Headlines

IND-W vs SL-W: ಭಾರತ- ಲಂಕಾ ನಡುವೆ 2ನೇ ಟಿ20 ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India Women vs Sri Lanka Women 2nd T20: Squads, Live Stream & Match Details

ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ್ದ ಭಾರತ ವನಿತಾ ಪಡೆ (India Women vs Sri Lanka Women), ಇದೀಗ ಎರಡನೇ ಟಿ20 ಪಂದ್ಯವನ್ನಾಡಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಡಿಸೆಂಬರ್ 23 ರಂದು ನಡೆಯಲಿದೆ. ಮೊದಲ ಪಂದ್ಯದಲ್ಲಿ ಭಾರತದ ದಾಳಿಗೆ ತತ್ತರಿಸಿದ್ದ ಶ್ರೀಲಂಕಾ ಕೇವಲ 126 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತದ ಪರ ಜೆಮಿಮಾ 44 ಎಸೆತಗಳಲ್ಲಿ 69…

Read More

ಕಾವ್ಯಾ ವಿಚಾರದಲ್ಲಿ ಅತಿ ಆಯ್ತು ಗಿಲ್ಲಿ ವರ್ತನೆ: ಸುದೀಪ್ ಹೇಳಿದರೂ ಬುದ್ಧಿ ಕಲಿತಿಲ್ಲ – Kannada News | Gilli Nata again irritates Kavya Shaiva in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಗಿಲ್ಲಿ ನಟ ಮತ್ತು ಕಾವ್ಯಾ ಶೈವ ಅವರು ಆತ್ಮೀಯರಾಗಿದ್ದಾರೆ. ಶೋ ಆರಂಭದಿಂದಲೂ ಕೂಡ ಅವರು ಒಟ್ಟಿಗೆ ಇದ್ದಾರೆ. ಇದರಿಂದಾಗಿ ಕಾವ್ಯ ಅವರ ಆಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನು ಕಿಚ್ಚ ಸುದೀಪ್ ಅವರು ಈಗಾಗಲೇ ಹೇಳಿದ್ದಾರೆ. ಆದರೂ ಕೂಡ ಗಿಲ್ಲಿ ನಟ ಅವರು ಬುದ್ಧಿ ಕಲಿತಂತೆ ಕಾಣುತ್ತಿಲ್ಲ. ಡಿಸೆಂಬರ್ 22ರ ಸಂಚಿಕೆಯಲ್ಲಿ ಗಿಲ್ಲಿ ನಟ (Gilli Nata) ಅವರು…

Read More

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ

ರಾಯಚೂರು, ಡಿಸೆಂಬರ್​ 22: ಸ್ಮಾರ್ಟ್ ಫೋನ್, ಅದರಲ್ಲೂ ಇನ್ಸ್ಟಾಗ್ರಾಮ್​ ಬಳಸುವ ಪ್ರತಿಯೊಬ್ಬರು ಈ ವಿಡಿಯೋವನ್ನು ನೋಡಲೇಬೇಕು. ಜಿಲ್ಲೆಯಲ್ಲಿ ಆನ್‌ಲೈನ್ ಗೇಮಿಂಗ್ ವಂಚನೆಯೊಂದು ಬೆಳಕಿಗೆ ಬಂದಿದ್ದು, ಖಾಸಗಿ ಕಂಪನಿಯ ಉದ್ಯೋಗಿ ಬರೋಬ್ಬರಿ 30 ಲಕ್ಷ ರೂ ಕಳೆದುಕೊಂಡಿದ್ದಾರೆ. ಇನ್ಸ್ಟಾಗ್ರಾಮ್​​​ ​ರೀಲ್ಸ್‌ ವೀಕ್ಷಿಸುತ್ತಿರುವಾಗ ಬಂದ ಯಾವುದೋ ಲಿಂಕ್ ಅನ್ನು ಕ್ಲಿಕ್ ಮಾಡಿದ್ದಾರೆ. ಆ ಲಿಂಕ್ ಅವರನ್ನು ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್‌ಗೆ ಕರೆದೊಯ್ದಿದ್ದು, ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದೆ. ಪ್ರಾರಂಭದಲ್ಲಿ ಕಡಿಮೆ ಮೊತ್ತ ಹೂಡಿಕೆ ಮಾಡಿದವರು, ಕ್ರಮೇಣ 30 ಲಕ್ಷ ರೂ…

Read More

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಭಾರೀ ಆಕ್ರೋಶ

ಮುಂಬೈ, ಡಿಸೆಂಬರ್ 22: ಮಹಾರಾಷ್ಟ್ರದ ಬಿಜೆಪಿ (BJP) ಶಾಸಕರೊಬ್ಬರು ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘಿಸಿ, ಒನ್​​ವೇಯಲ್ಲಿ ಬರುತ್ತಿದ್ದ ಆಟೋ ಚಾಲಕನನ್ನು ಹಿಡಿದು ನಿಲ್ಲಿಸಿದ ಶಾಸಕ ಆತನ ಕೆನ್ನೆಗೆ ಹೊಡೆದಿದ್ದಾರೆ. ಈ ವಿಡಿಯೋ ತುಣುಕು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರೊಂದಿಗೆ, ಶಾಸಕರ ವರ್ತನೆಯ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ. ಮಹಾರಾಷ್ಟ್ರದ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಉಂಟಾಗಿರುವ ಟ್ರಾಫಿಕ್ ಸಮಸ್ಯೆ ವಿರೋಧಿಸಿ ಬಿಜೆಪಿ ಶಾಸಕ ಪರಾಗ್ ಶಾ ಭಾನುವಾರ ಸ್ಥಳೀಯರೊಂದಿಗೆ ಪ್ರತಿಭಟನೆ ನಡೆಸಿದರು. ಈ…

Read More

ಅಯೋಧ್ಯೆಗೆ ಹೊರಟ ಮೈಸೂರಿನ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ, ಕೋಚ್ ಹೇಗಿದೆ ನೋಡಿ – Kannada News | Railway Department arrangements Special compartment to Mysuru Ganapathi Sachidananda swamiji for Traveling To ayodhya

ಮೈಸೂರು, (ಡಿಸೆಂಬರ್ 22): ಇದೇ ಡಿಸೆಂಬರ್ 24 ರಿಂದ 28ರವರೆಗೆ ಅಯೋಧ್ಯೆಯಲ್ಲಿ ನೂತನ ಗಣಪತಿ ಸಚ್ಚಿದಾನಂದ ಆಶ್ರಮ ಲೋಕಾರ್ಪಣೆಯಾಗಲಿದೆ. ಹೀಗಾಗಿ ಗಣಪತಿ ಸಚ್ಚಿದಾನಂದ ಶ್ರೀ‌ಗಳು, ಮೈಸೂರಿನಿಂದ 1 ಸಾವಿರ ಜನರನ್ನು ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಒಂದು ಸಾವಿರ ಜನರ ಜತೆಗೆ ಶ್ರೀಗಳು ಸಹ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಶ್ರೀಗಳು ಮೂರು ದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ರೈಲ್ವೆ ಇಲಾಖೆಯು ಶ್ರೀಗಳ ಬೋಗಿಯನ್ನು ವಿಶೇಷವಾಗಿ ಸಿದ್ದಗೊಳಸಿದೆ. ಕೂರಲು ಸೋಫಾ, ಮಲಗಲು ಬೆಡ್,…

Read More

ಅಜ್ಜಿಯ ಕೊಲೆ ರಹಸ್ಯ; ನಾಯಿಗಳಿಂದ ಪತ್ತೆಯಾಯ್ತು ಮೊಮ್ಮಗನ ಕ್ರೌರ್ಯ – Kannada News | Andhra Pradesh Man Kills his Grandmother for Gold Dog Squad solved the Murder Case

ವಿಜಯನಗರ, ಡಿಸೆಂಬರ್ 22: ಆಂಧ್ರದ ವಿಜಯನಗರ ಜಿಲ್ಲೆಯಲ್ಲಿ ಚಿನ್ನಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗನ ಕ್ರೌರ್ಯ ಬೆಳಕಿಗೆ ಬಂದಿದೆ. ಭೋಗಾಪುರಂ ಮಂಡಲದ ಮುಡಸಲಪೇಟೆಯಲ್ಲಿ ವೃದ್ಧ ಮಹಿಳೆಯ ಕೊಲೆ (Murder) ಪ್ರಕರಣವನ್ನು ಭೇದಿಸಿರುವ ಪೊಲೀಸರು, ಆರೋಪಿಯಾದ ಆಕೆಯ ಮೊಮ್ಮಗನನ್ನು ಬಂಧಿಸಿದ್ದಾರೆ. ಶ್ವಾನ ದಳದ ಸಾಕ್ಷ್ಯಾಧಾರಗಳಿಂದ ಅನುಮಾನ ಬಲಗೊಂಡಿದ್ದು, ತನಿಖೆಯ ಸಮಯದಲ್ಲಿ ಕೊಲೆಯ ಬಗ್ಗೆ ಸತ್ಯ ಬಯಲಾಗಿದೆ. ಅಜ್ಜಿಯಿಂದ ಕದ್ದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಆ ಯುವಕನಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ 12ರಂದು ವಿಜಯನಗರ ಜಿಲ್ಲೆಯ ಭೋಗಪುರಂ ಮಂಡಲದ ಮುಡಸಲಪೇಟೆ…

Read More

ಅದೇನ್ ಧೈರ್ಯ ಗುರು! ಜಡ್ಜ್​​​ ಸಹಿ ನಕಲು ಮಾಡಿ ಕೋಟ್ಯಂತರ ರೂ ಜಮೀನು ಗುಳುಂ – Kannada News | Anekal Land Fraud: Judge Signature Forged to Grab Property

ಆನೇಕಲ್​, ಡಿಸೆಂಬರ್​ 22: ನಕಲಿ ದಾಖಲೆ ಸೃಷ್ಟಿಸಿ ಜಮೀನು (land) ಕಬಳಿಕೆ ಮಾಡುವವರನ್ನು ನೋಡಿದ್ದೇವೆ. ಆದರೆ ಇಲ್ಲಿ ಒಂದು ಹೆಜ್ಜೆ ಮುಂದೆ ಹೋದ ಆಸಾಮಿಗಳು ನ್ಯಾಯಾಧೀಶರ ಸಹಿಯನ್ನೇ ನಕಲು (Forged) ಮಾಡಿ ವಂಚನೆ ಮಾಡಿದ್ದಾರೆ. ಪತಿಯನ್ನ ಕಳೆದುಕೊಂಡಿದ್ದ ಮಹಿಳೆಯ ಅಮಾಯಕತನವನ್ನೇ ದುರಪಯೋಗ ಪಡಿಸಿಕೊಂಡ ಭೂಗಳ್ಳರು ಕೋಟ್ಯಂತರ ರೂ ಬೆಲೆಬಾಳುವ ಜಾಗವನ್ನ ಗುಳುಂ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ನಕಲಿ ಸಹಿ ಸೃಷ್ಟಿಸಿ ಜಾಗ ಕಬಳಿಕೆ  ಸಿಲಿಕಾನ್ ಸಿಟಿ ಬೆಂಗಳೂರು ನಗರ ಬೆಳೆಯುತ್ತ ಹೋದಂತೆ ಒಂದೊಂದು ಅಡಿಗೂ…

Read More

ಬೆಂಗಳೂರು ಟನಲ್ ರಸ್ತೆ ಟೆಂಡರ್ ಅದಾನಿ ಗ್ರೂಪ್ ಪಾಲು, ಧರ್ಮ ಸಂಕಟಕ್ಕೆ ಸಿಲುಕಿದ ಸಿದ್ದರಾಮಯ್ಯ ಸರ್ಕಾರ – Kannada News | Adani Group Emerges Lowest Bidder For Bengaluru Tunnel Road As Cost Gap And Policy Debate Intensify

ಬೆಂಗಳೂರು, (ಡಿಸೆಂಬರ್ 22): ಬೆಂಗಳೂರು ಟನಲ್ ಮಾರ್ಗದ (bengaluru tunnel road) ಟೆಂಡರ್ ಅದಾನಿ ಗ್ರೂಪ್​​ (Adani Group) ಪಾಲಾಗುವ ಸಾಧ್ಯತೆಗಳಿವೆ. ಕಾರಣ ಟೆಂಡರ್ ಸಲ್ಲಿಸಿರುವ ಕಂಪನಿಗಳ ಪೈಕಿ ಅದಾನಿ ಗ್ರೂಪ್ ಅತೀ ಕಡಿಮೆ ಬಿಡ್ ಮಾಡಿದೆ. ಬೆಂಗಳೂರು ಟನಲ್ ರಸ್ತೆ ಟೆಂಡರ್ ನಲ್ಲಿ ಅತೀ ಕಡಿಮೆ ಅಂದರೆ 22,267 ಕೋಟಿ ರೂಪಾಯಿಗೆ ಬಿಡ್ ಮಾಡಿದೆ. (ಗ್ರೇಟರ್ ಬೆಂಗಳೂರು ಅಥಾರಿಟಿ(GBA) 17,698 ಕೋಟಿಗೆ ಬಿಡ್ ಸೀಮಿತ ಮಾಡಿತ್ತು. ಆದ್ರೆ, ಜಿಬಿಎ ಕೋಟ್ ಮಾಡಿದ್ದಕ್ಕಿಂತ ಶೇ. 24ರಷ್ಟು ಹೆಚ್ಚಿನ…

Read More

ಏಷ್ಯಾಕಪ್ ಫೈನಲ್​ನಲ್ಲಿ ಭಾರತವನ್ನು ಸೋಲಿಸಿದ ಪಾಕ್ ತಂಡಕ್ಕೆ ಕೋಟಿ ಕೋಟಿ ಬಹುಮಾನ

ದುಬೈನಲ್ಲಿ ನಡೆದ ಅಂಡರ್ 19 ಏಷ್ಯಾಕಪ್ ಫೈನಲ್​ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ತಂಡವನ್ನು ಮಣಿಸಿದ್ದ ಪಾಕಿಸ್ತಾನ ತಂಡ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇದೀಗ ಪಾಕಿಸ್ತಾನ ತಂಡಕ್ಕೆ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ವಿಜೇತ ತಂಡದ ಪ್ರತಿಯೊಬ್ಬ ಆಟಗಾರನಿಗೆ ತಲಾ 1 ಕೋಟಿ ರೂಪಾಯಿಗಳ ವಿಶೇಷ ನಗದು ಬಹುಮಾನವನ್ನು ಘೋಷಿಸಿದ್ದಾರೆ. ಅಂಡರ್​ ಏಷ್ಯಾಕಪ್ ಫೈನಲ್‌ನಲ್ಲಿ ಭಾರತವನ್ನು 191 ರನ್‌ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದ ಯುವ ಪಾಕಿಸ್ತಾನ ತಂಡ, ಸಹಾಯಕ ಸಿಬ್ಬಂದಿಗಳೊಂದಿಗೆ…

Read More

ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು? – Kannada News | We felt it; Asim Munir says divine help saved Pakistan from India during Operation Sindoor

ನವದೆಹಲಿ, ಡಿಸೆಂಬರ್ 22: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಅದಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ಆರಂಭಿಸಿತ್ತು. ಆ ದಾಳಿಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದನಂತೆ. ಈ ರೀತಿಯ ಹೇಳಿಕೆಯನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನೀಡಿದ್ದಾರೆ. ಉರ್ದು ಭಾಷೆಯಲ್ಲಿ ಮಾತನಾಡಿರುವ ಅಸಿಮ್ ಮುನೀರ್ ಅವರ ಭಾಷಣದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ, ಯಾವಾಗ ಅವರು ಈ ಹೇಳಿಕೆ ನೀಡಿದ್ದು ಎಂಬ ದಿನಾಂಕ ಗೊತ್ತಾಗಿಲ್ಲ. ಈ…

Read More