ಹಾವೇರಿಯಲ್ಲಿ ಕಾಂಗ್ರೆಸ್​​ ಸಾಧನಾ ಸಮಾವೇಶ: 1000 ದಿನಗಳ ಸಂಭ್ರಮ; ಒಂದು ಲಕ್ಷ ಕುಟುಂಬಗಳಿಗೆ ಭೂಗ್ಯಾರಂಟಿ – Kannada News | Haveri: Congress Sadhana Convention: 1000 days of celebration; Land guarantee for one lakh families

ಭೂಗ್ಯಾರಂಟಿ ಸಮರ್ಪಣಾ ಸಮಾವೇಶImage Credit source: cm tweet

ಹಾವೇರಿ, ಫೆಬ್ರವರಿ 14: ರಾಜ್ಯದಲ್ಲಿ ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳು ಕಳೆದಿವೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್​ ಭೂ ಗ್ಯಾರಂಟಿ ಸಮರ್ಪಣಾ ಹೆಸರಿನಲ್ಲಿ ಸಾಧನಾ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ಸಿಎಂ ಸಿದ್ದರಾಮಯ್ಯ (Siddaramaiah) ವಿತರಣೆ ಮಾಡಿದರು. ಆದರೆ ಇದೇ ಸಮಾವೇಶ ‘ದೋಸ್ತಿ’ಗಳ ವಾಕ್ಸಮರಕ್ಕೆ ವೇದಿಕೆ ಆಗಿತ್ತು.

ಸಮಾವೇಶದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ

ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಗ್ಯಾರಂಟಿಗಳನ್ನ ಯಾರು ವಿರೋಧ ಮಾಡ್ತಿದ್ರೋ, ಇಂದು ಅವರೇ ನಮ್ಮ ಗ್ಯಾರಂಟಿಗಳನ್ನ ಅನುಸರಿಸ್ತಿದ್ದಾರೆ. ಜನಸೇವೆಯ‌ ಸಾರ್ಥಕ ಆಡಳಿತವನ್ನು ರಾಜ್ಯ ಸರ್ಕಾರ‌ ನೀಡಿದೆ. 2 ವರ್ಷ 9 ತಿಂಗಳಲ್ಲಿ ಕೊಟ್ಟ ಮಾತಿನಂತೆ ಭರವಸೆ ಈಡೇರಿಸಿದ್ದೇವೆ. ಈಗಾಗಲೇ 243 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆ ಈಡೇರಿಸುತ್ತೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ ಎಂದು ಗುಡುಗಿದರು.

ಇದನ್ನೂ ಓದಿ: ರಾಜ್ಯ ರಾಜಕಾರಣದಲ್ಲಿ ಹೊಸ ದಾಖಲೆ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಅಚ್ಚರಿ ಮಾತು

ಬಿಜೆಪಿ ಅವಧಿಯಲ್ಲಿ ಶೇ.10ರಷ್ಟು ಭರವಸೆಯನ್ನೂ ಈಡೇರಿಸಿಲ್ಲ. ಇದೀಗ ರಾಜ್ಯ ಸರ್ಕಾರದ ಬಳಿ ಹಣವಿಲ್ಲವೆಂದು ಟೀಕೆ ಮಾಡುತ್ತಾರೆ. ಖಜಾನೆ ಖಾಲಿಯಾಗಿದೆ ಅಂತಾ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಗ್ಯಾರಂಟಿಗೆ 1.18 ಲಕ್ಷ ಕೋಟಿ ರೂ. ಹಣವನ್ನು ಖರ್ಚು ಮಾಡಿದ್ದೇವೆ. ಖಜಾನೆ ಖಾಲಿಯಾಗಿದ್ದರೆ ಇಷ್ಟು ಹಣ ಖರ್ಚು ಮಾಡಲು ಆಗುತ್ತಿರಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿ ದೇಶದ ಗ್ಯಾರಂಟಿ: ಡಿಸಿಎಂ ಡಿಕೆ ಶೀವಕುಮಾರ್

ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶೀವಕುಮಾರ್​, ಬಿಜೆಪಿ, ಜೆಡಿಎಸ್​​ನವರು ಜನರಿಗಾಗಿ ಒಂದು ಕಾರ್ಯಕ್ರಮ ಕೊಟ್ಟಿದ್ದಾರಾ ಅಂತ ಆಕ್ರೋಶಭರಿತವಾಗಿ ಪ್ರಶ್ನಿಸಿದರು. ಬಿಜೆಪಿ ನಾಯಕರ ಟೀಕೆ, ಟಿಪ್ಪಣಿಗಳ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ನಾವೇನು ಮಾಡೋಕೆ ಆಗಲಿಲ್ಲ ಅಂತ ಈಗ ಕೈಕೈ ಹಿಸುಕಿಕೊಳ್ತಿದ್ದಾರೆ ಅಂತ ಗರಂ ಆದರು.

ನಮ್ಮ ಸರ್ಕಾರಕ್ಕೆ 1 ಸಾವಿರ ದಿನಗಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ದೊಡ್ಡ ಬದಲಾವಣೆಯಾಗಿದೆ. 5 ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಆಗಲಿಲ್ಲ. ಇದು ಇದೀಗ ದೇಶದ ಗ್ಯಾರಂಟಿಯಾಗಿದೆ. ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಾವಿಲ್ಲ, ಆದರೆ ಟೀಕೆ ಹಾಗೂ ಅಪಪ್ರಚಾರಕ್ಕೆ ಸಾವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ನೀಡಿದ 1,323 ಕೋಟಿ 96 ಲಕ್ಷ ರೂ. ಹಣವನ್ನು ಕಾಂಗ್ರೆಸ್​​​ ಸರ್ಕಾರ ದುರ್ಬಳಕೆ ಮಾಡಿದೆ: ಬಿ.ವೈ. ವಿಜಯೇಂದ್ರ ಆರೋಪ

ಜನರ ಅನುಕೂಲಕ್ಕಾಗಿ ಭೂಗ್ಯಾರಂಟಿ ಯೋಜನೆ ಜಾರಿಮಾಡಿದ್ದೇವೆ. ರಾಜ್ಯ ಕಾಂಗ್ರೆಸ್ ಸರ್ಕಾರದ 7ನೇ ಗ್ಯಾರಂಟಿ ನೀರು. ಕೃಷ್ಣಾ, ಕಾವೇರಿ, ಮೇಕೆದಾಟು, ಎತ್ತಿನಹೊಳೆ ಕಾಮಗಾರಿಯನ್ನು ನಮ್ಮ ಅವಧಿಯಲ್ಲೇ ಎಲ್ಲಾ ಕಾಮಗಾರಿ ಮುಗಿಸುವ ಪ್ರಯತ್ನಿಸ್ತೇವೆ ಎಂದರು.

ನಮ್ಮ ಸರ್ಕಾರ ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆ ನೀಡಿದೆ. ಯಡಿಯೂರಪ್ಪ, ಕುಮಾರಸ್ವಾಮಿ, ಆರ್​ .ಅಶೋಕ್​, ವಿಜಯೇಂದ್ರ ನಿಮ್ಮ ಅವಧಿಯಲ್ಲಿ ಜನರಿಗೆ ಒಂದಾದ್ರು ಉತ್ತಮ ಕಾರ್ಯಕ್ರಮ ನೀಡಿದ್ರಾ? ನೀವು ಕೊಟ್ಟಿದ್ದರೇ ಜನರ ಮುಂದೆ ಮಾತನಾಡುವ ಅವಕಾಶ ಇರ್ತಿತ್ತು, ಆದರೆ ನೀವು ಆ ಅವಕಾಶ ಕಳೆದುಕೊಂಡಿದ್ದೀರಿ ಎಂದು ಡಿಕೆ ಶಿವಕುಮಾರ್​ ಟಾಂಗ್ ನೀಡಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ – Kannada News | PM Narendra Modi slams Congress for neglecting Assam in Guwahati poll rally

ಗುವಾಹಟಿ, ಫೆಬ್ರವರಿ 14: ಪ್ರಧಾನಿ ನರೇಂದ್ರ ಮೋದಿ ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸಿತು, ರಕ್ಷಣಾ ಒಪ್ಪಂದಗಳಲ್ಲಿ ಭ್ರಷ್ಟಾಚಾರ ಮಾಡಿತು, ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು, ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷ್ಯ ಮಾಡಿತು ಎಂದು ಮೋದಿ (PM Modi in Assam) ಆರೋಪಿಸಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಭಾರತವನ್ನು ವಲಸಿಗರ ಕೈಗೆ ಒಪ್ಪಿಸಲು ಮುಂದಾಗಿತ್ತು. ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್ ಭಾರತವನ್ನು ವಿಭಜಿಸಿತ್ತು. ಇಂದು ಕಾಂಗ್ರೆಸ್ ಮುಸ್ಲಿಂ ಲೀಗ್-ಮಾವೋವಾದಿ ಕಾಂಗ್ರೆಸ್ ಆಗಿ ಮಾರ್ಪಟ್ಟಿದೆ. ಅದು ಭಾರತವನ್ನು ವಿಭಜಿಸುವ ಪ್ರಯತ್ನದಲ್ಲಿದೆ. ಕಾಂಗ್ರೆಸ್ ಆಡಳಿತದಲ್ಲಿ ಅಸ್ಸಾಂನಲ್ಲಿ ಅಸ್ಥಿರತೆ ಉಂಟಾಗಿತ್ತು. ಬಿಜೆಪಿ ಅದನ್ನು ಬದಲಾಯಿಸಿತು. ನಾನು ಅಸ್ಸಾಂನಲ್ಲಿ ಅಭಿವೃದ್ಧಿಯ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದೇನೆ. ಬಿಜೆಪಿ ಅಸ್ಸಾಂನ ಚಿತ್ರಣವನ್ನೇ ಬದಲಾಯಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗುಲಾಮಗಿರಿಯನ್ನು ಮೆಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದೇವೆ; ಸೇವಾ ತೀರ್ಥದಲ್ಲಿ ಪ್ರಧಾನಿ ಮೋದಿ ಮೊದಲ ಭಾಷಣ

2019ರ ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಆ ಘಟನೆಯಲ್ಲಿ ಜೀವ ಕಳೆದುಕೊಂಡ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯಾಗಿ ನಡೆದ ಆಪರೇಷನ್ ಸಿಂಧೂರ್ ಬಗ್ಗೆಯೂ ಮಾತನಾಡಿದ ಮೋದಿ, “ಭಯೋತ್ಪಾದಕ ಬೆದರಿಕೆಗಳಿಗೆ ಪ್ರತಿಕ್ರಿಯಿಸುವಲ್ಲಿ ಭಾರತ ತನ್ನ ಸಂಕಲ್ಪವನ್ನು ಪ್ರದರ್ಶಿಸಿದೆ. ಆದರೆ, ಕಾಂಗ್ರೆಸ್​​ನ ಸುದೀರ್ಘ ಆಡಳಿತದಲ್ಲಿ ಅದು ಈ ರೀತಿಯ ಧೈರ್ಯದ ನಿರ್ಧಾರಗಳನ್ನು ಎಂದೂ ತೆಗೆದುಕೊಳ್ಳಲಿಲ್ಲ” ಎಂದು ಹೇಳಿದರು.

ಅಸ್ಸಾಂಗೆ ಕೇಂದ್ರದ ಬಜೆಟ್ ಹಂಚಿಕೆಯ ಬಗ್ಗೆಯೂ ಮಾತನಾಡಿದ ಪ್ರಧಾನಿ ಮೋದಿ ಈ ವರ್ಷ ಅಸ್ಸಾಂ ತನ್ನ ತೆರಿಗೆ ಪಾಲಾಗಿ 50,000 ಕೋಟಿ ರೂ.ಗಳನ್ನು ಪಡೆಯಲಿದೆ ಎಂದು ಹೇಳಿದರು. “ಈ ಬಜೆಟ್ ಈಶಾನ್ಯ ರಾಜ್ಯಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿ ಮಾಡುವತ್ತ ಹೆಚ್ಚು ಗಮನಹರಿಸುತ್ತದೆ. ಈ ವರ್ಷ, ಅಸ್ಸಾಂ ತನ್ನ ತೆರಿಗೆ ಪಾಲಾಗಿ ಸುಮಾರು 50,000 ಕೋಟಿ ರೂ.ಗಳನ್ನು ಪಡೆಯಲಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಸ್ಸಾಂ ಹೇಗೆ ಹಸಿವಿನಿಂದ ಬಳಲುತ್ತಿತ್ತು ಎಂಬುದನ್ನು ನಾವು ಚೆನ್ನಾಗಿ ನೆನಪಿನಲ್ಲಿಟ್ಟುಕೊಳ್ಳಬೇಕು. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅಸ್ಸಾಂ ಕೇವಲ 10,000 ಕೋಟಿ ರೂ.ಗಳನ್ನು ತೆರಿಗೆ ಪಾಲಾಗಿ ಪಡೆದುಕೊಂಡಿತ್ತು. ಈಗ ಬಿಜೆಪಿ ಸರ್ಕಾರದ ಅಡಿಯಲ್ಲಿ, ಅಸ್ಸಾಂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಡೆದಿದ್ದಕ್ಕಿಂತ 5 ಪಟ್ಟು ಹೆಚ್ಚು ಹಣವನ್ನು ಪಡೆಯುತ್ತಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ವಿಮಾನ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಸ್ಸಾಂ

“ಕಳೆದ 11 ವರ್ಷಗಳಲ್ಲಿ ಅಸ್ಸಾಂ ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರದಿಂದ 5.5 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚು ಹಣವನ್ನು ಪಡೆದಿದೆ. ಅಸ್ಸಾಂನಲ್ಲಿ ಹೆದ್ದಾರಿಗಳು ಮತ್ತು ರಸ್ತೆ ಯೋಜನೆಗಳಿಗೆ ಸಾವಿರಾರು ಕೋಟಿಗಳನ್ನು ಹಂಚಿಕೆ ಮಾಡಲಾಗಿದೆ, ಸುಧಾರಿತ ಸಂಪರ್ಕವು ಉದ್ಯೋಗ ಮತ್ತು ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ. ಈಶಾನ್ಯ ರಾಜ್ಯಗಳು ಅಷ್ಟಲಕ್ಷ್ಮಿ ದೇವತೆಗಳಿದ್ದಂತೆ” ಎಂದು ಮೋದಿ ಬಣ್ಣಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:21 pm, Sat, 14 February 26

Source link

ಸುಪ್ರೀಂನಲ್ಲಿ ಯತ್ನಾಳ್‌ಗೆ ಜಯ, ಹಮೀದ್ ಮುಶ್ರೀಫ್‌ಗೆ ಮುಖಭಂಗ: ಹೈಕೋರ್ಟ್ ಆದೇಶ ಎತ್ತಿಹಿಡಿದ ಕೋರ್ಟ್! – Kannada News | Vijayapura Yatnal Wins SC Case: Election Petition Rejected, MLA Position Secured

ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಮುಖಭಂಗವಾಗಿದೆ. ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯುವ ಮೂಲಕ ಯತ್ನಾಳ್ ಅವರ ಶಾಸಕ ಸ್ಥಾನದ ಮೇಲಿದ್ದ ತೂಗುಗತ್ತಿ ದೂರವಾಗಿದೆ.ಕಳೆದ ಚುನಾವಣೆಯಲ್ಲಿ ಯತ್ನಾಳ್ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಚುನಾವಣಾ ಅರ್ಜಿಯನ್ನು (Election Petition) ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕಲಬುರಗಿ ಹೈಕೋರ್ಟ್ ಪೀಠವು, ಕಳೆದ 2025ರ ಜುಲೈ 18 ರಂದು ಹಮೀದ್ ಮುಶ್ರೀಫ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಅಷ್ಟೇ ಅಲ್ಲದೆ, ಅರ್ಜಿದಾರರಿಗೆ ದಂಡವನ್ನೂ ವಿಧಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಶ್ರೀಫ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಈಗ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶ ಸರಿಯಾಗಿದೆ ಎಂದು ತೀರ್ಪು ನೀಡಿ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ನಿವೃತ್ತ ಅಧಿಕಾರಿಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ!

ಎಕ್ಸ್​​​ ಪೋಸ್ಟ್​​​ ಇಲ್ಲಿದೆ ನೋಡಿ:

ಯತ್ನಾಳ್ ಎಕ್ಸ್​​​ನಲ್ಲಿ ಟ್ವೀಟ್: “ಸತ್ಯಮೇವ ಜಯತೆ”

ಸುಪ್ರೀಂ ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಸಾಮಾಜಿಕ ಜಾಲತಾಣ X (ಟ್ವಿಟ್ಟರ್) ನಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧಿಗಳ ವಿರುದ್ಧ ಗುಡುಗಿದ್ದಾರೆ. “ಸತ್ಯಮೇವ ಜಯತೆ”. ನಾನು ಇಂತಹ ಗೊಡ್ಡು ಬೆದರಿಕೆಗಳಿಗೆ ಅಥವಾ ಸುಳ್ಳು ಕೇಸುಗಳಿಗೆ ಹೆದರುವವನಲ್ಲ,” ಎಂದು ಬರೆದುಕೊಂಡಿದ್ದಾರೆ. ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಮತ್ತು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಾಗಿ ಅವರು ಎಚ್ಚರಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs PAK: ಸೂಪರ್ ಸಂಡೇಯಂದು ಭಾರತ-ಪಾಕ್ ನಡುವೆ ಎರಡೆರಡು ಪಂದ್ಯ – Kannada News | India vs Pakistan: Feb 15, 2026 Two Epic Cricket Clashes in T20 World Cup and Asia Cup

ಫೆಬ್ರವರಿ 15, 2026 ರ ಭಾನುವಾರದಂದು ಟಿ20 ವಿಶ್ವಕಪ್​ನಲ್ಲಿ (T20 World Cup 2026) ಬಹುನಿರೀಕ್ಷಿತ ಪಂದ್ಯ ನಡೆಯಲಿದೆ. ಈ ದಿನಾಂಕದಂದು, ಭಾರತ ಮತ್ತು ಪಾಕಿಸ್ತಾನ (India vs Pakistan) ಕ್ರಿಕೆಟ್ ತಂಡಗಳು ಮೈದಾನದಲ್ಲಿ ಪರಸ್ಪರ ಮುಖಾಮುಖಿಯಾಗುತ್ತವೆ. ಆದರೆ ವಿಶೇಷವೆಂದರೆ ಕ್ರಿಕೆಟ್ ಅಭಿಮಾನಿಗಳು ಈ ದೇಶಗಳ ನಡುವೆ ಒಂದೇ ದಿನ ಒಂದಲ್ಲ ಎರಡು ಪಂದ್ಯಗಳನ್ನು ನೋಡುವ ಅವಕಾಶ ಪಡೆದಿದ್ದಾರೆ. ಒಂದೆಡೆ 2026 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ಹಿರಿಯ ತಂಡಗಳು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದ್ದು, ಇನ್ನೊಂದೆಡೆ ಎರಡೂ ದೇಶಗಳ ಯುವ ಮಹಿಳಾ ತಂಡಗಳು ಅದೇ ದಿನ ಮತ್ತೊಂದು ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಆಯೋಜಿಸಿರುವ ಮಹಿಳಾ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ರಲ್ಲಿ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳು ಫೆಬ್ರವರಿ 15 ರಂದು ಮುಖಾಮುಖಿಯಾಗಲಿವೆ. ಈ ಪಂದ್ಯಾವಳಿ ಯುವ ಆಟಗಾರರಿಗೆ ಪ್ರಮುಖ ವೇದಿಕೆಯಾಗಿದೆ. ಈ ಪಂದ್ಯವು ಬ್ಯಾಂಕಾಕ್‌ನ ಟೆರ್ಡ್‌ಥೈ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 12:30 ಕ್ಕೆ ಪ್ರಾರಂಭವಾಗಲಿದೆ. ಐಸಿಸಿ ಪುರುಷರ ಟಿ20 ವಿಶ್ವಕಪ್ 2026 ಪಂದ್ಯವು ಸಂಜೆ 7 ಗಂಟೆಗೆ ಶುರುವಾಗಲಿದೆ.

ಉಭಯ ತಂಡಗಳ ಪ್ರದರ್ಶನ

ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಇದುವರೆಗೆ ತಲಾ ಎರಡು ಪಂದಗಳನ್ನು ಆಡಿವೆ. ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಭಾರತ ತಂಡ ತನ್ನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು 29 ರನ್​ಗಳಿಂದ ಮಣಿಸಿದರೆ, ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಬರೋಬ್ಬರಿ 93 ರನ್​ಗಳಿಂದ ಮಣಿಸಿದೆ. ಹೀಗಾಗಿ ಪಾಯಿಂಟ್ ಪಟ್ಟಿಯಲ್ಲಿ 4 ಅಂಕ ಹಾಗೂ +3.050 ನೆಟ ರನ್​ ರೇಟ್​ನೊಂದಿಗೆ ಅಗ್ರಸ್ಥಾನದಲ್ಲಿದೆ.

ಇತ್ತ ಪಾಕಿಸ್ತಾನ ಕೂಡ ತನ್ನ ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಕೊನೆಯ ಓವರ್​ನಲ್ಲಿ ಸೋಲಿಸಿ ರೋಚಕ ಗೆಲುವು ದಾಖಲಿಸಿತು. ಆ ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಯುಎಸ್​ಎ ತಂಡವನ್ನು 32 ರನ್​ಗಳಿಂದ ಸೋಲಿಸಿತು. ಈ ಎರಡು ಗೆಲುವುಗಳಿಂದ 4 ಅಂಕ ಕಲೆಹಾಕಿರುವ ಪಾಕ್ ತಂಡ +0.932 ನೆಟ್​ ರನ್​ ರೇಟ್ ಹೊಂದಿದ್ದು ಎರಡನೇ ಸ್ಥಾನದಲ್ಲಿದೆ.

IND vs PAK: ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ?

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್‌ನಲ್ಲಿ ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ. ಭಾರತ ಎ, ಪಾಕಿಸ್ತಾನ ಎ, ಬಾಂಗ್ಲಾದೇಶ ಎ, ಶ್ರೀಲಂಕಾ ಎ, ಯುಎಇ, ನೇಪಾಳ, ಮಲೇಷ್ಯಾ ಮತ್ತು ಥೈಲ್ಯಾಂಡ್ ಟ್ರೋಫಿಗಾಗಿ ಸ್ಪರ್ಧಿಸುತ್ತಿವೆ. ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ, ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿವೆ. ಗ್ರೂಪ್ ಎ ನಲ್ಲಿ ಭಾರತ ಎ ಪಾಕಿಸ್ತಾನ ಎ, ಯುಎಇ ಮತ್ತು ನೇಪಾಳವನ್ನು ಎದುರಿಸಲಿದೆ. ಪ್ರತಿ ತಂಡವು ಗುಂಪು ಹಂತದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಮುನ್ನಡೆಯಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:15 pm, Sat, 14 February 26

Source link

ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಗುರುದೇವ ಶ್ರೀ ಶ್ರೀ ರವಿ ಶಂಕರರೊಂದಿಗೆ ಮಹಾಶಿವರಾತ್ರಿ ಮಹೋತ್ಸವ – Kannada News | Art of Living Mahashivaratri 2026: Gurudev Sri Sri’s Rudra Pooja and Midnight Meditation

ಬೆಂಗಳೂರು, ಫೆಬ್ರವರಿ 13: ಆರ್ಟ್ ಆಫ್ ಲಿವಿಂಗ್​​ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಈ ವರ್ಷವೂ ಮಹಾಶಿವರಾತ್ರಿ ಮಹೋತ್ಸವವನ್ನು ಅತ್ಯಂತ ಭಕ್ತಿಭಾವದಿಂದ ಮತ್ತು ವೈದಿಕ ಸಂಪ್ರದಾಯದಂತೆ ಆಚರಿಸಲಾಗುತ್ತಿದೆ. ರಾತ್ರಿಯಿಡೀ ನಡೆಯಲಿರುವ ಈ ಮಹೋತ್ಸವದಲ್ಲಿ ರುದ್ರಪೂಜೆ, ಭಜನೆ, ಧ್ಯಾನ ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಭಾರತದೆಲ್ಲೆಡೆಯಿಂದ ಮಾತ್ರವಲ್ಲದೆ ವಿದೇಶಗಳಿಂದಲೂ ಸಾವಿರಾರು ಭಕ್ತರು ಭಾಗವಹಿಸಲಿದ್ದಾರೆ. ಗುರುದೇವ ಶ್ರೀ ಶ್ರೀ ರವಿ ಶಂಕರರು ಅವರ ಸಾನ್ನಿಧ್ಯದಲ್ಲಿ ನಡೆಯುವ ಈ ಪವಿತ್ರ ಸಮಾರಂಭವು ಅಂತರಂಗದ ಶಾಂತಿ, ಸಮೂಹ ಪ್ರಾರ್ಥನೆ ಮತ್ತು ಆತ್ಮಪುನಶ್ಚೇತನದ ಅನನ್ಯ ಅನುಭವವನ್ನು ನೀಡಲಿದೆ.

ಮಹಾಶಿವರಾತ್ರಿಯು ವೈದಿಕ ಪರಂಪರೆಯಲ್ಲಿ ಅತ್ಯಂತ ಪವಿತ್ರವಾದ ರಾತ್ರಿಯಾಗಿ ಪರಿಗಣಿಸಲ್ಪಡುತ್ತದೆ. ಇದು ಆಳವಾದ ವಿಶ್ರಾಂತಿ, ಅರಿವಿನ ಉನ್ನತ ಸ್ಥಿತಿ ಮತ್ತು ಆಂತರಿಕ ಪರಿವರ್ತನೆಗೆ ದಾರಿ ಮಾಡಿಕೊಡುವ ವಿಶಿಷ್ಟ ಸಮಯವೆಂದು ಗುರುತಿಸಲಾಗಿದೆ. ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ರಾತ್ರಿಯಿಡೀ ನಡೆಯುವ ಆಚರಣೆ ವೈದಿಕ ವಿಧಿ-ವಿಧಾನಗಳು ಮತ್ತು ಹೃದಯಸ್ಪರ್ಶಿಯಾದ ಸಂಗೀತದಿಂದ ಉಂಟಾಗುವ ಚೈತನ್ಯಮಯ ವಾತಾವರಣಕ್ಕಾಗಿ ಜಾಗತಿಕವಾಗಿ ಪ್ರಸಿದ್ಧವಾಗಿದೆ. ಈ ಮಹೋತ್ಸವವು ಲಕ್ಷಾಂತರ ಭಕ್ತರ ಮನಸ್ಸಿನಲ್ಲಿ ಆಧ್ಯಾತ್ಮಿಕ ಸ್ಪಂದನೆಯನ್ನು ಉಂಟುಮಾಡುತ್ತದೆ.

Art Of Living Mahashivaratri 2026

ಶಿವರಾತ್ರಿಯ ಮಹತ್ವವನ್ನು ವಿವರಿಸುತ್ತಾ ಗುರುದೇವ ಶ್ರೀ ಶ್ರೀ ರವಿ ಶಂಕರರು, “ಶಿವರಾತ್ರಿಯು ಭೌತಿಕ ಜಗತ್ತು ಮತ್ತು ನಮ್ಮ ಆಂತರ್ಯದ ಅಲೌಕಿಕ ಜಗತ್ತಿನ ನಡುವಿನ ಸೇತುವೆ. ಇದು ಕೇವಲ ಪದ್ಧತಿ ಅಥವಾ ಮನರಂಜನೆಗಾಗಿ ಅಲ್ಲ; ಇದು ಧ್ಯಾನಸ್ಥ ಅರಿವಿನ ಸ್ಥಿತಿಗೆ ಪ್ರವೇಶಿಸುವ ಅವಕಾಶ. ಸಂತೋಷದ ಹಿಂದೆ ಓಡುವುದರಿಂದ ದಣಿವು ಬರುತ್ತದೆ, ಆದರೆ ಆತ್ಮದಲ್ಲಿ ವಿಶ್ರಾಂತಿ ಪಡೆದಾಗ ನಿಜವಾದ ಬಲ ಮತ್ತು ಸಂತೋಷ ದೊರೆಯುತ್ತದೆ. ಮಹಾಶಿವರಾತ್ರಿ ಅಂದರೆ ನಿಮ್ಮೊಳಗಿನ ಆಳವಾದ ವಿಶ್ರಾಂತಿಯ ಸ್ಥಿತಿಗೆ ತಲುಪುವುದು,” ಎಂದು ತಿಳಿಸಿದ್ದಾರೆ.

ಈ ಮಹೋತ್ಸವದ ಪ್ರಮುಖ ಆಕರ್ಷಣೆ ಮಹಾರುದ್ರ ಪೂಜೆ. ಇದು ಭಗವಾನ್ ಶಿವನ ಕರುಣಾಮಯ ರೂಪವಾದ ರುದ್ರನ ಆರಾಧನೆಗೆ ಸಮರ್ಪಿತವಾದ ಶಕ್ತಿಶಾಲಿ ವೈದಿಕ ವಿಧಿ. ಶ್ರೀರುದ್ರಂ ಪಠಣದೊಂದಿಗೆ ನಡೆಯುವ ಈ ಪೂಜೆ, ಪರಿಸರವನ್ನು ಶುದ್ಧಗೊಳಿಸಿ ಸಮೂಹ ಚೈತನ್ಯವನ್ನು ಮೇಲಕ್ಕೆತ್ತುತ್ತದೆ ಎಂದು ನಂಬಲಾಗಿದೆ. ಗುರುದೇವರ ಸಾನ್ನಿಧ್ಯದಲ್ಲಿ ನಡೆಯುವ ಈ ವಿಧಿ ನಕಾರಾತ್ಮಕತೆಯ ವಿಲಯ ಮತ್ತು ಉನ್ನತ ಚೈತನ್ಯದ ಜಾಗೃತಿಯ ಸಂಕೇತವಾಗಿದೆ.

ಸಂಜೆ 7:15ರಿಂದ ಭಜನೆಗಳೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. ನಂತರ ಮಹಾರುದ್ರ ಪೂಜೆ, ಗುರುದೇವರ ಪ್ರವಚನ ಹಾಗೂ ರಾತ್ರಿ 11:30ಕ್ಕೆ ವಿಶೇಷ ಮಧ್ಯರಾತ್ರಿಯ ಧ್ಯಾನ ನಡೆಯಲಿದೆ. ಬೆಳಿಗ್ಗೆ 4:00ರಿಂದ ಮಹಾರುದ್ರ ಹೋಮ ನಡೆಯಲಿದೆ. ಶಿವರಾತ್ರಿಯಂದು ಸುಮಾರು 2.5 ರಿಂದ 3 ಲಕ್ಷ ಭಕ್ತರಿಗೆ ಪ್ರಸಾದ ವಿತರಿಸಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾವಿರಾರು ಸೇವಾಕರ್ತರು ಭಕ್ತರಿಗೆ ಸೌಲಭ್ಯ ಒದಗಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದೇ ವೇಳೆ, ಭಾರತದ ಸುಮಾರು 150 ಸ್ಥಳಗಳಲ್ಲಿ ಲಕ್ಷಾಂತರ ಜನರು ತಮ್ಮ ನಗರಗಳಲ್ಲಿಯೇ ರುದ್ರಪೂಜೆಯಲ್ಲಿ ಭಾಗವಹಿಸುವ ಅವಕಾಶವನ್ನು ಹೊಂದಿದ್ದಾರೆ. ಜಗತ್ತಿನಾದ್ಯಂತದ ಸಾಧಕರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಮಹಾಶಿವರಾತ್ರಿ ಆಚರಣೆ, ಸಂಭ್ರಮ ಮತ್ತು ಗಹನ ಆಧ್ಯಾತ್ಮಿಕತೆಯ ಸುಂದರ ಸಮನ್ವಯವಾಗಿ ಸಕಾರಾತ್ಮಕ ಚೈತನ್ಯದ ವಾತಾವರಣವನ್ನು ನಿರ್ಮಿಸಲು ಸಜ್ಜಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನೀರಿನ ಬಾಟಲಿಯಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ಸರಳ ಸಲಹೆ ಪಾಲಿಸಿ – Kannada News | This simple tip will help you get rid of bad odors from water bottle

ಬಹುತೇಕ ಎಲ್ಲರೂ ಎಲ್ಲಿಗೇ ಹೋದರೂ ನೀರಿನ ಬಾಟಲಿಯನ್ನು (water bottle) ಜೊತೆಗೆ ಕೊಂಡೊಯ್ಯುತ್ತಾರೆ, ಮನೆಯಲ್ಲೂ ಬಾಟಲಿಯಲ್ಲಿ ತುಂಬಿಸಿದ ನೀರನ್ನೇ ಕುಡಿಯುತ್ತಾರೆ. ಆದ್ರೆ ಅದರ ಸ್ವಚ್ಛತೆಯ ಬಗ್ಗೆ ಹೆಚ್ಚಿನವರು ಕಾಳಜಿಯನ್ನು ವಹಿಸುವುದೇ ಇಲ್ಲ. ಬಾಟಲಿಯನ್ನು ಆಗಾಗ್ಗೆ ಸ್ವಚ್ಛಗೊಳಿಸದಿದ್ದರೆ ಬ್ಯಾಕ್ಟೀರಿಯಾಗಳು ಶೇಖರಣೆಗೊಂಡು ದುರ್ವಾಸನೆ ಬರಲು ಆರಂಭಿಸುತ್ತದೆ. ಇಂತಹ ಬಾಟಲಿಯಲ್ಲಿ ನೀರು ಕುಡಿಯುವುದರಿಂದ ಆರೋಗ್ಯದ ಮೇಲೂ ಋಣಾತ್ಮಕ ಪರಿಣಾಮ ಬೀರಬಹುದು. ಆದ್ದರಿಂದ ನೀರಿನ ಬಾಟಲಿಯನ್ನು ಸರಿಯಾಗಿ ಸ್ವಚ್ಛಗೊಳಿಸುವುದು ಮುಖ್ಯ. ಹೀಗಿರುವಾಗ ಈ ಕೆಲವೊಂದು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ನೀರಿನ ಬಾಟಲಿಯಿಂದ ಬರುವ ದುರ್ವಾಸನೆ ಮತ್ತು ಪಾಚಿ, ಕೊಳೆ ಎರಡನ್ನೂ ಬಲು ಸುಲಭವಾಗಿ ಹೋಗಲಾಡಿಸಬಹುದು.

ನೀರಿನ ಬಾಟಲಿಯನ್ನು ಸ್ವಚ್ಛಗೊಳಿಸಲು ಈ ಸಲಹೆ ಅನುಸರಿಸಿ:

ಉಪ್ಪು ಮತ್ತು ನಿಂಬೆರಸ: ಉಪ್ಪು ಮತ್ತು ನಿಂಬೆರಸ ಮಿಶ್ರಣವು ನೀರಿನ ಬಾಟಲಿಯಿಂದ ಕೊಳೆಯನ್ನು ತೆಗೆದುಹಾಕುವಲ್ಲಿ ಮಾತ್ರವಲ್ಲದೆ, ಬಾಟಲಿಯ ದುರ್ವಾಸನೆಯನ್ನೂ  ತೆಗೆದುಹಾಕುವಲ್ಲಿ ಪರಿಣಾಮಕಾರಿಯಾಗಿದೆ.  ಇದಕ್ಕಾಗಿ ಮೊದಲು ಬಾಟಲಿಗೆ ಉಪ್ಪು ಮತ್ತು ನಿಂಬೆ ರಸವನ್ನು ಸೇರಿಸಿ. ಬಳಿಕ ಸ್ವಲ್ಪ ನೀರನ್ನೂ ಸೇರಿಸಿ, ಬ್ರಷ್‌ನಿಂದ ಬಾಟಲಿಯನ್ನು ಚೆನ್ನಾಗಿ ಸ್ಕ್ರಬ್ ಮಾಡಿ, ಮತ್ತು ಸ್ವಲ್ಪ ಸಮಯದ ನಂತರ ಅದನ್ನು ತೊಳೆಯಿರಿ. ಇದು ಕೊಳೆ, ವಾಸನೆ ಎರಡನ್ನೂ ಹೋಗಲಾಡಿಸುತ್ತದೆ.

ವಿನೆಗರ್ ಮತ್ತು ಅಡಿಗೆ ಸೋಡಾ: ನೀರಿನ ಬಾಟಲಿಯಲ್ಲಿ ಅಂಟಿರುವ ಕಲೆಯನ್ನು ಹೋಗಲಾಡಿಸಲು ಮೊದಲಿಗೆ ಬಾಟಲಿಗೆ ಒಂದು ಚಮಚ ವಿನೆಗರ್ ಮತ್ತು ಒಂದು ಚಮಚ ಅಡಿಗೆ ಸೋಡಾ ಮತ್ತು ಸ್ವಲ್ಪ ನೀರು ಸೇರಿಸಿ ಮುಚ್ಚಿ. ಬಾಟಲಿಯನ್ನು ಚೆನ್ನಾಗಿ ಅಲ್ಲಾಡಿಸಬೇಕು. ಸುಮಾರು 10 ರಿಂದ 15 ನಿಮಿಷಗಳ ನಂತರ, ನೀವು ನೀರಿನ ಬಾಟಲಿಯನ್ನು ತೊಳೆದು ಸ್ವಚ್ಛಗೊಳಿಸಿ. ಈ ಶುಚಿಗೊಳಿಸುವ ತಂತ್ರದಿಂದ ನೀರಿನ ಬಾಟಲಿಯ ಕೊಳೆ, ವಾಸನೆ ಎರಡನ್ನೂ ತೊಡೆದುಹಾಕಬಹುದು.

ಅಡಿಗೆ ಸೋಡಾ ಮತ್ತು ಉಪ್ಪು: ಒಂದು ಲೋಟ ಬೆಚ್ಚಗಿನ ನೀರಿಗೆ ಅಡಿಗೆ ಸೋಡಾ ಮತ್ತು ಸ್ವಲ್ಪ ಉಪ್ಪು ಸೇರಿಸಿ. ಆ ನೀರನ್ನು ಬಾಟಲಿಗೆ ತುಂಬಿಸಿ, ನಂತರ, ಬ್ರಷ್ ಅಥವಾ ಸ್ಕ್ರಬ್ಬರ್‌ನಿಂದ ಒಳಭಾಗವನ್ನು ಸ್ಕ್ರಬ್ ಮಾಡಿ ಮತ್ತು ಶುದ್ಧ ನೀರಿನಿಂದ ತೊಳೆಯಿರಿ. ಈ ವಿಧಾನವು ಬಾಟಲಿಯಿಂದ ಯಾವುದೇ ಕೊಳಕು ಮತ್ತು ವಾಸನೆಯನ್ನು ಸಂಪೂರ್ಣವಾಗಿ ತೆಗೆದುಹಾಕುತ್ತದೆ.

ಇದನ್ನೂ ಓದಿ: ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಮನೆಮದ್ದುಗಳು ಪರಿಣಾಮಕಾರಿ

ಗ್ರೀನ್‌ ಟೀ ಬ್ಯಾಗ್:‌ ಟೀ ಬ್ಯಾಗ್‌ಗಳು ಸಹ  ಬಾಟಲಿಯ ವಾಸನೆಯನ್ನು ತೊಡೆದುಹಾಕಲು ತುಂಬಾ ಉಪಯುಕ್ತವಾಗಿವೆ. ಇದಕ್ಕಾಗಿ ಬಾಟಲಿಗೆ ನೀರನ್ನು ಹಾಕಿ ಅದರಲ್ಲಿ ಟೀ ಬ್ಯಾಗ್‌ ಇಟ್ಟು ರಾತ್ರಿಯಿಡಿ ಹಾಗೆಯೇ ಬಿಡಿ,  ಮರುದಿನ ಬೆಳಿಗ್ಗೆ ಆ ಬಾಟಲಿಯನ್ನು ಚೆನ್ನಾಗಿ ಸ್ವಚ್ಛಗೊಳಿಸಿದರೆ ವಾಸನೆ ಮಾಯವಾಗುತ್ತದೆ. ಈ ವಿಧಾನಗಳ ಜೊತೆಗೆ, ಪ್ರತಿ ಕೆಲವು ದಿನಗಳಿಗೊಮ್ಮೆ ಬಾಟಲಿಯನ್ನು ಸ್ವಚ್ಛಗೊಳಿಸುತ್ತಾ ಇರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಕ್ಷಿತ್ ಶೆಟ್ಟಿ ಹೇಗಿದ್ದಾರೆ, ಏನು ಮಾಡ್ತಿದ್ದಾರೆ? ಗೆಳೆಯ ಹೇಮಂತ್ ಕೊಟ್ಟರು ಉತ್ತರ – Kannada News | Hemanth Rao talks about Rakshit Shetty says what is he doing

‘ಸಪ್ತ ಸಾಗರದಾಚೆ ಎಲ್ಲೊ-ಸೈಡ್ ಬಿ’ ಸಿನಿಮಾ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ ಬಂದಿದೆ. ಆ ಸಿನಿಮಾದ ಬಿಡುಗಡೆ ವೇಳೆ ಕಾಣಿಸಿಕೊಂಡಿದ್ದ ರಕ್ಷಿತ್ ಶೆಟ್ಟಿ (Rakshit Shetty) ಅದಾದ ಬಳಿಕ ಕಣ್ಮರೆ ಆಗಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾಕ್ಕೆ ಮುಂಚೆಯೇ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಿಸಿದ್ದ ರಕ್ಷಿತ್ ಶೆಟ್ಟಿ ಅದರ ಶೂಟಿಂಗ್ ಸಹ ಆರಂಭ ಮಾಡಿಲ್ಲ. ರಕ್ಷಿತ್ ಅಭಿಮಾನಿಗಳು ನೆಚ್ಚಿನ ನಟನ ಬಗ್ಗೆ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ರಕ್ಷಿತ್ ಕಾಣೆ ಆಗಿರುವ ಬಗ್ಗೆ ಮೀಮ್​​ಗಳು ಸಹ ಹರಿದಾಡುತ್ತಿರುತ್ತವೆ. ಇದೀಗ ರಕ್ಷಿತ್ ಅವರ ಗೆಳೆಯ ಹೇಮಂತ್ ರಾವ್, ರಕ್ಷಿತ್ ಶೆಟ್ಟಿ ಬಗ್ಗೆ ಮಾತನಾಡಿದ್ದಾರೆ.

ಹೇಮಂತ್ ರಾವ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದು, ತಮ್ಮ ಸಿನಿಮಾ ಜರ್ನಿ, ಕನ್ನಡ ಚಿತ್ರರಂಗದ ಓರೆ-ಕೋರೆಗಳು, ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾ ಹೀಗೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಅದೇ ಸಂದರ್ಶನದ ಅಂತ್ಯದಲ್ಲಿ ವ್ಯಕ್ತಿಯೊಬ್ಬರು, ‘ರಕ್ಷಿತ್ ಶೆಟ್ಟಿ ಅವರು ಹೇಗಿದ್ದಾರೆ? ಅವರಿಗೆ ಒಂದು ಕರೆ ಮಾಡಿ’ ಎಂದು ಮನವಿ ಮಾಡಿದ್ದಾರೆ. ಅಭಿಮಾನಿಯ ಮನವಿಗೆ ಹೇಮಂತ್ ರಾವ್ ಸ್ಪಂದಿಸಿದ್ದಾರೆ.

ಹೇಮಂತ್ ರಾವ್ ಅವರು, ರಕ್ಷಿತ್ ಶೆಟ್ಟಿ ಅವರಿಗೆ ಕರೆ ಮಾಡಲು ನಿರಾಕರಿಸಿದ್ದಾರೆ. ನಾನು ಅವರ ಖಾಸಗಿತನವನ್ನು ಹಾಳು ಮಾಡಲು ಇಷ್ಟಪಡುವುದಿಲ್ಲ, ಅವರ ಖಾಸಗಿ ತನವನ್ನು ಗೌರವಿಸಬೇಕಾದುದು ನನ್ನ ಕರ್ತವ್ಯ ಎಂದಿರುವ ಹೇಮಂತ್ ರಾವ್, ‘ರಕ್ಷಿತ್ ಶೆಟ್ಟಿ ಆರಾಮವಾಗಿದ್ದಾರೆ. ಬಹಳ ಚೆನ್ನಾಗಿದ್ದಾರೆ. ಯಾರೂ ಅದರ ಬಗ್ಗೆ ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಅವರು ಒಂದು ಅದ್ಭುತವಾದ ಚಿತ್ರಕತೆಯನ್ನು ಬರೆಯುತ್ತಿದ್ದಾರೆ. ‘ಗೇಮ್ ಆಫ್ ಥ್ರೋನ್ಸ್’ನಲ್ಲಿ ಒಂದು ಡ್ರ್ಯಾಗನ್ ಬರುತ್ತದಲ್ಲ, ಅದೇ ರೀತಿ ರಕ್ಷಿತ್ ಸಹ ಅದ್ಧೂರಿಯಾಗಿ ಎಂಟ್ರಿ ಕೊಡಲಿದ್ದಾರೆ’ ಎಂದಿದ್ದಾರೆ ಹೇಮಂತ್.

ಇದನ್ನೂ ಓದಿ:ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ

‘ರಕ್ಷಿತ್ ಶೆಟ್ಟಿ ಅಂಥಹಾ ಅದ್ಭುತ ವ್ಯಕ್ತಿಯನ್ನು ನಾನು ನೋಡಿಲ್ಲ. ಆತ ಮಹಾನ್ ಸಿನಿಮಾ ಪ್ರೇಮಿ. ಬಹಳ ಶ್ರಮಜೀವಿ, ಯಾವುದಲ್ಲಾದರೂ ತೊಡಗಿಕೊಂಡರೆ ಪೂರ್ಣವಾಗಿ ಅದರಲ್ಲೇ ತೊಡಗಿಕೊಳ್ಳುತ್ತಾರೆ. ರಕ್ಷಿತ್ ಶೆಟ್ಟಿಯ ವ್ಯಕ್ತಿತ್ವದ ಬಗ್ಗೆ, ಗುಣಗಳ ಬಗ್ಗೆ ಮಾತನಾಡುವುದಾದರೆ ಬಹಳ ಮಾತನಾಡಬಹುದು. ನೀವೆಲ್ಲರೂ ಹೇಗೆ ಮತ್ತೆ ರಕ್ಷಿತ್ ಅನ್ನು ಪರದೆಯ ಮೇಲೆ ನೋಡಲು ಕಾಯುತ್ತಿದ್ದೀರೋ ಹಾಗೆಯೇ ನಾನು ಸಹ ಅವರನ್ನು ಮತ್ತೆ ಪರದೆಯ ಮೇಲೆ ನೋಡಲು ಕಾಯುತ್ತಿದ್ದೇನೆ. ನಾನು ಬರೆಯುವ ಪ್ರತಿ ಕತೆಯನ್ನೂ ಅವನಿಗೆ (ರಕ್ಷಿತ್ ಶೆಟ್ಟ) ತೋರಿಸಿ, ಮಾಡ್ತೀಯ ಎಂದು ಕೇಳುತ್ತೀನಿ. ನಾನು ಸಹ ನಿಮ್ಮಂತೆ ಅವರನ್ನು ಮತ್ತೆ ನೋಡಲು ಕಾಯುತ್ತಿದ್ದು, ಅದು ಶೀಘ್ರದಲ್ಲಿಯೇ ನೆರವೇರಲಿದೆ’ ಎಂದಿದ್ದಾರೆ ಹೇಮಂತ್ ರಾವ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 3:26 pm, Sat, 14 February 26

Source link

RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್​ಗಳ ಬದಲು ಈ ಒಂದೇ ಆ್ಯಪ್​ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ – Kannada News | Indian Railways newly launched RailOne app for ticket booking replacing UTS

ನವದೆಹಲಿ, ಫೆಬ್ರವರಿ 14: ಪ್ರಯಾಣಿಕರು ದೀರ್ಘಕಾಲ ವೇಂಟಿಂಗ್​ನಲ್ಲಿರಬೇಕಾದ, ಸರತಿ ಸಾಲಿನಲ್ಲಿ ನಿಲ್ಲಬೇಕಾದ ಅನಿವಾರ್ಯತೆಯನ್ನು ತಪ್ಪಿಸಲು ಭಾರತೀಯ ರೈಲ್ವೆ (Indian Railways) ಹೊಸ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ. ತಮ್ಮ ಸ್ಮಾರ್ಟ್‌ಫೋನ್‌ಗಳ ಮೂಲಕ ಕಾಯ್ದಿರಿಸದ, ಪ್ಲಾಟ್‌ಫಾರ್ಮ್ ಮತ್ತು ಸೀಸನ್ ಟಿಕೆಟ್‌ಗಳನ್ನು ಖರೀದಿಸಲು ಅನುವು ಮಾಡಿಕೊಡಲು ಭಾರತೀಯ ರೈಲ್ವೆ ಕಾಯ್ದಿರಿಸದ ಟಿಕೆಟಿಂಗ್ ಸಿಸ್ಟಮ್ ಅಥವಾ ಯುಟಿಎಸ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಿದೆ. ಈಗ ಯುಟಿಎಸ್ ಅಪ್ಲಿಕೇಶನ್ ಅನ್ನು ತೆಗೆದುಹಾಕಲಾಗುತ್ತಿದೆ. ರೈಲ್ವೆ ಇಲಾಖೆ ರೈಲ್‌ಒನ್ ಅಪ್ಲಿಕೇಶನ್ ಅನ್ನು ಪರಿಚಯಿಸುತ್ತಿದೆ. ಇದರ ಮೂಲಕ ಎಲ್ಲ ರೈಲ್ವೆ ಸೌಲಭ್ಯಗಳು ಒಂದೇ ಆ್ಯಪ್​ನಲ್ಲಿ ಸಿಗಲಿವೆ.

ಭಾರತೀಯ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ತಡೆರಹಿತ ಸೇವೆಯನ್ನು ನೀಡಲು ಇತ್ತೀಚೆಗೆ ಪ್ರಾರಂಭಿಸಲಾದ ರೈಲ್‌ಒನ್ ಪ್ಲಾಟ್‌ಫಾರ್ಮ್‌ ಅನ್ನು ಆರಂಭಿಸಿದೆ. ಹಲವು ಆ್ಯಪ್​ಗಳ ಮೂಲಕ ರೈಲ್ವೆ ಸೇವೆಗಳನ್ನು ಪಡೆಯುವ ಬದಲು ಈ ಒಂದೇ ಆ್ಯಪ್ ಮೂಲಕ ಎಲ್ಲ ಸೌಲಭ್ಯಗಳನ್ನು ಪಡೆಯಲು ಸರ್ಕಾರ ರೈಲ್ವೆ ಪ್ರಯಾಣಿಕರಿಗೆ ಸಲಹೆ ನೀಡಿದೆ.

ಇದನ್ನೂ ಓದಿ: Vande Bharat Sleeper: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ವಿಶೇಷತೆ, ಟಿಕೆಟ್ ದರ ಏನು?

ಮಾರ್ಚ್ 1ರಿಂದ ಯುಟಿಸನ್‌ಮೊಬೈಲ್ (ಯುಟಿಎಸ್) ಅಪ್ಲಿಕೇಶನ್ ಅನ್ನು ಹಂತಹಂತವಾಗಿ ತೆಗೆದುಹಾಕಲಾಗುವುದು ಎಂದು ರೈಲ್ವೆ ತಿಳಿಸಿದೆ. ಪ್ರಯಾಣಿಕರು ತಮ್ಮ ಪ್ರಸ್ತುತ ಐಆರ್‌ಸಿಟಿಸಿ ಅಥವಾ ಯುಟಿಎಸ್ ಲಾಗಿನ್ ಅನ್ನು ಬಳಸಿಕೊಂಡು ರೈಲ್‌ಒನ್‌ಗೆ ಲಾಗಿನ್ ಆಗಬಹುದು. ಹೀಗಾಗಿ, ಹೊಸ ನೋಂದಣಿಗಳ ಅಗತ್ಯವಿರುವುದಿಲ್ಲ.

ರೈಲ್‌ಒನ್ ಪ್ರಯಾಣಿಕರು ಯುಪಿಐ, ಕಾರ್ಡ್‌ಗಳು, ನೆಟ್ ಬ್ಯಾಂಕಿಂಗ್ ಮತ್ತು ಆರ್-ವ್ಯಾಲೆಟ್ ಸೇರಿದಂತೆ ಬಹು ಪಾವತಿ ಆಯ್ಕೆಗಳನ್ನು ಬಳಸಿಕೊಂಡು ಕಾಯ್ದಿರಿಸಿದ, ಕಾಯ್ದಿರಿಸದ ಮತ್ತು ಪ್ಲಾಟ್‌ಫಾರ್ಮ್ ಟಿಕೆಟ್‌ಗಳನ್ನು ಬುಕ್ ಮಾಡಲು ಅವಕಾಶ ಕಲ್ಪಿಸುತ್ತದೆ.

ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಮತ್ತೊಂದು ಗುಡ್​​​ ನ್ಯೂಸ್​: ಇನ್ಮುಂದೆ ಈ ರೈಲಿನಲ್ಲಿ ಊಟ ಉಚಿತ

ರೈಲ್‌ಒನ್ ಆ್ಯಪ್ ಮೂಲಕ, ಪ್ರಯಾಣಿಕರು ಆಹಾರವನ್ನು ಕೂಡ ಆರ್ಡರ್ ಮಾಡಬಹುದು. ಅದನ್ನು ಪ್ರಯಾಣದ ಸಮಯದಲ್ಲಿ ಪ್ರಯಾಣಿಕರ ಸೀಟಿಗೆ ತರಲಾಗುತ್ತದೆ. ಇದನ್ನು IRCTC ಅನುಮೋದಿಸಿದ ಮಾರಾಟಗಾರರು ತಲುಪಿಸುತ್ತಾರೆ. ಈ ಆ್ಯಪ್ ಮೂಲಕ ಪ್ರಯಾಣಿಕರು ಬುಕ್ ಮಾಡಿದ ರೈಲಿನ ಲೈವ್ ಅಪ್ಡೇಟ್ ಕೂಡ ಪಡೆಯಬಹುದು. ಟಿಕೆಟ್‌ಗಳ ಬುಕಿಂಗ್ ಅನ್ನು UP/R-ವ್ಯಾಲೆಟ್, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್‌ಗಳು ಹಾಗೂ ನೆಟ್ ಬ್ಯಾಂಕಿಂಗ್‌ನಂತಹ ಸುರಕ್ಷಿತ ಪಾವತಿಗಳ ಮೂಲಕ ಮಾಡಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್: ಪ್ರೇಮ ವಿವಾಹಕ್ಕೆ ಸರ್ಕಾರ 3 ಲಕ್ಷ ರೂ. ನೀಡಬೇಕು – Kannada News | Bengaluru: Vatal Nagaraj Celebrates Valentine’s Day with Donkey Wedding and Key Demands

ಬೆಂಗಳೂರು, ಫೆ.14: ಇಂದು ಪ್ರೇಮಿಗಳ ದಿನವನ್ನು (Valentine’s Day) ಆಚರಣೆ ಮಾಡಲಾಗುತ್ತಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪ್ರತಿ ವರ್ಷದಂತೆ ಈ ಬಾರಿಯೂ ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ನಡೆಸಿದೆ. ಎರಡು ಕತ್ತೆಗಳಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಹೂವಿನ ಹಾರ ಹಾಕಿ ತಾಳಿ ಕಟ್ಟಿದ್ದಾರೆ. ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ‘ಗಂಡು ಕತ್ತೆ’ ಹಠಾತ್ತನೆ ಅಲ್ಲಿಂದ ಓಡಿಹೋಗಿದೆ. ಇದನ್ನು ಕಂಡು ನೆರೆದಿದ್ದ ಸಾರ್ವಜನಿಕರು ನಗೆಗಡಲಲ್ಲಿ ತೇಲಿದ್ದಾರೆ. ನಂತರ ಕತ್ತೆಯನ್ನು ಹಿಡಿದು ತಂದು ಮದುವೆ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು. “ಪ್ರೇಮ ಎನ್ನುವುದು ಕೇವಲ ಮನುಷ್ಯರಿಗಷ್ಟೇ ಸೀಮಿತವಲ್ಲ, ಅದು ಪ್ರಾಣಿ-ಪಕ್ಷಿಗಳಿಗೂ ಇದೆ. ಕತ್ತೆ ಬಹಳ ಪವಿತ್ರವಾದ ಪ್ರಾಣಿ, ಪುರಾಣಗಳಲ್ಲೂ ಕತ್ತೆಯ ಉಲ್ಲೇಖಗಳಿವೆ ಎಂದು ಹೇಳಿದ್ದಾರೆ. ಪ್ರೇಮ ವಿವಾಹವಾಗುವವರಿಗೆ ಸರ್ಕಾರ 3 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಬೇಕು ಮತ್ತು ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು,” ಎಂದು ಒತ್ತಾಯಿಸಿದರು.

ವರದಿ: ಅರುಣ್ ಕುಮಾರ್​ , ಮೆಟ್ರೋ 

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್

ರಾಧಿಕಾ ಪಂಡಿತ್ ಅವರು ಯಶ್ (Yash) ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಇವರನ್ನು ಮಾದರಿ ಕಪಲ್ ಎಂದರೂ ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಈ ಜೋಡಿ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಯಶ್​ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಪರಿಚಯ ಆಗಿದ್ದು ಧಾರಾವಾಹಿಯಲ್ಲಿ. ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದರು. ಆ ಬಳಿಕ ಇಬ್ಬರೂ ಒಟ್ಟಾಗಿ ಸಿನಿಮಾ ಮಾಡಿದರು. ತೆರೆಮೇಲೆ ಜೋಡಿ ಆಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಈಗ ತೆರೆಯ ಹಿಂದೆಯೂ ಕಪಲ್ ಆಗಿದ್ದಾರೆ. ಇವರ ಪ್ರೀತಿಯ ನೌಕೆ ಯಾವುದೇ ಅಡಚಣೆ ಇಲ್ಲದೆ ಸಾಗುತ್ತಿದೆ. ಯಶ್ ಅವರ ಕುರಿತು ರಾಧಿಕಾ ಪಂಡಿತ್ ಹಂಚಿಕೊಂಡಿರೋ ಪೋಸ್ಟ್ ಈಗ ಗಮನ ಸೆಳೆಯುತ್ತಿದೆ.

‘ನನ್ನ ಅಭದ್ರತೆಯನ್ನು ತೆಗೆದು ಹಾಕಿದವನು ನೀನು. ನಿನ್ನ ಕಣ್ಣುಗಳಲ್ಲಿ ದಣಿವು, ಬೇರೆ ಯಾರೂ ಗಮನಿಸದ ತ್ಯಾಗ, ದೂರು ನೀಡದೆ ನೀನು ಹೊತ್ತುಕೊಂಡ ದೀರ್ಘ ಭಾರ ನನಗೆ ಕಾಣುತ್ತಿದೆ. ಅದು ನಮಗಾಗಿ ಎಂದು ನನಗೆ ತಿಳಿದಿದೆ. ನನ್ನನ್ನು ದಿನವೂ ಆಯ್ಕೆ ಮಾಡಿದ್ದಕ್ಕೆ ನಿನಗೆ ಧನ್ಯವಾದ, ಹ್ಯಾಪಿ ವ್ಯಾಲೆಂಟೈನ್ಸ್ ಡೇ’ ಎಂದು ರಾಧಿಕಾ ಪಂಡಿತ್ ವಿಶ್ ಮಾಡಿದ್ದಾರೆ.

ಇದನ್ನೂ ಓದಿ: ಯಶ್ ಡಬಲ್ ಧಮಾಕ; ‘ಟಾಕ್ಸಿಕ್’ ರಿಲೀಸ್ ಆದ ಒಂದೇ ವಾರಕ್ಕೆ ಇದೆ ಮತ್ತೊಂದು ಸರ್​​ಪ್ರೈಸ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಹಿಟ್ ಆಗಲಿ ಎಂಬುದು ಅಭಿಮಾನಿಗಳ ಕೋರಿಕೆ. ಆ ಬಳಿಕ ‘ರಾಮಾಯಣ’ ಸಿನಿಮಾ ಕೂಡ ರಿಲೀಸ್ ಆಗಲಿದೆ. ಅವರ ಸಿನಿಮಾ ವೃತ್ತಿಜೀವನಕ್ಕೆ ರಾಧಿಕಾ ಬೆಂಬಲವಾಗಿ ನಿಂತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version