‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ ಚರ್ಚೆ. ಆದರೆ, ಇದನ್ನು ಅವರು ಸುಳ್ಳು ಮಾಡಿದ್ದಾರೆ. ಈ ಮೊದಲು ಒಟ್ಟಿಗೆ ಕಾಣಿಸಿಕೊಂಡಾಗ ಇಬ್ಬರೂ ಪರಸ್ಪರ ಹಗ್ ಮಾಡಿದ್ದು ಇದೆ. ಈಗ ‘ಟಾಕ್ಸಿಕ್’ ವಿಷಯದಲ್ಲಿ ಇವರ ಬಂಧ ಮತ್ತೆ ಸಾಬೀತಾಗಿದೆ.

ಟೀಸರ್ ರಿಲೀಸ್ ಬಳಿಕ ಟ್ವೀಟ್ ಮಾಡಿದ್ದ ಸುದೀಪ್, ‘ಯಶ್​​ಗೆ ಶುಭಾಶಯಗಳು. ಅಲೆಗಳ ವಿರುದ್ಧ ಸಾಗಲು ಯಾವಾಗಲೂ ಸಮಯ ಬೇಕಾಗುತ್ತದೆ.ಈ ಹೊಸ ಹೆಜ್ಜೆ ನಿಮ್ಮನ್ನು ಅದೃಷ್ಟದ ಬಳಿ ಕೊಂಡೊಯ್ಯಲಿ. ನೀವು ನಿಮ್ಮ ಗುರಿಯನ್ನು ನಿರ್ಧರಿಸಿದ್ದೀರಿ’ ಎಂದಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್

‘ಧನ್ಯವಾದಗಳು ಸರ್. ಏಕಾಗ್ರತೆ ಅಥವಾ ಸಮಗ್ರತೆಯನ್ನು ಕಳೆದುಕೊಳ್ಳದೆ, ಪ್ರಾಮಾಣಿಕವಾಗಿ ಮತ್ತು ಧೈರ್ಯದಿಂದ ಉತ್ತಮವಾಗಿ ಹೇಗೆ ಕೆಲಸ ಮಾಡಬೇಕು ಎಂಬುದನ್ನು ನನ್ನ ಹಿರಿಯರಿಂದ ಕಲಿತಿದ್ದೇನೆ. ಆ ಹಿರಿಯರಲ್ಲಿ ನೀವು ಒಬ್ಬರು’ ಎಂದು ಅವರು ಉತ್ತರಿಸಿದ್ದಾರೆ.

ಸುದೀಪ್ ಹಾಗೂ ಯಶ್ ಪರಪಸ್ಪರ ಪ್ರತಿಕ್ರಿಯೆ ನೀಡಿಕೊಂಡ ವಿಷಯ ಅಭಿಮಾನಿಗಳಿಗೆ ಖುಷಿ ನೀಡಿದೆ. ಈ ಬಾಂಧವ್ಯ ಹೀಗೆಯೇ ಮುಂದುವರಿದರೆ ಚಿತ್ರರಂಗಕ್ಕೆ ಸಹಕಾರಿ ಆಗಲಿದೆ ಎಂದು ಅನೇಕರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

“ಸರಿಯಾಗಿರೋ ಬಟ್ಟೆ ಧರಿಸಿ” ಎಂದ ಮಹಿಳಾ ಪೊಲೀಸ್​​​ಗೆ ರಕ್ತ ಬರುವಂತೆ ಹೊಡೆದ ಬೆಂಗಳೂರಿನ ಯುವತಿ – Kannada News | Bengaluru Incident: Police Attire Advice Sparks Assault, Leads to Damini’s Arrest

ಬೆಂಗಳೂರು, ಜ.12: ಬೆಂಗಳೂರಿನಲ್ಲಿ ಬಟ್ಟೆಯ (Bangalore Dress Code Row) ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಪೊಲೀಸರೊಬ್ಬರು ಯುವತಿಯೊಬ್ಬಳಿಗೆ ಸರಿಯಾದ ಬಟ್ಟೆ ಹಾಕೊಳ್ಳಿ ಎಂದು ಹೇಳಿದಕ್ಕೆ ಪೊಲೀಸ್​​​ ಮೇಲೆ ಹಲ್ಲೆ ಮಾಡಿದ್ದಾಳೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಹಾಗೂ ಈ ಯುವತಿಯನ್ನು ಬಂಧಿಸಿದ್ದಾರೆ. ಮಹದೇವಪುರದ ನಾರಾಯಣಪುರ ನಿವಾಸಿ ದಾಮಿನಿ ಅಲಿಯಾಸ್ ಮೋಹಿನಿ ಎಂಬ ಯುವತಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ 20 ವಯಸ್ಸಿನ ಯುವತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಬಾಣಸವಾಡಿ ಸಂಚಾರ ಪೊಲೀಸ್ ಠಾಣೆಗೆ ಸೇರಿದ ಗೃಹರಕ್ಷಕ ದಳದ ಲಕ್ಷ್ಮಿ ನರಸಮ್ಮ ಅವರ ಮೇಲೆ ಹಲ್ಲೆ ನಡೆಸಿದ್ದಾಳೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶುಕ್ರವಾರ ಸಂಜೆ ಕೆ.ಆರ್. ಪುರಂ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ದಾಮಿನಿಯ ಉಡುಪಿನ ಬಗ್ಗೆ ಕೆಲವು ದುಷ್ಕರ್ಮಿಗಳು ಅಶ್ಲೀಲವಾಗಿ ಮಾತನಾಡಿದ್ದರು. ಈ ವೇಳೆ ಮಧ್ಯೆ ಬಂದ ಗೃಹರಕ್ಷಕ ದಳದ ಲಕ್ಷ್ಮಿ ನರಸಮ್ಮ ದುಷ್ಕರ್ಮಿಗಳನ್ನು ಅಲ್ಲಿಂದ ಓಡಿಸಿದ್ದಾರೆ. ನಂತರ ಆ ಹುಡುಗಿಗೆ ಬಟ್ಟೆಯ ಬಗ್ಗೆ ಸಲಹೆ ನೀಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಸರಿಯಾಗಿರೋ ಬಟ್ಟೆ ಧರಿಸಿ, ಈ ಪ್ರದೇಶದಲ್ಲಿ ಹೆಚ್ಚು ಜನ ಓಡಾಡುತ್ತಾರೆ. ಇಂತಹ ವ್ಯಕ್ತಿಗಳು ಕಾಯುತ್ತಿರುತ್ತಾರೆ ಹುಡುಗಿಯರು ಎಲ್ಲಿ ಸಿಗುತ್ತಾರೆ ಎಂದು, ತುಂಬಾ ಎಚ್ಚರದಿಂದ ಇರಿ ಎಂದು ಹೇಳಿದ್ದಾರೆ. ಇದಕ್ಕೆ ಕೋಪಗೊಂಡ ಹುಡುಗಿ, ಲಕ್ಷ್ಮಿ ನರಸಮ್ಮ ಅವರ ಮೇಲೆ ಹಲ್ಲೆ ಮಾಡಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರೀತಿಸಿದವರ ವಶೀಕರಣಕ್ಕೆ ಆನ್‌ಲೈನ್‌ನಲ್ಲಿ ಉಡದ ಜನನಾಂಗ ಮಾರಾಟ ಮಾಡುತ್ತಿದ್ದ ಮಾಂತ್ರಿಕ

ಹಲ್ಲೆಯಿಂದ ನರಸಮ್ಮ ಅವರ ಮುಖ ಮತ್ತು ಮೂಗಿಯಿಂದ ರಕ್ತ ಬಂದಿದೆ. ಸ್ವಲ್ಪ ಸಮಯದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ದಾಮಿನಿಯನ್ನು ವಶಕ್ಕೆ ಪಡೆದಿದ್ದಾರೆ. ನರಸಮ್ಮ ಅವರ ದೂರಿನ ಆಧಾರದ ಮೇಲೆ, ದಾಮಿನಿಯನ್ನು ಬಂಧಿಸಿ ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು, ನ್ಯಾಯಾಲಯವು ಆಕೆಯನ್ನು ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಹೇಳಿದೆ. ದಾಮಿನಿ ಮಾಲ್ಡೀವ್ಸ್‌ನಲ್ಲಿ ಶಾಲೆಯಲ್ಲಿ ಓದಿದ್ದು, ಬೆಂಗಳೂರಿನ ಖಾಸಗಿ ಕಾಲೇಜಿನಿಂದ ಬಿಬಿಎಂ ಪದವಿ ಪಡೆದಿದ್ದಾಳೆ ಎಂದು ಪೊಲೀಸರ ಹೇಳಿಕೆಯಲ್ಲಿ ಹೇಳಲಾಗಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Indias Space Mission: ಕಕ್ಷೆಯಲ್ಲಿರುವ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವಿರುವ ಎರಡನೇ ದೇಶವಾಗುವತ್ತ ಭಾರತ ಧಾಪುಗಾಲು – Kannada News | AyulSAT Fuel Stations in Space: OrbitAid’s Plan to Keep Satellites Alive Longer

ನವದೆಹಲಿ, ಜನವರಿ 12: ಭಾರತ ಬಾಹ್ಯಾಕಾಶ(Space)ದಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ. ಸಾಮಾನ್ಯವಾಗಿ ಉಪಗ್ರಹಗಳು ಅವುಗಳಲ್ಲಿರುವ ಇಂಧನ ಖಾಲಿಯಾಗುವವರೆಗೆ ಕಾರ್ಯನಿರ್ವಹಿಸುತ್ತವೆ ಹಾಗಾಗಿ ಅದರ ಜೀವಿತಾವಧಿ ತುಂಬಾ ಕಡಿಮೆ. ಆದರೆ ಇಸ್ರೋದ PSLV-C62 ರಾಕೆಟ್ ಆರ್ಬಿಟ್ ಏಡ್ ನಿರ್ಮಿಸಿದ 25 ಕೆಜಿ ತೂಕದ ಆಯುಲ್ಸಾಟ್ ಉಪಗ್ರಹವನ್ನು ಸೋಮವಾರ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದರೆ ಭಾರತವು ಬಾಹ್ಯಾಕಾಶದಲ್ಲಿ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಎರಡನೇ ರಾಷ್ಟ್ರವಾಗಲಿದೆ. ಕಕ್ಷೆಯಲ್ಲಿರುವ ಇಂಧನ ಮರುಪೂರಣವು ಉಪಗ್ರಹಗಳು ಹೆಚ್ಚು ಕಾಲ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡುತ್ತದೆ.

ಇಸ್ರೋದ PSLV-C62 ರಾಕೆಟ್ ಆರ್ಬಿಟ್ ಏಡ್ ನಿರ್ಮಿಸಿದ 25 ಕಿಲೋಗ್ರಾಂ ತೂಕದ ಆಯುಲ್ಸಾಟ್ ಉಪಗ್ರಹವನ್ನು ಸೋಮವಾರ ಕಕ್ಷೆಗೆ ಯಶಸ್ವಿಯಾಗಿ ಸೇರಿಸಿದರೆ ಭಾರತವು ಬಾಹ್ಯಾಕಾಶದಲ್ಲಿ ಉಪಗ್ರಹಗಳಿಗೆ ಇಂಧನ ತುಂಬಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಎರಡನೇ ರಾಷ್ಟ್ರವಾಗಲಿದೆ.
ಇಲ್ಲಿಯವರೆಗೆ, ಚೀನಾ ಮಾತ್ರ ಈ ಸಾಧನೆಯನ್ನು ಸಾಧಿಸಿದೆ.

ಅಮೆರಿಕ ಸೇರಿದಂತೆ ಯಾವುದೇ ಬಾಹ್ಯಾಕಾಶ ಶಕ್ತಿ ಸಾರ್ವಜನಿಕವಾಗಿ ಇದನ್ನು ಸಾಧಿಸಿಲ್ಲ. ಈ ರಾಕೆಟ್ ಅನ್ನು ಇಂದು ಬೆಳಗ್ಗೆ 10.18 ಕ್ಕೆ ಉಡಾವಣೆ ಮಾಡಲಾಗುತ್ತದೆ. ಕಳೆದ ವರ್ಷ, ಚೀನಾ ಕಕ್ಷೆಯಲ್ಲಿ ಇಂಧನ ತುಂಬುವ ಪ್ರಯೋಗವನ್ನು ನಡೆಸಿತು. ಆದರೆ ಅದರ ಬಗ್ಗೆ ಬಹಳ ಕಡಿಮೆ ಮಾಹಿತಿಯನ್ನು ಹಂಚಿಕೊಳ್ಳಲಾಗಿತ್ತು.

ಮತ್ತಷ್ಟು ಓದಿ: ಇಸ್ರೋದ ಬಾಹುಬಲಿ CMS-03 ಉಪಗ್ರಹ ಯಶಸ್ವಿ ಉಡಾವಣೆ, ಭಾರತೀಯ ಸೇನೆಗೆ ಸೇವೆ ಒದಗಿಸುವ ರಾಕೆಟ್

ಇಂಧನ ಮರುಪೂರಣ ಇಂಟರ್ಫೇಸ್

ಅಧಿಕೃತ ವಿವರಗಳನ್ನು ಹಂಚಿಕೊಂಡಿಲ್ಲ, ಖಾಸಗಿ ಅಮೆರಿಕನ್ ಕಂಪನಿಯಾದ ಆಸ್ಟ್ರೋಸ್ಕೇಲ್ ಈ ತಂತ್ರಜ್ಞಾನದ ಮೇಲೆ ಕೆಲಸ ಮಾಡುತ್ತಿದೆ, ಆದರೆ ಅದರ ಮಿಷನ್ ಇನ್ನೂ ಪ್ರಾರಂಭವಾಗಿಲ್ಲ. ಆರ್ಬಿಟ್‌ಎಐಡಿ ಸಂಸ್ಥಾಪಕ ಮತ್ತು ಸಿಇಒ ಶಕ್ತಿಕುಮಾರ್ ಆರ್ ಅವರ ಪ್ರಕಾರ, ಇದು ಭಾರತದ ಮೊದಲ ವಾಣಿಜ್ಯ ಡಾಕಿಂಗ್ ಮತ್ತು ಇಂಧನ ಮರುಪೂರಣ ಇಂಟರ್ಫೇಸ್ ಆಗಿದ್ದು, ಇದು ಭವಿಷ್ಯದಲ್ಲಿ ಉಪಗ್ರಹಗಳ ಜೀವಿತಾವಧಿಯನ್ನು ವಿಸ್ತರಿಸುತ್ತದೆ.

AYULSat ಮತ್ತೊಂದು ಉಪಗ್ರಹಕ್ಕೆ ಇಂಧನ ತುಂಬಿಸುವುದಿಲ್ಲ. ಇದನ್ನು ನಿರ್ದಿಷ್ಟವಾಗಿ ಗುರಿ ಉಪಗ್ರಹವಾಗಿ ವಿನ್ಯಾಸಗೊಳಿಸಲಾಗಿದೆ. ಬಾಹ್ಯಾಕಾಶ ಪರಿಸರದಲ್ಲಿ ಇಂಧನದ ನಡವಳಿಕೆಯನ್ನು ಅರ್ಥಮಾಡಿಕೊಳ್ಳುವುದು ಇದರ ಉದ್ದೇಶವಾಗಿದೆ. ಈ ಕಾರ್ಯಾಚರಣೆಯು ಒಂದೇ ಉಪಗ್ರಹದೊಳಗಿನ ಇಂಧನ ವರ್ಗಾವಣೆ ಪ್ರಕ್ರಿಯೆಯನ್ನು ಪರೀಕ್ಷಿಸುತ್ತದೆ.

ಸೂಕ್ಷ್ಮ ಗುರುತ್ವಾಕರ್ಷಣೆ ಅಥವಾ ಶೂನ್ಯ ಗುರುತ್ವಾಕರ್ಷಣೆಯಲ್ಲಿ ದ್ರವ ಇಂಧನವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಎಂಜಿನಿಯರ್‌ಗಳು ಅರ್ಥಮಾಡಿಕೊಳ್ಳಲು ಇದು ಸಹಾಯ ಮಾಡುತ್ತದೆ. ಉಪಗ್ರಹ ಸೇವಾ ಕಾರ್ಯಾಚರಣೆಗಳು ಸಾಮಾನ್ಯವಾಗಿ ಎರಡು ಪ್ರತ್ಯೇಕ ಬಾಹ್ಯಾಕಾಶ ನೌಕೆಗಳನ್ನು ಒಳಗೊಂಡಿರುತ್ತವೆ.

ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ಗಾಗಿ ಕಳುಹಿಸಲಾಗುತ್ತಿರುವ ಈ ಕಾರ್ಯಾಚರಣೆಯು 14 ದೇಶೀಯ ಮತ್ತು ವಿದೇಶಿ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದೆ. 260 ಟನ್ ತೂಕದ PSLV-C62 ರಾಕೆಟ್ ಅನ್ನು ಇಂದು ಬೆಳಗ್ಗೆ 10.18 ಕ್ಕೆ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ತಿಳಿಸಿದೆ.

13 ಉಪಗ್ರಹಗಳ ಉಡಾವಣೆ

ಉಡಾವಣೆಯಾದ ಸುಮಾರು 17 ನಿಮಿಷಗಳ ನಂತರ, 13 ಇತರ ಉಪಗ್ರಹಗಳನ್ನು ಸೂರ್ಯ-ಸಿಂಕ್ರೊನಸ್ ಕಕ್ಷೆಗೆ ಸೇರಿಸಲಾಗುತ್ತದೆ. ಇದರ ನಂತರ, ರಾಕೆಟ್‌ನ ನಾಲ್ಕನೇ ಹಂತ (PS4) ಸ್ಪ್ಯಾನಿಷ್ ಸ್ಟಾರ್ಟ್‌ಅಪ್‌ಗೆ ಸೇರಿದ ಸುಮಾರು 25-ಕಿಲೋಗ್ರಾಂಗಳಷ್ಟು ಕೆಸ್ಟ್ರೆಲ್ ಇನಿಶಿಯಲ್ ಟೆಕ್ನಾಲಜಿ ಡೆಮಾನ್‌ಸ್ಟ್ರೇಟರ್ (KID) ಕ್ಯಾಪ್ಸುಲ್ ಅನ್ನು ಬೇರ್ಪಡಿಸುತ್ತದೆ .

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:59 am, Mon, 12 January 26

Source link

ಜೊತೆಯಾಗಿ ಕಣಕ್ಕಿಳಿದು ಹೊಸ ವಿಶ್ವ ದಾಖಲೆ ಬರೆದ ತಂದೆ-ಮಗ – Kannada News | Mohammad nabi and his son hassan eisakhil creates new history in T20 Cricket

ಈ ಪಂದ್ಯದಲ್ಲಿ ಹಸನ್ ಐಸಾಖಿಲ್ ಆರಂಭಿಕನಾಗಿ ಕಣಕ್ಕಿಳಿದರೆ, ಮೊಹಮ್ಮದ್ ನಬಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಈ ಜೋಡಿಯು 53 ರನ್​ಗಳ ಜೊತೆಯಾಟವಾಡುವ ಮೂಲಕ ಟಿ20 ಇತಿಹಾಸದಲ್ಲೇ ಅರ್ಧಶತಕದ ಪಾಲುದಾರಿಕೆ ನಿಭಾಯಿಸಿದ ವಿಶ್ವದ ಮೊದಲ ತಂದೆ-ಮಗ ಜೋಡಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Source link

SSLC ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್: ಮುಖ್ಯೋಪಾಧ್ಯಾಯರು ಸೇರಿ 8 ಮಂದಿ ಅರೆಸ್ಟ್ – Kannada News | SSLC Preparatory Exam Question Paper Leak Busted: Teachers and Students Among 8 Arrested in Karnataka

ಬೆಂಗಳೂರು, ಜನವರಿ 12: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bangalore) ಉತ್ತರ ವಿಭಾಗದ ಸೈಬರ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಬಂಧಿತರಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿದ್ದಾರೆ.

ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್‌ನಲ್ಲಿ ಹರಿದಾಡುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಬೆಂಗಳೂರು ಉತ್ತರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢಪಟ್ಟಿತ್ತು.

ಪೊಲೀಸರ ಮಾಹಿತಿ ಪ್ರಕಾರ, ತುಮಕೂರು, ರಾಮನಗರ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಶಾಲೆಗಳ ಶಿಕ್ಷಕರು ಈ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿರುವುದು ಪತ್ತೆಯಾಗಿದೆ. ತುಮಕೂರಿನ ಶಾಲೆಯೊಂದರ ಮುಖ್ಯೋಪಾಧ್ಯಾಯ ವಿ.ಡಿ. ಗಿರೀಶ್, ರಾಮನಗರದ ಸಹ ಶಿಕ್ಷಕ ಅಮ್ಜದ್ ಖಾನ್ ಸೇರಿದಂತೆ ಕಲಬುರಗಿ ಜಿಲ್ಲೆಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಬಂಧನಕ್ಕೊಳಗಾಗಿದ್ದಾರೆ.

ಬಂಧಿತರ ಪೈಕಿ ಕಲಬುರಗಿ ಜಿಲ್ಲೆಯ ಮುಖ್ಯ ಶಿಕ್ಷಕಿ ಶಾಹಿದಾ ಬೇಗಂ, ಶಿಕ್ಷಕ ಮೊಹಮ್ಮದ್ ಸಿರಾಜುದ್ದೀನ್, ಸಹ ಶಿಕ್ಷಕಿ ಫಾಹ್ಮಿದಾ ಹಾಗೂ ಶಿಕ್ಷಕಿ ಫರ್ಜಾನಾ ಬೇಗಂ ಇದ್ದಾರೆ. ಇವರ ಜೊತೆಗೆ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಎಸ್​ಎಸ​ಲ್​ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ವಿವರ

  • ವಿ.ಡಿ. ಗಿರೀಶ್ – ಮುಖ್ಯೋಪಾಧ್ಯಾಯ, ತುಮಕೂರು
  • ಅಮ್ಜದ್ ಖಾನ್ – ಸಹ ಶಿಕ್ಷಕ, ರಾಮನಗರ
  • ಶಾಹಿದಾ ಬೇಗಂ – ಮುಖ್ಯ ಶಿಕ್ಷಕಿ, ಕಲಬುರಗಿ
  • ಫಾಹ್ಮಿದಾ – ಸಹ ಶಿಕ್ಷಕಿ, ಕಲಬುರಗಿ
  • ಮೊಹಮ್ಮದ್ ಸಿರಾಜುದ್ದೀನ್ – ಶಿಕ್ಷಕ, ಕಲಬುರಗಿ
  • ಫರ್ಜಾನಾ ಬೇಗಂ – ಶಿಕ್ಷಕಿ, ಕಲಬುರಗಿ
  • ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು

ಇದನ್ನೂ ಓದಿ: SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ

ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಯಾವ ರೀತಿಯಲ್ಲಿ ನಡೆದಿದೆ, ಇನ್ನಿತರರು ಶಾಮೀಲಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಶಿಕ್ಷಣ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ತಂದಿರುವ ಈ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 12 January: ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 12-01-2026 ರ ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣಪಕ್ಷ, ನವಮಿ, ಸ್ವಾತಿ ನಕ್ಷತ್ರದ ಈ ದಿನದ ರಾಹುಕಾಲ ಬೆಳಿಗ್ಗೆ 8:09 ರಿಂದ 9:35 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಬೆಳಿಗ್ಗೆ 9:36 ರಿಂದ 11:02 ರವರೆಗೆ.

ಇಂದು ರಾಷ್ಟ್ರೀಯ ಯುವ ದಿನ ಹಾಗೂ ಶಿವ ಮತ್ತು ಕಾಲಭೈರವನ ಕೃಪೆಗೆ ಪಾತ್ರರಾಗಲು ಸೂಕ್ತ ದಿನವಾಗಿದೆ. ಧನು ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಡಾ. ಗುರೂಜಿ ಅವರು ದ್ವಾದಶ ರಾಶಿಗಳಾದ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಗಳಿಗೆ ವಿವರವಾದ ಫಲಗಳನ್ನು ನೀಡಿದ್ದಾರೆ. ಪ್ರತಿಯೊಂದು ರಾಶಿಗೂ ಗ್ರಹಗಳ ಶುಭಫಲ, ಆರೋಗ್ಯ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಜೀವನ, ಮತ್ತು ಪ್ರಯಾಣದ ಕುರಿತು ಸಲಹೆಗಳನ್ನು ನೀಡಲಾಗಿದೆ. ಅದೃಷ್ಟದ ಬಣ್ಣ, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳನ್ನೂ ತಿಳಿಸಲಾಗಿದೆ.

 

 

 

Source link

ಟ್ರಾಫಿಕ್ ಕಿರಿಕಿರಿಗೆ ಗುಡ್ ಬೈ ಹೇಳಲು ಬೆಂಗಳೂರಿನ 5 ಕಡೆ ನಿರ್ಮಾಣವಾಗಲಿದೆ ಎಲಿವೇಟೆಡ್​​ ಕಾರಿಡಾರ್: ಎಲ್ಲೆಲ್ಲಿ ಗೊತ್ತಾ? – Kannada News | Five Elevated Corridors Planned in Bengaluru to Ease Traffic Congestion: Here’s the List

ಬೆಂಗಳೂರು, ಜನವರಿ 12: ಬೆಂಗಳೂರಿನ (Bangalore) ಜನರು ಅತಿಯಾಗಿ ಜಿಗುಪ್ಸೆಗೆ ಒಳಗಾಗುವುದು ಇಲ್ಲಿನ ಸಂಚಾರ (Traffic) ದಟ್ಟಣೆಯಿಂದ. ಹೀಗಾಗಿ ಸಂಚಾರ ದಟ್ಟಣೆ ನಿವಾರಣೆಗಾಗಿ ಸರ್ಕಾರ ನಾನಾ ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಇದೀಗ ಪ್ರಮುಖ ಭಾಗಗಳಲ್ಲಿ ಎಲಿವೇಟೆಡ್​ ಕಾರಿಡಾರ್​​ ನಿರ್ಮಾಣಕ್ಕೆ ನಿರ್ಧರಿಸಿದೆ. ಒಟ್ಟು ಸುಮಾರು 75 ಕಿಲೋ ಮೀಟರ್​ ಉದ್ದದ 5 ಎತ್ತರಿಸಿದ ರಸ್ತೆಗಳು ಅಥವಾ ಎಲಿವೇಟೆಡ್​ ಕಾರಿಡಾರ್​ಗಳ ನಿರ್ಮಾಣದ ಜವಾಬ್ದಾರಿಯನ್ನು ಬೆಂಗಳೂರು ಸ್ಮಾರ್ಟ್​​ ಇನ್ಫ್ರಾಸ್ಟ್ರಕ್ಚರ್​​ ಲಿಮಿಟೆಡ್​ಗೆ ವಹಿಸಲಾಗಿದೆ.

ಎಲ್ಲೆಲ್ಲಿ ಎಲಿವೇಟೆಡ್​ ಕಾರಿಡಾರ್?

  • ನಾಗವಾರ ಜಂಕ್ಷನ್​​​ – ನ್ಯೂ ಏರ್ಪೋರ್ಟ್​​​ ರಸ್ತೆ (17.94 ಕಿ.ಮೀ)
  • ಹಲಸೂರು ಕೆರೆ ಜಂಕ್ಷನ್​​- ಬಾಗಲೂರು (27.19 ಕಿ.ಮೀ)
  • ಹಳೆ ಮದ್ರಾಸ್​ ರಸ್ತೆ – ಎಲೆಕ್ಟ್ರಾನಿಕ್​ ಸಿಟಿ ಫ್ಲೈಓವರ್​ (10.81 ಕಿ.ಮೀ)
  • ಸಿರ್ಸಿ ಸರ್ಕಲ್​​ – ಸ್ಯಾಟಲೈಟ್​​ ಬಸ್​ ಸ್ಟ್ಯಾಂಡ್ (5.22 ಕಿ.ಮೀ)
  • ರಾಗಿಗುಡ್ಡ ಜಂಕ್ಷನ್​​ – ಕನಕಪುರ ಮುಖ್ಯರಸ್ತೆ (18.47 ಕಿ.ಮೀ)

ಇದನ್ನೂ ಓದಿ: ಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್: ಆ್ಯಂಬುಲೆನ್ಸ್ ಸಿಲುಕಿ ರೋಗಿ ನರಳಾಟ

ಇನ್ನು ಹೊಸ ಎಲಿವೇಟೆಡ್​ ರಸ್ತೆಗಳು ನಗರದ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ ನೀಡುವ ನಿರೀಕ್ಷೆಯಿದೆ. ಆದರೆ, ಇವುಗಳ ನಿರ್ಮಾಣದ ಬಳಿಕ ಟೋಲ್​ ಸಂಗ್ರಹ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಈ ಮೂಲಕ ದುಬಾರಿ ಕಾಮಗಾರಿಯ ವೆಚ್ಚವನ್ನು ಸವಾರರಿಂದಲೇ ವಸೂಲಿ ಮಾಡುವ ಚಿಂತನೆ ಕೂಡ ಸರ್ಕಾರದ್ದಾಗಿದೆ ಎನ್ನಲಾಗಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶತಕ ತಪ್ಪಿಸಿ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ – Kannada News | Virat Kohli is now Oldest Indian batter to be dismissed in 90s in ODI

ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗವಾಸ್ಕರ್ 92 ರನ್​​ಗಳಿಸಿ ಶತಕ ವಂಚಿತರಾಗಿದ್ದರು. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್​​ನಲ್ಲಿ 90+ ರನ್​​​ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್​​ಮನ್ ಎನಿಸಿಕೊಂಡಿದ್ದರು.

Source link

ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ – Kannada News | Trump’s Truth Social Post Declares Him Acting President of Venezuela Amid Caracas Crisis

ವಾಷಿಂಗ್ಟನ್, ಜನವರಿ 12: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​(Donald Trump)ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ.

ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಜನರು ನಿಜವಾಗಿಯೂ ನಿಮಗೆ ಬೇಕಾಗಿರುವುದು ಏನು ಎಂದು ಟ್ರಂಪ್​ರನ್ನು ಪ್ರಶ್ನೆ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, ಅಮೆರಿಕದ ಅಧ್ಯಕ್ಷ ಟ್ರಂಪ್ ತಮ್ಮನ್ನು “ವೆನೆಜುವೆಲಾದ ಹಂಗಾಮಿ ಅಧ್ಯಕ್ಷರು” ಎಂದು ಬಣ್ಣಿಸಿಕೊಂಡಿದ್ದಾರೆ.

ದೇಶದ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರನ್ನು ವೆನೆಜುವೆಲಾದ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.ಈ ಪೋಸ್ಟ್ ತ್ವರಿತವಾಗಿ ವೈರಲ್ ಆಗಿದ್ದು, ಜನರು ಟ್ರಂಪ್ ಅವರ ಉದ್ದೇಶಗಳನ್ನು ಪ್ರಶ್ನಿಸಿದ್ದಾರೆ.

ಮತ್ತಷ್ಟು ಓದಿ: ಮೋದಿ ಟ್ರಂಪ್​ಗೆ ಕರೆ ಮಾಡ್ಲಿಲ್ಲ, ಭಾರತ-ಅಮೆರಿಕದ ವ್ಯಾಪಾರ ಒಪ್ಪಂದ ಮುಂದುವರೀಲಿಲ್ಲ: ವಾಣಿಜ್ಯ ಕಾರ್ಯದರ್ಶಿ

ವೆನೆಜುವೆಲಾದ ತೈಲ ನಿಕ್ಷೇಪಗಳ ಕುರಿತು ಟ್ರಂಪ್ ನಿರಂತರವಾಗಿ ತೈಲ ಕಂಪನಿಗಳೊಂದಿಗೆ ಸಭೆ ನಡೆಸುತ್ತಿರುವ ಮತ್ತು ಇರಾನ್ ಮತ್ತು ಗ್ರೀನ್‌ಲ್ಯಾಂಡ್ ಕುರಿತು ನಿರಂತರವಾಗಿ ಬೆದರಿಕೆ ಹೇಳಿಕೆಗಳನ್ನು ನೀಡುತ್ತಿರುವ ಸಮಯದಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.

ವೆನೆಜುವೆಲಾದ ನಾಯಕ ನಿಕೋಲಸ್ ಮಡುರೊ ಅವರ ಬಂಧನದ ನಂತರ, ಸುರಕ್ಷಿತ, ನ್ಯಾಯಯುತ ಮತ್ತು ವಿವೇಚನಾಯುಕ್ತ ಅಧಿಕಾರ ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳುವವರೆಗೆ ಅಮೆರಿಕವು ವೆನೆಜುವೆಲಾದ ಸರ್ಕಾರವನ್ನು ನಡೆಸುತ್ತದೆ ಎಂದು ಟ್ರಂಪ್ ಹೇಳಿಕೊಂಡರು.

ಭಾನುವಾರದಂದು ಟ್ರಂಪ್, ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ಅವರೊಂದಿಗಿನ ಮಾತುಕತೆ ಸಕಾರಾತ್ಮಕವಾಗಿದೆ ಎಂದು ಹೇಳಿದರು. ವೆನೆಜುವೆಲಾದ ಪರಿಸ್ಥಿತಿಯ ಕುರಿತು ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೇಶದಲ್ಲಿನ ಬೆಳವಣಿಗೆಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ ಮತ್ತು ವಾಷಿಂಗ್ಟನ್ ತನ್ನ ನಾಯಕತ್ವದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಇತ್ತೀಚೆಗೆ, ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ವಿಶ್ವದ ಪ್ರಮುಖ ತೈಲ ಮತ್ತು ಅನಿಲ ಕಂಪನಿಗಳ ಉನ್ನತ ಅಧಿಕಾರಿಗಳನ್ನು ಭೇಟಿಯಾದರು, ಅಲ್ಲಿ ಅವರು ವೆನೆಜುವೆಲಾದಲ್ಲಿ ಹೂಡಿಕೆಗಳು ಈಗ ವೆನೆಜುವೆಲಾ ಸರ್ಕಾರದೊಂದಿಗೆ ಅಲ್ಲ, ನೇರವಾಗಿ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಇರುತ್ತವೆ ಎಂದು ಸ್ಪಷ್ಟಪಡಿಸಿದರು.

ಟ್ರಂಪ್ ಭದ್ರತಾ ಖಾತರಿಗಳನ್ನು ನೀಡಿದರು ಮತ್ತು ಗಮನಾರ್ಹ ಹೂಡಿಕೆಗಳಿಗಾಗಿ ತೈಲ ಉದ್ಯಮಕ್ಕೆ ಮುಕ್ತ ಆಹ್ವಾನವನ್ನು ನೀಡಿದರು. ಯುನೈಟೆಡ್ ಸ್ಟೇಟ್ಸ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಚೀನಾ ಅಥವಾ ರಷ್ಯಾ ವೆನೆಜುವೆಲಾದಲ್ಲಿ ಬಲವಾದ ಹಿಡಿತ ಸಾಧಿಸುತ್ತಿತ್ತು ಎಂದು ಅವರು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 9:16 am, Mon, 12 January 26

Source link

Bengaluru Air Quality: ಬೆಂಗಳೂರಿಗಿಂತ ಕಳಪೆ ಏರ್ ಕ್ವಾಲಿಟಿ ಇದೆ ಉಡುಪಿಯಲ್ಲಿ! – Kannada News | Bangalore Air Pollution Crisis: Udupi’s Air quality is getting worse than Bengaluru

ಬೆಂಗಳೂರಿಗಿಂಗ ಕಳಪೆ ಏರ್ ಕ್ವಾಲಿಟಿ ಇದೆ ಉಡುಪಿಯಲ್ಲಿ!

ಬೆಂಗಳೂರು, ಜನವರಿ 12: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಮೊದಲು ಎರಡಂಕಿಯಲ್ಲಿದ್ದರೂ ಈಗ ಮೂರಂಕಿ ತಲುಪಿದೆ. ಈ ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ.

ಉಡುಪಿಯಲ್ಲಿ ಕಳೆದ ತಿಂಗಳೆಲ್ಲಾ 50 ರಿಂದ 100ರ ಆಸುಪಾಸಿನಲ್ಲಿ ಗಾಳಿಯ ಗುಣಮಟ್ಟ ಏರುಪೇರಾಗುತ್ತಿತ್ತು. ಆದರೆ ಇಂದು 166ಕ್ಕೆ ತಲುಪಿದೆ. ಈ ಪರಿಸ್ಥಿತಿಯಲ್ಲಿ ಸುರಕ್ಷತೆ ಅತ್ಯಂತ ಮುಖ್ಯ. ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು ಉತ್ತಮ. ಸಾಧ್ಯವಾದರೆ ಬೆಳಿಗ್ಗೆ ಅಥವಾ ಸಂಜೆ ಪೀಕ್ ಟ್ರಾಫಿಕ್ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಮನೆಯೊಳಗೆ ಗಿಡಗಳನ್ನು ಬೆಳೆಸುವುದು, ಸಾಕಷ್ಟು ನೀರು ಕುಡಿಯುವುದು ಮತ್ತು ಸ್ವಚ್ಛತೆ ಕಾಪಾಡುವುದು ಮಾಲಿನ್ಯದ ಪರಿಣಾಮವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.

ಹಂತ ಹಂತವಾಗಿ ಸುಧಾರಿಸುತ್ತಿದೆಯಾ ಏರ್ ಕ್ವಾಲಿಟಿ?

ಬೆಂಗಳೂರಿನ ಗಾಳಿಯ ಗುಣಮಟ್ಟ 138 ಇದ್ದು, ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳಿನಲ್ಲಿ ಒಮ್ಮೆ 200ರ ಗಡಿ ದಾಟಿದ್ದ ಏರ್ ಕ್ವಾಲಿಟಿ, ನಗರವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಸಿಲ್ಕ್ ಬೋರ್ಡ್​, ವೈಟ್​ಫೀಲ್ಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿತ್ತು. ಇದೀಗ ವಾತಾವರಣ ಸಲ್ಪ ಸುಧಾರಣೆ ಕಂಡಿದ್ದರೂ, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –138
  • ಮಂಗಳೂರು-161
  • ಮೈಸೂರು – 59
  • ಬೆಳಗಾವಿ – 140
  • ಕಲಬುರ್ಗಿ-79
  • ಶಿವಮೊಗ್ಗ – 154
  • ಬಳ್ಳಾರಿ – 144
  • ಹುಬ್ಬಳ್ಳಿ- 87
  • ಉಡುಪಿ –166
  • ವಿಜಯಪುರ –62

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version