Headlines

ವಿಮಾನ ಪ್ರಯಾಣಿಕರಿಗೆ ಮತ್ತೊಂದು ಶಾಕ್; ಟಿಕೆಟ್ ಬೆಲೆ ಹೆಚ್ಚಳಕ್ಕೆ ಏರ್ ಇಂಡಿಯಾ ನಿರ್ಧಾರ

ನವದೆಹಲಿ, ಮಾರ್ಚ್ 10: ಗಲ್ಫ್ ರಾಷ್ಟ್ರಗಳಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ವಿಮಾನಯಾನ ಟರ್ಬೈನ್ ಇಂಧನ (ATF) ಬೆಲೆಗಳಲ್ಲಿ ತೀವ್ರ ಏರಿಕೆಯಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ (Air India) ತನ್ನ ದೇಶೀಯ ಮತ್ತು ಅಂತಾರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಇಂಧನ ಹೆಚ್ಚುವರಿ ಶುಲ್ಕಗಳ ವಿಸ್ತರಣೆಯನ್ನು ಘೋಷಿಸಿದೆ. ATF ವಿಮಾನಯಾನ ನಿರ್ವಹಣಾ ವೆಚ್ಚದ ಸುಮಾರು ಶೇ. 40ರಷ್ಟಿದೆ. ಮಾರ್ಚ್ 12ರಿಂದ ಜಾರಿಗೆ ಬರುವ 1ನೇ ಹಂತದ ದೇಶೀಯ ಮತ್ತು ಪ್ರಾದೇಶಿಕ ಮಾರ್ಗಗಳಿಗೆ ಅನ್ವಯಿಸುತ್ತದೆ. ಮಾರ್ಚ್ 12ರಿಂದ ದೇಶೀಯ ವಿಮಾನ ಟಿಕೆಟ್‌ಗಳಿಗೆ 399 ರೂ.ಗಳ ಇಂಧನ…

Read More

ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭ ಆಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ‘ಈ ಪ್ರಕರಣದಲ್ಲಿ ಜಡ್ಜ್ ಏನು ತೀರ್ಪು ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಒಂದು ಮಾದರಿ ನಿರ್ಮಾಣ ಆಗುತ್ತದೆ. ಆಗ ಜನರಿಗೆ ಒಂದು ಭಯ ಬರುತ್ತದೆ. ಅಂಥ…

Read More

ಮನಕಲಕುವ ಘಟನೆ: 2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ

ತುಮಕೂರು, (ಮಾರ್ಚ್ 10): ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ನಡೆದಿದೆ, ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ನೆರಡು ಮಕ್ಕಳು ಸಾವಿನ ಮನೆಯಿಂದ ಪಾರಾಗಿವೆ….

Read More

ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಹೊರಗಿನ ಧೂಳು, ಮಾಲಿನ್ಯದ ಕಾರಣದಿಂದ ಚರ್ಮಕ್ಕೆ ಹಾನಿ ಉಂಟಾಗುತ್ತದೆ. ಅಲ್ಲದೆ ದಿನನಿತ್ಯದ ಒತ್ತಡದ ಪರಿಣಾಮಗಳೂ ಮುಖದ ಮೇಲೆ ಗೋಚರಿಸುತ್ತವೆ. ಆದ್ದರಿಂದ ಚರ್ಮದ ಆರೈಕೆಯ (skin care) ಬಗ್ಗೆ ಗಮನವಹಿಸಬೇಕು. ಅದರಲ್ಲೂ ತ್ವಚೆ ಕಾಂತಿಯುತವಾಗಿರಲು, ಆರೋಗ್ಯಕರವಾಗಿರಲು ಮಲಗುವ ಮುನ್ನ ತ್ವಚೆಯ ಆರೈಕೆಯ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಇದಕ್ಕಾಗಿ ದುಬಾರಿ ಸ್ಕಿನ್‌ಕೇರ್‌ಗಳ ಮೊರೆ ಹೋಗುವ ಅವಶ್ಯಕತೆಯಿಲ್ಲ. ಮಲಗುವ ಮುನ್ನ ಮುಖಕ್ಕೆ ತೆಂಗಿನ ಎಣ್ಣೆಯಿಂದ ಮಸಾಜ್‌ ಮಾಡಿದರೆ ಸಾಕು.  ತೆಂಗಿನ ಎಣ್ಣೆಯಲ್ಲಿರುವ ಉತ್ಕರ್ಷಣ ನಿರೋಧಕಗಳು, ಕೊಬ್ಬಿನಾಮ್ಲಗಳು ಮತ್ತು ಆರ್ಧ್ರಕ…

Read More

ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯಲ್ಲಿ ಚಂಪಕಧಾಮ ಸ್ವಾಮಿ ರಥೋತ್ಸವ: ಮಂಗಳಮುಖಿಯರ ಹರಕೆ ವಿಶೇಷವೇನು ಗೊತ್ತಾ?

ಜಾತ್ರೆ ಅಂದರೆ ಅದೊಂದು ರೀತಿಯ ಸಂಭ್ರಮ ಸಡಗರ. ತಮ್ಮ ಊರಿನ ದೇವರಿಗೆ ವರ್ಷಕ್ಕೊಮ್ಮೆ ರಥೋತ್ಸವ, ಕರಗ, ಪಲ್ಲಕ್ಕಿ ನಡೆಸುವ ಮೂಲಕ ಗ್ರಾಮದ ಜನ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆದರೆ ಇಲ್ಲೊಂದು ಕಡೆ ಮಂಗಳಮುಖಿಯರ ವಿಶೇಷ ಜಾತ್ರೆ ನಡೆಯುತ್ತದೆ. ತಮ್ಮ ಆರಾಧ್ಯ ದೇವಿಗೆ ವರ್ಷಕ್ಕೊಂದು ಬಾರಿ ಮಂಗಳಮುಖಿಯರು ಹರಕೆ ತೀರಿಸುತ್ತಾರೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ರಥೋತ್ಸವ ಮತ್ತು ಬೇಗಿಹಳ್ಳಿಯ ಬೇಗಳಮ್ಮ ಜಾತ್ರೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಪ್ರತಿ ವರ್ಷ…

Read More

ಗುಡ್ ನ್ಯೂಸ್: ಬಿಎಂಟಿಸಿ,ಮೆಟ್ರೋ ಪ್ರಯಾಣಕ್ಕೆ ಒಂದೇ ಸ್ಮಾರ್ಟ್ ಕಾರ್ಡ್ ಸಾಕು

ಬೆಂಗಳೂರು, (ಮಾರ್ಚ್ 10): ಪ್ರಯಾಣಿಕರಿಗೆ ಬಿಎಂಟಿಸಿ (BMTC) ಸಿಹಿಸುದ್ದಿ ಹೊತ್ತು ತಂದಿದೆ. ಇನ್ಮುಂದೆ ಟಿಕೆಟ್ ತೆಗೆದುಕೊಳ್ಳುವ ಟೆನ್ಷನ್ ಇರಲ್ಲ. ಆ ಕಾರ್ಡ್, ಈ ಕಾರ್ಡ್ ಅಂತ ಬ್ಯಾಗ್ ತಡಕುವ ಪ್ರಮೇಯವೇ ಬೇಡ, ಜಸ್ಟ್ ‘ನಮ್ಮ ಮೆಟ್ರೋ’ ಕಾರ್ಡ್ (Namma Metro Card) ತೋರಿಸಿ ಪ್ರಯಾಣ ಮಾಡಬಹುದು. ಹೌದು.. ಮುಂದಿನ ದಿನಗಳಲ್ಲಿ ನೀವು ಡೆಬಿಟ್ ಕಾರ್ಡ್ (Debit Card) ಮತ್ತು ಕ್ರೆಡಿಟ್ ಕಾರ್ಡ್‌ಗಳು (Credit Card) ಮಾತ್ರವಲ್ಲ, ಮೊಟ್ರೋ ಕಾರ್ಡ್ ಸಹ ಕಂಡಕ್ಟರ್‌ಗೆ (ನಿರ್ವಾಹಕ) ತೋರಿಸಿ ಬಿಎಂಟಿಸಿ (BMTC)…

Read More

ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್

ಕೋಮಲ್‌ ಕುಮಾರ್‌ (Komal Kumar), ಮೇಘನಾ ರಾಜ್‌, ಅನುಷಾ ರೈ ಅವರು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಸಿನಿಮಾಗೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ವಿಕಾಸ್‌ ಶೆಟ್ಟಿ ಅವರು ಬಂಡವಾಳ ಹೂಡಿದ್ದಾರೆ. 2 ಹಂತಗಳಲ್ಲಿ 75 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಚಿತ್ರೀಕರಣ ಮುಗಿಸಿಕೊಂಡಿರುವ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ (Sangeetha Bar and Restaurant) ಚಿತ್ರತಂಡ…

Read More

ಬಹ್ರೇನ್ ಮೇಲಿನ ಇರಾನ್ ದಾಳಿಯ ವಿಡಿಯೋ ಶೇರ್ ಮಾಡಿದ್ದಕ್ಕೆ 5 ಪಾಕಿಸ್ತಾನಿ ಪ್ರಜೆಗಳ ಬಂಧನ

ನವದೆಹಲಿ, ಮಾರ್ಚ್ 10: ಕುವೈತ್, ಬಹ್ರೇನ್, ಕತಾರ್, ದುಬೈ ಸೇರಿದಂತೆ ಹಲವು ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯುನೆಲೆಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿತ್ತು. ಇರಾನ್ ನಡೆಸಿದ ದಾಳಿಯ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದಕ್ಕಾಗಿ 5 ಪಾಕಿಸ್ತಾನಿ ಪ್ರಜೆಗಳನ್ನು ಬಹ್ರೇನ್‌ನಲ್ಲಿ ಬಂಧಿಸಲಾಗಿದೆ. ಇವರ ಜೊತೆ ಓರ್ವ ಬಾಂಗ್ಲಾದೇಶಿ ಪ್ರಜೆಯನ್ನು ಕೂಡ ಬಂಧಿಸಲಾಗಿದೆ. ಅಂತಹ ವಿಡಿಯೋಗಳು ತಪ್ಪು ಮಾಹಿತಿ ಮತ್ತು ಭಯವನ್ನು ಹರಡಬಹುದು ಎಂದು ಬಹ್ರೇನ್ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಇರಾನಿನ ದಾಳಿಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಸಾಮಾಜಿಕ…

Read More

ಸಂಜು ಸ್ಯಾಮ್ಸನ್​ಗೆ ಟಿ20 ತಂಡದ ನಾಯಕತ್ವ ನೀಡುವಂತೆ ಆಗ್ರಹ

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ ಸಂಜು ಸ್ಯಾಮ್ಸನ್ ಪ್ರಸ್ತುತ ಎಲ್ಲರ ಮನೆ ಮಾತಾಗಿದ್ದಾರೆ. ತಮ್ಮ ಅದ್ಭುತ ಬ್ಯಾಟಿಂಗ್‌ನಿಂದ ಟೀಂ ಇಂಡಿಯಾವನ್ನು ವಿಶ್ವ ಚಾಂಪಿಯನ್‌ ಮಾಡಿದ ಸಂಜುಗೆ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತು. ಇದರ ಜೊತೆಗೆ ಇದೀಗ ಸಂಜು ಸ್ಯಾಮ್ಸನ್​ಗೆ ಭಾರತ ಟಿ20 ತಂಡದ ನಾಯಕರಾತ್ವವನ್ನು ನೀಡಬೇಕೆಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ. ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಮೊಹಮ್ಮದ್ ಕೈಫ್, ‘ಸೂರ್ಯಕುಮಾರ್ ಯಾದವ್…

Read More

ರಷ್ಯಾ, ಒಮನ್ ಬೆನ್ನಲ್ಲೇ ಇರಾನ್‌ನ ಹೊಸ ಸುಪ್ರೀಂ ನಾಯಕ ಮೊಜ್ತಬಾ ಖಮೇನಿಯನ್ನು ಸ್ವಾಗತಿಸಿದ ಪಾಕಿಸ್ತಾನ

ಇಸ್ಲಮಾಬಾದ್, ಮಾರ್ಚ್ 10: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಫೆಬ್ರವರಿ 28ರಂದು ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ (Ayatollah Ali Khamenei) ಮೃತಪಟ್ಟಿದ್ದರು. ಅವರ ಉತ್ತರಾಧಿಕಾರಿಯಾಗಿರುವ ಇರಾನ್‌ನ ಹೊಸ ಸರ್ವೋಚ್ಚ ನಾಯಕರಾದ ಮೊಜ್ತಬಾ ಖಮೇನಿ ಅವರನ್ನು ಪಾಕಿಸ್ತಾನ ಅಭಿನಂದಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮೊಜ್ತಬಾ ಖಮೇನಿ ಅವರನ್ನು ಅಭಿನಂದಿಸಿದ್ದು, ಅವರ ತಂದೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇರಾನಿನ ಹೊಸ ನಾಯಕ ದೇಶವನ್ನು ಶಾಂತಿ ಮತ್ತು ಸ್ಥಿರತೆಯತ್ತ ಕೊಂಡೊಯ್ಯುತ್ತಾರೆ ಎಂದು ಅಭಿಪ್ರಾಯ…

Read More