ್ ಮಾಡಿಸಬೇಕಾಯಿತು ಎಂದು ಹಾಸ್ಯಭರಿತವಾಗಿ ಬರೆದುಕೊಂಡಿದ್ದಾರೆ.

ಮಹಿಳೆಯ ಎಕ್ಸ್ ಪೋಸ್​ಟ್ನಲ್ಲೇನಿದೆ?

ಆಕೆಯ ಪೋಸ್ಟ್​ಗೆ ಕಾಮೆಂಟ್​ಗಳ ಸುರಿಮಳೆಯೇ ಸುರಿದಿದ್ದು, ಕೆಲವರು ‘ಈಜಿಪುರ ಅಪೂರ್ಣ ಫ್ಲೈಓವರ್ ಅನ್ನು ರಕ್ಷಿಸಬೇಕಾಗಿದೆ. ಅದು ಬೆಂಗಳೂರಿನ ನಿಧಿ’ ಎಂದು ಬರೆದರೆ, ಇನ್ನೂ ಕೆಲವರು ‘ಒಂದು ದಿನ ಜನರು ಹಂಪಿಗೆ ಭೇಟಿ ನೀಡುವಂತೆಯೇ ಈಜಿಪುರವನ್ನು ನೋಡಲು ಬರುತ್ತಾರೆ’ ಎಂದು ತಮಾಷೆ ಮಾಡಿದ್ದಾರೆ. ಒಬ್ಬರಂತೂ ಈಜಿಪುರ ಮ್ಯಾಗ್ನೆಟ್‌ನಲ್ಲಿರುವ ಗುಂಡಿಗಳ ವಿವರವನ್ನೂ ಹೊಗಳಿದ್ದಾರೆ.

ಎರಡೇ ವರ್ಷಗಳಲ್ಲಿ ಪೂರ್ಣಗೊಳ್ಳಬೇಕಿದ್ದ ಯೋಜನೆ

ಬೆಂಗಳೂರಿನಲ್ಲಿರುವ ಈಜಿಪುರ ಮೇಲ್ಸೇತುವೆಯು ಈಜಿಪುರ ಮುಖ್ಯ ರಸ್ತೆಯ ಉದ್ದಕ್ಕೂ ಇರುವ ಎತ್ತರದ ಕಾರಿಡಾರ್ ಆಗಿದ್ದು, ಇನ್ನರ್ ರಿಂಗ್ ರಸ್ತೆ, ಕೋರಮಂಗಲ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಡುವಿನ ಸಂಚಾರವನ್ನು ಸುಗಮಗೊಳಿಸುವ ಉದ್ದೇಶವನ್ನು ಹೊಂದಿದೆ. ನಗರದ ಅತ್ಯಂತ ಜನನಿಬಿಡ ಜಂಕ್ಷನ್‌ಗಳಲ್ಲಿ ಸಿಗ್ನಲ್-ಮುಕ್ತ ಮಾರ್ಗವಾಗಿ ಯೋಜಿಸಲಾಗಿದ್ದು, ಇದು ದಟ್ಟಣೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ಭಾವಿಸಲಾಗಿತ್ತು.

ಬದಲಾಗಿ, ಇದು ಬೆಂಗಳೂರಿನಲ್ಲೇ ಅತ್ಯಂತ ವಿಳಂಬವಾದ ಯೋಜನೆಯಾಗಿ ಮಾರ್ಪಟ್ಟಿದೆ. 2017 ರಲ್ಲಿ ಇದರ ನಿರ್ಮಾಣ ಪ್ರಾರಂಭವಾಗಿತ್ತು. ಆರಂಭದಲ್ಲಿ ಈ ಯೋಜನೆಯು ಒಂದೆರಡು ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು. ಆದರೆ ಈ ನಿರೀಕ್ಷೆಗಳ ಮೇಲೆ ತಣ್ಣೀರು ಬಿದ್ದಿರುವುದು ಬೆಂಗಳೂರಿಗರ ಬೇಸರಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ! – Kannada News | Mangaluru: A fatal attack on a laborer accused of being a Bangladeshi citizen! FIR Filed Against Four Youths

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಮಂಗಳೂರು, ಜನವರಿ 12: ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ.

ದಾಖಲೆ ತೋರಿಸುವಂತೆ ಒತ್ತಾಯ

ದಿಲ್ಶಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವರ್ಷಕ್ಕೆ 4–5 ತಿಂಗಳುಗಳ ಕಾಲ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಕಾವೂರಿನ ಬಳಿ ಸ್ಥಳೀಯರಾದ ಸಾಗರ್, ಧನುಷ್, ಲಾಲು ಅಲಿಯಾಸ್ ರತೀಶ್ ಹಾಗೂ ಮೋಹನ್ ಎಂಬ ನಾಲ್ವರು ಯುವಕರು ದಿಲ್ಶಾನ್​ನನ್ನು ತಡೆದು ನಿಲ್ಲಿಸಿ, ತಾನು ಭಾರತೀಯ ಪ್ರಜೆ ಎಂಬುದಕ್ಕೆ ದಾಖಲೆ ತೋರಿಸುವಂತೆ ಒತ್ತಾಯಿಸಿದ್ದಾರೆ. ದಿಲ್ಶಾನ್ ತಕ್ಷಣ ದಾಖಲೆ ತೋರಿಸದ ಹಿನ್ನೆಲೆಯಲ್ಲಿ ಆರೋಪಿಗಳು ಆತನ ಮೇಲೆ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ದಿಲ್ಶಾನ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ರಕ್ತಸ್ರಾವ ಉಂಟಾಗಿದೆ.

ನಾಲ್ವರ ವಿರುದ್ಧ FIR

ಹಲ್ಲೆಯ ವೇಳೆ ಸ್ಥಳದಲ್ಲಿದ್ದ ಒಬ್ಬ ಹಿಂದು ಮಹಿಳೆ ಮಧ್ಯ ಪ್ರವೇಶಿಸಿ ದಿಲ್ಶಾನ್ ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯ ಬಳಿಕ ದಿಲ್ಶಾನ್ ಮನೆಗೆ ತೆರಳಿದ್ದು, ನಂತರ ಕಾವೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ನಾಲ್ವರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಕುರಿತು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?, ಗ್ರಾಮಸ್ಥರಲ್ಲಿ ಗೊಂದಲ – Kannada News | Lakkundi Gold Discovery Sparks Confusion: Villagers Demand Clarity from District Collector

ಗದಗ, ಜನವರಿ 12: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಪತ್ತೆಯಾದ ಪ್ರಕರಣದಲ್ಲಿ ಹಲವು ಗೊಂದಲಗಳು ಉಂಟಾಗಿವೆ. ಮನೆ ನಿರ್ಮಾಣದ ಅಡಿಪಾಯದ ಕೆಲಸದ ವೇಳೆ ಸುಮಾರು 1 ಕೆ.ಜಿ. ಚಿನ್ನ ಪತ್ತೆಯಾದ ಬಳಿಕ, ಪುರಾತತ್ವ ಇಲಾಖೆಯ ಅಧಿಕಾರಿಗಳು ಇದು ನಿಧಿ ಅಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದು ನಿಧಿ ಅಲ್ಲದಿದ್ದರೆ ನಮ್ಮ ಬಂಗಾರ ನಮಗೆ ವಾಪಸ್ ಕೊಡಿ ಎಂದು ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈ ವಿಷಯ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರೂ ಜಿಲ್ಲಾಡಳಿತ, ವಿಶೇಷವಾಗಿ ಗದಗ ಜಿಲ್ಲಾಧಿಕಾರಿಗಳು ಈವರೆಗೂ ಗ್ರಾಮಕ್ಕೆ ಭೇಟಿ ನೀಡಿಲ್ಲ ಅಥವಾ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಇದು ನಿಧಿಯೋ ಅಥವಾ ಪೂರ್ವಜರ ಆಸ್ತಿಯೋ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

PSLV-C62: 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ – Kannada News | ISRO PSLV C62 Launch: Anomaly Detected in Third Stage, Data Analysis Underway

ಶ್ರೀಹರಿಕೋಟ, ಜನವರಿ 12: ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್​ನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಇಸ್ರೋದ ಮಹತ್ವಾಕಾಂಕ್ಷೆಯ ಪಿಎಸ್‌ಎಲ್‌ವಿ ಸಿ-62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರಾಕೆಟ್ ಪಥ ಬದಲಾಯಿಸಿದೆ.

16 ಉಪಗ್ರಹಗಳನ್ನು ಹೊತ್ತೊಯ್ದಿದ್ದ ಈ ರಾಕೆಟ್‌ನ ದತ್ತಾಂಶವನ್ನು ಇಸ್ರೋ ವಿಶ್ಲೇಷಿಸುತ್ತಿದೆ. ಡಿಆರ್​ಡಿಒ ನಿರ್ಮಿತ ಅನ್ವೇಷ ಉಪಗ್ರಹ ಸೇರಿದಂತೆ ಈ ವರ್ಷದ ಇಸ್ರೋದ ಮೊದಲ ಉಡಾವಣೆ ಇದಾಗಿದೆ. ಬೆಳಗ್ಗೆ 10:17ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಗೊಂಡ ಈ ರಾಕೆಟ್ 16 ಉಪಗ್ರಹಗಳನ್ನು ಹೊತ್ತೊಯ್ಯುತ್ತಿತ್ತು. ಡಿಆರ್‌ಡಿಒ ನಿರ್ಮಿತ ಅನ್ವೇಷ ಹೆಸರಿನ ಭೂ ವೀಕ್ಷಣಾ ಉಪಗ್ರಹ (EOS-N) ಮತ್ತು ವಿವಿಧ ದೇಶಗಳಿಗೆ ಸೇರಿದ ಒಟ್ಟು 15 ಉಪಗ್ರಹಗಳು ಈ ರಾಕೆಟ್‌ನಲ್ಲಿ ಅಂತರಿಕ್ಷಕ್ಕೆ ಸೇರ್ಪಡೆಯಾಗಬೇಕಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಟೀಮ್ ಇಂಡಿಯಾದಿಂದ ಮತ್ತೋರ್ವ ಆಟಗಾರ ಔಟ್..!

Source link

ಬಿಗ್ ಬಾಸ್: ಮಂಗಳವಾರ ಸಂಜೆವರೆಗೆ ಮಾತ್ರ ವೋಟ್ ಹಾಕಲು ಅವಕಾಶ – Kannada News | Bigg Boss Kannada Season 12 Voting Lines open for mid week elimination

‘ಬಿಗ್ ಬಾಸ್ ಕನ್ನಡ’ 12ನೇ (BBK 12) ಸೀಸನ್​ನ ಕೊನೆಯ ವಾರ ಬಂದಿದೆ. ಈಗ ದೊಡ್ಮನೆಯಲ್ಲಿ ಉಳಿದುಕೊಂಡಿರೋದು ಕೇವಲ ಏಳು ಜನರು ಮಾತ್ರ. ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿ ಹೊರ ಹೋಗಿದ್ದಾರೆ.ಈಗ ಜಿಯೋ ಹಾಟ್​ಸ್ಟಾರ್​​ನಲ್ಲಿ ವೋಟ್ ಹಾಕಲು ಅವಕಾಶ ನಿಡಲಾಗಿದೆ. ಈ ವೋಟಿಂಗ್ ಲೈನ್ ಜನವರಿ 13ರ ಸಂಜೆವರೆಗೆ ತೆರೆದಿರಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಈಗ ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಧನುಶ್, ಧ್ರುವಂತ್, ರಘು ಹಾಗೂ ಅಶ್ವಿನಿ ಗೌಡ ಇದ್ದಾರೆ. ಇವರ ಪೈಕಿ ಧನುಶ್ ನೇರವಾಗಿ ಟಾಪ್ 6ಕ್ಕೆ ಏರಿದ್ದಾರೆ. ಉಳಿದಿರೋದು ಆರು ಮಂದಿ ಮಾತ್ರ. ಅವರೆಲ್ಲರೂ ನೇರವಾಗಿ ನಾಮಿನೇಟ್ ಆಗಿದ್ದಾರೆ.

ಈ ಆರು ಮಂದಿ ಪೈಕಿ ಒಬ್ಬರು ಈ ವಾರ ಮನೆಯಿಂದ ಹೊರಕ್ಕೆ ಹೋಗಲಿದ್ದಾರೆ. ಮಂಗಳವಾರ ರಾತ್ರಿ ಎಲಿಮಿನೇಷನ್ ನಡೆಯಲಿದ್ದು, ಬುಧವಾರದ ಎಪಿಸೋಡ್​​ನಲ್ಲಿ ಇದು ಪ್ರಸಾರ ಕಾಣುವ ಸಾಧ್ಯತೆ ಇದೆ. ಅವರು ಯಾರು ಎನ್ನುವ ಪ್ರಶ್ನೆ ಮೂಡಿದೆ.

ಸದ್ಯ ವೋಟಿಂಗ್​ ಲೈನ್ ಓಪನ್ ಆಗಿದ್ದು, ರಕ್ಷಿತಾ ಶೆಟ್ಟಿ, ಗಿಲ್ಲಿ ನಟ, ಕಾವ್ಯಾ ಶೈವ, ಧ್ರುವಂತ್, ರಘು ಹಾಗೂ ಅಶ್ವಿನಿ ಗೌಡ ಹೆಸರು ಇದೆ. ಇವರಿಗೆ ವೋಟ್ ಮಾಡಬೇಕು. ಮಂಗಳವಾರ ಸಂಜೆ 6 ಗಂಟೆವರೆಗೆ ಮಾತ್ರ ವೋಟ್ ಮಾಡಲು ಅವಕಾಶ ಇದೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಮರಳಿದ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್

ಹಾಗಂದ ಮಾತ್ರಕ್ಕೆ ಈ ಮತಗಳನ್ನು ಫಿನಾಲೆಗೆ ಪರಿಗಣಿಸೋದಿಲ್ಲ. ಈ ಮತಗಳು ಪರಿಗಣನೆಗೆ ಬರೋದು ಕೇವಲ ಮಧ್ಯವಾರದ ಎಲಿಮಿನೇಷನ್​ಗೆ ಮಾತ್ರ. ಆ ಬಳಿಕ ಬುಧವಾರ ರಾತ್ರಿ ಫಿನಾಲೆ ವಾರಕ್ಕೆ ವೋಟಿಂಗ್ ಲೈನ್ ಆರಂಭ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್​​ ಸುದ್ದಿ: ಫೆಬ್ರವರಿಯಿಂದ ಟಿಕೆಟ್​​ ದರ ಹೆಚ್ಚಳ? – Kannada News | Bangalore Metro Fare Hike: Namma Metro Ticket Prices to Rise in Feb 2025?

ಬೆಂಗಳೂರು, ಜನವರಿ 12: ನೀವು ಮೆಟ್ರೋ ಪ್ರಿಯರಾ? ಪ್ರತಿನಿತ್ಯ ಅವುಗಳಲ್ಲೇ ಓಡಾಡ್ತೀರಾ? ಹಾಗಿದ್ರೆ ಹೆಚ್ಚಿನ ದರ ನೀಡಲು ಸಿದ್ಧರಾಗಿ. ಹೌದು, ಫೆಬ್ರವರಿಯಿಂದ ನಮ್ಮ ಮೆಟ್ರೋ ರೈಲುಗಳ ಪ್ರಯಾಣದರ ಏರಿಕೆ ಸಾಧ್ಯತೆ ಇದೆ. ಮೆಟ್ರೋ ಟಿಕೆಟ್​​ ದರವನ್ನು ಪ್ರತಿವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಿಸಲು ಫೇರ್​​ ಫಿಕ್ಸೇಶನ್​​ ಕಮಿಟಿ (FFC) ಶಿಫಾರಸ್ಸು ಮಾಡಿರುವ ಕಾರಣ, ದಿನನಿತ್ಯದ ಪ್ರಯಾಣಕ್ಕೆ ಮೆಟ್ರೋ ರೈಲು ಅವಲಂಬಿಸಿರುವವರಿಗೆ ಮತ್ತಷ್ಟು ಹೊರೆಯಾಗುವ ಸಾಧ್ಯತೆ ಇದೆ.

2025ರ ಫೆಬ್ರವರಿಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ದರಗಳನ್ನು ಭಾರಿ ಪ್ರಮಾಣದಲ್ಲಿ ಪರಿಷ್ಕರಿಸಿತ್ತು. ಕೆಲ ಮಾರ್ಗಗಳಲ್ಲಿ ಶೇ.71ರಷ್ಟು ದರ ಹೆಚ್ಚಿಸಿ ಒಂದು ವರ್ಷ ಇನ್ನೇನು ಕಳೆಯುತ್ತಿದೆ. ಈ ಹೊತ್ತಲ್ಲಿ ಬಿಎಂಆರ್​​ಸಿಎಲ್​​ ಮತ್ತೊಂದು ಶಾಕ್​​ ಕೊಡುತ್ತಾ ಎನ್ನವ ಪ್ರಶ್ನೆಯೀಗ ಉದ್ಭವಿಸಿದೆ. ಈಗಿರುವ ದರಗಳಿಂದಲೇ ನಮ್ಮ ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ವ್ಯವಸ್ಥೆ ಎನಿಸಿಕೊಂಡಿದೆ. ಈ ನಡುವೆ ಮತ್ತೆ ದರ ಏರಿಕೆಯಾದಲ್ಲಿ ಪ್ರಯಾಣಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳೋದು ಗ್ಯಾರಂಟಿ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಡಬಲ್​​ ಗುಡ್​​ನ್ಯೂಸ್​​

ಪ್ರತಿವರ್ಷ ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಪರಿಷ್ಕರಣೆಗೆ ಪ್ರಯಾಣಿಕರಿಂದ ತಿವ್ರ ಆಕ್ಷೇಪ ವ್ಯಕ್ತವಾಗಿದೆ. ಸಾರ್ವಜನಿಕ ಸಾರಿಗೆ ಸಾಮಾನ್ಯ ನಾಗರಿಕರ ಕೈಗೆಟಕದಂತಾಗುತ್ತಿದೆ. ಮೆಟ್ರೋ ಪ್ರಯಾಣ ಅಗ್ಗವಾಗಿರಬೇಕು, ಐಷಾರಾಮಿ ಸೇವೆಯಾಗಬಾರದು ಎಂದು ದಿನನಿತ್ಯದ ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಟಿಕೆಟ್​​ ದರ ಹೆಚ್ಚಳವಾದ್ರೆ ಇದು ಗಾಯದ ಮೇಲೆ ಉಪ್ಪು ಎರಚಿದಂತೆ ಎಂದು ಮತ್ತೊಬ್ಬರು ಹೇಳಿದ್ದಾರೆ. ತುಂಬಿ ತುಳುಕುತ್ತಿರುವ ರೈಲುಗಳು, ಆಮೆ ಗತಿಯಲ್ಲಿ ಸಾಗುತ್ತಿರುವ ಹೊಸ ಮೆಟ್ರೋ ರೈಲು ಮಾರ್ಗಗಳ ನಿರ್ಮಾಣದ ನಡುವೆ ದರ ಏರಿಕೆ ಮಾತ್ರ ಆಗುತ್ತಲೇ ಇರುವುದು ಪ್ರಯಾಣಿಕರನ್ನುಕೆರಳಿಸಿದೆ.

ಮೆಟ್ರೋ ಸೇವೆ ಅಗ್ಗವಲ್ಲದೇ ಇರಬಹುದು, ಆದರೆ ರೈಲುಗಳು ಸಾಮರ್ಥ್ಯಕ್ಕಿಂತ ಹೆಚ್ಚಾಗಿ ತುಂಬಿ ಓಡಾಡುವಾಗ ಇದನ್ನು ಐಷಾರಾಮಿ ಸೇವೆ ಎಂದು ಕರೆಯುವುದು ಹಾಸ್ಯಾಸ್ಪದ. ಈಗಾಗಲೇ ಸುಮಾರು ಶೇ. 32ರಷ್ಟು ಹೆಚ್ಚುವರಿ ಹಣವನ್ನು ಪ್ರಯಾಣಿಕರು ಪಾವತಿಸುತ್ತಿದ್ದಾರೆ. ಅನ್ಯಾಯಕರ ದರಗಳನ್ನು ಮೌನವಾಗಿ ಒಪ್ಪಿಕೊಳ್ಳುತ್ತಿರುವುದೇ ಮತ್ತೊಮ್ಮೆ ದರ ಏರಿಕೆಗೆ ಬಿಎಂಆರ್‌ಸಿಎಲ್‌ಗೆ ಧೈರ್ಯ ನೀಡುತ್ತಿದೆ. ಮೆಟ್ರೋಗೆ ಹೆಚ್ಚು ಹಣ ಕೊಡಿ, ಇಲ್ಲವೇ ಟ್ರಾಫಿಕ್‌ನಲ್ಲಿ ಗಂಟೆಗಳ ಕಾಲ ಸಿಲುಕಿರಿ ಎಂಬ ಸ್ಥಿತಿ ಸದ್ಯ ಬೆಂಗಳೂರಲ್ಲಿದ್ದು, ಇವೆರಡು ಸನ್ನಿವೇಶಗಳಲ್ಲಿಯೂ ಬೆಲೆ ತೆರುತ್ತಿರೋದು ಮಾತ್ರ ಸಾರ್ವಜನಿಕರೇ ಎಂದು ಪ್ರಯಾಣಿಕರು ಕಿಡಿ ಕಾರಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಬಳ್ಳಾರಿ ಗಲಭೆ: ರೆಡ್ಡಿ ಬೆನ್ನಿಗೆ ನಿಂತ ಬಿಜೆಪಿ ಹೈಕಮಾಂಡ್, ದೆಹಲಿಯಿಂದ ಬಂತು ಮಹತ್ವದ ಸೂಚನೆ – Kannada News | Ballari Clash: BJP High Command Backs Janardhana Reddy, Issues Key Directions from Delhi

ಬೆಂಗಳೂರು, ಜನವರಿ 12: ಬಳ್ಳಾರಿಯಲ್ಲಿ (Ballari) ನಡೆದ ಗಲಭೆಗೆ ಸಂಬಂಧಿಸಿದ ಮಾಹಿತಿ ಬಿಜೆಪಿ (BJP) ಕಾರ್ಯಾಧ್ಯಕ್ಷ ನಿತಿನ್ ನಬಿನ್ ಅವರಿಗೆ ತಲುಪಿದ್ದು, ಅವರು ಈ ಪ್ರಕರಣದ ಕುರಿತು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿದ್ದಾರೆ. ದೂರವಾಣಿ ಸಂಭಾಷಣೆಯಲ್ಲಿ ನಿತಿನ್ ನಬಿನ್ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಇದು ಗಂಭೀರ ವಿಚಾರವಾಗಿದ್ದು ಹೈಕಮಾಂಡ್ ನಿಮ್ಮ ಜತೆಗಿರಲಿದೆ ಎಂದು ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜರ್ನಾದನ ರೆಡ್ಡಿ ಜತೆ ನಿತಿನ್ ನಬಿನ್ ಹೇಳಿದ್ದೇನು?

ಜರ್ನಾದನ ರೆಡ್ಡಿ ಮಾತನಾಡಿದ ನಿತಿನ್ ನಬಿನ್, ಪ್ರಕರಣ ಅತ್ಯಂತ ಗಂಭೀರವಾಗಿದೆ. ಯಾವುದೇ ರೀತಿಯ ಹೋರಾಟ ನಡೆಸಲು ಬಿಜೆಪಿ ರಾಷ್ಟ್ರೀಯ ನಾಯಕತ್ವದ ಸಂಪೂರ್ಣ ಬೆಂಬಲ ಇದೆ ಎಂದು ಭರವಸೆ ನೀಡಿದ್ದಾರೆ. ಅಗತ್ಯವಿದ್ದಲ್ಲಿ ಈ ವಿಷಯವನ್ನು ರಾಷ್ಟ್ರೀಯ ಮಟ್ಟದಲ್ಲೂ ಪ್ರಸ್ತಾಪ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ ಎನ್ನಲಾಗಿದೆ.

ಪಾದಯಾತ್ರೆ ಸೇರಿದಂತೆ ಹೋರಾಟದ ರೂಪುರೇಷೆಗಳ ಕುರಿತು ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸುವಂತೆ ಜನಾರ್ದನ ರೆಡ್ಡಿಗೆ ನಿತಿನ್ ನಬಿನ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ರೆಡ್ಡಿ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಬಳ್ಳಾರಿ ಪಾದಯಾತ್ರೆ ನಡೆಸುವ ಬಗ್ಗೆ ಒಲವು ತೋರಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಪಾದಯಾತ್ರೆಯ ಕುರಿತು ಇಂದು ಚರ್ಚೆ

ಬಳ್ಳಾರಿ ಪಾದಯಾತ್ರೆಯ ಕುರಿತು ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಪಾದಯಾತ್ರೆಯ ರೂಪುರೇಷೆಗಳ ಕುರಿತು ಶ್ರೀರಾಮುಲು ಮತ್ತು ವಿಜಯೇಂದ್ರ ನಡುವೆ ಪ್ರತ್ಯೇಕ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ವಾಲ್ಮೀಕಿ ನಿಗಮ ಹಗರಣ ನಡೆದಿದ್ದು, ಇದೀಗ ವಾಲ್ಮೀಕಿ ಪುತ್ಥಳಿ ಸಂಬಂಧ ಗಲಾಟೆ ನಡೆದಿರುವುದನ್ನು ಉಲ್ಲೇಖಿಸಿರುವ ಬಿಜೆಪಿ ನಾಯಕರು, ವಾಲ್ಮೀಕಿ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಸಮುದಾಯದ ಪರವಾಗಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ಜನಾರ್ದನ ರೆಡ್ಡಿ

ಗಲಭೆ ವಿರುದ್ಧದ ಹೋರಾಟದಲ್ಲಿ ರೆಡ್ಡಿ, ರಾಮುಲು ನಡುವೆ ಭಿನ್ನಾಭಿಪ್ರಾಯ ಇದೆ ಎನ್ನಲಾಗಿತ್ತು. ಗಲಭೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲು ಜನಾರ್ದನ ರೆಡ್ಡಿ ಪ್ಲ್ಯಾನ್​ ಮಾಡಿದ್ದರೆ, ಈ ವಿಚಾರವನ್ನು ಇಟ್ಟುಕೊಂಡು ಪಾದಯಾತ್ರೆಗೆ ಶ್ರೀರಾಮುಲು ಚಿಂತನೆ ನಡೆಸಿದ್ದರು. ಇದರಿಂದ ರಾಜ್ಯ ಬಿಜೆಪಿ ನಾಯಕರು ಪೇಚಿಗೆ ಸಿಲುಕಿದ್ದರು ಎನ್ನಲಾಗಿತ್ತು. ಆದರೆ, ಇದೀಗ ಪಾದಯಾತ್ರೆ ಬಗ್ಗೆ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಒಟ್ಟಿನಲ್ಲಿ ಬಳ್ಳಾರಿ ಗಲಭೆ ವಿಚಾರದಲ್ಲಿ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕತ್ವ ಸಕ್ರಿಯಗೊಂಡಿದ್ದು, ಮುಂದಿನ ಹೋರಾಟದ ತಂತ್ರದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version