Video: ಆಟಿಕೆಯ ರೀತಿ ಹಾವಿನ ಜತೆ ಆಟವಾಡಿದ ಪೋರ

Video: ಆಟಿಕೆಯ ರೀತಿ ಹಾವಿನ ಜತೆ ಆಟವಾಡಿದ ಪೋರ

ದೊಡ್ಡವರೇ ಹಾವನ್ನು ನೋಡಿ ಭಯಪಡುತ್ತಾರೆ. ಆದರೆ ಪುಟ್ಟ ಬಾಲಕ ಆಟಿಕೆಯಂತೆ ಅದರೊಂದಿಗೆ ಆಟವಾಡಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿರುವ ಮಗು ತನ್ನ ಬರಿ ಕೈಗಳಿಂದಲೇ ಹಾವನ್ನು ಹಿಡಿಯುತ್ತದೆ, ಆದರೆ ಯಾವುದೇ ಭಯ ಇಲ್ಲ, ದೊಡ್ಡವರೂ ಅಕ್ಕಪಕ್ಕ ಇಲ್ಲ. ಕೆಲವರು ಮಗುವಿನ ಧೈರ್ಯವನ್ನು ಹೊಗಳುತ್ತಿದ್ದರೆ, ಇನ್ನೊಂದೆಡೆ ನೆಟ್ಟಿಗೆರು ಅದು ಅಪಾಯಕಾರಿ ಎಂದು ತಿಳಿದಿದ್ದರೂ ಹಾವಿನ ಪಕ್ಕ ಮಗುವನ್ನು ಬಿಟ್ಟ ಪೋಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಹಾವುಗಳು ಹೆಚ್ಚಿನ ಜನರು ದೂರವಿರಲು ಇಷ್ಟಪಡುವ ಜೀವಿ. ಅನೇಕ ಪ್ರಭೇದಗಳು ವಿಷಕಾರಿಯಾಗಿರುತ್ತವೆ, ಆದ್ದರಿಂದ ತಜ್ಞರು ಸರಿಯಾದ ಜ್ಞಾನ ಮತ್ತು ರಕ್ಷಣೆಯಿಲ್ಲದೆ ಹಾವಿನ ಬಳಿಗೆ ಹೋಗದಂತೆ ಸಲಹೆ ನೀಡುತ್ತಾರೆ. ಆದಾಗ್ಯೂ, ಈ ವೀಡಿಯೊದಲ್ಲಿ, ಮಗು ಹಾವಿನ ಪಕ್ಕದಲ್ಲಿ ತುಂಬಾ ಸುಲಭವಾಗಿ ಹಾವಿನ ಎದುರು ಕುಳಿತುಕೊಳ್ಳುತ್ತದೆ. ನಿಧಾನವಾಗಿ ಅದರೊಂದಿಗೆ ಆಟವಾಡಲು ಪ್ರಾರಂಭಿಸುತ್ತಾನೆ, ಮತ್ತು ನಂತರ ಇದ್ದಕ್ಕಿದ್ದಂತೆ, ತನ್ನ ಕೈಯಿಂದ ಹಾವಿನ ಮುಖವನ್ನು ಮುಟ್ಟಿ ಅದನ್ನು ಕೈಯಲ್ಲಿ ಹಿಡಿದುಕೊಳ್ಳುತ್ತಾನೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಜಕ್ಕೂರು ವಿಲ್ಲಾ ಗ್ಯಾಂಗ್ ರೇಪ್ ಕೇಸ್: ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು, ಮಾರ್ಚ್​ 10: ಜಕ್ಕೂರು ವಿಲ್ಲಾದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಅಮೃತಹಳ್ಳಿ ಪೊಲೀಸರು ಹಲವು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ. ಆರೋಪಿಗಳಾದ ಡಿಕ್ಸನ್ ಮತ್ತು ನಿಖಿಲ್ ಕಾಲೇಜು ಯುವತಿಯರನ್ನೇ ತಮ್ಮ ಗುರಿಯಾಗಿಸಿಕೊಂಡಿದ್ದರು. ಐಷಾರಾಮಿ ಹೋಟೆಲ್‌ಗಳಲ್ಲಿ ಸಭೆ ನಡೆಸಿ, ಯುವತಿಯರನ್ನು ಬಲೆಗೆ ಬೀಳಿಸಲು ಸಂಚು ರೂಪಿಸಿದ್ದರು. ಯುವತಿಯರನ್ನು ವಿಲ್ಲಾಗೆ ಕರೆತಂದು ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದರು. ಗೋವಾದಿಂದ ಎಕ್ಸ್‌ಟೆಸಿ ಮಾತ್ರೆಗಳನ್ನು ತರಿಸಿಕೊಂಡು, ಅವುಗಳನ್ನು ಯುವತಿಯರಿಗೆ ನೀಡಿ ಮತ್ತು ಬರುವಂತೆ ಮಾಡುತ್ತಿದ್ದರು. ಅರೆ ಪ್ರಜ್ಞಾ ಸ್ಥಿತಿಯಲ್ಲಿದ್ದ ಯುವತಿಯರ ಮೇಲೆ ಈ ಗ್ಯಾಂಗ್ ಅತ್ಯಾಚಾರ ಎಸಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ನಿಖಿಲ್ ಈ ಗ್ಯಾಂಗ್‌ನ ಮಾಸ್ಟರ್ ಮೈಂಡ್ ಆಗಿದ್ದು, ಈ ಜಾಲದ ಹಿಂದೆ ಇನ್ನಷ್ಟು ವ್ಯಕ್ತಿಗಳಿರುವ ಶಂಕೆ ವ್ಯಕ್ತವಾಗಿದೆ. ಡ್ರಗ್ಸ್ ಪೂರೈಕೆದಾರರ ಪತ್ತೆಗಾಗಿ ಪೊಲೀಸರ ತಂಡ ಗೋವಾಕ್ಕೆ ತೆರಳಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಅಬ್ಬಾ ಇಷ್ಟೊಂದಾ! ಟೀಮ್ ಇಂಡಿಯಾಗೆ ಬಹುಮಾನ ಘೋಷಣೆ

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ. ಅದರಂತೆ ಟೀಮ್ ಇಂಡಿಯಾ ಬರೋಬ್ಬರಿ 131 ಕೋಟಿ ರೂ.ಗಳ ನಗದು ಬಹುಮಾನ ಪಡೆಯಲಿದ್ದಾರೆ.

ಇತ್ತ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಐಸಿಸಿ ಕಡೆಯಿಂದ ಸಿಕ್ಕಿರುವುದು 27.60 ಕೋಟಿ ರೂ. ಮಾತ್ರ. ಇದೀಗ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ಬೋರ್ಡ್ ದುಪ್ಪಟ್ಟು ಮೊತ್ತದ ಬಹುಮಾನ ಘೋಷಿಸಿ ಗಮನ ಸೆಳೆದಿದ್ದಾರೆ.

ಬಿಸಿಸಿಐ ಪ್ರಕಟಣೆ:

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ನ್ಯೂಝಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಪ್ರತಿಷ್ಠಿತ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಪ್ರಶಸ್ತಿ ಉಳಿಸಿಕೊಂಡ ಮೊದಲ ತಂಡವಾಗಿ ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ಈ ಮೂಲಕ ಮೂರನೇ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ.

ಈ ಐತಿಹಾಸಿಕ ಸಾಧನೆಗಾಗಿ ಮಂಡಳಿಯು ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಆಯ್ಕೆದಾರರನ್ನು ಮತ್ತೊಮ್ಮೆ ಅಭಿನಂದಿಸುತ್ತದೆ ಮತ್ತು ಭವಿಷ್ಯದಲ್ಲಿ ಅವರಿಗೆ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತದೆ.

ಇದನ್ನೂ ಓದಿ: ಪಾಕಿಸ್ತಾನ್ ಸೂಪರ್​ ಲೀಗ್​ಗೆ ‘ಇಂಧನದ ಕೊರತೆ’

ಅಲ್ಲದೆ ಟಿ20 ವಿಶ್ವಕಪ್‌ನಲ್ಲಿ ಜಯಗಳಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)  131 ಕೋಟಿ ರೂಪಾಯಿ ನಗದು ಬಹುಮಾನವನ್ನು ನೀಡಲಿದೆ ಎಂದು ಘೋಷಿಸಿದೆ.

ವಿಶ್ವಕಪ್ ವಿಜೇತ:

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ ಬಾರಿಸಿ ಆಲೌಟ್ ಆಯಿತು.

ಈ ಮೂಲಕ ಭಾರತ ತಂಡವು 96 ರನ್​ಗಳ ಅಮೋಘ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಈ ಚಾಂಪಿಯನ್ ತಂಡಕ್ಕೆ ಮತ್ತು ಸಿಬ್ಬಂದಿ ವರ್ಗಗಳಿಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ಬಹುಮಾನವನ್ನು ಘೋಷಿಸಿದ್ದಾರೆ.

 

Source link

ಗಿಲ್ಲಿಗೆ ಇಷ್ಟ ಆಯ್ತು ಈ ಸೀರಿಯಲ್ ಟೈಟಲ್ ಟ್ರ್ಯಾಕ್

ರಾಣಿ ಸೀರಿಯಲ್ ಮಾರ್ಚ್ 9ರಿಂದ ಪ್ರಸಾರ ಆರಂಭಿಸಿದೆ. ಈ ಧಾರಾವಾಹಿಯ ಹಾಡು ಗಮನ ಸೆಳೆಯುವ ರೀತಿಯಲ್ಲಿ ಇದೆ. ಈ ಹಾಡನ್ನು ಗಿಲ್ಲಿ ನಟ ಅವರು ಇಷ್ಟಪಟ್ಟಿದ್ದಾರೆ. ಅವರ ಹೊಸ ವಿಡಿಯೋ ವೈರಲ್ ಆಗಿದೆ. ಅವರು ಹಾಡನ್ನು ಯಾಕೆ ಇಷ್ಟಪಟ್ಟಿದ್ದೇನೆ ಎಂಬುದನ್ನು ವಿವರಿಸಿದ್ದಾರೆ. ಗಿಲ್ಲಿ ಮಾತಿನಿಂದ ಧಾರಾವಾಹಿಗೆ ಒಂದಷ್ಟು ಹೈಪ್ ಸಿಕ್ಕಿದೆ. ಅವರು ಹೇಳಿದ ಹಾಡಿನ ವಿಡಿಯೋ ಇಲ್ಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಅಪ್ಪ ಏಳನೇ ಬಾರಿ ಮದುವೆಯಾಗ್ತಿದ್ದಾರೆ ಯಾರಾದ್ರೂ ತಡೀರಿ, ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗ

ಅಹ್ರೌಲಾ, ಮಾರ್ಚ್​ 10: ಅಪ್ಪ ಏಳನೇ ಮದುವೆ(Marriage)ಯಾಗುತ್ತಿರುವುದನ್ನು ತಡೆಯುವಂತೆ ಮಗ ಪೊಲೀಸರ ಬಳಿ ದೂರು ನೀಡಿರುವ ಘಟನೆ ಅಜಂಗಢದ ಅಹ್ರೌಲಾದಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ವಿವಾಹ ಸಿದ್ಧತೆಗಳನ್ನು ತಡೆಯಲು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಅಪ್ಪನಿಗೆ ಎಷ್ಟೇ ಮನವಿ ಮಾಡಿದರೂ ಮತ್ತೊಂದು ಮದುವೆ ಆಗೇ ಆಗುತ್ತೇನೆ ಎಂದು ಹಠ ಹಿಡಿದಿದ್ದಾರೆ. ಅವರನ್ನು ತಡೆಯಲು ಸಾಧ್ಯವಿಲ್ಲ, ನೀವಾದ್ರೂ ನಿಲ್ಲಿಸಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾನೆ.

55 ವರ್ಷದ ವ್ಯಕ್ತಿಯೊಬ್ಬನ ಮೇಲೆ ಅವನ ಸ್ವಂತ ಮಗನೇ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದಾನೆ. ಮಗನ ಪ್ರಕಾರ, ಅವನ ತಂದೆ ಆರು ಬಾರಿ ಮದುವೆಯಾಗಿದ್ದಾರೆ. ದೂರು ಕೊಟ್ಟವನು ವ್ಯಕ್ತಿಯ ಮೂರನೇ ಹೆಂಡತಿಯ ಮಗ.

2024 ರಲ್ಲಿ ತನ್ನ ತಂದೆ ಆರನೇ ಬಾರಿಗೆ ವಿವಾಹವಾದರು, ಆದರೆ ಅವರ ಪತ್ನಿ ಕೆಲವೇ ದಿನಗಳಲ್ಲಿ ಕುಟುಂಬವನ್ನು ತೊರೆದು ಭೂಮಿ ಮತ್ತು ಆಭರಣಗಳಿಗೆ ಬೇಡಿಕೆ ಇಟ್ಟಿದ್ದರು. ತನ್ನ ಏಳನೇ ಮದುವೆಗೆ ಹಣ ಹೂಡಲು ಪೂರ್ವಜರ ಭೂಮಿಯನ್ನು ಮಾರಾಟ ಮಾಡಲು ಅವನು ದೃಢನಿಶ್ಚಯ ಮಾಡಿದ್ದಾರೆ. ಭೂಮಿಯನ್ನು ಮಾರಾಟ ಮಾಡಲು 50,000 ರೂಪಾಯಿಗಳ ಮುಂಗಡ ಹಣವನ್ನು ಸಹ ಪಡೆದಿದ್ದಾನೆ ಎಂದು ಮಗ ಹೇಳಿದ್ದಾರೆ. ತಂದೆ ಈಗಾಗಲೇ ಅರ್ಧದಷ್ಟು ಭೂಮಿಯನ್ನು ಅಡಮಾನ ಇಟ್ಟಿದ್ದಾರೆ.

ಮತ್ತಷ್ಟು ಓದಿ: ಮದುವೆ ಮಂಟಪಕ್ಕೇ ನುಗ್ಗಿ ಮಾಜಿ ಪ್ರಿಯಕರನಿಗೆ ಶಾಕ್​​ಕೊಟ್ಟ ಯುವತಿ: ಫುಲ್​​ ಹೈಡ್ರಾಮಾ

ಈ ವಿಷಯ ಪೊಲೀಸ್ ವರಿಷ್ಠಾಧಿಕಾರಿ ಚಿರಾಗ್ ಜೈನ್ ಅಲ್ಲಿಗೆ ತಲುಪಿದಾಗ, ಕಥೆ ಮತ್ತೊಂದು ತಿರುವು ಪಡೆದುಕೊಂಡಿತು. ಈ ಪ್ರಕರಣವು ಬಹು ವಿವಾಹಗಳನ್ನು ಮಾತ್ರವಲ್ಲದೆ, ಭೂಮಿ ಮತ್ತು ಆಸ್ತಿ ಪಾಲನ್ನೂ ಒಳಗೊಂಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಪ್ರಸ್ತುತ, ಪೊಲೀಸರು ವಿವಾಹ ದಾಖಲೆಗಳು ಮತ್ತು ಭೂ ವ್ಯವಹಾರವನ್ನು ಆಳವಾಗಿ ತನಿಖೆ ಮಾಡುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

ಸೂರ್ಯಕುಮಾರ್​ ಯಾದವ್​​ಗೆ ಅದೃಷ್ಟ ತಂದುಕೊಟ್ಟ ಕಾಪು ಮಾರಿಯಮ್ಮ: ಟಿ20 ವಿಶ್ವಕಪ್​​ ಗೆಲುವಿನ ಬೆನ್ನಲ್ಲೇ ವಿಶೇಷ ಪೂಜೆ

ಉಡುಪಿ, ಮಾರ್ಚ್​ 10: ನ್ಯೂಜಿಲೆಂಡ್​​ ತಂಡದ ವಿರುದ್ಧ ಸೆಣೆಸಾಡಿ ಟಿ20 ವಿಶ್ವಕಪ್​​ನ ಭಾರತ ಕ್ರಿಕೆಟ್​​ ತಂಡ ಮತ್ತೊಮ್ಮೆ ತನ್ನ ಮುಡಿಗೇರಿಸಿಕೊಂಡಿದೆ. ಸತತ ಎರಡನೇ ಬಾರಿಗೆ ಕಪ್​​ ಗೆಲ್ಲುವ ಮೂಲಕ ಹೊಸ ದಾಖಲೆ ಬರೆದಿದೆ. ತಂಡದ ನಾಯಕನಾಗಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದೊಂದಿಗೆ ವಿಶೇಷ ಭಕ್ತಿಭಾವದ ನಂಟಿದ್ದು, ಉಡುಪಿಯ ಅಳಿಯನ ಹೆಸರಲ್ಲಿ ವಿಶೇಷ ಪೂಜೆಗೆ ಕಾಪು ಕ್ಷೇತ್ರದಲ್ಲಿ ಸಿದ್ಧತೆ ಭರದಿಂದ ಸಾಗಿದೆ.

ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮೂಲದವರು. ಇವರ ಕುಟುಂಬ ಸದ್ಯ ಮುಂಬೈನಲ್ಲಿ ವಾಸವಾಗಿದೆ. ಆದರೆ ಕಾಪು ಹೊಸ ಮಾರಿಯಮ್ಮ ದೇವಸ್ಥಾನವು ಸೂರ್ಯಕುಮಾರ್ ಯಾದವ್ ಪತ್ನಿಯ ಕುಟುಂಬದ ಆರಾಧ್ಯ ಕ್ಷೇತ್ರವಾಗಿದೆ. ಸೂರ್ಯಕುಮಾರ್ ಯಾದವ್ ಮತ್ತು ದೇವಿಶಾ ಶೆಟ್ಟಿ ದಂಪತಿ ಈಗಾಗಲೇ ಎರಡು ಬಾರಿ ಕಾಪು ಮಾರಿಗುಡಿಗೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. 2024ರ ಜುಲೈ 9ರಂದು ಅವರು ಕಾಪು ಮಾರಿಗುಡಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ದೇವಾಲಯಕ್ಕೆ ಕಂಬವನ್ನು ದಾನವಾಗಿ ನೀಡಿದ್ದರು. ಅದಾದ ನಂತರ ಕೇವಲ 9 ದಿನಗಳಲ್ಲಿ, ಜುಲೈ 18ರಂದು ಸೂರ್ಯಕುಮಾರ್ ಯಾದವ್ ಅವರನ್ನು ಭಾರತೀಯ ಟಿ20 ಕ್ರಿಕೆಟ್ ತಂಡದ ನಾಯಕನಾಗಿ ಘೋಷಿಸಲಾಗಿತ್ತು.

ಇದನ್ನೂ ಓದಿ: ಟಿ20 ವಿಶ್ವಕಪ್‌ ಗೆದ್ದು ಇತಿಹಾಸವನ್ನೇ ಬುಡಮೇಲು ಮಾಡಿದ ಟೀಂ ಇಂಡಿಯಾ

ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅರ್ಚಕರು, ಮುಂದಿನ ದಿನಗಳಲ್ಲಿ ಸೂರ್ಯಕುಮಾರ್​​ ಭಾರತೀಯ ತಂಡದ ನಾಯಕನಾಗಲೆಂದು ಆಶೀರ್ವಾದ ಮಾಡಿದ್ದರು. ದೇವಿಯ ಸನ್ನಿಧಿಯಲ್ಲಿ ಅವರಾಡಿದ್ದ ಮಾತು ಸತ್ಯವಾಗಿತ್ತು. ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಇದೀಗ ಸೂರ್ಯಕುಮಾರ್ ಯಾದವ್ ದಂಪತಿ ಮತ್ತೆ ಕ್ಷೇತ್ರಕ್ಕೆ ಭೇಟಿ ನೀಡಬೇಕು ಎಂದು ದೇವಸ್ಥಾನದ ಪ್ರಮುಖರು ಸಂಕಲ್ಪ ಮಾಡಿಕೊಂಡಿದ್ದಾರೆ. ಇದೇ ವೇಳೆ ದೇವಿಗೆ ಬೆಲ್ಲ ಮತ್ತು ಸಕ್ಕರೆಯ ತುಲಾಭಾರ ನಡೆಸುವ ಸಂಕಲ್ಪವನ್ನೂ ಭಕ್ತರು ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು! ಹನಿಟ್ರ್ಯಾಪ್ ಮಾಡುತ್ತಿದ್ದ ಕತರ್ನಾಕ್ ಲೇಡಿ ಅರೆಸ್ಟ್

ಬೆಳಗಾವಿ, ಮಾರ್ಚ್​ 10: ಶ್ರೀಮಂತ ವ್ಯಕ್ತಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಲೆಗೆ ಬೀಳಿಸಿ ಮೋಸ ಮಾಡುತ್ತಿದ್ದ (Honey Trap) ಮಹಿಳೆಯನ್ನು ಬೆಳಗಾವಿ ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಶ್ರೀಮಂತರನ್ನೇ ಟಾರ್ಗೆಟ್ ಮಾಡಿ ಫೇಸ್​ಬುಕ್ ಮೂಲಕ ಪರಿಚಯ ಮಾಡಿಕೊಳ್ಳುತ್ತಿದ್ದ ಆಕೆ, ಲಾಡ್ಜ್​ಗೆ ಕರೆಸಿ ಅವರ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು ಎಂದು ತಿಳಿದುಬಂದಿದೆ. ಮೋಸ ಹೋಗಿದ್ದ ವ್ಯಕ್ತಿಯೊಬ್ಬರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಫೇಸ್​ಬುಕ್, ಇನ್ಸ್ಟಾಗ್ರಾಂ ಮೂಲಕ ಶ್ರೀಮಂತರಿಗೆ ಬಲೆ

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಮೂಲದವಳಾದ ದೀಪಾ ದೀಪಾ ಅವಟಗಿ (33) ಫ್ಯಾಶನ್ ಡಿಸೈನರ್​ ಆಗಿದ್ದು, ಹನಿಟ್ರ್ಯಾಪ್ ಪ್ರಕರಣದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಹಣದಾಸೆಗೆ ಬಿದ್ದಿದ್ದ ದೀಪಾ, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳೊಂದಿಗೆ ಪರಿಚಯ ಮಾಡಿಕೊಳ್ಳುತ್ತಿದ್ದಳು. ನಂತರ ಅವರ ನಂಬರ್ ತೆಗೆದುಕೊಂಡು ಮೆಸೇಜ್ ಮಾಡಿ ಲಾಡ್ಜ್‌ಗೆ ಕರೆಸಿಕೊಳ್ಳುತ್ತಿದ್ದಳು. ಈಕೆಯನ್ನು ನಂಬಿ ಅಲ್ಲಿಗೆ ಬಂದ ಗಂಡಸರ ಬಳಿ ಸಲುಗೆಯಿಂದ ವರ್ತಿಸಿ, ಅವರನ್ನು ಮೊದಲು ಸ್ನಾನಕ್ಕೆ ಕಳುಹಿಸುತ್ತಿದ್ದಳು. ಇದೇ ಸಮಯ ಸಾಧಿಸಿ ವ್ಯಕ್ತಿಗಳ ಬಳಿಯಿದ್ದ ಹಣ, ಚಿನ್ನ, ಬ್ಯಾಗ್ ಹಾಗೂ ಕಾರುಗಳನ್ನು ತೆಗೆದುಕೊಂಡು ಪರಾರಿಯಾಗುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆಕೆಗೆ ಸಹಾಯ ಮಾಡಿದಾತ ಪರಾರಿ

ಈ ಎಲ್ಲಾ ದುಷ್ಕೃತ್ಯಗಳನ್ನೆಸಗಲು ದೀಪಾಗೆ ಸಹಾಯ ಮಾಡುತ್ತಿದ್ದುದು ಆಕೆಯ ಆಪ್ತ ಸ್ನೇಹಿತ ಶಿವಾನಂದ ಮಠಪತಿ. ಶ್ರೀಮಂತ ವ್ಯಕ್ತಿಗಳ ಮಾಹಿತಿಯನ್ನು ಆಕೆಗೆ ನೀಡುತ್ತಿದ್ದವನೇ ಇವನು. ಸಧ್ಯಕ್ಕೆ ಆತನೂ ಪರಾರಿಯಾಗಿದ್ದು, ಅವನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಶಿವಾನಂದ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ.

ಇದನ್ನೂ ಓದಿ ಹೇಳಿದ್ದು ಗಿಳಿಶಾಸ್ತ್ರ, ಇಕ್ಕಿದ್ದು ದುಡ್ಡು, ಚಿನ್ನಾಭರಣಕ್ಕೆ ಗಾಳ! ಐಟಿ ಅಧಿಕಾರಿಗೆ ಲಕ್ಷಾಂತರ ರೂ. ಪಂಗನಾಮ

ಆರೋಪಿ ದೋಚಿದ್ದೇನೇನು?

ಬಂಧನದ ನಂತರ ಆರೋಪಿಯಿಂದ ಸುಮಾರು 32 ಲಕ್ಷ 86 ಸಾವಿರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಫಾರ್ಚೂನರ್ ಕಾರು, ಒಂದು ಮಾರುತಿ ಸುಜುಕಿ ಎಸ್-ಕ್ರಾಸ್ ಕಾರು, 11 ಮೊಬೈಲ್ ಫೋನ್‌ಗಳು, ಒಂದು ಟ್ಯಾಬ್, ಒಂದು ಡೊಂಗಲ್, ಮೂರು ಕಾರಿನ ಕೀಗಳು ಹಾಗೂ 14 ಸಾವಿರ ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ವಿಪರೀತ ಕಿರುಕುಳ: ದೂರು ನೀಡಿದ ಮೆಗಾಸ್ಟಾರ್ ಕುಟುಂಬದ ಸೊಸೆ

ಮೆಗಾಸ್ಟಾರ್ (Megastar) ಕುಟುಂಬದ ಸೊಸೆ, ಸ್ವತಃ ಜನಪ್ರಿಯ ನಟಿಯಾಗಿರುವ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಲಾವಣ್ಯಾ ತ್ರಿಪಾಠಿ, ಮೆಗಾಸ್ಟಾರ್ ಚಿರಂಜೀವಿ ಅವರ ಸಹೋದರ ನಾಗಬಾಬು ಅವರ ಪುತ್ರ ವರುಣ್ ತೇಜ್ ಅವರೊಡನೆ ವಿವಾಹವಾಗಿದ್ದು ಇತ್ತೀಚೆಗಷ್ಟೆ ಗಂಡು ಮಗುವಿಗೆ ಜನ್ಮ ಸಹ ನೀಡಿದ್ದಾರೆ. ಇದೀಗ ನಟಿ ಲಾವಣ್ಯಾ ತ್ರಿಪಾಠಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ದೂರು ನೀಡಿರುವುದು ಕುಟುಂಬದವರ ವಿರುದ್ಧ ಅಲ್ಲ ಬದಲಿಗೆ ಆನ್​​ಲೈನ್​​​ನಲ್ಲಿ ತಮಗೆ ಕಿರುಕುಳ ನೀಡುತ್ತಿರು ವ್ಯಕ್ತಿಗಳ ಬಗ್ಗೆ.

ಲಾವಣ್ಯಾ ತ್ರಿಪಾಠಿ ಅವರನ್ನು ಹಾಗೂ ಅವರ ಕುಟುಂಬದವರನ್ನು ಗುರಿ ಮಾಡಿಕೊಂಡು ಆನ್​​ಲೈನ್​​​ನಲ್ಲಿ ಕೆಲ ವ್ಯಕ್ತಿಗಳು ತೀವ್ರ ನಿಂದನೆ, ಅಶ್ಲೀಲ ಕಮೆಂಟ್​​ಗಳು, ಫೋಟೊ ತಿದ್ದಿ ಹಂಚಿಕೊಳ್ಳುವ ಕಾರ್ಯಗಳನ್ನು ಮಾಡುತ್ತಿದ್ದಾರಂತೆ. ಈ ಆನ್​​ಲೈನ್ ದೌರ್ಜನ್ಯ, ಹಿಂಸೆಯ ವಿರುದ್ಧ ದನಿ ಎತ್ತಿರುವ ನಟಿ ಲಾವಣ್ಯಾ, ಇದೀಗ ಪೊಲೀಸರಿಗೆ ದೂರು ನೀಡಿದ್ದಾರೆ. ಹೈದರಾಬಾದ್​​ನ ಸೈಬರ್ ಪೊಲೀಸರಿಗೆ ನಟಿ ಲಾವಣ್ಯಾ ತ್ರಿಪಾಠಿ ದೂರು ನೀಡಿದ್ದು, ಕಿರುಕುಳ ನೀಡುತ್ತಿರುವವರ ಖಾತೆಯ ಮಾಹಿತಿಯನ್ನು ಸಹ ಹಂಚಿಕೊಂಡಿದ್ದಾರೆ.

ಪರ್ಪಲ್ ಕ್ರೆಯಾನ್ (purple crayon00) ಹೆಸರಿನ ಇನ್​​ಸ್ಟಾಗ್ರಾಂ ಖಾತೆಯಿಂದ ತಮಗೆ ಸತತ ಕಿರುಕುಳ ನೀಡಲಾಗುತ್ತಿದೆ ಎಂದು ನಟಿ ಲಾವಣ್ಯಾ ತ್ರಿಪಾಠಿ ಹೇಳಿದ್ದಾರೆ. ಈ ಖಾತೆಯು ತಮ್ಮ ವಿರುದ್ಧ ಕೀಳು ಮಟ್ಟದ ಹೇಳಿಕೆಗಳು, ಫೋಟೊಗಳನ್ನು ಹಂಚಿಕೊಳ್ಳುತ್ತಿರುವ ಜೊತೆಗೆ ತಮ್ಮ ಕುಟುಂಬದವರ ಜೊತೆಗೆ ಸಹ ಆಕ್ಷೇಪಾರ್ಹ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದಿದ್ದಾರೆ ನಟಿ. ಕಳೆದ ಕೆಲ ತಿಂಗಳುಗಳಿಂದಲೂ ಪರ್ಪಲ್ ಕ್ರೆಯಾನ್ ಖಾತೆಯಿಂದ ನಟಿಗೆ ಸಂದೇಶಗಳು, ನಟಿಯ ಪೋಸ್ಟ್​​ಗಳಿಗೆ ಕಮೆಂಟ್​​ಗಳನ್ನು ಮಾಡಲಾಗುತ್ತಿದೆಯಂತೆ.

ಇದನ್ನೂ ಓದಿ:ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ಲಾವಣ್ಯಾ ತ್ರಿಪಾಠಿ ಮೂಲತಃ ಉತ್ತರ ಪ್ರದೇಶದವರಾಗಿದ್ದು ನಟನೆ ಆರಂಭಿಸಿದ್ದು ತೆಲುಗು ಸಿನಿಮಾ ಮೂಲಕ. ಉತ್ತರ ಭಾರತ ಮೂಲದ ನಟಿ ಆಗಿದ್ದರೂ ಸಹ ಲಾವಣ್ಯಾ ನಟಿಸಿರುವುದು ಕೇವಲ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಮಾತ್ರ. ಲಾವಣ್ಯಾ ತ್ರಿಪಾಠಿ ಮತ್ತು ವರುಣ್ ತೇಜ್ ಅವರು 2017 ರಲ್ಲಿ ‘ಮಿಸ್ಟರ್’ ಸಿನಿಮಾನಲ್ಲಿ ಒಟ್ಟಿಗೆ ನಟಿಸಿದ್ದರು. ಬಳಿಕ 2018 ರಲ್ಲಿ ‘ಅಂತರಿಕ್ಷಂ 9000 ಕೆಎಂಪಿಎಚ್’ ಸಿನಿಮಾನಲ್ಲಿ ಒಟ್ಟಿಗೆ ನಟಿಸಿದ್ದರು. ಆ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಮೂಡಿದ್ದು 2023 ರಲ್ಲಿ ಈ ಜೋಡಿ ಮದುವೆ ಆದರು. ಇದೀಗ ಗಂಡು ಮಗುವಿನ ಪೋಷಕರಾಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪತ್ನಿ ಬಳಿಕ ತಾಯಿಗೆ ದುಬಾರಿ ಉಡುಗೊರೆ ಕೊಟ್ಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್ (Allu Arjun) ಸ್ಟಾರ್ ಪ್ಯಾನ್ ಇಂಡಿಯಾ ನಟ. ಅವರ ನಟನೆಯ ‘ಪುಷ್ಪ 2’ ಸಿನಿಮಾ ಹಲವು ಹೊಸ ಬಾಕ್ಸ್ ಆಫೀಸ್ ದಾಖಲೆಗಳನ್ನು ಬರೆದಿವೆ. ‘ಪುಷ್ಪ 2’ ಸಿನಿಮಾಕ್ಕೆ ಅಲ್ಲು ಅರ್ಜುನ್ ಅವರು ಸುಮಾರು 300 ಕೋಟಿಗೂ ಹೆಚ್ಚು ಸಂಭಾವನೆ ಪಡೆದಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಒಟ್ಟಿನಲ್ಲಿ ಅಲ್ಲು ಅರ್ಜುನ್, ಭಾರತದ ಅತ್ಯಂತ ದುಬಾರಿ ಪ್ಯಾನ್ ಇಂಡಿಯಾ ನಟರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ಅಲ್ಲು ಅರ್ಜುನ್ ತಮ್ಮ ಪತ್ನಿಗೆ ದುಬಾರಿಯಾದ ಮರ್ಸಿಡೀಸ್ ಬೆಂಜ್ ಕಾರೊಂದನ್ನು ಉಡುಗೊರೆಯಾಗಿ ನೀಡಿದರು. ಇದೀಗ ತಮ್ಮ ತಾಯಿಗೆ ಅಷ್ಟೇ ದುಬಾರಿಯಾದ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ತಮ್ಮ ತಾಯಿ ನಿರ್ಮಲಾ ಅಲ್ಲು ಅವರಿಗೆ ಬಲು ದುಬಾರಿಯಾದ ಲೆಕ್ಸಸ್​ ಎನ್​​ಎಕ್ಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದು ದುಬಾರಿ ಐಶಾರಾಮಿ ಕಾರಾಗಿದ್ದು, ಕಾರಿನ ಬೆಲೆ ಭಾರತೀಯ ಮಾರುಕಟ್ಟೆಯಲ್ಲಿ ಸುಮಾರು 75 ರಿಂದ 80 ಲಕ್ಷ ರೂಪಾಯಿಗಳಿವೆ. ಐಶಾರಾಮಿ ಆಗಿರುವ ಜೊತೆಗೆ ಸುರಕ್ಷತೆಯ ದೃಷ್ಟಿಯಿಂದಲೂ ಇದೊಂದು ಒಳ್ಳೆಯ ಕಾರಾಗಿದೆ. ತಾಯಿಯವರಿಗೆ ಅವರ ವಯಸ್ಸಿನ ಅನುಗುಣವಾಗಿ ಹತ್ತಿ ಇಳಿಯಲು ಇನ್ನಿತರೆ ಮಾಡಿಫಿಕೇಷನ್​​ಗಳನ್ನು ಸಹ ಅಲ್ಲು ಅರ್ಜುನ್ ಮಾಡಿಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಪತ್ನಿಗೆ ಕಾರು ಉಡುಗೊರೆ ನೀಡಿದ ಅಲ್ಲು ಅರ್ಜುನ್

ಇತ್ತೀಚೆಗಷ್ಟೆ ಅಲ್ಲು ಅರ್ಜುನ್ ತಮ್ಮ ಪತ್ನಿಗೆ ದುಬಾರಿ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದರು. ಅಲ್ಲು ಅರ್ಜುನ್, ಪತ್ನಿ ಸ್ನೇಹಾ ರೆಡ್ಡಿಗೆ 1.81 ಕೋಟಿ ರೂಪಾಯಿ ಬೆಲೆಯ ಮರ್ಸಿಡೀಜ್ ಬೆಂಜ್ ಎಎಂಜಿ ಸಿಎಲ್​​ಇ 53 ಕಾರನ್ನು ಉಡುಗೊರೆಯಾಗಿ ನೀಡಿದರು. ಅಲ್ಲು ಅರ್ಜುನ್ ಮತ್ತು ಸ್ನೇಹಾ ರೆಡ್ಡಿ ಅವರ ವಿವಾಹ ವಾರ್ಷಿಕೋತ್ಸವ ಇತ್ತೀಚೆಗಷ್ಟೆ ಇತ್ತು. ಇದೇ ಕಾರಣಕ್ಕೆ ಪತ್ನಿಗೆ ದುಬಾರಿ ಕಾರನ್ನು ಉಡುಗೊರೆಯಾಗಿ ಅಲ್ಲು ಅರ್ಜುನ್ ನೀಡಿದರು.

ಅಲ್ಲು ಅರ್ಜುನ್ ಸ್ವತಃ ಕಾರು ಪ್ರೇಮಿ. ವಿದೇಶದ, ಭಾರತದ ಹಲವು ಅತ್ಯುತ್ತಮ ಗುಣಮಟ್ಟದ ಮತ್ತು ಬಲು ದಾಬಾರಿ ಕಾರುಗಳನ್ನು ಅಲ್ಲು ಅರ್ಜುನ್ ಹೊಂದಿದ್ದಾರೆ. ಅಲ್ಲದೆ ಪದೇ ಪದೇ ಅಲ್ಲು ಅರ್ಜುನ್ ತಮ್ಮ ಕಾರುಗಳನ್ನು ಬದಲಾವಣೆ ಮಾಡುತ್ತಲೇ ಇರುತ್ತಾರೆ. ಈ ಬಗ್ಗೆ ಅವರೇ ಕೆಲವು ಸಂದರ್ಶನಗಳಲ್ಲಿ ಸಹ ಹೇಳಿಕೊಂಡಿದ್ದಾರೆ. ಅಲ್ಲು ಅರ್ಜುನ್ ಬಳಿ ರೇಂಜ್ ರೋವರ್ ವೋಗ್, ಲೆಕ್ಸಸ್, ರೋಲ್ಸ್ ರಾಯ್ಸ್ ಕುಲಿಯನ್, ಮರ್ಸಿಡೀಸ್ ಎಎಂಜಿ, ಹಮ್ಮರ್ ಎಚ್​​2, ವೋಲ್ವೋ ಎಕ್ಸ್​​ಸಿ 90 ಟಿ8, ಜಾಗ್ವಾರ್ ಕೆಜೆಡ್ ಎಲ್, ಫ್ಯಾಲ್ಕನ್ ವ್ಯಾನಿಟಿ ವ್ಯಾನು ಸೇರಿದಂತೆ ಇನ್ನೂ ಹಲವು ಐಶಾರಾಮಿ ಕಾರುಗಳಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನ್ ಸೂಪರ್​ ಲೀಗ್​ಗೆ ‘ಇಂಧನದ ಕೊರತೆ’

ಇಂಡಿಯನ್ ಪ್ರೀಮಿಯರ್ ಲೀಗ್​ಗೆ (IPL) ಟಕ್ಕರ್ ಕೊಡಲು ಮುಂದಾಗಿದ್ದ ಪಾಕಿಸ್ತಾನ್ ಸೂಪರ್ ಲೀಗ್​ಗೆ (PSL) ಇದೀಗ  ‘ಇಂಧನದ ಕೊರತೆ’ ಎದುರಾಗಿದೆ. ಅಂದರೆ ಪಾಕ್​ನಲ್ಲಿ ತೈಲ ಬಿಕ್ಕಟ್ಟು ಎದುರಾಗಿದ್ದು, ಹೀಗಾಗಿ ಟೂರ್ನಿಯನ್ನು ಮುಂದೂಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಐಪಿಎಲ್​ ಆರಂಭದ ಸಂದರ್ಭದಲ್ಲೇ ಟೂರ್ನಿ ಶುರು ಮಾಡಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಪ್ಲ್ಯಾನ್ ರೂಪಿಸಿದ್ದರು. ಅದರಂತೆ ಮಾರ್ಚ್ 26 ರಿಂದ ಪಿಎಸ್​ಎಲ್​ ಆರಂಭಿಸಲು ನಿರ್ಧರಿಸಲಾಗಿತ್ತು.

ಆದರೀಗ ಪಾಕಿಸ್ತಾನದಲ್ಲಿ ಇಂಧನದ ಕೊರತೆ ಎದುರಾಗಿರುವ ಕಾರಣ ಟೂರ್ನಿಯ ವೇಳಾಪಟ್ಟಿಯನ್ನು ಬದಲಿಸಲು ಚಿಂತಿಸಲಾಗಿದೆ.

ಪಾಕಿಸ್ತಾನದಲ್ಲಿ ತೀವ್ರ ಇಂಧನ ಕೊರತೆಯಿದ್ದು, ಸರ್ಕಾರವು ಸಾರಿಗೆಯ ಮೇಲೆ ನಿರ್ಬಂಧ ಹೇರಿದೆ. ಇದರಿಂದ ತಂಡಗಳ ಪ್ರಯಾಣ ಮತ್ತು ಪಂದ್ಯದ ಪ್ರಸಾರಕ್ಕೆ ಅಡ್ಡಿಯಾಗುವ ಭೀತಿ ಎದುರಾಗಿದೆ.

ಅಷ್ಟೇ ಅಲ್ಲದೆ ಪಂಜಾಬ್ ಪ್ರಾಂತ್ಯದಲ್ಲಿ ಇಂಧನ ಉಳಿಸಲು ಶಾಲೆ-ಕಾಲೇಜುಗಳನ್ನು ಮಾರ್ಚ್ 31 ರವರೆಗೆ ಮುಚ್ಚಲು ಆದೇಶಿಸಲಾಗಿದೆ.

ಅಂದರೆ ಈಗಾಗಲೇ ಪಾಕಿಸ್ತಾನದ ಬಹುತೇಕ ಭಾಗಗಳಲ್ಲಿ ಪೆಟ್ರೋಲ್, ಡಿಸೇಲ್ ಅಭಾವವಿದ್ದು, ಈ ಅಭಾವವು ಪಾಕಿಸ್ತಾನ್ ಸೂಪರ್ ಲೀಗ್​ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಯಿದೆ.

ಇದೇ ಕಾರಣದಿಂದಾಗಿ ಪಾಕಿಸ್ತಾನ್ ಸೂಪರ್ ಲೀಗ್​ ಅನ್ನು ಮುಂದೂಡುವ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಚಿಂತಿಸಿದೆ. ಹೀಗಾಗಿ ಮಾರ್ಚ್ 26 ರಿಂದ ಪಿಎಸ್​ಎಲ್​ ಟೂರ್ನಿ ಆರಂಭವಾಗುವ ಸಾಧ್ಯತೆಯಿಲ್ಲ.

ಇಂಧನ ಕೊರತೆ ಏಕೆ?

ಪಾಕಿಸ್ತಾನದಲ್ಲಿ ಪ್ರಸ್ತುತ ಉಂಟಾಗಿರುವ ಇಂಧನ ಬಿಕ್ಕಟ್ಟಿಗೆ ಮುಖ್ಯ ಕಾರಣ ಮಧ್ಯಪ್ರಾಚ್ಯದ ರಾಜಕೀಯ ಉದ್ವಿಗ್ನತೆ.  ಅಂದರೆ ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ತೀವ್ರತೆಯಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರಿ ಏರುಪೇರಾಗಿದೆ.

ಅಲ್ಲದೆ ಜಗತ್ತಿನ ಪ್ರಮುಖ ತೈಲ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿದೆ. ಪಾಕಿಸ್ತಾನದ ಶೇ. 98 ರಷ್ಟು ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಆಮದು ಇದೇ ಮಾರ್ಗವಾಗಿ ನಡೆಯುವುದರಿಂದ ಪೂರೈಕೆಯಲ್ಲಿ ತೀವ್ರ ಅಡಚಣೆಯಾಗಿದೆ.

ಇನ್ನು ಯುದ್ಧದರಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ $100 ದಾಟಿದೆ. ಇದರಿಂದಾಗಿ ಪಾಕಿಸ್ತಾನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ ದಾಖಲೆಯ 55 ರೂಪಾಯಿಗಳಷ್ಟು (PKR) ಹೆಚ್ಚಳವಾಗಿದೆ.

ಇದನ್ನೂ ಓದಿ: Sanju Samson: ಇಡೀ ಚಿತ್ರಣ ಬದಲಿಸಿದ 25 ನಿಮಿಷಗಳ ಕರೆ..!

ಪಾಕಿಸ್ತಾನವು ಇಂಧನಕ್ಕಾಗಿ ಸೌದಿ ಅರೇಬಿಯಾ ಮತ್ತು ಯುಎಇ (UAE) ರಾಷ್ಟ್ರಗಳ ಮೇಲೆ ಹೆಚ್ಚಾಗಿ ಅವಲಂಬಿತವಾಗಿದೆ. ಯುದ್ಧದಿಂದಾಗಿ ಈ ರಾಷ್ಟ್ರಗಳಿಂದ ತೈಲ ತರುವುದು ಕಷ್ಟಕರವಾಗಿದ್ದು, ಇದರಿಂದ ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು ಎದುರಾಗಿದೆ.

 

Source link

Exit mobile version