Headlines

ಆಯತೊಲ್ಲಾ ಅಲಿ ಖಮನೈ ಪುತ್ರನಿಗೆ ಇರಾನ್​​ ಸರ್ವೋಚ್ಚ ನಾಯಕನ ಪಟ್ಟ: ಟ್ರಂಪ್​​ ಮಹತ್ವದ ಎಚ್ಚರಿಕೆ

ಟೆಹ್ರಾನ್ಮ, ಮಾ.9: ಇಸ್ರೇಲ್​​​​, ಅಮೆರಿಕ ದಾಳಿಯಲ್ಲಿ ತಮ್ಮ ಪರಮೋಚ್ಚ ನಾಯಕ ಕಳೆದುಕೊಂಡಿರುವ ಇರಾನ್​​, ಇದೀಗ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ಆದರೆ ಈ ಆಯ್ಕೆಗೆ ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆ.  ಇರಾನ್‌ನ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ ಸೋಮವಾರ ಮಧ್ಯರಾತ್ರಿ ಮಹತ್ವದ ಘೋಷಣೆ ಮಾಡಿದ್ದು, ಅಯತೊಲ್ಲಾ ಸಯ್ಯದ್ ಮೊಜ್ತಬಾ ಹೊಸೇನಿ ಖಮೇನಿ (Mojtaba Khamenei) ಅವರನ್ನು ದೇಶದ ನೂತನ ಪರಮೋಚ್ಚ ನಾಯಕನನ್ನಾಗಿ ನೇಮಿಸಿದೆ. ಕಳೆದ ವಾರ ಅಮೆರಿಕ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಹತರಾದ ಬೆನ್ನಲ್ಲೇ ಈ ನಿರ್ಧಾರ…

Read More

ಆಲ್ಕೋಹಾಲ್‌ ಜೊತೆ ಈ ಆಹಾರ ಪದಾರ್ಥಗಳನ್ನು ಸೇವನೆ ಮಾಡಬಾರದಂತೆ; ಯಾಕೆ ಗೊತ್ತಾ?

ಇಂದಿನ ಈ ವೇಗದ ಜಗತ್ತಿನಲ್ಲಿ ಮದ್ಯಪಾನವು (Alcohol) ಅನೇಕ ಜನರ ಜೀವನಶೈಲಿಯ ಭಾಗವಾಗಿದ್ದು, ಮನಸ್ಸಿನ ಭಾರ, ಒತ್ತಡ ಕಡಿಮೆ ಮಾಡಲು, ಖುಷಿ, ಸಂತೋಷವನ್ನು ಹಂಚಿಕೊಳ್ಳಲು ಡ್ರಿಂಕ್ಸ್‌ ಮಾಡುತ್ತಾರೆ.  ಹೀಗೆ ಮದ್ಯ ಸೇವಿಸುವಾಗ ಹೆಚ್ಚಿನವರು ಸೈಡ್ಸ್‌ಗೆ ಉಪ್ಪಿನಕಾಯಿ, ಕಬಾಬ್‌, ಕುರುಕುಲು ತಿಂಡ, ಖಾರ ತಿಂಡಿ ಸೇರಿದಂತೆ  ಏನಾದ್ರೂ ತಿನಿಸು ತಿನ್ನುತ್ತಾರೆ. ಆದ್ರೆ ಮದ್ಯ ಸೇವನೆ ಮಾಡುವ ಸಂದರ್ಭದಲ್ಲಿ ಈ ಕೆಲವು ಆಹಾರಗಳನ್ನು ತಪ್ಪಿಯೂ ಸೇವನೆ ಮಾಡಬಾರದಂತೆ. ಏಕೆಂದರೆ ಇದು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹಾಗಿದ್ರೆ ಆಲ್ಕೋಹಾಲ್‌…

Read More

US Consul General: ಮರಿಯಾನಾ ಎಲ್. ನೈಶುಲರ್‌ ಚೆನ್ನೈನ ಯುಎಸ್ ಕಾನ್ಸಲ್ ಜನರಲ್ ಆಗಿ ಅಧಿಕಾರ ಸ್ವೀಕಾರ

ಚೆನ್ನೈ, ಮಾರ್ಚ್ 9: ಮರಿಯಾನಾ ಎಲ್. ನೈಶುಲರ್ (Mariana L. Neisuler) ಅವರು ಕಳೆದ ವಾರ (ಮಾ. 2) ಚೆನ್ನೈನಲ್ಲಿರುವ ಯುನೈಟೆಡ್ ಸ್ಟೇಟ್ಸ್ ಕಾನ್ಸುಲೇಟ್ ಜನರಲ್‌ನ (Chennai US consulate) ಅಧಿಕಾರ ವಹಿಸಿಕೊಂಡಿದ್ದಾರೆ. ತಮಿಳುನಾಡು, ಕರ್ನಾಟಕ, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಅಮೆರಿಕದ ಹಿತಾಸಕ್ತಿಗಳನ್ನು ಗಮನಿಸುವ ಮತ್ತು ಭಾರತ ಹಾಗು ಅಮೆರಿಕದ ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಅವರು ಕೆಲಸ ಮಾಡಲಿದ್ದಾರೆ. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾನ್ಸಲ್‌ ಜನರಲ್‌ ನೈಶುಲರ್‌…

Read More

ಸ್ನೇಹಿತೆಯ ಲವ್​​ನಲ್ಲಿ ಮಧ್ಯಸ್ಥಿಕೆ: ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ

ಚಿಕ್ಕಬಳ್ಳಾಪುರ, (ಮಾರ್ಚ್ 09): ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಂಡ ಹಾಗೂ ಹೆಂಡತಿ (Husband And Wife) ಮಧ್ಯೆ ಗಲಾಟೆಯಾಗಿದ್ದು, ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಆರ್.ಚೊಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ವರಲಕ್ಷ್ಮಿ(25) ಎಂದು ಗುರುತಿಸಲಾಗಿದೆ. ಸ್ನೇಹಿತೆಯ ಪ್ರಿಯಕರ ವರಲಕ್ಷ್ಮಿ ಫೋನ್​ಗೆ ಕರೆ ಮಾಡಿದ್ದ. ಆದ್ರೆ, ಕರೆಯನ್ನು ವರಲಕ್ಷ್ಮಿ ಗಂಡ ಗಂಗರಾಜು ರಿಸಿವ್ ಮಾಡಿದ್ದ. ಬಳಿಕ ಗಂಗರಾಜು ಪ್ರೇಮಿಗಳ ಮದ್ಯೆ ಮದ್ಯಸ್ಥಿಕೆ ವಹಿಸಿಬೇಡ ಎಂದು ಹೆಂಡ್ತಿಗೆ ಬೈದು ಬುದ್ಧಿವಾದ ಹೇಳಿದ್ದಾನೆ. ಆದ್ರೆ, ಅದೇನಾಯ್ತೋ…

Read More

ಸಾವಿರಾರು ಮರಗಳ ಮಾರಣಹೋಮಕ್ಕೆ ಸಜ್ಜಾದ ಸರ್ಕಾರ?: ಪರಿಸರ ವಾದಿಗಳಿಂದ ತೀವ್ರ ವಿರೋಧ

ಬೆಂಗಳೂರು, ಮಾರ್ಚ್​ 09: ಅಭಿವೃದ್ಧಿಯ ಹೆಸರಲ್ಲಿ ಪರಿಸರದ ನಾಶದಿಂದಾಗಿ ಪ್ರಾಕೃತಿಕ ಸಮತೋಲನ ಹಾಳಾಗಿ ಈಗಾಗಲೇ ಸಾಲು ಸಾಲು ಸಂಕಷ್ಟಗಳನ್ನು ಜನ ಅನುಭವಿಸುತ್ತಿದ್ದಾರೆ. ಪರಿಸರವನ್ನು ಉಳಿಸುವ ಸಲುವಾಗಿ ಅದೆಷ್ಟೋ ಸಂಘ-ಸಂಸ್ಥೆಗಳು ಗಿಡಗಳನ್ನು ನೆಡುವ ಜೊತೆಗೆ ಪರಿಣಾಮಕಾರಿ ಕೆಲಸಗಳನ್ನು ಮಾಡುತ್ತಿವೆ. ಪರಿಸರ ನಾಶದಿಂದ ಉಂಟಾಗುತ್ತಿರುವ ಅನಾಹುತಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಕೈಹಾಕಿವೆ. ಆದರೆ ಕರ್ನಾಟಕದಲ್ಲಿ ಮಾತ್ರ ಅಂತಾರಾಷ್ಟ್ರೀಯ ಕನ್ವೆನ್ಷನ್ ಹಾಲ್ ಹೆಸರಲ್ಲಿ ಸಾವಿರಾರು ಮರಗಳ ಮಾರಾಣಹೋಮಕ್ಕೆ ಸರ್ಕಾರ ಸಜ್ಜಾಗಿದೆ ಎಂಬ ವಿಚಾರ ಹರಿದಾಡಿದ್ದು, ಈ ಬಗ್ಗೆ ಪರಿಸರ…

Read More

ವಿಶ್ವಕಪ್ ಮುಗಿಯುತ್ತಿದ್ದಂತೆ ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ

ಅಹಮದಾಬಾದ್ ಮಾ.9: ಕ್ರಿಕೆಟ್ ಎನ್ನುವುದು ಕೇವಲ ಆಟವಲ್ಲ, ಅದೊಂದು ಭಾವನೆ ಎಂಬುದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಭಾರತದ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋತು ವಿಶ್ವಕಪ್ ಕನಸು ಭಗ್ನಗೊಂಡಾಗ, ನ್ಯೂಜಿಲೆಂಡ್ ಆಟಗಾರರಾದ ಗ್ಲೆನ್ ಫಿಲಿಪ್ಸ್ ಮತ್ತು ಇಶ್ ಸೋಧಿ ಅವರ ಪತ್ನಿಯರು ಮೈದಾನಕ್ಕಿಳಿದು ನೀಡಿದ ಬೆಂಬಲ ಈಗ ಜಗತ್ತಿನಾದ್ಯಂತ ವೈರಲ್ ಆಗುತ್ತಿದೆ. ಪಂದ್ಯ ಮುಗಿದ ತಕ್ಷಣ ಸೋಲಿನ ನಿರಾಶೆಯಲ್ಲಿದ್ದ ಗ್ಲೆನ್ ಫಿಲಿಪ್ಸ್ ಮತ್ತು ಇಶ್ ಸೋಧಿ ಮೈದಾನದಲ್ಲೇ ಭಾವುಕರಾಗಿದ್ದರು. ಈ ವೇಳೆ ಅವರ ಪತ್ನಿಯರು…

Read More

ದೆಹಲಿಯಿಂದ ಮ್ಯಾಂಚೆಸ್ಟರ್​ಗೆ ಹೊರಟಿದ್ದ ಇಂಡಿಗೋ ವಿಮಾನ ಇಥಿಯೋಪಿಯಾ ಗಡಿ ಬಳಿ ಯೂಟರ್ನ್

ನವದೆಹಲಿ, ಮಾರ್ಚ್​ 09: ದೆಹಲಿಯಿಂದ ಮ್ಯಾಂಚೆಸ್ಟರ್​​ಗೆ ಹೊರಟಿದ್ದ ಇಂಡಿಗೋ(IndiGo) ವಿಮಾನ ಇಥಿಯೋಪಿಯಾ ಗಡಿಯಲ್ಲಿ ಯೂಟರ್ನ್​ ಮಾಡಿ ದೆಹಲಿಗೆ ಮರಳಿರುವ ಘಟನೆ ನಡೆದಿದೆ. ಯು-ಟರ್ನ್‌ಗೆ ಕಾರಣದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಬೋಯಿಂಗ್ 787-9 ಡ್ರೀಮ್‌ಲೈನರ್ ಬಳಸಿ ಕಾರ್ಯನಿರ್ವಹಿಸುತ್ತಿದ್ದ 6E33 ವಿಮಾನವು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಯುನೈಟೆಡ್ ಕಿಂಗ್‌ಡಂನ ಮ್ಯಾಂಚೆಸ್ಟರ್‌ಗೆ ಹೋಗುವ ಮಾರ್ಗದಲ್ಲಿತ್ತು. ಫ್ಲೈಟ್ ಟ್ರ್ಯಾಕಿಂಗ್ ಡೇಟಾದ ಪ್ರಕಾರ, ವಿಮಾನವು ಇಥಿಯೋಪಿಯಾದ ಗಡಿಯ ಸಮೀಪ ವಾಯುಪ್ರದೇಶದ ಹತ್ತಿರ ತಲುಪಿ, ಹಾರಾಟದ ಮಧ್ಯದಲ್ಲಿ ಹಠಾತ್ತನೆ ತಿರುಗಿತು….

Read More

ಅಕ್ಸೆಂಚರ್​ನ ಎಲ್ಲಾ ಎಂಜನಿಯರುಗಳ ಕೆಲಸಗಳನ್ನೂ ಕ್ಲಾಡ್ ಕೋಡ್ ಕಲಿತ ಈ ಒಬ್ಬನೇ ವ್ಯಕ್ತಿ ಮಾಡಬಲ್ಲುನಂತೆ

ಬೆಂಗಳೂರು, ಮಾರ್ಚ್ 9: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕುರಿತು ನಾನಾ ರೀತಿಯ ಅಭಿಪ್ರಾಯಗಳು, ಭಯ, ಆತಂಕ, ಖುಷಿ ಎಲ್ಲಾ ವ್ಯಕ್ತವಾಗುತ್ತಿವೆ. ಆಂಥ್ರೋಪಿಕ್​ನ ಕ್ಲಾಡ್ ಎಐ ಬಿಡುಗಡೆಯಾದ ಬಳಿಕ ಎಲ್ಲಾ ಸಾಫ್ಟ್​ವೇರ್ ಕಂಪನಿಗಳು ಧೂಳೀಪಟವಾಗುತ್ತವೆ ಎನ್ನುವ ಸುದ್ದಿ ಇತ್ತೀಚೆಗೆ ಸಾಕಷ್ಟು ಕೇಳಿ ಬಂದಿತ್ತು. ಎಲ್ಲಾ ಹೊಸ ತಂತ್ರಜ್ಞಾನಗಳು ಬಂದರೆ ಇದೇ ರೀತಿ ಭಯ ಇರುತ್ತೆ. ಆದರೆ, ತಂತ್ರಜ್ಞಾನಗಳು ಮನುಷ್ಯನಿಗೆ ಬಲ ನೀಡುತ್ತವೆಯೇ ಹೊರತು ಅವನ ಸ್ಥಾನ ಕಿತ್ತುಕೊಳ್ಳುವುದಿಲ್ಲ ಎನ್ನುವ ಸಮಾಧಾನಕರ ಅಭಿಪ್ರಾಯಗಳೂ ಇವೆ. ಈ ಮಧ್ಯೆ ಟಾಮ್ ಬ್ಲಾಮ್​ಫೀಲ್ಡ್ (Tom…

Read More

ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ

ಟಿವಿಕೆ ಸಂಸ್ಥಾಪಕ, ನಟ ವಿಜಯ್​ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 10ರಂದು ವಿಚಾರಣೆಗೆ ಹಾಜರಾಗುವಂತೆ ವಿಜಯ್​ಗೆ ಸೂಚಿಸಲಾಗಿದೆ. ವಿಜಯ್ ಅವರ ಟಿವಿಕೆ ಪಕ್ಷ ಕರೂರಿನಲ್ಲಿ ನಡೆಸಿದ ಚುನಾವಣೆ ರ್ಯಾಲಿ ವೇಳೆ 41 ಜನರ ಸಾವನ್ನಪ್ಪಿದ್ದರು. ಈ ಕಾಲ್ತುಳಿತ ದುರಂತಕ್ಕೆ ಟಿವಿಕೆ ಹೊಣೆ ಅಲ್ಲ ಎಂದು ನಟ ವಿಜಯ್ ಹೇಳಿದ್ದಾರೆ. ಅಲ್ಲದೆ, ಡಿಎಂಕೆ ಸರ್ಕಾರದ ವೈಫಲ್ಯದಿಂದ ದುರಂತ ಸಂಭವಿಸಿತ್ತು ಎಂದು ಆರೋಪಿಸಿದ್ದಾರೆ. 41 ಜನರ ಸಾವಿಗೆ ಯಾರು ಹೊಣೆ ಎಂದು ಸಿಬಿಐನಿಂದ ವಿಚಾರಣೆ ನಡೆಯುತ್ತಿದೆ. ಅವರು ಈಗಾಗಲೇ…

Read More

ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ; ಆ ಕೆಟ್ಟ ಸ್ಥಿತಿ ನಮಗೆ ಬಂದಿಲ್ಲ, ಹೈದರಬಾದ್​​​ಗೆ ಸಿಂಗಾಪುರ ಪ್ರತಿಸ್ಪರ್ಧಿ : ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್, ಮಾ.9: ಐಟಿ ಸಿಟಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಈಗ ನೆರೆರಾಜ್ಯದ ರಾಜಕೀಯ ಅಖಾಡದಲ್ಲೂ ಸದ್ದು ಮಾಡುತ್ತಿದೆ. ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಬೆಂಗಳೂರಿನ ಟ್ರಾಫಿಕ್ ಮತ್ತು ಮುಂಬೈ-ಚೆನ್ನೈನ ಮೂಲಸೌಕರ್ಯಗಳ ಕುರಿತು ವ್ಯಂಗ್ಯವಾಡಿದ್ದಾರೆ. ಬೆಂಗಳೂರು ನಗರ ಇಂದು ಕೇವಲ ಟ್ರಾಫಿಕ್ ಜಾಮ್‌ಗೆ ಹೆಸರುವಾಸಿಯಾಗಿದೆ. ಐಟಿ ಸಿಟಿ ಎಂದು ಖ್ಯಾತಿ ಪಡೆದಿದ್ದ ಬೆಂಗಳೂರಿನ ಇಂದಿನ ಸ್ಥಿತಿ ಏನಾಗಿದೆ ನೋಡಿ? ಅಲ್ಲಿನ ಜನ ಟ್ರಾಫಿಕ್‌ನಿಂದ ಹೈರಾಣಾಗಿದ್ದಾರೆ. ಆದರೆ ನಮ್ಮ ಹೈದರಾಬಾದ್‌ನಲ್ಲಿ ಅಂತಹ ಪರಿಸ್ಥಿತಿ ಇಲ್ಲ,”…

Read More