Headlines

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು, ಸಹ ಪೈಲಟ್ ಪಾರು – Kannada News | 5 Air Force personnel killed co pilot survives in AN 32 aircraft crash in Assam’s Jorhat Air Base

ಜೋರ್ಹತ್, ಜೂನ್ 13: ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಇಂದು ಸಂಭವಿಸಿದ AN-32 ಸಾರಿಗೆ ವಿಮಾನ ಅಪಘಾತದಲ್ಲಿ ಭಾರತೀಯ ವಾಯುಪಡೆಯ (IAF) 5 ಜನ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವಾಯುಪಡೆಯು ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. “ಅಸ್ಸಾಂನ ಜೋರ್ಹತ್ ವಾಯುನೆಲೆಯಲ್ಲಿ AN-32 ಸಾರಿಗೆ ವಿಮಾನದ ಅಪಘಾತದಲ್ಲಿ ಭಾರತೀಯ ವಾಯುಪಡೆಯ ಐವರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನದ ಸಹ-ಪೈಲಟ್ ಅದೃಷ್ಟವಶಾತ್ ಬದುಕುಳಿದಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ವಾಯುಪಡೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಅಪಘಾತಕ್ಕೆ ನಿಖರ ಕಾರಣ ಏನೆಂಬುದನ್ನು…

Read More

Women’s T20 World Cup: ಭಾರತ- ಪಾಕ್ ನಡುವೆ ಫೈಟ್; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Pakistan Women’s T20 World Cup 2026: Match Preview, Date, Time and Live Stream

10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್‌ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌, ಶ್ರೀಲಂಕಾ ತಂಡವನ್ನು 87 ರನ್​​ಗಳಿಂದ ಮಣಿಸಿ ಗೆಲುವಿನ ಶುಭಾರಂಭ ಮಾಡಿದೆ. ಇದೀಗ ಈ ಪಂದ್ಯಾವಳಿಯ ಹೈವೋಲ್ಟೇಜ್ ಕದನ ಭಾರತ ಹಾಗೂ ಪಾಕಿಸ್ತಾನದ ನಡುವೆ ಭಾನುವಾರದಂದು ಅಂದರೆ ಜೂನ್ 14 ರಂದು ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಸಕಲ ತಯಾರಿ ಮಾಡಿಕೊಂಡಿವೆ. ಈ ಲೀಗ್​ನಲ್ಲಿ ಉಭಯ ತಂಡಗಳಿಗೆ ಇದು ಮೊದಲ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳು ಗೆಲುವಿನೊಂದಿಗೆ ಪಂದ್ಯಾವಳಿಯನ್ನು…

Read More

Diamond Astrology: ಫ್ಯಾಶನ್​​ಗಾಗಿ ವಜ್ರ ಧರಿಸುವ ಮುನ್ನ ಎಚ್ಚರ! ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ! – Kannada News | Diamond Astrology: Guide to Wearing Vajra for Prosperity and Precautions

ಈ ರಾಶಿಯವರು ವಜ್ರ ಧರಿಸಿದರೆ ಕಷ್ಟ ತಪ್ಪಿದ್ದಲ್ಲ! Image Credit source: Pinterest ನವರತ್ನಗಳಲ್ಲಿ ವಜ್ರಕ್ಕೆ ಅತ್ಯಂತ ಮೌಲ್ಯಯುತ ಹಾಗೂ ವಿಶೇಷ ಸ್ಥಾನವಿದೆ. ತನ್ನ ಅಪ್ರತಿಮ ಹೊಳಪಿನಿಂದಲೇ ಜಗತ್ತನ್ನೇ ಆಕರ್ಷಿಸುವ ವಜ್ರವು ಕೇವಲ ಆಭರಣವಲ್ಲ, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಇದು ಅತ್ಯಂತ ಶಕ್ತಿಶಾಲಿ ರತ್ನವಾಗಿದೆ. ವಜ್ರವನ್ನು ಸುಖ, ಸಮೃದ್ಧಿ, ಸೌಂದರ್ಯ ಮತ್ತು ಐಷಾರಾಮಿ ಜೀವನದ ಅಧಿಪತಿಯಾದ ಶುಕ್ರ ಗ್ರಹದ ರತ್ನವೆಂದು ಪರಿಗಣಿಸಲಾಗುತ್ತದೆ. ವಜ್ರದ ಉಂಗುರ ಅಥವಾ ಆಭರಣಗಳನ್ನು ಧರಿಸುವುದರಿಂದ ಜೀವನದಲ್ಲಿ ಆಕರ್ಷಣೆ ಹೆಚ್ಚುತ್ತದೆ ಮತ್ತು ಆರ್ಥಿಕ ಪ್ರಗತಿಯಾಗುತ್ತದೆ…

Read More

‘ಬಿಗ್ ಬಾಸ್​​ನಿಂದ ಒಂದು ರೂಪಾಯಿಯೂ ಸಿಗಲಿಲ್ಲ’; ವಂಚನೆ ಬಗ್ಗೆ ಅಬ್ದು ರೋಜಿಕ್ ಮಾತು – Kannada News | Abdu Rozik’s Shocking Bigg Boss Truth: No Payment, Management Cheated Me

ಬಿಗ್ ಬಾಸ್​​ಗೆ ತೆರಳುವ ಮೂಲಕ ಅಬ್ದು ರೋಜಿಕ್ ಅವರಿಗೆ (Abdu Rozik) ಭಾರತದಲ್ಲೂ ಸಾಕಷ್ಟು ಫ್ಯಾನ್ಸ್ ಸಿಕ್ಕರು. ಸಲ್ಮಾನ್ ಖಾನ್ ಜೊತೆ ಅವರಿಗೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಆದರೆ, ಈಗ ಅವರು ಬಿಗ್ ಬಾಸ್ ಅಲ್ಲಿ ನಡೆದ ಒಂದು ಶಾಕಿಂಗ್ ವಿಷಯ ಬಿಚ್ಚಿಟ್ಟಿದ್ದಾರೆ. ಬಿಗ್ ಬಾಸ್‌ನಲ್ಲಿ ಭಾಗವಹಿಸಿದ್ದಕ್ಕಾಗಿ ತಮಗೆ ಯಾವುದೇ ಸಂಭಾವನೆ ಸಿಕ್ಕಿಲ್ಲ ಎಂದಿರುವ ಅವರು ತಮ್ಮ ಹಳೆಯ ಮ್ಯಾನೇಜ್‌ಮೆಂಟ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪಾಡ್‌ಕಾಸ್ಟ್‌ ಒಂದರಲ್ಲಿ ಮಾತನಾಡಿರುವ ಅಬ್ದು ರೋಜಿಕ್, ‘ಈ ಜಗತ್ತಿನಲ್ಲಿ ಜನರಿಗೆ…

Read More

ತೂಫಾನ್ ಸೆಂಚುರಿ… ವೈಭವ್ ಸೂರ್ಯವಂಶಿ ತಮ್ಮನ ಆರ್ಭಟ ಶುರು! – Kannada News | Vaibhav Sooryavanshi’s Brother Aashirwad Smashes Century

ಪ್ರತಿಭೆ ಎಂಬುದು ರಕ್ತದಲ್ಲೇ ಹರಿದುಬರುತ್ತದೆ ಎಂಬುದಕ್ಕೆ ಸೂರ್ಯವಂಶಿ ಕುಟುಂಬವೇ ಸಾಕ್ಷಿ. ಅಣ್ಣ ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಆರೆಂಜ್ ಕ್ಯಾಪ್ ಗೆದ್ದು ಭಾರತ ತಂಡಕ್ಕೆ ಆಯ್ಕೆಯಾಗಿದ್ದರೆ, ಅತ್ತ 10 ವರ್ಷದ ತಮ್ಮ ಆಶೀರ್ವಾದ್ ಸೂರ್ಯವಂಶಿ ಬ್ಯಾಟ್ ಹಿಡಿದು ಅಬ್ಬರಿಸಲಾರಂಭಿಸಿದ್ದಾನೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ. 87 ಎಸೆತಗಳಲ್ಲಿ 103 ರನ್! ಬಿಹಾರದ ಸಮಷ್ಟಿಪುರದ ‘ಕ್ರಿಕೆಟ್ ಅಕಾಡೆಮಿ ತಾಜ್‌ಪುರ್’ ತಂಡದ ಪರ ಆರಂಭಿಕ ಬ್ಯಾಟರ್ ಆಗಿ ಕಣಕ್ಕಿಳಿದ ಬಲಗೈ ಬ್ಯಾಟರ್ ಆಶೀರ್ವಾದ್ ಸೂರ್ಯವಂಶಿ ,…

Read More

ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!

ಧಾರವಾಡ, ಜೂನ್ 13: ಶಿವಮೊಗ್ಗದ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ ಭೀಕರ ಹಲ್ಲೆ ನಡೆಸಿ ಪುಂಡಾಟಿಕೆ ಮೆರೆದಿದ್ದಾರೆ. ಸೆಲ್‌ನಿಂದ ಹೊರಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಎನ್‌ಐಎ (NIA) ತನಿಖೆ ಎದುರಿಸುತ್ತಿರುವ ಆರೋಪಿ (A1) ಮೊಹಮ್ಮದ್ ಖಾಸಿಫ್ ಮತ್ತು ರೆಹಾನ್ ಶರೀಫ್ (A4), ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಾಯಾಳು ವಾರ್ಡನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೈದಿಗಳ…

Read More

ಅಣ್ಣಾಮಲೈ ಪಕ್ಷ ತೊರೆದಿರುವುದು ವೈಯಕ್ತಿಕ ನಿರ್ಧಾರ: ಯತ್ನಾಳ್, ಈಶ್ವರಪ್ಪ ವಾಪಸಾತಿ ಬಗ್ಗೆ ರಾಧಾ ಮೋಹನ್ ದಾಸ್ ಹೇಳಿದ್ದೇನು? – Kannada News | Agarwal Speaks on Karnataka BJP Leadership, Annamalai’s Move and Sumalatha’s Future

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್Image Credit source: Tv9 kannada ಮಂಗಳೂರು, ಜೂ.13 : ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷ ತೊರೆದಿರುವ ವಿಚಾರ ಸೇರಿದಂತೆ ಕರ್ನಾಟಕ ರಾಜಕಾರಣದ ಹಲವು ಮಹತ್ವದ ವಿದ್ಯಮಾನಗಳ ಕುರಿತು ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಮಂಗಳೂರಿನಲ್ಲಿ ಮಹತ್ವದ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿಯನ್ನು ಮುನ್ನಡೆಸಿದ್ದ ಅಣ್ಣಾಮಲೈ ಅವರು ಪಕ್ಷ ತೊರೆದಿರುವ ಕುರಿತು…

Read More

ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ: ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ – Kannada News | Kasturi Nagar Park Protest: Residents Oppose GBA’s Commercial Use of Green Space

ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ ಬೆಂಗಳೂರು, ಜೂನ್ 13: ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಸ್ತೂರಿನಗರದ ಪೂರ್ವ NGEF ಲೇಔಟ್‌ನಲ್ಲಿ ಉದ್ಯಾನವನವನ್ನು ಉಳಿಸಿಕೊಡುವಂತೆ ಆಗ್ರಹಿಸಿ ಸ್ಥಳೀಯ ನಿವಾಸಿಗಳು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಪಾರ್ಕ್ ಜಾಗವನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು ಎಂಬ ನಿಯಮವಿದ್ದರೂ, ಜಿಬಿಎ (GBA) ವತಿಯಿಂದಲೇ ಉದ್ಯಾನವನದ ಅಸ್ತಿತ್ವಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಾಂಶಗಳು ಕಸ್ತೂರಿನಗರದ ಎನ್‌ಜಿಇಎಫ್ ಲೇಔಟ್ ಪಾರ್ಕ್ ಉಳಿಸಲು ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ….

Read More

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ – Kannada News | Basanagouda Patil Yatnal is a Monkey Breed: Congress MLA Pradeep Eshwar Blasts BJP Leaders Over Hate Speech Allegations

ಬೆಂಗಳೂರು, ಜೂನ್ 13: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮನ್ನು ದೇಶದ್ರೋಹಿ ಎಂದಿರುವುದರ ಜತೆಗೆ ದ್ವೇಷ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ದ್ವೇಷ ಭಾಷಣದ ಆರೋಪವನ್ನು ತಳ್ಳಿಹಾಕಿದ್ದಾರೆ. ಅಲ್ಲದೆ, ಛಲವಾದಿ ನಾರಾಯಣಸ್ವಾಮಿ ಮತ್ತು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ದ್ವೇಷ ಭಾಷಣದ ಪಿತಾಮಹರು ಎಂದು ತೀವ್ರ ವಾಗ್ದಾಳಿ ನಡೆಸಿದರು….

Read More

AI Robots Training: ತಲೆಗೆ ಫೋನ್ ಕಟ್ಟಿಕೊಂಡು AIಗೆ ಅಡುಗೆ ಕಲಿಸುತ್ತಿರುವ ಭಾರತೀಯ ಮಹಿಳೆಯರು; ಗಂಟೆಗೆ ಸಿಗುತ್ತೆ 250ರೂ. ವೇತನ! – Kannada News | Indians Train AI Robots for Home: Women Earn 250 Rs per Hour Recording Daily Chores

AIಗೆ ಅಡುಗೆ ಕಲಿಸುತ್ತಿರುವ ಭಾರತೀಯ ಮಹಿಳೆಯರುImage Credit source: R. Satish Babu/AFP ಭವಿಷ್ಯದ ದಿನಗಳಲ್ಲಿ ಮನೆಯ ಕೆಲಸಗಳನ್ನು ಸುಲಭವಾಗಿ ನಿಭಾಯಿಸಬಲ್ಲ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಚಾಲಿತ ರೋಬೋಟ್‌ಗಳ ಅಭಿವೃದ್ಧಿಯಲ್ಲಿ ಭಾರತೀಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ತಲೆಗೆ ಸ್ಮಾರ್ಟ್‌ಫೋನ್ ಅಥವಾ ಕ್ಯಾಮೆರಾ ಕಟ್ಟಿಕೊಂಡು ದೈನಂದಿನ ಕೆಲಸಗಳನ್ನು ವಿಡಿಯೋ ರೂಪದಲ್ಲಿ ದಾಖಲಿಸುವ ಮೂಲಕ ಮಹಿಳೆಯರು ರೋಬೋಟ್‌ಗಳಿಗೆ ಮನುಷ್ಯರಂತೆ ಕೆಲಸ ಮಾಡುವ ತರಬೇತಿ ನೀಡುತ್ತಿದ್ದಾರೆ. ಒಂದು ಗಂಟೆಯ ವಿಡಿಯೋಗೆ 250ರೂ. ಸಂಭಾವನೆ: ಅಲ್ ಜಜೀರಾ ವರದಿಯ ಪ್ರಕಾರ, ತಮಿಳುನಾಡಿನ ರಾಜಧಾನಿ…

Read More