ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಮುಖಕ್ಕೆ ಗಾಯ; ಆಗಿದ್ದು ಹೇಗೆ?

ತೆಲುಗು ಬಿಗ್ ಬಾಸ್ ಖ್ಯಾತಿಯ ಪ್ರಸಿದ್ಧ ನಟಿ ಅಶ್ವಿನಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಹಲವು ಸಿನಿಮಾಗಳನ್ನು ಮಾಡಿದ್ದರು. ಬಿಗ್ ಬಾಸ್‌ನ ಏಳನೇ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ಅಶ್ವಿನಿ ಈಗ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಿರತರಾಗಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿಯೂ ಸಂಪೂರ್ಣವಾಗಿ ಸಕ್ರಿಯರಾಗಿದ್ದಾರೆ. ಈಗ ಅವರಿಗೆ ಗಾಯ ಆಗಿದೆ.

ಅಶ್ವಿನಿ ಅವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ಇತ್ತೀಚೆಗೆ, ಅಶ್ವಿನಿ ಶ್ರೀ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ, ಅವರು ತಮ್ಮ ಮುಖಕ್ಕೆ ಗಾಯವಾಗಿದೆ ಎಂದು ಬಹಿರಂಗಪಡಿಸಿದ್ದಾರೆ. ‘ಬೆಳಿಗ್ಗೆ ನಾಯಿಯನ್ನು ವಾಕಿಂಗ್‌ಗೆ ಕರೆದೊಯ್ಯುವಾಗ ಆಕಸ್ಮಿಕವಾಗಿ ಕೆಳಗೆ ಬಿದ್ದೆ. ನನ್ನ ಮುಖಕ್ಕೆ ಗಾಯಗಳಾಗಿವೆ. ನಾನು ಈ ರೀತಿ ನಿಮ್ಮ ಮುಂದೆ ಬರುತ್ತೇನೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಮುಖಕ್ಕೆ ಪೆಟ್ಟು ಬಿದ್ದ ನಂತರ ನನಗೆ ತುಂಬಾ ನೋವಾಗಿದೆ. ನೀವೆಲ್ಲರೂ ನನಗಾಗಿ ಪ್ರಾರ್ಥಿಸುತ್ತಿದ್ದೀರಿ ಎಂದು ನಾನು ಭಾವಿಸುತ್ತೇನೆ’ ಎಂದು ಅಶ್ವಿನಿ ಶ್ರೀ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ಬಿಗ್ ಬಾಸ್ ಬ್ಯೂಟಿ ಹಂಚಿಕೊಂಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಗ್ ಬಾಸ್ ಸೆಲೆಬ್ರಿಟಿಗಳು, ಆಪ್ತ ಸ್ನೇಹಿತರು ಮತ್ತು ಸ್ನೇಹಿತರು ಇದನ್ನು ನೋಡಿದ ನಂತರ ಪ್ರತಿಕ್ರಿಯಿಸುತ್ತಿದ್ದಾರೆ. ಅವರು ಅಶ್ವಿನಿ ಶ್ರೀ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ.

ಇದನ್ನೂ ಓದಿ: ಅಶ್ವಿನಿ ಗೌಡ ವಿಷಯದಲ್ಲಿ ಗಿಲ್ಲಿ ಹೇಳಿದ್ದ ಆ ಮಾತು ನಿಜವೇ ಆಯ್ತು

ತೆಲಂಗಾಣ ಮೂಲದ ಅಶ್ವಿನಿ ಶ್ರೀ, ತಮ್ಮ ವೃತ್ತಿಜೀವನದ ಆರಂಭದಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಪೋಷಕ ನಟಿಯಾಗಿ ಪ್ರಭಾವಿತರಾದರು. ಆದಾಗ್ಯೂ, ಅವರು ಹೆಚ್ಚಿನ ಮನ್ನಣೆಯನ್ನು ಗಳಿಸಲು ಸಾಧ್ಯವಾಗಲಿಲ್ಲ. ಅವರು ಸರ್ದಾರ್ ಗಬ್ಬರ್ ಸಿಂಗ್, ರಾಜಾ ದಿ ಗ್ರೇಟ್, ಬಿ.ಟೆಕ್ ಬಾಬುಲು, ಆಮಿರ್ ಪೆಟಾಲೊ ಮತ್ತು ಇತರ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಅನೇಕ ಸಂಗೀತ ವೀಡಿಯೊಗಳು ಮತ್ತು ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬುಮ್ರಾಗೆ ಬೌಲಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದೇ ನಾನು: ಪಾಕ್ ಮೂಲದ ವೇಗಿ

ಪಾಕಿಸ್ತಾನ್ ಮೂಲದ ಯುಎಇ ಕ್ರಿಕೆಟಿಗ ಝಹೂರ್ ಖಾನ್ (Zahoor Khan) ಇತ್ತೀಚೆಗೆ ನೀಡಿದ ಹೇಳಿಕೆಯೊಂದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದ ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾ ಅವರ ಪ್ರಸಿದ್ಧ ‘ಸ್ಲೋವರ್ ಬಾಲ್’ (Slower ball) ತಂತ್ರವನ್ನು ತಾನೇ ಕಲಿಸಿಕೊಟ್ಟಿದ್ದು ಎಂದು ಅವರು ಹೇಳಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಝಹೂರ್ ಖಾನ್,  ಜಸ್​ಪ್ರೀತ್ ಬುಮ್ರಾ ಇತ್ತೀಚೆಗೆ ಸ್ಲೋವರ್ ಎಸೆತಗಳನ್ನು ಎಸೆಯುತ್ತಿದ್ದಾರೆ. ಈ ಎಸೆತಗಳನ್ನು ಹೇಳಿಕೆ ಕೊಟ್ಟಿದ್ದು ನಾನು. ಇದಾದ ಬಳಿಕ ಬುಮ್ರಾ ನಿಧಾನಗತಿಯ ಎಸೆತಗಳ ಮೂಲಕ ಯಶಸ್ಸು ಸಾಧಿಸುತ್ತಿದ್ದಾರೆ ಎಂದಿದ್ದಾರೆ.

2019/2020ರಲ್ಲಿ ಯುಎಇ ನಲ್ಲಿ ನಡೆದ ಐಪಿಎಲ್ ಸಮಯದಲ್ಲಿ ನಾನು ಮುಂಬೈ ಇಂಡಿಯನ್ಸ್ ತಂಡ ನೆಟ್ ಬೌಲರ್ ಆಗಿದ್ದೆ.  ಅಭ್ಯಾಸದ ವೇಳೆ ನಾನುರ್ ಎಸೆದ ಸ್ಲೋವರ್ ಬೌನ್ಸರ್  ಬ್ಯಾಟರ್ ಅನ್ನು ಸಂಪೂರ್ಣವಾಗಿ ಕಕ್ಕಾಬಿಕ್ಕಿ ಮಾಡಿತ್ತು. ಇದನ್ನು ಗಮನಿಸಿದ ಅಂದಿನ ಮುಂಬೈ ಕೋಚ್‌ಗಳಾದ ಶೇನ್ ಬಾಂಡ್ ಮತ್ತು ಮಹೇಲಾ ಜಯವರ್ಧನೆ ಆಶ್ಚರ್ಯಚಕಿತರಾಗಿದ್ದರು.

ಇದರಿಂದ ಪ್ರಭಾವಿತರಾದ ಜಸ್​ಪ್ರೀತ್ ಬುಮ್ರಾ, ನನ್ನ ಬಳಿ ಬಂದು “ಪಾಜಿ, ನಿಮ್ಮ ಗ್ರಿಪ್ (ಚೆಂಡನ್ನು ಹಿಡಿಯುವ ರೀತಿ) ಹೇಗಿದೆ? ನನಗೆ ತೋರಿಸಿಕೊಡಿ” ಎಂದು ಕೇಳಿದ್ದರು.  ಇದನ್ನು ನಾನು ವಿವರಿಸಿಕೊಟ್ಟಿದ್ದೆ.

ಇನ್ನು ಕಲಿತ ಬಳಿಕ ಜಸ್​ಪ್ರೀತ್ ಬುಮ್ರಾ “ಇದು ನೆಕ್ಸ್ಟ್ ಲೆವೆಲ್ ತಂತ್ರ” ಎಂದು ಹೊಗಳಿದ್ದರು ಎಂದು ಝಹೂರ್ ಖಾನ್ ಸಂದರ್ಶನದಲ್ಲಿ ಹೇಳಿದ್ದಾರೆ.

ಇತ್ತ ಜಸ್​ಪ್ರೀತ್ ಬುಮ್ರಾ ಇತ್ತೀಚಿನ ದಿನಗಳಲ್ಲಿ ಯಾರ್ಕರ್ ಎಸೆತಗಳೊಂದಿಗೆ ಸ್ಲೋವರ್ ಎಸೆತಗಳನ್ನು ಎಸೆಯುತ್ತಿರುವುದಂತು ನಿಜ. ಈ ರಣತಂತ್ರ ರೂವಾರಿ ನಾನೇ ಎಂದು ಯುಎಇ ವೇಗಿ ಝಹೂರ್ ಖಾನ್ ಹೇಳಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ಎಷ್ಟು ನಿಜ ಎಂಬುದು ಜಸ್​ಪ್ರೀತ್ ಬುಮ್ರಾ ಅವರಿಗೆ ಮಾತ್ರ ಗೊತ್ತಿದೆ.

ಇದನ್ನೂ ಓದಿ: IPL ​ನಲ್ಲಿ ಮಹತ್ವದ ಬದಲಾವಣೆ: ಒಂದು ತಂಡಕ್ಕೆ ಎಷ್ಟು ಪಂದ್ಯಗಳು?

ಇನ್ನು ಝಹೂರ್ ಖಾನ್ ಯುಎಇ ಪರ ಈವರೆಗೆ 62 ಏಕದಿನ ಹಾಗೂ 57 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಏಕದಿನ ಕ್ರಿಕೆಟ್​ನಲ್ಲಿ 93 ಹಾಗೂ ಟಿ20 ಕ್ರಿಕೆಟ್​ನಲ್ಲಿ 72 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದಾಗ್ಯೂ 2024 ರ ಬಳಿಕ ಝಹೂರ್ ಖಾನ್ ಯುಎಇ ಪರ ಒಂದೇ ಒಂದು ಪಂದ್ಯವಾಡಿಲ್ಲ ಎಂಬುದು ಉಲ್ಲೇಖಾರ್ಹ.

 

Source link

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಎಲ್​ಪಿಜಿ ಗ್ಯಾಸ್ ಟ್ಯಾಂಕರ್ ಪಲ್ಟಿ

ಉಡುಪಿ, ಮಾರ್ಚ್ 16: ಉಡುಪಿ ಜಿಲ್ಲೆಯ ಕಟಪಾಡಿ ಎಂಬಲ್ಲಿ ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾಪು ತಾಲೂಕಿನ ಕಟಪಾಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹೆದ್ದಾರಿಯಲ್ಲಿ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ ಆಗಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಹುಲಿ ಹುಲಿ’ ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!

ದೇವನಹಳ್ಳಿ, ಮಾರ್ಚ್​ 16: ದೊಡ್ಡಬಳ್ಳಾಪುರದಲ್ಲಿ ಹೆಲ್ಮೆಟ್ ಹಾಕದೆ ತ್ರಿಬಲ್ ರೈಡ್ ಮಾಡಿಕೊಂಡು ರೀಲ್ಸ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದವರಿಗೆ ಪೊಲೀಸರ ಶಾಕ್ ಎದುರಾಗಿದೆ. ‘ಹುಲಿ ಹುಲಿ’ ಎಂದು ಬೈಕ್ ಮೇಲೆ ಮೂವರು ಸೇರಿ ರೀಲ್ಸ್ ಮಾಡಿದ್ದ ರೀಲ್ಸ್ ಮಂಜು, ಗಂಗಾರಂಗ ಮತ್ತು ಸವಿತಾ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಹೆಲ್ಮೆಟ್ ಧರಿಸದೆ ಹಾಗೂ ತ್ರಿಬಲ್ ರೈಡ್ ಮಾಡಿದ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ರೀಲ್ಸ್ ಮಂಜುವನ್ನು ಠಾಣೆಗೆ ಕರೆಸಿ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪೊಲೀಸರು ಸೂಚಿಸಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

National Vaccination Day 2026: ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸುವು ಹಿಂದಿನ ಉದ್ದೇಶವೇನು ತಿಳಿಯಿರಿ

ಲಸಿಕೆಗಳು (Vaccines) ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮೂಲಕ ಚಿಕನ್ ಪಾಕ್ಸ್, ಟೆಟನಸ್, ರುಬೆಲ್ಲಾ, ಪೋಲಿಯೊ ಮತ್ತು ಇತ್ತೀಚೆಗೆ COVID-19 ನಂತಹ ಗಂಭೀರ ಕಾಯಿಲೆಗಳ ಹರಡುವಿಕೆಯನ್ನು ಕಡಿಮೆ ಮಾಡಲು ಅವು ಸಹಾಯ ಮಾಡುತ್ತವೆ. COVID-19 ಸಾಂಕ್ರಾಮಿಕ ಸಮಯದಲ್ಲಿ ನಾವೆಲ್ಲರೂ ಅದರ ಮಹತ್ವವನ್ನು ನೋಡಿದ್ದೇವೆ. ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿ ಕಾರ್ಯನಿರ್ವಹಿಸಿದೆ. ಲಸಿಕೆಯ ಈ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮಾರ್ಚ್‌ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.

ರಾಷ್ಟ್ರೀಯ ಲಸಿಕೆ ದಿನದ ಇತಿಹಾಸವೇನು?

ಭಾರತದಲ್ಲಿ ಲಸಿಕೆ ಅಭಿಯಾನವು 1955 ರಲ್ಲಿ ಆಚರಿಸಲಾಯಿತು. ಆ ಸಮಯದಲ್ಲಿ ಪೋಲಿಯೊ ಒಂದು ಪ್ರಮುಖ ಸಮಸ್ಯೆಯಾಗಿತ್ತು, ಆದ್ದರಿಂದ ಭಾರತ ಸರ್ಕಾರವು ದೇಶದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಅಧಿಕೃತವಾಗಿ ಪ್ರಾರಂಭಿಸಿತು. ಮಾರ್ಚ್ 16, 1995 ರಂದು, ವಿಶ್ವ ಆರೋಗ್ಯ ಸಂಸ್ಥೆಯ (WHO) ಜಾಗತಿಕ ಪೋಲಿಯೊ ಉಪಕ್ರಮದ ಭಾಗವಾಗಿ ಭಾರತದಲ್ಲಿ ಮೌಖಿಕ ಪೋಲಿಯೊ ಲಸಿಕೆಯ ಮೊದಲ ಡೋಸ್ ಅನ್ನು ನೀಡಲಾಯಿತು. ಈ ಅಭಿಯಾನದಡಿಯಲ್ಲಿ, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ನೀಡಲಾಯಿತು. ಇದರ ನಂತರ, ಪೋಲಿಯೊ ಪ್ರಕರಣಗಳು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸಿದವು ಮತ್ತು ಅಂತಿಮವಾಗಿ ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಯಿತು. 2014 ರಲ್ಲಿ, ಭಾರತವನ್ನು ಪೋಲಿಯೊ ಮುಕ್ತ ಎಂದು ಘೋಷಿಸಲಾಯಿತು. ಲಸಿಕೆಯ ಮಹತ್ವವನ್ನು ಎತ್ತಿ ತೋರಿಸಲು ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಮಾರ್ಚ್ 16 ರಂದು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ವಿಶ್ವ ಗ್ರಾಹಕರ ಹಕ್ಕುಗಳ ದಿನವನ್ನು ಏಕೆ ಆಚರಿಸಲಾಗುತ್ತದೆ? ಅದರ ಉದ್ದೇಶವನ್ನು ತಿಳಿಯಿರಿ

ರಾಷ್ಟ್ರೀಯ ಲಸಿಕೆ ದಿನದ ಮಹತ್ವವೇನು?

  • ವಿಶ್ವಾದ್ಯಂತ ಮಾರಕ ರೋಗಗಳ ವಿರುದ್ಧ ಹೋರಾಡುವಲ್ಲಿ ಲಸಿಕೆಗಳು ಪ್ರಮುಖ ಅಸ್ತ್ರವಾಗಿವೆ. ಲಸಿಕೆಗಳ ಪಾತ್ರ ಮತ್ತು ಪ್ರಾಮುಖ್ಯತೆಯನ್ನು ಎತ್ತಿ ತೋರಿಸಲು ರಾಷ್ಟ್ರೀಯ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.
  • ಲಸಿಕೆಗಳು ಜೀವ ಉಳಿಸುವುದು ಮಾತ್ರವಲ್ಲ, ಆರೋಗ್ಯ ಹಾಗೂ ಜೀವನ ಮಟ್ಟವನ್ನು ಸುಧಾರಿಸುತ್ತವೆ, ಲಸಿಕೆಗಳು ಆರೋಗ್ಯ ಹದಗೆಡದಂತೆ, ವೈರಸ್‌ಗಳು ಮತ್ತು ಬ್ಯಾಕ್ಟೀರಿಯಾಗಳನ್ನು ದೇಹದಿಂದ ಸಂಪೂರ್ಣವಾಗಿ ತೆಗೆದು ಕಾಲು ಸಹಾಯ ಮಾಡುತ್ತದೆ. ಇದರ ಈ ಮಹತ್ವದ ಬಗ್ಗೆಯೂ ಜಾಗೃತಿ ಮೂಡಿಸಲಾಗುತ್ತದೆ.
  • ಅಪಾಯಕಾರಿ ಮತ್ತು ಗಂಭೀರ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಲಸಿಕೆಗಳು ಪರಿಣಾಮಕಾರಿ ಸಾಧನಗಳಾಗಿವೆ. ಜಾಗತಿಕವಾಗಿ, ವ್ಯಾಪಕವಾದ ಲಸಿಕೆ ಅಭಿಯಾನಗಳು ಸಿಡುಬು, ದಡಾರ ಮತ್ತು ಟೆಟನಸ್‌ನಂತಹ ಸಾಂಕ್ರಾಮಿಕ ಮತ್ತು ಅಪಾಯಕಾರಿ ಕಾಯಿಲೆಗಳನ್ನು ನಿರ್ಮೂಲನೆ ಮಾಡಿವೆ. WHO ಪ್ರಕಾರ, ಲಸಿಕೆಯ ಮೂಲಕ ಪ್ರತಿ ವರ್ಷ 2-3 ಮಿಲಿಯನ್ ಜೀವಗಳನ್ನು ಉಳಿಸಲಾಗುತ್ತಿದೆ. ಈ ಪ್ರಸ್ತುತ ಯುಗದಲ್ಲಿ ಲಸಿಕೆಗಳು ವಹಿಸುವ ಪಾತ್ರವನ್ನು ನಿರ್ಲಕ್ಷಿಸಲಾಗುವುದಿಲ್ಲ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೈಸೂರು ದಸರಾ ಶೈಲಿಯಲ್ಲಿ ವಿಜ್ರಂಭಿಸಲಿದೆ ಬೆಂಗಳೂರು; ಕರಗ ಶಕ್ತ್ಯೋತ್ಸವಕ್ಕೆ ಒಂಭತ್ತೇ ದಿನಗಳು ಬಾಕಿ!

ಬೆಂಗಳೂರು, ಮಾರ್ಚ್​ 16: ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಕೇವಲ ಒಂಬತ್ತು ದಿನಗಳು ಮಾತ್ರ ಬಾಕಿಯಿದ್ದು, ಉತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲು ಸಕಲ ಸಿದ್ಧತೆಗಳು ಆರಂಭವಾಗಿವೆ. ಐತಿಹಾಸಿಕ ಧರ್ಮರಾಯಸ್ವಾಮಿ ದೇವಾಲಯದಲ್ಲಿ ನಡೆಯುವ ಕರಗ ಶಕ್ತ್ಯೋತ್ಸವ ಈ ಬಾರಿ ಮೈಸೂರು ದಸರಾ ಶೈಲಿಯಲ್ಲೇ ಅದ್ಧೂರಿಯಾಗಿ ನಡೆಯುವ ಸಾಧ್ಯತೆ ಇದೆ. ವಿಶೇಷವಾಗಿ ನಗರದ ಪ್ರಮುಖ ರಸ್ತೆಗಳನ್ನು ಮೈಸೂರು ದಸರಾ ಮಾದರಿಯಲ್ಲಿ ಲೈಟಿಂಗ್ ಮೂಲಕ ಅಲಂಕರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ.

ಲಕ್ಷಾಂತರ ರೂ. ವೆಚ್ಚದಲ್ಲಿ ಲೈಟಿಂಗ್!

ಕರಗ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಒಟ್ಟು 39 ಲಕ್ಷ ರೂಪಾಯಿ ವೆಚ್ಚದಲ್ಲಿ ಲೈಟಿಂಗ್ ಅಳವಡಿಸಲು ಟೆಂಡರ್ ಆಹ್ವಾನಿಸಲಾಗಿದೆ. ಮೊದಲ ಹಂತದಲ್ಲಿ 10.14 ಲಕ್ಷ ರೂಪಾಯಿ ವೆಚ್ಚದಲ್ಲಿ ಧರ್ಮರಾಯಸ್ವಾಮಿ ದೇವಾಲಯ, ಸಂಪಂಗಿ ಕೆರೆ ಹಾಗೂ ಕರಗ ಸಾಗುವ ಪ್ರಮುಖ ಮಾರ್ಗಗಳಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲಾಗುತ್ತದೆ. ಎರಡನೇ ಹಂತದಲ್ಲಿ 28.92 ಲಕ್ಷ ರೂಪಾಯಿ ವೆಚ್ಚದಲ್ಲಿ ಜಿಬಿಎ ಪ್ರಧಾನ ಕಚೇರಿ, ಪ್ರಮುಖ ವೃತ್ತಗಳು ಹಾಗೂ ಕೆಲವು ಆಯ್ದ ಪ್ರಮುಖ ರಸ್ತೆಗಳನ್ನು ಬೆಳಗಿಸಲು ಯೋಜಿಸಲಾಗಿದೆ.

ಏಪ್ರಿಲ್ 1ಕ್ಕೆ ಕರಗ ಶಕ್ತ್ಯೋತ್ಸವ

ಮಾರ್ಚ್ 24ರಂದು ಧರ್ಮರಾಯಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕರಗ ಉತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಮಾರ್ಚ್ 30ರಂದು ಹಸಿ ಕರಗ ನಡೆಯಲಿದ್ದು, ಏಪ್ರಿಲ್ 1ರಂದು ಮುಖ್ಯ ಕರಗ ಶಕ್ತ್ಯೋತ್ಸವ ನಡೆಯಲಿದೆ. ಇದರ ಜೊತೆಗೆ ಭಕ್ತರಿಗೆ ಮನರಂಜನೆ ಕಾರ್ಯಕ್ರಮಗಳನ್ನೂ ಆಯೋಜಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ ಬನ್ನೇರುಘಟ್ಟ ಝೂಗೆ ಹೊಸ ಅತಿಥಿಗಳ ಆಗಮನ: ಇಲ್ಲಿದೆ ವಿಡಿಯೋ

ಕಳೆದ ವರ್ಷ ಸುಮಾರು 40 ಲಕ್ಷ ರೂಪಾಯಿಯಲ್ಲಿ ಕರಗ ಉತ್ಸವ ನಡೆಸಲಾಗಿತ್ತು. ಆದರೆ ಈ ಬಾರಿ ಕೇವಲ ಲೈಟಿಂಗ್‌ಗಾಗಿಯೇ 39 ಲಕ್ಷ ರೂಪಾಯಿ ವೆಚ್ಚ ಮಾಡಲಾಗುತ್ತಿರುವುದು, ಈ ಬಾರಿ ಕರಗ ಉತ್ಸವ ಮೈಸೂರು ದಸರಾ ಶೈಲಿಯಲ್ಲಿ ಭರ್ಜರಿಯಾಗಿ ನಡೆಯಲಿದೆ ಎಂಬ ನಿರೀಕ್ಷೆಯನ್ನು ಹೆಚ್ಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಟಿಕೆಟ್ ದರ ಹೆಚ್ಚಳ ಶೋಷಣೆ ಅಲ್ಲ, ಚಿತ್ರಮಂದಿರದಲ್ಲೇ ಸಿನಿಮಾ ನೋಡೋದು ಕಡ್ಡಾಯವಲ್ಲ’; ಪವನ್ ಕಲ್ಯಾಣ್

ಸಿನಿಮಾ ಟಿಕೆಟ್ ದರ ಹೆಚ್ಚಳ ಮಾಡೋದಕ್ಕೆ ಪ್ರೇಕ್ಷಕನಿಗೆ ಕೋಪ ಇದೆ. ಅದರಲ್ಲೂ ಕರ್ನಾಟಕದಲ್ಲಿ ದೊಡ್ಡ ಬಜೆಟ್ ಸಿನಿಮಾಗಳು ಬರುತ್ತವೆ ಎಂದಾಗ ಬೇಕಾಬಿಟ್ಟಿ ಟಿಕೆಟ್ ದರ ಏರಿಸಿ, ಪ್ರೇಕ್ಷಕರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ವಿಷಯವಾಗಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಟಿಕೆಟ್ ದರ ಏರಿಕೆ ಪ್ರೇಕ್ಷಕನ ಮೇಲೆ ಮಾಡುವ ಶೋಷಣೆ ಅಲ್ಲ’ ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಪರ ವಿರೋಧ ಚರ್ಚೆಗಳು ನಡೆದಿವೆ.

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರೀ-ರಿಲೀಸ್ ಈವೆಂಟ್ ಅಲ್ಲಿ ಪವನ್ ಕಲ್ಯಾಣ್ ಮಾತನಾಡಿದ್ದಾರೆ. ‘ಎಲ್ಲಾ ಉದ್ಯಮಗಳ ಸಿನಿಮಾಗಳು ಗೆಲ್ಲಲಿ ಎಂದು ನಾನು ಬಯಸುತ್ತೇನೆ. ಯಾರಿಗೂ ತಾರತಮ್ಯ ಮಾಡುವುದಿಲ್ಲ . ಜೂನಿಯರ್ ಎನ್‌ಟಿಆರ್, ಮಹೇಶ್ ಬಾಬು ಅಥವಾ ಪ್ರಭಾಸ್ ಯಾರೇ ನಟಿಸಿದ ಚಿತ್ರವಾದರೂ ಪ್ರತಿ ಸಿನಿಮಾ ದೊಡ್ಡ ಯಶಸ್ಸನ್ನು ಕಾಣಬೇಕೆಂದು ಹಾರೈಸುತ್ತೇನೆ’ ಎಂದು ಅವರು ಹೇಳಿದರು.

ಕನ್ನಡದ ಬ್ಲಾಕ್‌ಬಸ್ಟರ್ ಚಿತ್ರ ‘ಕಾಂತಾರ’ ಸಿನಿಮಾದ ಯಶಸ್ಸನ್ನು ಉದಾಹರಣೆಯಾಗಿ ನೀಡಿದರು. ‘ಭಾಷೆ ಅಥವಾ ಸಿನಿಮಾದಲ್ಲಿ ಯಾರು ನಟಿಸಿದ್ದಾರೆ ಎಂಬುದನ್ನು ಲೆಕ್ಕಿಸಬಾರದು. ತೆಲುಗು ಚಿತ್ರಗಳು ಕರ್ನಾಟಕದಲ್ಲಿ ಹಿನ್ನಡೆಯನ್ನು ಎದುರಿಸುತ್ತಿವೆ. ಆದರೂ ಕಾಂತಾರದಂತಹ ಚಿತ್ರದ ಬಗ್ಗೆ ನಾನು ಎಂದಿಗೂ ಕೆಟ್ಟದಾಗಿ ಭಾವಿಸಿಲ್ಲ. ಏಕೆಂದರೆ ಅದು ಭಾರತೀಯ ಚಿತ್ರವಾಗಿದ್ದು, ಅದನ್ನು ಪ್ರೋತ್ಸಾಹಿಸಬೇಕಾಗಿದೆ’ ಎಂದು ಅವರು ಹೇಳಿದರು.

ಟಿಕೆಟ್ ದರ ಏರಿಕೆಯ ಬಗ್ಗೆ ಮಾತನಾಡಿದ ಪವನ್ ಕಲ್ಯಾಣ್, ‘ಅದನ್ನು ಶೋಷಣೆ ಎಂದು ನೋಡಬಾರದು. ಚಿತ್ರಮಂದಿರಗಳಲ್ಲಿ ಸಿನಿಮಾ ನೋಡುವುದು ಕಡ್ಡಾಯವಲ್ಲ. ಈಗ ಪ್ರೇಕ್ಷಕರು ನೆಟ್‌ಫ್ಲಿಕ್ಸ್, ಅಮೇಜಾನ್ ಸೇರಿದಂತೆ ಅನೇಕ ಪ್ಲಾಟ್‌ಫಾರ್ಮ್’ ಆಯ್ಕೆ ಹೊಂದಿದ್ದಾರೆ ಎಂದು ಅವರು ಹೇಳಿದರು. ನಿರ್ಮಾಪಕರು ದೊಡ್ಡ ಮೊತ್ತವನ್ನು ಹಾಕಿರುತ್ತಾರೆ. ಅದಕ್ಕೆ ಪ್ರತಿಯಾಗಿ ಹಣ ಪಡೆಯಬೇಕು ಎಂಬ ಕಾರಣಕ್ಕೆ ಟಿಕೆಟ್ ದರ ಹೆಚ್ಚಿಸಲಾಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮಹೇಶ್ ಬಾಬು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಪವನ್ ಕಲ್ಯಾಣ್ ಆಪ್ತ ನಿರ್ದೇಶಕ

ಆಂಧ್ರದಲ್ಲಿ ಟಿಕೆಟ್ ದರ ಹೆಚ್ಚಿಸೋದಾದರೆ ಸರ್ಕಾರದ ಒಪ್ಪಿಗೆ ಬೇಕು. ಅದು ಕೂಡ ಕೆಲವೇ ದಿನ ಮಾತ್ರ ಟಿಕೆಟ್ ದರ ಹೆಚ್ಚಿಸಲ ಅವಕಾಶ ಇರುತ್ತದೆ. ಆದರೆ, ಕರ್ನಾಟಕದಲ್ಲಿ ಈ ರೀತಿಯ ಯಾವುದೇ ಕಟ್ಟುಪಾಡು ಇಲ್ಲ. ಹೀಗಾಗಿ, ಇದೊಂದು ದಬ್ಬಾಳಿಕೆ ಎಂದೇ ಪರಿಗಣಿಸಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL ​ನಲ್ಲಿ ಮಹತ್ವದ ಬದಲಾವಣೆ: ಒಂದು ತಂಡಕ್ಕೆ ಎಷ್ಟು ಪಂದ್ಯಗಳು?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಹಂತದ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯಂತೆ ಈ ಬಾರಿಯ ಐಪಿಎಲ್​ ಮಾರ್ಚ್ 28 ರಿಂದ ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ.

ಇತ್ತ 20 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದರೂ ಬಿಸಿಸಿಐ ಇನ್ನೂ ಕೂಡ ಫಾರ್ಮ್ಯಾಟ್​ನ ಸ್ವರೂಪವನ್ನು ಬಹಿರಂಗಪಡಿಸಿಲ್ಲ ಎಂಬುದು ವಿಶೇಷ. ಅಂದರೆ ಈ ಬಾರಿ ಲೀಗ್​ ಹಂತದಲ್ಲಿ ಎಷ್ಟು ಮ್ಯಾಚ್​ಗಳನ್ನು ಆಡಲಾಗುತ್ತದೆ ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಪಂದ್ಯಗಳ ಹೆಚ್ಚಳಕ್ಕೆ ಡಿಮ್ಯಾಂಡ್:

ಐಪಿಎಲ್ ಮಾಧ್ಯಮ ಹಕ್ಕುಗಳ ಒಪ್ಪಂದದ ಪ್ರಕಾರ ಬಿಸಿಸಿಐ ಐಪಿಎಲ್ ಸೀಸನ್-18 ಮತ್ತು 19 ರಲ್ಲಿ 84 ಪಂದ್ಯಗಳನ್ನು ಆಯೋಜಿಸುವುದಾಗಿ ತಿಳಿಸಿತ್ತು. ಆದರೆ ಕಳೆದ ಬಾರಿ ಆಟಗಾರರ ಅಲಭ್ಯತೆಯ ಕಾರಣ 84 ಪಂದ್ಯಗಳನ್ನು ಆಯೋಜಿಸಿರಲಿಲ್ಲ. ಆದರೆ ಈ ಬಾರಿ 84 ಮ್ಯಾಚ್​ಗಳ ಟೂರ್ನಿ ಆಯೋಜಿಸಲು ಪ್ರಸಾರಕ ಕಂಪೆನಿ ಸ್ಟಾರ್ ಸ್ಪೋರ್ಟ್ಸ್ ಪಟ್ಟು ಹಿಡಿದಿದೆ ಎಂದು ವರದಿಯಾಗಿದೆ.

ಇತ್ತ 84 ಮ್ಯಾಚ್​ಗಳನ್ನು ಆಯೋಜಿಸಿದರೆ ಫಾರ್ಮ್ಯಾಟ್ ಬದಲಾಗಲಿದೆ. ಅಂದರೆ ಡಬಲ್ ರೌಂಡ್ ರಾಬಿನ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಬೇಕಾಗುತ್ತದೆ. ಹೀಗಾಗಿಯೇ ಬಿಸಿಸಿಐ ಇನ್ನೂ ಕೂಡ ಟೂರ್ನಿಯ ಸ್ವರೂಪವನ್ನು ಬಹಿರಂಗಪಡಿಸಿಲ್ಲ.

80+4 ಮ್ಯಾಚ್​ಗಳು:

ಐಪಿಎಲ್​ನಲ್ಲಿ ಪಂದ್ಯಗಳ ಹೆಚ್ಚಳವಾದರೆ ಪ್ರತಿಯೊಂದು ತಂಡವು ಒಟ್ಟು 16 ಲೀಗ್ ಪಂದ್ಯಗಳನ್ನು ಆಡಲಿದೆ. ಹಿಂದಿನ ಸೀಸನ್‌ಗಳಿಗೆ ಹೋಲಿಸಿದರೆ 10 ಮ್ಯಾಚ್​ಗಳು ಹೆಚ್ಚಾಗಲಿದೆ. ಅಂದರೆ ಕಳೆದ ಸೀಸನ್​ನಲ್ಲಿ 74 ಮ್ಯಾಚ್​ಗಳನ್ನು ಆಡಲಾಗಿತ್ತು.

ಇದೀಗ ಡಬಲ್ ರೌಂಡ್ ರಾಬಿನ್ ಮಾದರಿಯಲ್ಲಿ ಟೂರ್ನಿ ಆಯೋಜಿಸಿದರೆ 84 ಪಂದ್ಯಗಳ ಟೂರ್ನಿ ನಡೆಯಲಿದೆ. ಇಲ್ಲಿ ಲೀಗ್ ಹಂತದಲ್ಲಿ 80 ಪಂದ್ಯಗಳು ನಡೆದರೆ, ಪ್ಲೇಆಫ್ ಹಂತದಲ್ಲಿ 4 ಮ್ಯಾಚ್​ಗಳನ್ನು ಆಡಲಾಗುತ್ತದೆ.

ಪಂದ್ಯಗಳ ವಿಂಗಡಣೆ ಹೇಗೆ?

  • 84 ಪಂದ್ಯಗಳ ಟೂರ್ನಿ ಆಯೋಜಿಸಬೇಕಿದ್ದರೆ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಬೇಕಾಗುತ್ತದೆ.
  • ಇಲ್ಲಿ ಪ್ರತಿ ತಂಡವು ತನ್ನ ಗುಂಪಿನಲ್ಲಿರುವ ಇತರ ತಂಡಗಳೊಂದಿಗೆ ತಲಾ 2 ಪಂದ್ಯಗಳನ್ನು (ಹೋಮ್ & ಅವೇ) ಆಡಲಿದೆ.
  • ಉಳಿದ ಪಂದ್ಯಗಳನ್ನು ಎರಡನೇ ಗುಂಪಿನ ತಂಡಗಳೊಂದಿಗೆ ಆಡುವ ಮೂಲಕ ಒಟ್ಟು 16 ಪಂದ್ಯಗಳನ್ನು ಆಡಲಿದೆ.

ಅಂದರೆ ಇಲ್ಲಿ ಒಂದು ಗ್ರೂಪ್​ನಲ್ಲಿ 5 ತಂಡಗಳಿರಲಿದೆ. ಈ ಗ್ರೂಪ್​ನಲ್ಲಿರುವ ಉಳಿದ 4 ತಂಡಗಳ ವಿರುದ್ಧ ತಲಾ 2 ಪಂದ್ಯಗಳನ್ನಾಡಲಿದೆ. ಈ ಮೂಲಕ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ.

ಹಾಗೆಯೇ ಮತ್ತೊಂದು ಗ್ರೂಪ್​ನಲ್ಲಿರುವ 5 ತಂಡಗಳ ಪೈಕಿ 3 ತಂಡಗಳ ವಿರುದ್ಧ ತಲಾ 2 ಬಾರಿ (6 ಪಂದ್ಯ) ಮತ್ತು ಉಳಿದ 2 ತಂಡಗಳ ವಿರುದ್ಧ ತಲಾ 1 ಬಾರಿ (2 ಪಂದ್ಯ) ಆಡಲಿದ್ದಾರೆ. ಈ ಮೂಲಕ ಒಟ್ಟು 16 ಪಂದ್ಯಗಳನ್ನಾಡಬಹುದು.

ಇದನ್ನೂ ಓದಿ: IPL 2026: ಈ ಬಾರಿಯ ಐಪಿಎಲ್​ನಲ್ಲಿ RCBಗೆ ‘ಗೋಲ್ಡನ್’ ಗೌರವ!

ಆದರೆ ಇತ್ತ ಮೊದಲ ಹಂತದ ವೇಳಾಪಟ್ಟಿ ಪ್ರಕಟಣೆಯ ವೇಳೆ ಬಿಸಿಸಿಐ ತಂಡಗಳ ಗ್ರೂಪ್​ಗಳನ್ನು ಪ್ರಕಟಿಸಿಲ್ಲ ಎಂಬುದು ವಿಶೇಷ. ಹೀಗಾಗಿಯೇ ಈ ಬಾರಿ ಒಂದು ತಂಡದ ಎಷ್ಟು ಪಂದ್ಯಗಳನ್ನಾಡಲಿದೆ ಎಂಬುದು ಅಧಿಕೃತವಾಗಿ ಖಚಿತವಾಗಲು ದ್ವಿತೀಯ ಹಂತದ ವೇಳಾಪಟ್ಟಿ ಪ್ರಕಟವಾಗುವವರೆಗೆ ಕಾಯಲೇಬೇಕು.

 

Source link

Karnataka LPG Gas Shortage: ಕಾಳಸಂತೆಯಲ್ಲಿ ಸಿಲಿಂಡರ್ ಸೇಲ್ ! ಗ್ಯಾಸ್​ ದಂಧೆಕೋರರ ವಿರುದ್ಧ 3 ಎಫ್​ಐಆರ್

ಬೆಂಗಳೂರು, ಮಾರ್ಚ್​ 16: ಕರ್ನಾಟಕದಲ್ಲಿ ತೀವ್ರ ಎಲ್‌ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ತೈಲ ಪೂರೈಕೆಯಲ್ಲಿನ ಸಮಸ್ಯೆಯು ಬೆಂಗಳೂರಿನ ಹೋಟೆಲ್‌ಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಹಲವು ವರ್ಷಗಳ ಇತಿಹಾಸವಿರುವ ಎಮ್​ಟಿಆರ್​ನಂತಹ ಪ್ರತಿಷ್ಠಿತ ಹೋಟೆಲ್‌ಗಳು ಗ್ಯಾಸ್ ಅಭಾವದಿಂದಾಗಿ ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವ ಅಥವಾ ಮೆನುಗಳನ್ನು ಮೊಟಕುಗೊಳಿಸುವ ಪರಿಸ್ಥಿತಿ ಎದುರಿಸುತ್ತಿವೆ. ಬನಶಂಕರಿಯ ಫುಡ್ ಸ್ಟ್ರೀಟ್‌ಗಳು ಮತ್ತು ಮಲ್ಲೇಶ್ವರಂನ ಹೋಟೆಲ್‌ಗಳಲ್ಲಿ ಜನಸಂದಣಿ ಕಡಿಮೆಯಾಗಿದೆ.

ಈ ಬಿಕ್ಕಟ್ಟಿನ ನಡುವೆ, ವಾಣಿಜ್ಯ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮಾರಾಟವಾಗುತ್ತಿವೆ. 1,800 ರೂಪಾಯಿ ಬೆಲೆಯ ಸಿಲಿಂಡರ್‌ಗಳನ್ನು 4,000-5,000 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಈ ಅಕ್ರಮ ಮಾರಾಟದ ವಿರುದ್ಧ ಪೀಣ್ಯ, ಚಿಕ್ಕಜಾಲ ಮತ್ತು ಕಿಂಗೇರಿ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಅನಿಲ ಕೊರತೆಯನ್ನು ನಿಭಾಯಿಸಲು ಪೆಟ್ರೋಲಿಯಂ ಸಚಿವಾಲಯವು ಪೈಪ್‌ಲೈನ್ ಗ್ಯಾಸ್ (ಪಿಎನ್‌ಜಿ) ಸಂಪರ್ಕ ಹೊಂದಿರುವವರು ಎಲ್‌ಪಿಜಿ ಸಿಲಿಂಡರ್‌ಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಹೊಸ ನಿಯಮ ಜಾರಿಗೆ ತಂದಿದೆ. ಈ ಬಿಕ್ಕಟ್ಟು ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮ ಎಂದು ವಿಶ್ಲೇಷಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

 

 

 

Source link

ಇರಾನ್​-ಇಸ್ರೇಲ್ ಯುದ್ಧ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ! ಯಾವ ತರಕಾರಿಗೆ ಎಷ್ಟಾಗಿದೆ ನೋಡಿ

ಕೋಲಾರ, ಮಾರ್ಚ್ 16: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧವು ಮಧ್ಯಪ್ರಾಚ್ಯಕ್ಕೆ ಸೀಮಿತವಾಗದೆ, ಅದರ ಆರ್ಥಿಕ ಪರಿಣಾಮಗಳು ಕರ್ನಾಟಕಕ್ಕೂ ತಟ್ಟಿದೆ. ಕರ್ನಾಟಕದ ಹೋಟೆಲ್ ಉದ್ಯಮದ ಬೆನ್ನಲ್ಲೇ ಇದೀಗ ಕೃಷಿ ವಲಯಕ್ಕೂ ಯುದ್ಧದ ಬಿಸಿ ತಟ್ಟಲು ಶುರುವಾಗಿದೆ. ಯುದ್ಧದ ಕಾರಣದಿಂದಾಗಿ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಗಳು ಹೋಟೆಲ್ ಉದ್ಯಮಕ್ಕೆ ಭಾರಿ ನಷ್ಟವನ್ನುಂಟು ಮಾಡಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಪ್ರಮುಖ ನಗರಗಳಲ್ಲಿ ಮತ್ತು ಕೋಲಾರದಂತಹ (Kolar) ಜಿಲ್ಲೆಗಳಲ್ಲಿಯೂ ಹೋಟೆಲ್‌ಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ. ಇದು ತರಕಾರಿಗಳ ಬೇಡಿಕೆಯನ್ನು ಗಣನೀಯವಾಗಿ ಕುಸಿಯುವಂತೆ ಮಾಡಿದೆ. ಸಾಮಾನ್ಯವಾಗಿ, ತರಕಾರಿ ಉತ್ಪಾದನೆಯ ಶೇಕಡಾ 60 ರಷ್ಟಕ್ಕೆ ಹೋಟೆಲ್ ಮತ್ತು ಆಹಾರ ಉದ್ಯಮದಿಂದಲೇ ಬೇಡಿಕೆ ಇದೆ. ಆದರೆ, ಹೋಟೆಲ್‌ಗಳು ಮುಚ್ಚಿರುವುದರಿಂದ ಈ ಬೇಡಿಕೆ ಇಲ್ಲವಾಗಿದೆ. ಇದರಿಂದಾಗಿ ತರಕಾರಿ ಬೆಲೆ (Vegetable Prices) ಗಣನೀಯ ಕುಸಿತವಾಗಿದೆ.

ಕೋಲಾರದ ಎಪಿಎಂಸಿ ಮಾರುಕಟ್ಟೆಯಲ್ಲಿ, ಹಿಂದೆ 40-50 ರೂ.ನಂತೆ ಮಾರಾಟವಾಗುತ್ತಿದ್ದ ತರಕಾರಿ ಬೆಲೆಗಳು ಈಗ 10-20 ರೂ.ಗೆ ಕುಸಿದಿವೆ. ಕೆಲವು ತರಕಾರಿಗಳಾದ ಕ್ಯಾಬೇಜ್ 2-3 ರೂ, ಹೂಕೋಸು 5-8 ರೂ.ಗೆ ಮಾರಾಟವಾಗುತ್ತಿವೆ. ಕ್ಯಾಪ್ಸಿಕಂ, ಹೀರೆಕಾಯಿ, ಬಜ್ಜಿ ಮೆಣಸಿನಕಾಯಿ, ಸ್ವೀಟ್ ಕಾರ್ನ್, ಕ್ಯಾರೆಟ್, ಬದನೆಕಾಯಿ ಮುಂತಾದ ಎಲ್ಲ ತರಕಾರಿಗಳ ಬೆಲೆಯೂ ತೀವ್ರ ಕುಸಿತ ಕಂಡಿದೆ. ಬಜ್ಜಿ, ಬೋಂಡಾ, ಗೋಬಿ ಮಂಚೂರಿ, ನೂಡಲ್ಸ್, ಫ್ರೈಡ್ ರೈಸ್ ಮಾಡುವ ಸಣ್ಣಪುಟ್ಟ ಹೋಟೆಲ್‌ಗಳು ಮತ್ತು ತಿಂಡಿ ಅಂಗಡಿಗಳು ಸಹ ಅನಿಲ ಸಿಲಿಂಡರ್‌ಗಳ ಕೊರತೆಯಿಂದಾಗಿ ಮುಚ್ಚಿರುವುದೇ ಬೆಲೆ ಕುಸಿತಕ್ಕೆ ಕಾರಣವಾಗಿದೆ.

ರೈತರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ವಿಶೇಷವಾಗಿ ಬೇಸಿಗೆ ಕಾಲದಲ್ಲಿ ಕಷ್ಟಪಟ್ಟು ತರಕಾರಿ ಬೆಳೆಗಳನ್ನು ಬೆಳೆದಿದ್ದಾರೆ. ಆದರೆ, ಯುದ್ಧದ ಪರಿಣಾಮವಾಗಿ ದಿಢೀರ್ ಬೆಲೆ ಕುಸಿತದಿಂದಾಗಿ ಅವರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಕೇವಲ ಕರ್ನಾಟಕ ಮಾತ್ರವಲ್ಲದೆ, ಹೊರ ರಾಜ್ಯಗಳಲ್ಲೂ ಇದೇ ರೀತಿಯ ಪರಿಸ್ಥಿತಿಯಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ. ಬಿಸಿಲಿನ ತಾಪ ಹೆಚ್ಚಾಗಿರುವಾಗ ತರಕಾರಿ ಬೆಲೆಗಳು ಹೆಚ್ಚಿರಬೇಕಿತ್ತು, ಆದರೆ ಯುದ್ಧದ ಕಾರ್ಮೋಡವು ಇಡೀ ದೇಶದ ಕೃಷಿ ಮಾರುಕಟ್ಟೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: 200ಕ್ಕೂ ಹೆಚ್ಚು ಹೋಟೆಲ್‌ ಸಿಬ್ಬಂದಿಯ ಕೆಲಸಕ್ಕೂ ಕುತ್ತು: ಸಂಬಳ ಕಡಿತ, ಉದ್ಯೋಗ ಕಳೆದುಕೊಳ್ಳುವ ಆತಂಕ

ಹೋಟೆಲ್ ಉದ್ಯಮವು ಮತ್ತೆ ಚೇತರಿಸಿಕೊಂಡರೆ ಮಾತ್ರ ತರಕಾರಿಗಳಿಗೆ ಸರಿಯಾದ ಬೆಲೆ ಸಿಗುತ್ತದೆ ಎಂಬುದು ತರಕಾರಿ ವ್ಯಾಪಾರಸ್ಥರ ಅಭಿಪ್ರಾಯ. ಪ್ರಸ್ತುತ ಪರಿಸ್ಥಿತಿಯನ್ನು ಸರ್ಕಾರ ಆದಷ್ಟು ಬೇಗ ನಿಭಾಯಿಸಿ, ರೈತರ ನೆರವಿಗೆ ಧಾವಿಸಬೇಕು ಎಂದು ರೈತರು ಮತ್ತು ವ್ಯಾಪಾರಸ್ಥರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version