Headlines

ಕರಿಕೋಟ್ ಧರಿಸಿ ಕಣ್ ಕುಕ್ಕಿದ ಮಮತಾ; ಬಂಗಾಳ ಹಿಂಸಾಚಾರ ಪ್ರಕರಣದಲ್ಲಿ ಕೋರ್ಟ್​ನಲ್ಲಿ ದೀದಿ ವಕೀಲಿಕೆ – Kannada News | Mamata Banerjee Appears as Lawyer in Calcutta HC for West Bengal Post Election Violence PIL

ಕೋಲ್ಕತ್ತಾ, ಮೇ 14: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (TMC) ಅಧಿನಾಯಕಿ ಮಮತಾ ಬ್ಯಾನರ್ಜಿ (Mamata Banerjee) ಅವರು ಇಂದು ಗುರುವಾರ ವಕೀಲರ ಕಪ್ಪು ಕೋಟ್ ಧರಿಸಿ ಮೊದಲ ಬಾರಿಗೆ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾಗಿ ಎಲ್ಲರ ಗಮನ ಸೆಳೆದರು. ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ಪರವಾಗಿ ವಾದ ಮಂಡಿಸಲು ಅವರು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ನ್ಯಾಯಾಲಯದಲ್ಲಿ ತಮ್ಮ ವಾದ ಮಂಡಿಸಿದ ಮಮತಾ ಬ್ಯಾನರ್ಜಿ, “ನಾನು ಇಲ್ಲಿ…

Read More

ಸಿಎಂ ವಿಜಯ್ ಅನುಮತಿ ನೀಡಿದ್ದರೂ ತ್ರಿಶಾ ನಟನೆಯ ‘ಕರುಪ್ಪು’ ಚಿತ್ರಕ್ಕೆ ತಪ್ಪಲಿಲ್ಲ ತೊಂದರೆ – Kannada News | Suriya Trisha starrer Karuppu early shows cancelled despite CM Vijay permission

ಕಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ಕರುಪ್ಪು’ (Karuppu) ಇಂದು (ಮೇ 14) ತೆರೆಕಂಡಿದೆ. ಸೂರ್ಯ ಮತ್ತು ತ್ರಿಶಾ ಕೃಷ್ಣನ್ (Suriya Trisha) ನಟನೆಯ ಈ ಥ್ರಿಲ್ಲರ್ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲವಿತ್ತು. ಆದರೆ, ಸಿನಿಮಾ ಬಿಡುಗಡೆಯಾದ ಕೆಲವೇ ಗಂಟೆಗಳ ಮೊದಲು ಚಿತ್ರತಂಡ ತೆಗೆದುಕೊಂಡ ನಿರ್ಧಾರವೊಂದು ಅಭಿಮಾನಿಗಳಲ್ಲಿ ತೀವ್ರ ನಿರಾಶೆ ಮೂಡಿಸಿದೆ. ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ (CM Vijay) ಅವರು ಈ ಚಿತ್ರದ ಮುಂಜಾನೆಯ ಪ್ರದರ್ಶನಕ್ಕೆ ವಿಶೇಷ ಅನುಮತಿ ನೀಡಿದ್ದರೂ ಸಹ, ಕೊನೆಯ ಕ್ಷಣದಲ್ಲಿ ಬೆಳಿಗ್ಗೆ 9…

Read More

ಮೇ 30ರಿಂದ 3ನೇ ಹಂತದ SIR: ಕರ್ನಾಟಕ ಸೇರಿ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ – Kannada News | Election Commission of India Announces SIR Phase 3 in 16 States Including Karnataka and 3 Union Territories

ನವದೆಹಲಿ, ಮೇ 14: ಕರ್ನಾಟಕ ಸೇರಿದಂತೆ 16 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸಲು ಚುನಾವಣಾ ಆಯೋಗ ಆದೇಶಿಸಿದೆ. ದೇಶದಲ್ಲಿ 3ನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮೇ 30ರಿಂದ ಆರಂಭವಾಗಲಿದ್ದು, ಸುಮಾರು 3.94 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳು ನೇಮಿಸಿರುವ 3.42 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳ ಸಹಾಯದಿಂದ 36.73 ಕೋಟಿ ಮತದಾರರನ್ನು ಮನೆಮನೆಗೆ ತೆರಳಿ ಪರಿಶೀಲಿಸುವ ಕಾರ್ಯ ನಡೆಯಲಿದೆ….

Read More

ಕೇರಳಂ ಸಿಎಂ: ರಾಹುಲ್, ಸೋನಿಯಾ ಗಾಂಧಿ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣಗಳೇನು? – Kannada News | Kerala CM: reasons why Congress picked VD Satheesan over KC Venugopal

ತಿರುವನಂತಪುರ, (ಮೇ 14): ಕೇರಳಂ ಮುಖ್ಯಮಂತ್ರಿ (Kerala CM) ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿದ್ದ ಆಂತರಿಕ ಬೆಳವಣಿಗೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದು,  ಅಂತಿಮವಾಗಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ (VD Satheesan) ಅವರನ್ನ ಆಯ್ಕೆ ಮಾಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ವಿ.ಡಿ ಸತೀಶನ್ ಮತ್ತು ರಮೇಶ್ ಚೆನ್ನಿತ್ತಲ ಹೆಸರುಗಳು ಪ್ರಮುಖವಾಗಿ ಸಿಎಂ ರೇಸ್​​ನಲ್ಲಿದ್ದವು. ಆದ್ರೆ, ಹೈಕಮಾಂಡ್ ನಾನಾ ಲೆಕ್ಕಾಚಾರಗಳನ್ನು ಹಾಕಿ ಅಂತಿಮವಾಗಿ ವಿ.ಡಿ.ಸತೀಶನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ….

Read More

‘ಪತಿಯನ್ನು ಮತ್ತೆ ನೋಡುವವರೆಗೆ ನನ್ನ ಆತ್ಮಕ್ಕೆ ಶಾಂತಿ ಇಲ್ಲ’; ದಿಲೀಪ್ ರಾಜ್ ಪತ್ನಿಯ ಭಾವುಕ ಪೋಸ್ಟ್ – Kannada News | Dileep Raj Demise: Wife Sreevidya’s Emotional Tribute Post, No Peace Until I See Him Again

ನಟ ಮತ್ತು ನಿರ್ಮಾಪಕ ದಿಲೀಪ್ ರಾಜ್ ಅವರ ಅಕಾಲಿಕ ನಿಧನ ವಾರ್ತೆ ಅಭಿಮಾನಿಗಳಿಗೆ ಶಾಕ್ ನೀಡಿದೆ. ಪತಿಯ ಜೊತೆ ಕಳೆದ 25 ವರ್ಷಗಳಿಂದ ಸಂಸಾರ ನಡೆಸಿಕೊಂಡು ಬರುತ್ತಿದ್ದ ಪತ್ನಿ ಶ್ರೀವಿದ್ಯಾ ಅವರ ಮನಸ್ಸು ಒಡೆದುಹೋಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಪತಿಯನ್ನು ಕಳೆದುಕೊಂಡ ನೋವಿನಲ್ಲೂ ಬೆಂಬಲವಾಗಿ ನಿಂತವರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ದಿಲೀಪ್ ನೆನಪಿನ ಬಗ್ಗೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಪತ್ನಿ ಶ್ರೀವಿದ್ಯಾ ಅವರ ಪೋಸ್ಟ್‌ನಲ್ಲಿ ಏನಿದೆ? ‘ನನಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಚಿರಋಣಿಯಾಗಿದ್ದೇನೆ….

Read More

ಹುಬ್ಬಳ್ಳಿಯಲ್ಲಿ ಶುರುವಾಯ್ತು ಹಿಜಾಬ್ ಕಿಚ್ಚು: ಮುತಾಲಿಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ – Kannada News | Hijab Row Resurfaces: Hubballi Protest, Muthalik Urges Saffron Shawls in Schools

ಪ್ರಮೋದ್​​ ಮುತಾಲಿಕ್​ ನೇತೃತ್ವದಲ್ಲಿ ಪ್ರತಿಭಟನೆ​ Image Credit source: tv9 kannada ಹುಬ್ಬಳ್ಳಿ, ಮೇ 14: ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಿಜಾಬ್ ವಿವಾದ (Hijab Controversy) ದೊಡ್ಡ ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಹಿಜಾಬ್ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಸರ್ಕಾರ ಅವಕಾಶ ನೀಡಿರುವುದು, ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಸರ್ಕಾರದ ನಿರ್ಧಾರವನ್ನು ಖಂಡಿಸಿ ಇಂದು ಹುಬ್ಬಳ್ಳಿಯಲ್ಲಿ (Hubballi) ಶ್ರೀರಾಮಸೇನೆಯಿಂದ ಪ್ರತಿಭಟನೆ ಮಾಡಲಾಗಿದೆ. ವಿದ್ಯಾರ್ಥಿಗಳು ಶಾಲೆ,…

Read More

ತೈವಾನ್ ವಿಚಾರದಲ್ಲಿ ತಪ್ಪು ಮಾಡಿದರೆ ಅಮೆರಿಕ-ಚೀನಾ ಮಧ್ಯೆ ನೇರ ಸಂಘರ್ಷವಾದೀತು: ಷಿ ಜಿನ್​ಪಿಂಗ್ ಎಚ್ಚರಿಕೆ – Kannada News | Xi Warns Trump: Taiwan Issue Could Lead to “Very Dangerous Situation” for US China

ಷಿ ಜಿನ್​ಪಿಂಗ್ ಮತ್ತು ಡೊನಾಲ್ಡ್ ಟ್ರಂಪ್Image Credit source: AP ಬೀಜಿಂಗ್, ಮೇ 14: ತೈವಾನ್ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸದಿದ್ದರೆ ಚೀನಾ ಮತ್ತು ಅಮೆರಿಕ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ (US-China Bilateral relation) ಬಹಳ ಅಪಾಯಕಾರಿ ಪರಿಸ್ಥಿತಿಗೆ ತಳ್ಳಲ್ಪಡಬಹುದು ಎಂದು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ (Xi Jinping) ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಬೀಜಿಂಗ್‌ನಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಶೃಂಗಸಭೆಯಲ್ಲಿ ಉಭಯ ನಾಯಕರ ಮಾತುಕತೆಯ ವೇಳೆ…

Read More

ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅನಾಹುತ: ಸುತ್ತಮುತ್ತ ಕವಿದ ದಟ್ಟ ಹೊಗೆ – Kannada News | Fire Breaks Out at Plastic Godown in Nayandahalli, Bengaluru

ಬೆಂಗಳೂರು, ಮೇ 14: ನಾಯಂಡಹಳ್ಳಿ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟ ಪ್ರಸಂಗ ನಡೆದಿದೆ. ವೃಷಭಾವತಿ ನದಿ ಪಕ್ಕದಲ್ಲಿರುವ ಈ ಗೋದಾಮಿನಲ್ಲಿ ಟನ್‌ಗಟ್ಟಲೆ ಸ್ಕ್ರಾಪ್ ಪ್ಲಾಸ್ಟಿಕ್, ಹಳೆಯ ಪೈಪ್‌ಗಳು ಹಾಗೂ ಇತರೆ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಲಾಗಿತ್ತು. ಇದು ಬೆಂಕಿ ಹರಡಲು ಮುಖ್ಯ ಕಾರಣವಾಗಿದೆ. ಪ್ಲಾಸ್ಟಿಕ್‌ನಿಂದಾಗಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ದಟ್ಟ ಹೊಗೆ ಇಡೀ ನಾಯಂಡಹಳ್ಳಿ ಪ್ರದೇಶವನ್ನು ಆವರಿಸಿತ್ತು. ಈ ಅಗ್ನಿ ಅನಾಹುತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ…

Read More

ಪ್ರಧಾನಿ ಮೋದಿ ರೀತಿ ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡುತ್ತಾರಾ ಸಿಎಂ? ಸಿದ್ದರಾಮಯ್ಯ ಹೇಳಿದ್ದೇನು ನೋಡಿ – Kannada News | CM Siddaramaiah on Reducing Convoy Vehicles: Permanent Solution Needed for Fuel Crisis, Not Temporary Measures

ಮೈಸೂರು, ಮೇ 14: ಇಂಧನ ಮಿತ ವ್ಯಯಕ್ಕೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಖುದ್ದು ತಾವೇ ಬೆಂಗಾವಲು ಪಡೆ ವಾಹನಗಳನ್ನು ಕಡಿಮೆ ಮಾಡಿದ್ದಾರೆ. ಅದರಂತೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಕೂಡ ಬೆಂಗಾವಲು ಪಡೆಗಳ ವಾಹನ ಕಡಿಮೆ ಮಾಡುತ್ತಾರಾ? ಈ ಪ್ರಶ್ನೆಗೆ ಖುದ್ದು ಸಿಎಂ ಅವರೇ ಉತ್ತರಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ಕೈಗೊಂಡಿರುವ ನಿರ್ಧಾರ ತಾತ್ಕಾಲಿಕ ಕ್ರಮವಷ್ಟೇ. ಅದರ ಬದಲು ಬೇರೆ ದೇಶಗಳೊಂದಿಗೆ ಸಮಾಲೋಚಿಸಿ ಇಂಧನ ಬಿಕ್ಕಟ್ಟು ಬಗೆಹರಿಸಲು ಶಾಶ್ವತ ಕ್ರಮ ಅಗತ್ಯ ಎಂದರು. ಕರ್ನಾಟಕದ…

Read More

Video: ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ; ವಿಡಿಯೋ ವೈರಲ್ – Kannada News | Viral Video: Burqa Woman’s Chili Powder Robbery Bid at Jewelry Store Caught on CCTV

ಬುರ್ಖಾ ಧರಿಸಿ ಗ್ರಾಹಕಿಯಂತೆ ಚಿನ್ನದ ಅಂಗಡಿಗೆ ನುಗ್ಗಿದ ಮಹಿಳೆಯೊಬ್ಬಳು, ಮಾಲೀಕ ಮತ್ತು ಸಿಬ್ಬಂದಿಯ ಕಣ್ಣಿಗೆ ಖಾರಪುಡಿ ಎರಚಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಆಭರಣಗಳನ್ನು ನೋಡುವ ನೆಪದಲ್ಲಿ ಹೊಂಚು ಹಾಕಿದ್ದ ಈ ಕಿರಾತಕಿ, ತನ್ನ ಬಳಿಯಿದ್ದ ಖಾರದಪುಡಿಯನ್ನು ಅವರ ಕಣ್ಣಿಗೆ ಎಸೆದು ಆಭರಣಗಳನ್ನು ಎಗರಿಸಲು ಯತ್ನಿಸಿದ್ದಾಳೆ. ಈ ಇಡೀ ದರೋಡೆ ಯತ್ನದ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಪೊಲೀಸರು ಸಿಸಿಟಿವಿ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ…

Read More