‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಮಾರ್ಚ್ 18ರಂದು ಚಿತ್ರಕ್ಕೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ. ಮೈಸೂರಲ್ಲಿ ಮೊದಲ ಶೋ ಬುಕಿಂಗ್ ಓಪನ್ ಆಗಲಿದೆ. ಈ ವಿಷಯ ತಿಳಿದು ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಈ ಸಂದರ್ಭದ ವಿಡಿಯೋನ ಮಿಲನಾ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ, ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ವೆಟ್ಲಪಲೆಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಈ ಅವಘಡದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ಕೆಲವರು ಗಂಭೀರವಾಗಿ ಗಾಯಗೊಂಡರು. ಅದೇ ಸ್ಫೋಟದಲ್ಲಿ, ಕಡಿಂಪಳ್ಳಿ ದುರ್ಗಾ ಎಂಬ ಮಾನಸಿಕ ಅಸ್ವಸ್ಥ ಯುವತಿ ತನ್ನ ತಂದೆಯನ್ನು ಕಳೆದುಕೊಂಡರು. ಅದಕ್ಕೂ ಮೊದಲು, ಆಕೆಯ ತಾಯಿ ಗಂಭೀರ ಅನಾರೋಗ್ಯದಿಂದ ನಿಧನರಾದರು. ಇದರಿಂದಾಗಿ, ದುರ್ಗಾ ಒಂಟಿಯಾಗಿದ್ದರು. ಅವರ ಸಹಾಯಕ್ಕೆ ಅಲ್ಲು ಅರ್ಜುನ್ ನಿಂತಿದ್ದಾರೆ.
ದುರ್ಗಾಳ ತಂದೆ ತಂದೆ ಧನರಾಜು ತನ್ನ ಮಾನಸಿಕ ಅಸ್ವಸ್ಥ ಮಗಳನ್ನು ಬಹಳ ಎಚ್ಚರಿಕೆಯಿಂದ ನೋಡಿಕೊಳ್ಳುತ್ತಿದ್ದರು . ಆದರೆ, ಈಗ ಅವರು ನಿಧನರಾದ ನಂತರ, ದುರ್ಗಾಗೆ ಆಹಾರ ನೀಡಲು ಯಾರೂ ಇಲ್ಲ ಎಂಬ ಸುದ್ದಿ ಹೊರ ಬಂತು. ತನ್ನ ಹೆತ್ತವರನ್ನು ಕಳೆದುಕೊಂಡು ಹತಾಶ ಪರಿಸ್ಥಿತಿಯಲ್ಲಿರುವ ದುರ್ಗಾಳ ದುಃಖದ ಕಥೆ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಅಲ್ಲು ಅರ್ಜುನ್ಗೆ ತಲುಪಿಸಿದರು.
ಅನಾಥಳಾದ ಮಾನಸಿಕ ಅಸ್ವಸ್ಥ ಯುವತಿಯ ಸ್ಥಿತಿಯನ್ನು ನೋಡಿ ಬನ್ನಿ ಆಘಾತಕ್ಕೊಳಗಾಗಿದ್ದರು. ಆಕೆಯ ಭವಿಷ್ಯವನ್ನು ಒಳ್ಳೆಯದು ಮಾಡುವ ನಿರ್ಧಾರವನ್ನು ಅವರು ನಿರ್ಧರಿಸಿದರು. ದುರ್ಗಾಳ ಆರೈಕೆಯ ಜವಾಬ್ದಾರಿಯನ್ನು ತಾವು ವಹಿಸಿಕೊಳ್ಳುವುದಾಗಿ ಘೋಷಿಸಿದರು. ದುರ್ಗಾಳ ಉಳಿದ ಜೀವನದುದ್ದಕ್ಕೂ ಆಕೆಯ ಬ್ಯಾಂಕ್ ಖಾತೆಗೆ ತಿಂಗಳಿಗೆ 7,500 ರೂ.ಗಳನ್ನು ಜಮಾ ಮಾಡಲು ಅವರು ವ್ಯವಸ್ಥೆ ಮಾಡಿದ್ದಾರೆ.
After learning about the tragic fire accident at a fireworks factory in Kakinada district that claimed her father’s life, he extended support to mentally challenged girl Kadimpalli Durga.
ಅಲ್ಲು ಅರ್ಜುನ್ ಅವರ ಸೂಚನೆಯ ಮೇರೆಗೆ, ಅಲ್ಲು ಅರ್ಜುನ್ ಅಭಿಮಾನಿಗಳ ಸಂಘದ ಪ್ರತಿನಿಧಿಗಳು ವೆಟ್ಲಪಲೆಂ ಗ್ರಾಮಕ್ಕೆ ಹೋಗಿ ದುರ್ಗಾ ಅವರನ್ನು ಖುದ್ದಾಗಿ ಭೇಟಿಯಾದರು. ಅವರು ಆಕೆ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಪ್ರೋತ್ಸಾಹಿಸಿದ್ದಾರೆ. ಪ್ರಸ್ತುತ, ಇದಕ್ಕೆ ಸಂಬಂಧಿಸಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಮಾನಸಿಕ ಅಂಗವೈಕಲ್ಯದಿಂದ ಬಳಲುತ್ತಿರುವ ಯುವತಿಗೆ ಈ ಆರ್ಥಿಕ ನೆರವು ತುಂಬಾ ಧೈರ್ಯ ತುಂಬಿದೆ ಎಂದು ನೆಟ್ಟಿಗರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಯುವತಿ ಜೀವನಪರ್ಯಂತ ಆರ್ಥಿಕ ಭದ್ರತೆ ಒದಗಿಸಿದ ಅಲ್ಲು ಅರ್ಜುನ್ ಅವರನ್ನು ನಿಜವಾದ ನಾಯಕ ಎಂದು ಪ್ರಶಂಸೆಯ ಸುರಿಮಳೆಗೈಯಲಾಗುತ್ತಿದೆ.
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಸಿದ್ಧತೆಗಳು ಶುರುವಾಗಿದೆ. ಮಾರ್ಚ್ 28 ರಂದು ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ.
ಇದಾಗ್ಯೂ ಕಳೆದ ಬಾರಿಯ ರನ್ನರ್ ಅಪ್ ತಂಡ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಸೌತ್ ಡರ್ಬಿಯ ಬಲಿಷ್ಠ ಎರಡು ಟೀಮ್ಗಳನ್ನು ಮುಖಾಮುಖಿ ಮಾಡಲು ಐಪಿಎಲ್ ಗವರ್ನರ್ ಕೌನ್ಸಿಲ್ ನಿರ್ಧರಿಸಿದೆ.
ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೊದಲ ಮ್ಯಾಚ್ನಲ್ಲೇ ಮುಖಾಮುಖಿಯಾಗಲಿದ್ದಾರೆ ಎಂದು ವರದಿಯಾಗಿದೆ. ಮುಂಬೈನಲ್ಲಿ ನಡೆದ ಐಪಿಎಲ್ ಗವರ್ನರ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಎರಡು ಫ್ರಾಂಚೈಸಿಗಳ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ತಿಳಿದು ಬಂದಿದೆ.
ಅದರಂತೆ ಮಾರ್ಚ್ 28 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುವುದು ಬಹುತೇಕ ಖಚಿತ. ಹಾಗೆಯೇ ಮೊದಲ ಎರಡು ದಿನಗಳಲ್ಲೇ ಆರ್ಸಿಬಿ, ಸಿಎಸ್ಕೆ, ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್ ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಲಾಗಿದೆ.
ಇನ್ನು ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿನ ಮುಂಬರುವ ವಿಧಾನಸಭಾ ಚುನಾವಣೆ ನಿಮಿತ್ತ ಮೊದಲಿಗೆ 20 ದಿನಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲು ನಿರ್ಧರಿಸಲಾಗಿದೆ. ಅತ್ತ ಚುನಾವಣೆಯ ದಿನಾಂಕ ನಿಗದಿಯಾದ ಬಳಿಕ ಉಳಿದ ವೇಳಾಪಟ್ಟಿ ಪ್ರಕಟವಾಗಲಿದೆ.
ಬೆಂಗಳೂರು, ಮಾ.11: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್ಪಿಜಿ (LPG) ಸಿಲಿಂಡರ್ ಕೊರತೆಯು ಹುಬ್ಬಳ್ಳಿಯ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಹಲವು ಹೋಟೆಲ್ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಹೆಚ್ಚು ಗ್ಯಾಸ್ ಬಳಸುವ ಐಟಂಗಳಾದ ಪುರಿ, ದೋಸೆ ಸೇರಿದಂತೆ ಕೆಲವು ಪ್ರಮುಖ ಉಪಹಾರಗಳನ್ನು ತಯಾರಿಸುವುದನ್ನು ಮಾಲೀಕರು ಸ್ಥಗಿತಗೊಳಿಸಿದ್ದಾರೆ. ಗ್ಯಾಸ್ ಉಳಿತಾಯ ಮಾಡಲು ಕೇವಲ ಸೀಮಿತ ತಿಂಡಿಗಳನ್ನು ಮಾತ್ರ ತಯಾರಿಸಲಾಗುತ್ತಿದೆ.ಪಾರ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಖರ್ಚು ನಿಭಾಯಿಸಲು ಸಾಧ್ಯವಾಗದೆ ಹೋಟೆಲ್ ಮಾಲೀಕರು ಈಗಾಗಲೇ ತಮ್ಮ ಸಿಬ್ಬಂದಿಗಳನ್ನು ಕಡಿತಗೊಳಿಸುತ್ತಿದ್ದಾರೆ. ಹೋಟೆಲ್ ನಂಬಿ ಜೀವನ ಮಾಡುತ್ತಿರುವ ಸಾವಿರಾರು ಕಾರ್ಮಿಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. “ಹೋಟೆಲ್ ಬಂದ್ ಆದರೆ ನಮ್ಮ ಕುಟುಂಬದ ಗತಿ ಏನು?” ಎಂದು ಕೆಲಸಗಾರರು ಕಣ್ಣೀರು ಹಾಕುತ್ತಿದ್ದಾರೆ. ಕೆಲವು ಸಣ್ಣ ಹೋಟೆಲ್ಗಳು ಈಗಾಗಲೇ ಬಾಗಿಲು ಹಾಕಿದ್ದರೆ, ದೊಡ್ಡ ಹೋಟೆಲ್ಗಳು ದಾಸ್ತಾನು ಇರುವಷ್ಟು ದಿನ ಮಾತ್ರ ವ್ಯವಹಾರ ನಡೆಸಲು ಮುಂದಾಗಿವೆ. ಇನ್ನು ಬೆಂಗಳೂರಿನ ಅನೇಕ ಕಡೆ ಇದು ಹೋಟೆಲ್ಗಳು ಬಂದ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಾಣಿಜ್ಯ ಎಲ್ಪಿಜಿ (LPG) ಸಿಲಿಂಡರ್ಗಳ ಕೊರತೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದೆ. ಈ ಸಮಸ್ಯೆಯಿಂದ ಕಂಗೆಟ್ಟಿರುವ ಹೋಟೆಲ್ ಉದ್ಯಮಿಗಳು ಟಿವಿ9 ಮೂಲಕ ತಮ್ಮ ಅಳಲನ್ನು ತೋಡಿಕೊಂಡಿದ್ದು, ಸರ್ಕಾರದ ವಿಳಂಬ ನೀತಿಯನ್ನು ಕಟುವಾಗಿ ಟೀಕಿಸಿದ್ದಾರೆ.”ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ, ಸರ್ಕಾರವೇ ಈ ಹೋಟೆಲ್ಗಳನ್ನು ವಹಿಸಿಕೊಂಡು ನಡೆಸಲಿ” ಎಂದು ಹೋಟೆಲ್ ಉದ್ಯಮಿ ಶ್ವೇತಾ ಮಡಪ್ಪಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೋಟೆಲ್ ಉದ್ಯಮ ಕಂಗೆಟ್ಟಿತ್ತು. ಈಗ ಸಿಲಿಂಡರ್ ಸಿಗದಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೋಟೆಲ್ ಉದ್ಯಮವನ್ನು ನಂಬಿ ರಾಜ್ಯದಲ್ಲಿ ಕೋಟ್ಯಂತರ ಜನರು ಬದುಕು ಕಟ್ಟಿಕೊಂಡಿದ್ದಾರೆ. ಗ್ಯಾಸ್ ಪೂರೈಕೆ ಸಮರ್ಪಕವಾಗದಿದ್ದರೆ ಮುಂದೆ ದಾರಿ ಕಾಣದಂತಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ಈ ಗಂಭೀರ ಪರಿಸ್ಥಿತಿಯನ್ನು ಗಮನಿಸಿ, ಸಮರ್ಪಕ ಗ್ಯಾಸ್ ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಉದ್ಯಮ ಸಂಪೂರ್ಣವಾಗಿ ಕುಸಿಯಲಿದೆ ಎಂದು ಎಚ್ಚರಿಸಿದ್ದಾರೆ.
ಇನ್ನು ಬೆಳಗಾವಿ ನಗರದಲ್ಲಿ ವಾಣಿಜ್ಯ ಎಲ್ಪಿಜಿ (LPG) ಸಿಲಿಂಡರ್ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಹೋಟೆಲ್ ಮಾಲೀಕರು ಅಕ್ಷರಶಃ ಕಂಗಾಲಾಗಿದ್ದಾರೆ.ಕೇವಲ ಮೂರೇ ದಿನಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಬರೋಬ್ಬರಿ 500 ರಿಂದ 600 ರೂಪಾಯಿ ಏರಿಕೆಯಾಗಿದೆ. ಈ ಹಿಂದೆ 1,600 ರೂಪಾಯಿಗೆ ಸಿಗುತ್ತಿದ್ದ ಸಿಲಿಂಡರ್ ಬೆಲೆ ಈಗ 2,200 ರೂಪಾಯಿಗೆ ತಲುಪಿದೆ. ಹೆಚ್ಚು ಹಣ ಕೊಡುತ್ತೇವೆ ಎಂದರೂ ಮಾರುಕಟ್ಟೆಯಲ್ಲಿ ಸಿಲಿಂಡರ್ಗಳು ಸಿಗುತ್ತಿಲ್ಲ” ಎಂದು ಮಾಲೀಕರು ದೂರಿದ್ದಾರೆ.
ಟೆಹ್ರಾನ್, ಮಾರ್ಚ್ 11: ಇರಾನ್(Iran) ಸರ್ವೋಚ್ಚ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರಅವರ ಮಗ ಮೊಜ್ತಬಾ ಖಮೇನಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಖಮೇನಿಗೆ ತಮ್ಮ ಮಗ ತನ್ನ ಉತ್ತರಾಧಿಕಾರಿಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ. ಖಮೇನಿ ತಮ್ಮ ಜೀವಿತಾವಧಿಯಲ್ಲಿ ಹಲವಾರು ಬಾರಿ ವಿಶೇಷ ಸಭೆಯಲ್ಲಿ ಇದರ ಬಗ್ಗೆ ಮಾತನಾಡಿದ್ದರು. ಇದರ ಹಿಂದಿನ ಕಾರಣ ದಾಳಿಯ ಭಯ ಅಥವಾ ಅವರ ಮಗನ ಜೀವ ಹೋಗುತ್ತೆ ಎಂಬುದಲ್ಲ ಬೇರೆಯದೇ ಕಾರಣ ಇದೆ.
ಇರಾನ್ ವೈರ್ ವರದಿವರದಿಗಳ ಪ್ರಕಾರ, ಇರಾನ್ನ ತಜ್ಞರ ಸಭೆಯ ಹಿರಿಯ ಸದಸ್ಯ ಮಹಮೂದ್ ಮೊಹಮ್ಮದಿ ಇರಾಕಿ, ILNA ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ. ಖಮೇನಿಯವರ ವಿರೋಧದ ಹಿಂದಿನ ನಿಜವಾದ ಕಾರಣವೆಂದರೆ ಅವರು ರಾಜವಂಶಸ್ಥರು ಎಂದು ಹಣೆಪಟ್ಟಿ ಕಟ್ಟಿಕೊಳ್ಳುವುದನ್ನು ಬಯಸಿರಲಿಲ್ಲ.
ಅವರು ತಮ್ಮ ಮಗನಿಗೆ ಸಿಂಹಾಸನವನ್ನು ಹಸ್ತಾಂತರಿಸಿದ್ದಾರೆಂದು ಜನರು ಹೇಳಿಕೊಳ್ಳುವುದು ಇಷ್ಟವಿರಲಿಲ್ಲ. 1979 ರ ಇರಾನ್ನಲ್ಲಿ ನಡೆದ ಇಸ್ಲಾಮಿಕ್ ಕ್ರಾಂತಿಯು ರಾಜಪ್ರಭುತ್ವವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿತ್ತು.
ತಮ್ಮ ಮಗ ತನ್ನ ಉತ್ತರಾಧಿಕಾರಿಯಾದರೆ, ಇರಾನ್ ಆನುವಂಶಿಕ ನಾಯಕತ್ವ ವ್ಯವಸ್ಥೆಗೆ, ಅಂದರೆ ರಾಜರು ಮತ್ತು ರಾಜಕುಮಾರರ ವ್ಯವಸ್ಥೆಗೆ ಮರಳಿದೆ ಎಂಬ ಸಂದೇಶವನ್ನು ಜಗತ್ತಿಗೆ ಮತ್ತು ಇರಾನಿನ ಜನರಿಗೆ ಕಳುಹಿಸುತ್ತದೆ ಎಂದು ಖಮೇನಿ ನಂಬಿದ್ದರು. 2009 ಕ್ಕಿಂತ ಮೊದಲು ಅವರು ಅಧಿಕೃತವಾಗಿ ಯಾವುದೇ ಸರ್ಕಾರಿ ಹುದ್ದೆಯನ್ನು ಹೊಂದಿರಲಿಲ್ಲ.
ಇದರ ಹೊರತಾಗಿಯೂ, ಅವರನ್ನು ಇರಾನ್ನ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿತ್ತು. ಯುಎಸ್ ಖಜಾನೆ ಇಲಾಖೆಯ ಪ್ರಕಾರ, ಮೊಜ್ತಬಾ ತನ್ನ ತಂದೆಯ ವಿಶ್ವಾಸವನ್ನು ಗಳಿಸುವುದಲ್ಲದೆ, ಇರಾನ್ನ ಅತ್ಯಂತ ಶಕ್ತಿಶಾಲಿ ಮಿಲಿಟರಿ ಪಡೆ, ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನೊಂದಿಗೆ ಆಳವಾದ ಸಂಬಂಧವನ್ನು ಹೊಂದಿದ್ದರು.
ಇರಾನ್ನಲ್ಲಿ, ಸರ್ವೋಚ್ಚ ನಾಯಕನನ್ನು 88 ಧಾರ್ಮಿಕ ವಿದ್ವಾಂಸರ ಗುಂಪಾದ ತಜ್ಞರ ಸಭೆಯು ಆಯ್ಕೆ ಮಾಡುತ್ತದೆ. ದೇಶವನ್ನು ಯಾರು ಮುನ್ನಡೆಸಬೇಕೆಂದು ಈ ಸಂಸ್ಥೆ ನಿರ್ಧರಿಸುತ್ತದೆ. ಅಯತೊಲ್ಲಾ ಅಲಿ ಖಮೇನಿ 1989 ರಿಂದ ಈ ಹುದ್ದೆಯನ್ನು ಅಲಂಕರಿಸಿದ್ದಾರೆ. ಅಸೆಂಬ್ಲಿಯ ಕೆಲವು ಸದಸ್ಯರು ಮೊಜ್ತಬಾ ಅವರ ಹೆಸರನ್ನು ಪರಿಗಣಿಸಲು ಬಯಸಿದ್ದರೂ, ಇರಾನ್ನ ಪ್ರಜಾಪ್ರಭುತ್ವ ಮತ್ತು ಕ್ರಾಂತಿಕಾರಿ ಇಮೇಜ್ಗೆ ಹಾನಿಯಾಗದಂತೆ ಸರ್ವೋಚ್ಚ ನಾಯಕ ಸ್ವತಃ ಇದಕ್ಕೆ ಬ್ರೇಕ್ ಹಾಕಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಸಾಕಷ್ಟು ತಿರವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈಗ ಧಾರಾವಾಹಿಗೆ ಹೊಸ ಟ್ವಿಸ್ಟ್ ಒಂದು ಸಿಗುತ್ತಿದೆ. ಹಾಗಾದರೆ ಏನು ಆ ಟ್ವಿಸ್ಟ್? ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ ಧಾರಾವಾಹಿಯಲ್ಲಿ ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ ಬರುವ ಸೂಚನೆ ಸಿಕ್ಕಿದೆ. ಹಾಗಾದ್ರೆ ಧಾರಾವಾಹಿಗೆ ವಿಲನ್ ಇರೋದೆ ಇಲ್ವಾ? ಆ ಬಗ್ಗೆ ಇಲ್ಲಿದೆ ವಿವರ.
‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೊಡ್ಡ ಬದಲಾವಣೆ ಸಿಕ್ಕಿದೆ. ಈ ಧಾರಾವಾಹಿಯಲ್ಲಿ ಮಾಳವಿಕಾ ಎಷ್ಟು ಕೆಟ್ಟವಳು ಎಂಬುದು ಮಾಯಾಗೆ ಗೊತ್ತಾಗಿ ಹೋಗಿದೆ. ಈ ಕಾರಣಕ್ಕೆ ಆಕೆಗೆ ತಲೆಬಿಸಿ ಶುರುವಾಗಿದೆ. ಅಂಬಿಕಾನ ಸಾವಿಗೆ ನಾನೇ ಕಾರಣ ಎಂದು ಆಕೆಗೆ ಅನಿಸಿತ್ತು. ಆದರೆ, ಇದರ ಹಿಂದೆ ಮಾಳವಿಕಾ ಕೈವಾಡ ಇದೆ ಎಂಬ ಅನುಮಾನ ಅವಳಿಗೆ ಬಂದಿದೆ.
ಈ ವಿಷಯವನ್ನು ಮಾಯಾ, ಅಂಬಿಕಾ ಆತ್ಮದ ಬಳಿ ಪ್ರಶ್ನೆ ಮಾಡಿದ್ದಾಳೆ. ‘ನಿನ್ನ ಕೊಲೆಯಲ್ಲಿ ಮಾಳವಿಕಾ ಕೈವಾಡ ಇದೆ ಅಲ್ಲವೆ? ನಾನು ಕೇವಲ ಅಸ್ತ್ರ ಮಾತ್ರ ಆಗಿದ್ದೆ ಅಲ್ಲವೇ’ ಎಂದು ಮಾಯಾ ಪ್ರಶ್ನೆ ಮಾಡಿದ್ದಾಳೆ. ಇದಕ್ಕೆ ಅಂಬಿಕಾ ಹೌದು ಎಂಬ ಉತ್ತರ ನೀಡಿದ್ದಾಳೆ. ಇದರಿಂದ ಅವಳಿಗೆ ಎಲ್ಲವೂ ಸ್ಪಷ್ಟವಾಗಿದೆ. ಮುಂದೇನು ಮಾಡಬೇಕು ಎಂಬ ಚಿಂತೆ ಬಹುವಾಗಿ ಕಾಡುತ್ತಿದೆ.
ಆಕೆಯ ಮುಂದೆ ಈಗ ಎರಡು ಆಯ್ಕೆ ಇದೆ. ಒಂದು ಆಕೆ ನೇರವಾಗಿ ಅಂಬಿಕಾಗೆ ಸಹಾಯ ಮಾಡಬೇಕು ಅಥವಾ ಮಾಳವಿಕಾ ಪರವಾಗಿ ನಿಂತು ತಾನೂ ಕಷ್ಟ ಅನುಭವಿಸಬೇಕು. ಹೀಗಾಗಿ, ಆಕೆಯ ಗುಣದಲ್ಲಿ ಸಾಕಷ್ಟು ಬದಲಾವಣೆ ಆಗುವ ಸಾಧ್ಯತೆ ಇದೆ.
ಈಗ ಸದ್ಯ ಅವಳು ಅಂಬಿಕಾಳನ್ನು ದ್ವೇಷಿಸೋದಾಗಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾಳೆ. ಆದರೆ, ದಿನ ಕಳೆದಂತೆ ಮಾಯಾ ಪಾತ್ರದಲ್ಲಿ ಬದಲಾವಣೆ ಕಾಣಬಹುದು. ಅವುಳು ಕೂಡ ಮಾಳವಿಕಾಳ ಅಸ್ತ್ರ ಆಗಬಹುದು ಎಂದು ಹೇಳಲಾಗುತ್ತಾ ಇದೆ.
PSL 2026: ಪಾಕಿಸ್ತಾನ್ ಸೂಪರ್ ಲೀಗ್ನ 11ನೇ ಸೀಸನ್ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ಹಿಂದೆಯಿದ್ದ 6 ತಂಡಗಳ ಜೊತೆ ಈ ಬಾರಿ ರಾವಲ್ಪಿಂಡಿ ಪಿಂಡೀಸ್ ಹಾಗೂ ಹೈದರಾಬಾದ್ ಕಿಂಗ್ಸ್ಮೆನ್ ತಂಡಗಳು ಸೇರ್ಪಡೆಯಾಗಿದೆ. ಇನ್ನು ಈ ತಂಡಗಳಲ್ಲಿ ಹಲವು ವಿದೇಶಿ ಆಟಗಾರರು ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಐಪಿಎಲ್ನಲ್ಲಿ ಚಾನ್ಸ್ ಸಿಗದ ಕೆಲ ಸ್ಟಾರ್ ಪ್ಲೇಯರ್ಸ್ ಪಿಎಸ್ಎಲ್ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅದರಂತೆ ಮುಂಬರುವ ಪಿಎಸ್ಎಲ್ನಲ್ಲಿ ಕಾಣಿಸಿಕೊಳ್ಳಲಿರುವ ವಿದೇಶಿ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…
ಇಸ್ಲಾಮಾಬಾದ್ ಯುನೈಟೆಡ್ ತಂಡ: ಡೆವೊನ್ ಕಾನ್ವೇ (ನ್ಯೂಝಿಲೆಂಡ್), ಆಂಡ್ರೀಸ್ ಗೌಸ್ (ಅಮೆರಿಕ) ಮಾರ್ಕ್ ಚಾಪ್ಮನ್ (ನ್ಯೂಝಿಲೆಂಡ್), ಮ್ಯಾಕ್ಸ್ ಬ್ರ್ಯಾಂಟ್ (ಆಸ್ಟ್ರೇಲಿಯಾ), ಶಮರ್ ಜೋಸೆಫ್ (ವೆಸ್ಟ್ ಇಂಡೀಸ್), ರಿಚರ್ಡ್ ಗ್ಲೀಸನ್ (ಇಂಗ್ಲೆಂಡ್), ದೀಪೇಂದ್ರ ಸಿಂಗ್ ಐರೀ (ನೇಪಾಳ).
ಕರಾಚಿ ಕಿಂಗ್ಸ್: ಮೊಯಿನ್ ಅಲಿ (ಇಂಗ್ಲೆಂಡ್), ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ), ಆ್ಯಡಂ ಝಂಪಾ (ಆಸ್ಟ್ರೇಲಿಯಾ), ಜಾನ್ಸನ್ ಚಾರ್ಲ್ಸ್ (ವೆಸ್ಟ್ ಇಂಡೀಸ್), ಅಕಿಬ್ ಇಲ್ಯಾಸ್ (ಒಮಾನ್), ಮುಹಮ್ಮದ್ ವಸೀಮ್ (ಯುಎಇ).
ಶಿವಮೊಗ್ಗ ಮಾ.11: ನಗರದ ಮದುವೆ ಸಮಾರಂಭಗಳಲ್ಲಿ ಸಂಚಲನ ಮೂಡಿಸಿದ್ದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ತುಂಗಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಬುರ್ಖಾ ಧರಿಸಿ, ವಬ್ಯಾಗ್ ಹಿಡಿದು ಗಪ್ಚುಪ್ ಆಗಿ ಚಿನ್ನಾಭರಣ ಎಗರಿಸುತ್ತಿದ್ದ ಸುಳೆಬೈಲು ನಿವಾಸಿ ರುಕ್ಸಾರ್ ಫಿರ್ದೋಸ್ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಇಲಿಯಾಜ್ ನಗರದ ಪ್ರಸಿದ್ಧ ‘ಶಾದಿ ಮಹಲ್’ನಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕಳ್ಳತನಗಳು ವರದಿಯಾಗುತ್ತಿದ್ದವು. ಮದುವೆಗೆ ಬಂದವರು ತಮ್ಮ ಆಭರಣಗಳನ್ನು ಬ್ಯಾಗ್ನಲ್ಲಿ ಇಡುವುದನ್ನೇ ಸಂಚು ಹೂಡಿ ಕಾಯುತ್ತಿದ್ದ ಈ ಮಹಿಳೆ, ಕ್ಷಣಾರ್ಧದಲ್ಲಿ ಅವುಗಳನ್ನು ಎಗರಿಸಿ ಪರಾರಿಯಾಗುತ್ತಿದ್ದಳು.ಕಳೆದ ಒಂದು ತಿಂಗಳ ಹಿಂದೆ ನಡೆದ ಮದುವೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಹಗಲಿರುಳು ಪರಿಶೀಲಿಸಿದಾಗ, ಆಕೆಯ ಕೈಯಲ್ಲಿದ್ದ ವಿಶಿಷ್ಟವಾದ ವ್ಯಾನಿಟಿ ಬ್ಯಾಗ್ ಕಳ್ಳಿಯನ್ನು ಪತ್ತೆಹಚ್ಚಲು ಪ್ರಮುಖ ಸುಳಿವು ನೀಡಿತು.
ಇನ್ನು ಬಂಧಿತವಾಗಿರುವ ಕಳ್ಳಿ ರುಕ್ಸಾರ್ ಫಿರ್ದೋಸ್ ಒಟ್ಟು 120 ಗ್ರಾಂ ಚಿನ್ನಾಭರಣ ಕದ್ದಿದ್ದಾಳೆ ಎಂದು ಹೇಳಲಾಗಿದೆ. ಒಟ್ಟು ಇದರ ಬೆಲೆ ಅಂದಾಜು 18 ಲಕ್ಷ ರೂ ಇರಬಹುದು ಎಂದು ಅಂದಾಜಿಸಲಾಗಿದೆ. ಈಕೆಯ ಬಂಧನದಿಂದ 4 ಪ್ರಮುಖ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ವಿಚಾರಣೆ ವೇಳೆ ಆಘಾತಕಾರಿ ವಿಷಯವೊಂದು ಬೆಳಕಿಗೆ ಬಂದಿದೆ. ಈ ಹಿಂದೆ ಕೆಲವು ಮದುವೆ ಮನೆಗಳಲ್ಲಿ ಕಳ್ಳತನ ಮಾಡುವಾಗ ಈಕೆ ಸ್ಥಳೀಯರಿಗೆ ಸಿಕ್ಕಿಬಿದ್ದಿದ್ದಳು. ಆದರೆ, ಮಹಿಳೆಯೆಂದು ಅನುಕಂಪ ತೋರಿಸಿದ ಜನರು ವಾರ್ನಿಂಗ್ ಮಾಡಿ ಬಿಟ್ಟು ಕಳಿಸಿದ್ದರು. ಇದನ್ನೇ ಲಾಭವನ್ನಾಗಿ ಮಾಡಿಕೊಂಡ ಈ ಕಿಲಾಡಿ ಕಳ್ಳಿ, ತನ್ನ ಕಳ್ಳತನದ ಕಾಯಕವನ್ನು ಮುಂದುವರಿಸಿ ಐಷಾರಾಮಿ ಜೀವನ ನಡೆಸುತ್ತಿದ್ದಳು. ಕೊನೆಗೂ ತುಂಗಾ ನಗರ ಪೊಲೀಸರ ಚಾಣಾಕ್ಷತನದಿಂದ ಈಕೆಯ ಕಳ್ಳಾಟಕ್ಕೆ ಬ್ರೇಕ್ ಬಿದ್ದಿದೆ.
ಮದುವೆ ಮನೆಗೆ ಚಿನ್ನಾಭರಣ ಹಾಕಿಕೊಂಡು ಬರುವ ಜನರನ್ನು ಇವಳು ವಾಚ್ ಮಾಡುತ್ತಿದ್ದಳು. ಅವರು ಚಿನ್ನಾಭರಣ ಬ್ಯಾಗ್ ನಲ್ಲಿ ಇಡುವುದನ್ನು ಗಮನಿಸಿದ ಬಳಿಕ ಅದನ್ನು ಗಪ್ ಚುಪ್ ಆಗಿ ಬುರ್ಖಾ ಹಾಕಿಕೊಂಡು ಬಂದು ಎಗರಿಸಿಕೊಂಡು ಹೋಗುತ್ತಿದ್ದಳು.ಕೆಲವು ಸಂದರ್ಭದಲ್ಲಿ ಇವಳ ಕಳ್ಳತನ ಮಾಡುವಾಗ ಸ್ಥಳೀಯರಿಗೆ ಸಿಕ್ಕಿದ್ದಾಳೆ. ಅಲ್ಲಿರುವ ಜನರು ಮಹಿಳೆ ಅಂತಾ ಅನುಕಂಪ ತೋರಿಸಿ ವಾರ್ನ್ ಮಾಡಿ ಬಿಟ್ಟು ಕಳಿಸಿದ್ದಾರೆ. ಇದರ ಬಳಿಕವೂ ಈ ಕಳ್ಳಿಯ ನಡವಳಿಕೆ ಬದಲು ಆಗಲಿಲ್ಲ. ಮತ್ತೆ ಇದೇ ಕಳ್ಳತನ ಮುಂದುವರೆಸಿದ್ದಳು. ಇತ್ತೀಚೆಗೆ ಮತ್ತೆ ನಾಲ್ಕು ಕಳ್ಳತನ ಪ್ರಕರಣವು ದಾಖಲು ಆಗಿದ್ದವು. ಈ ಕಳ್ಳತನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದಾಗ ಈ ಕಿಲಾಡಿ ಕಳ್ಳಿಯು ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಹೀಗೆ ಮಹಿಳೆಯಾಗಿ ಮದುವೆ ಸಮಾರಂಭದಲ್ಲಿ ಎಂಟ್ರಿಕೊಟ್ಟು ಚಿನ್ನಾಭರಣ ಕದ್ದುಕೊಂಡು ಹೋಗುತ್ತಿದ್ದಳು ಎಂದು ಮ್ಯಾರೇಜ್ ಹಾಲ್ ಮಾಲೀಕ ಮಹ್ಮದ್ ಜುಬೇಲ್ ಹೇಳಿದ್ದಾರೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ ಫೆಬ್ರವರಿ 26ರಂದು ಅದ್ದೂರಿಯಾಗಿ ನಡೆಯಿತು. ಉದಯಪುರದಲ್ಲಿ ಮದುವೆ ಶಾಸ್ತ್ರಗಳು ನೆರವೇರಿದವು. ಈ ಫೋಟೋಗಳನ್ನು ರಶ್ಮಿಕಾ ಈ ಮೊದಲು ಹಂಚಿಕೊಂಡಿದ್ದರು.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಅವರು ವಿವಾಹಪೂರ್ವ ಶಾಸ್ತ್ರಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಫೆಬ್ರವರಿ 25ರಂದು ಒಂದಷ್ಟು ಶಾಸ್ತ್ರಗಳು ನಡೆದಿದ್ದವು. ಅವುಗಳ ಫೋಟೋಗಳನ್ನು ರಶ್ಮಿಕಾ ರಿವೀಲ್ ಮಾಡಿದ್ದಾರೆ.
ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫ್ರೆಂಡ್ಸ್ ಗ್ಯಾಂಗ್ ಜೊತೆ ಒಂದೇ ರೀತಿಯಲ್ಲಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ. ರಶ್ಮಿಕಾ ಹಾಗೂ ವಿಜಯ್ ಭಿನ್ನ ಭಿನ್ನ ಫೋಟೋಗಳನ್ನು ಹಂಚಿಕೊಂಡು ಮಿಂಚಿದ್ದಾರೆ.
ರಶ್ಮಿಕಾ ಅವರು ವಿವಾಹದ ಬಗ್ಗೆ ಅನೇಕ ರೀತಿಯ ಕನಸುಗಳನ್ನು ಕಂಡಿದ್ದರು. ಆ ಕನಸುಗಳನ್ನು ಈಡೇರಿಸಿಕೊಂಡಿದ್ದಾರೆ. ವಿಜಯ್ ಹಾಗೂ ರಶ್ಮಿಕಾ ಮದುವೆಗೆ ಕೋಟಿ ಕೋಟಿ ಖರ್ಚು ಮಾಡಿದ್ದಾರೆ.
ಫೆಬ್ರವರಿ 26 ರಶ್ಮಿಕಾ ಪಾಲಿಗೆ ಯಾವಾಗಲೂ ವಿಶೇಷ ದಿನವಾಗಿಯೇ ಉಳಿಯಲಿದೆ. ಅವರ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿವೆ. ರಶ್ಮಿಕಾ ಯುವರಾಣಿ ರೀತಿ ಕಂಗೊಳಿಸುತ್ತಿದ್ದರು ಎಂದು ಅನೇಕರು ಹೇಳಿದ್ದಾರೆ.
ಮುಂಬೈ, ಮಾರ್ಚ್ 11: ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಮೃತಳನ್ನು ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ. ಆಂಟೋಪ್ ಹಿಲ್ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ವಿಮಾ ಏಜೆಂಟ್ ಆಗಿರುವ ಫಜಲ್ ಮೊಹಮ್ಮದ್ ಖಾನ್ ಹೆಸರು ಕೇಳಿಬಂದಿದ್ದು, ಆತನನ್ನು ಬಂಧಿಸಲಾಗಿದೆ.
ಮುಂಬೈನ ಆಂಟೋಪ್ ಹಿಲ್ ನೆರೆಹೊರೆಯಲ್ಲಿ ಸ್ತುತಿ ತನ್ನ ಪೋಷಕರು ಮತ್ತು ಸಹೋದರಿಯೊಂದಿಗೆ ವಾಸವಾಗಿದ್ದಳು. ನಿನ್ನೆ ಬೆಳಗ್ಗೆ 11 ಗಂಟೆಯವರೆಗೆ ಅವಳು ತನ್ನ ಕೋಣೆಯಿಂದ ಹೊರಬರದಿದ್ದಾಗ, ಅವಳ ಪೋಷಕರು ಅವಳಿಗೆ ಕರೆ ಮಾಡಿದ್ದಾರೆ, ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಅವರು ಅವಳ ಕೋಣೆಯ ಬಾಗಿಲು ಒಡೆದು ನೋಡಿದಾಗ, ಆಕೆ ಸೀಲಿಂಗ್ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ.
ಅವಳನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವಳು ಸತ್ತಿದ್ದಾಳೆಂದು ಘೋಷಿಸಿದ್ದಾರೆ.
ಯುವತಿ ತನ್ನ ಕೋಣೆಯಲ್ಲಿ ಆರು ಪುಟಗಳ ‘ಆತ್ಮಹತ್ಯೆ ಪತ್ರ’ವನ್ನು ಬರೆದಿಟ್ಟಿದ್ದಾಳೆ. ಅದರಲ್ಲಿ ಅವಳು ಖಾನ್ ಹೆಸರಿಸಿದ್ದಾಳೆ ಮತ್ತು ಅವನು ನಿರಂತರವಾಗಿ ತನಗೆ ಕಿರುಕುಳ ನೀಡುತ್ತಿದ್ದ ಎಂದು ಬರೆದಿದ್ದಾಳೆ ಎಂದು ಆಂಟೋಪ್ ಹಿಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯುವತಿ ಪೋಷಕರು ನೀಡಿರುವ ದೂರಿನ ಮೇಲೆ ಆರೋಪಿಯನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 108 ಸೇರಿದಂತೆ ಸಂಬಂಧಿತ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ ಮೃತ ಯುವತಿ ಹಾಗೂ ಆರೋಪಿ ಡೇಟಿಂಗ್ ಆ್ಯಪ್ ಮೂಲಕ ಪರಿಷಯವಾಗಿದ್ದರು, ಕಳೆದ ಒಂದು ವರ್ಷದಿಂದ ಸಂಬಂಧದಲ್ಲಿದ್ದರು ಎಂಬುದು ತಿಳಿದುಬಂದಿದೆ.