ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ​ ಲಕ್ಷ್ಮೀ ಬರ್ತಾಳೆ

ಬೆಂಗಳೂರು, (ಡಿಸೆಂಬರ್ 21): ವಿಪಕ್ಷ ಬಿಜೆಪಿ-ಜೆಡಿಎಸ್‌ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು. ಚಳಿಗಾಲ ಅಧಿವೇಶನದಲ್ಲಿ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಟ್ಟು ಬೇರೆ ತಿಂಗಳಿನ ಹಣ ಹಾಕಿದ್ದಾರೆ ಎಂದು ಬಿಜೆಪಿ ಹೋರಾಟ ನಡೆಸಿತ್ತು. 5 ಸಾವಿರ ಕೋಟಿ ರೂಪಾಯಿ ಎಲ್ಲಿ ಹೋಯ್ತು ಎಂದು ಬಿಜೆಪಿ ಪ್ರಶ್ನಿಸಿತ್ತು. ಫೆಬ್ರವರಿ, ಮಾರ್ಚ್‌ ಕಂತು ಬಿಡುಗಡೆಯಾಗದಿರೋದನ್ನ ಟಿವಿ9 ರಿಯಾಲಿಟಿ ಚೆಕ್‌ ಮೂಲಕ ಬಯಲು ಮಾಡಿತ್ತು. ಆದ್ರೆ, ಫೆಬ್ರವರಿ, ಮಾರ್ಚ್ ಕಂತಿನ ಬಗ್ಗೆ ಸಚಿವೆ ಸ್ಪಷ್ಟನೆ ಕೊಟ್ಟಿಲ್ಲ. ಈ ಮಧ್ಯೆ ವಿಪಕ್ಷಗಳು ವಾಗ್ದಾಳಿ ಮುಂದುವರೆಸಿದ್ದು, ಹಿಂದಿನ ಎರಡು ತಿಂಗಳ ಬಾಕಿ ಹಣದ ಕಥೆ ಏನು ಎನ್ನುವುದೇ ಇನ್ನೂ ನಿಗೂಢವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು? – Kannada News | Darshan wife Vijayalakshmi give indirect reply to Sudeep

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಸಿನಿಮಾದ ಪ್ರಚಾರ ಚಾಲ್ತಿಯಲ್ಲಿದ್ದು, ನಿನ್ನೆ (ಡಿಸೆಂಬರ್ 20) ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್, ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡುತ್ತಿರುವ ದರ್ಶನ್ ಅಭಿಮಾನಿಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದರು. ಇದೀಗ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಮಾತನಾಡಿ ಸುದೀಪ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಕೆಲವರು ಅವರ ಬಗ್ಗೆ, ಅವರ ಫ್ಯಾನ್ಸ್‌ ಬಗ್ಗೆ, ಹೊರಗಡೆ ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಾರೆ, ಆದರೆ ದರ್ಶನ್‌ ಇದ್ದಾಗ ಮಾತ್ರ ಅವರು ಗೊತ್ತೇ ಆಗದಂತೆ ಇರುತ್ತಾರೆ, ಬೆಂಗಳೂರಿನಲ್ಲಿ ಇದ್ದಾರಾ ಎಂದು ಗೊತ್ತೇ ಆಗದಂತೆ ಇರುತ್ತಾರೆ, ದರ್ಶನ್‌ ಟೀಕಿಸುವವರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ, ಬೇಜಾರು ಮಾಡಿಕೊಳ್ಳಲ್ಲ, ದರ್ಶನ್ ಅಭಿಮಾನಿಗಳಾದ ನೀವೂ ತಲೆಕೆಡಿಸಿಕೊಳ್ಳಬೇಡಿ ಎಂದು ವಿಜಯಲಕ್ಷ್ಮಿ ಹೇಳಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಇಲ್ಲಿ ಕ್ಲಿಕ್ ಮಾಡಿ

 

Source link

ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ – Kannada News | Blames opposition if he fails, Mallikarjuna Kharge lashes out against PM Modi on Assam statement

ನವದೆಹಲಿ, ಡಿಸೆಂಬರ್ 21: ಸುದೀರ್ಘ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷ ಅಸ್ಸಾಂ ಹಾಗೂ ಈಶಾನ್ಯ ಪ್ರದೇಶಗಳನ್ನು ಕಡೆಗಣಿಸಿದೆ. ವಲಸಿಗರನ್ನು ಬರಲು ಬಿಟ್ಟು ಪ್ರಾದೇಶೀಕ ಭದ್ರತೆಗೆ ಧಕ್ಕೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಭಾನುವಾರ ತಿರುಗೇಟು ನೀಡಿದ್ದಾರೆ. ಅಸ್ಸಾಮ್​ನಲ್ಲಿ ಡಬಲ್ ಎಂಜಿನ್ ಸರ್ಕಾರ ಹೊಂದಿರುವ ಬಿಜೆಪಿ, ಆ ರಾಜ್ಯದಲ್ಲಿ ಆಗಿರುವ ತನ್ನ ವೈಫಲ್ಯಗಳಿಗೆ ಜವಾಬ್ದಾರಿ ಹೊರುವುದು ಬಿಟ್ಟು ವಿಪಕ್ಷಗಳತ್ತಲೇ ಬೊಟ್ಟು ಮಾಡುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅವರು ಅದ್ಹೇಗೆ ವಿಪಕ್ಷಗಳ ಮೇಲೆ ಆಪಾದಿಸುತ್ತಾರೆ? ಕೇಂದ್ರದಲ್ಲಿ ಅವರ ಸರ್ಕಾರ ಇದೆ. ಅಸ್ಸಾಮ್​ನಲ್ಲೂ ಅವರದ್ದೇ ಸರ್ಕಾರ ಇದೆ. ಡಬಲ್ ಎಂಜಿನ್ ಸರ್ಕಾರ ಆಗಿದೆ. ಅವರು ರಾಜ್ಯವನ್ನು ರಕ್ಷಿಸಲು ವಿಫಲರಾದರೆ, ವಿಪಕ್ಷಗಳನ್ನು ಹೇಗೆ ದೂಷಿಸುತ್ತಾರೆ? ನಾವಾ ಅಲ್ಲಿ ಆಡಳಿತ ನಡೆಸುತ್ತಿರುವುದು?’ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರು ಬಿಜೆಪಿಯನ್ನು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಚಿತ್ತಗಾಂಗ್​ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ನಿಲ್ಲಿಸಿದ ಭಾರತ

ಪ್ರಧಾನಿ ಮೋದಿ ಅವರಿಗೆ ತಮ್ಮ ಸರ್ಕಾರ ವಿಫಲ ಆದಾಗೆಲ್ಲಾ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನು ದೂಷಿಸುವುದನ್ನೇ ಪರಿಪಾಟವಾಗಿ ಹೋಗಿದೆ ಎಂದೂ ಖರ್ಗೆ ಆರೋಪಿಸಿದ್ದಾರೆ.

‘ಅವರು ವಿಫಲರಾದಾಗ ಎಲ್ಲವನ್ನೂ ವಿಪಕ್ಷಗಳ ತಲೆ ಮೇಲೆ ಹಾಕುತ್ತಾರೆ. ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ದೇಶದ್ರೋಹಿಗಳು ಅವರೇ ಹೊರತು ನಾವಲ್ಲ. ನಾವ್ಯಾರನ್ನೂ ರಕ್ಷಿಸುತ್ತಲ್ಲ. ದೇಶದ ಹಿತಕ್ಕೆ ಏನು ಒಳ್ಳೆಯದೋ ಅದನ್ನು ಮಾಡುತ್ತೇವೆ. ಭಯೋತ್ಪಾದಕರನ್ನೂ ಅಥವಾ ನುಸುಳುಕೋರರನ್ನೋ ಅಥವಾ ಇನ್ನಾರನ್ನೋ ನಾವು ಬೆಂಬಲಿಸುವುದಿಲ್ಲ. ಇವರನ್ನು ನಿಗ್ರಹಿಸಲು ವಿಫಲರಾಗಿದ್ದಕ್ಕೆ ನಮ್ಮನ್ನು ದೂಷಿಸುತ್ತಿದ್ದಾರೆ ಅಷ್ಟೇ’ ಎಂದು ಕಾಂಗ್ರೆಸ್ ಅಧ್ಯಕ್ಷರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ?

ನರೇಂದ್ರ ಮೋದಿ ನೀಡಿದ ಹೇಳಿಕೆ ಏನು?

ನರೇಂದ್ರ ಮೋದಿ ಅವರು ನಿನ್ನೆ ಶನಿವಾರ (ಡಿ. 20) ಅಸ್ಸಾಮ್ ರಾಜಧಾನಿ ಗುವಾಹಟಿಯ ಏರ್​ಪೋರ್ಟ್​ನ ಹೊಸ ಟರ್ಮಿನಲ್ ಉದ್ಘಾಟನೆ ಮಾಡಿ ಮಾತನಾಡುತ್ತಾ, ಅಸ್ಸಾಮ್ ಹಾಗೂ ಈಶಾನ್ಯವನ್ನು ಕಾಂಗ್ರೆಸ್ ಪಕ್ಷ ನಿರ್ಲಕ್ಷಿಸುತ್ತಾ ಬಂದಿತ್ತೆಂದು ಆಪಾದಿಸಿದ್ದರು.

ದಶಕಗಳ ಕಾಲ ಈಶಾನ್ಯ ಪ್ರದೇಶಗಳಿಗೆ ನುಸುಳುಕೋರರನ್ನು ಬರಲು ಬಿಟ್ಟು ಅಲ್ಲಿನ ಭದ್ರತೆ ಮತ್ತು ಸಾಂಸ್ಕೃತಿಕ ಗುರುತನ್ನು ದುರ್ಬಲಗೊಳಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಮೋದಿ ಹೇಳೀದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಎರಡೆರಡು ವಿಶ್ವಕಪ್‌; ಟೀಂ ಇಂಡಿಯಾಗೆ ನಾಯಕರೇ ದೊಡ್ಡ ತಲೆನೋವು – Kannada News | ICC World Cup 2026: India Captains Suryakumar, Ayush Mhatre’s Form Concerns

2026 ರಲ್ಲಿ ಕ್ರಿಕೆಟ್ ಲೋಕದಲ್ಲಿ ಪ್ರಮುಖ ಐಸಿಸಿ (ICC) ಈವೆಂಟ್​ಗಳು ನಡೆಯಲಿವೆ. ಈ ಪಂದ್ಯಾವಳಿಗಳು ಜನವರಿಯಿಂದಲೇ ಪ್ರಾರಂಭವಾಗುತ್ತಿದ್ದು, ಅಂಡರ್-19 ಪುರುಷರ ವಿಶ್ವಕಪ್ ಮತ್ತು ಆ ನಂತರ 2026 ರ ಪುರುಷರ ಟಿ20 ವಿಶ್ವಕಪ್ (ICC World Cup 2026) ಪ್ರಮುಖ ಪಂದ್ಯಾವಳಿಗಳಾಗಿವೆ. ಭಾರತ ತಂಡವು ಎರಡೂ ಪಂದ್ಯಾವಳಿಗಳಲ್ಲಿ ಪ್ರಶಸ್ತಿ ಸ್ಪರ್ಧಿಗಳಾಗಿ ಪ್ರವೇಶಿಸಲಿದೆ. ಈ ಎರಡೂ ತಂಡಗಳಲ್ಲೂ ಪ್ರತಿಭಾವಂತೆ ಆಟಗಾರರಿದ್ದಾರೆ. ಆದಾಗ್ಯೂ, ಈ ವಿಶ್ವಕಪ್‌ಗಳ ಆರಂಭಕ್ಕೂ ಮೊದಲು, ಈ ಎರಡೂ ತಂಡಗಳ ನಾಯಕರು ತಂಡಕ್ಕೆ ದೊಡ್ಡ ಸಮಸ್ಯೆಯಾಗಿದ್ದಾರೆ. ಒಂದೆಡೆ ಹಿರಿಯರ ಪುರುಷರ ತಂಡದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ರನ್ ಗಳಿಸಲು ಹೆಣಗಾಡುತ್ತಿದ್ದರೆ, ಇನ್ನೊಂದೆಡೆ ಅಂಡರ್-19 ತಂಡದ ನಾಯಕ ಆಯುಷ್ ಮ್ಹಾತ್ರೆ (Ayush Mhatre) ಕೂಡ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ.

ಡಿಸೆಂಬರ್ 21 ರ ಭಾನುವಾರದಂದು, ಭಾರತದ ಅಂಡರ್-19 ತಂಡವು ಪಾಕಿಸ್ತಾನದ ವಿರುದ್ಧ ಏಷ್ಯಾಕಪ್ ಫೈನಲ್‌ನಲ್ಲಿ ಸೋತಿತು. ಮುಂದಿನ ತಿಂಗಳು ನಡೆಯಲಿರುವ ಅಂಡರ್-19 ವಿಶ್ವಕಪ್‌ನಲ್ಲಿ ಸ್ಪರ್ಧಿಸಲಿರುವ ತಂಡ ಇದೇ ಆಗಿದೆ. ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಎಲ್ಲಾ ಪಂದ್ಯಗಳಲ್ಲೂ ತಂಡವು ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡಿತ್ತು. ಹೆಚ್ಚಿನ ಆಟಗಾರರು ಅದ್ಭುತ ಫಾರ್ಮ್​ನಲ್ಲಿದ್ದರು. ಆದ್ದರಿಂದ, ಈ ಸೋಲು ತಂಡದ ಭವಿಷ್ಯದ ಬಗ್ಗೆ ಹೆಚ್ಚಿನ ಕಳವಳವನ್ನು ಉಂಟುಮಾಡಿಲ್ಲ. ಆದಾಗ್ಯೂ, ಈ ಫೈನಲ್‌ನಲ್ಲಿ ನಾಯಕ ಆಯುಷ್ ಮ್ಹಾತ್ರೆ ಅವರ ವೈಫಲ್ಯವು ಮತ್ತೊಮ್ಮೆ ಅವರ ಪ್ರದರ್ಶನದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಆಯುಷ್ ಪ್ರದರ್ಶನ ಹೇಗಿದೆ?

ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಗೆಲ್ಲಲು 348 ರನ್‌ಗಳು ಬೇಕಾಗಿದ್ದವು, ಆದರೆ ಫೈನಲ್‌ನಲ್ಲಿ ನಾಯಕ ಆಯುಷ್ 8 ಎಸೆತಗಳಲ್ಲಿ ಕೇವಲ 2 ರನ್‌ಗಳಿಗೆ ಔಟಾದರು. ಇದು ಕೇವಲ ಫೈನಲ್ ಅಲ್ಲ, ಇಡೀ ಟೂರ್ನಮೆಂಟ್‌ನಲ್ಲಿ ಆಯುಷ್ ರನ್ ಗಳಿಸಲು ವಿಫಲರಾದರು. ಆಯುಷ್ ಮ್ಹಾತ್ರೆ ಆಡಿದ ಐದು ಇನ್ನಿಂಗ್ಸ್‌ಗಳಲ್ಲಿ 13 ರ ಸಾಧಾರಣ ಸರಾಸರಿಯಲ್ಲಿ ಕೇವಲ 65 ರನ್‌ಗಳನ್ನು ಗಳಿಸಿದರು. ಇದರಲ್ಲಿ ಅವರ ಗರಿಷ್ಠ ಸ್ಕೋರ್ 38 ರನ್ ಅಷ್ಟೆ.

ಆದರೆ ಈ ಟೂರ್ನಮೆಂಟ್‌ನಲ್ಲಿ ಮಾತ್ರವಲ್ಲ, ತಮ್ಮ ಅಂಡರ್-19 ವೃತ್ತಿಜೀವನದಲ್ಲಿ ಇಲ್ಲಿಯವರೆಗೆ ಆಡಿರುವ ಎಲ್ಲಾ ಏಕದಿನ ಪಂದ್ಯಗಳಲ್ಲಿ, ಮ್ಹಾತ್ರೆ ವಿಶೇಷವಾದದ್ದೇನೂ ಮಾಡಲು ಸಾಧ್ಯವಾಗಿಲ್ಲ. ಇಲ್ಲಿಯವರೆಗೆ 14 ಅಂಡರ್-19 ಏಕದಿನ ಪಂದ್ಯಗಳನ್ನು ಆಡಿರುವ ಆಯುಷ್ ಒಂದೇ ಒಂದು ಅರ್ಧಶತಕವಿಲ್ಲದೆ ಕೇವಲ 143 ರನ್ ಗಳಿಸಿದ್ದಾರೆ. ಪರಿಣಾಮವಾಗಿ, ಮುಂದಿನ ತಿಂಗಳು ನಡೆಯಲಿರುವ ಅಂಡರ್-19 ವಿಶ್ವಕಪ್‌ನಲ್ಲಿ ಅವರು ಟೀಂ ಇಂಡಿಯಾಕ್ಕೆ ಪ್ರಮುಖ ಚಿಂತೆಯಾಗಿ ಪರಿಣಮಿಸಿದ್ದಾರೆ.

ಸೂರ್ಯಕುಮಾರ್ ಕಥೆಯೂ ಇದೆ

ನಾಯಕತ್ವ ವೈಫಲ್ಯದ ಕಥೆ ಕೇವಲ ಅಂಡರ್-19 ತಂಡಕ್ಕೆ ಮಾತ್ರ ಸೀಮಿತವಾಗಿಲ್ಲ. ಹಿರಿಯರ ಟಿ20 ತಂಡ ಕೂಡ ಇದೇ ರೀತಿಯ ಪರಿಸ್ಥಿತಿಯಲ್ಲಿದೆ. ಅನುಭವಿ ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರ ಬ್ಯಾಟ್ ಸಂಪೂರ್ಣವಾಗಿ ಮೌನವಾಗಿದೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿಯೂ ಸೂರ್ಯ ರನ್​ಗಳಿಸಲು ವಿಫಲರಾದರು. ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೇವಲ 34 ರನ್ ಗಳಿಸಿದರು. ಅದಕ್ಕೂ ಮೊದಲು ಆಸ್ಟ್ರೇಲಿಯಾ ಮತ್ತು ಏಷ್ಯಾಕಪ್‌ನಲ್ಲಿಯೂ ಸೂರ್ಯ ಇದೇ ರೀತಿಯ ಪ್ರದರ್ಶನ ನೀಡಿದ್ದರು.

2024 ರ ವಿಶ್ವಕಪ್ ನಂತರ ಸೂರ್ಯ ಅವರನ್ನು ಟಿ20 ತಂಡದ ನಾಯಕನನ್ನಾಗಿ ನೇಮಿಸಲಾಯಿತು, ಆದರೆ ಅಂದಿನಿಂದ ಅವರು ನಿರಂತರವಾಗಿ ವಿಫಲರಾಗಿದ್ದಾರೆ. 2025 ರಲ್ಲಿ ಅವರ ಪ್ರದರ್ಶನವು ವಿಶೇಷವಾಗಿ ನಿರಾಶಾದಾಯಕವಾಗಿದೆ. ಈ ವರ್ಷದುದ್ದಕ್ಕೂ, ಸೂರ್ಯ 21 ಟಿ20 ಪಂದ್ಯಗಳಲ್ಲಿ 13 ಸರಾಸರಿಯಲ್ಲಿ ಕೇವಲ 218 ರನ್ ಗಳಿಸಿದ್ದಾರೆ. ಇದರಲ್ಲಿ ಒಂದೇ ಒಂದು ಅರ್ಧಶತಕವಿಲ್ಲದಿರುವುದು ಅವರ ಕಳಪೆ ಫಾರ್ಮ್​ಗೆ ಹಿಡಿದ ಕೈಗನ್ನಡಿಯಾಗಿದೆ. ಟಿ20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಲಿದ್ದು, ಸೂರ್ಯ ಅಷ್ಟರೊಳಗೆ ತಮ್ಮ ಫಾರ್ಮ್​ ಕಂಡುಕೊಳ್ಳಬೇಕಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸಹಾಯ ಮಾಡೋ ನೆಪದಲ್ಲಿ ಮಂಚಕ್ಕೆ ಕರೆದ, ಮಹಿಳೆಯ ಜೀವಕ್ಕೆ ಕುತ್ತು ತಂದ ಸೋಶಿಯಲ್ ಮೀಡಿಯಾ ಫ್ರೆಂಡ್ – Kannada News | A Woman Attempts To Suicide for A Social Media Friend harassment In Bengaluru

ಬೆಂಗಳೂರು, (ಡಿಸೆಂಬರ್ 21): ಇತ್ತೀಚೆಗೆ ಸೋಶಿಯಲ್ ಮೀಡಿಯಾ (Social Media)  ಕ್ರೇಜ್ ಜನರಲ್ಲಿ ವಿಪರೀತವಾಗಿದೆ. ಬೆಳಗ್ಗೆ ಎದ್ದಾಗಿಂದ ರಾತ್ರಿ ಮಲಗೋವರೆಗೂ ಏನೇನು ಮಾಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕಂಪ್ಲೀಟ್ ಅಪ್ಡೇಟ್ ಮಾಡುತ್ತಾರೆ. ಹಾಗೇ ಕೆಲವರು ಏನೇನು ಸ್ಕೆಚ್ ಹಾಕಿ ಕಂಡ ಕಂಡವರನ್ನು ಪರಿಚಯ ಮಾಡಿಕೊಳ್ಳುತ್ತಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾಗಳಿಂದಲೇ ಸಾಕಷ್ಟು ಕಷ್ಟು ನೋವು ಅನುಭವಿಸಿದ ಉದಾಹರಣೆಗಳು ಇವೆ.ಅದರಂತೆ ಸಾಮಾಜಿಕ ತಾಲಣದಲ್ಲಿ ಪರಿಚಯವಾದ ಗೆಳೆಯ, ಬೆಂಗಳೂರಿನ (Bengaluru) ಮಹಿಳೆಯೊಬ್ಬರಿಗೆ ಸಹಾಯ ಮಾಡುವ ನೆಪದಲ್ಲಿ ಮಂಚಕ್ಕೆ ಕರೆದಿದ್ದಾನೆ. ಆಕೆ ನಿರಾಕರಿಸಿದ್ದಕ್ಕೆ ನಾನಾ ರೀತಿಯಾಗಿ ಬ್ಲ್ಯಾಕ್​ ಮೇಲ್ ಮಾಡಿದ್ದು, ಇದಕ್ಕೆ ಹೆದರಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಸಾಲ ಕೊಟ್ಟು ಮಂಚಕ್ಕೆ ಕರೆದ ಗೆಳೆಯ

ಅಂದ್ಹಾಗೆ ಇಂತಹ ದುಸ್ಥಿತಿಗೆ ಬಂದಿದ್ದು ರಾಜಗೋಪಾಲ ನಗರ ಠಾಣೆ ವ್ಯಾಪ್ತಿಯ ಮಹಿಳೆ. ಸೋಶಿಯಲ್ ಮೀಡಿಯಾ ಮೂಲಕ ಸಂತ್ರಸ್ತೆಗೆ ಪರಿತೋಷ್ ಯಾದವ್ ಎನ್ನುವಾತ ಪರಿಚವಾಗಿದ್ದು, ಬಣ್ಣ ಬಣ್ಣದ ಮಾತುಗಳಿಂದ ಮಹಿಳೆಯನ್ನು ಕ್ಲೋಸ್ ಮಾಡಿಕೊಂಡಿದ್ದಾನೆ. ಹೀಗಾಗಿ ಮಹಿಳೆ, ಇತ್ತೀಚೆಗೆ ಗ್ಯಾಸ್ ಸಿಲಿಂಡ್ ಸ್ಫೋಟದಿಂದ ತನ್ನ ಮಗಳಿಗೆ ಗಾಯವಾಗಿರುವ ಬಗ್ಗೆ ಹೇಳಿಕೊಂಡಿದ್ದಾಳೆ. ಹೀಗಾಗಿ ಪರಿತೋಷ್ ಯಾದವ್ ಚಿಕಿತ್ಸೆಗೆಂದು 30 ಸಾವಿರ ಹಣ ಸಾಲ ನೀಡಿದ್ದ. ಬಳಿಕ ಇದನ್ನೇ ಬಂಡವಾಳವಾಗಿ ಮಾಡಿಕೊಂಡ ಗೆಳೆಯ, ಮಹಿಳೆಯನ್ನು ದೈಹಿಕವಾಗಿ ಸಹಕರಿಸುವಂತೆ ಮಂಚಕ್ಕೆ ಕರೆದಿದ್ದಾನೆ. ಸಾಲ ಕೊಟ್ಟ ನಂತರ ಮಹಿಳೆಗೆ ಪ್ರತಿನಿತ್ಯ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾನೆ. ಇದಕ್ಕೆ ಮಹಿಳೆ ಒಪ್ಪದಿದ್ದಾಗ ಅಶ್ಲೀಲ ವೀಡಿಯೊ ಕಳಿಸಿ ಫ್ಲ್ಯಾಟ್ ಗೆ ಬರುವಂತೆ ಬಲವಂತ ಮಾಡಿದ್ದಾನೆ.

ಇದನ್ನೂ ಓದಿ: ಪೂರ್ತಿ ವಿಡಿಯೋ ಬೇಕಾದ್ರೆ ಫಾಲೋ- ಲೈಕ್ ಮಾಡುವಂತೆ ಪೋಸ್ಟ್​ ಹಾಕುವವರೇ ಹುಷಾರ್

ಕಿರುಕುಳ ತಾಳಲಾರದೇ ಆತ್ಮಹತ್ಯೆಗೆ ಯತ್ನ

ಒಂದು ವೇಳೆ ಸಹಕರಿಸದಿದ್ದರೆ ಪೋರ್ನ್ ವೆಬ್ ಸೈಟ್, ಪಬ್ಲಿಕ್ ಟಾಯ್ಲೆಟ್ ನಲ್ಲಿ ವೇಶ್ಯಾವಾಟಿಕೆಗೆ ಸಂಪರ್ಕಿಸಿ ಎಂದು ನಿನ್ನ ನಂಬರ್ ಬರೆಯುವುದಾಗಿ ಬೆದರಿಕೆ ಹಾಕಿದ್ದಾನೆ. ಈ ವಿಚಾರ ಸಂತ್ರಸ್ತ ಮಹಿಳೆಯ ಗಂಡನಿಗೆ ತಿಳಿದು ಇಬ್ಬರ ಮದ್ಯೆ ಮನಸ್ಥಾಪ ಕೂಡ ಉಂಟಾಗಿದೆ‌. ಬಳಿಕ ಜಗಳ ಮಾಡಿಕೊಂಡು ಗಂಡನನ್ನು ತೊರೆದು ಸ್ನೇಹಿತೆಯರ ಮನೆಗೆ ಹೋಗಿದ್ದ ಸಂತ್ರಸ್ತೆ ಕೈ ಕುಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾಳೆ. ಸದ್ಯ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ರಾಜಗೋಪಾಲ ನಗರ ಠಾಣೆ ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸಿದ್ದಾರೆ.

ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದರೂ ಅಂತ ಅಪರಿಚಿತರ ಜೊತೆ ಸ್ನೇಹ ಮಾಡುವ ಮುನ್ನ ಎಚ್ಚರದಿಂದ ಇರಬೇಕು. ಅದರಲ್ಲೂ ಹೆಣ್ಮಕ್ಳು ಹುಷಾರಾಗಿರಬೇಕು. ಇಲ್ಲವಾದ್ರೆ ಈ ರೀತಿ ಫಜೀತಿ ಅನುಭವಿಸಬೇಕಾಗುತ್ತದೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಾಕ್ಸ್ ಆಫೀಸ್ ದೂಳಿಪಟ ಮಾಡುತ್ತಿರುವ ‘ಧುರಂಧರ್’, ಮಂಕಾದ ‘ಅವತಾರ್’ – Kannada News | Dhurandhar and Avatar Fire and Ash movie Saturday collection

ಕೆಲವು ಸಿನಿಮಾಗಳು (Cinema) ಹಾಗೆಯೇ ಆರಂಭ ಸಾಮಾನ್ಯವಾಗಿರುತ್ತದೆ ಆದರೆ ದಿನಗಳು ಕಳೆದಂತೆ ಕಲೆಕ್ಷನ್ ಡಬಲ್, ತ್ರಿಬಲ್ ಆಗುತ್ತಾ ಸಾಗುತ್ತದೆ. ಕನ್ನಡದ ‘ಸು ಫ್ರಂ ಸೋ’ ಸಿನಿಮಾ ಹೀಗೆಯೇ ಆಗಿತ್ತು, ಲಕ್ಷಗಳಲ್ಲಿ ಪ್ರಾರಂಭವಾಗಿದ್ದ ದಿನದ ಗಳಿಕೆ, ಬಳಿಕ ಕೋಟಿ, ಹತ್ತು ಕೋಟಿ ಹೀಗೆ ಏರಿಕೆ ಆಗಿತ್ತು. ಇದೀಗ ಹಿಂದಿ ಸಿನಿಮಾ ‘ಧುರಂದರ್’ ಸಹ ಹೀಗೆಯೇ ಆಗಿದೆ. ಸಾಮಾನ್ಯ ಓಪನಿಂಗ್ ಕಂಡ ಈ ಸಿನಿಮಾ ಆ ನಂತರದ ದಿನಗಳಲ್ಲಿ ಕಲೆಕ್ಷನ್ ಅನ್ನು ದೊಡ್ಡ ಮಟ್ಟದಲ್ಲಿ ಏರಿಸಿಕೊಂಡಿದೆ. ಈಗ ದಿನದಿಂದ ದಿನಕ್ಕೆ ಕಲೆಕ್ಷನ್ ಏರಿಕೆ ಆಗುತ್ತಲೇ ಇದೆ. ಆದರೆ ಎರಡು ದಿನದ ಹಿಂದಷ್ಟೆ ಬಿಡುಗಡೆ ಆದ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮಂಕಾಗಿದೆ.

ರಣ್ವೀರ್ ಸಿಂಗ್ ನಟನೆಯ ‘ಧುರಂಧರ್’ ಸಿನಿಮಾ ಬಿಡುಗಡೆ ಆಗಿ ನಿನ್ನೆಗೆ 17 ದಿನಗಳಾಗಿದ್ದು, ಸಿನಿಮಾ ಬಿಡುಗಡೆ ಆದ ಮೂರು ವಾರಗಳು ಕಳೆಯುವ ಮುಂಚೆಯೇ ಭಾರತದಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ದಾಟಿದೆ. ಆರಂಭದಲ್ಲಿ ದಿನಕ್ಕೆ 8 ಕೋಟಿ 10 ಕೋಟಿ ಗಳಿಸುತ್ತಿದ್ದ ಈ ಸಿನಿಮಾ ಈಗ ಕಲೆಕ್ಷನ್ ಅನ್ನು ದುಪ್ಪಟ್ಟು ಹೆಚ್ಚಿಸಿಕೊಂಡಿದ್ದು 17ನೇ ದಿನ ಅಂದರೆ ಶನಿವಾರದಂದು ಬಾಕ್ಸ್ ಆಫೀಸ್​​ನಲ್ಲಿ 34 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾನುವಾರದ ಕಲೆಕ್ಷನ್ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:ಭಾರತದಲ್ಲೇ 500 ಕೋಟಿ ರೂ. ದಾಟಿದ ಧುರಂಧರ್ ಕಲೆಕ್ಷನ್: ಮುಂದಿನ ಟಾರ್ಗೆಟ್ ಏನು?

‘ಧುರಂಧರ್’ ಸಿನಿಮಾದ ಭಾರತದ ಕಲೆಕ್ಷನ್ ಈ ವರೆಗೆ (17 ದಿನಗಳಲ್ಲಿ) 548 ಕೋಟಿ ರೂಪಾಯಿಗಳಾಗಿದೆ. ಮೊದಲ ವಾರದಲ್ಲಿ 207 ಕೋಟಿ ಗಳಿಕೆ ಮಾಡಿದ್ದ ಈ ಸಿನಿಮಾ, ಎರಡನೇ ವಾರ 253 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇನ್ನು ಮೂರನೇ ವಾರ 300 ಕೋಟಿ ಗಳಿಸುವ ನಿರೀಕ್ಷೆ ಇದೆ. ‘ಧುರಂಧರ್’ ಸಿನಿಮಾ, ಭಾರತೀಯ ಸೈನಿಕನೋರ್ವ ಪಾಕಿಸ್ತಾನದಲ್ಲಿ ಗೂಢಚಾರಿಕೆ ಮಾಡುವ ಕತೆಯನ್ನು ಒಳಗೊಂಡಿದೆ. ಈ ಸಿನಿಮಾ ನಿಜ ಘಟನೆಗಳಿಂದ ಸ್ಪೂರ್ತಿ ಪಡೆದು ಮಾಡಲಾದ ಸಿನಿಮಾ ಆಗಿದೆ. ಸಿನಿಮಾದ ಹಾಡುಗಳು, ಸಿನಿಮಾದಲ್ಲಿ ನಟನೆ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದೆ.

ಜೇಮ್ಸ್ ಕ್ಯಾಮರನ್ ನಿರ್ದೇಶನದ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ಶುಕ್ರವಾರವಷ್ಟೆ ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಬಿಡುಗಡೆ ಆಗಿದೆ. ಇದು ‘ಅವತಾರ್’ ಸರಣಿಯ ಮೂರನೇ ಸಿನಿಮಾ ಆಗಿದ್ದು, ಈ ಮುಂಚಿನ ಎರಡು ‘ಅವತಾರ್’ ಸಿನಿಮಾಗಳು ಭಾರತದಲ್ಲಿ ಒಳ್ಳೆಯ ಗಳಿಕೆ ಮಾಡಿವೆ. ಆದರೆ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾ ನಿರೀಕ್ಷಿಸಿದಷ್ಟು ಗಳಿಕೆ ಮಾಡುತ್ತಿಲ್ಲ. ಮೊದಲ ದಿನ ಅಂದರೆ ಶುಕ್ರವಾರ ಈ ಸಿನಿಮಾ ಭಾರತದಲ್ಲಿ 19 ಕೋಟಿ ಗಳಿಸಿತ್ತು, ಎರಡನೇ ದಿನ ಅಂದರೆ ಶನಿವಾರ 22 ಕೋಟಿ ರೂಪಾಯಿ ಗಳಿಸಿದೆ. ಭಾನುವಾರದ ಬಳಿಕ ಸಿನಿಮಾದ ಕಲೆಕ್ಷನ್ ಕುಸಿಯುವ ಸಾಧ್ಯತೆ ದಟ್ಟವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪೂರ್ತಿ ವಿಡಿಯೋ ಬೇಕಾದ್ರೆ ಫಾಲೋ- ಲೈಕ್ ಮಾಡುವಂತೆ ಪೋಸ್ಟ್​ ಹಾಕುವವರೇ ಹುಷಾರ್ – Kannada News | Bengaluru Cyber Police booked Case Against Social Media Users Who Post For Like And Comments

ಬೆಂಗಳೂರು, (ಡಿಸೆಂಬರ್ 21): ಸೋಶಿಯಲ್ ಮೀಡಿಯಾ (Social Media)  ಎನ್ನುವುದನ್ನು ಇತ್ತೀಚಿನ ದಿನಗಳಲ್ಲಿ ಮಕ್ಕಳಿಂದ ಹಿಡಿದು ವಯಸ್ಸಾದ ವೃದ್ದರು ಬಳಕೆ‌ ಮಾಡುತ್ತಿರುವ ಮಾಧ್ಯಮ. ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ ಹೂವು ಎನ್ನುವಂತೆ ಪ್ರತಿ ದಿನ ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಪರವಾಗಿಲ್ಲ ಮೊಬೈಲ್ ಗೆ  (Mobile ನೆಟ್ ಇರಬೇಕು ಅನ್ನೋ ಪರಿಸ್ಥಿತಿ ನಿರ್ಮಾಣ ಆಗಿದೆ. ಇದರ ಮಧ್ಯೆ ಕಟೆಂಟ್ ಕ್ರಿಯೆಟ್ ಹೆಸರಲ್ಲಿ ಹಲವರು ಲೈಕ್, ಫಾಲೋ, ಕಾಮೆಂಟ್ ಗಾಗಿ ನಾನಾ ರೀತಿ ಸರ್ಕಸ್ ಕೂಡ ಮಾಡುತ್ತಿದ್ದಾರೆ. ಕೆಲವರಂತೂ ತಪ್ಪು ದಾರಿ ಹಿಡಿಯುತ್ತಿದ್ದಾರೆ. ಅಶ್ಲೀಲತೆ ಮೂಲಕ ತಮ್ಮ ಫಾಲೋವರ್ಸ್ ಹೆಚ್ಚಳಕ್ಕೆ ಕೈ ಹಾಕಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೌದು..ಲೈಕ್, ಫಾಲೋವರ್ಸ್​​​​ಗಾಗಿ ಅಡ್ಡದಾರಿ ಹಿಡಿದಿರುವ ಸೋಷಿಯಲ್ ಮೀಡಿಯಾ ಅಕೌಂಟ್ ಗಳ ಬಳಕೆ ಮಾಡುವ ಕೆಲವರ ವಿರುದ್ಧ ಬೆಂಗಳೂರು ಪೊಲೀಸರು (Bengaluru Police) ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಫಾಲೋವರ್ಸ್ ಹೆಚ್ಚಿಸಿಕೊಳ್ಳುವ ಹುಚ್ಚಿನಿಂದ ಕೆಲವರು ಅಶ್ಲೀಲ ವಿಡಿಯೋ ತುಣುಕು, ಅಥವಾ ಪೋಟೋಗಳನ್ನ ಹಾಕಿ, ಆ ಪೂರ್ತಿ ವಿಡಿಯೋ ಬೇಕಾದ್ರೆ ತಮ್ಮ ಅಕೌಂಟ್ ಗಳನ್ನ ಫಾಲೋ ಮಾಡುವಂತೆ ಪೋಸ್ಟ್ ಮಾಡ್ತಿದ್ದಾರೆ. ಇದು ಸೋಶಿಯಲ್ ಮಿಡಿಯಾ ಓಪನ್ ಮಾಡುವ ಹಲವರಿಗೆ ಇರಿಸುಮುರಿಸು ಉಂಟು ಮಾಡುವಂತೆ ಮಾಡಿದೆ. ಇದೇ ಕಾರಣಕ್ಕೆ ಬೆಂಗಳೂರಿನ ಶ್ರೀಹರ್ಷ ಎನ್ನುವಂತ ವ್ಯಕ್ತಿ ಬೆಂಗಳೂರು ಸೈಬರ್ ಕ್ರೈಂ ಪೊಲೀಸರಿಗೂ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದರಂತೆ ಸೈಬರ್ ಕ್ರೈಂ ಪೊಲೀಸರು ಒಟ್ಟು 28 ಅಕೌಂಟ್ ಗಳ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ಜೊತೆಗೆ ಆ ಅಕೌಂಟ್ ಗಳಲ್ಲಿ ಹಾಕಲಾದ ಪೋಸ್ಟ್ ಗಳನ್ನ ಸಂಗ್ರಹ ಕೂಡ ಮಾಡಿದ್ದು, ಪೋಸ್ಡ್ ಹಾಕಿದವರ ಪತ್ತೆಗೆ ಮುಂದಾಗಿದ್ದಾರೆ.

ಮನರಂಜನೆಗೆ ಹಾಗೂ ಸಮಾಜದ ಒಳತಿಯ ವಿಚಾರಗಳನ್ನ ವಿನಿಮಯ ಮಾಡೋಕೆ ಬಳಕೆಯಾಗಬೇಕಿದ್ದ ಸೋಶಿಯಲ್ ಮೀಡಿಯಾ ಕೆಲವರಿಂದ ಸಮಾಜಕ್ಕೆ ಮಾರಕವಾಗುವ ಸ್ಥಿತಿ ತಲುಪುತ್ತಿದ್ದು, ಸದ್ಯ ಅಂತವರ ವಿರುದ್ಧ ಕ್ರಮಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ನೀವು ಏನಾದ್ರು ಲೈಕ್ ಕಾಮೆಂಟ್, ಫಾಲೋರ್ಸ್​​ ಗಾಗಿ ಈ ರೀತಿ ಮಾಡುತ್ತಿದ್ದರೆ ಹುಷಾರಾಗಿರಿ. ಇಲ್ಲ ಅಂದ್ರೆ ನಿಮ್ಮ ಮೇಲೂ ಕೇಸ್ ಬೀಳುವುದು ಗ್ಯಾರೆಂಟಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಪಾಕ್ ಬೌಲರ್ ಜೊತೆ ಪಿಚ್ ಮಧ್ಯದಲ್ಲೇ ಜಗಳಕ್ಕಿಳಿದ ವೈಭವ್ ಸೂರ್ಯವಂಶಿ; ವಿಡಿಯೋ ವೈರಲ್ – Kannada News | U19 Asia Cup Final: India vs Pakistan Verbal Spat, Vaibhav Suryavanshi, Ali Raza Controversy

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಭಾನುವಾರ ನಡೆದ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ 191 ರನ್​ಗಳಿಂದ ಸೋತ ಭಾರತ ಚಾಂಪಿಯನ್ ಪಟ್ಟಕ್ಕೇರುವ ಅವಕಾಶದಿಂದ ವಂಚತಿವಾಯಿತು.ಭಾನುವಾರ ನಡೆದ ಅಂಡರ್-19 ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಭಾರತಕ್ಕೆ ಗೆಲ್ಲಲು 348 ರನ್‌ಗಳ ಗುರಿಯನ್ನು ನೀಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತ ತಂಡ ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು. ಹೀಗಾಗಿ ತಂಡವು 26.2 ಓವರ್‌ಗಳಲ್ಲಿ ಕೇವಲ 156 ರನ್‌ಗಳಿಗೆ ಆಲೌಟ್ ಆಯಿತು.

ಇನ್ನು ಇದೇ ಪಂದ್ಯದ ಸಮಯದಲ್ಲಿ ಮೈದಾನದಲ್ಲಿ ಉಭಯ ತಂಡಗಳ ಆಟಗಾರರ ನಡುವೆ ಮಾತಿನ ಯುದ್ಧವೇ ನಡೆಯಿತು. ಭಾರತದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಐದನೇ ಓವರ್‌ನಲ್ಲಿ ವಿಕೆಟ್ ಕಳೆದುಕೊಂಡರು. ಇತ್ತ ವೈಭವ್ ವಿಕೆಟ್ ಪಡೆದ ಪಾಕಿಸ್ತಾನಿ ವೇಗದ ಬೌಲರ್ ಅಲಿ ರಜಾ ಆಕ್ರಮಣಕಾರಿ ಸಂಭ್ರಮಾಚರಣೆ ಮಾಡುವುದರ ಜೊತೆಗೆ ಪೆವಿಲಿಯನ್​ತ್ತ ಹೋಗುತ್ತಿದ್ದ ವೈಭವ್ ಬಳಿ ಏನನ್ನೋ ಹೇಳಿದರು. ಇದರಿಂದ ಕೆರಳಿದ ವೈಭವ್ ಕೂಡ ಪಾಕ್ ವೇಗಿಗೆ ತಕ್ಕ ಪ್ರತ್ಯುತ್ತರ ನೀಡಿ ಪೆವಿಲಿಯನ್ ಸೇರಿಕೊಂಡರು. ಇದೀಗ ಇವರಿಬ್ಬರ ನಡುವೆ ವಾಗ್ಯುದ್ಧ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ.

Source link

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಚಿತ್ತಗಾಂಗ್​ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ನಿಲ್ಲಿಸಿದ ಭಾರತ – Kannada News | Bangladesh violence, India suspends its visa operations for indefinite period in Chittagong

ಢಾಕಾ, ಡಿಸೆಂಬರ್ 21: ಮತ್ತೆ ತೀವ್ರ ರೀತಿಯಲ್ಲಿ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತವು ಚಿತ್ತಗಾಂಗ್ ನಗರದಲ್ಲಿ ತನ್ನ ವೀಸಾ ಆಪರೇಷನ್ಸ್ ಅನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಿದೆ. ಚಿತ್ತಗಾಂಗ್ ನಗರದಲ್ಲಿ ಭಾರತೀಯ ಉಪರಾಯಭಾರ ಕಚೇರಿಯ (Chittagong Indian Assistant High Commission) ಮೇಲೆ ಬಾಂಗ್ಲಾ ಪ್ರತಿಭಟನಕಾರರು ದಾಳಿ ನಡೆಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೃಹತ್ ಸಂಖ್ಯೆಯಲ್ಲಿದ್ದ ಜನರ ಗುಂಪು ಭಾರತದ ಈ ರಾಜತಾಂತ್ರಿಕ ಕಚೇರಿಗೆ ನುಗ್ಗಲು ಯತ್ನಿಸಿತ್ತಾದರೂ ಭದ್ರತಾ ಪಡೆಗಳು ಅದನ್ನು ವಿಫಲಗೊಳಿಸಿದ್ದವು. ಈಗ ಮುನ್ನೆಚ್ಚರಿಕೆಯಾಗಿ ಕಚೇರಿಯಲ್ಲಿನ ವೀಸಾ ಕಾರ್ಯವನ್ನು ಮುಂದಿನ ಸೂಚನೆಯವರೆಗೂ ನಿಲ್ಲಿಸಲಾಗಿದೆ.

ಬಾಂಗ್ಲಾ ಹೊತ್ತಿ ಉರಿಯುತ್ತಿರುವುದು ಯಾಕೆ?

ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹದಿ ಎಂಬುವವರನ್ನು ಮುಸುಕುಧಾರಿ ವ್ಯಕ್ತಿಗಳು ಡಿಸೆಂಬರ್ 12ರಂದು ಢಾಕಾದ ಬಿಜಯ್​ನಗರ್ ಬಳಿ ತಲೆಗೆ ಗುಂಡಿಕ್ಕಿದ್ದರು. ಸಿಂಗಾಪುರದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಯಿತಾರೂ ಚಿಕಿತ್ಸೆ ಫಲಕಾರಿಯಾಗದೇ ಆತ ಡಿ. 18ರಂದು ನಿಧನವೊಂದಿದ್ದ. ಅದರ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಹಲವೆಡೆ ಹಿಂಸಾಚಾರ ಭುಗಿಲೆದ್ದಿದೆ.

ಇದನ್ನೂ ಓದಿ: ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ?

ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿ, ಚಿತ್ತಾಂಗ್, ಖುಲ್ನಾ ಮತ್ತು ರಾಜಷಾಹಿಯಲ್ಲಿರುವ ಉಪ ರಾಯಭಾರ ಕಚೇರಿಗಳ ಬಳಿ ತೀವ್ರ ಸ್ವರೂಪದಲ್ಲಿ ಪ್ರತಿಭಟನೆಗಳು ನಡೆದಿವೆ. ಬಂದರು ನಗರಿಯಾದ ಚಿತ್ತಗಾಂಗ್​ನ ಭಾರತದ ಉಪರಾಯಭಾರ ಕಚೇರಿಯಲ್ಲಿ ದುರುಳರು ದಾಂದಲೆ ನಡೆಸಲು ಯತ್ನಿಸಿದ ಹಿನ್ನೆಲೆಯಲ್ಲಿ ಇವತ್ತಿನಿಂದಲೇ ಎಲ್ಲಾ ವೀಸಾ ಸಂಬಂಧಿತ ಕೆಲಸಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.

ಹತ್ಯೆಯಾದ ಷರೀಫ್ ಉಸ್ಮಾನ್ ಹದಿ ಕಳೆದ ವರ್ಷ ಶೇಖ್ ಹಸೀನಾ ವಿರುದ್ಧ ಎದ್ದ ದಂಗೆಯ ರೂವಾರಿ. ಈತನ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಮುಂಬರುವ ಚುನಾವಣೆಯಲ್ಲೂ ಈತ ಸ್ಪರ್ಧಿಸಿದ್ದ. ಈತನ ಹತ್ಯೆ ಹಿಂದೆ ಭಾರತದ ಕೈವಾಡ ಇದೆ ಎಂಬುದು ಅಲ್ಲಿನ ಕೆಲವರ ಆರೋಪ. ಈ ಹತ್ಯೆ ಘಟನೆಯನ್ನು ಪಾಕ್ ಪ್ರಚೋದಿತ ಶಕ್ತಿಗಳು ತಮ್ಮ ದುರುದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿರುವ ಆರೋಪ ಇದೆ. ಹಿಂದೂ ಧರ್ಮೀಯ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹಲ್ಲೆ ಎಸಗಿ ಬೆಂಕಿಯಿಂದ ಸುಟ್ಟುಹಾಕಿದ ಘಟನೆಯೂ ಸೇರಿದಂತೆ ಭಾರತ ಹಾಗೂ ಹಿಂದೂ ವಿರೋಧಿ ಕೃತ್ಯಗಳು ಪ್ರತಿಭಟನೆಯಲ್ಲಿ ಹೆಚ್ಚಾಗಿ ಜರುಗುತ್ತಿವೆ. ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ ಎನ್ನುವಂತೆ ದುಷ್ಟ ಶಕ್ತಿಗಳು ಬಿಂಬಿಸಲು ಯತ್ನಿಸುತ್ತಿವೆ.

ಇದನ್ನೂ ಓದಿ: ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ

ಹದಿಯ ಅಂತ್ಯ ವಿಧಿ ಕಾರ್ಯಕ್ರಮದಲ್ಲಿ ಸಾವಿರಾರು ಜನರು ನೆರೆದಿದ್ದರು. ಅಲ್ಲಿ ಭಾರತ ವಿರೋಧಿ ಘೋಷಣೆಗಳು ಜೋರಾಗಿ ಮೊಳಗಿವೆ. ಕಾಶ್ಮೀರದಲ್ಲಿ ಉಗ್ರಗಾಮಿಗಳು ಅನುಸರಿಸುತ್ತಿದ್ದ ತಂತ್ರಗಳೇ ಅಲ್ಲಿ ಕಾಣಿಸುತ್ತಿವೆ. ‘ಡೆಲ್ಲಿ ಆರ್ ಢಾಕಾ- ಢಾಕಾ ಢಾಕಾ’ (ಡೆಲ್ಲಿಯೋ ಢಾಕಾವೋ- ಢಾಕಾ ಢಾಕಾ) ಎಂಬಿತ್ಯಾದಿ ಭಾರತ ವಿರೋಧಿ ಘೋಷಣೆಗಳು ಷರೀಫ್ ಉಸ್ಮಾನ್ ಹದಿ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಕೇಳಿವೆ. ಶೇಖ್ ಹಸೀನಾ ನಿರ್ಗಮನದ ಬಳಿಕ ಬಾಂಗ್ಲಾದೇಶದಲ್ಲಿ ಪಾಕಿಸ್ತಾನೀ ಪರ ಶಕ್ತಿಗಳ ಕೈ ಮೇಲಾಗಿರುವುದು ಸ್ಪಷ್ಟವಾಗಿದೆ.

ಇನ್ನಷ್ಟು ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 7:37 pm, Sun, 21 December 25

Source link

NZ vs WI: ಐಪಿಎಲ್​ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ

Source link

Exit mobile version