Vastu Tips for Money: ಪರ್ಸ್‌ನಲ್ಲಿ ಈ 4 ವಸ್ತುಗಳಿದ್ದರೆ ಜೀವನದಲ್ಲಿ ಹಣಕ್ಕೆಂದು ಕೊರತೆಯಾಗದು! – Kannada News | Vastu Tips for Money: Keep These 4 Items in Your Wallet to Attract Wealth

ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೈಯಲ್ಲಿ ಉಳಿಯುವುದೇ ಇಲ್ಲ, ಜೊತೆಗೆ ಸಾಲವೂ ಹೆಚ್ಚಾಗುತ್ತಾ ಹೋಗುತ್ತಿದೆ ಎಂಬ ಸಮಸ್ಯೆಯನ್ನು ನೀವೂ ಕೂಡ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ವಾಸ್ತು ಸಲಹೆ ಅನುಸರಿಸುವುದು ಅಗತ್ಯ. ಕೆಲವು ಸರಳ ಪರಿಹಾರಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಜೀವನದಲ್ಲಿ ಪ್ರಗತಿಗೆ ಅನೇಕ ಅವಕಾಶಗಳನ್ನು ತರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಈ ನಾಲ್ಕು ವಸ್ತುಗಳನ್ನು ನಿಮ್ಮ ಪರ್ಸ್​ನಲ್ಲಿ ಇಟ್ಟುವುದರಿಂದ ನೀವು ಆರ್ಥಿಕ ಸಮಸ್ಯೆಯಿಂದ ಹೊರಬರಬಹುದಾಗಿದೆ.

ಅಕ್ಕಿ ಕಾಳು:

ವಾಸ್ತು ಶಾಸ್ತ್ರದ ಪ್ರಕಾರ, ಅಕ್ಕಿ ಕಾಳುಗಳನ್ನು ಬೆಳವಣಿಗೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಯಾವಾಗಲೂ ನಿಮ್ಮ ಪರ್ಸ್​ನಲ್ಲಿ ಅಕ್ಕಿ ಕಾಳುಗಳನ್ನು ಇರಿಸಿ. ಈ ಸರಳ ಪರಿಹಾರವು ನಿಮಗೆ ಲಕ್ಮೀ ದೇವಿಯ ಆಶೀರ್ವಾದವನ್ನು ತರುತ್ತದೆ, ಎಂದಿಗೂ ಆರ್ಥಿಕ ಸಮಸ್ಯೆಗಳನ್ನು ಎದುರಿಸುವುದಿಲ್ಲ ಮತ್ತು ನಿಮ್ಮ ಪರ್ಸ್​ನಲ್ಲಿ ಯಾವಾಗಲೂ ಹಣದಿಂದ ತುಂಬಿರುತ್ತದೆ.

ಕುಬೇರ ಯಂತ್ರ:

ವಾಸ್ತು ಶಾಸ್ತ್ರದ ಪ್ರಕಾರ, ಲಕ್ಷ್ಮಿ ದೇವಿಯು ಸಂಪತ್ತಿನ ದೇವತೆಯಾಗಿರುವಂತೆ, ಕುಬೇರನನ್ನು ಸಹ ಸಂಪತ್ತಿನ ದೇವರು ಎಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಯಾವಾಗಲೂ ಕುಬೇರ ಯಂತ್ರವನ್ನು ನಿಮ್ಮ ಪರ್ಸ್​ನಲ್ಲಿ ಇರಿಸಿ, ಅದು ನಿಮ್ಮ ಕೈಯಲ್ಲಿ ಹಣವನ್ನು ಉಳಿಸಿಕೊಳ್ಳುತ್ತದೆ.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಗೋಮತಿ ಚಕ್ರ:

ಗೋಮತಿ ಚಕ್ರವು ಲಕ್ಷ್ಮಿ ದೇವಿಗೆ ತುಂಬಾ ಪ್ರಿಯವಾಗಿದೆ, ಆದ್ದರಿಂದ ವಾಸ್ತು ಶಾಸ್ತ್ರವು ಗೋಮತಿ ಚಕ್ರವನ್ನು ನಿಮ್ಮ ಪರ್ಸ್​ನಲ್ಲಿ ಇಟ್ಟುಕೊಳ್ಳಲು ಸಲಹೆ ನೀಡುತ್ತದೆ. ನಿಮ್ಮ ಕೈಚೀಲದಲ್ಲಿ ಗೋಮತಿ ಚಕ್ರವಿದ್ದರೆ, ನೀವು ಯಾವಾಗಲೂ ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯುತ್ತೀರಿ.

ಬೆಳ್ಳಿ ನಾಣ್ಯ:

ವಾಸ್ತು ಶಾಸ್ತ್ರವು ಹೇಳುವಂತೆ, ಬೆಳ್ಳಿ ನಾಣ್ಯವನ್ನು ಯಾವಾಗಲೂ ಪರ್ಸ್​ನಲ್ಲಿ ಇಟ್ಟುಕೊಳ್ಳಬೇಕು, ಏಕೆಂದರೆ ಅದು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ತರುತ್ತದೆ ಮತ್ತು ಪರ್ಸ್​ ಹಣದಿಂದ ತುಂಬಿರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ – Kannada News | India Women vs Sri Lanka T20 Series Begins: World Cup Prep, Toss Update

ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳು ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಮೈದಾನಕ್ಕಿಳಿಯುತ್ತಿರುವುದು ಇದೇ ಮೊದಲು. ಹೀಗಾಗಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಉಭಯ ತಂಡಗಳ ನಡುವಿನ ಈ ಮೊದಲ ಪಂದ್ಯ ವಿಶಾಖಪಟ್ಟಣಂನಲ್ಲಿರುವ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಭಾರತೀಯ ಮಹಿಳಾ ತಂಡವು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೆ ತನ್ನ ಔಪಚಾರಿಕವಾಗಿ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

Source link

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಬಿಗ್​​ಬಾಸ್ (Bigg Boss) ಮನೆಯಲ್ಲಿ ಭಾನುವಾರದ ಎಪಿಸೋಡ್ ಫನ್ ಎಪಿಸೋಡ್ ಆಗಿರುತ್ತದೆ. ಸುದೀಪ್ ಅವರು ಸ್ಪರ್ಧಿಗಳನ್ನು ನಗಿಸುವ ಜೊತೆಗೆ ತಾವೂ ನಕ್ಕು, ಪ್ರೇಕ್ಷಕರನ್ನೂ ನಗಿಸಿ ಕೊನೆಗೆ ಒಬ್ಬರನ್ನೋ ಅಥವಾ ಇಬ್ಬರನ್ನೋ ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾರೆ. ಇದೀಗ ಮತ್ತೊಂದು ಭಾನುವಾರದ ಎಪಿಸೋಡ್ ಬಂದಿದೆ. ಸುದೀಪ್, ಸ್ಪರ್ಧಿಗಳೊಡನೆ ತುಸು ಫನ್ ಮಾಡಿದ್ದಾರೆ. ಗಿಲ್ಲಿ ಹಾಗೂ ರಜತ್ ಇಬ್ಬರಿಗೂ ಕಣ್ಣಿಗೆ ಬಟ್ಟೆ ಕಟ್ಟಿದ್ದಾರೆ. ಅವರು ಮಾಡುವ ಕಾಮಿಡಿಗೆ ಸುದೀಪ್ ಸೇರಿ, ಇಡೀ ಮನೆ ಮಂದಿಯೇ ನಕ್ಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘45’ vs ‘ಮಾರ್ಕ್’: ಯಾವ ಸಿನಿಮಾ ಮೊದಲು ಬಿಡುಗಡೆ? – Kannada News | Sudeep’s Mark and Shiva Rajkumar’s 45 movie advance booking open

ಡಿಸೆಂಬರ್ ತಿಂಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಡಿಸೆಂಬರ್ ಮತ್ತು ಜನವರಿ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಆಗಿಯೇ ಆಗುತ್ತವೆ. ಈ ಡಿಸೆಂಬರ್ ಅಂತೂ ಕನ್ನಡ ಸಿನಿಮಾ ಪ್ರೇಮಿಗಳಿಗೆ ಹಬ್ಬವೇ ಸರಿ. ಡಿಸೆಂಬರ್ 11 ರಂದು ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ಅದಾದ ಬಳಿಕ ಇನ್ನೂ ಎರಡು ದೊಡ್ಡ ಸಿನಿಮಾಗಳು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಡಿಸೆಂಬರ್ 25 ರಂದು ಸುದೀಪ್ ನಟನೆಯ ‘ಮಾರ್ಕ್’ ಮತ್ತು ಅದೇ ದಿನದಂದು ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಸಹ ತೆರೆಗೆ ಬರುತ್ತಿದೆ. ಈ ಎರಡೂ ಸಿನಿಮಾಗಳ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಓಪನ್ ಆಗಿದೆ.

‘45’ ಮತ್ತು ‘ಮಾರ್ಕ್’ ಸಿನಿಮಾಗಳು ಒಂದೇ ದಿನ ಅಂದರೆ ಡಿಸೆಂಬರ್ 25 ರಂದೇ ಬಿಡುಗಡೆ ಆಗುತ್ತಿವೆ. ಒಂದೇ ದಿನ ಬಿಡುಗಡೆ ಆದರೂ ಸಹ ಪರಸ್ಪರ ಎದುರಾಳಿಗಳು ಆಗದಂತೆ ಕೆಲ ಎಚ್ಚರಿಕೆಗಳನ್ನು ಚಿತ್ರತಂಡಗಳು ವಹಿಸಿಕೊಂಡಿವೆ. ಎರಡೂ ಸಿನಿಮಾಗಳು ಪೇಯ್ಡ್ ಪ್ರೀಮಿಯರ್ ಶೋ ಅಥವಾ ವಿಶೇಷ ಶೋಗಳನ್ನು ಆಯೋಜಿಸುತ್ತಿದ್ದು, ಈ ವಿಶೇಷ ಶೋಗಳ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಈಗಾಗಲೇ ಆರಂಭವಾಗಿದೆ.

‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬೆಳಿಗ್ಗೆ 6 ಗಂಟೆಗೆ ಶೋ ಪ್ರಾರಂಭ ಮಾಡುತ್ತಿದ್ದರೆ, ‘45’ ಸಿನಿಮಾ ಡಿಸೆಂಬರ್ 24ರ ರಾತ್ರಿಯೇ ಶೋ ಪ್ರದರ್ಶನ ಮಾಡುತ್ತಿದೆ. ಡಿಸೆಂಬರ್ 24ರ ರಾತ್ರಿಯೇ ವಿಶೇಷ ಶೋ ಅನ್ನು ‘45’ ಚಿತ್ರತಂಡ ಆಯೋಜಿಸಿದ್ದು ರಾತ್ರಿ 7 ಗಂಟೆಗೆ ಕೆಲವೆಡೆ, 7:30ಕ್ಕೆ ಕೆಲವೆಡೆ ಶೋಗಳು ಪ್ರದರ್ಶನಗೊಳ್ಳಲಿವೆ. ಆದರೆ ಟಿಕೆಟ್ ದರವನ್ನು ಕಡಿಮೆಯೇ ನಿಗದಿ ಪಡಿಸಲಾಗಿದೆ. ‘ಮಾರ್ಕ್’ ಸಿನಿಮಾದ ವಿಶೇಷ ಶೋಗಳ ಟಿಕೆಟ್ ದರ 400 ರಿಮದ 500 ರೂಪಾಯಿಗಳಿದ್ದರೆ, ‘45’ ಸಿನಿಮಾದ ಟಿಕೆಟ್ ದರ 200 ರಿಂದ 250 ರೂಪಾಯಿ ಪಾತ್ರವೇ ಇದೆ.

ಇದನ್ನೂ ಓದಿ:ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಯತ್ನ: ಬೇಡವೇ ಬೇಡ ಎಂದ ದಾಸ

‘45’ ಸಿನಿಮಾ ಡಿಸೆಂಬರ್ 24ರ ರಾತ್ರಿ ವಿಶೇಷ ಶೋ ಆಯೋಜಿಸಿದೆ ಆದರೆ ಡಿಸೆಂಬರ್ 25ರ ಬೆಳಿಗ್ಗೆ 6 ಗಂಟೆ ಅಥವಾ ಅರ್ಲಿ ಮಾರ್ನಿಂಗ್ ಶೋ ಅನ್ನು ಪ್ರದರ್ಶಿಸುತ್ತಿಲ್ಲ ಆ ಮೂಲಕ ‘ಮಾರ್ಕ್’ ಜೊತೆ ಸ್ಪರ್ಧೆಗೆ ಇಳಿಯುವ ಪ್ರಯತ್ನ ಮಾಡಿಲ್ಲ. ಅದರಂತೆ ‘ಮಾರ್ಕ್’ ಸಿನಿಮಾ ಸಹ ಡಿಸೆಂಬರ್ 24ರಂದು ಯಾವುದೇ ಪ್ರೀಮಿಯರ್ ಶೋ ಆಯೋಜಿಸಿಲ್ಲ. ಆ ಮೂಲಕ ‘45’ ಸಿನಿಮಾದ ವಿಶೇಷ ಶೋಗಳಿಗೆ ಯಾವುದೇ ಸ್ಪರ್ಧೆ ಒಡ್ಡಿಲ್ಲ.

ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾವನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ಇನ್ನು ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾವನ್ನು ಅರ್ಜುನ್ ಜನ್ಯ ನಿರ್ದೇಶಿಸದ್ದಾರೆ. ಇದು ಅರ್ಜುನ್ ಜನ್ಯ ನಿರ್ದೇಶನ ಮಾಡಿರುವ ಮೊದಲ ಸಿನಿಮಾ ಆಗಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಸಖತ್ ಗಮನ ಸೆಳೆದಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು! – Kannada News | NLC Apprenticeship 2025: 575 Engineering and Diploma Vacancies – Apply Now!

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ.

ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳು ಸೇರಿವೆ. ಈ ಎರಡು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಗತ್ಯವಿರುವ ಅರ್ಹತೆಗಳು ಮತ್ತು ಆಯ್ಕೆ ಪ್ರಕ್ರಿಯೆಯನ್ನು ಹೇಗೆ ನಡೆಸಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಅರ್ಹತಾ ವಿವರ:

ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ, ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ ಹೊಂದಿರಬೇಕು. ಅರ್ಜಿದಾರರು ಅಪ್ರೆಂಟಿಸ್‌ಶಿಪ್ ನಿಯಮಗಳ ಪ್ರಕಾರ ವಯಸ್ಸಿನ ಅವಶ್ಯಕತೆಗಳನ್ನು ಪೂರೈಸಬೇಕು. ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಖಾಲಿ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

  • ಕಂಪನಿಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಿರುವ ವೃತ್ತಿ ವಿಭಾಗಕ್ಕೆ ಹೋಗಿ.
  • ಇಲ್ಲಿ ಟ್ರೈನಿ ಮತ್ತು ಅಪ್ರೆಂಟಿಸ್ ಮೇಲೆ ಕ್ಲಿಕ್ ಮಾಡಿ.
  • ಈಗ ಅಡ್ವಟ್ ನಂ. L&DC/04A/2025 ಅಡಿಯಲ್ಲಿ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಶುಲ್ಕವನ್ನು ಪಾವತಿಸಿದ ನಂತರ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಸಲ್ಲಿಸಿ.

ಅಭ್ಯರ್ಥಿಗಳು ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಜನವರಿ 9 ರಂದು ಸಂಜೆ 5 ಗಂಟೆಯೊಳಗೆ ಜನರಲ್ ಮ್ಯಾನೇಜರ್, ಕಲಿಕೆ ಮತ್ತು ಅಭಿವೃದ್ಧಿ ಕೇಂದ್ರ, ಬ್ಲಾಕ್-20, NLC ಇಂಡಿಯಾ ಲಿಮಿಟೆಡ್, ನೆಯ್ವೇಲಿ 607 803 ಗೆ ಸಲ್ಲಿಸಬೇಕು ಎಂಬುದನ್ನು ಗಮನಿಸಬೇಕು.

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆ ಏನು?

ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,028 ಸ್ಟೈಫಂಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗೆ ಆಯ್ಕೆಯಾದವರಿಗೆ ತಿಂಗಳಿಗೆ 12,524 ರೂ. ಸ್ಟೈಫಂಡ್ ನೀಡಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಮಾರ್ಕ್’ ವಿರುದ್ಧ ನೆಗೆಟಿವ್ ಪ್ರಚಾರ: ಹಾಕಿರುವ ಸವಾಲು ಏನು? – Kannada News | Darshan Fans negative campaign against Sudeep’s Mark movie

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸಿನಿಮಾ ಡಿಸೆಂಬರ್ 25ರಂದು ತೆರೆಗೆ ಬರಲಿದೆ. ಆದರೆ ‘ಮಾರ್ಕ್’ ಸಿನಿಮಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಗೆಟಿವ್ ಪ್ರಚಾರ ಮಾಡಲಾಗುತ್ತಿದೆ. ‘ಮಾರ್ಕ್’ ಸಿನಿಮಾ ಅನ್ನು ಸೋಲಿಸಿಯೇ ಸಿದ್ಧ ಎಂದು ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನಿನ್ನೆ ಹುಬ್ಬಳ್ಳಿಯಲ್ಲಿ ಸುದೀಪ್ ಆಡಿರುವ ಎಚ್ಚರಿಕೆಯ ಮಾತುಗಳು, ಈ ಉಪದ್ರವಿಗಳಿಗೆ ಇನ್ನಷ್ಟು ಉತ್ಸಾಹ ತುಂಬಿದಂತಿದೆ.

ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು ಪರಸ್ಪರ ದ್ವೇಷಿಸಲು ಶುರು ಮಾಡಿ ದಶಕವಾಗುತ್ತಾ ಬಂದಿದೆ. ದರ್ಶನ್ ಮತ್ತು ಸುದೀಪ್ ಮಧ್ಯೆ ಬಿರುಕು ಮೂಡಿದ್ದೇ ಇದಕ್ಕೆ ಕಾರಣ. ಒಬ್ಬರ ಸಿನಿಮಾಕ್ಕೆ ಇನ್ನೊಬ್ಬರು ಸಮಸ್ಯೆ ಮಾಡುತ್ತಾ, ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡುವುದು, ಸಿನಿಮಾದ ಪೈರಸಿ ಮಾಡುವುದು ಹೀಗೆ ನಾನಾ ರೀತಿಯ ಕುತಂತ್ರಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಇದೀಗ ದರ್ಶನ್ ಅಭಿಮಾನಿಗಳು, ‘ಮಾರ್ಕ್’ ಸಿನಿಮಾದ ಮೇಲೆ ಬಿದ್ದಿದ್ದು, ಸಿನಿಮಾವನ್ನು ಸೋಲಿಸಿಯೇ ಸಿದ್ಧ ಎಂದಿದ್ದಾರೆ. ‘ಡೆವಿಲ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನಿರೀಕ್ಷಿತ ಪ್ರದರ್ಶನ ಕಂಡಿಲ್ಲ, ಹಾಗಾಗಿ ಈಗ ‘ಮಾರ್ಕ್’ ಅನ್ನೂ ಸೋಲಿಸಿ ಸಂತೋಷ ಪಡುವ ಪ್ರಯತ್ನದಲ್ಲಿ ದರ್ಶನ್ ಅಭಿಮಾನಿಗಳು ಇದ್ದಂತಿದೆ.

‘ಮಾರ್ಕ್’ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರವನ್ನು ದರ್ಶನ್ ಅಭಿಮಾನಿಗಳು ಕೆಲವರು ಮಾಡುತ್ತಿದ್ದಾರೆ. ‘ಮಾರ್ಕ್’ ಸಿನಿಮಾದ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ಕಾವೇರಿ ನದಿ ತಮಿಳುನಾಡಿಗೆ ಸೇರಿದ್ದು ಎಂದು ಹೇಳಿದ್ದಾರೆಂದು, ಟಿವಿ9ನಲ್ಲಿ ವರದಿ ಬಂದಿದೆ ಎಂಬಂತೆ ನಕಲಿ ಪೋಸ್ಟ್ ಒಂದನ್ನು ತಯಾರಿಸಿ ಹರಿಬಿಟ್ಟಿದ್ದು, ವಿಜಯ್ ಕಾರ್ತಿಕೇಯ ಹೇಳಿಕೆ ವಿರೋಧಿಸಿ ‘ಮಾರ್ಕ್’ ಸಿನಿಮಾ ಬ್ಯಾನ್ ಮಾಡಿ ಎಂದು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ. ಆದರೆ ಇದು ಅಪ್ಪಟ ಸುಳ್ಳು ಸುದ್ದಿಯಾಗಿದೆ. ವಿಜಯ್ ಕಾರ್ತಿಕೇಯ ಅವರು ಕಾವೇರಿ ಬಗ್ಗೆ ಯಾವುದೇ ನಗೆಟಿವ್ ಹೇಳಿಕೆಗಳನ್ನು ನೀಡಿಲ್ಲ.

ಇದನ್ನೂ ಓದಿ:ಸುದೀಪ್ ಎದುರೇ ಧ್ರುವಂತ್​​ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ

ಇದು ಮಾತ್ರವೇ ಅಲ್ಲದೆ, ‘ದರ್ಶನ್ ಅಭಿಮಾನಿಗಳು ಕೆಲವರು ಪೋಸ್ಟ್ ಹಂಚಿಕೊಂಡಿದ್ದು, ‘ಮಾರ್ಕ್’ ಸಿನಿಮಾದ ಪೈರಸಿ ಮಾಡುವುದಾಗಿ ಪೋಸ್ಟ್​​ನಲ್ಲಿ ರಾಜಾ ರೋಷವಾಗಿ ಹೇಳಿದ್ದಾರೆ. ‘ಡೆವಿಲ್’ ಸಿನಿಮಾದ 9501 ಲಿಂಕ್​​ಗಳನ್ನು ನಾವು ಡಿಲೀಟ್ ಮಾಡಿದ್ದೀವಿ, ನಮ್ಗೆ ಯಾವುದೂ ಇಟ್ಕೊಂಡ್ ಅಭ್ಯಾಸ ಇಲ್ಲ, ವಾಪಸ್ ಈಸ್ಕೊಳ್ಳೋಕೆ ರೆಡಿಯಾಗಿ’ ಎಂದೆಲ್ಲ ಪೋಸ್ಟ್ ಮಾಡಲಾಗಿದೆ. ಆ ಮೂಲಕ ತಾವು, ‘ಮಾರ್ಕ್’ ಸಿನಿಮಾದ ಪೈರಸಿ ಮಾಡುತ್ತೀವಿ ಎಂದು ಹೇಳಿಕೊಂಡಿದ್ದಾರೆ. ಇನ್ನು ಬುಕ್​ ಮೈ ಶೋನಲ್ಲೂ ಸಹ ಅಚಾನಕ್ಕಾಗಿ ‘ಡೆವಿಲ್’ ಸಿನಿಮಾದ ಲೈಕ್​​ಗಳ ಸಂಖ್ಯೆ ಹೆಚ್ಚು ಮಾಡಲಾಗಿದೆ. ‘ಮಾರ್ಕ್’ ಸಿನಿಮಾ ಬಿಡುಗಡೆ ಬಳಿಕ ಸಿನಿಮಾಕ್ಕೆ ನೆಗೆಟಿವ್ ರಿವ್ಯೂ ಕೊಡುವ ಸಾಧ್ಯತೆಯೂ ಇದೆ.

ಈ ಮುಂಚೆಯೂ ಸಹ ಸುದೀಪ್ ಅವರ ಸಿನಿಮಾಗಳನ್ನು ಟಾರ್ಗೆಟ್ ಮಾಡಿ ಸೋಲಿಸುವ ಪ್ರಯತ್ನಗಳು ನಡೆದಿದ್ದವು. ಸುದೀಪ್ ನಟನೆಯ ‘ಪೈಲ್ವಾನ್’ ಸಿನಿಮಾವನ್ನು ಪೈರಸಿ ಮಾಡಲಾಗಿತ್ತು. ಸುದೀಪ್ ಅವರು ದೂರು ನೀಡಿದ ಬಳಿಕ ದರ್ಶನ್ ಅಭಿಮಾನಿಯೊಬ್ಬನ ಬಂಧನವೂ ಆಗಿತ್ತು. ಅದಾದ ಬಳಿಕವೂ ಸಹ ಹಲವು ಬಾರಿ ಸುದೀಪ್ ಸಿನಿಮಾಗಳ ಮೇಲೆ ದಾಳಿ ನಡೆಯುತ್ತಲೇ ಬಂದಿದೆ. ಆದರೆ ಅವರ ಸಿನಿಮಾಗಳು ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಪ್ರದರ್ಶನ ಮಾಡುತ್ತಲೇ ಬಂದಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 5:17 pm, Sun, 21 December 25

Source link

ದೇವರ ಹಾಡು ಹಾಡಿದ್ದಕ್ಕೆ ಕ್ರುದ್ಧಗೊಂಡ ಶಾಲಾ ಸಹ-ಮಾಲೀಕ; ಬಂಗಾಳಿ ಗಾಯಕಿ ಮೇಲೆ ಹಲ್ಲೆಗೆ ಯತ್ನ? – Kannada News | Bengali singer Lagnajita Chakraborty allegedly abused for singing Hindu religious song

ಕೋಲ್ಕತಾ, ಡಿಸೆಂಬರ್ 21: ಬಂಗಾಳಿ ಸಿನಿಮಾವೊಂದರ ಭಕ್ತಿ ಗೀತೆಯನ್ನು ಹಾಡಿದ್ದಕ್ಕೆ ಗಾಯಕಿ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಪೂರ್ಬ ಮೇದಿನಿಪುರ್​ನ ಭಾಗಬನ್​ಪುರ್ ಎಂಬಲ್ಲಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಖ್ಯಾತ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರಬರ್ತಿ (Lagnajita Chakraborty) ಎಂಬಾಕೆಯನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ ಆರೋಪ ಹೊತ್ತು ಬಂಧಿತರಾಗಿರುವ ವ್ಯಕ್ತಿಯು ಆ ಶಾಲೆಯ ಒಬ್ಬ ಸಹ-ಮಾಲೀಕ ಎನ್ನಲಾಗಿದೆ.

ಭಾಗಬನ್​ಪುರ್​ನಲ್ಲಿರುವ ಸೌತ್ ಪಾಯಿಂಟ್ ಪಬ್ಲಿಕ್ ಸ್ಕೂಲ್​ನಲ್ಲಿ ಶನಿವಾರ ಸಂಜೆ 7ಕ್ಕೆ ಲಗ್ನಿಜಿತಾ ಚಕ್ರಬರ್ತಿ ಅವರ ಗಾಯನ ಕಾರ್ಯಕ್ರಮ ಶುರುವಾಗಿದೆ. ಮೊದಲ 45 ನಿಮಿಷ ಅವರು ವಿವಿಧ ಹಾಡುಗಳನ್ನು ಹಾಡಿದ್ದಾರೆ. ನಂತರ, ಸನ್ಮಾನ ಕಾರ್ಯಕ್ರಮವೂ ಸರಾಗವಾಗಿ ನಡೆದಿದೆ. ಅವರ ಏಳನೇ ಹಾಡು ದೇಬಿ ಚೌಧುರಾಣಿ ಎನ್ನುವ ಬಂಗಾಳಿ ಸಿನಿಮಾದ ‘ಜಾಗೋ ಮಾ’ ಆಗಿತ್ತು.

ಇದನ್ನೂ ಓದಿ: ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ

ಹಿಂದೂ ದೇವತೆಯನ್ನು ಸ್ತುತಿಸುವ ಈ ಹಾಡನ್ನು ಹಾಡಿದ ಬಳಿಕ ಲಗ್ನಜಿತಾ ಅವರು ಸಭಿಕರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ, ವೇದಿಕೆಗೆ ಏರಿ ಹೋದ ಮೆಹಬೂಬ್ ಮಲ್ಲಿಕ್ ಎನ್ನುವ ವ್ಯಕ್ತಿ, ಲಗ್ನಜಿತಾ ಅವರನ್ನು ನಿಂದಿಸಿ ಹೊಡೆಯಲು ಯತ್ನಿಸಿದ್ದಾನೆ. ‘ಜಾಗೋ ಮಾ ಹಾಡಿದ್ದು ಸಾಕು. ಈಗ ಏನಾದರೂ ಸೆಕ್ಯೂಲರ್​ನಂಥದ್ದು ಹಾಡು’ ಎಂದು ಮಲ್ಲಿಕ್ ಜಬರ್ದಸ್ ಮಾಡಿದ್ದು ಮೈಕ್​ನಲ್ಲಿ ಎಲ್ಲರಿಗೂ ಕೇಳಿಸಿದೆ. ಈತ ವೇದಿಕೆ ಮೇಲೆ ಏರಿ ಹೋಗಿ ಲಗ್ನಜಿತಾ ಮೇಲೆ ಹಲ್ಲೆಗೆ ಮುಂದಾಗುತ್ತಿರುವಂತೆಯೇ ಕೆಲವರು ಓಡಿ ಬಂದು ತಡೆದಿದ್ದಾರೆ.

ಈ ಘಟನೆ ಬಳಿಕ ಲಗ್ನಜಿತಾ ಅವರು ಕಾರ್ಯಕ್ರಮವನ್ನು ಅಲ್ಲಿಗೇ ಇಳಿಸಿ ಹೊರಟು ಹೋಗಿದ್ದಾರೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದಾರೆ. ಇದಾದ ಬಳಿಕ ಪೊಲೀಸರು ಮೆಹಬೂಬಾ ಮಲ್ಲಿಕ್​ರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಸೌತ್ ಆಫ್ರಿಕಾದಲ್ಲಿ ಭೀಕರ ಶೂಟೌಟ್; ಒಂಬತ್ತು ಮಂದಿ ಬಲಿ, 10 ಜನರಿಗೆ ಗಾಯ

ಕಳೆದ ವರ್ಷದ (2024) ದುರ್ಗಾ ಪೂಜೆಯಂದು ಬಿಡುಗಡೆಯಾದ ದೇಬಿ ಚೌಧುರಾಣಿ ಸಿನಿಮಾದ ಹಿಟ್ ಹಾಡು ‘ಜಾಗೋ ಮಾ’. ಇದನ್ನು ಸಿನಿಮಾಗೆ ಹಾಡಿದವರು ಇದೇ ಗಾಯಕಿ ಲಗ್ನಜಿತಾ ಚಕ್ರಬರ್ತಿ. ಈಕೆಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿರುವ ಮೆಹಬೂಬ್ ಮಲ್ಲಿಕ್ ಅವರು ಕಾರ್ಯಕ್ರಮ ನಡೆದ ಶಾಲೆಯ ಸಹ-ಮಾಲೀಕರಲ್ಲಿ ಒಬ್ಬರಾಗಿದ್ದಾರೆ. ಆ ಶಾಲೆಯ ಆಡಳಿತ ಮಂಡಳಿಯ ಸದಸ್ಯರೂ ಆಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್ – Kannada News | Digital detox: A Karnataka village switches off TVs, mobiles every evening In halaga Belagavi District

ಬೆಳಗಾವಿ, (ಡಿಸೆಂಬರ್ 21): ಇಂದಿನ ಬದಲಾಗುತ್ತಿರುವ ಡಿಜಿಟಲ್ (Digital) ಯುಗದಲ್ಲಿ ಮೊಬೈಲ್ (Mobile), ಟಿವಿ (Tv), ಓಟಿಟಿ (Ott), ವೆಬ್‌ಸೀರಿಸ್‌ಗಳು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ತಂತ್ರಜ್ಞಾನ ಅವಲಂಬನೆ ಹೆಚ್ಚಾದಂತೆ ಮಕ್ಕಳ ಬಾಲ್ಯದ ಆಟಗಳು, ಕುಟುಂಬದ ಒಡನಾಟ, ಸಂಸ್ಕೃತಿ ಮತ್ತು ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಮರೆಯಾಗುತ್ತಿವೆ. ಮಕ್ಕಳು ಮೊಬೈಲ್‌ಗಳಲ್ಲೇ ಮುಳುಗಿದರೆ, ವಯಸ್ಕರು ಕೂಡಾ ಟಿವಿ, ವಿಡಿಯೋ ಗೇಮ್ಸ್, ಓಟಿಟಿ, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಪರಿಣಾಮವಾಗಿ ನಮ್ಮ ಆಚಾರ-ವಿಚಾರ, ಸಂಸ್ಕೃತಿಯೇ ಪತನದ ಅಂಚಿಗೆ ತಲುಪಿದೆ ಎಂಬ ಆತಂಕ ದಿನೇದಿನೇ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ (Belagavi) ಹಲಗಾ ಗ್ರಾಮ ಡಿಜಿಟಲ್​ ಆಫ್ ಪ್ರಯೋಗಕ್ಕೆ ಮುಂದಾಗಿದೆ.

ಹೌದು..ಈ ಡಿಜಿಟಲ್ ಆಕ್ರಮಣಕ್ಕೆ ಪ್ರತಿರೋಧವಾಗಿ ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಹಲಗಾ ಗ್ರಾಮ ಒಂದು ವಿಭಿನ್ನ ಹಾಗೂ ಶ್ಲಾಘನೀಯ ಪ್ರಯೋಗಕ್ಕೆ ಮುಂದಾಗಿದೆ. ಮಹಾರಾಷ್ಟ್ರದ ಒಂದು ಗ್ರಾಮದಲ್ಲಿ ಯಶಸ್ವಿಯಾಗಿ ಜಾರಿಗೊಂಡಿದ್ದ ಮಾದರಿಯನ್ನು ಅನುಸರಿಸಿ, ಹಲಗಾ ಗ್ರಾಮದಲ್ಲಿ ನಿತ್ಯ ಎರಡು ಗಂಟೆಗಳ ‘ಡಿಜಿಟಲ್ ಆಫ್’ ಪ್ರಯೋಗ ಆರಂಭಿಸಲಾಗಿದೆ. ಈ ಪ್ರಯೋಗವು ಡಿಸೆಂಬರ್ 17ರಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಹಾಗಾದ್ರೆ, ಏನಿದು ‘ಡಿಜಿಟಲ್ ಆಫ್’ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

U19 Asia Cup 2025: ಪಾಕಿಸ್ತಾನದ ವಿರುದ್ಧ ಏಷ್ಯಾಕಪ್ ಫೈನಲ್ ಸೋತ ಟೀಂ ಇಂಡಿಯಾ – Kannada News | 2025 U19 Asia Cup Final: Pakistan Crushes India by 191 Runs in Dubai

2025 ರ ಅಂಡರ್-19 ಏಷ್ಯಾಕಪ್ ಟ್ರೋಫಿ ಪಾಕಿಸ್ತಾನದ ಪಾಲಾಗಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದ ಟೀಂ ಇಂಡಿಯಾ ಕೇವಲ 156 ರನ್​ಗಳಿಗೆ ಆಲೌಟ್ ಆಗುವ ಮೂಲಕ 191 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿತು. ಇತ್ತ ಟೀಂ ಇಂಡಿಯಾವನ್ನು ಮಣಿಸಿದ ಪಾಕಿಸ್ತಾನ ಮೊಟ್ಟ ಮೊದಲ ಅಂಡರ್-19 ಏಷ್ಯಾಕಪ್ ಟ್ರೋಫಿಯನ್ನು ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ವಾಸ್ತವವಾಗಿ 2012 ರಲ್ಲಿ ನಡೆದಿದ್ದ ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇದೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಆದರೆ ಪಂದ್ಯವು ಟೈ ಆಗಿತ್ತು. ಹೀಗಾಗಿ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಇದೀಗ ಪಾಕಿಸ್ತಾನ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

2025 ರ ಸೀನಿಯರ್ ಪುರುಷರ ಏಷ್ಯಾಕಪ್ ಮುಗಿದ ಸುಮಾರು ಮೂರು ತಿಂಗಳ ನಂತರ, ಎರಡು ದೇಶಗಳ ಅಂಡರ್-19 ತಂಡಗಳು ಏಷ್ಯಾಕಪ್ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದ ಕಾರಣ ಪಂದ್ಯದಲ್ಲಿ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿತ್ತು. ಅಲ್ಲದೆ ಗುಂಪು ಹಂತದ ಪಂದ್ಯದಲ್ಲಿ ಇದೇ ಪಾಕಿಸ್ತಾನವನ್ನು ಭಾರತ ಸೋಲಿಸಿದ್ದ ಕಾರಣ, ಈ ಪಂದ್ಯದಲ್ಲೂ ಭಾರತಕ್ಕೆ ಜಯ ಖಚಿತ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಫೈನಲ್​ನಲ್ಲಿ ಭಾರತದ ಬೌಲಿಂಗ್ ಹಾಗೂ ಬ್ಯಾಟಿಂಗ್‌ ಎರಡೂ ಕಳಪೆಯಾಗಿತ್ತು. ಹೀಗಾಗಿ ಪಂದ್ಯ ಏಕಪಕ್ಷೀಯವಾಗಿ ಅಂತ್ಯವಾಯಿತು.

ಈ ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಆದರೆ ನಾಯಕನ ಈ ನಿರ್ಧಾರ ಸಂಪೂರ್ಣವಾಗಿ ತಪ್ಪೆಂದು ಸಾಬೀತಾಯಿತು. ಈಗಾಗಲೇ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದ ಪಾಕಿಸ್ತಾನದ ಆರಂಭಿಕ ಆಟಗಾರ ಸಮೀರ್ ಮಿನ್ಹಾಸ್ ಮತ್ತೊಂದು ಅದ್ಭುತ ಇನ್ನಿಂಗ್ಸ್ ಆಡಿದರು, ಕೇವಲ 71 ಎಸೆತಗಳಲ್ಲಿ ಶತಕ ಗಳಿಸಿದರು. ಕೇವಲ 113 ಎಸೆತಗಳಲ್ಲಿ 17 ಬೌಂಡರಿ ಮತ್ತು 9 ಸಿಕ್ಸರ್‌ಗಳನ್ನು ಒಳಗೊಂಡ 172 ರನ್ ಬಾರಿಸಿ ಔಟಾದರು. ಮಿನ್ಹಾಸ್ ಔಟಾದ ನಂತರ ಭಾರತ ತಂಡವು ಚೇತರಿಸಿಕೊಂಡರೂ, ಇತ್ತ ಪಾಕಿಸ್ತಾನ ಕೂಡ 8 ವಿಕೆಟ್‌ಗೆ 347 ರನ್‌ಗಳ ಬೃಹತ್ ಮೊತ್ತವನ್ನು ಗಳಿಸಿತು.

Source link

IIMC Jobs 2025: IIMCನಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಸಹ ಅರ್ಜಿ ಸಲ್ಲಿಸಲು ಅರ್ಹರು – Kannada News | IIMC Non Teaching Jobs 2025: 51 Vacancies, Eligibility and How to Apply Online

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ನವದೆಹಲಿ ಕ್ಯಾಂಪಸ್ ಜೊತೆಗೆ ಅಮರಾವತಿ, ಜಮ್ಮು, ಐಜ್ವಾಲ್, ಧೆಂಕನಲ್ ಮತ್ತು ಕೊಟ್ಟಾಯಂ ಕ್ಯಾಂಪಸ್‌ಗಳಿಗೆ ಸೇರಿವೆ. ವೃತ್ತಿಪರ ಸಹಾಯಕ, ವಿಭಾಗ ಅಧಿಕಾರಿ ಮತ್ತು ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಜನವರಿ 12 ರ ಮೊದಲು IIMC ಯ ಅಧಿಕೃತ ವೆಬ್‌ಸೈಟ್ iimc.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆಯು ಒಟ್ಟು 51 ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ . ಪ್ರತಿಯೊಂದು ಹುದ್ದೆಗೆ ಅಗತ್ಯವಿರುವ ಅರ್ಹತೆಗಳು ಮತ್ತು ಅರ್ಜಿದಾರರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಎಂದು ತಿಳಿದುಕೊಳ್ಳಿ.

ಹುದ್ದೆಯ ವಿವರ:

  • ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ: 01 ಹುದ್ದೆ
  • ಸಹಾಯಕ ಸಂಪಾದಕ: 01 ಹುದ್ದೆ
  • ಸಹಾಯಕ ರಿಜಿಸ್ಟ್ರಾರ್: 05 ಹುದ್ದೆಗಳು
  • ಸೆಕ್ಷನ್ ಆಫೀಸರ್ : 04 ಹುದ್ದೆಗಳು
  • ಹಿರಿಯ ಸಂಶೋಧನಾ ಸಹಾಯಕ : 01 ಹುದ್ದೆ
  • ಸಹಾಯಕ : 11 ಹುದ್ದೆಗಳು
  • ವೃತ್ತಿಪರ ಸಹಾಯಕ : 05 ಹುದ್ದೆಗಳು
  • ಜೂನಿಯರ್ ಪ್ರೋಗ್ರಾಮರ್ : 05 ಹುದ್ದೆಗಳು
  • ಅಪ್ಪರ್ ಡಿವಿಷನ್ ಕ್ಲರ್ಕ್ ಯುಡಿಸಿ (ಲೆವೆಲ್ -04): 12 ಹುದ್ದೆಗಳು
  • ಸ್ಟೆನೋಗ್ರಾಫರ್ : 06 ಹುದ್ದೆಗಳು

ಯಾರು ಅರ್ಜಿ ಸಲ್ಲಿಸಬಹುದು?

ಗ್ರಂಥಾಲಯ ಮತ್ತು ಮಾಹಿತಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನ ಅಥವಾ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು ಮತ್ತು ಸಂಬಂಧಿತ ಹುದ್ದೆಯಲ್ಲಿ ಕನಿಷ್ಠ ಐದು ವರ್ಷಗಳ ಅನುಭವವನ್ನು ಹೊಂದಿರಬೇಕು. ಸಹಾಯಕ ಸಂಪಾದಕ ಹುದ್ದೆಗೆ ಪತ್ರಿಕೋದ್ಯಮ, ಸಂವಹನ, ಸಮಾಜ ವಿಜ್ಞಾನ ಅಥವಾ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು, ಜೊತೆಗೆ ಐದು ವರ್ಷಗಳ ಅನುಭವವನ್ನು ಹೊಂದಿರಬೇಕು. ಉನ್ನತ ವಿಭಾಗದ ಗುಮಾಸ್ತ ಹುದ್ದೆಗೆ ಪದವಿ ಮತ್ತು ಎಲ್‌ಡಿಸಿ ಹುದ್ದೆಯಲ್ಲಿ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು. ಅರ್ಹತೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ

ವಯಸ್ಸಿನ ಮಿತಿ:

IIMC ಬೋಧಕೇತರ ಹುದ್ದೆಗಳಿಗೆ ವಯಸ್ಸಿನ ಮಿತಿಯು ಹುದ್ದೆಗೆ ಅನುಗುಣವಾಗಿ ಬದಲಾಗುತ್ತದೆ. ಕನಿಷ್ಠ ಮತ್ತು ಗರಿಷ್ಠ ವಯಸ್ಸಿನ ಮಿತಿಗಳು 32 ರಿಂದ 56 ವರ್ಷಗಳವರೆಗೆ ಇರುತ್ತವೆ. ಅಂದರೆ 55 ವರ್ಷ ಮೇಲ್ಪಟ್ಟ ಮತ್ತು ಅಗತ್ಯವಿರುವ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ?

  • iimc.gov.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಖಾಲಿ ಹುದ್ದೆ ವಿಭಾಗಕ್ಕೆ ಹೋಗಿ.
  • ಬೋಧಕೇತರ ಹುದ್ದೆಯ ಅರ್ಜಿ ನಮೂನೆಯ ಲಿಂಕ್ ಅನ್ನು ಇಲ್ಲಿ ಕ್ಲಿಕ್ ಮಾಡಿ.
  • ಈಗ ವಿವರಗಳನ್ನು ನಮೂದಿಸಿ ಮತ್ತು ಫಾರ್ಮ್ ಅನ್ನು ಭರ್ತಿ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version