ಸೈಬರ್ ವಂಚನೆ: ಸುದೀಪ್ ಅಭಿಮಾನಿಗೆ ನಕಲಿ ATS ಬೆದರಿಕೆ, ಲಕ್ಷಾಂತರ ರೂ. ದೋಚಿದ ಸೈಬರ್ ಕಳ್ಳರು – Kannada News | Cyber ​​fraud: Fake ATS threat to Sudeep’s fan, cyber thieves rob lakhs of rupees

ಬೆಂಗಳೂರು, ಡಿ.22: ದಿನೇ ದಿನೇ ಸೈಬರ್ (Cybercrime) ಚೋರರ ಕಾಟ ಹೆಚ್ಚಾಗುತ್ತಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಇವರ ವಂಚನೆಗೆ ಬಲಿಯಾಗುತ್ತಿದ್ದಾರೆ. ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಇವರ ಹಾವಳಿ ಹೆಚ್ಚಾಗಿದೆ. ಇತ್ತೀಚಿಗೆ ಇಂತಹ ಮೋಸಕ್ಕೆ ಉಪೇಂದ್ರ ದಂಪತಿಗಳು ಕೂಡ ಒಳಗಾಗಿದ್ದರು. ಪೊಲೀಸ್​​​​, ಎನ್​​​ಐಎ ಹೀಗೆ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ  ಸೈಬರ್​​​ ಅರೆಸ್ಟ್​​ ಮಾಡಿ ಲಕ್ಷ ಲಕ್ಷ ಹಣ ದೋಚಿರುವ ಅದೆಷ್ಟೊ ಘಟನೆಗಳು ವರದಿಯಾಗಿದೆ. ಇದರ ಬಗ್ಗೆ ದಿನನಿತ್ಯ ಒಂದಲ್ಲ ಒಂದು ಸುದ್ದಿಯಾಗುತ್ತಿದ್ದರೂ ಜನ ಮತ್ತೆ ಮತ್ತೆ ಮೋಸ ಹೋಗುತ್ತಿದ್ದಾರೆ. ಸರ್ಕಾರ ಹಾಗೂ ಪೊಲೀಸ್​​ ಇಲಾಖೆಯೂ ಕೂಡ ಜನರಿಗೆ ಎಚ್ಚರಿಕೆಯನ್ನು ನೀಡುತ್ತ ಬಂದಿದೆ. ಇದೀಗ ಈ ವಂಚಕರು ಸುದೀಪ್ ಅಭಿಮಾನಿಯೊಬ್ಬರಿಗೆ ‘ATS'(ಭಯೋತ್ಪಾದನಾ ನಿಗ್ರಹ ದಳ) ಹೆಸರಿನಲ್ಲಿ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ದೆಹಲಿ ಬಾಂಬ್ ಸ್ಪೋಟದಲ್ಲಿ ನಿಮ್ಮ ಕೈವಾಡ ಇದೆ. ನಿಮ್ಮ ಮೊಬೈಲ್ ನಂಬರ್ ಕೂಡ ಬಳಕೆಯಾಗಿದೆ ಎಂದು ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ಈ ಆರೋಪದಿಂದ ನಿಮಗೆ ಮುಕ್ತಿ ಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ನಾವು ಹೇಳಿದಂತೆ ಕೇಳಿದ್ರೆ ಮಾತ್ರ ನಿಮಗೆ ಸರ್ಟಿಫಿಕೇಟ್​​ ಆಫ್ ಇನ್ವಸೇನಟ್​ (Certificate of Innocence) ನೀಡುತ್ತೇವೆ ಎಂದು ಹೇಳಿದ್ದಾರೆ. ಈ ಬೆದರಿಕೆಗೆ ಭಯಗೊಂಡ ಕಿಚ್ಚ ಅಭಿಮಾನಿ ಶರಣ್ ಆರ್ ಮುಕುಂದ್ ಹಣ ಕಳೆದುಕೊಂಡಿದ್ದಾರೆ.

ಈ ವಂಚನೆ ಬಗ್ಗೆ ವಿಸ್ತಾರವಾಗಿ ಕಿಚ್ಚ ಅಭಿಮಾನಿ ಶರಣ್ ಆರ್ ಮುಕುಂದ್
ಹಂಚಿಕೊಂಡಿದ್ದಾರೆ. “ನನಗೆ ಒಬ್ಬ ವ್ಯಕ್ತಿ ಕಾಲ್ ಮಾಡಿ, ನಾವು ಎಟಿಎಸ್ ನಿಂದ ಕರೆ ಮಾಡುತ್ತಿದ್ದೇವೆ. ದೆಹಲಿ ರೆಡ್ ಫೋರ್ಟ್ ಬ್ಲಾಸ್ಟ್ ನಲ್ಲಿ ನಿಮ್ಮ ಕೈವಾಡವಿದೆ ಎಂದು ಹೇಳಿದ್ರು, ನನಗೂ ಸ್ವಲ್ಪ ಹೆದರಿಕೆ ಆಯಿತು. ಇಲ್ಲ ಸರ್​​ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದೆ. ಆದರೆ ಅವರು ನಿಮ್ಮ ಕೈವಾಡ ಇದೆ ಎಂಬ ಸಾಕ್ಷಿ ಸಿಕ್ಕಿದೆ. ನಮ್ಮ ಎನ್ ಐ ಎ ಟೀಂ ಸದ್ಯದಲ್ಲೆ ಕಾಲ್ ಮಾಡುತ್ತದೆ ಎಂದು  +91 9620122894, +91 6262656645 ನಿಂದ ವೀಡಿಯೋ ಕರೆ ಮಾಡಿದ್ದಾರೆ. ಅದರಲ್ಲಿ ಒಬ್ಬ ವ್ಯಕ್ತಿ, ನಾನು ಗೌರವ್ ಎನ್ ಐ ಎ ಆಫೀಸರ್, ನಿಮ್ಮ ವಿಡಿಯೋ ಹೇಳಿಕೆಬೇಕು ಎಂದು ನನ್ನ ವೈಯಕ್ತಿಕ ದಾಖಲೆಗಳನ್ನು ಕೇಳಿದ್ದಾರೆ. ಜತೆಗೆ ನನ್ನ ಬ್ಯಾಂಕ್​​​​ ಅಕೌಂಟ್ ಡೀಟೇಲ್ಸ್ ಕೂಡ ಕೇಳಿದ್ದರೆ, ನಾವು ಹೇಳುವರೆಗೆ ಕಾಲ್​​​ ಕಟ್​​ ಮಾಡಬೇಡಿ ಎಂದು ಹೇಳಿದ್ದಾರೆ.

ಸ್ವಲ್ಪ ಹೊತ್ತಿನ ನಂತರ ತುಂಬಾ ಮೃದುವಾಗಿ ಮಾತನಾಡಲು ಶುರು ಮಾಡಿದ್ದಾರೆ, ನಿಮ್ಮ ಮೇಲಿನ ಆರೋಪ ಹೋಗಬೇಕೆಂದರೆ, ನಿಮಗೆ ಸರ್ಟಿಫಿಕೇಟ್​​ ಆಫ್ ಇನ್ವಸೇನಟ್​ ಬೇಕೆಂದರೆ ಸ್ವಲ್ಪ ಹಣ ಪೇ ಮಾಡಬೇಕು. ಅದು ಗವರ್ನಮೆಂಟ್ ಫೀಸ್​​ ಎಂದು ಹೇಳಿದ್ದಾರೆ. ಈ ತನಿಖೆ ಮುಗಿದ ನಂತರ ವಾಪಾಸ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಶರಣ್ ಆರ್ ಮುಕುಂದ್ ಅವರು ವಂಚಕರಿಗೆ ಹಂತ ಹಂತವಾಗಿ ಹಣವನ್ನು ವರ್ಗಾವಣೆ ಮಾಡಿದ್ದಾರೆ. ಹೀಗೆ 5.53 ಲಕ್ಷ ರೂ.ವರೆಗೆ ಹಣವನ್ನು ವಂಚಕರಿಗೆ ಕಳುಹಿಸಿದ್ದಾರೆ. ಕೊನೆಗೆ ಶರಣ್ ಆರ್ ಮುಕುಂದ್ ಅವರಿಗೆ ಈ ಬಗ್ಗೆ ಅನುಮಾನ ಬಂದು 1930ಗೆ ಕರೆ ಮಾಡಿ‌ ವಿಚಾರ ತಿಳಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌತ್ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕುಂಬಳ ಕಾಯಿ ಕಳ್ಳ ಅಂದ್ರೆ..; ಸುದೀಪ್ ಹೇಳಿಕೆಯ ಅಸಲಿ ಅರ್ಥ ಹೇಳಿದ ಚಕ್ರವರ್ತಿ

ದೇಣಿಗೆ ಕೊಡಿಸುವ ನೆಪದಲ್ಲಿ ವಂಚನೆ

ಬಾಗಲಕೋಟೆ ‌ಜಿಲ್ಲೆಯ ಜಮಖಂಡಿ ಮೂಲದ ಜಯಭಾರತ ಮಾತೆ ನಗರ ಹಾಗೂ ಗ್ರಾಮೀಣ ಸೇವಾಸಂಸ್ಥೆ. ಬಾಗಲಕೋಟೆ, ವಿಜಯಪುರ, ಬೆಳಗಾವಿ, ಗದಗ ಜಿಲ್ಲೆಯಲ್ಲಿ ವೃದ್ದಾಶ್ರಮ ಹಾಗೂ ನಿರ್ಗತಿಕ ಕೇಂದ್ರಗಳನ್ನು ‌ಈ ಸಂಸ್ಥೆ ನಡೆಸುತ್ತದೆ. ಇದಕ್ಕಾಗಿ ವಿವಿಧ ದಾನಿಗಳಿಂದ ಸಹಾಯ‌ ನಿರೀಕ್ಷಿಸಿದ್ದರು. ಕಂಪನಿಗಳಿಂದ ಸಿಎಸ್​​ಆರ್ ಫಂಡ್​ನಿಂದ ಹಣ ನೆರವು ಕೋರಿದ್ದರು. ಈ ಬಗ್ಗೆ ಸಾಮಾಜಿಕ‌ ಜಾಲತಾಣದಲ್ಲೂ ‌ಮನವಿ‌ ಮಾಡಿದ್ದರು.ಇದನ್ನು ಗಮನಿಸಿದ ಅಸ್ಸಾಂನ ಸುರ್ಜಿತ್ ಮತ್ತು ಸಿದ್ದಾರ್ಥ ಹಾಗೂ ಪಶ್ಚಿಮ ಬಂಗಾಳದ ಮಾನಷ್ ಗೋಷ್ ಜಯ ಭಾರತ ಮಾತೆ NGO ಕಾರ್ಯದರ್ಶಿ ಶಶಾಂಕ್‌ ಒಳವಾಡೆಯವರನ್ನು ಸಂಪರ್ಕಿಸಿದ್ದಾರೆ. ನಾವು ಫಂಡ್​ ಕೊಡುತ್ತೇವೆ. ವಿವಿಧ ಕಂಪನಿಗಳಿಂದಲೂ ಫಂಡ್‌ ಕೊಡಿಸುತ್ತೇವೆ ಅಂತ ನಂಬಿಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:33 pm, Mon, 22 December 25

Source link

ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ! – Kannada News | DK Shivakumar Will Be the Next CM before january 15th And Satish Jarkiholi KPCC President Predicted By Bagalkot astrologer Ullas

ಬಾಗಲಕೋಟೆ, (ಡಿಸೆಂಬರ್ 22): ಕರ್ನಾಟಕ ಕಾಂಗ್ರೆಸ್​ನಲ್ಲಿನ (Karnataka Congress) ಗೊಂದಲ ಒಂದೆರಡಲ್ಲ. ಸಿಎಂ ಕುರ್ಚಿ ಆಗ ಬದಲಾಗುತ್ತೆ, ಈಗ ಬದಲಾಗುತ್ತೆ ಎಂಬ ಚರ್ಚೆಗಳು ದಿನ ಕಳೆದಂತೆ ಜೋರಾಗುತ್ತಲೇ ಇವೆ. ಬ್ರೇಕ್ ಫಾಸ್ಟ್​​ ಮೂಲಕ ಬಗೆಹರಿಯಿತು ಎನ್ನುವಷ್ಟರಲ್ಲೇ ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ಸಿಎಂ ಕುರ್ಚಿ ಕುದನ ಶುರುವಾಗಿದೆ. ಅದರಲ್ಲೂ ಡಿಕೆ ಶಿವಕುಮಾರ್ (DK Shivakumar) ಮತ್ತೆ ಆ್ಯಕ್ಟೀವ್ ಆಗಿದ್ದು, ನಾನಾ ತಂತ್ರಗಳನ್ನು ಹೆಣೆಯುತ್ತಿದ್ದಾರೆ. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ನಂತರ ಬಾಗಲಕೋಟೆಯ ಜ್ಯೋತಿಷಿಯೊಬ್ಬರು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎನ್ನುವ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಹೌದು..ಬಬಲೇಶ್ವರ ಜ್ಯೋತಿಷಿ‌ ಮನೆತನದ ಬಾಗಲಕೋಟೆಯ ‌ಖ್ಯಾತ ಜ್ಯೋತಿಷಿ‌ ಉಲ್ಲಾಸ್​ ಜೋಶಿ ಎನ್ನುವರು ಜನವರಿಗೆ 15ರೊಳಗೆ ಡಿಕೆ ಶಿವಕುಮಾರ್ ಮುಖ್ಯಮಮತ್ರಿ ಆಗುತ್ತಾರೆ. ಇದರ ಜೊತೆಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷರಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ರಾಘವೇಂದ್ರ ಸ್ವಾಮಿಗಳೇ ನನ್ನ ನಾಲಿಗೆಯಿಂದ ನುಡಿಸುತ್ತಾರೆ. ನಾನು ಮೊದಲಿಗೆ ಜಪಮಣಿ ಪಠಿಸುತ್ತಾ ರಾಘವೇಂದ್ರಸ್ವಾಮಿಗೆ ಪ್ರಶ್ನೆ ಹಾಕುತ್ತೇನೆ. ಅದಕ್ಕೆ ರಾಘವೇಂದ್ರ ಸ್ವಾಮಿಗಳು ಉತ್ತರಿಸೋದನ್ನೇ ಭವಿಷ್ಯ ಹೇಳುತ್ತೇನೆ. ಈವರೆಗೂ ಅನೇಕ‌ ಜನರಿಗೆ ಭವಿಷ್ಯ ಹೇಳಿದ್ದೇನೆ, ಒಂದು ಸುಳ್ಳಾಗಿಲ್ಲ. ಯಾರೊಬ್ಬರೂ ಸುಳ್ಳಾಗಿದೆ ಅಂತ ಬಂದಿಲ್ಲ ಎಂದ ಹೇಳಿದ್ದಾರೆ. ಹೀಗಾಗಿ ಈ ಭವಿಷ್ಯ ಎಷ್ಟು ನಿಜವಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ! – Kannada News | Vadodara Young Boy survived a horrifying accident on Nandesari Bridge watch viral video

ವಡೋದರಾ, ಡಿಸೆಂಬರ್ 22: ವಡೋದರಾದಲ್ಲೊಂದು ಪವಾಡದಂತಹ ಘಟನೆ ನಡೆದಿದೆ. 20 ವರ್ಷದ ಸಿದ್ಧರಾಜ್ ಸಿಂಗ್ ಮಹೀದ ಅವರು ನಾಂದೇಸರಿ ಸೇತುವೆಯ ಮೇಲೆ ಹೋಗುತ್ತಿದ್ದಾಗ ಕಾರೊಂದು ಅವರ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆದರೆ, ಅದೃಷ್ಟವಶಾತ್ ಈ ಭೀಕರ ಅಪಘಾತದಿಂದ (Accident) ಅವರು ಬದುಕುಳಿದಿದ್ದಾರೆ. ಅವರು ಸೇತುವೆಯಿಂದ ಕೆಳಗೆ ಬೀಳುವಾಗ ಅವರ ಶರ್ಟ್​ ಲೈಟ್ ಕಂಬಕ್ಕೆ ಸಿಕ್ಕಿಹಾಕಿಕೊಂಡಿತ್ತು. ಇದರಿಂದಾಗಿ ಅವರು 20 ಅಡಿ ಎತ್ತರದಲ್ಲಿ ನೇತಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ತಕ್ಷಣ ಅವರನ್ನು ಮೇಲಕ್ಕೆ ಎಳೆದುಕೊಂಡು ಕಾಪಾಡಿದ್ದಾರೆ. ಬೈಕ್ ಸೇತುವೆಯಿಂದ ನೀರಿಗೆ ಬಿದ್ದರೂ ಆ ಯುವಕನ ಆಯುಷ್ಯ ಗಟ್ಟಿ ಇದ್ದುದರಿಂದ ಯಾವುದೇ ಗಾಯಗಳೂ ಆಗದೆ ಅವರು ಬದುಕುಳಿದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

7 ತಿಂಗಳ ಗರ್ಭಿಣಿ ಹತ್ಯೆ ಪ್ರಕರಣ: ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು – Kannada News | Dalit Outcry: Hubballi Father Murders 7 Month Pregnant Daughter, Justice for Manya

ಹುಬ್ಬಳ್ಳಿ, ಡಿ.22: ಹುಬ್ಬಳ್ಳಿಯಲ್ಲಿ ನಡೆದ ಭೀಕರ ಘಟನೆಯು ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ತಂದೆಯೊಬ್ಬ ತನ್ನ 7 ತಿಂಗಳ ಗರ್ಭಿಣಿ ಮಗಳನ್ನು ಕೊಚ್ಚಿ ಕೊಂದಿರುವ ಘಟನೆಯೊಂದು ನಡೆದಿದೆ. ಇದು ಮರ್ಯಾದಾ ಹತ್ಯೆಯಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಜಾತಿ ಆಧಾರಿತ ಮದುವೆಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ. ಹತ್ಯೆಯಾಗಿರುವ ಮಹಿಳೆಯನ್ನು ಮಾನ್ಯಾ ಎಂದು ಗುರುತಿಸಲಾಗಿದ್ದು, ಇದೀಗ ಆಂಬ್ಯುಲೆನ್ಸ್‌ನಲ್ಲಿ ಆಕೆಯ ದೇಹವನ್ನು ಸಾಗಿಸುವಾಗ ದಲಿತ ಸಂಘಟನೆಗಳ ಕಾರ್ಯಕರ್ತರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾಕಾರರು ಧಿಕ್ಕಾರ, ಧಿಕ್ಕಾರ, ಬೇಕು ಬೇಕು ನ್ಯಾಯ ಬೇಕು, ಜಸ್ಟಿಸ್ ಫಾರ್ ಮಾನ್ಯಾ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಮರ್ಯಾದಾ ಹತ್ಯೆಗೆ ಕಾರಣರಾದವರನ್ನು ಬಂಧಿಸುವಂತೆ ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ದಲಿತ ವಿರೋಧಿಗಳಿಗೆ, ಜಾತಿವಾದಿಗಳಿಗೆ ಮತ್ತು ಜಾತಿ ರಾಕ್ಷಸರಿಗೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗುವ ಮೂಲಕ ಘಟನೆಯ ಬಗ್ಗೆ ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 7 ತಿಂಗಳ ಗರ್ಭಿಣಿಯ ಹತ್ಯೆಯನ್ನು ಖಂಡಿಸಿ, ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್‌ಗೆ ಒಲಿದ ನಾಯಕತ್ವ ಪಟ್ಟ

Source link

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್ – Kannada News | Rajath Kishan says Rakshitha Shetty called Gilli Nata bro in Bigg Boss Kannada Season 12

ಬಿಗ್ ಬಾಸ್ ಮನೆಯಲ್ಲಿ ಗಿಲ್ಲಿ ನಟ (Gilli Nata) ಅವರು ಸಖತ್ ಹೈಲೈಟ್ ಆಗುತ್ತಿದ್ದಾರೆ. ಅವರ ಜೊತೆ ಕಾವ್ಯಾ ಶೈವ ಮತ್ತು ಸ್ಪಂದನಾ ಅವರು ಇದ್ದಾಗ ರಕ್ಷಿತಾ ಶೆಟ್ಟಿ (Rakshitha Shetty) ಸಹಿಸಿಕೊಳ್ಳುವುದಿಲ್ಲ ಎನಿಸುತ್ತದೆ. ಗಿಲ್ಲಿ ಮೇಲೆ ಅವರಿಗೆ ಪೊಸೆಸಿವ್​ನೆಸ್ ಇರಬಹುದು ಎಂಬ ಅನುಮಾನ ಕೂಡ ಮೂಡುತ್ತದೆ. ಆ ಬಗ್ಗೆ ರಜತ್ ಅವರಿಗೆ ಪ್ರಶ್ನೆ ಕೇಳಲಾಯಿತು. ಇಷ್ಟು ದಿನ ಅತಿಥಿಯಾಗಿ ಬಿಗ್ ಬಾಸ್ ಮನೆಯಲ್ಲಿ ಇದ್ದ ರಜತ್ (Rajath Kishan) ಅವರು ಈಗ ಹೊರಗೆ ಬಂದಿದ್ದಾರೆ. ಟಿವಿ9 ಜೊತೆ ಮಾತನಾಡಿ ಅವರು ಅಸಲಿ ವಿಷಯ ತೆರೆದಿಟ್ಟಿದ್ದಾರೆ. ‘ಗಿಲ್ಲಿಯನ್ನು ರಕ್ಷಿತಾ ಇಷ್ಟಪಡುತ್ತಿಲ್ಲ. ಅವವನ್ನು ಬ್ರೋ ಅಂತ ಅವಳು ಕರೆಯುತ್ತಾಳೆ. ನಾನು ಅದನ್ನು ನೋಡಿದ್ದೇನೆ. ಪೊಸೆಸಿವ್ ಆಗುವ ಅವಶ್ಯಕತೆ ಇಲ್ಲ. ರಕ್ಷಿತಾ ತುಂಬಾ ಮುಗ್ಧೆ. ಅವಳು ತುಂಬಾ ಒಳ್ಳೆಯ ಹುಡುಗಿ. ಅವಳು ಗೆದ್ದರೆ ನಾನೇ ಪಟಾಕಿ ಹೊಡೆಯುತ್ತೇನೆ. ಕೋಪ ಬಂದರೆ ಅವಳು ಮನುಷ್ಯಳೇ ಅಲ್ಲ. ಕಾವ್ಯ ಮತ್ತು ಸ್ಪಂದನಾ ಎಲ್ಲೋ ಟ್ರಿಗರ್ ಮಾಡುತ್ತಾರೆ’ ಎಂದು ರಜತ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಣ್ಣನಾಗಬೇಕಿದ್ದವನ ಜತೆ ಅನೈತಿಕ ಸಂಬಂಧ: ಸೆಲ್ಫಿ ವಿಡಿಯೋ ಮಾಡುತ್ತಾ ಮಹಿಳೆ ನೇಣಿಗೆ ಶರಣು – Kannada News | 23 Year old Divorce Woman Commits Suicide with selfie video In Bellary

ಬಳ್ಳಾರಿ, (ಡಿಸೆಂಬರ್ 22): ಗಂಡನಿಂದ ದೂರವಾಗಿದ್ದ ಮಹಿಳೆಯೊಬ್ಬರು (Woman) ಸೆಲ್ಫಿ ವಿಡಿಯೋ ಮಾಡುತ್ತಲ್ಲೇ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಬಳ್ಳಾರಿ(Bellary) ಹುಸೇನ್ ನಗರದಲ್ಲಿ ನಡೆದಿದೆ. ತನಗಾದ ಅನ್ಯಾಯವನ್ನು ವಿಡಿಯೋನಲ್ಲಿ ಹೇಳಿಕೊಳ್ಳುತ್ತಲೇ ಮುನ್ನಿ (23) ಎನ್ನುವ ಮಹಿಳೆ ನೇಣಿಗೆ ಕೊರಳೊಡ್ಡಿದ್ದಾಳೆ. ನಾಲ್ಕು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಮುನ್ನಿ, ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದು ಒಂಟಿಯಾಗಿದ್ದಳು. ಬಳಿಕ ಮಹಮ್ಮದ್ ಶೇಕ್ಷಾವಲ್ಲಿ ಎನ್ನುವ ವಿವಾಹಿತ ಪುರುಷನ ಜೊತೆಗೆ ಸ್ನೇಹ ಬೆಳೆದಿತ್ತು. ಸ್ನೇಹ ಸಂಬಂಧಕ್ಕೆ ತಿರುಗಿತ್ತು. ಅದ್ರೆ, ಇದೀಗ ಏಕಾಏಕಿ ವಿಡಿಯೋ ಮಾಡುತ್ತಲೇ ನೇಣಿಗೆ ಶರಣಾಗಿದ್ದಾಳೆ.

ಗಂಡನಿಂದ ದೂರವಾಗಿದ್ದ ಮುನ್ನಿ

23 ವರ್ಷದ ಮುನ್ನಿ ಮೂರು ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಆದ್ರೆ, ಅದೇನಾಯೋ ಏನೋ ಒಂದು ವರ್ಷದ ಹಿಂದೆ ಪತಿಗೆ ವಿಚ್ಛೇದನೆ ನೀಡಿ ಎರಡು ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ಈ ಮಧ್ಯೆ ಮಹಮ್ಮದ್ ಶೇಕ್ ಎನ್ನುವ ವಿವಾಹಿತ ಪುರುಷನ ಜೊತೆಗೆ ಸ್ನೇಹ ಬೆಳೆದಿತ್ತು. ಸ್ನೇಹ ಸಂಬಂಧಕ್ಕೆ ತಿರುಗಿತ್ತು. ಅದ್ರೆ, ಇತ್ತೀಚಿಗೆ ಮಹಮ್ಮದ್ ಶೇಕ್ಷಾವಲ್ಲಿ ಹಾಗೂ ಮುನ್ನಿ ಮಧ್ಯೆ ಭಿನ್ನಾಭಿಪ್ರಾಯ ಏರ್ಪಟ್ಟಿತು. ಅಗಾಗ ಗಲಾಟೆಯೂ ಅಗುತ್ತಿದ್ದವು. ಇದೇ ಕಾರಣಕ್ಕೆ ಮುನ್ನಿ ನೇಣಿಗೆ ಶರಣಾಗಿದ್ದಾಳೆ. ಸಾಯುವ ಮುನ್ನ ತನಗಾದ ಅನ್ಯಾಯದ ವಿವರಣೆ ನೀಡುತ್ತಲೇ ಲೈವ್ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾಳೆ.

ಇದನ್ನೂ ಓದಿ: ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ

ಅನೈತಿಕ ಸಂಬಂಧವೇ ಮುಳುವಾಯ್ತಾ?

ಇನ್ನೂ ಗಂಡ ಇಲ್ಲದ ಮುನ್ನಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದಳು. ಮೆಹಂದಿ ಹಾಕೋದು ಸೇರಿದಂತೆ ಮೇಕಪ್​ ಸಹ ಮಾಡುತ್ತಿದ್ದಳು. ಹೀಗಿರುವಾಗ ಮುನ್ನಿ ಎರಡನೇ ಮದುವೆ ಮಾಡಲು ಮನೆಯಲ್ಲಿ ಸಿದ್ಧತೆ ನಡೆದಿತ್ತು. ಆದ್ರೆ, ಶೆಕ್ಷಾವಲಿ ಜೊತೆಗೆ ಇರೋ ಸಂಬಂಧ ಮುಳುವಾಗಿ ಸಾಯುವ ಹಂತಕ್ಕೆ ಬಂದಿದೆ. ನಿನ್ನೆ (ಡಿಸೆಂಬರ್ 21) ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮುನ್ನಿ ನೇಣಿಗೆ ಶರಣಾಗಿದ್ದಾಳೆ. ವಿಷಯ ತಿಳಿಯುತ್ತಲೇ ಗಾಂಧಿ ನಗರ ಠಾಣೆಗೆ ಅಗಮಿಸಿದ ಶಾಸಕ ಭರತ್ ರೆಡ್ಡಿ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.

ಅಣ್ಣನಾಗಬೇಕಿದ್ದವನ ಜತೆ ಸಂಬಂಧ

ಇನ್ನು ಶೇಕ್ಷಾವಲ್ಲಿ ಸಂಬಂಧದಲ್ಲಿ  ಮೃತಳ ಅಣ್ಣನಾಗುತ್ತಾನೆ ಎನ್ನುವ ಮಾಹಿತಿಯನ್ನ ಮುನ್ನಿ ಕುಟುಂಬಸ್ಥರು ತಿಳಿಸಿದ್ದಾರೆ. ಹೀಗಾಗಿ ಅನೈತಿಕ ಸಂಬಂಧ ಒಳ್ಳೆದಲ್ಲ ಅಂತ ಹಲವು ಬಾರಿ ಕುಟುಂಬಸ್ಥರು ಇಬ್ಬರಿಗೂ ತಿಳಿ ಹೇಳಿದ್ದರಂತೆ. ಆದ್ರೆ ಇಬ್ಬರ ನಡುವೆ ನಿನ್ನೆ ಏನಾಗಿದೊಯೋ ಏನು ಮುನ್ನಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಈ ಸಂಬಂಧದಲ್ಲಿ ಅಣ್ಣನಾಗಬೇಕಿದ್ದವನ ಕಿರುಕುಳಕ್ಕೆ ಬೇಸತ್ತು ಮುನ್ನಿ ಆತ್ಮಹತ್ಯೆ ಮಾಡ್ಕೊಂಡಿದ್ದಾಳೆಂದು ಕುಟುಂಬದವರ ಆರೋಪಿವಾಗಿದೆ. ಸದ್ಯ ಬಳ್ಳಾರಿಯ ಗಾಂಧಿನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಬಳಿಕವೇ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿಯಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ – Kannada News | Good News for Yellow Line Metro Passengers: Sixth Train to Begin Operations from December 23

ಬೆಂಗಳೂರು, ಡಿಸೆಂಬರ್​ 22: ನಾಳೆಯಿಂದ ಅಂದರೆ ಡಿಸೆಂಬರ್ 23ರಿಂದ 6ನೇ ಹೊಸ ಮೆಟ್ರೋ (Namma Metro) ರೈಲು ಟ್ರ್ಯಾಕಿಗಿಳಿಯಲಿದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್​ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಆರನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಹಾಗಾಗಿ ಹೆಚ್ಚು ಹೊತ್ತು ರೈಲಿಗಾಗಿ ಕಾಯುವಿಕೆಗೆ ಬ್ರೇಕ್​​ ಬೀಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ (BMRCL)​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಹಳದಿ ಮಾರ್ಗದಲ್ಲಿ 6ನೇ ಮೆಟ್ರೋ ರೈಲನ್ನು ಡಿಸೆಂಬರ್ 23ರಿಂದ (ಮಂಗಳವಾರ) ಪ್ರಯಾಣಿಕರ ಸೇವೆಗೆ ಪ್ರಾರಂಭಿಸಲಾಗುತ್ತಿದೆ. ಈ ರೈಲಿನ ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಜನದಟ್ಟನೆಯ ಅವಧಿಯಲ್ಲಿ ಮೆಟ್ರೋ ಸೇವೆಗಳು ಪ್ರಸ್ತುತ ಇರುವ 15 ನಿಮಿಷಗಳ ಅಂತರದ ಬದಲು 13 ನಿಮಿಷಗಳ ಅವಧಿಯಲ್ಲಿ ಸಂಚರಿಸಲಿವೆ. ಭಾನುವಾರದಂದು ಪೀಕ್ ಅವಧಿಯ ಸೇವಾ ಅವಧಿ 15 ನಿಮಿಷ ಇರಲಿದೆ.

ನಮ್ಮ ಮೆಟ್ರೋ ಟ್ವೀಟ್​​​

ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಮೊದಲ ಹಾಗೂ ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಮೆಟ್ರೋ ಸೇವೆಗಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್​ಸಿಎಲ್​​ ಕೋರಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಇತ್ತೀಚೆಗೆ ನವೆಂಬರ್ 18 ರಂದು ಕೊಲ್ಕತ್ತಾದ ಟಿಟಾಗರ್​​ನಿಂದ ಹೊರಟು ಆರನೇ ಡ್ರೈವರ್ ಲೆಸ್ ಮೆಟ್ರೋ ರೈಲು ಸೆಟ್​​ ಡಿಸೆಂಬರ್​ 3ರಂದು ಸಂಜೆ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಬಂದು ತಲುಪಿತ್ತು. ಈ ಹೊಸ ರೈಲು ಸೇರ್ಪಡೆಯಿಂದ ರೈಲುಗಳ ನಡುವಿನ ಓಡಾಟದ ಸಮಯದಲ್ಲಿ ಇಳಿಕೆಯಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 8:12 pm, Mon, 22 December 25

Source link

ಕಳೆದ ವರ್ಷ ಈ ದೇಶದಲ್ಲಿ ಚಿಕಿತ್ಸೆಗಾಗಿ ಕಾಯುತ್ತಿರುವಾಗಲೇ ಪ್ರಾಣ ಬಿಟ್ಟಿದ್ದಾರೆ 23,746 ರೋಗಿಗಳು! – Kannada News | More than 23 thousand Patients died waiting for medical treatment in the country in Last year

ನವದೆಹಲಿ, ಡಿಸೆಂಬರ್ 22: ಹಿಂದೆಲ್ಲ ಆಸ್ಪತ್ರೆಯ (Hospital) ಮೆಟ್ಟಿಲನ್ನೂ ಹತ್ತದೇ ಆರೋಗ್ಯಯುತವಾಗಿಯೇ ಆಯಸ್ಸನ್ನು ಕಳೆದು ಪ್ರಾಣ ಬಿಟ್ಟವರ ಸಂಖ್ಯೆಯೇ ಹೆಚ್ಚಿತ್ತು. ಆದರೆ, ಇಂದಿನ ಕಾಲದಲ್ಲಿ ಜೀವನಶೈಲಿ, ಕೆಲಸದೊತ್ತಡ, ಆಹಾರದ ಬದಲಾವಣೆ, ರಾಸಾಯನಿಕಗಳ ಪ್ರಭಾವ, ಹವಾಮಾನ ಸಮಸ್ಯೆಗಳು ಹೀಗೆ ನಾನಾ ಕಾರಣಗಳಿಂದ ಮನುಷ್ಯನ ಆಯಸ್ಸೂ ಕಡಿಮೆಯಾಗುತ್ತಿದೆ, ಅನಾರೋಗ್ಯವೂ ಹೆಚ್ಚಾಗುತ್ತಿದೆ. ಆರೋಗ್ಯ ಕೈಕೊಟ್ಟಾಗ ಆಸ್ಪತ್ರೆಗೆ ಹೋಗಲು ಸರಿಯಾದ ಮೂಲಸೌಕರ್ಯಗಳು ಇಲ್ಲದೆ ಭಾರತದಲ್ಲಿ ಅನೇಕ ಹಳ್ಳಿಗಳ ಜನರು ಒದ್ದಾಡುತ್ತಾರೆ. ಇನ್ನು ಕೆಲವು ಕಡೆ ಆಸ್ಪತ್ರೆಯಿದ್ದರೂ ವೈದ್ಯರಿಲ್ಲದ ಗೋಳಾಟ. ಇದೆಲ್ಲದರಿಂದ ಪ್ರಾಣ ಕಳೆದುಕೊಂಡ ರೋಗಗಳ ಸಂಖ್ಯೆಯೂ ಕಡಿಮೆಯೇನಿಲ್ಲ. ಆದರೆ, ಕಳೆದ ವರ್ಷ ವೈದ್ಯಕೀಯ ಚಿಕಿತ್ಸೆಗಾಗಿ ಕಾಯುತ್ತಲೇ ಪ್ರಾಣ ಕಳೆದುಕೊಂಡವರ ಸಂಖ್ಯೆ ಜಗತ್ತಿನ ಈ ಮುಂದುವರೆದ ದೇಶದಲ್ಲಿ 23 ಸಾವಿರವಂತೆ! ಯಾವುದು ಆ ದೇಶ? ಇಲ್ಲಿದೆ ಕುತೂಹಲಕಾರಿ ಮತ್ತು ಆತಂಕಕಾರಿ ಮಾಹಿತಿ.

ಈ ರೀತಿಯ ಘಟನೆ ನಡೆದಿರುವುದು ಕೆನಡಾದಲ್ಲಿ. ಸಾರ್ವಜನಿಕ ನೀತಿ ಚಿಂತಕರ ಚಾವಡಿ SecondStreet.orgನ ವರದಿಯು ಈ ಆಘಾತಕಾರಿ ವಿಷಯವನ್ನು ಬಹಿರಂಗಪಡಿಸಿದೆ. ಕೆನಡಾದಲ್ಲಿ ಏಪ್ರಿಲ್ 2024 ಮತ್ತು ಮಾರ್ಚ್ 2025ರ ನಡುವೆ ಶಸ್ತ್ರಚಿಕಿತ್ಸೆಗಳು ಅಥವಾ ರೋಗನಿರ್ಣಯ ಕಾರ್ಯವಿಧಾನಗಳಿಗಾಗಿ ಕಾಯುತ್ತಿರುವಾಗಲೇ ಕೆನಡಾದಲ್ಲಿ ಕನಿಷ್ಠ 23,746 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ವರದಿ ಬಹಿರಂಗಪಡಿಸಿದೆ. ಈ ಅಂಕಿ ಅಂಶವು ಕೆನಡಾದ ಆರೋಗ್ಯ ವ್ಯವಸ್ಥೆಯ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟುಹಾಕಿದೆ.

ಈ ಅಂಕಿ-ಅಂಶಗಳು ಹಿಂದಿನ ವರ್ಷಕ್ಕಿಂತ ಶೇ.3ರಷ್ಟು ಹೆಚ್ಚಾಗಿದೆ. ಇದರಿಂದ 2018ರಿಂದ ವರದಿಯಾದ ರೋಗಿಗಳ ಒಟ್ಟು ಕಾಯುವಿಕೆ ಪಟ್ಟಿಯ ಸಾವುಗಳ ಸಂಖ್ಯೆ 1,00,000ಕ್ಕಿಂತ ಹೆಚ್ಚಾಗಿದೆ. ಈ ಸಂಶೋಧನೆಗಳು 40ಕ್ಕೂ ಹೆಚ್ಚು ಪ್ರಾಂತೀಯ ಮತ್ತು ಪ್ರಾದೇಶಿಕ ಆರೋಗ್ಯ ಸಂಸ್ಥೆಗಳಿಗೆ ನೀಡಲಾದ ಮಾಹಿತಿ ಸ್ವಾತಂತ್ರ್ಯ (FOI) ವಿನಂತಿಗಳನ್ನು ಆಧರಿಸಿವೆ ಎಂದು ಸಂಸ್ಥೆ ಹೇಳಿದೆ.

ಇದನ್ನೂ ಓದಿ: ನೀವು ಕೂಡ ಮುಖದವರೆಗೂ ಬ್ಲಾಂಕೆಟ್ ಹೊದ್ದು ಮಲಗ್ತೀರಾ ಈ ಅಭ್ಯಾಸ ಎಷ್ಟು ಡೇಂಜರ್ ನೋಡಿ!

“ಸರ್ಕಾರಗಳು ನಿಯಮಿತವಾಗಿ ರೆಸ್ಟೋರೆಂಟ್‌ಗಳನ್ನು ಪರಿಶೀಲಿಸುತ್ತವೆ ಮತ್ತು ಪೇಪರ್ ಟವಲ್ ಹೋಲ್ಡರ್ ಹಾಕದಿರುವಂತಹ ಸಣ್ಣ ಸಮಸ್ಯೆ ಇದ್ದರೆ ಅದನ್ನೂ ಸಾರ್ವಜನಿಕವಾಗಿ ವರದಿ ಮಾಡುತ್ತವೆ. ಆದರೆ, ಯಾವುದೇ ಸರ್ಕಾರವು ಕಾಯುವ ಪಟ್ಟಿಯಲ್ಲಿರುವಾಗಲೇ ಸಾಯುತ್ತಿರುವ ರೋಗಿಗಳ ಬಗ್ಗೆ ಸಾರ್ವಜನಿಕವಾಗಿ ವರದಿ ಮಾಡುವುದಿಲ್ಲ. ಇದು ಸರ್ಕಾರ ಬೇಕೆಂದೇ ಮುಚ್ಚಿಡುತ್ತಿರುವ ಸತ್ಯವಾಗಿದೆ” ಎಂದು SecondStreet.org ವರದಿ ಮಾಡಿದೆ.

ಇದಕ್ಕೆ ಹಲವು ಉದಾಹರಣೆಗಳನ್ನೂ ವರದಿ ನೀಡಿದೆ. ಡೆಬ್ಬಿ ಫ್ಯೂಸ್ಟರ್‌ ಎಂಬ ಕೆನಡಿಯನ್ ಮಹಿಳೆ 3 ಮಕ್ಕಳ ತಾಯಿಯಾಗಿದ್ದು, ಜುಲೈ 2024ರಲ್ಲಿ ಅವರಿಗೆ 3 ವಾರಗಳಲ್ಲಿ ಹೃದಯದ ಆಪರೇಷನ್ ಮಾಡಿಸಬೇಕು ಎಂದು ಹೇಳಲಾಗಿತ್ತು. ಅವರು 2 ತಿಂಗಳಿಗಿಂತ ಹೆಚ್ಚು ಕಾಲ ತಮ್ಮ ಆಪರೇಷನ್​​ನ ಸಮಯ ನಿಗದಿಗಾಗಿ ಕಾಯುತ್ತಲೇ ಇದ್ದರು. ಕೊನೆಗೆ ಅವರು ಆಪರೇಷನ್ ಆಗದೆ ನಿಧನರಾದರು. ಈ ರೀತಿ ಕಾಯುತ್ತಿರುವಾಗಲೇ ನಿಧನರಾದವರಲ್ಲಿ ಹೃದಯ ಸಂಬಂಧಿ ಆರೋಗ್ಯ ಸಮಸ್ಯೆ ಇರುವವರೇ ಹೆಚ್ಚು.

ಕೆನಡಾದ ಒಂಟಾರಿಯೊದಲ್ಲಿ ಅತಿ ಹೆಚ್ಚು ಕಾಯುವಿಕೆಯಿಂದ ಉಂಟಾದ ಸಾವುಗಳು ದಾಖಲಾಗಿವೆ. ಕ್ವಿಬೆಕ್ 6,290ರೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, BC 4,620 ರೊಂದಿಗೆ ನಂತರದ ಸ್ಥಾನದಲ್ಲಿದೆ. ನೋವಾ ಸ್ಕಾಟಿಯಾ (727), ನ್ಯೂಫೌಂಡ್‌ಲ್ಯಾಂಡ್ ಮತ್ತು ಲ್ಯಾಬ್ರಡಾರ್ (542), ಸಾಸ್ಕಾಚೆವಾನ್ (419), ಪ್ರಿನ್ಸ್ ಎಡ್ವರ್ಡ್ ದ್ವೀಪ (178) ಮತ್ತು ನ್ಯೂ ಬ್ರನ್ಸ್‌ವಿಕ್ (121) ಸೇರಿದಂತೆ ಸಣ್ಣ ಪ್ರಾಂತ್ಯಗಳು ಸಹ ಈ ರೀತಿಯ ಹಲವಾರು ಸಾವುಗಳನ್ನು ಕಂಡಿವೆ.

ಇದನ್ನೂ ಓದಿ: ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ಹೃದಯ ಸಮಸ್ಯೆ, ಕ್ಯಾನ್ಸರ್, ಸೊಂಟ ಮತ್ತು ಮೊಣಕಾಲು ಶಸ್ತ್ರಚಿಕಿತ್ಸೆಗಳು, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಳು ಮತ್ತು MRIಗಳಂತಹ ಅವರ ಜೀವನದ ಗುಣಮಟ್ಟವನ್ನು ಸುಧಾರಿಸಬಹುದಾದ ಕಾರ್ಯವಿಧಾನಗಳಿಗಾಗಿ ಕಾಯುತ್ತಿರುವ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ. ಇವುಗಳಲ್ಲಿ ಕೆಲವು ಸಾವುಗಳಿಗೆ ಸಂಬಂಧಿಸಿದ ಕಾಯುವ ಸಮಯ ಒಂದು ವಾರದಿಂದ ಸುಮಾರು 9 ವರ್ಷಗಳವರೆಗೂ ಇದೆ!

ಕೆನಡಾವು ಇತರ ಅನೇಕ ದೇಶಗಳಿಗಿಂತ ಕಡಿಮೆ ವೈದ್ಯರು, ಆಸ್ಪತ್ರೆ ಹಾಸಿಗೆಗಳು ಮತ್ತು MRI ಯಂತ್ರಗಳನ್ನು ಹೊಂದಿದೆ. ಇದರಿಂದಲೇ ರೋಗಿಗಳು ದೀರ್ಘವಾದ ಕಾಯುವ ಸಮಯವನ್ನು ಎದುರಿಸಬೇಕಾಗುತ್ತದೆ. ಯಾವುದೇ ತ್ವರಿತ ಆಪರೇಷನ್ ಸಿಗುವುದು ಕೆನಡಾದಲ್ಲಿ ಅತ್ಯಪರೂಪವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಕನ್ನಡಿಗ ಕೃಷ್ಣಪ್ಪ ಗೌತಮ್ – Kannada News | Krishnappa Gowtham Retires: Karnataka All Rounder Ends 14 Year Cricket Journey

2025 ರ ವರ್ಷ ಅಂತ್ಯವಾಗುತ್ತಿರುವ ಬೆನ್ನಲ್ಲೇ ಕರ್ನಾಟಕ ಕ್ರಿಕೆಟ್‌ಗೆ ಆಘಾತ ಎದುರಾಗಿದೆ. ರಾಜ್ಯದ ಖ್ಯಾತ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ತಮ್ಮ 37 ನೇ ವಯಸ್ಸಿನಲ್ಲಿ ಎಲ್ಲಾ ರೀತಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಈ ಮೂಲಕ ಗೌತಮ್ ತಮ್ಮ 14 ವರ್ಷಗಳ ಕ್ರಿಕೆಟ್ ಬದುಕಿಗೆ ಫುಲ್​ಸ್ಟಾಪ್ ಇಟ್ಟಿದ್ದಾರೆ. ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ ರಾಜ್ಯ ತಂಡವನ್ನು ಹಲವು ಗೆಲುವುಗಳಿಗೆ ಮುನ್ನಡೆಸಿದ್ದ ಗೌತಮ್​ಗೆ ರಾಷ್ಟ್ರೀಯ ತಂಡದಲ್ಲಿ ಆಡಲು ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಟೀಂ ಇಂಡಿಯಾ ಪರ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿರುವ ಗೌತಮ್ ಐಪಿಎಲ್‌ನಲ್ಲಿ ಮೂರು ಸ್ಟಾರ್ ತಂಡಗಳನ್ನು ಪ್ರತಿನಿಧಿಸಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ನಿವೃತ್ತಿ ಘೋಷಿಸಿದ ಕೃಷ್ಣಪ್ಪ ಗೌತಮ್

ಆಫ್​ ಸ್ಪಿನ್ನರ್ ಹಾಗೂ ಕೆಳಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದ ಕರ್ನಾಟಕದ ಸ್ಟಾರ್ ಆಲ್‌ರೌಂಡರ್ ಮತ್ತು ಮಾಜಿ ಐಪಿಎಲ್ ಆಟಗಾರ ಕೃಷ್ಣಪ್ಪ ಗೌತಮ್ ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ದೇಶೀಯ ಕ್ರಿಕೆಟ್‌ ಜೊತೆಗೆ ಐಪಿಎಲ್‌ನಲ್ಲಿ ಅನೇಕ ಸ್ಮರಣೀಯ ಪ್ರದರ್ಶನಗಳನ್ನು ನೀಡಿದ್ದ ಗೌತಮ್ ಅವರ ಕ್ರಿಕೆಟ್ ಪ್ರಯಾಣವು 2012 ರ ರಣಜಿ ಟ್ರೋಫಿಯೊಂದಿಗೆ ಪ್ರಾರಂಭವಾಯಿತು, ಉತ್ತರ ಪ್ರದೇಶ ವಿರುದ್ಧದ ತಮ್ಮ ಚೊಚ್ಚಲ ಪಂದ್ಯವನ್ನಾಡಿದ್ದ ಗೌತಮ್, ಸುರೇಶ್ ರೈನಾ ಮತ್ತು ಭುವನೇಶ್ವರ್ ಕುಮಾರ್‌ರಂತಹ ಸ್ಟಾರ್ ಆಟಗಾರರನ್ನು ಔಟ್ ಮಾಡಿದ್ದರು.

ಗೌತಮ್ ವೃತ್ತಿಜೀವನ

2016-17ರ ರಣಜಿ ಟ್ರೋಫಿ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಗೌತಮ್ ಆ ಆವೃತ್ತಿಯಲ್ಲಿ ಆಡಿದ್ದ ಎಂಟು ಪಂದ್ಯಗಳಲ್ಲಿ 27 ವಿಕೆಟ್‌ಗಳನ್ನು ಕಬಳಿಸಿದ್ದರು. ಹಾಗೆಯೇ ಅದೇ ಆವೃತ್ತಿಯಲ್ಲಿ ಮೈಸೂರಿನಲ್ಲಿ ನಡೆದ ಅಸ್ಸಾಂ ವಿರುದ್ಧ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯದಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಪ್ರಥಮ ದರ್ಜೆ ಮತ್ತು ಲಿಸ್ಟ್ ಎ ಪಂದ್ಯಗಳನ್ನು ಸೇರಿದಂತೆ ಒಟ್ಟು 320 ಕ್ಕೂ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿರುವ ಗೌತಮ್ ಬ್ಯಾಟಿಂಗ್​ನಲ್ಲಿ ಹಲವಾರು ಉಪಯುಕ್ತ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. 2023 ರವರೆಗೆ ಕರ್ನಾಟಕ ತಂಡದ ಪ್ರಮುಖ ಸದಸ್ಯರಾಗಿದ್ದ ಗೌತಮ್, 2021 ರ ಶ್ರೀಲಂಕಾ ಪ್ರವಾಸದಲ್ಲಿ ಭಾರತದ ಪರ ಏಕೈಕ ಏಕದಿನ ಪಂದ್ಯವನ್ನಾಡಿ ವಿಕೆಟ್ ಕೂಡ ಪಡೆದಿದ್ದರು. ಆದಾಗ್ಯೂ, ಆ ನಂತರ ಅವರು ಟೀಂ ಇಂಡಿಯಾ ಪರ ಎಂದಿಗೂ ಆಡಲಿಲ್ಲ. ಕೃಷ್ಣಪ್ಪ ಗೌತಮ್ ಭಾರತ ತಂಡದಲ್ಲಿ ಆಡಿದ್ದು ಏಕೈಕ ಪಂದ್ಯವಾದರೂ, ಭಾರತ ಎ ತಂಡದ ಪರ ಸಾಕಷ್ಟು ಪಂದ್ಯಗಳನ್ನು ಆಡಿದ್ದಾರೆ. ಈ ತಂಡದ ಪರ ಅವರು ನ್ಯೂಜಿಲೆಂಡ್ ಎ, ವೆಸ್ಟ್ ಇಂಡೀಸ್ ಎ ಮತ್ತು ಆಸ್ಟ್ರೇಲಿಯಾ ಎ ತಂಡಗಳ ವಿರುದ್ಧ ಹಲವಾರು ಬಾರಿ ಆಡಿದ್ದರು.

ಐಪಿಎಲ್​ನಲ್ಲಿ ಅಧಿಕ ಬೆಲೆ

ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಅನ್‌ಕ್ಯಾಪ್ಡ್ ಆಟಗಾರ ಎನಿಸಿಕೊಂಡಿದ್ದ ಕೃಷ್ಣಪ್ಪ ಗೌತಮ್ ಅವರನ್ನು ಐಪಿಎಲ್ 2021 ರ ಹರಾಜಿನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ 9.25 ಕೋಟಿ ನೀಡಿ ಖರೀದಿಸಿತ್ತು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜೊತೆಗೆ ರಾಜಸ್ಥಾನ ರಾಯಲ್ಸ್, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ಪ್ರತಿನಿಧಿಸಿದ್ದರು. ಇನ್ನು ಕರ್ನಾಟಕ ಪ್ರೀಮಿಯರ್ ಲೀಗ್‌ನ ಒಂದೇ ಪಂದ್ಯದಲ್ಲಿ 134 ರನ್ ಗಳಿಸಿ 8 ವಿಕೆಟ್‌ಗಳನ್ನು ಪಡೆದ ಅಪರೂಪದ ದಾಖಲೆಯನ್ನು ಗೌತಮ್ ಹೊಂದಿದ್ದಾರೆ. ಇದು ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಆಲ್‌ರೌಂಡ್ ಪ್ರದರ್ಶನಗಳಲ್ಲಿ ಒಂದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version