Headlines

ಕರ್ನಾಟಕದಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಎಂದಿನಿಂದ? ಹೇಗೆಲ್ಲಾ ನಡೆಯುತ್ತೆ? ಇಲ್ಲಿದೆ ವಿವರ – Kannada News | Karnataka Voter List Revision: Key Dates for Enrollment and Corrections

ಬೆಂಗಳೂರು, ಮೇ 14: ಚುನಾವಣಾ ಆಯೋಗವು ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ (SIR) ಘೋಷಿಸಿದ್ದು, ಕರ್ನಾಟಕಕ್ಕೂ ಇದು ಅನ್ವಯವಾಗಲಿದೆ. ಈ ಸಂಬಂಧ ಜೂ.20ರಿಂದ 29ರವರೆಗೆ ಅಧಿಕಾರಿಗಳಿಗೆ ತರಬೇತಿ ಮತ್ತು ಪೂರ್ವ ಸಿದ್ಧತೆ ನಡೆಯಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮನೆ ಮನೆ ಭೇಟಿ ಮತ್ತು ಸಮೀಕ್ಷೆ ನಡೆಯಲಿದೆ. ಆ ಬಳಿಕ ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಆಗಲಿದ್ದು, ಆ.5ರಿಂದ ಸೆ.4ರವರೆಗೆ ಆಕ್ಷೇಪಣೆ, ಹೊಸ ಸೇರ್ಪಡೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಂತಿಮ ಮತದಾರರ…

Read More

ದರ್ಶನ್​​ಗೆ ಶುಭವಾಗುತ್ತಾ ಶುಕ್ರವಾರ? ಸುಪ್ರೀಂ ಕೈಯಲ್ಲಿದೆ ಭವಿಷ್ಯ – Kannada News | Darshan bail application, Supreme court may pass order on May 15

ನಟ ದರ್ಶನ್ (Darshan), ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಬಾರಿ ಜೈಲು ಸೇರಿ ವರ್ಷವಾಗುತ್ತಾ ಬಂದಿದೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ದರ್ಶನ್, ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ನಟ ದರ್ಶನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸಾಕ್ಷ್ಯಗಳ ವಿಚಾರಣೆ ತಡವಾಗುತ್ತಿದ್ದು, ತಮಗೆ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಹ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಕಳೆದ ಕೆಲ ದಿನಗಳಲ್ಲಿ ಈ ಸಂಬಂಧ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿ ಕುರಿತಂತೆ…

Read More

ತ್ರಿಕೋನ ಸರಣಿಗೆ ಭಾರತ ಎ ತಂಡ ಪ್ರಕಟ; ವೈಭವ್ ಸೂರ್ಯವಂಶಿಗೆ ತಂಡದಲ್ಲಿ ಸ್ಥಾನ – Kannada News | IPL Stars Join India A Squad for Sri Lanka Tri Series: Parag and Suryavanshi Included

2026 ರ ಐಪಿಎಲ್ (IPL 2026) ಮುಗಿಯುವ ಹಂತಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಪ್ಲೇಆಫ್ ಸುತ್ತು ಆರಂಭವಾಗಲಿದೆ. ಐಪಿಎಲ್ ಅಂತ್ಯದೊಂದಿಗೆ ಟೀಂ ಇಂಡಿಯಾದ (Team India) ಅಂತರರಾಷ್ಟ್ರೀಯ ಕ್ಯಾಲೆಂಡರ್ ಕೂಡ ಶುರುವಾಗಲಿದೆ. ಅದರಂತೆ, ಭಾರತ ಎ ತಂಡವು ಶ್ರೀಲಂಕಾ ಪ್ರವಾಸ ಮಾಡಲಿದ್ದು, ಈ ಪ್ರವಾಸದಲ್ಲಿ ಶ್ರೀಲಂಕಾ ಎ, ಭಾರತ ಎ ಮತ್ತು ಅಫ್ಘಾನಿಸ್ತಾನ ಎ ತಂಡಗಳನ್ನು ಒಳಗೊಂಡ ಏಕದಿನ ತ್ರಿಕೋನ ಸರಣಿ (Tri-Series) ನಡೆಯಲಿದೆ. ಇದೀಗ ಬಿಸಿಸಿಐ ಈ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ…

Read More

ಪೋಕ್ಸೋ ಕೇಸ್: ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ – Kannada News | Pocso case: Doctor Talks about Vachananda Swamiji medical check up

ದಾವಣಗೆರೆ, (ಮೇ 14): ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ (Vachananda Swamiji) ವಿರುದ್ಧ ಮಠದಲ್ಲಿ ಕಲಿಯುತ್ತಿದ್ದ ಬಾಲಕನಿಗೆ ಬೆದರಿಕೆ ಹಾಕಿ, ದೌರ್ಜನ್ಯ ಎಸಗಿದ ಆರೋಪದಡಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಾಲಕನ ತಾಯಿಯ ದೂರಿನ ಮೇರೆಗೆ ಹರಿಹರ ಗ್ರಾಮಾಂತರ ಪೊಲೀಸರು ಇಂದು (ಮೇ 14) ಸತತ 3 ಗಂಟೆಗಳ ಕಾಲ ಸ್ವಾಮೀಜಿಯನ್ನು ವಿಚಾರಣೆ ನಡೆಸಿ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯ್ತು. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ದುರ್ಗೋಜಿ ಅವರು…

Read More

ಬೆಂಗಳೂರಿನಿಂದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಟ್ರಾಫಿಕ್: ಅಧಿಕಾರಿಗಳ ಸಬೂಬಿಗೆ ಜನ ಹೈರಾಣ – Kannada News | Nelamangala Traffic Chaos: Illegal Parking and Street Vendors Cause Trouble for Pedestrians and Motorists

ನೆಲಮಂಗಲ, ಮೇ 14: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಮುಖ ಕೇಂದ್ರ ಹಾಗೂ ಸುಮಾರು 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ನೆಲಮಂಗಲ (Nelamangala) ತಾಲೂಕು ಕೇಂದ್ರದಲ್ಲಿ ಸಂಚಾರ (Traffic) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ನಗರಸಭೆ ಅಧಿಕಾರಿಗಳು ಮತ್ತು ಸಂಚಾರಿ ಪೊಲೀಸರ ಪರಸ್ಪರ ನಿರ್ಲಕ್ಷ್ಯದಿಂದಾಗಿ ಇಲ್ಲಿನ ವಾಹನ ಸವಾರರು ಮತ್ತು ಪಾದಚಾರಿಗಳ ಜೀವನಕ್ಕೆ ಕುತ್ತು ಬಂದೊದಗಿದೆ. ಮುಖ್ಯಾಂಶಗಳು ನೆಲಮಂಗಲದಲ್ಲಿ ದಿನೇ ದಿನೇ ಉಲ್ಬಣಗೊಳ್ಳುತ್ತಿರುವ ಟ್ರಾಫಿಕ್ ಸಮಸ್ಯೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ ದಶಕದ ಸಮಸ್ಯೆಗೆ ಮುಕ್ತಿ ಯಾವಾಗ ಎಂದ ಜನ? ಅವೈಜ್ಞಾನಿಕ…

Read More

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ: ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ – Kannada News | Tumakuru BJP Leader JC Madhuswamy Un happy On His Own Party

ತುಮಕೂರು, (ಮೇ 14): ವಿಧಾನಸಭೆ ಚುನಾವಣೆಯ ಸೋಲು ಹಾಗೂ ಲೋಕಸಭೆ ಚುನಾವಣೆಯ ವೇಳೆ ನಡೆದ ವಿದ್ಯಮಾನಗಳ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ (JC Madhuswamy) ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಹೌದು….2023ರಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಸೋತ ಬಳಿಕ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರು ಉಳಿದಿದ್ದು, ಮಾಧುಸ್ವಾಮಿ ಇದೀಗ ಏಕಾಏಕಿ ಪ್ರತ್ಯಕ್ಷರಾಗಿ ಸ್ವಪಕ್ಷದ ನಾಯಕರ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಬಿಜೆಪಿಯಿಂದ ದೂರ ಇದ್ದೀರಾ ಎಂಬ ಪ್ರಶ್ನೆಗೆ ಮಾಧ್ಯಮದವರ…

Read More

Video: ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ; ಮೈ ಜುಂ ಎನ್ನಿಸುವ ವಿಡಿಯೋ ವೈರಲ್

ಉತ್ತರ ಪ್ರದೇಶ: ಬರೇಲಿಯಲ್ಲಿ ಮಾನ್ಸೂನ್ ಪೂರ್ವ ಮಳೆಯ ಆರ್ಭಟಕ್ಕೆ ಜನರು ಬೆಚ್ಚಿಬಿದ್ದಿದ್ದು, ಭೀಕರ ಬಿರುಗಾಳಿಯ ರಭಸಕ್ಕೆ ವ್ಯಕ್ತಿಯೊಬ್ಬರು ಶೆಡ್ ಸಮೇತ ಗಾಳಿಯಲ್ಲಿ ಹಾರಿ ಹೋದ ಆಘಾತಕಾರಿ ಘಟನೆ ನಡೆದಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಅಥವಾ ಶೀಟ್ ಹಾರಿಹೋಗದಂತೆ ತಡೆಯಲು ಆ ವ್ಯಕ್ತಿ ಟಿನ್ ಶೆಡ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಗ, ಗಾಳಿಯ ತೀವ್ರತೆಯು ಆತನನ್ನು ಮೇಲಕ್ಕೆತ್ತಿ ದೂರಕ್ಕೆ ಎಸೆದಿದೆ. ಈ ಇಡೀ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದನ್ನೂ ಓದಿ: ಅರೆಬರೆ…

Read More

IPL 2026: ಆರ್​​ಸಿಬಿಯ ಉಳಿದೆರಡು ಲೀಗ್ ಪಂದ್ಯಗಳು ಯಾರ ವಿರುದ್ಧ? ಆ 2 ತಂಡಗಳ ಪ್ಲೇಆಫ್ ಲೆಕ್ಕಾಚಾರವೇನು? – Kannada News | RCB’s IPL 2026 Playoff Path: After KKR Win, Decisive Battles Await Against PBKS and SRH

ಐಪಿಎಲ್ 2026 ರ 57 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದ ಆರ್​​ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದಲ್ಲದೆ 16 ಪಾಯಿಂಟ್​ಗಳೊಂದಿಗೆ ಪ್ಲೇಆಫ್​ಗೆ ಮತ್ತಷ್ಟು ಹತ್ತಿರವಾಗಿದೆ. ಪ್ಲೇಆಫ್ ದೃಷ್ಟಿಯಿಂದ ಉಭಯ ತಂಡಗಳಿಗೂ ಈ ಪಂದ್ಯ ಬಹಳ ಮುಖ್ಯವಾಗಿತ್ತು. ಅದರಲ್ಲೂ ಕೆಕೆಆರ್​​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಈ ಪಂದ್ಯದಲ್ಲಿ ಆರ್​​ಸಿಬಿ ಎದುರು ಶರಣಾದ ಕೆಕೆಆರ್ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಇತ್ತ ಆರ್​ಸಿಬಿ 16 ಅಂಕಗಳನ್ನು ಹೊಂದಿದ್ದರೂ ಪ್ಲೇಆಫ್​ಗೆ ತನ್ನ ಸ್ಥಾನವನ್ನು ಇನ್ನು…

Read More

Shani Amavasya: ಮೇ 16ರ ಶನಿ ಅಮಾವಾಸ್ಯೆಯಂದು ಬುಧಾದಿತ್ಯ ರಾಜಯೋಗದಿಂದ ಈ 4 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! – Kannada News | Budhaditya Rajayoga on Shani Amavasya: These 4 Zodiac Signs Will Get Huge Gains

ಹಿಂದೂ ಧರ್ಮದಲ್ಲಿ ಶನಿ ಅಮಾವಾಸ್ಯೆಗೆ ವಿಶೇಷ ಮಹತ್ವವಿದೆ. ಮೇ 16ರಂದು ಬರಲಿರುವ ಈ ಅಮಾವಾಸ್ಯೆಯ ಸಂದರ್ಭದಲ್ಲಿ ಗ್ರಹಗಳ ರಾಜ ಸೂರ್ಯ ಮತ್ತು ಬುದ್ಧಿವಂತಿಕೆಯ ಕಾರಕ ಬುಧ ಒಂದೇ ರಾಶಿಯಲ್ಲಿ ಸಂಧಿಸುತ್ತಿದ್ದಾರೆ. ಈ ಅಪರೂಪದ ಸಂಯೋಗದಿಂದ ‘ಬುಧಾದಿತ್ಯ ರಾಜಯೋಗ’ ನಿರ್ಮಾಣವಾಗುತ್ತಿದ್ದು, ಇದು ಕೆಲವು ರಾಶಿಗಳ ಪಾಲಿಗೆ ಬಂಪರ್ ಲಾಭ ತರಲಿದೆ. ಬುಧಾದಿತ್ಯ ರಾಜಯೋಗದ ಪ್ರಭಾವ ಹೇಗಿರುತ್ತೆ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯ ಮತ್ತು ಬುಧ ಒಟ್ಟಿಗೆ ಸೇರಿದಾಗ ವ್ಯಕ್ತಿಗೆ ಬುದ್ಧಿಶಕ್ತಿ, ಗೌರವ, ಸಂಪತ್ತು ಮತ್ತು ಉದ್ಯೋಗದಲ್ಲಿ ಉನ್ನತ ಸ್ಥಾನ…

Read More

ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದ ಕೋರ್ಟ್ – Kannada News | Yogeesh Gowda Case: Karnataka High Court Adjourns Bail Hearing of Ex Cop Chennakeshav Tingrikar

ಹೈಕೋರ್ಟ್, ಚನ್ನಕೇಶವ ಟಿಂಗರಿಕರ್Image Credit source: google ಧಾರವಾಡ, ಮೇ 14: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) 7 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಪೊಲೀಸ್ ಅಧಿಕಾರಿ ಚನ್ನಕೇಶವ ಟಿಂಗರಿಕರ್ (chennakeshava tingrikar), ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡುವಂತೆ ಅವರ ಪರ ವಕೀಲರು ಮನವಿ ಮಾಡಿದ್ದು, ಸುಲಭವಾಗಿ ಜಾಮೀನು ಪರಿಗಣಿಸಲಾಗದು ಎಂದಿರುವ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಮತ್ತು…

Read More