ಈ ಪಂದ್ಯದಲ್ಲಿ ಹಸನ್ ಐಸಾಖಿಲ್ ಆರಂಭಿಕನಾಗಿ ಕಣಕ್ಕಿಳಿದರೆ, ಮೊಹಮ್ಮದ್ ನಬಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಅಲ್ಲದೆ ಈ ಜೋಡಿಯು 53 ರನ್ಗಳ ಜೊತೆಯಾಟವಾಡುವ ಮೂಲಕ ಟಿ20 ಇತಿಹಾಸದಲ್ಲೇ ಅರ್ಧಶತಕದ ಪಾಲುದಾರಿಕೆ ನಿಭಾಯಿಸಿದ ವಿಶ್ವದ ಮೊದಲ ತಂದೆ-ಮಗ ಜೋಡಿ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬೆಂಗಳೂರು, ಜನವರಿ 12: ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ (SSLC Preparatory Exam) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು (Bangalore) ಉತ್ತರ ವಿಭಾಗದ ಸೈಬರ್ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಬಂಧಿತರಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿದ್ದಾರೆ.
ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್ನಲ್ಲಿ ಹರಿದಾಡುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಬೆಂಗಳೂರು ಉತ್ತರ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢಪಟ್ಟಿತ್ತು.
ಪೊಲೀಸರ ಮಾಹಿತಿ ಪ್ರಕಾರ, ತುಮಕೂರು, ರಾಮನಗರ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಶಾಲೆಗಳ ಶಿಕ್ಷಕರು ಈ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿರುವುದು ಪತ್ತೆಯಾಗಿದೆ. ತುಮಕೂರಿನ ಶಾಲೆಯೊಂದರ ಮುಖ್ಯೋಪಾಧ್ಯಾಯ ವಿ.ಡಿ. ಗಿರೀಶ್, ರಾಮನಗರದ ಸಹ ಶಿಕ್ಷಕ ಅಮ್ಜದ್ ಖಾನ್ ಸೇರಿದಂತೆ ಕಲಬುರಗಿ ಜಿಲ್ಲೆಯ ಶಿಕ್ಷಕರು ಹಾಗೂ ಸಹ ಶಿಕ್ಷಕರು ಬಂಧನಕ್ಕೊಳಗಾಗಿದ್ದಾರೆ.
ಬಂಧಿತರ ಪೈಕಿ ಕಲಬುರಗಿ ಜಿಲ್ಲೆಯ ಮುಖ್ಯ ಶಿಕ್ಷಕಿ ಶಾಹಿದಾ ಬೇಗಂ, ಶಿಕ್ಷಕ ಮೊಹಮ್ಮದ್ ಸಿರಾಜುದ್ದೀನ್, ಸಹ ಶಿಕ್ಷಕಿ ಫಾಹ್ಮಿದಾ ಹಾಗೂ ಶಿಕ್ಷಕಿ ಫರ್ಜಾನಾ ಬೇಗಂ ಇದ್ದಾರೆ. ಇವರ ಜೊತೆಗೆ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಎಸ್ಎಸಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಬಂಧಿತರ ವಿವರ
ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಯಾವ ರೀತಿಯಲ್ಲಿ ನಡೆದಿದೆ, ಇನ್ನಿತರರು ಶಾಮೀಲಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ. ಶಿಕ್ಷಣ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ತಂದಿರುವ ಈ ಪ್ರಕರಣ ರಾಜ್ಯಾದ್ಯಂತ ಆತಂಕ ಮೂಡಿಸಿದೆ.
ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 12-01-2026 ರ ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರ, ದಕ್ಷಿಣಾಯಣ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣಪಕ್ಷ, ನವಮಿ, ಸ್ವಾತಿ ನಕ್ಷತ್ರದ ಈ ದಿನದ ರಾಹುಕಾಲ ಬೆಳಿಗ್ಗೆ 8:09 ರಿಂದ 9:35 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಬೆಳಿಗ್ಗೆ 9:36 ರಿಂದ 11:02 ರವರೆಗೆ.
ಇಂದು ರಾಷ್ಟ್ರೀಯ ಯುವ ದಿನ ಹಾಗೂ ಶಿವ ಮತ್ತು ಕಾಲಭೈರವನ ಕೃಪೆಗೆ ಪಾತ್ರರಾಗಲು ಸೂಕ್ತ ದಿನವಾಗಿದೆ. ಧನು ರಾಶಿಯಲ್ಲಿ ರವಿ ಮತ್ತು ತುಲಾ ರಾಶಿಯಲ್ಲಿ ಚಂದ್ರ ಸಂಚಾರ ಮಾಡುತ್ತಿದ್ದಾರೆ. ಡಾ. ಗುರೂಜಿ ಅವರು ದ್ವಾದಶ ರಾಶಿಗಳಾದ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಗಳಿಗೆ ವಿವರವಾದ ಫಲಗಳನ್ನು ನೀಡಿದ್ದಾರೆ. ಪ್ರತಿಯೊಂದು ರಾಶಿಗೂ ಗ್ರಹಗಳ ಶುಭಫಲ, ಆರೋಗ್ಯ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಜೀವನ, ಮತ್ತು ಪ್ರಯಾಣದ ಕುರಿತು ಸಲಹೆಗಳನ್ನು ನೀಡಲಾಗಿದೆ. ಅದೃಷ್ಟದ ಬಣ್ಣ, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳನ್ನೂ ತಿಳಿಸಲಾಗಿದೆ.
ಬೆಂಗಳೂರು, ಜನವರಿ 12: ಬೆಂಗಳೂರಿನ (Bangalore) ಜನರು ಅತಿಯಾಗಿ ಜಿಗುಪ್ಸೆಗೆ ಒಳಗಾಗುವುದು ಇಲ್ಲಿನ ಸಂಚಾರ (Traffic) ದಟ್ಟಣೆಯಿಂದ. ಹೀಗಾಗಿ ಸಂಚಾರ ದಟ್ಟಣೆ ನಿವಾರಣೆಗಾಗಿ ಸರ್ಕಾರ ನಾನಾ ಯೋಜನೆಗಳನ್ನು ಹಾಕಿಕೊಳ್ಳುತ್ತಿದೆ. ಇದೀಗ ಪ್ರಮುಖ ಭಾಗಗಳಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ನಿರ್ಧರಿಸಿದೆ. ಒಟ್ಟು ಸುಮಾರು 75 ಕಿಲೋ ಮೀಟರ್ ಉದ್ದದ 5 ಎತ್ತರಿಸಿದ ರಸ್ತೆಗಳು ಅಥವಾ ಎಲಿವೇಟೆಡ್ ಕಾರಿಡಾರ್ಗಳ ನಿರ್ಮಾಣದ ಜವಾಬ್ದಾರಿಯನ್ನು ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ಗೆ ವಹಿಸಲಾಗಿದೆ.
ಎಲ್ಲೆಲ್ಲಿ ಎಲಿವೇಟೆಡ್ ಕಾರಿಡಾರ್?
ನಾಗವಾರ ಜಂಕ್ಷನ್ – ನ್ಯೂ ಏರ್ಪೋರ್ಟ್ ರಸ್ತೆ (17.94 ಕಿ.ಮೀ)
ಹಲಸೂರು ಕೆರೆ ಜಂಕ್ಷನ್- ಬಾಗಲೂರು (27.19 ಕಿ.ಮೀ)
ಹಳೆ ಮದ್ರಾಸ್ ರಸ್ತೆ – ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ (10.81 ಕಿ.ಮೀ)
ಇನ್ನು ಹೊಸ ಎಲಿವೇಟೆಡ್ ರಸ್ತೆಗಳು ನಗರದ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ ನೀಡುವ ನಿರೀಕ್ಷೆಯಿದೆ. ಆದರೆ, ಇವುಗಳ ನಿರ್ಮಾಣದ ಬಳಿಕ ಟೋಲ್ ಸಂಗ್ರಹ ಮಾಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಈ ಮೂಲಕ ದುಬಾರಿ ಕಾಮಗಾರಿಯ ವೆಚ್ಚವನ್ನು ಸವಾರರಿಂದಲೇ ವಸೂಲಿ ಮಾಡುವ ಚಿಂತನೆ ಕೂಡ ಸರ್ಕಾರದ್ದಾಗಿದೆ ಎನ್ನಲಾಗಿದೆ.
ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ಇದಕ್ಕೂ ಮುನ್ನ ಈ ವಿಶೇಷ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. 1986 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗವಾಸ್ಕರ್ 92 ರನ್ಗಳಿಸಿ ಶತಕ ವಂಚಿತರಾಗಿದ್ದರು. ಈ ವೇಳೆ ಅವರ ವಯಸ್ಸು 36 ವರ್ಷ, 282 ದಿನಗಳು. ಈ ಮೂಲಕ ಭಾರತದ ಪರ ಏಕದಿನ ಕ್ರಿಕೆಟ್ನಲ್ಲಿ 90+ ರನ್ಗಳಿಸಿ ಶತಕ ತಪ್ಪಿಸಿಕೊಂಡ ಅತ್ಯಂತ ಹಿರಿಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು.
ವಾಷಿಂಗ್ಟನ್, ಜನವರಿ 12: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump)ನ ಇತ್ತೀಚಿನ ಹೇಳಿಕೆಗಳನ್ನು ಗಮನಿಸಿದಾಗ ಅವರಿಗೆ ಬೇಕಾಗಿರುವುದು ಕೇವಲ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ.
ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಜನರು ನಿಜವಾಗಿಯೂ ನಿಮಗೆ ಬೇಕಾಗಿರುವುದು ಏನು ಎಂದು ಟ್ರಂಪ್ರನ್ನು ಪ್ರಶ್ನೆ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿ, ಅಮೆರಿಕದ ಅಧ್ಯಕ್ಷ ಟ್ರಂಪ್ ತಮ್ಮನ್ನು “ವೆನೆಜುವೆಲಾದ ಹಂಗಾಮಿ ಅಧ್ಯಕ್ಷರು” ಎಂದು ಬಣ್ಣಿಸಿಕೊಂಡಿದ್ದಾರೆ.
ದೇಶದ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರನ್ನು ವೆನೆಜುವೆಲಾದ ಮಧ್ಯಂತರ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.ಈ ಪೋಸ್ಟ್ ತ್ವರಿತವಾಗಿ ವೈರಲ್ ಆಗಿದ್ದು, ಜನರು ಟ್ರಂಪ್ ಅವರ ಉದ್ದೇಶಗಳನ್ನು ಪ್ರಶ್ನಿಸಿದ್ದಾರೆ.
ವೆನೆಜುವೆಲಾದ ತೈಲ ನಿಕ್ಷೇಪಗಳ ಕುರಿತು ಟ್ರಂಪ್ ನಿರಂತರವಾಗಿ ತೈಲ ಕಂಪನಿಗಳೊಂದಿಗೆ ಸಭೆ ನಡೆಸುತ್ತಿರುವ ಮತ್ತು ಇರಾನ್ ಮತ್ತು ಗ್ರೀನ್ಲ್ಯಾಂಡ್ ಕುರಿತು ನಿರಂತರವಾಗಿ ಬೆದರಿಕೆ ಹೇಳಿಕೆಗಳನ್ನು ನೀಡುತ್ತಿರುವ ಸಮಯದಲ್ಲಿ ಈ ಚಿತ್ರವನ್ನು ಹಂಚಿಕೊಳ್ಳಲಾಗಿದೆ.
ವೆನೆಜುವೆಲಾದ ನಾಯಕ ನಿಕೋಲಸ್ ಮಡುರೊ ಅವರ ಬಂಧನದ ನಂತರ, ಸುರಕ್ಷಿತ, ನ್ಯಾಯಯುತ ಮತ್ತು ವಿವೇಚನಾಯುಕ್ತ ಅಧಿಕಾರ ವರ್ಗಾವಣೆಯನ್ನು ಖಚಿತಪಡಿಸಿಕೊಳ್ಳುವವರೆಗೆ ಅಮೆರಿಕವು ವೆನೆಜುವೆಲಾದ ಸರ್ಕಾರವನ್ನು ನಡೆಸುತ್ತದೆ ಎಂದು ಟ್ರಂಪ್ ಹೇಳಿಕೊಂಡರು.
ಭಾನುವಾರದಂದು ಟ್ರಂಪ್, ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ಅವರೊಂದಿಗಿನ ಮಾತುಕತೆ ಸಕಾರಾತ್ಮಕವಾಗಿದೆ ಎಂದು ಹೇಳಿದರು. ವೆನೆಜುವೆಲಾದ ಪರಿಸ್ಥಿತಿಯ ಕುರಿತು ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೇಶದಲ್ಲಿನ ಬೆಳವಣಿಗೆಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗುತ್ತಿವೆ ಮತ್ತು ವಾಷಿಂಗ್ಟನ್ ತನ್ನ ನಾಯಕತ್ವದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಇತ್ತೀಚೆಗೆ, ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ವಿಶ್ವದ ಪ್ರಮುಖ ತೈಲ ಮತ್ತು ಅನಿಲ ಕಂಪನಿಗಳ ಉನ್ನತ ಅಧಿಕಾರಿಗಳನ್ನು ಭೇಟಿಯಾದರು, ಅಲ್ಲಿ ಅವರು ವೆನೆಜುವೆಲಾದಲ್ಲಿ ಹೂಡಿಕೆಗಳು ಈಗ ವೆನೆಜುವೆಲಾ ಸರ್ಕಾರದೊಂದಿಗೆ ಅಲ್ಲ, ನೇರವಾಗಿ ಯುನೈಟೆಡ್ ಸ್ಟೇಟ್ಸ್ನೊಂದಿಗೆ ಇರುತ್ತವೆ ಎಂದು ಸ್ಪಷ್ಟಪಡಿಸಿದರು.
ಟ್ರಂಪ್ ಭದ್ರತಾ ಖಾತರಿಗಳನ್ನು ನೀಡಿದರು ಮತ್ತು ಗಮನಾರ್ಹ ಹೂಡಿಕೆಗಳಿಗಾಗಿ ತೈಲ ಉದ್ಯಮಕ್ಕೆ ಮುಕ್ತ ಆಹ್ವಾನವನ್ನು ನೀಡಿದರು. ಯುನೈಟೆಡ್ ಸ್ಟೇಟ್ಸ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ಚೀನಾ ಅಥವಾ ರಷ್ಯಾ ವೆನೆಜುವೆಲಾದಲ್ಲಿ ಬಲವಾದ ಹಿಡಿತ ಸಾಧಿಸುತ್ತಿತ್ತು ಎಂದು ಅವರು ಹೇಳಿದ್ದಾರೆ.
ಬೆಂಗಳೂರು, ಜನವರಿ 12: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ. ಅಷ್ಟೇ ಅಲ್ಲ, ಮೈಸೂರು, ವಿಜಯಪುರದಲ್ಲೂ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಮೊದಲು ಎರಡಂಕಿಯಲ್ಲಿದ್ದರೂ ಈಗ ಮೂರಂಕಿ ತಲುಪಿದೆ. ಈ ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ.
ಉಡುಪಿಯಲ್ಲಿ ಕಳೆದ ತಿಂಗಳೆಲ್ಲಾ 50 ರಿಂದ 100ರ ಆಸುಪಾಸಿನಲ್ಲಿ ಗಾಳಿಯ ಗುಣಮಟ್ಟ ಏರುಪೇರಾಗುತ್ತಿತ್ತು. ಆದರೆ ಇಂದು 166ಕ್ಕೆ ತಲುಪಿದೆ. ಈ ಪರಿಸ್ಥಿತಿಯಲ್ಲಿ ಸುರಕ್ಷತೆ ಅತ್ಯಂತ ಮುಖ್ಯ. ಹೊರಗೆ ಹೋಗುವಾಗ ಮಾಸ್ಕ್ ಧರಿಸುವುದು ಉತ್ತಮ. ಸಾಧ್ಯವಾದರೆ ಬೆಳಿಗ್ಗೆ ಅಥವಾ ಸಂಜೆ ಪೀಕ್ ಟ್ರಾಫಿಕ್ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಮನೆಯೊಳಗೆ ಗಿಡಗಳನ್ನು ಬೆಳೆಸುವುದು, ಸಾಕಷ್ಟು ನೀರು ಕುಡಿಯುವುದು ಮತ್ತು ಸ್ವಚ್ಛತೆ ಕಾಪಾಡುವುದು ಮಾಲಿನ್ಯದ ಪರಿಣಾಮವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.
ಹಂತ ಹಂತವಾಗಿ ಸುಧಾರಿಸುತ್ತಿದೆಯಾ ಏರ್ ಕ್ವಾಲಿಟಿ?
ಬೆಂಗಳೂರಿನ ಗಾಳಿಯ ಗುಣಮಟ್ಟ 138 ಇದ್ದು, ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ ಸ್ವಲ್ಪ ಸುಧಾರಣೆ ಕಂಡಿದೆ. ಕಳೆದ ತಿಂಗಳಿನಲ್ಲಿ ಒಮ್ಮೆ 200ರ ಗಡಿ ದಾಟಿದ್ದ ಏರ್ ಕ್ವಾಲಿಟಿ, ನಗರವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಸಿಲ್ಕ್ ಬೋರ್ಡ್, ವೈಟ್ಫೀಲ್ಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿತ್ತು. ಇದೀಗ ವಾತಾವರಣ ಸಲ್ಪ ಸುಧಾರಣೆ ಕಂಡಿದ್ದರೂ, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
ಗಿಲ್ಲಿ ನಟ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ಅವರು ಫಿನಾಲೆ ವೀಕ್ ತಲುಪಿದ್ದಾರೆ. ಕಳೆದ ವೀಕೆಂಡ್ನಲ್ಲಿ ಗಿಲ್ಲಿ ನಟ ಎವಿಕ್ಷನ್ ಭಾಷಣ ನೀಡಿದ್ದಾರೆ. ‘ಎವಿಕ್ಷನ್ ಆದ್ರೆ ಹೇಗೆ ಮಾತಾಡ್ತೀರಾ’ ಎಂದು ಸುದೀಪ್ ಕೇಳಿದರು. ಗಿಲ್ಲಿ ಅದ್ಭುತವಾಗಿ ಮಾತನಾಡಿದರು. ‘ಸೋಲಬಹುದು, ಸತ್ತಿಲ್ಲ’ ಎಂಬ ಸುದೀಪ್ ಮಾತನ್ನು ನೆನಪಿಸಿಕೊಂಡರು. ಆ ಸಂದರ್ಭದ ವಿಡಿಯೋ ಮೇಲಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ ಎಸೆದ ಹೀನಾಯ ದಾಖಲೆಯೊಂದು ಸ್ನೇಹ್ ರಾಣಾ ಹೆಸರಿಗೆ ಸೇರ್ಪಡೆಯಾಗಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್ನ ಒಂದು ಓವರ್ನಲ್ಲಿ ಅತ್ಯಧಿಕ ರನ್ಗಳಿಸಿದ ಭರ್ಜರಿ ದಾಖಲೆಯೊಂದು ಸೋಫಿ ಡಿವೈನ್ ಹೆಸರಿಗೆ ಸೇರ್ಪಡೆಯಾಗಿದೆ.
ಹೌದು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಸ್ನೇಹ್ ರಾಣಾ ವಿರುದ್ಧ ಸೋಫಿ ಡಿವೈನ್ ಬರೋಬ್ಬರಿ 32 ರನ್ ಚಚ್ಚಿದ್ದಾರೆ. ಈ ಪಂದ್ಯದ 6ನೇ ಓವರ್ನಲ್ಲಿ ದಾಳಿಗಿಳಿದ ರಾಣಾ ಎಸೆತಗಳಿಗೆ ಸೋಫಿ 4,4,6,6,6,6 ಉತ್ತರ ನೀಡಿದ್ದಾರೆ.
ಈ ಮೂಲಕ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಒಂದೇ ಓವರ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸೋಫಿ ಡಿವೈನ್ ತಮ್ಮದಾಗಿಸಿಕೊಂಡಿದ್ದಾರೆ.
ಅತ್ತ ಸ್ನೇಹ್ ರಾಣಾ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಒಂದೇ ಓವರ್ನಲ್ಲಿ ಅತ್ಯಧಿಕ ರನ್ ಬಿಟ್ಟು ಕೊಟ್ಟ ಹೀನಾಯ ದಾಖಲೆಗೆ ಕೊರೊಳೊಡ್ಡಿದ್ದಾರೆ. ಇದಕ್ಕೂ ಮುನ್ನ ಈ ಬೇಡದ ದಾಖಲೆ ಯುಪಿ ವಾರಿಯರ್ಸ್ ತಂಡದ ದೀಪ್ತಿ ಶರ್ಮಾ ಹೆಸರಿನಲ್ಲಿತ್ತು.
2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ದೀಪ್ತಿ ಶರ್ಮಾ 28 ರನ್ ನೀಡುವ ಮೂಲಕ ಈ ಹೀನಾಯ ದಾಖಲೆ ಬರೆದಿದ್ದರು. ಇದೀಗ 32 ರನ್ ಚಚ್ಚಿಸಿಕೊಳ್ಳುವ ಮೂಲಕ ಸ್ನೇಹ್ ರಾಣಾ ಈ ಬೇಡದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡದಿ ಗುಜರಾತ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 209 ರನ್ ಕಲೆಹಾಕಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 205 ರನ್ಗಳಿಸಿ 4 ರನ್ಗಳಿಂದ ಸೋಲೊಪ್ಪಿಕೊಂಡಿತು.
ಬೆಂಗಳೂರು, ಜನವರಿ 12: ಬೆಂಗಳೂರಿನಲ್ಲಿ (Bangalore) ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆ (34) (Techie Murder Case) ಪ್ರಕರಣದ ತನಿಖೆ ವೇಳೆ ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಇದು ಕೇವಲ ಕೊಲೆ ಪ್ರಕರಣವಲ್ಲ, ಹತ್ಯೆಗೂ ಮುನ್ನ ಸಂತ್ರಸ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿರುವ ಸಾಧ್ಯತೆ ಇದೆ ಎಂಬ ಗಂಭೀರ ಅನುಮಾನ ಪೊಲೀಸರಿಗೆ ವ್ಯಕ್ತವಾಗಿದೆ. ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಆರೋಪಿಯಾಗಿರುವ ಕೇರಳ ಮೂಲದ ಕರ್ನಲ್ ಕುರೈ (18) ವಿರುದ್ಧ ಈಗಾಗಲೇ ಕೊಲೆ ಪ್ರಕರಣದ ಜೊತೆಗೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನೂ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಬಿಎನ್ಎಸ್ ಸೆಕ್ಷನ್ 103, 64(2), 67 ಮತ್ತು 238ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸರ ತನಿಖೆ ವೇಳೆ ತಿಳಿದುಬಂದ ಮಾಹಿತಿ ಪ್ರಕಾರ, ಜನವರಿ 3ರ ರಾತ್ರಿ ಸುಮಾರು 9 ಗಂಟೆ ವೇಳೆಗೆ ಕರ್ನಲ್ ಕುರೈ ಅಪಾರ್ಟ್ಮೆಂಟ್ನ ಸ್ಲೈಡಿಂಗ್ ವಿಂಡೋ ಮೂಲಕ ಶರ್ಮಿಳಾ ಮನೆಯೊಳಗೆ ನುಗ್ಗಿದ್ದಾನೆ. ಆ ವೇಳೆ ಮನೆಯಲ್ಲಿ ಶರ್ಮಿಳಾ ಒಬ್ಬರೇ ಇದ್ದರು. ಒಳನುಗ್ಗಿದ ಆರೋಪಿ, ಶರ್ಮಿಳಾಳ ಮೇಲೆ ದೌರ್ಜನ್ಯಕ್ಕೆ ಯತ್ನಿಸಿದ್ದು, ಇದಕ್ಕೆ ಆಕೆ ತೀವ್ರವಾಗಿ ಪ್ರತಿರೋಧ ವ್ಯಕ್ತಪಡಿಸಿದ್ದಾಳೆ. ಪ್ರತಿರೋಧದ ವೇಳೆ ಆರೋಪಿ ಬಲವಂತವಾಗಿ ಆಕೆಯ ಮೇಲೆ ಎರಗಿದ್ದು, ಶರ್ಮಿಳಾ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾಳೆ. ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿ ಬಿದ್ದ ಶರ್ಮಿಳಾಳನ್ನು ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಶರ್ಮಿಳಾ ಮೊಬೈಲ್ ಕೊಂಡುಹೋಗಿ ಸಿಕ್ಕಿಬಿದ್ದ ಆರೋಪಿ
ಹತ್ಯೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ರಕ್ತದಲ್ಲಿ ನೆನೆದಿದ್ದ ಬಟ್ಟೆಗಳನ್ನು ಹಾಸಿಗೆಯ ಮೇಲೆ ಹಾಕಿ, ಕೋಣೆಗೆ ಬೆಂಕಿ ಹಚ್ಚಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಾರಿಯಾಗುವ ವೇಳೆ ಶರ್ಮಿಳಾಳ ಮೊಬೈಲ್ ಫೋನ್ನ್ನು ಕೂಡ ತೆಗೆದುಕೊಂಡು ಹೋಗಿದ್ದಾನೆ. ಅದೇ ಮೊಬೈಲ್ ಆಧಾರವಾಗಿಯೇ ಆರೋಪಿ ಕರ್ನಲ್ ಕುರೈ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ರೇಪ್ ಬಗ್ಗೆ ಕೇಳಿದಾಗ ಆರೋಪಿ ಹೇಳೋದೇನು?
ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ರಾಮಮೂರ್ತಿನಗರ ಪೊಲೀಸರು, ಲೈಂಗಿಕ ದೌರ್ಜನ್ಯ ಕುರಿತು ಪ್ರಶ್ನಿಸಿದಾಗ ‘‘ಗೊತ್ತಿಲ್ಲ’’ ಎಂದು ಆತ ನುಣುಚಿಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಸತ್ಯಾಂಶ ತಿಳಿಯಲು ಪೊಲೀಸರು ಎಫ್ಎಸ್ಎಲ್ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸಿದ್ದಾರೆ.
ಆರಂಭದಲ್ಲಿ ಈ ಘಟನೆ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಅವಘಡ ಎಂದು ಹೇಳಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆ ಹಾಗೂ ತನಿಖೆಯ ಬಳಿಕ ಇದು ಪೂರ್ವಯೋಜಿತ ಹತ್ಯೆ ಎಂಬುದು ಸ್ಪಷ್ಟವಾಗಿತ್ತು. ಟೆಕ್ಕಿ ಶರ್ಮಿಳಾಳನ್ನು ವನ್ ಸೈಡೆಡ್ ಲವ್ ಮಾಡಿದ್ದ ಆರೋಪಿ ಕೊಲೆ ಮಾಡಿದ್ದಾನೆ. ನಂತರ ಮನೆಗೆ ಬೆಂಕಿ ಹಚ್ಚಿ ತಪ್ಪಿಸಿಕೊಳ್ಳಲು ಯತ್ನಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.