Headlines

ರಷ್ಯಾ, ಒಮನ್ ಬೆನ್ನಲ್ಲೇ ಇರಾನ್‌ನ ಹೊಸ ಸುಪ್ರೀಂ ನಾಯಕ ಮೊಜ್ತಬಾ ಖಮೇನಿಯನ್ನು ಸ್ವಾಗತಿಸಿದ ಪಾಕಿಸ್ತಾನ

ಇಸ್ಲಮಾಬಾದ್, ಮಾರ್ಚ್ 10: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಫೆಬ್ರವರಿ 28ರಂದು ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಖಮೇನಿ (Ayatollah Ali Khamenei) ಮೃತಪಟ್ಟಿದ್ದರು. ಅವರ ಉತ್ತರಾಧಿಕಾರಿಯಾಗಿರುವ ಇರಾನ್‌ನ ಹೊಸ ಸರ್ವೋಚ್ಚ ನಾಯಕರಾದ ಮೊಜ್ತಬಾ ಖಮೇನಿ ಅವರನ್ನು ಪಾಕಿಸ್ತಾನ ಅಭಿನಂದಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಮೊಜ್ತಬಾ ಖಮೇನಿ ಅವರನ್ನು ಅಭಿನಂದಿಸಿದ್ದು, ಅವರ ತಂದೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಇರಾನಿನ ಹೊಸ ನಾಯಕ ದೇಶವನ್ನು ಶಾಂತಿ ಮತ್ತು ಸ್ಥಿರತೆಯತ್ತ ಕೊಂಡೊಯ್ಯುತ್ತಾರೆ ಎಂದು ಅಭಿಪ್ರಾಯ…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1 ಟಿಕೆಟ್ ಬೆಲೆ 3100 ರೂಪಾಯಿ

ಬಾಲಿವುಡ್‌ನ ಬಹುನಿರೀಕ್ಷಿತ ಆ್ಯಕ್ಷನ್ ಥ್ರಿಲ್ಲರ್ ‘ಧುರಂಧರ್: ದಿ ರಿವೇಂಜ್’ (Dhurandhar 2) ಬಿಡುಗಡೆಗೆ ಕೆಲವೇ ದಿನಗಳ ಬಾಕಿ ಇರುವಾಗ ದೇಶಾದ್ಯಂತ ಟಿಕೆಟ್ ಬುಕಿಂಗ್‌ನಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಮಾರ್ಚ್ 18ರಂದು ಆಯ್ದ ಚಿತ್ರಮಂದಿರಗಳಲ್ಲಿ ಪೇಯ್ಡ್ ಪ್ರಿವ್ಯೂ (Dhurandhar 2 Paid Previews) ಆರಂಭವಾಗಲಿದ್ದು, ಟಿಕೆಟ್ ಬೆಲೆಗಳು ಗಗನಕ್ಕೇರಿದೆ. ಹಾಗಿದ್ದರೂ ಕೂಡ ಪ್ರೇಕ್ಷಕರು ಮುಗಿಬಿದ್ದು ಬುಕ್ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಈ ಸಿನಿಮಾದ ಟಿಕೆಟ್​ಗಳು ಬರೋಬ್ಬರಿ 3100 ರೂಪಾಯಿಗೆ ಮಾರಾಟ ಆಗಿವೆ. ರಣವೀರ್ ಸಿಂಗ್ ನಟನೆಯ ಈ ಚಿತ್ರದ ಮೇಲೆ…

Read More

ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆದ ವೈದ್ಯರು, ನಿಟ್ಟುಸಿರುಬಿಟ್ಟ ರೋಗಿಗಳು

ಬೆಂಗಳೂರುಮ (ಮಾರ್ಚ್ 11): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ (Karnataka Doctors association)  ನಾಳಿನ (ಮಾರ್ಚ್ 11)  ಮುಷ್ಕರವನ್ನು (Strike) ಹಿಂಪಡೆದುಕೊಂಡಿದೆ. ಖಾಲಿ ಹುದ್ದೆಗಳ ಭರ್ತಿ ಸೇರಿ 14 ಬೇಡಿಕೆಗಳ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಓಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಇದರಿಂದ ರಾಜ್ಯದಲ್ಲಿ ಹೆಲ್ತ್ ಎಮರ್ಜೆನ್ಸಿ ಉಂಟಾಗಬಹುದು ಎಂದು ಎಚ್ಚೆತ್ತ ರಾಜ್ಯ ಸರ್ಕಾರ, ವೈದ್ಯಾಧಿಕಾರಿಗಳ ಸಂಘದ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ.  14 ಬೇಡಿಕೆಗಳ ಪೈಕಿ 13…

Read More

ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್; ವಿಡಿಯೋ ವೈರಲ್

2026 ರ ಟಿ20 ವಿಶ್ವಕಪ್‌ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟ್ರೋಫಿ ಗೆದ್ದ ತಕ್ಷಣವೇ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಬಳಿಯ ಹನುಮಾನ್ ತೇಕ್ರಿ ದೇವಸ್ಥಾನಕ್ಕೆ ಟ್ರೋಫಿಯೊಂದಿಗೆ ಭೇಟಿ ನೀಡಿದ್ದರು. ಟ್ರೋಫಿಯನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗಿದ್ದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್, ಬಿಸಿಸಿಐನ…

Read More

ಈಡೇರಲಿಲ್ಲ ಚಂಗಡಿ ಗ್ರಾಮಸ್ಥರ ಕನಸು: ಕಲ್ಲು-ಮುಳ್ಳಿನ ಹಾದಿ, 23 ಕಿಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ

ಚಾಮರಾಜನಗರ, ಮಾರ್ಚ್​ 10: ಆ ಕಾಡಿನ ಗ್ರಾಮಸ್ಥರಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hills) ನಡೆದ ಸಚಿವ ಸಂಪುಟ ಸಭೆ ಹಲವು ಭರವಸೆ ಹುಟ್ಟು ಹಾಕಿತ್ತು. ಸಮಾಜದ ಮುಖ್ಯವಾಹಿನಿಗೆ ಸೇರಬೇಕೆಂಬ ಕನಸು ಇನ್ನೇನು ನನಸಾಗಿಯೇ ಬಿಡುತ್ತದೆ ಎಂಬ ನಿರೀಕ್ಷೆ ಹೊತ್ತಿದ್ದರು. ಆದರೆ ಸಚಿವ ಸಂಪುಟ ಸಭೆ ಆ ಕಾಡಿನ ಗ್ರಾಮಸ್ಥರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ. 23 ಕಿ.ಮೀ ಕಾಡಿನಲ್ಲಿ ಜನರ ನಿತ್ಯ ದರ್ಶನ ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿರುವ ಚಂಗಡಿ ಗ್ರಾಮ ಮೂಲ ಸೌಕರ್ಯಗಳ ಕೊರತೆ, ವನ್ಯಜೀವಿಗಳ…

Read More

ಕೂದಲಿಗೆ ಹೇರ್ ಡೈ ಹಚ್ಚುತ್ತೀರಾ? ಹಾಗಿದ್ರೆ ಮಿಸ್ ಮಾಡ್ದೆ ಈ ಸ್ಟೋರಿ ಓದಿ

ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲೇ ಕೂದಲು ಬಿಳಿಯಾಗುವ ಸಮಸ್ಯೆ ಸಾಮಾನ್ಯವಾಗಿ ಬಿಟ್ಟಿದೆ. ಬದಲಾಗುತ್ತಿರುವ ಜೀವನಶೈಲಿ, ಹೆಚ್ಚುತ್ತಿರುವ ಒತ್ತಡ, ಆಹಾರ ಪದ್ಧತಿಯಲ್ಲಿ ಮಾಡಿಕೊಂಡಿರುವ ಬದಲಾವಣೆಗಳು ಮತ್ತು ಮಾಲಿನ್ಯ (Pollution) ಈ ಸಮಸ್ಯೆಯ ಹೆಚ್ಚಳಕ್ಕೆ ಪ್ರಮುಖ ಕಾರಣಗಳೆಂದು ಹೇಳಲಾಗುತ್ತದೆ. ಈ ರೀತಿ ಕಂಡುಬರುವ ಬಿಳಿ ಕೂದಲನ್ನು ಮರೆಮಾಡಲು ಹೇರ್ ಡೈ ಬಳಸುತ್ತಾರೆ. ಹಿಂದೆ ವಯಸ್ಸಾದವರು ಮಾತ್ರ ಹೇರ್ ಡೈ (Hair Dye) ಬಳಸುತ್ತಿದ್ದರು. ಆದರೆ ಈಗ ಹಾಗಲ್ಲ. ಯುವಕ, ಯುವತಿಯರೂ ಕೂಡ ನಿಯಮಿತವಾಗಿ ಬಳಸಲು ಆರಂಭಿಸಿದ್ದಾರೆ. ಮಾರುಕಟ್ಟೆಯಲ್ಲಿ ಕೆಮಿಕಲ್ ಆಧಾರಿತ…

Read More

ಜೈಪುರದಲ್ಲಿ ಮೈ ಮೇಲೆ ಟ್ರಕ್ ಹರಿದು 22 ವರ್ಷದ ಮಹಿಳೆ ಸಾವು

ಜೈಪುರ, ಮಾರ್ಚ್ 10: ಜೈಪುರದಲ್ಲಿ ಟ್ರಕ್ (Truck Accident) ಹರಿದು 22 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ನಾಗಾಲ್ಯಾಂಡ್ ಮೂಲದ ಲಿಗಾ ಜಿಮೋ ಎಂದು ಗುರುತಿಸಲಾಗಿದೆ. ಅವರು ಕಳೆದ ಎರಡು ವರ್ಷಗಳಿಂದ ಮಾಲ್ವಿಯಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅಲ್ಲಿನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಅವರು ಬೈಕ್ ಟ್ಯಾಕ್ಸಿಯಲ್ಲಿ ಮಾಲ್ವಿಯಾ ನಗರಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗೋಪಾಲಪುರ ಪುಲಿಯಾ ಬಳಿ ಬೈಕ್​ ನಿಯಂತ್ರಣ ಕಳೆದುಕೊಂಡಿದ್ದರಿಂದ ಮಹಿಳೆ…

Read More

ಗಡಿರಾಷ್ಟ್ರಗಳಿಗೆ ಇದ್ದ ಎಫ್​ಡಿಐ ಬಿಗಿನಿಯಮ ಸಡಿಲಿಸಿದ ಭಾರತ; ಇನ್ಮುಂದೆ ಚೀನೀ ಹೂಡಿಕೆ ಒಳಹರಿವು ಸರಾಗ

ನವದೆಹಲಿ, ಮಾರ್ಚ್ 10: ದೇಶದೊಂದಿಗೆ ಗಡಿ ಹಂಚಿಕೊಂಡಿರುವ ದೇಶಗಳಿಗೆ (border countries) ಇದ್ದ ಎಫ್​ಡಿಐ ನಿರ್ಬಂಧವನ್ನು ಭಾರತ ತೆರವುಗೊಳಿಸುತ್ತಿದೆ. ಎಫ್​ಡಿಐ ನಿಯಮಗಳನ್ನು ಸಡಿಲಗೊಳಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2020ರಲ್ಲಿ ಗಾಲ್ವನ್​ನಲ್ಲಿ ಚೀನಾ ಜೊತೆ ಜಟಾಪಟಿ ನಡೆದ ಬಳಿಕ ಭಾರತವು ಗಡಿ ದೇಶಗಳ ಹೂಡಿಕೆಗಳ ಮೇಲೆ ನಿರ್ಬಂಧ ಹಾಕಿತ್ತು. 2020ರ ಪ್ರೆಸ್ ನೋಟ್-3 ನಿಯಮಗಳ ಪ್ರಕಾರ ಗಡಿ ದೇಶಗಳ ಸಂಸ್ಥೆಗಳಿಂದ ಭಾರತದಲ್ಲಿ ಹೂಡಿಕೆ ಮಾಡಲು…

Read More

ಒಳಮೀಸಲಾತಿ ಬಿಕ್ಕಟ್ಟು ಕ್ಲೈಮ್ಯಾಕ್ಸ್ ಹಂತಕ್ಕೆ: ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು, (ಮಾರ್ಚ್ 10): ದಲಿತ ಒಳಮೀಸಲಾತಿ (Internal reservation )ನೀಡಿಕೆಯು ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಜಟಾಪಟಿಗೆ ಕಾರಣವಾಗಿದೆ. ಸರ್ಕಾರ ಒಳ ಮೀಸಲಾತಿ ನೀಡದೇ ಸರ್ಕಾರಿ ನೌಕರರ ನೇಮಕಾತಿಗೆ ಮುಂದಾಗಿದೆ. ಇದಕ್ಕೆ ದಲಿತ ಎಡಗೈ ನಾಯಕರು ವಿರೋಧಿಸುತ್ತಿದ್ದಾರೆ. ಇದರಿಂದ ಸ್ವಪಕ್ಷದಲ್ಲೇ ಹೊತ್ತಿಕೊಂಡ ಈ ಭಿನ್ನಾಭಿಪ್ರಾಯದ ಕಿಡಿ, ಪರಿಸ್ಥಿತಿ ಕೈಮೀರಿಸುತ್ತಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಚೇರಿಯಲ್ಲಿ ದಲಿತ ಸಚಿವರು ಮಹತ್ವದ ಸಭೆ ನಡೆಸಿದ್ದು, ಗೊಂದಲ ಪರಿಹಾರ ಕುರಿತು ಸಿದ್ದರಾಮಯ್ಯ ಜೊತೆಗೆ ಚರ್ಚಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಮುನಿಯಪ್ಪ,…

Read More

ಒಂದೇ ಒಂದು ಕಿಡಿಗೆ ಸತತ 22 ಗಂಟೆ ಕಾಲ ಹೊತ್ತಿ ಉರಿದ ಕೇಬಲ್​​​ ಫ್ಯಾಕ್ಟರಿ

ದೇವನಹಳ್ಳಿ, ಮಾರ್ಚ್​ 10: ಸಣ್ಣ ಕಿಡಿಯಿಂದ ಹೊತ್ತಿಕೊಂಡ ಬೆಂಕಿ ಕೇಬಲ್​​​ ಫ್ಯಾಕ್ಟರಿಯನ್ನೇ ಸಂಪೂರ್ಣವಾಗಿ ಸುಟ್ಟು (cable factory fire) ಬೂದಿ ಮಾಡಿದ್ದು, ಕೋಟ್ಯಂತರ ರೂ ಮೌಲ್ಯದ ಕೇಬಲ್ ವೈರ್​​ಗಳು ಬೆಂಕಿಗಾಹುತಿಯಾಗಿದೆ. ಸತತ 22 ಗಂಟೆಗಳ‌‌ ನಿರಂತರ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದ್ದು,  ಸ್ಥಳಿಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಬಾಶೆಟ್ಟಹಳ್ಳಿ ಕೈಗಾರಿಕಾ‌ ಪ್ರದೇಶದ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿಸ್ ಫ್ಯಾಕ್ಟರಿಯಲ್ಲಿ ನಿನ್ನೆ ಘಟನೆ ನಡೆದಿದೆ. ನಿನ್ನೆ ಸಂಜೆ…

Read More