Headlines

ಯುದ್ಧದ ಎಫೆಕ್ಟ್: ಬೆಂಗಳೂರಿನ ಪಿಜಿಗಳಿಗೂ ಸಂಕಷ್ಟ; ಊಟದ ಮೆನುನೇ ಚೇಂಜ್

ಬೆಂಗಳೂರು, ಮಾರ್ಚ್​ 10: ಮಧ್ಯಪ್ರಾಚ್ಯದಲ್ಲಿನ ಯುದ್ಧ (iran israel war) ಎಷ್ಟರಮಟ್ಟಿಗೆ ಎಫೆಕ್ಟ್ ತಟ್ಟಿದೆ ಅಂದರೆ ಸದ್ಯ ದೇಶಾದ್ಯಂತ ಗ್ಯಾಸ್​ ಸಿಲಿಂಡರ್​​​ಗೆ ಹಾಹಾಕರ ಉಂಟಾಗಿದೆ. ಕಮರ್ಷಿಯಲ್ ಸಿಲಿಂಡರ್​​ಗೆ 115 ರೂ ಏರಿಕೆ ಆಗಿದ್ದು, ಇದು ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಇತ್ತ ಬೆಂಗಳೂರಿನ ಜನಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಾಸ ಆಗಿರುವುದು ಇಡೀ ಹೋಟೆಲ್​​ ​ಉದ್ಯಮ ಸೇರಿದಂತೆ ಇದೀಗ (PG) ಪಿಜಿ ಮಾಲೀಕರಿಗೂ ಆತಂಕ ಶುರುವಾಗಿದೆ. ಪಿಜಿ ಮಾಲೀಕರಿಗೂ ತಟ್ಟಿದ ಯುದ್ಧದ…

Read More

ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಬದಲಾವಣೆಯ ಗಾಳಿ

2026 ರ ಟಿ20 ವಿಶ್ವಕಪ್ (T20 World Cup) ಗೆದ್ದ ಟೀಂ ಇಂಡಿಯಾಗೆ (Team India) ಬಿಸಿಸಿಐನಿಂದ ಭರ್ಜರಿ ಬಹುಮಾನ ಘೋಷಣೆಯಾಗಿದೆ. ಐಸಿಸಿ ನೀಡಿದ 27.48 ಕೋಟಿ ರೂಗಳ ಜೊತೆಗೆ ಬಿಸಿಸಿಐನಿಂದ 131 ಕೋಟಿ ರೂ. ಬಹುಮಾನ ಸಿಕ್ಕಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಪಾಳದಿಂದ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ತಂಡವನ್ನು ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮಖ ಪಾತ್ರವಹಿಸಿದ ಫೀಲ್ಡಿಂಗ್ ಕೋಚ್ ಟಿ. ದಿಲೀಪ್ (T. Dilip) ಅವರನ್ನು ಈ ಹುದ್ದೆಯಿಂದ ತೆಗೆದುಹಾಕಬಹುದು ಎಂದು ಹೇಳಲಾಗಲುತ್ತಿದೆ. 2021…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?

ಡಾ. ಬಸವರಾಜ ಗುರೂಜಿಯವರು 2026ರ ಯುಗಾದಿ ಪರಾಭವನಾಮ ಸಂವತ್ಸರದ ವೃಶ್ಚಿಕ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಈ ವರ್ಷವು ವೃಶ್ಚಿಕ ರಾಶಿಯವರಿಗೆ ಉತ್ತಮ ಫಲಗಳನ್ನು ನೀಡಲಿದೆ. ಗುರು ಗ್ರಹವು 8ನೇ ಸ್ಥಾನದಿಂದ 9ನೇ ಸ್ಥಾನಕ್ಕೆ ಸಂಚಾರ ಮಾಡುವುದರಿಂದ ಅದೃಷ್ಟ ಕೂಡಿ ಬರುವ ಕಾಲ ಇದಾಗಿದೆ. ಶನಿಯು ಪಂಚಮದಲ್ಲಿದ್ದರೆ, ರಾಹು ನಾಲ್ಕರಿಂದ ಮೂರಕ್ಕೆ ಮತ್ತು ಕೇತು ಹತ್ತರಿಂದ ಒಂಬತ್ತಕ್ಕೆ ಸಂಚಾರ ಮಾಡಲಿದೆ. ಆರೋಗ್ಯ ಸ್ಥಿತಿ ಉತ್ತಮವಾಗಿರಲಿದ್ದು, ಸುಖ-ದುಃಖದ ಅನುಪಾತ 6:3 ಇರಲಿದೆ. ವೃತ್ತಿ, ವ್ಯಾಪಾರ ಹಾಗೂ ಆರ್ಥಿಕವಾಗಿ ಸಬಲತೆಯನ್ನು ಪಡೆಯಲಿದ್ದಾರೆ….

Read More

ವ್ಹಾವ್! ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ

ಬೆಂಗಳೂರು, (ಮಾರ್ಚ್ 10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು (Bengaluru) ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ (international bus station)ತಲೆ ಎತ್ತಲಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ. ಇಂದು (ಮಾರ್ಚ್ 10) ವಿಧಾನಪರಿಷತ್​​ನಲ್ಲಿ ಉತ್ತರ ನೀಡಿದ ರಾಮಲಿಂಗಾರೆಡ್ಡಿ ಅವರು, ಈಗ ಮೆಜೆಸ್ಟಿಕ್​ ವ್ಯಾಪ್ತಿಯಲ್ಲಿ 32 ಎಕರೆ ಜಾಗ ಇದೆ. ಪ್ರತಿದಿನ ಇಲ್ಲಿ 11 ಸಾವಿರ ಬಸ್​​ಗಳ ಸಂಚಾರ ಇರುತ್ತೆ. ಮೆಜೆಸ್ಟಿಕ್​​ನಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣ ನಿರ್ಮಿಸುವ ಉದ್ದೇಶವಿದೆ. ಸಿಂಗಾಪುರಕ್ಕಿಂತಲೂ ಅತ್ಯುತ್ತಮ ಬಸ್​ ನಿಲ್ದಾಣ ಮಾಡುತ್ತೇವೆ….

Read More

Anganwadi Recruitment 2026: ಕಲಬುರಗಿ ಅಂಗನವಾಡಿ ನೇಮಕಾತಿ; 412 ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು!

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (WCD) ಕಲಬುರಗಿ ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 412 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 89 ಅಂಗನವಾಡಿ ಕಾರ್ಯಕರ್ತೆಯರು ಮತ್ತು 323 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಲಭ್ಯವಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಗತ್ಯ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ…

Read More

ಜೈಲಲ್ಲೇ ಪ್ಲ್ಯಾನ್​​ ಮಾಡಿ ಫಿಲ್ಮಿ ಸ್ಟೈಲ್​ನಲ್ಲಿ ಪೆಟ್ರೋಲ್​​ ಬಂಕ್ ಸಿಬ್ಬಂದಿ​ ದೋಚಿದ್ದ ಐವರು ಅರೆಸ್ಟ್​

ಮೈಸೂರು, ಮಾರ್ಚ್​ 10: ಕಿರುಮುದ್ದನಹಳ್ಳಿ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದ ಫಿಲ್ಮಿ ಸ್ಟೈಲ್ ದರೋಡೆ ಪ್ರಕರಣವನ್ನ ಭೇದಿಸಿರುವ ಬಿಳಿಕೆರೆ ಪೊಲೀಸರು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಡೀಸೆಲ್ ಕೇಳುವ ನೆಪದಲ್ಲಿ ಬಂದು ಮಚ್ಚು-ಡ್ರಾಗರ್ ತೋರಿಸಿ ಅಟ್ಟಹಾಸ ಮೆರೆದಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟಲಾಗಿದ್ದು, ದರೋಡೆಗೆ ಇವರು ಸ್ಕೆಚ್​​ ಹಾಕಿದ್ದಿದ್ದು ಮಂಡ್ಯದ ಸೆಂಟ್ರಲ್ ಜೈಲಿನಲ್ಲಿ ಎಂಬ ವಿಷಯವೂ ತನಿಖೆ ವೇಳೆ ಬಯಲಾಗಿದೆ. ಕಳೆದ ತಿಂಗಳು ಫೆಬ್ರವರಿ 12ರಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಕಿರುಮುದ್ದನಹಳ್ಳಿ ಬಳಿಯ ಇಂಡಿಯನ್ ಆಯಿಲ್ ಬಂಕ್‌ನಲ್ಲಿ ದರೋಡೆ ಮಾಡಿದ್ದ…

Read More

ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ದಾವಣಗೆರೆ, (ಮಾರ್ಚ್ 10): ತಮ್ಮ ಪ್ರೀತಿಗೆ (Love)  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಜೋಡಿಯೊಂದು ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ. ಸಾಯಲು ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳಾದ ಸಿಂಚನ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಇನ್ನು…

Read More

‘ಧುರಂಧರ್ 2’ ಟ್ರೈಲರ್ ದಾಖಲೆ: ಆದರೂ ಟಾಪ್ 10 ಪಟ್ಟಿಯಲ್ಲಿ ಸ್ಥಾನವಿಲ್ಲ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀಮಿಯರ್ ಶೋಗೆ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದೆ. ಸಿನಿಮಾದ ಟ್ರೈಲರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಯೂಟ್ಯೂಬ್​​ನಲ್ಲಿ ಸಖತ್ ಟ್ರೆಂಡ್ ಸಹ ಆಗುತ್ತಿದೆ. ಸಿನಿಮಾದ ಟ್ರೈಲರ್ ಹಿಂದಿ ಮಾತ್ರವೇ ಅಲ್ಲದೆ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆ ಆಗಿದೆ. ಟ್ರೈಲರ್ ಸಾಮಾಜಿಕ ಜಾಲತಾಣದಲ್ಲಿ ಹವಾ ಎಬ್ಬಿಸುತ್ತಿದೆ. ಹಾಗಿದ್ದರೂ ಸಹ ಟಾಪ್ 10 ಪಟ್ಟಿ ಸೇರಲು…

Read More

ಸುಳ್ಳು ಹೇಳಿ ಸಿಕ್ಕಿಬಿದ್ದ ಆಮಿರ್ ಖಾನ್; ಟ್ರೋಲ್ ಆದ ಬಾಲಿವುಡ್ ನಟ

ಬಾಲಿವುಡ್ ಆಮಿರ್ ಖಾನ್ (Aamir Khan) ಅವರು ಪರ್ಫೆಕ್ಷನಿಸ್ಟ್ ಎನಿಸಿಕೊಂಡಿದ್ದಾರೆ. ಅವರು ಪ್ರೇಕ್ಷಕರನ್ನು ಸಾಕಷ್ಟು ಗೌರವಿಸುತ್ತಾರೆ. ಈಗ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. ‘ಸಿತಾರೆ ಜಮೀನ್​​ಪರ್’ ಸಿನಿಮಾ ಈ ಮೊದಲು ಥಿಯೇಟರ್​​ನಲ್ಲಿ ರಿಲೀಸ್ ಆಯಿತು. ಆ ಬಳಿಕ ಯೂಟ್ಯೂಬ್​​​ನಲ್ಲಿ ರಿಲೀಸ್ ಆಯಿತು. ಈ ವೇಳೆ ಆಮಿರ್ ಖಾನ್ ಹೇಳಿದ ಸುಳ್ಳು ಈಗ ಹೊರ ಬಿದ್ದಿದೆ. ಅವರನ್ನು ಸಾಕಷ್ಟು ಟ್ರೋಲ್ ಮಾಡುತ್ತಾ ಇದ್ದಾರೆ. ಆಮಿರ್ ಖಾನ್ ಅವರು ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಗೆ ಮಾರಾಟ ಮಾಡಲಿರಲಿಲ್ಲ….

Read More

ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ

ಚಿಕ್ಕಬಳ್ಳಾಪುರ, ಮಾರ್ಚ್​ 10: ಕೇವಲ 40 ದಿನದ ಹಸುಗೂಸನ್ನು ಹತ್ಯೆಗೈದಿದ್ದ (kill) ಅಜ್ಜಿಯನ್ನು (grandmother) ಚೇಳೂರು ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕತ್ತು ಹಿಸುಕಿ ಮರಿ ಮೊಮ್ಮಗನನ್ನೇ ಮೆಹಬೂಬಿ ಹತ್ಯೆಗೈದಿದ್ದರು. ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್​ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಎಫ್​​ಎಸ್​ಎಲ್​ ವರದಿಯಲ್ಲಿ ಮಗುವಿನ ಕೊಲೆ ರಹಸ್ಯ ಬಯಲಾಗಿದೆ. ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಕೇವಲ 40 ದಿನದ ಗಂಡು ಮಗು, ಮರಿ ಮೊಮ್ಮಗನನ್ನೇ ಕತ್ತು ಹಿಸುಕಿ ಕೊಲೆ…

Read More