ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್​ ಪೊಲೀಸ್​​ ಬಲೆಗೆ

ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ಕಳ್ಳತನ: ಅಂತಾರಾಜ್ಯ ಗ್ಯಾಂಗ್​ ಪೊಲೀಸ್​​ ಬಲೆಗೆ

ಬೆಳಗಾವಿ, ಮಾರ್ಚ್​​ 09: ಕದ್ದ ವಾಹನಗಳನ್ನೇ ಬಳಸಿ ಮತ್ತೊಂದು ವಾಹನ ಕಳವು ಮಾಡುತ್ತಿದ್ದ ಖತರ್ನಾಕ್​​ ಅಂತಾರಾಜ್ಯ ಕಳ್ಳರ ಗ್ಯಾಂಗ್​​ನ ಭೇದಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ಸು ಕಂಡಿದ್ದಾರೆ. ವಾಹನವೊಂದರ ಕಳ್ಳತನ ಪ್ರಕರಣದ ಬೆನ್ನು ಬಿದ್ದ ಖಾಕಿ ಬರೋಬ್ಬರಿ 1 ಕೋಟಿ ಮೌಲ್ಯದ 21 ವಾಹನಗಳನ್ನ ಜಪ್ತಿ ಮಾಡಿದೆ. ಒಟ್ಟು 8 ಜನ ಆರೋಪಿಗಳ ಪೈಕಿ ಐವರನ್ನು ಬಂಧಿಸಿದ್ದು, ನಾಪತ್ತೆಯಾಗಿರುವ ಉಳಿದ ಮೂವರು ಆರೋಪಿಗಳಿಗಾಗಿಯೂ ಬಲೆ ಬೀಸಿದೆ.

ಯುಸೂಫ್ ಖಾನ್, ಜಾಕೀರ್ ಹುಸೇನ್, ಶಫೀಕ್ ಅಹಮ್ಮದ್, ಆಜಾದ್ ಹಾಗೂ ಬಶೀರ್ ಅಹಮ್ಮದ್ ಬಂಧಿತ ಆರೋಪಿಗಳು. ಇವರು ಕರ್ನಾಟಕ ಮತ್ತು ನೆರೆಯ ಆಂಧ್ರ ಪ್ರದೇಶ, ಮಹಾರಾಷ್ಟ್ರ ಮೂಲದವರು ಎಂಬುದು ಗೊತ್ತಾಗಿದೆ. ಆರೋಪಿಗಳಿಂದ 8 ಮಿನಿ ಗೂಡ್ಸ್​​ ವಾಹನ, ರಾಯಲ್​​ ಎನ್​​ಫೀಲ್ಡ್ ಮತ್ತು ಹೋಂಡಾ ಸೇರಿ ಒಟ್ಟು 8​​ ಬೈಕ್​ಗಳು, 5 ಸ್ಕೂಟರ್​​ಗಳನ್ನು ಜಪ್ತಿ ಮಾಡಲಾಗಿದೆ. ಒಂದು ವಾಹನ ಕಳ್ಳತನವಾಗಿದೆ ಅಂತಾ ಹುಡುಕಾಟ ಶುರು ಮಾಡಿದ್ದ ಪೊಲೀಸರ ಬಲೆಗೆ ದೊಡ್ಡ ತಿಮಿಂಗಲವೇ ಬಿದ್ದಿದೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ, ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಬರ್ಬರ ಹತ್ಯೆ!

ಮೂರು ತಿಂಗಳ ಹಿಂದೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ಒಂದು ಮಿನಿ ಗೂಡ್ಸ್ ವಾಹನ ಕಳ್ಳತನವಾಗಿತ್ತು. ಈ ಬಗ್ಗೆ ಕೇಸ್ ದಾಖಲಿಸಿಕೊಂಡ ಮಾರಿಹಾಳ ಠಾಣೆ ಪೊಲೀಸರು ತನಿಖೆ ಶುರು ಮಾಡಿದ್ದರು. ಈ ವೇಳೆ ಬೈಕ್ ಮೇಲೆ ಬಂದಿದ್ದ ನಾಲ್ಕು ಜನ ಮಿನಿ ಗೂಡ್ಸ್ ವಾಹನ ಕದ್ದು ಪರಾರಿಯಾಗಿರೋದು ಗೊತ್ತಾಗಿತ್ತು. ಆರೋಪಿಗಳು ಬಂದಿದ್ದ ಬೈಕ್ ನಂಬರ್​​ನ ಮಾಹಿತಿಗಾಗಿ ಪೊಲೀಸರು ಬೆನ್ನುಬಿದ್ದಾಗ ಆ ಬೈಕ್ ಕೂಡ ಕಳ್ಳತನ ಆಗಿರೋದು ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಆರೋಪಿಗಳು ಕದ್ದ ವಾಹನಗಳನ್ನೇ ಬಳಸಿಕೊಂಡು ಮತ್ತೊಂದು ವಾಹನ ಕಳ್ಳತನ ಮಾಡುತ್ತಿರುವ ವಿಚಾರ ತಿಳಿದ ಪೊಲೀಸರು, ಸಿಸಿಟಿವಿ ಹಾಗೂ ಟೆಕ್ನಿಕಲ್ ಎವಿಡನ್ಸ್ ಆಧಾರದ ಮೇಲೆ ಕೊನೆಗೂ ಐದು ಜನ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳುವಾಗಿದ್ದ ತಮ್ಮ ವಾಹನಗಳು ಮರಳಿ ಸಿಕ್ಕ ಹಿನ್ನೆಲೆ ಅವುಗಳ ಮಾಲೀಕರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಈ ಸಾಧನೆ ಮಾಡಿದ ಮೊದಲ ಭಾರತೀಯ ಕೋಚ್; ಇತಿಹಾಸ ನಿರ್ಮಿಸಿದ ಗೌತಮ್ ಗಂಭೀರ್

Source link

Video: ಬಿಳಿ ಮಹಿಳೆಯನ್ನು ಕಂಡೊಡನೆ ಅಳುತ್ತಾ ಓಡಲು ಶುರು ಮಾಡಿದ ಆಫ್ರಿಕನ್ ಪುಟಾಣಿಗಳು

ಪುಟ್ಟ ಮಕ್ಕಳ (little kids) ತುಂಟಾಟಗಳು ಖುಷಿ ಕೊಡುವುದು ಸಹಜ. ಅದೇ ಮಕ್ಕಳು ಹಠ ಮಾಡಿದಾಗ, ಒಂದೇ ಸಮನೆ ಅಳುತ್ತಾ ನಿಂತರೆ ಕಿರಿಕಿರಿ ಆಗುತ್ತದೆ. ಇನ್ನು, ಈ  ಮಕ್ಕಳಂತೂ ಗುರುತು ಪರಿಚಯವಿಲ್ಲದ ಹೊಸ ಮುಖಗಳನ್ನು ಕಂಡಾಗ ಅವರತ್ತ ತಿರುಗಿಯೂ ನೋಡಲ್ಲ. ಕೆಲ ಮಕ್ಕಳು ಮುಖ ನೋಡಿಯೇ ಅಳಲು ಶುರು ಮಾಡ್ತಾರೆ. ಈ ಆಫ್ರಿಕನ್ ಮಕ್ಕಳದ್ದು (African kids) ಅದೇ ಕಥೆ. ಹೌದು, ಬಿಳಿ ಮಹಿಳೆಯನ್ನು ಕಂಡೊಡನೆ ಈ ಮಕ್ಕಳು ಭಯಗೊಂಡಿದ್ದು, ಹೆದರಿ ಓಡಲು ಶುರು ಮಾಡಿದ್ದಾರೆ. ನಗು ತರಿಸುವ ಈ ವಿಡಿಯೋ ನೋಡಿದ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

Akoma 87.9 FM ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಅಪರಿಚಿತ ವ್ಯಕ್ತಿಯನ್ನು ಕಂಡಾಗ ಆಫ್ರಿಕನ್ ಪುಟಾಣಿ ರಿಯಾಕ್ಷನ್ ಹೇಗಿತ್ತು ಎನ್ನುವುದನ್ನು ಸೆರೆ ಹಿಡಿಯಲಾಗಿದೆ. ಬಿಳಿ ಮಹಿಳೆಯೊಬ್ಬಳು ಆಫ್ರಿಕನ್‌ ಮಕ್ಕಳ ಮುಂದೆ ಬಂತು ನಿಂತಿದ್ದಾಳೆ. ಮೊದಲ ಬಾರಿಗೆ ಬಿಳಿ ಮಹಿಳೆಯನ್ನು ಕಂಡೊಡನೆ ಈ ಪುಟಾಣಿಗಳಿಗೆ ಏನು ಅನಿಸಿತು ತಿಳಿದಿಲ್ಲ.. ಕೆಲ ಮಕ್ಕಳು ಅಳಲು ಶುರು ಮಾಡಿದರೆ, ಇನ್ನು ಕೆಲ ಪುಟಾಣಿಗಳು ಹೆದರಿ ಓಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಅಂಗನವಾಡಿಗೆ ಬಿಡೋಕೆ ಬಂದ ಅಮ್ಮನ ಬಳಿ ಮುದ್ದಾಗಿ ಮಾತನಾಡಿ ಕಳಿಸಿಕೊಟ್ಟ ಕಂದಮ್ಮ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾನೇ ತಮಾಷೆಯಾಗಿದೆ ಎಂದಿದ್ದಾರೆ. ಮತ್ತೊಬ್ಬರು, ನನ್ನ ಅಜ್ಜ ಅಜ್ಜಿಯೂ ಹೀಗೆ ಓಡುತ್ತಿದ್ದರು. ಆದರೆ ಈಗ ಆಗಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ಪಾಪ ಆ ಮಕ್ಕಳು ಎಷ್ಟು ಹೆದರಿಕೊಂಡಿದ್ದಾರೇನೋ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

T20 World Cup Prize Money: ಚಾಂಪಿಯನ್ ಭಾರತಕ್ಕೆ ಸಿಕ್ಕಿದೆಷ್ಟು? ಉಳಿದ 19 ತಂಡಗಳಿಗೂ ಕೋಟಿ ಹಣ

Source link

ಲೈವ್ ಬಂದು ಸಾಯಲು ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ; ಪರಿಸ್ಥಿತಿ ಚಿಂತಾಜನಕ

ಜನಪ್ರಿಯ ಯೂಟ್ಯೂಬರ್ ಅನುರಾಗ್ ದೊಭಾಲ್ (Anurag Dobhal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಹಿಂದಿ ಬಿಗ್ ಬಾಸ್ ಸೀಸನ್ 17’ (Bigg Boss 17) ಶೋನಲ್ಲಿ ಸ್ಪರ್ಧಿಸಿದ್ದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಶನಿವಾರ (ಮಾರ್ಚ್ 7) ರಾತ್ರಿ 10 ಗಂಟೆ ಸುಮಾರಿಗೆ ಕಾರು ಓಡಿಸುತ್ತಾ ಲೈವ್ (UK07 Rider livestream) ಬಂದಿದ್ದ ಅನುರಾಗ್ ದೊಭಾಲ್ ಅವರು ‘ಇದು ಕೊನೆಯೇ ವಿದಾಯ’ ಎಂದು ಹೇಳಿ ಡಿವೈಡರ್​ಗೆ ಡಿಕ್ಕಿ ಹೊಡೆದರು. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ.

ಕಾರು ಓಡಿಸುವಾಗ ಅನುರಾಗ್ ದೊಭಾಲ್ ಅವರು ಬಹಳ ಎಮೋಷನಲ್ ಆಗಿದ್ದರು. ತಂದೆ-ತಾಯಿ ಮತ್ತು ಪತ್ನಿಯಿಂದ ತಮಗೆ ಪ್ರೀತಿ ಸಿಕ್ಕಿಲ್ಲ ಎನ್ನುತ್ತಾ ಅವರು ಕಣ್ಣೀರು ಹಾಕಿದರು. ಇದು ಕೊನೆಯ ವ್ಲಾಗ್ ಎಂದು ಕೂಡ ಅವರು ತಮ್ಮ ಅಭಿಮಾನಿಗಳಿಗೆ ತಿಳಿಸಿದರು. ದಯವಿಟ್ಟು ಕಾರು ನಿಲ್ಲಿಸಿ ಮಾತನಾಡಿ ಎಂದು ಅಭಿಮಾನಿಗಳು ಮನವಿ ಮಾಡಿದರೂ ಕೂಡ ಅನುರಾಗ್ ದೊಭಾಲ್ ನಿಲ್ಲಿಸಲೇ ಇಲ್ಲ.

ಬಹುಕಾಲದ ಗೆಳತಿ ರಿತಿಕಾ ಚೌಹಾಣ್ ಜೊತೆ ಅನುರಾಗ್ ದೊಭಾಲ್ ಮದುವೆ ಆಗಿದ್ದರು. ಆದರೆ ಜಾತಿಯ ಕಾರಣದಿಂದ ಅನುರಾಗ್ ಮನೆಯವರು ಈ ಮದುವೆಯನ್ನು ಒಪ್ಪಿಕೊಂಡಿರಲಿಲ್ಲ. ಇದರಿಂದಾಗಿ ಅವರು ಬಹಳ ನೊಂದಿದ್ದರು. ಹಣ ಮತ್ತು ಆಸ್ತಿಯ ಸಂಪೂರ್ಣ ನಿಯಂತ್ರಣವನ್ನು ಅನುರಾಗ್ ಅವರ ತಂದೆ-ತಾಯಿ ಮತ್ತು ಸಹೋದರ ಪಡೆದುಕೊಂಡಿದ್ದರು. ಈ ಎಲ್ಲ ಕಾರಣಗಳಿಂದಾಗಿ ಅವರು ಖಿನ್ನತೆಗೆ ಜಾರಿದ್ದರು.

ಅನುರಾಗ್ ದೊಭಾಲ್ ಅವರು 150 ಕಿಲೋ ಮೀಟರ್ ವೇಗದಲ್ಲಿ ಕಾರು ಓಡಿಸುತ್ತಿದ್ದರು. ಸಾಯಲೇ ಬೇಕು ಎಂಬುದು ಅವರ ನಿರ್ಧಾರ ಆಗಿತ್ತು. ಕಣ್ಣೀರು ಹಾಕುತ್ತಲೇ ಅವರು ತಮ್ಮ ನೋವಿನ ಕಥೆಯನ್ನು ವಿವರಿಸಿದರು. ‘ಮುಂದಿನ ಜನ್ಮದಲ್ಲಿ ನಾನು ಮರಳಿ ಬಂದಾಗ ದಯವಿಟ್ಟು ನನಗೆ ಪ್ರೀತಿ ನೀಡಿ ಅಮ್ಮ.. ನನಗೆ ಪ್ರೀತಿಯ ಅವಶ್ಯಕತೆ ಇತ್ತು’ ಎಂದು ಲೈವ್​​ನಲ್ಲಿ ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಸ್ಪರ್ಧಿಗೆ ಬಂತು ಬೆದರಿಕೆ; 10 ಕೋಟಿ ರೂಪಾಯಿಗೆ ಬೇಡಿಕೆ

ಬೇಕಂತಲೇ ಕಾರನ್ನು ಡಿವೈಡರ್​​ಗೆ ಡಿಕ್ಕಿ ಹೊಡೆಸಿದಾಗ 80 ಸಾವಿರ ಜನರು ಲೈವ್ ವಿಡಿಯೋ ವೀಕ್ಷಿಸುತ್ತಿದ್ದರು. ದೆಹಲಿ-ಮೀರತ್ ಹೈವೇನಲ್ಲಿ ಅಪಘಾತ ಸಂಭವಿಸಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬದವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಯಾವುದೇ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಅನುರಾಗ್ ಮ್ಯಾನೇಜರ್ ರೋಹಿತ್ ಪಾಂಡೆ ಅವರು ನೆಟ್ಟಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಶಾಲೆಯಲ್ಲಿ ಅಡುಗೆ ಮಾಡುವ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ ಕುಚ್: ಗ್ರಾಮಸ್ಥರಿಂದ ಬಿತ್ತು ಗೂಸ

ರೂರ್ಕೆಲಾ, ಮಾ.9: ಶಾಲೆ ಎಂದರೆ ದೇವಾಲಯ ಇದ್ದಂತೆ, ಇಲ್ಲಿ ಶಿಕ್ಷಕರು ಏನು ಕಲಿಸುತ್ತಾರೆ ಅದನ್ನೇ ಮಕ್ಕಳು ಕಲಿಯುತ್ತಾರೆ. ಮನೆಯವರು ಕೂಡ ಶಿಕ್ಷಕರ ಮೇಲಿ ನಂಬಿಕೆಯಿಂದ ಶಾಲೆಗೆ ಕಳುಹಿಸುತ್ತಾರೆ. ಆದರೆ ಶಿಕ್ಷಕರೇ ಕೆಟ್ಟಾಗಿ ನಡೆದುಕೊಂಡರೆ ಮಕ್ಕಳಿಗೆ ಏನು ಕಲಿಸುತ್ತಾರೆ. ಇದೀಗ ಒಡಿಶಾದ ರೂರ್ಕೆಲಾದಲ್ಲಿ ಹೆಡ್​​ ಮಾಸ್ಟರ್ ಶಾಲೆಯಲ್ಲಿ ಕೆಲಸ ಮಾಡುವ​​ ಮಹಿಳೆಯ ಜತೆಗೆ ಸಂಬಂಧ ಇಟ್ಟುಕೊಂಡಿರುವ ಘಟನೆಯೊಂದು ನಡೆದಿದೆ. ಅಡುಗೆ ಸಹಾಯಕಿ ಜೊತೆ ಅಕ್ರಮ ಸಂಬಂಧ ಬೆಳೆಸಿ ಸಿಕ್ಕಿಬಿದ್ದ ಘಟನೆ ಸುಂದರಘಡ ಜಿಲ್ಲೆಯ ಸೇವಾಶ್ರಮ ಶಾಲೆಯಲ್ಲಿ ನಡೆದಿದೆ. ಆಕ್ರೋಶಗೊಂಡ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಗ್ರಾಮಸ್ಥರು ಮುಖ್ಯೋಪಾಧ್ಯಾಯನಿಗೆ ಚಪ್ಪಲಿ ಹಾರ ಹಾಕಿ ಊರ ತುಂಬಾ ಪರೇಡ್ ಮಾಡಿಸಿದ್ದಾರೆ.

ಈ ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಮಹಿಳೆ ಅದೇ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷನ ಪತ್ನಿಯಾಗಿದ್ದಾರೆ. ಮುಖ್ಯೋಪಾಧ್ಯಾಯ ರೋಹಿತ್ ಕುಮಾರ್ ರೇ (45) ಈಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪತಿ (ಅಧ್ಯಕ್ಷ) ಆರೋಪಿಸಿದ್ದಾರೆ. ಬಿಸಿಯೂಟದ ನಂತರ ಮುಖ್ಯೋಪಾಧ್ಯಾಯ ಮತ್ತು ಮಹಿಳಾ ಕುಕ್ ಒಂದೇ ಕೋಣೆಯಲ್ಲಿ ಇರುವುದನ್ನು ಗಮನಿಸಿದ ಅಧ್ಯಕ್ಷರು ಮತ್ತು ಗ್ರಾಮಸ್ಥರ ಗುಂಪು ಏಕಾಏಕಿ ದಾಳಿ ನಡೆಸಿದೆ. “ಮಕ್ಕಳಿಗೆ ಪಾಠ ಮಾಡುವ ಬದಲು ನನ್ನ ಪತ್ನಿಗೆ ಮಕ್ಕಳಾಟ ಕಲಿಸುತ್ತಿದ್ದಾನೆ” ಎಂದು ಅಧ್ಯಕ್ಷರು ಗರಂ ಆಗಿದ್ದಾರೆ.

ಇದನ್ನೂ ಓದಿ: ಆಯತೊಲ್ಲಾ ಅಲಿ ಖಮನೈ ಪುತ್ರನಿಗೆ ಇರಾನ್​​ ಸರ್ವೋಚ್ಚ ನಾಯಕನ ಪಟ್ಟ: ಟ್ರಂಪ್​​ ಮಹತ್ವದ ಎಚ್ಚರಿಕೆ

ಆಕ್ರೋಶಿತ ಗುಂಪು ಹೆಡ್‌ಮಾಸ್ಟರ್‌ಗೆ ಹಿಗ್ಗಾಮುಗ್ಗಾ ಥಳಿಸಿ, ಚಪ್ಪಲಿ ಹಾರ ಹಾಕಿ ಗ್ರಾಮದಲ್ಲಿ ಮೆರವಣಿಗೆ ಮಾಡಿದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದರಿಂದ ಮಕ್ಕಳು ಭಯಭೀತರಾಗಿದ್ದಾರೆ. ಪೊಲೀಸ್ ವಿಚಾರಣೆಯಲ್ಲಿ ರೋಹಿತ್ ಕುಮಾರ್ ರೇ ಈ ಹಿಂದೆ ಕೂಡ ಇಂತಹದ್ದೇ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು ಎಂಬ ವಿಷಯ ತಿಳಿದುಬಂದಿದೆ. ಈ ಹಿಂದೆ ಅಸಿಸ್ಟೆಂಟ್ ಟೀಚರ್ ಜೊತೆ ಸರಸವಾಡಿ ಅರೆಸ್ಟ್ ಆಗಿದ್ದ ಈತ, ಶಿಕ್ಷೆ ಅನುಭವಿಸಿ ವರ್ಗಾವಣೆಗೊಂಡು ಇಲ್ಲಿಗೆ ಬಂದಿದ್ದ. ಆದರೂ ಹಳೇ ಬುದ್ಧಿ ಬಿಡದೆ ಈಗ ಅಧ್ಯಕ್ಷನ ಪತ್ನಿಯ ಜೊತೆಗೇ ಸರಸಕ್ಕಿಳಿದು ಧರ್ಮದೇಟು ತಿಂದಿದ್ದಾನೆ.ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳು ಮುಖ್ಯೋಪಾಧ್ಯಾಯನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ಆರೋಪದ ಮೇಲೆ ಶಾಲಾ ಅಧ್ಯಕ್ಷ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಪೋಕ್ಸೋ ಪ್ರಕರಣ: ಮಲ್ಲಿಕಾರ್ಜು ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್

ಯಾದಗಿರಿ (ಮಾರ್ಚ್ 09): ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ನಿರೀಕ್ಷಣಾ ಜಾಮೀನು ಅರ್ಜಿ (Bail Plea)  ವಜಾಗೊಂಡಿದೆ. ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ್ದ ಯಾದಗಿರಿ (Yadagir ) ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ   ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು (ಮಾರ್ಚ್ 09) ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

Source link

‘ಬಾಸ್’ ಸಿನಿಮಾದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ

ತನುಶ್ ಶಿವಣ್ಣ ನಟನೆಯ ‘ಬಾಸ್’ ಸಿನಿಮಾದ ಟೀಸರ್ (Boss Movie Teaser) ಬಿಡುಗಡೆ ಆಗಿದೆ. ಈ ಚಿತ್ರಕ್ಕೆ ವಿ. ಲವ ಅವರು ನಿರ್ದೇಶನ ಮಾಡಿದ್ದಾರೆ. ಟೀಸರ್ ನೋಡಿದ ಎಲ್ಲರಿಗೂ ಅಚ್ಚರಿ ಆಗಿದೆ. ಕಥೆಯ ಎಳೆ ನೋಡಿದರೆ ರೇಣುಕಾಸ್ವಾಮಿ (Renukaswamy) ಕೊಲೆ ಪ್ರಕರಣ ನೆನಪಿಗೆ ಬರುತ್ತದೆ. ಆ ಬಗ್ಗೆ ನಿರ್ದೇಶಕ ಲವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ದರ್ಶನ್ (Darshan) ಪ್ರಕರಣದ ಕುರಿತಾದ ಸಿನಿಮಾ ಅಲ್ಲ ಎಂದು ಅವರು ಹೇಳಿದ್ದಾರೆ. ‘ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಅದರ ಬಗ್ಗೆ ಸಿನಿಮಾ ಮಾಡಬಾರದು. ನಾನು ದರ್ಶನ್ ಅವರ ಕಥೆಯನ್ನು ಸಿನಿಮಾ ಮಾಡುತ್ತಿಲ್ಲ. ಸಮಾಜದಲ್ಲಿ ನಡೆಯುವ ಅನೇಕ ಘಟನೆಗಳನ್ನು ಒಟ್ಟಿಗೆ ಸೇರಿಸಿ ಮಾಡಿದ ಸಿನಿಮಾ ಇದು. ನಾನು ಕೂಡ ದರ್ಶನ್ ಅವರ ಅಭಿಮಾನಿ. ಹಾಗಾಗಿ ಫ್ಯಾನ್ಸ್ ನಮಗೆ ತೊಂದ್ರೆ ಕೊಡುವ ಪ್ರಮೇಯವೇ ಬರಲ್ಲ’ ಎಂದು ಲವ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಹಿಟ್​​ ಆ್ಯಂಡ್​​ ರನ್​​ ಕೇಸ್​​ಗೆ ಟ್ವಿಸ್ಟ್​: KSRTC ಬಸ್​​ ಡ್ಯಾಶ್​​ ಕ್ಯಾಮರಾದಿಂದ ರಿವೀಲ್​​ ಆಯ್ತು ಸ್ಫೋಟಕ ಸತ್ಯ

ಧಾರವಾಡ, ಮಾರ್ಚ್​​ 09: ಸವದತ್ತಿ ರಸ್ತೆಯ ಅಮಿನಭಾವಿ ಸಮೀಪ ಫೆಬ್ರವರಿ 26ರಂದು ನಡೆದಿದ್ದ ಅಪಘಾತ​​ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಕಪ್ಪು ಬಣ್ಣದ ಎಸ್‌ಯುವಿ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಲಲಿತಾ (42) ದಾರುಣವಾಗಿ ಮೃತಪಟ್ಟಿದ್ದರು. ಈ ಹಿನ್ನೆಲೆ ಧಾರವಾಡ ಪೊಲೀಸರು ಹಿಟ್​​​ ಆ್ಯಂಡ್​​ ರನ್ ಕೇಸ್​​ ದಾಖಲು ಮಾಡಿಕೊಂಡಿದ್ದರು. ಆದರೆ ಘಟನೆ ಮೊದಲಿಗೆ ಸಹಜ ಅಪಘಾತದಂತೆ ಕಂಡರೂ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಬಸ್‌ನ ಡ್ಯಾಶ್‌ಕ್ಯಾಮ್ ದೃಶ್ಯಗಳು ಅಸಲಿ ಸತ್ಯ ಬಿಚ್ಚಿಟ್ಟಿವೆ. ಇದೊಂದು ಪೂರ್ವ ನಿಯೋಜಿತ ಹತ್ಯೆಯಾಗಿದ್ದು, ಲಲಿತಾ ಅವರಿಂದ ದೂರವಾಗಿದ್ದ ಅವರ ಪತಿ ಉದಯ್​​ಕುಮಾರ್​​ ಎಂಬಾತನೇ ಇದರ ಸೂತ್ರಧಾರ ಎಂಬುದು ತನಿಖೆ ವೇಳೆ ಬಯಲಾಗಿದೆ.

ಉದಯಕುಮಾರ್ ಮತ್ತು ಲಲಿತಾ 2000ರಲ್ಲಿ ವಿವಾಹವಾಗಿದ್ದರು. ಆದರೆ ಕೆಲವು ವರ್ಷಗಳಿಂದ ಅವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ, ಲಲಿತಾ ತಮ್ಮ ತವರು ಸೇರಿದ್ದರು. ಇಬ್ಬರ ನಡುವೆ ವಿಚ್ಛೇದನ ಸಂಬಂಧಿತ ಪ್ರಕರಣ ಕೂಡ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಇತ್ತೀಚೆಗೆ ನಡೆದ ಲೋಕ ಅದಾಲತ್‌ನಲ್ಲಿ ಲಲಿತಾಗೆ ನಿರ್ವಹಣಾ ವೆಚ್ಚದ ಭಾಗವಾಗಿ 1.5 ಎಕ್ರೆ ಜಮೀನು ಹಸ್ತಾಂತರಿಸಲು ಉದಯಕುಮಾರ್‌ಗೆ ಆದೇಶಿಸಲಾಗಿತ್ತು. ಆದರೆ ಇದನ್ನು ಒಪ್ಪಲು ತಯಾರಿಲ್ಲದ ಉದಯಕುಮಾರ್, ಪತ್ನಿ ಹತ್ಯೆ ಮಾಡಲು ಸಂಚು ರೂಪಿಸಿದ್ದ. ಇದಕ್ಕಾಗಿ ಸುಮಾರು 40 ಲಕ್ಷ ರೂಪಾಯಿ ಹಣ ನೀಡಿದ್ದ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು; ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ?

ವಿವಾದದ ಬಗ್ಗೆ ಮಾತುಕತೆ ನಡೆಸುವ ನೆಪದಲ್ಲಿ ಉದಯಕುಮಾರ್ ಲಲಿತಾರನ್ನು ಸವದತ್ತಿ ರಸ್ತೆಗೆ ಕರೆಸಿಕೊಂಡಿದ್ದ. ಬಳಿಕ ಆರೋಪಿಯ ಸಹಚರರು ನಂಬರ್ ಪ್ಲೇಟ್ ಇಲ್ಲದ ಎಸ್‌ಯುವಿ ಕಾರನ್ನು ಬಳಸಿ ಲಲಿತಾ ಅವರಿಗೆ ಡಿಕ್ಕಿ ಹೊಡೆದು, ಅದು ಅಪಘಾತ ಎಂಬುವಂತೆ ಬಿಂಬಿಸಿದ್ದಾರೆ. ನಂಬರ್ ಪ್ಲೇಟ್ ಇರದಿದ್ದರೂ ಸಿಸಿಟಿವಿ ದೃಶ್ಯಗಳ ಮೂಲಕ ವಾಹನ ಮತ್ತು ಅದರಲ್ಲಿದ್ದವರನ್ನು  ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ಸು ಕಂಡಿದ್ದಾರೆ.  ಉದಯಕುಮಾರ್ ಮತ್ತು ಸಹಚರರ ನಡುವೆ ನಡೆದ ಫೋನ್ ಕರೆಗಳ ವಿವರಗಳು ಹಾಗೂ ಲಲಿತಾಗೆ ಕರೆ ಮಾಡಿದ ಸಮಯದ ಮಾಹಿತಿಯೂ  ಪೊಲೀಸರಿಗೆ ಲಭಿಸಿದೆ.  ಘಟನೆ ಸಂಬಂಧ ಪೊಲೀಸರು ಉದಯಕುಮಾರ್ ಸೇರಿ  ಸಹಚರರಾದ ನಾಗಪ್ಪ , ಅಭಿಷೇಕ್ ಮತ್ತು ನಾಗರಾಜ್​​ನನ್ನು  ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೋರ್ಟ್ ಆರೋಪಿಗಳಿಗೆ​​ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ದಿ ಇಂಡಿಯನ್​​ ಎಕ್ಸ್​​ಪ್ರೆಸ್​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು

ಮಂಡ್ಯ, (ಮಾರ್ಚ್ 09): ಕೌಟುಂಬಿಕ ಕಲಹಕ್ಕೆ 2 ವರ್ಷದ ಮಗುವನ್ನು ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಪವಾಡದಂತೆ ಬದುಕುಳಿದಿದ್ದು, ಇದೀಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಹೃದಯ ವಿದ್ರಾವಕ ಘಟನೆ ಮಂಡ್ಯದ (Mandya) ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ದಂಪತಿ.

ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ಕಳೆದ ಮೂರು ವರ್ಷದ‌ ಹಿಂದೆ ವಿವಾಹವಾಗಿದ್ದರು. ಈ ದಂಪತಿಗೆ ಎರಡು ವರ್ಷದ ಮಗುವಿನೊಂದಿಗೆ ಮಂಡ್ಯದ ಕೆ.ಆರ್.ಪೇಟೆಯ ಜಯನಗರ ಬಡಾವಣೆ ಮನೆಯೊಂದರಲ್ಲಿ ವಾಸವಾಗಿದ್ದರು. ಆದ್ರೆ, ಗಂಡ ಹೆಂಡತಿ ನಡುವೆ ಅದೇನಾಗಿತ್ತೋ ಏನೋ ದಂಪತಿ ಇಂದು (ಮಾರ್ಚ್ 09) ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ. ಆದ್ರೆ, ದಂಪತಿ ಸಾಯುವ ಮುನ್ನ ತಮ್ಮ ಎರಡು ವರ್ಷದ ಮಗುವನ್ನು ಸಹ ಕೊಲ್ಲಲು ತೀರ್ಮಾನಿಸಿದ್ದು, ಅದರಂತೆ ಮಗುವನ್ನು ಕತ್ತು ಹಿಸುಕಿದ್ದಾರೆ. ಇದರಿಂದ ಮಗು ಅಸ್ವಸ್ಥಗೊಂಡು ಬಿದ್ದಿದೆ. ಬಳಿಕ ಮಗು ಸಾವನ್ನಪ್ಪಿದೆ ಎಂದು ತಿಳಿದು ದಂಪತಿ ನೇಣಿಗೆ ಕೊರಳೊಡ್ಡಿದ್ದಾರೆ. ಶರಣಾಗದ್ದಾರೆ. ನಂತರ ಮಗು ಉಸಿರಾಡಿದ್ದು, ಪವಾಡದ ತೀರಿಯಲ್ಲಿ ಬದುಕುಳಿದಿದೆ. ಆದ್ರೆ, ತಂದೆ ತಾಯಿ ಇಲ್ಲದೇ ಅನಾಥವಾಗಿದೆ.

ಇದನ್ನೂ ಓದಿ: ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ದಂಪತಿ ಸಾವಿನಿಂದ ಎರಡು ಕಡೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇನ್ನು  ಬದುಕುಳಿದ ಮಗುವನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ದಂಪತಿಯ ಕೆಟ್ಟ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಂಟುಂಬಿಕ ಕಲಹದಿಂದ ಬೇಸತ್ತು ಈ ಪ್ರಪಂಚವನ್ನೇ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸರ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Exit mobile version