2 ದಿನ ವರ್ಕ್ ಫ್ರಂ ಹೋಂ, ಆನ್​ಲೈನ್ ಮೀಟಿಂಗ್, ವಾಹನ ರಹಿತ ದಿನ; ದೆಹಲಿ ಸರ್ಕಾರ ಮಹತ್ವದ ನಿರ್ಧಾರ – Kannada News | 2 day Work From Home Online Meeting no car day Delhi government takes measures after PM Modis appeal

ನವದೆಹಲಿ, ಮೇ 14: ಮೇ 15ರಿಂದ ಪ್ರಾರಂಭವಾಗಲಿರುವ “ನನ್ನ ಭಾರತ, ನನ್ನ ಕೊಡುಗೆ” ಅಭಿಯಾನದಡಿಯಲ್ಲಿ ದೆಹಲಿ ಸರ್ಕಾರ ಇಂದು ಹಲವಾರು ಪ್ರಮುಖ ಘೋಷಣೆಗಳನ್ನು ಮಾಡಿದೆ. ಸರ್ಕಾರಿ ನೌಕರರು ಇನ್ನು ವಾರದಲ್ಲಿ ಎರಡು ದಿನ ಮನೆಯಿಂದಲೇ ಕೆಲಸ (Work from Home) ಮಾಡಬೇಕು. ಖಾಸಗಿ ಸಂಸ್ಥೆಗಳು ಸಹ ಇದೇ ರೀತಿ ಕೆಲಸ ಮಾಡಲು ಸೂಚಿಸಲಾಗಿದೆ. ಹಾಗೇ ಪ್ರತಿ ಸೋಮವಾರ ಖಾಸಗಿ ವಾಹನದ ಬದಲು ಮೆಟ್ರೋ ಬಳಸಲು ಕರೆನೀಡಲಾಗಿದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸಂರಕ್ಷಿಸಲು ರಾಷ್ಟ್ರಕ್ಕೆ ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ, ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ನೇತೃತ್ವದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ದೆಹಲಿ ಸರ್ಕಾರದ ಮೊದಲ ಮತ್ತು ಪ್ರಮುಖ ನಿರ್ಧಾರವೆಂದರೆ ಮನೆಯಿಂದ ಕೆಲಸ ಮಾಡುವ ಬಗ್ಗೆ. ಇನ್ನು ಸರ್ಕಾರಿ ನೌಕರರು ಕೂಡ ವಾರದಲ್ಲಿ ಎರಡು ದಿನ ಮನೆಯಿಂದಲೇ ಕೆಲಸ ಮಾಡುತ್ತಾರೆ. ಅಗತ್ಯ ಸೇವೆಗಳಲ್ಲಿ ತೊಡಗಿರುವ ಇಲಾಖೆಗಳಿಗೆ ಮನೆಯಿಂದಲೇ ಕೆಲಸ ಮಾಡುವುದರಿಂದ ವಿನಾಯಿತಿ ನೀಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಉಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಖಾಸಗಿ ಸಂಸ್ಥೆಗಳಿಗೆ ಕೂಡ 2 ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ಸಲಹೆ ಬೆನ್ನಲ್ಲೇ ಬೆಂಗಳೂರಿನ ಕೆಲ ಕಂಪನಿಗಳಿಂದ ವರ್ಕ್ ಫ್ರಂ ಹೋಂ ನೀಡಲು ಪ್ಲ್ಯಾನ್!

ನಾವು ದೆಹಲಿಗಾಗಿ ಕೆಲವು ಯೋಜನೆಗಳನ್ನು ರೂಪಿಸಿದ್ದೇವೆ. ದೆಹಲಿ ಸರ್ಕಾರ “ಮೇರಾ ಭಾರತ್, ಮೇರಾ ಯುಗತ್” (ನನ್ನ ಭಾರತ, ನನ್ನ ಕೊಡುಗೆ) ಅಭಿಯಾನವನ್ನು ಜಾರಿಗೆ ತರಲಿದೆ ಎಂದು ದೆಹಲಿ ಸಿಎಂ ರೇಖಾ ಗುಪ್ತಾ ತಿಳಿಸಿದ್ದಾರೆ. ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ಈ ನಿಟ್ಟಿನಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಕೂಡ ಮನವಿ ಮಾಡಿದ್ದಾರೆ. ನ್ಯಾಯಾಲಯವು ಆನ್‌ಲೈನ್‌ನಲ್ಲಿ ವಿಚಾರಣೆಗಳನ್ನು ನಡೆಸುವಂತೆಯೂ ಕೋರಲಾಗಿದೆ. ಸಾರ್ವಜನಿಕರು ಒಂದು ವರ್ಷದವರೆಗೆ ವಿದೇಶ ಪ್ರವಾಸದಿಂದ ದೂರವಿರಲು ಮನವಿ ಮಾಡಲಾಗಿದೆ. ದೆಹಲಿ ಸರ್ಕಾರದ ಯಾವುದೇ ಸಚಿವರು ಅಥವಾ ಅಧಿಕಾರಿಗಳು ವಿದೇಶ ಪ್ರವಾಸ ಮಾಡುವಂತಿಲ್ಲ. ಅವರ ವಿದೇಶದ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಪ್ರಧಾನ ಮಂತ್ರಿಯವರ ಪ್ರವಾಸೋದ್ಯಮ ಮನವಿಗೆ ಸ್ಪಂದಿಸಿ, ದೆಹಲಿಯ ಮಾಲ್‌ಗಳಲ್ಲಿ ಈಗ ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಒಂದು ಸ್ಥಳವನ್ನು ಮೀಸಲಿಡಲಾಗುವುದು ಎಂದು ರೇಖಾ ಗುಪ್ತಾ ಹೇಳಿದ್ದಾರೆ. ದೆಹಲಿ ಸರ್ಕಾರವು 100% ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ ಆದ್ಯತೆ ನೀಡುತ್ತದೆ. ದೆಹಲಿ ಸರ್ಕಾರವು ಮುಂದಿನ 90 ದಿನಗಳವರೆಗೆ ಈ ಅಭಿಯಾನವನ್ನು ನಡೆಸಲಿದೆ.

ಇದನ್ನೂ ಓದಿ: ವರ್ಕ್ ಫ್ರಂ ಹೋಂ, ಆನ್​ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನದ ಮಿತ ಬಳಕೆ; ಮತ್ತೊಮ್ಮೆ ಪ್ರಧಾನಿ ಮೋದಿ ಮನವಿ

“ಎಲ್ಲಾ ವ್ಯಾಪಾರಿಗಳು ಸರಕು ಸಾಗಣೆಗೆ ಟ್ರಕ್‌ಗಳ ಬದಲಿಗೆ ರೈಲು ಬಳಸುವಂತೆ ಒತ್ತಾಯಿಸಲಾಗಿದೆ. 29 ವಸಾಹತುಗಳಲ್ಲಿ 58 ಫೀಡರ್ ಬಸ್‌ಗಳನ್ನು ಓಡಿಸಲಾಗುವುದು. ಇದರಿಂದಾಗಿ ಅವರು ಮೆಟ್ರೋ ಮೂಲಕ ಪ್ರಯಾಣಿಸಲು ಸಾಧ್ಯವಾಗುತ್ತದೆ. ದೆಹಲಿ ಸರ್ಕಾರಿ ಸಭೆಗಳಲ್ಲಿ 50% ಆನ್‌ಲೈನ್‌ನಲ್ಲಿ ನಡೆಯಲಿವೆ. ದೆಹಲಿ ಸರ್ಕಾರಿ ಕಚೇರಿಗಳು ಬೆಳಿಗ್ಗೆ 10.30ರಿಂದ ಸಂಜೆ 7ರವರೆಗೆ ಕಾರ್ಯನಿರ್ವಹಿಸುತ್ತವೆ. ದೆಹಲಿ ಮಹಾನಗರ ಪಾಲಿಕೆ ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಕಾರ್ಯನಿರ್ವಹಿಸುತ್ತದೆ” ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಭಿಮಾನಿಯ ಪತ್ರಕ್ಕೆ ಉತ್ತರಿಸಿದ ‘ಪೆದ್ದಿ’: ಯಾತ್ರೆ ಶುರು, ಬೆಂಗಳೂರಿಗೆ ಯಾವಾಗ? – Kannada News | Ram Charan starrer Peddi movie announce its promotional tour schedule

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕಳೆದ ಕೆಲ ತಿಂಗಳುಗಳಿಂದಲೂ ಶೂಟಿಂಗ್, ಬಿಡುಗಡೆ ದಿನಾಂಕ, ಪ್ರಚಾರ ಇನ್ನಿತರೆ ವಿಷಯಗಳ ಬಗ್ಗೆ ಗೊಂದಲದಲ್ಲೇ ಇದೆ. ಬಿಡುಗಡೆ ದಿನಾಂಕ ಪದೇ ಪದೇ ಬದಲಾಗಿದ್ದು, ಚಿತ್ರೀಕರಣ ಸಹ ಪದೇ ಪದೇ ಮಾಡಿದ್ದು ಹೀಗೆ ಹಲವು ಗೊಂದಲಗಳ ಬಳಿಕ ಇದೀಗ ಜೂನ್ 4ರ ಬಿಡುಗಡೆ ದಿನಾಂಕ ಘೋಷಿಸಲಾಗಿದ್ದು, ಸಿನಿಮಾದ ಪ್ರಚಾರವನ್ನು ಇನ್ನೂ ಪ್ರಾರಂಭಿಸಿಲ್ಲ. ಇತ್ತೀಚೆಗೆ ರಾಮ್ ಚರಣ್ ಅಭಿಮಾನಿಯೊಬ್ಬ, ಈ ಕುರಿತಂತೆ ಚಿತ್ರತಂಡಕ್ಕೆ ಪತ್ರವೊಂದನ್ನು ಬರೆದು, ಶೀಘ್ರವೇ ಪ್ರಚಾರ ಪ್ರಾರಂಭಿಸಿ ಎಂದಿದ್ದ. ಇದೀಗ ಅಭಿಮಾನಿ ಬರೆದಿದ್ದ ಪತ್ರಕ್ಕೆ ಅದೇ ರೀತಿಯ ಪತ್ರದ ಮೂಲಕವೇ ಉತ್ತರಿಸಿರುವ ‘ಪೆದ್ದಿ’ ಚಿತ್ರತಂಡ ಪ್ರಚಾರ ಯಾತ್ರೆಯ ಶೆಡ್ಯೂಲ್ ಬಿಡುಗಡೆ ಮಾಡಿದೆ.

‘ಪೆದ್ದಿ’ ಚಿತ್ರತಂಡವು ಸಿನಿಮಾದ ಪ್ರಚಾರದ ಯೋಜನೆಯನ್ನು ದಿನಾಂಕ ಸಹ ಪ್ರಕಟಿಸಿದ್ದು, ಇದೇ ತಿಂಗಳ 18ರಿಂದ ಪ್ರಚಾರ ಆರಂಭವಾಗಲಿದೆ. 18ರಂದು ಮುಂಬೈ, 22ರಂದು ರಾಜೀವ್ ಗಾಂಧಿ ಸ್ಟೇಡಿಯಂ, 23ಕ್ಕೆ ಭೂಪಾಲ್, 24ಕ್ಕೆ ಬೆಂಗಳೂರು, 28ಕ್ಕೆ ದೆಹಲಿ, 30ಕ್ಕೆ ಚೆನ್ನೈ, ಜೂನ್ 1ಕ್ಕೆ ವೈಜಾಗ್ ಮತ್ತು 2ಕ್ಕೆ ಹೈದರಾಬಾದ್​​ನಲ್ಲಿ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಚಿತ್ರತಂಡ ಮಾಡಲಿದೆ. 18ರಂದು ಮುಂಬೈನಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ. ಐಪಿಎಲ್ ಪಂದ್ಯಗಳಿಗೂ ತೆರಳಿ ಚಿತ್ರತಂಡ ಪ್ರಚಾರ ಮಾಡಲಿದೆ. ಈ ಪ್ರಚಾರ ಪ್ರವಾಸವನ್ನು ‘ಪೆದ್ದಿ’ ತಂಡ ‘ಪವರ್​​ಪ್ಲೇ ಟೂರ್’ ಎಂದು ಕರೆದಿದೆ.

‘ಇದು ಕೇವಲ ಆರಂಭ ಮಾತ್ರವೇ ಮುಂದೆ ಇನ್ನೂ ಹತ್ತು ಹಲವು ಸರ್ಪ್ರೈಸ್​​ಗಳು ಅಭಿಮಾನಿಗಳಿಗಾಗಿ ಕಾದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ‘ಪೆದ್ದಿ’ ಸಿನಿಮಾವು ಗ್ರಾಮೀಣ ಭಾಗದ ಕತೆಯನ್ನು ಒಳಗೊಂಡಿದ್ದು, ಕ್ರಿಕೆಟ್ ಆಟಗಾರನೊಬ್ಬನ ಕತೆ ಇದಾಗಿದೆ. ಕ್ರಿಕೆಟ್ ಜೊತೆಗೆ ಸಿನಿಮಾನಲ್ಲಿ ಕುಸ್ತಿ ಪಂದ್ಯಗಳು ಸಹ ಇದ್ದು, ಎರಡರ ಕಾಂಬೊ ಅನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ಶಿವರಾಜ್ ಕುಮಾರ್ ಅವರು ಕುಸ್ತಿ ಗುರುವಿನ ಪಾತ್ರದಲ್ಲಿ ನಟಿಸಿದ್ದಾರೆ ಎನ್ನಲಾಗುತ್ತಿದೆ.

‘ಪೆದ್ದಿ’ ಸಿನಿಮಾವನ್ನು ಸುಕುಮಾರ್ ಶಿಷ್ಯ ಬುಚ್ಚಿಬಾಬು ಸನಾ ನಿರ್ದೇಶನ ಮಾಡಿದ್ದು, ಮೈತ್ರಿ ಮೂವಿ ಮೇಕರ್ಸ್ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಸಿನಿಮಾನಲ್ಲಿ ಜಾನ್ಹವಿ ಕಪೂರ್ ನಾಯಕಿ. ಹಳ್ಳಿಯ ಯುವ ರಾಜಕಾರಣಿಯಾಗಿ ಅವರು ನಟಿಸಿದ್ದಾರೆ. ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದು, ಸಿನಿಮಾದ ‘ಚಿಕಿರಿ-ಚಿಕಿರಿ’ ಹಾಡು ಈಗಾಗಲೇ ಸಾಕಷ್ಟು ಜನಪ್ರಿಯತೆ ಗಳಿಸಿದೆ. ಸಿನಿಮಾನಲ್ಲಿ ಬಾಲಿವುಡ್ ನಟ ದಿವ್ಯೇಂದು, ಬೊಮನ್ ಇರಾನಿ ಜೊತೆಗೆ ಜಗಪತಿ ಬಾಬು, ಹಾಸ್ಯನಟ ಸತ್ಯ, ಪೋಸಾನಿ ಕೃಷ್ಣಮುರಳಿ ನಟಿಸಿದ್ದಾರೆ. ಐಟಂ ಹಾಡಿನಲ್ಲಿ ಶ್ರುತಿ ಹಾಸನ್ ಡ್ಯಾನ್ಸ್ ಮಾಡಿದ್ದಾರೆ. ಸಿನಿಮಾ ಜೂನ್ 4ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮೇ 16ರಂದು ಬೆಂಗಳೂರಿನಲ್ಲಿ ಮುಸ್ಲಿಂ ಸಮಾವೇಶ: ಏನಿದರ ಉದ್ದೇಶ? – Kannada News | Muslim Conference in Bengaluru on May 16: Why Is the Karnataka Muslim Convention Being Held

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada

ಬೆಂಗಳೂರು, ಮೇ 14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ (Congress) ಹಾಗೂ ಮುಸ್ಲಿಂ ಸಮುದಾಯದ (Muslim community) ನಡುವೆ ಶೀತಲ ಸಮರ ಶುರುವಾಗಿದ್ದು, ಟಿಕೆಟ್ ನೀಡದಿದ್ದಕ್ಕೆ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಗಳಲ್ಲಿ ಪಾಠ ಕಲಿಸುವುದಾಗಿಯೂ ಸಹ ಎಚ್ಚರಿಕೆ ನೀಡಿದೆ. ಇದು ಕಾಂಗ್ರೆಸ್​​​ ಪಕ್ಷದಲ್ಲಿ ತಲ್ಲಣಗೊಳಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಮುಸ್ಲಿಂ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಇದೇ ಮೇ 16ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಮುಸ್ಲಿಂ ಸಮಾವೇಶ ಆಯೋಜಿಸಲಾಗಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಮುಖ್ಯಾಂಶಗಳು

  • ಮೇ 16 ರಂದು ಬೆಂಗಳೂರಿನಲ್ಲಿ ಕರ್ನಾಟಕ ಮುಸ್ಲಿಂ ಸಮಾವೇಶ
  • ಕಾಂಗ್ರೆಸ್ ಸರಕಾರ ಹೇಳಿದ್ದೇನು, ಮಾಡಿದ್ದೇನು, ಮುಂದೇನು? ಎಂಬ ವರದಿ ಬಿಡುಗಡೆ ಸಿದ್ಧತೆ
  • ಸಮಾವೇಶಕ್ಕೆ ರಾಜಕಾರಣಿಗಳಿಗೆ ಆಹ್ವಾನವಿಲ್ಲ

ಕಾಂಗ್ರೆಸ್ ಸರ್ಕಾರದ 3 ವರ್ಷಗಳ ಕಾರ್ಯವೈಖರಿ ಮತ್ತು ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಭರವಸೆಗಳ ಅನುಷ್ಠಾನ ಕುರಿತ ಸಮಗ್ರ ವರದಿಯನ್ನು ಬಿಡುಗಡೆ ಮಾಡಲು ಮೇ 16ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ‘ಕರ್ನಾಟಕ ಮುಸ್ಲಿಂ ಸಮಾವೇಶ’ ಆಯೋಜಿಸಲಾಗಿದೆ.

ಇದನ್ನೂ ಓದಿ: TV9 Kannada News Live: ಉಪಚುನಾವಣೆ ಗೆದ್ದರೂ ‘ಕೈ’ಗೆ ಹೊಸ ಚಿಂತೆ, ಟಿವಿಕೆ ಮೈತ್ರಿ ಬಗ್ಗೆ ಅಂತೆಕಂತೆ

ಇದಕ್ಕೂ ಮುನ್ನ, ಶಿವಾಜಿನಗರದ ಎಜೆ ಇಂಟರ್‌ನ್ಯಾಷನಲ್ ಹೋಟೆಲ್‌ನಲ್ಲಿ ರಾಜ್ಯದ ಪ್ರಮುಖ ಮುಸ್ಲಿಂ ಸಂಘಟನೆಗಳು, ಉಲೇಮಾ ಸಂಘಟನೆಗಳು, ಜಮಾತ್‌ಗಳು, ಒಕ್ಕೂಟಗಳ ಪ್ರತಿನಿಧಿಗಳು ಹಾಗೂ ರಾಜ್ಯ ಮುಸ್ಲಿಂ ಒಕ್ಕೂಟದ ಅಡ್‌ಹಾಕ್ ಸಮಿತಿ ಸದಸ್ಯರ ಸಭೆ ನಡೆಯಿತು. ಸಭೆಯಲ್ಲಿ ಹಿರಿಯ ಉಲೇಮಾಗಳು, ವಕೀಲರು, ನಿವೃತ್ತ ಅಧಿಕಾರಿಗಳು, ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು ಸೇರಿ 75ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ ಅಡ್‌ಹಾಕ್ ಸಮಿತಿ ಹಾಗೂ ವಿವಿಧ ಕ್ಷೇತ್ರಗಳ ತಜ್ಞರು ಸಿದ್ಧಪಡಿಸಿರುವ ‘ಕಾಂಗ್ರೆಸ್ ಸರ್ಕಾರ ಹೇಳಿದ್ದೇನು?, ಮಾಡಿದ್ದೇನು? ಮುಂದೇನು?’ ಎಂಬ ವರದಿಯನ್ನು ಸಭೆಯಲ್ಲಿ ಮಂಡಿಸಲಾಯಿತು. ಈ ವರದಿಯಲ್ಲಿ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿದ್ದ 10 ಪ್ರಮುಖ ಭರವಸೆಗಳು, ಈಡೇರಿದ ಮತ್ತು ಈಡೇರದ ಭರವಸೆಗಳು, ರಾಜಕೀಯ ಪ್ರಾತಿನಿಧ್ಯದಲ್ಲಿನ ತಾರತಮ್ಯ ಕುರಿತು ವಿಶ್ಲೇಷಿಸಲಾಗಿದೆ. ಜೊತೆಗೆ ಹಿಜಾಬ್ ನಿರ್ಬಂಧ, ಮೀಸಲಾತಿ ರದ್ದತಿ, ದ್ವೇಷ ಭಾಷಣ, ದ್ವೇಷ ಅಪರಾಧ, ಬಜೆಟ್ ಹಂಚಿಕೆ, ವಕ್ಫ್ ವಿಷಯ, ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿರ್ಬಂಧ ಕಾಯ್ದೆ, ವಿದ್ಯಾರ್ಥಿ ವೇತನ ಮತ್ತು ಶಿಕ್ಷಣ ಕ್ಷೇತ್ರದ ಅನುದಾನ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಲಹೆ-ಬೇಡಿಕೆಗಳನ್ನು ವಿವರವಾಗಿ ಚರ್ಚಿಸಿ, ವರದಿಗೆ ಅಗತ್ಯ ತಿದ್ದುಪಡಿಗಳನ್ನು ಸ್ವೀಕರಿಸಲಾಯಿತು.

ಇದನ್ನೂ ಓದಿ: ನಾಯಕರದ್ದಾಯ್ತು, ಈಗ ಮುಸ್ಲಿಂ ಧಾರ್ಮಿಕ ಮುಖಂಡರ ಸರದಿ: ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

ಕಾಂಗ್ರೆಸ್ ಸರ್ಕಾರ ರಾಜ್ಯದ ಮುಸ್ಲಿಮರನ್ನು ನಡೆಸಿಕೊಂಡಿರುವ ರೀತಿ ಬಗ್ಗೆ ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯವನ್ನು ಹೀಗೆ ನಡೆಸಿಕೊಳ್ಳುವುದನ್ನು ಮುಂದುವರಿಸಿದರೆ, ಸಮುದಾಯವು ತನ್ನ ಆಯ್ಕೆಗಳನ್ನು ಮುಕ್ತವಾಗಿಡಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ.

ಸಮಾವೇಶಕ್ಕೆ ರಾಜಕಾರಣಿಗಳಿಗೆ ಆಹ್ವಾನವಿಲ್ಲ

ಇನ್ನು ಮೇ 16ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆಯಲಿರುವ ಈ ಬೃಹತ್​​ ಮುಸ್ಲಿಂ ಸಮಾವೇಶಕ್ಕೆ ಯಾವುದೇ ರಾಜಕಾರಣಿಗಳಿಗೆ ಆಹ್ವಾನ ನೀಡಿಲ್ಲ. ಬಿಡುಗಡೆಯಾದ ವರದಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​​, ಸಚಿವರು ಹಾಗೂ ಶಾಸಕರಿಗೆ ತಲುಪಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

PBKS vs MI IPL 2026 Live Score: ನಾಯಕನಾಗಿ ಟಾಸ್ ಗೆದ್ದ ಬುಮ್ರಾ ಬೌಲಿಂಗ್ ಆಯ್ಕೆ – Kannada News | Punjab Kings vs Mumbai Indians IPL 2026 Live Cricket Score PBKS vs MI Match on 14th May latest news in Kannada

ಐಪಿಎಲ್ 2026 ರ 58ನೇ ಪಂದ್ಯ ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ.ಇದು ಉಭಯ ತಂಡಗಳ 12 ನೇ ಪಂದ್ಯವಾಗಿದೆ. ಪ್ಲೇಆಫ್‌ನಿಂದ ಮುಂಬೈ ಹೊರಬಿದ್ದಿರುವುದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿದೆ. ಇತ್ತ ಪಂಜಾಬ್‌ ಪ್ಲೇಆಫ್​ ರೇಸ್​ನಲ್ಲಿ ಉಳಿಯಲು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

Source link

‘ಲವ್ ಮಾಕ್ಟೆಲ್ 3’ ಸೆಟ್​ನಲ್ಲಿ ದಿಲೀಪ್ ರಾಜ್: ಸುಂದರ ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ – Kannada News | Darling Krishna shared video of Dileep Raj from Love Mocktail 3 set

ಇತ್ತೀಚೆಗಷ್ಟೆ ನಿಧನರಾದ ನಟ ದಿಲೀಪ್ ರಾಜ್ (Dileep Raj) ಅವರು ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದರು. ಇದೀಗ ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ, ದಿಲೀಪ್ ಅವರು ಸಿನಿಮಾನಲ್ಲಿ ನಟಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ‘ದಿಲೀಪ್ ಒಬ್ಬ ಅದ್ಭುತ ನಟರಾಗಿದ್ದರು, ಅವರಿಗೆ ಹಲವು ಬಾರಿ ಸೆಟ್​ನಲ್ಲಿ ಈ ವಿಷಯ ಹೇಳಿದ್ದೆ, ಅವರು ನಾಚಿ ಸುಮ್ಮನಾಗಿದ್ದರು. ಒಳ್ಳೆಯ ನಟ ಆಗಿರುವ ಜೊತೆಗೆ ಅವರು ಬಹಳ ಒಳ್ಳೆಯ ವ್ಯಕ್ತಿಯೂ ಆಗಿದ್ದರು. ಕೊನೆಯದಾಗಿ ಹೇಳುತ್ತಿದ್ದೇನೆ, ‘ದಿಲೀಪ್ ಸರ್ ನೀವು ಅದ್ಭುತ ನಟ’ ಎಂದು ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕ್ ಸೂಪರ್ ಲೀಗ್ ಆಡಿದ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡ ಸಿಎಸ್​ಕೆ – Kannada News | IPL 2026: CSK Signs Dion Forrester for Injured Jamie Overton

ಐಪಿಎಲ್ 2026 ರಲ್ಲಿ ಲೀಗ್ ಹಂತ ಮುಗಿಯುವ ಹತ್ತಿರದಲ್ಲಿದೆ. ಹೀಗಾಗಿ ಪ್ಲೇಆಫ್ ರೋಚಕತೆ ಹೆಚ್ಚಾಗಿದೆ. ಈವರೆಗೆ 3 ತಂಡಗಳು ಪ್ಲೇಆಫ್​ನಿಂದ ಹೊರಬಿದ್ದಿದ್ದು, ಉಳಿದ 7 ತಂಡಗಳು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆಯಲು ಹೋರಾಡುತ್ತಿವೆ. ಆ 7 ತಂಡಗಳ ಪೈಕಿ ಸಿಎಸ್​ಕೆ ಕೂಡ ಒಂದು. ಲೀಗ್​ನಲ್ಲಿ ಕಳಪೆ ಆರಂಭ ಪಡೆದುಕೊಂಡಿದ್ದ ಸಿಎಸ್​ಕೆ ಇತ್ತೀಚೆಗೆ ಲಯ ಕಂಡುಕೊಂಡಿದೆ. ಆದರೆ ತಂಡದಲ್ಲಿನ ಆಟಗಾರರ ಇಂಜುರಿ ಸಮಸ್ಯೆ ಮಾತ್ರ ಹಾಗೆಯೇ ಮುಂದುವರೆದಿದೆ. ಕೆಲವು ದಿನಗಳ ಹಿಂದೆ ಬಲ ತೊಡೆಯ ಗಾಯದಿಂದಾಗಿ ಇಂಗ್ಲೆಂಡ್ ವೇಗದ ಬೌಲರ್ ಜೇಮೀ ಓವರ್ಟನ್ ಲೀಗ್​ನಿಂದಲೇ ಹೊರಬಿದ್ದಿದ್ದರು. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಅವರ ಬದಲಿ ಆಟಗಾರನನ್ನು ಘೋಷಿಸಿದೆ. ಕೆಲವು ದಿನಗಳ ಹಿಂದೆ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ ದಕ್ಷಿಣ ಆಫ್ರಿಕಾದ ಆಟಗಾರನನ್ನು ಸಿಎಸ್​ಕೆ ತಂಡಕ್ಕೆ ಸೇರಿಸಿಕೊಂಡಿದೆ.

ಬದಲಿಯಾಗಿ ಬಂದಿದ್ಯಾರು?

ಚೆನ್ನೈ ಸೂಪರ್ ಕಿಂಗ್ಸ್, ಜೇಮೀ ಓವರ್ಟನ್ ಬದಲಿಗೆ ದಕ್ಷಿಣ ಆಫ್ರಿಕಾದ ಯುವ ಆಲ್‌ರೌಂಡರ್ ಡಯಾನ್ ಫಾರೆಸ್ಟರ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. 25 ವರ್ಷದ ಡಯಾನ್ ಫಾರೆಸ್ಟರ್ 75 ಲಕ್ಷ ರೂಗಳಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಇದು ಅವರ ಮೊದಲ ಐಪಿಎಲ್ ಸೀಸನ್ ಆಗಿದೆ. ಕೆಲವು ದಿನಗಳ ಹಿಂದೆ, ಪಾಕಿಸ್ತಾನ ಸೂಪರ್ ಲೀಗ್​ನಲ್ಲಿ ರಾವಲ್ಪಿಂಡಿ ಪರ ಆಡಿದ್ದ ಡಯಾನ್ ಫಾರೆಸ್ಟರ್, ಆರು ಪಂದ್ಯಗಳಲ್ಲಿ 44.00 ಸರಾಸರಿಯಲ್ಲಿ 144 ರನ್ ಮತ್ತು ಎರಡು ವಿಕೆಟ್‌ಗಳನ್ನು ಸಹ ಪಡೆದಿದ್ದರು.

2026 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಡಯಾನ್ ಫಾರೆಸ್ಟರ್ ಇಲ್ಲಿಯವರೆಗೆ, ಐದು ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು 83 ರನ್ ಗಳಿಸಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿಯೂ ಸಮರ್ಥರಾಗಿರುವ ಫಾರೆಸ್ಟರ್ ಮಧ್ಯಮ ಕ್ರಮಾಂಕದಲ್ಲಿ ಉಪಯುಕ್ತ ಕೊಡುಗೆ ನೀಡಬಹುದು ಮತ್ತು ವೇಗದ ಬೌಲಿಂಗ್ ಆಯ್ಕೆಯನ್ನು ಒದಗಿಸಬಹುದು.

ಸಿಎಸ್​ಕೆ ನವೀಕರಿಸಿದ ತಂಡ:

ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್‌ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೂವಿಸ್, ಡಿಯೋನ್ ಫಾರೆಸ್ಟರ್, ಅಕೇಲ್ ಹುಸೇನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಮುಖೇಶ್ ಚೌಧರಿ, ಗುರ್ಜಪ್ನೀತ್ ಸಿಂಗ್, ಎಂಎಸ್ ಧೋನಿ, ಮಾತ್ ಹೆನ್ರಿ, ಮಾತ್ ಹೆನ್ರಿ, ಮಾತ್ ಹೆನ್ರಿ, ಮಾತ್ ಹೆನ್ರಿ, ಮಾತ್ ಹೆನ್ರಿ, ಮಾತ್ ಹೆನ್ರಿ, ದುಬೆ, ರಾಹುಲ್ ಚಾಹರ್, ಸ್ಪೆನ್ಸರ್ ಜಾನ್ಸನ್, ಆಕಾಶ್ ಮಾಧ್ವಲ್, ಅಮನ್ ಖಾನ್, ಜಕಾರಿ ಫೌಲ್ಕ್ಸ್, ಪ್ರಶಾಂತ್ ವೀರ್, ಮೆಕ್‌ನೀಲ್ ಹ್ಯಾಡ್ಲಿ ನೊರೊನ್ಹಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹವಾಮಾನ ವರದಿ: ವಾರಾಂತ್ಯಕ್ಕೆ ಬೆಂಗಳೂರಲ್ಲಿ ವರುಣನ ಅಬ್ಬರ, ಮೇ 17ರ ವರೆಗೆ ರಾಜ್ಯದ ವಿವಿಧೆಡೆ ಮಳೆ – Kannada News | Karnataka Weather Update: Heavy Rainfall Likely in Bengaluru May 15–17

ಮಡಿಕೇರಿಯಲ್ಲಿ ಸುರಿದ ಮಳೆImage Credit source: Tv9 Kannada

ಬೆಂಗಳೂರು, ಮೇ 14: ಈ ವಾರಾಂತ್ಯದಲ್ಲಿ ಮುಂಗಾರು ಪೂರ್ವ ಮಳೆಯ ಚಟುವಟಿಕೆ ಬೆಂಗಳೂರಲ್ಲಿ (Bengaluru) ಹೆಚ್ಚುವ ಸಾಧ್ಯತೆ ಇದ್ದು, ಮೇ 15ರಿಂದ 17ರವರೆಗೆ ಮಧ್ಯಮದಿಂದ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಕಳೆದ ಸುಮಾರು ಒಂದು ವಾರದದಿಂದ ಬಿಸಿಲಿನ ಬೇಗೆಗೆ ತತ್ತರಿಸಿರುವ ನಗರದ ಜನತೆಗೆ ವರುಣ ತಂಪೆರೆಯಲಿದ್ದಾನೆ ಎಂದು ಹವಾಮಾನ ವೀಕ್ಷಣಾ ಕೇಂದ್ರಗಳು ಮಾಹಿತಿ ನೀಡಿವೆ.

ಮುಖ್ಯಾಂಶಗಳು

  • ವಾರಾಂತ್ಯದಲ್ಲಿ ಮುಂಗಾರು ಪೂರ್ವ ಮಳೆ ಚಟುವಟಿಕೆ ಹೆಚ್ಚಳ
  • ಮೇ 15ರಿಂದ 17ರವರೆಗೆ ಬೆಂಗಳೂರಿನಲ್ಲಿ ಮಳೆಯ ಸಾಧ್ಯತೆ
  • ರಾಜ್ಯದ ಹಲವೆಡೆ ಮಳೆ ಸಾಧ್ಯತೆ ಎಂದ ಹವಾಮಾನ ಇಲಾಖೆ

ಏಪ್ರಿಲ್ 30ರಂದು ಬೆಂಗಳೂರಿನಲ್ಲಿ ಸುಮಾರು 111 ಮಿ.ಮೀ ಮಳೆಯಾಗಿತ್ತು. ಇದರಿಂದ ನಗರದ ಹಲವೆಡೆ ನೀರು ನಿಂತು ಸಂಚಾರ ದಟ್ಟಣೆ ಉಂಟಾಗಿತ್ತು. ಆದರೆ ಬಳಿಕ ಮಳೆಯ ಚಟುವಟಿಕೆ ಗಣನೀಯವಾಗಿ ಕುಂಠಿತಗೊಂಡಿತ್ತು. ಮಾಹಿತಿ ಪ್ರಕಾರ, ಮೇ ಮೊದಲ 13 ದಿನಗಳಲ್ಲಿ ಬೆಂಗಳೂರು ನಗರ ವೀಕ್ಷಣಾಲಯದಲ್ಲಿ ಕೇವಲ 31 ಮಿ.ಮೀ ಮಳೆಯಾಗಿದ್ದು, HAL ವೀಕ್ಷಣಾಲಯದಲ್ಲಿ ಮಾಸಿಕ ಸರಾಸರಿ ಕೇವಲ 8.2 ಮಿ.ಮೀ ಮಳೆಯಾಗಿದೆ. ಮಳೆಯ ಕೊರತೆಯ ಕಾರಣ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನ ಮತ್ತೆ ಏರಿಕೆಯಾಗಿದೆ. ಈ ನಡುವೆ ಹವಾಮಾನ ಇಲಾಖೆ ಉತ್ತಮ ಮಳೆಯ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಬೆಳಗಾವಿ, ಚಿಕ್ಕಮಗಳೂರು ಸೇರಿ ಕರ್ನಾಟಕದ ಹಲವೆಡೆ ಭಾರಿ ಮಳೆ; ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿ

ರಾಜ್ಯದ ಹಲವೆಡೆಯೂ ಮಳೆಯ ಎಚ್ಚರಿಕೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಕೂಡ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಿದೆ. ಮೇ 16ರವರೆಗೆ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಗಂಟೆಗೆ 40-50 ಕಿಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕರಾವಳಿ ಕರ್ನಾಟಕದಲ್ಲಿಯೂ ಮೇ 17ರವರೆಗೆ ಮಿಂಚು-ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 6:32 pm, Thu, 14 May 26

Source link

ಸ್ಮಾರ್ಟ್ ವಾಚ್ ನಂಬಿ ಎದೆ ನೋವು ನಿರ್ಲಕ್ಷ್ಯ ಮಾಡಿದ್ರಾ ನಟ ದಿಲೀಪ್ ರಾಜ್? – Kannada News | Dileep Raj reportedly ignored Chest Pain after Heart Rate shows normal in Smartwatch

ನಟ ದಿಲೀಪ್ ರಾಜ್ (Dileep Raj) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಅವರಿಗೆ ಯಾವುದೇ ಕೆಟ್ಟ ಅಭ್ಯಾಸಗಳು ಇರಲಿಲ್ಲ. ಹಾಗಿದ್ದರೂ ಕೂಡ ಅವರು ಹೃದಯಾಘಾತದಿಂದ ನಿಧನರಾದರು. ಮೇ 13ರಂದು ದಿಲೀಪ್ ರಾಜ್ ಅವರ ಮರಣದ ಸುದ್ದಿ ಕೇಳಿ ಎಲ್ಲರಿಗೂ ಆಘಾತ ಆಯಿತು. ಫಿಟ್ ಆಗಿದ್ದ ಅವರು 47ನೇ ವಯಸ್ಸಿಗೆ ಕೊನೆಯುಸಿರು ಎಳೆದಿದ್ದು ನೋವಿನ ಸಂಗತಿ. ಮೇ 12ರ ರಾತ್ರಿಯೇ ದಿಲೀಪ್ ರಾಜ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಸ್ಮಾರ್ಟ್ ವಾಚ್ (Smartwatch) ನಂಬಿ ಅವರು ತಪ್ಪು ಮಾಡಿದರು ಎನ್ನಲಾಗಿದೆ.

ಎದೆ ನೋವು ಕಾಣಿಸಿಕೊಂಡಿದ್ದರಿಂದ ತಮ್ಮ ಹೃದಯಬಡಿತ ಹೇಗಿದೆ ಎಂಬುದನ್ನು ಸ್ಮಾರ್ಟ್ ವಾಚ್ ಮೂಲಕ ದಿಲೀಪ್ ರಾಜ್ ಅವರು ನೋಡಿಕೊಂಡಿದ್ದರು. ಅದರಲ್ಲಿ ಎಲ್ಲವೂ ನಾರ್ಮಲ್ ಎಂದು ತೋರಿಸಿದ್ದರಿಂದ ಅವರು ಸುಮ್ಮನಾಗಿದ್ದಾರೆ. ಮೇ 13ರ ಬೆಳಗ್ಗೆ ವೈದ್ಯರ ಅಪಾಯಿಂಟ್​ಮೆಂಟ್ ತೆಗೆದುಕೊಂಡಿದ್ದರು. ಆದರೆ ಚೆಕಪ್ ಮಾಡಿಸುವುದರೊಳಗೆ ಅವರಿಗೆ ತೀವ್ರ ಹೃದಯಾಘಾತ ಆಯಿತು.

ದಿಲೀಪ್ ರಾಜ್ ಅವರು ಹಾರ್ಟ್ ಬೀಟ್ ಸರಿಯಾಗಿದೆ ಎಂದು ಸ್ಮಾರ್ಟ್ ವಾಚ್ ತೋರಿಸಿದ್ದನ್ನು ನಂಬಿಕೊಂಡು ಸುಮ್ಮನಾಗುವ ಬದಲು, ರಾತ್ರಿಯೇ ವೈದ್ಯರ ಬಳಿ ಹೋಗಿದ್ದರೆ ಅವರು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತಿತ್ತು. ಆದರೆ ಅವರು ನಿರ್ಲಕ್ಷ್ಯ ಮಾಡಿದರು. ಅದು ಅವರ ಪ್ರಾಣಕ್ಕೆ ಮುಳುವಾಯಿತು. ದಿಲೀಪ್ ರಾಜ್ ಅಗಲಿಕೆಯಿಂದ ಅವರ ಕುಟುಂಬಕ್ಕೆ ತೀವ್ರ ನೋವಾಗಿದೆ.

ಆರೋಗ್ಯದ ಕಾಳಜಿ ಇರುವ ಅನೇಕರು ಸ್ಮಾರ್ಟ್ ವಾಚ್ ಬಳಸುತ್ತಾರೆ. ಹೃದಯ ಬಡಿತ, ರಕ್ತದಲ್ಲಿನ ಆಮ್ಲಜನಕ ಮಟ್ಟ, ನಿದ್ರೆಯ ಅವಧಿ, ದೈಹಿಕ ಚುಟುವಟಿಕೆಗಳ ಲೆಕ್ಕ, ದೇಹದ ಉಷ್ಣಾಂಶ ಸೇರಿದಂತೆ ಹಲವು ಬಗೆಯ ಮಾಹಿತಿಯನ್ನು ಸ್ಮಾರ್ಟ್ ವಾಚ್​ಗಳು ನೀಡುತ್ತವೆ. ಆದರೆ ಅವುಗಳು ತೋರಿಸುವ ಮಾಹಿತಿಯನ್ನು ಎಷ್ಟರಮಟ್ಟಿಗೆ ನಂಬಬೇಕು ಎಂಬ ಚರ್ಚೆ ಈಗ ಜೋರಾಗಿದೆ.

ಇದನ್ನೂ ಓದಿ: ‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್

ಕಿರುತೆರೆ ಮತ್ತು ಸಿನಿಮಾಗಳಲ್ಲಿ ದಿಲೀಪ್ ರಾಜ್ ಅವರು ಫೇಮಸ್ ಆಗಿದ್ದರು. ನಟನೆ ಮಾತ್ರವಲ್ಲದೇ ಡಬ್ಬಿಂಗ್ ಕಲಾವಿದನಾಗಿ, ಧಾರಾವಾಹಿ ನಿರ್ಮಾಪಕನಾಗಿ ಅವರು ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ಸಾಧನೆ ಮಾಡಬೇಕು ಎಂಬ ಅಪಾರ ಕನಸು ಕಟ್ಟಿಕೊಂಡಿದ್ದ ಅವರು ಈಗ ಬಾರದ ಲೋಕಕ್ಕೆ ತೆರಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮ್ಯೂಚುವಲ್ ಫಂಡ್ ಡಿಸ್ಟ್ರಿಬ್ಯೂಟರ್ಸ್ ಮಾದರಿಯಲ್ಲಿ ಬಾಂಡ್ ವಿತರಕರ ಜಾಲ ಬೆಳೆಸಲು ಸೆಬಿ ಸಜ್ಜು – Kannada News | SEBI Plans Bond Distributor Model to Boost Retail Investment in Debt Market

ಮುಂಬೈ, ಮೇ 14: ಷೇರು ಮಾರುಕಟ್ಟೆಯಂತೆ ಬಾಂಡ್ (ಸಾಲಪತ್ರ) ಮಾರುಕಟ್ಟೆಯಲ್ಲೂ ಸಾಮಾನ್ಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆ ಮಾಡುವಂತೆ ಉತ್ತೇಜಿಸಲು ಸೆಕ್ಯೂರಿಟೀಸ್ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ಮಹತ್ವದ ಕ್ರಮಕ್ಕೆ ಮುಂದಾಗಿದೆ. ಮ್ಯೂಚುವಲ್ ಫಂಡ್ ವಿತರಕರ ಮಾದರಿಯಲ್ಲೇ ‘ಬಾಂಡ್ ವಿತರಕರಿಗಾಗಿ’ (Bond Distributors) ಪ್ರತ್ಯೇಕ ವಿಭಾಗವೊಂದನ್ನು ಸೃಷ್ಟಿಸಲು ಸೆಬಿ ಯೋಜಿಸುತ್ತಿದೆ.

ಮುಂಬೈನಲ್ಲಿ ನಡೆದ ಎಫ್​ಐಸಿಸಿಐ (FICCI) ಹಣಕಾಸು ಉತ್ಪನ್ನಗಳ ವಿತರಣಾ ಶೃಂಗಸಭೆಯಲ್ಲಿ ಮಾತನಾಡಿದ ಸೆಬಿಯ ಪೂರ್ಣಾವಧಿ ಸದಸ್ಯ ಅಮರ್ಜೀತ್ ಸಿಂಗ್, ಈ ಕುರಿತು ಮಾಹಿತಿ ನೀಡಿದರು. ಆ ಪ್ರಕಾರ, ಮ್ಯೂಚುವಲ್ ಫಂಡ್ ವಿತರಕರಂತೆಯೇ, ಈ ಹೊಸ ಬಾಂಡ್ ವಿತರಕರು ಕೂಡ ಸಾಮಾನ್ಯ ಹೂಡಿಕೆದಾರರಿಗೆ ಕೆವೈಸಿ (KYC) ಪ್ರಕ್ರಿಯೆ, ದಾಖಲಾತಿ ಮತ್ತು ವ್ಯವಹಾರಗಳನ್ನು ನಡೆಸಲು ಸಹಾಯ ಮಾಡಲಿದ್ದಾರೆ.

ಪ್ರಸ್ತುತ ಡೆಟ್ ಮಾರ್ಕೆಟ್ ಅಥವಾ ಸಾಲಪತ್ರಗಳ ಮಾರುಕಟ್ಟೆಯಲ್ಲಿ ಸಾಂಸ್ಥಿಕ ಹೂಡಿಕೆದಾರರದ್ದೇ ಮೇಲುಗೈ ಇದೆ. ಸಾಮಾನ್ಯ ಜನರಿಗೆ ಈ ಮಾರುಕಟ್ಟೆಯನ್ನು ತಲುಪುವಂತೆ ಮಾಡುವುದು ಸರ್ಕಾರದ ಗುರಿಯಾಗಿದೆ.

ಇದನ್ನೂ ಓದಿ: ಲಿಥಿಯಂ ಮತ್ತು ವಿರಳ ಭೂಖನಿಜಗಳಿಗೆ ರಷ್ಯಾ ಜೊತೆ ಶೀಘ್ರದಲ್ಲೇ ಭಾರತದ ಮಹತ್ವದ ಒಪ್ಪಂದ

ಇತ್ತೀಚಿನ ವರ್ಷಗಳಲ್ಲಿ ಡೆಟ್ ಆಧಾರಿತ ಮ್ಯೂಚುವಲ್ ಫಂಡ್‌ಗಳ ಮೇಲಿನ ತೆರಿಗೆ ನಿಯಮಗಳು ಬದಲಾಗಿರುವುದರಿಂದ, ಚಿಲ್ಲರೆ ಹೂಡಿಕೆದಾರರು ಈ ಕಡೆಗೆ ಬರಲು ಹಿಂಜರಿಯುತ್ತಿದ್ದಾರೆ. ಇದನ್ನು ಸರಿಪಡಿಸಲು ಸುಲಭ ಹೂಡಿಕೆ ಮಾರ್ಗಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ ಎಂದು ಅಮರ್ಜೀತ್ ಸಿಂಗ್ ವಿವರಿಸಿದರು.

ವಿತರಕರ ಪಾತ್ರದ ಬಗ್ಗೆ ಎಚ್ಚರಿಕೆ

ವಿತರಕರ ಸಂಖ್ಯೆ ಹೆಚ್ಚಾದಂತೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಮೂಲಕ ತಪ್ಪು ಮಾಹಿತಿ ಹರಡುವ ಸಾಧ್ಯತೆಯ ಬಗ್ಗೆಯೂ ಅಮರ್ಜೀತ್ ಸಿಂಗ್ ಎಚ್ಚರಿಸಿದ್ದಾರೆ. “ಮಾರುಕಟ್ಟೆಯಲ್ಲಿನ ಹೂಡಿಕೆಯು ಸಾಮಾಜಿಕ ಮಾಧ್ಯಮಗಳ ಟ್ರೆಂಡ್ ಅಥವಾ ಪ್ರಭಾವದಿಂದ ನಡೆಯಬಾರದು. ಬದಲಿಗೆ ಸರಿಯಾದ ಮಾಹಿತಿ ಮತ್ತು ದೀರ್ಘಕಾಲದ ಯೋಜನೆಯ ಆಧಾರದ ಮೇಲೆ ನಡೆಯಬೇಕು” ಎಂದು ಅವರು ತಿಳಿಸಿದರು.

ಅಲ್ಲದೆ, ಹಣಕಾಸು ಉತ್ಪನ್ನಗಳಲ್ಲಿ ಕೃತಕ ಬುದ್ಧಿಮತ್ತೆ (AI) ಬಳಕೆಯ ಬಗ್ಗೆಯೂ ಅವರು ಮಾತನಾಡಿದ್ದು, ಕಂಪನಿಗಳು ತಮ್ಮ ತಾಂತ್ರಿಕ ಸಾಮರ್ಥ್ಯವನ್ನು ಅತಿಶಯೋಕ್ತಿಯಾಗಿ ಬಿಂಬಿಸಬಾರದು (AI Washing) ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಸಂಪುಟದಿಂದ 37,500 ರೂ ಅನುಮೋದನೆ; ಏನಿದರ ಉಪಯೋಗ?

ಮಾರುಕಟ್ಟೆ ಚಿತ್ರಣ ಹೇಗಿದೆ?

ಮಾರ್ಚ್ 2026ರ ವೇಳೆಗೆ ಭಾರತದ ಮ್ಯೂಚುವಲ್ ಫಂಡ್ ಉದ್ಯಮದ ಒಟ್ಟು ಆಸ್ತಿ ಮೌಲ್ಯ 91 ಟ್ರಿಲಿಯನ್ ರೂಪಾಯಿ ತಲುಪಿದೆ. ಅಂದರೆ ಇದರಲ್ಲಿ ಮಾಡಲಾಗಿರುವ ಹೂಡಿಕೆಯ ಮೊತ್ತ ಇಷ್ಟಿದೆ. ಇದರಲ್ಲಿ ಶೇ. 54ರಷ್ಟು ಹೂಡಿಕೆಗಳು ವಿತರಕರ ಮೂಲಕವೇ ನಡೆಯುತ್ತಿವೆ. ಈಗ ಇದೇ ಯಶಸ್ಸನ್ನು ಬಾಂಡ್ ಮಾರುಕಟ್ಟೆಯಲ್ಲೂ ಮರುಕಳಿಸಲು ಸೆಬಿ ಸನ್ನದ್ಧವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸಮುದ್ರದ ನೀರಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ಪಾಲಿಗೆ ದೇವರಾದ ಕ್ರಿಕೆಟ್​​ ಆಡುತ್ತಿದ್ದ ಯುವಕರು – Kannada News | Karwar Youths Heroically Rescue Two Drowning Tourists at Rabindranath Tagore Beach

ಕಾರವಾರ, ಮೇ 14: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ಈಜಲೆಂದು ಸಮುದ್ರಕ್ಕೆ ಇಳಿದಿದ್ದ ಇಬ್ಬರು ಪ್ರವಾಸಿಗರು, ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಲ್ಲಿ ಮುಳುಗಲು ಪ್ರಾರಂಭಿಸಿದ್ದರು. ಈ ಸಂದರ್ಭದಲ್ಲಿ, ಕಡಲತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಐವರು ಯುವಕರು ಪ್ರವಾಸಿಗರು ಮುಳುಗುತ್ತಿರುವುದನ್ನು ಗಮನಿಸಿ ತಕ್ಷಣ ಅವರ ಸಹಾಯಕ್ಕೆ ಧಾವಿಸಿದ್ದಾರೆ. ಗೌತಮ್ ಬಾನಾವಳಿ, ಸಾಯಿನಾಥ್, ವಿಘ್ನೇಶ್, ಅಮನ್ ಮತ್ತು ಅಜಯ್ ಎಂಬ ಯುವಕರು ಅಪಾಯದಲ್ಲಿದ್ದ ಪ್ರವಾಸಿಗರನ್ನು ಸುರಕ್ಷಿತವಾಗಿ ನೀರಿಂದ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ. ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version