Ajinkya Rahane: ಈ ಒಂದು ‘ತಪ್ಪು’ ಮಾಡಿದ್ದೇ ಸೋಲಿಗೆ ಕಾರಣ! – Kannada News | Ajinkya Rahane Post Match Interview After RCB vs KKR Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲನುಭವಿಸಿದೆ. ರಾಯ್​ಪುರ್​ನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಕೆಕೆಆರ್ ತಂಡಕ್ಕೆ 6 ವಿಕೆಟ್​ಗಳಿಂದ ಸೋಲುಣಿಸಿದ್ದಾರೆ.

ಈ ಸೋಲಿನ ಬಳಿಕ ಮಾತನಾಡಿದ ಕೆಕೆಆರ್ ತಂಡದ ನಾಯಕ ಅಜಿಂಕ್ಯ ರಹಾನೆ, “ಈ ಪಿಚ್‌ನಲ್ಲಿ 190 ರನ್ ಗೆಲ್ಲಬಹುದಾದ ಸವಾಲಿನ ಮೊತ್ತವಾಗಿತ್ತು. ಆದರೆ ವಿರಾಟ್ ಕೊಹ್ಲಿ ಅವರ ಕ್ಯಾಚ್ ಕೈಬಿಟ್ಟಿದ್ದು ಪಂದ್ಯದ ಫಲಿತಾಂಶದ ಮೇಲೆ ದೊಡ್ಡ ಪರಿಣಾಮ ಬೀರಿತು” ಎಂದು ಮುಕ್ತವಾಗಿ ಒಪ್ಪಿಕೊಂಡಿದ್ದಾರೆ.

ಆರಂಭದ ಪವರ್‌ಪ್ಲೇ ಓವರ್‌ಗಳಲ್ಲಿ ಹೊಸ ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುತ್ತಿತ್ತು. ಆದರೆ ಮಧ್ಯಮ ಓವರ್‌ಗಳಲ್ಲಿ ವಿಕೆಟ್ ಮಂದಗತಿಯಾಗಿ ವರ್ತಿಸಿತು. ಹೊಸ ಬ್ಯಾಟರ್‌ಗಳಿಗೆ ಇದು ಸುಲಭದ ಪಿಚ್ ಆಗಿರಲಿಲ್ಲ. ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಶ್ರಮದಿಂದಾಗಿ ತಂಡ 190 ರನ್ ತಲುಪಿತು. ಪಂದ್ಯ ಮುಗಿದ ಮೇಲೆ ಹತ್ತು-ಹದಿನೈದು ರನ್ ಕಡಿಮೆ ಆಯಿತು ಎಂದು ಹೇಳುವುದು ಸುಲಭ. ಆದರೆ ಈ ಪಿಚ್ ಸ್ಥಿತಿಗೆ ಇದು ಅತ್ಯುತ್ತಮ ಮೊತ್ತವಾಗಿತ್ತು ಎಂದು ರಹಾನೆ ಬ್ಯಾಟಿಂಗ್ ವಿಭಾಗವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳೇ ಇಲ್ಲ..!

ಇನ್ನು ಚೇಸಿಂಗ್ ವೇಳೆ ವಿರಾಟ್ ಕೊಹ್ಲಿ ಎಷ್ಟು ಅಪಾಯಕಾರಿ ಆಟಗಾರ ಎಂಬುದು ಎಲ್ಲರಿಗೂ ತಿಳಿದಿದೆ. ಅವರಿಗೆ ದೇವದತ್ ಪಡಿಕ್ಕಲ್ ಉತ್ತಮ ಸಾಥ್ ನೀಡಿದರು. ಈ ಇಬ್ಬರ ನಡುವಿನ ಭರ್ಜರಿ ಜೊತೆಯಾಟವೇ ಎದುರಾಳಿ ತಂಡದ ಗೆಲುವಿಗೆ ಪ್ರಮುಖ ಕಾರಣವಾಯಿತು.

ಇದರ ನಡುವೆ ನಮ್ಮ ತಂಡ ಮಾಡಿದ ತಪ್ಪೊಂದು ನಮ್ಮ ಪಾಲಿಗೆ ದುಬಾರಿಯಾಯ್ತು. ಟೂರ್ನಿಯ ಕಳೆದ ನಾಲ್ಕು ಪಂದ್ಯಗಳಲ್ಲಿ ತಂಡದ ಫೀಲ್ಡಿಂಗ್ ಅತ್ಯುತ್ತಮವಾಗಿತ್ತು. ಆದರೆ ಇಂತಹ ಟ್ರಿಕಿ ಪಿಚ್‌ನಲ್ಲಿ ವಿರಾಟ್ ಕೊಹ್ಲಿ ಅವರಂತಹ ಪ್ರಮುಖ ಬ್ಯಾಟರ್‌ಗಳ ಕ್ಯಾಚ್‌ಗಳನ್ನು ಕೈಬಿಟ್ಟರೆ ಪಂದ್ಯ ಉಳಿಸಿಕೊಳ್ಳುವುದು ಕಷ್ಟ ಎಂದು ರಹಾನೆ ಬೇಸರ ವ್ಯಕ್ತಪಡಿಸಿದರು.

  • ಈ ಪಂದ್ಯದ 9ನೇ ಓವರ್​ನಲ್ಲಿ ರೋವ್​ಮನ್ ಪೊವೆಲ್ ವಿರಾಟ್ ಕೊಹ್ಲಿಯ ಕ್ಯಾಚ್ ಕೈಚೆಲ್ಲಿದ್ದರು. ಈ ವೇಳೆ ಕೊಹ್ಲಿ 21 ರನ್​ ಮಾತ್ರ ಗಳಿಸಿದ್ದರು. ಹೀಗೆ ಸಿಕ್ಕ ಜೀವದಾನವನ್ನು ಬಳಸಿಕೊಂಡ ವಿರಾಟ್ ಕೊಹ್ಲಿ ಅಂತಿಮವಾಗಿ 60 ಎಸೆತಗಳಲ್ಲಿ ಅಜೇಯ 105 ರನ್ ಬಾರಿಸಿ ಅಬ್ಬರಿಸಿದರು.

ಇನ್ನು  ಯುವ ವೇಗಿ ಕಾರ್ತಿಕ್ ತ್ಯಾಗಿ ಅವರ ಬೌಲಿಂಗ್ ಶೈಲಿಯನ್ನು ನಾಯಕ ಮುಕ್ತಕಂಠದಿಂದ ಶ್ಲಾಘಿಸಿದ ರಹಾನೆ. ಬೌಲಿಂಗ್ ಮಾಡುವಾಗ ಅವರು ಹೊಂದಿರುವ ಸ್ಪಷ್ಟ ಯೋಜನೆ  ಮತ್ತು ಶಿಸ್ತು ತಂಡಕ್ಕೆ ಭವಿಷ್ಯದಲ್ಲಿ ದೊಡ್ಡ ಬಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಒಟ್ಟಾರೆಯಾಗಿ, ಈ ಪಂದ್ಯವು ಕೆಕೆಆರ್ ತಂಡಕ್ಕೆ ತಪ್ಪುಗಳಿಂದ ಕಲಿಯಲು ಒಂದು ಉತ್ತಮ ಅವಕಾಶವಾಗಿದೆ. ಕಠಿಣ ಪಿಚ್‌ನಲ್ಲಿ ಬ್ಯಾಟರ್‌ಗಳು ನೀಡಿದ ಹೋರಾಟ ಮತ್ತು ಸ್ಪಿನ್ನರ್‌ಗಳ ಸ್ಥಿರ ಪ್ರದರ್ಶನ ತಂಡದ ಪ್ಲಸ್ ಪಾಯಿಂಟ್‌ಗಳಾದರೆ, ಫೀಲ್ಡಿಂಗ್‌ನಲ್ಲಿನ ಸಣ್ಣ ಲೋಪದೋಷಗಳು ಪಂದ್ಯವನ್ನು ಕೈತಪ್ಪುವಂತೆ ಮಾಡಿದವು. ಆದರೆ ನಾಯಕ ಅಜಿಂಕ್ಯ ರಹಾನೆ ಅವರ ಸಕಾರಾತ್ಮಕ ಚಿಂತನೆ ಮತ್ತು ಕಾರ್ತಿಕ್ ತ್ಯಾಗಿ ಅವರಂತಹ ಯುವ ಪ್ರತಿಭೆಗಳ ಮೇಲಿರುವ ನಂಬಿಕೆ ಮುಂದಿನ ಪಂದ್ಯಗಳಲ್ಲಿ ತಂಡ ಬಲಿಷ್ಠವಾಗಿ ಪುನರಾಗಮನ ಮಾಡಲು ದಾರಿಯಾಗಲಿದೆ ಎಂಬುದರಲ್ಲಿ ಸಂಶಯವಿಲ್ಲ.

Source link

ಹೆಣ್ಮಕ್ಕಳಿಗೆ ಕೋರಮಂಗಲ ರಾತ್ರಿ ಸಂಚಾರಕ್ಕೆ ಡೇಂಜರ್​: ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ

ಬೆಂಗಳೂರು, ಮೇ,14: ಸಿಲಿಕಾನ್ ಸಿಟಿಯ ಅತ್ಯಂತ ಜನಪ್ರಿಯ ಹ್ಯಾಂಗ್‌ಔಟ್ ತಾಣಗಳಲ್ಲಿ ಒಂದಾದ ಕೋರಮಂಗಲವು ಈಗ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆಯ ವಿಚಾರವಾಗಿ ಸುದ್ದಿಯಲ್ಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯಲು ಬರುವವರ ಸಂಖ್ಯೆ ಹೆಚ್ಚಿದ್ದರೂ, ಇತ್ತೀಚಿನ ದಿನಗಳಲ್ಲಿ ಮಹಿಳೆಯರನ್ನು ಕೆಣಕುವುದು ಮತ್ತು ಅಸಭ್ಯವಾಗಿ ವರ್ತಿಸುವ ಘಟನೆಗಳು ವರದಿಯಾಗುತ್ತಿವೆ.ರಾತ್ರಿ 1 ಗಂಟೆಯ ನಂತರ ರಸ್ತೆಗಳಲ್ಲಿ ಮಹಿಳೆಯರನ್ನು ಉದ್ದೇಶಿಸಿ ಕೂಗುವುದು ಅಥವಾ ಕಿರುಕುಳ ನೀಡುವುದರಿಂದಾಗಿ ಅನೇಕರು ಹೊರಬರಲು ಭಯಪಡುತ್ತಿದ್ದಾರೆ. ಬೆಂಗಳೂರಿನಂತಹ ಸುರಕ್ಷಿತ ನಗರದಲ್ಲಿ ಇಂತಹ ಪ್ರವೃತ್ತಿ ಬೆಳೆಯುತ್ತಿರುವುದು ವಿಷಾದನೀಯ. “ನಗರವು ಎಲ್ಲರಿಗೂ ಸೇರಿದ್ದು, ಇಲ್ಲಿ ಪ್ರತಿಯೊಬ್ಬರಿಗೂ ಸುರಕ್ಷಿತವಾಗಿ ಸಂಚರಿಸುವ ಹಕ್ಕಿದೆ” ಎಂದು ಸ್ಥಳೀಯರು ಮತ್ತು ಪ್ರಜ್ಞಾವಂತ ನಾಗರಿಕರು ಒತ್ತಾಯಿಸುತ್ತಿದ್ದಾರೆ. ಬೆಂಗಳೂರನ್ನು ಅತಿಥಿ ಸತ್ಕಾರ ಮತ್ತು ಗೌರವಕ್ಕೆ ಹೆಸರಾದ ನಗರವನ್ನಾಗಿ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಮೋಜು-ಮಸ್ತಿ ಮಾಡುವ ಭರದಲ್ಲಿ ಮಹಿಳೆಯರಿಗೆ ಮುಜುಗರ ತರುವಂತಹ ಕೆಲಸ ಮಾಡಬೇಡಿ. ಇತರರನ್ನು ಗೌರವಿಸುವುದೇ ನಿಜವಾದ ಸುಸಂಸ್ಕೃತ ನಡವಳಿಕೆ ಎಂದು ವ್ಯಕ್ತಿಯೊಬ್ಬರು @Karnataka Portfolio ಎಂಬ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭಲೇ ಭೇಷ್… ಕನ್ನಡಿಗನ ಕಮಾಲ್​ಗೆ ದಂಗಾದ ವಿರಾಟ್ ಕೊಹ್ಲಿ! – Kannada News | Virat Kohli’s Epic Reaction to Manish Pandey’s Blinder Catch!

ಐಪಿಎಲ್​ನ 57ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಕ್ರಿಕೆಟ್ ಪ್ರೇಮಿಗಳು ಎಂದಿಗೂ ಮರೆಯದ ಅದ್ಭುತ ಕ್ಷಣವೊಂದು ದಾಖಲಾಗಿದೆ. ಕೆಕೆಆರ್ ತಂಡದ ಅನುಭವಿ ಆಟಗಾರ ಮನೀಶ್ ಪಾಂಡೆ ಗಾಳಿಯಲ್ಲಿ ಹಕ್ಕಿಯಂತೆ ಜಿಗಿದು ಹಿಡಿದ ಅಸಾಧಾರಣ ಕ್ಯಾಚ್ ಇಡೀ ಕ್ರೀಡಾಂಗಣವನ್ನು ರೋಮಾಂಚನಗೊಳಿಸಿತು. ಕೇವಲ ಸೆಕೆಂಡುಗಳ ಅವಧಿಯಲ್ಲಿ ನಡೆದ ಈ ‘ಸೂಪರ್‌ಮ್ಯಾನ್’ ಸಾಹಸಕ್ಕೆ ನಾನ್-ಸ್ಟ್ರೈಕರ್ ಎಂಡ್‌ನಲ್ಲಿದ್ದ ರನ್-ಮಷಿನ್ ವಿರಾಟ್ ಕೊಹ್ಲಿ ದಿಗ್ಭ್ರಮೆಗೊಂಡರು.

ಆರ್​ಸಿಬಿ ಇನಿಂಗ್ಸ್​ನ 18ನೇ ಓವರ್‌ನಲ್ಲಿ ಕೆಕೆಆರ್ ವೇಗಿ ಕಾರ್ತಿಕ್ ತ್ಯಾಗಿ ಎಸೆದ ತೀಕ್ಷ್ಣವಾದ ಎಸೆತವನ್ನು ಟಿಮ್ ಡೇವಿಡ್ ಆಫ್-ಸ್ಟಂಪ್‌ನಿಂದ ಹೊರಗೆ ಬಲವಾಗಿ ಕಟ್ ಮಾಡಿದರು. ಬ್ಯಾಟ್‌ನಿಂದ ಸಿಡಿದ ಚೆಂಡು ಅತಿ ವೇಗವಾಗಿ ಬ್ಯಾಕ್‌ವರ್ಡ್ ಪಾಯಿಂಟ್ ಕಡೆಗೆ ರಾಕೆಟ್‌ನಂತೆ ನುಗ್ಗಿತು.

ಅಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ 36 ವರ್ಷದ ಮನೀಶ್ ಪಾಂಡೆ, ಕೇವಲ ಸೆಕೆಂಡಿನ ನೂರನೇ ಒಂದು ಭಾಗದಲ್ಲಿ ಪ್ರತಿಕ್ರಿಯಿಸಿದರು. ತಮ್ಮ ಎಡಭಾಗಕ್ಕೆ ಸಂಪೂರ್ಣವಾಗಿ ಗಾಳಿಯಲ್ಲಿ ಜಿಗಿದು ಒಂದು ಕೈಯಿಂದ ಚೆಂಡನ್ನು ಮೈದಾನಕ್ಕೆ ತಾಗುವ ಕೆಲವೇ ಇಂಚುಗಳ ಮುನ್ನ ಅದ್ಭುತವಾಗಿ ಹಿಡಿದರು.

ಪಾಂಡೆ ಅವರ ಈ ಅಸಾಧ್ಯವಾದ ಕ್ಷೇತ್ರರಕ್ಷಣೆಯನ್ನು ಕಂಡು ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ಮತ್ತು ಆಟಗಾರರು ದಿಗ್ಭ್ರಮೆಗೊಂಡರು. ಅಷ್ಟೇ ಅಲ್ಲದೆ ಕ್ಯಾಚ್ ಔಟ್ ಆಗಿ ಟಿಮ್ ಡೇವಿಡ್ ಹೊರ ನಡೆಯುತ್ತಿದ್ದಂತೆ ಮನೀಶ್ ಪಾಂಡೆ ಬಳಿ ತೆರಳಿದ ವಿರಾಟ್ ಕೊಹ್ಲಿ ಈ ಅದ್ಭುತ ಫೀಲ್ಡಿಂಗ್​ ಅನ್ನು ಶ್ಲಾಘಿಸಿ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಕಿಂಗ್ ಕೊಹ್ಲಿಯ ಕ್ರೀಡಾ ಸ್ಫೂರ್ತಿಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಗೆದ್ದು ಬೀಗಿದ ಆರ್​ಸಿಬಿ:

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ (105) ಅಜೇಯ ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಆರ್​ಸಿಬಿ ತಂಡವು 19.1 ಓವರ್​ಗಳಲ್ಲಿ 194 ರನ್​ ಬಾರಿಸಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

Source link

Rajat Patidar: ಅವರನ್ನು ಹೊಗಳಲು ನನ್ನ ಬಳಿ ಪದಗಳೇ ಇಲ್ಲ..! – Kannada News | Rajat patidar post match interview after rcb vs kkr match

IPL 2026: ಐಪಿಎಲ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಕಳೆದ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್​ಗೆ ಸೋಲುಣಿಸಿದ್ದ ಆರ್​ಸಿಬಿ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದು ಬೀಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್​ಗಳಲ್ಲಿ 192 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಆರ್​ಸಿಬಿ 19.1 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ.

ಈ ಗೆಲುವಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ಈ ಗೆಲುವು ಖುಷಿ ನೀಡಿದೆ. ಅಲ್ಲದೆ  ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನಕ್ಕೇರಿರುವುದು ಇಡೀ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಟೂರ್ನಿಯ ಬೇರೆ ಬೇರೆ ಹಂತಗಳಲ್ಲಿ ವಿಭಿನ್ನ ಆಟಗಾರರು ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮುತ್ತಿರುವುದು ತಂಡದ ಪ್ಲಸ್ ಪಾಯಿಂಟ್. ತಂಡವು ಮುಂದಿನ ಪಂದ್ಯಗಳ ಬಗ್ಗೆ ಅತಿಯಾದ ಒತ್ತಡ ತೆಗೆದುಕೊಳ್ಳದೆ, “ಒಂದು ಬಾರಿಗೆ ಒಂದು ಪಂದ್ಯ” ಎಂಬ ಸರಳ ಸೂತ್ರವನ್ನು ಪಾಲಿಸುತ್ತಿದೆ ಎಂದಿದ್ದಾರೆ.

ಇದೇ ವೇಳೆ ವಿರಾಟ್ ಕೊಹ್ಲಿ ಅವರ ಅದ್ಭುತ ಫಾರ್ಮ್ ಬಗ್ಗೆ ಮಾತನಾಡಿದ ನಾಯಕ, “ಅವರ ಆಟವನ್ನು ವರ್ಣಿಸಲು, ಹೊಗಳಲು ನನ್ನ ಬಳಿ ಪದಗಳೇ ಇಲ್ಲ. ಸದಾ ತಂಡಕ್ಕಾಗಿ ದೊಡ್ಡ ಇನಿಂಗ್ಸ್ ಆಡುವುದು ಅವರಿಗೆ ರೂಢಿ” ಎಂದು ಕೊಂಡಾಡಿದ್ದಾರೆ.

ಇದಕ್ಕೂ ಮುನ್ನ ಆರ್​ಸಿಬಿ ಬೌಲರ್​ಗಳು ಸಂಘಟಿತ ದಾಳಿ ನಡೆಸಿದ್ದರು.  ಎದುರಾಳಿ ತಂಡ ಮೊದಲ 10 ಓವರ್‌ಗಳಲ್ಲಿ ಪ್ರತಿ ಓವರ್‌ಗೆ 10-11 ರನ್‌ಗಳ ವೇಗದಲ್ಲಿ ರನ್ ಕದಿಯುತ್ತಿತ್ತು. ಆದರೆ ಆರ್‌ಸಿಬಿ ಬೌಲರ್‌ಗಳು ಕೊನೆಯ 10 ಓವರ್‌ಗಳಲ್ಲಿ ಅದ್ಭುತವಾಗಿ ರನ್ ನಿಯಂತ್ರಿಸಿ, ಎದುರಾಳಿಯನ್ನು 194 ರನ್‌ಗಳಿಗೆ ಕಟ್ಟಿಹಾಕಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಲೇಬೇಕು ಎಂದರು.

ಇದೇ ಪಿಚ್‌ನಲ್ಲಿ ನಡೆದಿದ್ದ ಕಳೆದ ಪಂದ್ಯದಲ್ಲಿ ಚೆಂಡು ಅಸಮರ್ಪಕ ಬೌನ್ಸ್ ಆಗುತ್ತಿತ್ತು. ಈ ಪಿಚ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿ, ತಂಡದಲ್ಲಿ ನಾಲ್ಕು ಜನ ವೇಗದ ಬೌಲರ್‌ಗಳನ್ನು ಕಣಕ್ಕಿಳಿಸಿದ ತಂತ್ರ ಯಶಸ್ವಿಯಾಗಿದೆ ಎಂದು ಇದೇ ವೇಳೆ ರಜತ್ ಪಾಟಿದಾರ್ ಹೇಳಿದ್ದಾರೆ.

ಇದನ್ನೂ ಓದಿ: ಭಲೇ ಭೇಷ್… ಕನ್ನಡಿಗನ ಕಮಾಲ್​ಗೆ ದಂಗಾದ ವಿರಾಟ್ ಕೊಹ್ಲಿ!

ಇನ್ನು ಮುಂದಿನ ಗುರಿಗಳ ಬಗ್ಗೆ ಮಾತನಾಡಿದ ರಜತ್,  ಲೀಗ್ ಹಂತದಲ್ಲಿ ಇನ್ನು ಕೇವಲ ಎರಡು ಪಂದ್ಯಗಳು ಬಾಕಿ ಇವೆ. ಆರ್‌ಸಿಬಿ ತಂಡವು ಮುಂದಿನ ಪಂದ್ಯಕ್ಕಾಗಿ ಧರ್ಮಶಾಲಾಗೆ ಪ್ರಯಾಣಿಸಲಿದೆ. ಧರ್ಮಶಾಲಾ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಪೂರಕವಾಗಿದ್ದು, ಅಲ್ಲಿ ಗೆಲುವಿನ ಲಯ ಮುಂದುವರಿಸಿ, ಆ ಬಳಿಕ ಹೈದರಾಬಾದ್ ವಿರುದ್ಧದ ಕೊನೆಯ ಲೀಗ್ ಪಂದ್ಯವನ್ನು ಎದುರಿಸಲು ತಂಡ ಸಜ್ಜಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ, ಆರ್‌ಸಿಬಿ ತಂಡವು ಬ್ಯಾಟಿಂಗ್, ಬೌಲಿಂಗ್ ಹಾಗೂ ನಾಯಕತ್ವ ಮೂರರಲ್ಲೂ ಅತ್ಯುತ್ತಮ ಸಮತೋಲನ ಕಾಯ್ದುಕೊಂಡಿರುವುದು ಈ ಬಾರಿಯ ಯಶಸ್ಸಿಗೆ ಕಾರಣವಾಗಿದೆ. ನಾಯಕ ರಾಜತ್ ಪಾಟೀದಾರ್ ಅವರ ಸಮಯೋಚಿತ ನಿರ್ಧಾರಗಳು ಮತ್ತು ವಿರಾಟ್ ಕೊಹ್ಲಿ ಅವರ ಅದ್ಭುತ ಫಾರ್ಮ್ ತಂಡದ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಲೀಗ್ ಹಂತದ ಕೊನೆಯ ಎರಡು ಪಂದ್ಯಗಳಲ್ಲಿ ಇದೇ ಗೆಲುವಿನ ಲಯವನ್ನು ಕಾಯ್ದುಕೊಂಡು, ಪ್ಲೇಆಫ್‌ ಹಂತದಲ್ಲೂ ಆರ್‌ಸಿಬಿ ತನ್ನ ಅಧಿಪತ್ಯವನ್ನು ಮುಂದುವರಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Source link

ಹಾಸನ: ವರ್ಕೌಟ್ ಮಾಡುತ್ತಿದ್ದಾಗ ಭುಜ ಟಚ್​​ ಆಗಿದ್ದಕ್ಕೆ ಯುವಕನ ತಲೆ ಜಜ್ಜಿದ ಕಿರಾತಕ! – Kannada News | Viral Video: Hassan M.J. Fitness Attack – Kirtan Suffers Skull Fracture, Varun Arrested

ಹಾಸನ, ಮೇ,14: ಹಾಸನ ನಗರದ ‘ಎಂ.ಜೆ. ಫಿಟ್‌ನೆಸ್’ (M.J. Fitness) ಜಿಮ್‌ನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಭೀಕರ ಹಲ್ಲೆ ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ವ್ಯಾಯಾಮ ಮಾಡುವಾಗ ಅಚಾತುರ್ಯದಿಂದ ಭುಜ ಟಚ್​​ ಆಗಿರುವುದು ದೊಡ್ಡ ಅಪರಾಧ ಎಂಬಂತೆ ವರ್ತಿಸಿದ ವರುಣ್ ಎಂಬಾತ, ಕೀರ್ತನ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಇದೀಗ ಈ ಬಗ್ಗೆ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ. ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಇಬ್ಬರ ನಡುವೆ ಸ್ವಲ್ಪ ಭುಜ ತಗಿದೆ. ಇದನ್ನೇ ನೆಪವಾಗಿಸಿಕೊಂಡ ವರುಣ್, ಕೋಪದಿಂದ ಕೀರ್ತನ್‌ನ ತಲೆಗೆ ಬಲವಾಗಿ ಒದ್ದಿದ್ದಾನೆ. ಇದರಿಂದ ಕೀರ್ತನ್ ತಲೆಗೆ ಗಂಭೀರ ಪೆಟ್ಟಾಗಿದ್ದು (Skull Fracture), ಆತ ಪ್ರಜ್ಞೆ ತಪ್ಪಿ ಕೋಮಾಗೆ ಜಾರಿದ್ದಾನೆ. ಗಾಯಾಳು ಕೀರ್ತನ್ ಪ್ರಸ್ತುತ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವರುಣ್ ವಿರುದ್ಧ ತನಿಖೆ ಆರಂಭವಾಗಿದೆ. ಕ್ಷಣಕಾಲದ ಆವೇಶ ಹೇಗೆ ಒಬ್ಬರ ಬದುಕನ್ನು ಮೂರಾಬಟ್ಟೆ ಮಾಡುತ್ತದೆ ಎಂಬುದಕ್ಕೆ ಈ ದುರ್ಘಟನೆಯೇ ಸಾಕ್ಷಿ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ – Kannada News | Mera Liyari Box Office Disaster: Pakistan’s Flop Film Sold Just 22 Tickets

ಪಾಕಿಸ್ತಾನದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ಮೇರಾ ಲಿಯಾರಿ’ ಬಾಕ್ಸ್ ಆಫೀಸ್‌ನಲ್ಲಿ ದಯನೀಯವಾಗಿ ಸೋತಿದೆ. ಭಾರತದ ಸೂಪರ್ ಹಿಟ್ ‘ಧುರಂಧರ್’ ಚಿತ್ರಕ್ಕೆ ಪ್ರತಿಯಾಗಿ ಪಾಕಿಸ್ತಾನ ನೀಡಿದ ಉತ್ತರ ಎಂದು ಬಿಂಬಿತವಾಗಿದ್ದ ಈ ಸಿನಿಮಾ, ಥಿಯೇಟರ್‌ಗಳಲ್ಲಿ ಕೇವಲ 22 ಟಿಕೆಟ್‌ಗಳು ಮಾರಾಟವಾಗುವ ಮೂಲಕ ಭಾರಿ ಮುಜುಗರಕ್ಕೆ ಈಡಾಗಿದೆ.

ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಮೂಡಿಬಂದ ಪಾಕಿಸ್ತಾನಿ ಸಿನಿಮಾ ‘ಮೇರಾ ಲಿಯಾರಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಹೊರಬಿದ್ದಿದೆ. ಅಬು ಅಲಿಹಾ ನಿರ್ದೇಶನದ ಈ ಚಿತ್ರವು ಲಿಯಾರಿ ಭಾಗದ ಪಾಸಿಟಿವ್ ಚಿತ್ರಣವನ್ನು ನೀಡಲು ಪ್ರಯತ್ನಿಸಿತ್ತು. ಆಯೇಷಾ ಒಮರ್ ಮತ್ತು ದನನೀರ್ ಮೊಬೀನ್ ಅವರಂತಹ ಪ್ರಮುಖ ನಟಿಯರು ನಟಿಸಿದ್ದರೂ, ಈ ಕ್ರೀಡಾ ಡ್ರಾಮಾ ಪ್ರೇಕ್ಷಕರನ್ನು ಸೆಳೆಯುವಲ್ಲಿ ಸಂಪೂರ್ಣ ವಿಫಲವಾಗಿದೆ.

ಕೇವಲ 22 ಟಿಕೆಟ್ ಮಾರಾಟ

ವರದಿಗಳ ಪ್ರಕಾರ, ಹಲವು ಚಿತ್ರಮಂದಿರಗಳಲ್ಲಿ ಈ ಸಿನಿಮಾಗೆ ಕನಿಷ್ಠ ಪ್ರೇಕ್ಷಕರೂ ಬರಲಿಲ್ಲ. ಒಟ್ಟು ಕೇವಲ 22 ಟಿಕೆಟ್‌ಗಳು ಮಾರಾಟವಾದ ಕಾರಣ, ಚಿತ್ರಮಂದಿರದ ಮಾಲೀಕರು ಅನಿವಾರ್ಯವಾಗಿ ಪ್ರದರ್ಶನವನ್ನು ರದ್ದುಗೊಳಿಸಿ ಬೇರೆ ಚಿತ್ರಗಳನ್ನು ಹಾಕಿಕೊಂಡಿದ್ದಾರೆ. ಸಿಂಧ್ ಸರ್ಕಾರವು ಈ ಚಿತ್ರಕ್ಕೆ ಸಾರ್ವಜನಿಕವಾಗಿ ಬೆಂಬಲ ನೀಡಿದ್ದರೂ, ರಾಜಕೀಯ ಪ್ರಚಾರವು ಬಾಕ್ಸ್ ಆಫೀಸ್ ಗಳಿಕೆಗೆ ನೆರವಾಗಲಿಲ್ಲ.

ಧುರಂಧರ್ ಚಿತ್ರದ ಪ್ರಭಾವ:

ಈ ಸಿನಿಮಾ ಸುದ್ದಿಯಾಗಲು ಮುಖ್ಯ ಕಾರಣ ಭಾರತದ ‘ಧುರಂಧರ್’ ಚಿತ್ರ. ಆದಿತ್ಯ ಧರ್ ನಿರ್ದೇಶನದ ‘ಧುರಂಧರ್’ ಚಿತ್ರದಲ್ಲಿ ಲಿಯಾರಿ ಪ್ರದೇಶದ ಅಪರಾಧ ಲೋಕ, ಭಯೋತ್ಪಾದನೆ ಮತ್ತು ಗ್ಯಾಂಗ್ ವಾರ್‌ಗಳನ್ನು ತೋರಿಸಲಾಗಿತ್ತು. ರಣವೀರ್ ಸಿಂಗ್, ಸಂಜಯ್ ದತ್, ಅರ್ಜುನ್ ರಾಂಪಾಲ್ ಮತ್ತು ಸಾರಾ ಅರ್ಜುನ್ ನಟಿಸಿದ್ದ ಈ ಚಿತ್ರ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು.

ಇದನ್ನೂ ಓದಿ: ‘ಧುರಂಧರ್’ ಚಿತ್ರಕ್ಕೆ ತಿರುಗೇಟು ನೀಡಲು ‘ಮೇರಾ ಲಿಯಾರಿ’ ಸಿನಿಮಾ ಮಾಡಿದ ಪಾಕಿಸ್ತಾನ

ಪಾಕಿಸ್ತಾನದ ಮೇಲೆ ನಕಾರಾತ್ಮಕ ಛಾಪು ಮೂಡಿಸಿದ್ದ ‘ಧುರಂಧರ್’ಗೆ ತಿರುಗೇಟು ನೀಡಲು ಪಾಕಿಸ್ತಾನಿ ಚಿತ್ರರಂಗ ‘ಮೇರಾ ಲಿಯಾರಿ’ ತಯಾರಿಸಿತ್ತು. ಆದರೆ, ಕಳಪೆ ಚಿತ್ರಕಥೆ ಮತ್ತು ಕಮರ್ಷಿಯಲ್ ಅಂಶದ ಕೊರತೆಯಿಂದಾಗಿ ಪಾಕಿಸ್ತಾನದ ಈ ಪ್ರಯತ್ನ ಈಗ ಅಟ್ಟರ್ ಫ್ಲಾಪ್ ಎನಿಸಿಕೊಂಡಿದೆ. ಭಾರತೀಯ ಸಿನಿಮಾದ ಜನಪ್ರಿಯತೆಗೆ ಪೈಪೋಟಿ ನೀಡಲು ಹೊರಟು ತನ್ನದೇ ನೆಲದಲ್ಲಿ ಸೋಲೊಪ್ಪಿಕೊಂಡಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Uttar Pradesh Rains: ಉತ್ತರ ಪ್ರದೇಶದಲ್ಲಿ ವರುಣಾರ್ಭಟ; ಭೀಕರ ಬಿರುಗಾಳಿ ಮಳೆಗೆ 74 ಮಂದಿ ಸಾವು, ಹಲವೆಡೆ ರೆಡ್ ಅಲರ್ಟ್ – Kannada News | Uttar Pradesh Rain Fury: Several Died as Severe Storm and Hailstones Lash the State; 38 Districts on Alert

ಮರ ಬಿದ್ದು ವಾಹನಗಳು ಜಖಂಗೊಂಡಿರುವುದುImage Credit source: TV9 Network

ಲಖನೌ, ಮೇ 14: ಉತ್ತರ ಪ್ರದೇಶದಲ್ಲಿ ಬುಧವಾರ ಬೀಸಿದ ಭೀಕರ ಬಿರುಗಾಳಿ, ಮಳೆ (Uttar Pradesh Rains) ಮತ್ತು ಆಲಿಕಲ್ಲು ಮಳೆಗೆ ಇಡೀ ರಾಜ್ಯವೇ ತತ್ತರಿಸಿದೆ. ಪ್ರಕೃತಿಯ ಈ ರೌದ್ರಾವತಾರಕ್ಕೆ ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ, ಮರಗಳು ಬಿದ್ದಿರುವುದು ಮತ್ತು ಸಿಡಿಲು ಬಡಿದ ಘಟನೆಗಳಲ್ಲಿ ಇದುವರೆಗೆ ಸುಮಾರು 74 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.

ಮುಖ್ಯಾಂಶಗಳು

  • ಉತ್ತರ ಪ್ರದೇಶದಾದ್ಯಂತ ಮಳೆ ಮತ್ತು ಗಾಳಿಗೆ 74 ಮಂದಿ ಬಲಿ
  • ಪ್ರಯಾಗ್‌ರಾಜ್‌ನಲ್ಲಿ ಅತಿ ಹೆಚ್ಚು ಅಂದರೆ 17 ಸಾವು
  • ಉನ್ನಾವ್‌ನಲ್ಲಿ ಬಾಲಕ ಸೇರಿ 7 ಮಂದಿ ದುರ್ಮರಣ.

ಬಿರುಗಾಳಿಯ ರೌದ್ರ ನರ್ತನ

ಹವಾಮಾನ ಇಲಾಖೆಯ ವರದಿಯಂತೆ, ಪಶ್ಚಿಮ ಉತ್ತರ ಪ್ರದೇಶ ವ್ಯಾಪ್ತಿಯಲ್ಲಿ ಚಂಡಮಾರುತ ಮತ್ತು ದಕ್ಷಿಣ ರಾಜಸ್ಥಾನದಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದಾಗಿ ಗಂಟೆಗೆ 80 ರಿಂದ 100 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಿದೆ. ಬುಧವಾರ ಮಧ್ಯಾಹ್ನ ಆರಂಭವಾದ ಈ ಹವಾಮಾನ ವೈಪರೀತ್ಯ ಸಂಜೆ ವೇಳೆಗೆ ಭೀಕರ ಚಂಡಮಾರುತವಾಗಿ ಮಾರ್ಪಟ್ಟು ಭಾರಿ ಅವಾಂತರ ಸೃಷ್ಟಿಸಿದೆ.

ಉತ್ತರ ಪ್ರದೇಶದ ಯಾವ ಜಿಲ್ಲೆಯಲ್ಲಿ ಎಷ್ಟು ಹಾನಿ?

ಭೀಕರ ಮಳೆಗೆ ಪ್ರಯಾಗ್‌ರಾಜ್ ಜಿಲ್ಲೆ ಅತಿ ಹೆಚ್ಚು ಹಾನಿಗೊಳಗಾಗಿದ್ದು, ಅಲ್ಲಿ 17 ಜನರು ಮೃತಪಟ್ಟಿದ್ದಾರೆ. ಮೃತರ ಪೈಕಿ ಐವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿದ್ದಾರೆ. ಉಳಿದಂತೆ ಭದೋಹಿಯಲ್ಲಿ 10, ಫತೇಪುರ್ 8, ಉನ್ನಾವ್ 7, ಬದಾಯೂನ್ 6 ಮತ್ತು ಬರೇಲಿಯಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಉನ್ನಾವ್ ಜಿಲ್ಲೆಯ ದಹಿ ಎಂಬಲ್ಲಿ ಮರ ಬಿದ್ದು 70 ವರ್ಷದ ರೈತ ಮೃತಪಟ್ಟರೆ, ಅಸಿವಾನ್‌ನಲ್ಲಿ 9 ವರ್ಷದ ಬಾಲಕ ಬಲಿಯಾಗಿದ್ದಾನೆ.

ವಿದ್ಯುತ್ ಮತ್ತು ಸಂಚಾರ ವ್ಯತ್ಯಯ

ಬಿರುಗಾಳಿಯ ಆರ್ಭಟಕ್ಕೆ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಅನೇಕ ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜು ಸಂಪೂರ್ಣ ಸ್ಥಗಿತಗೊಂಡಿದೆ. ರಸ್ತೆಗಳ ಮೇಲೆ ಮರಗಳು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಹಲವಾರು ಕಾರುಗಳು ಮತ್ತು ಮನೆಗಳಿಗೆ ಹಾನಿಯಾಗಿದೆ.

ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಕೆಲವು ಗಂಟೆಗಳಲ್ಲಿ ಲಖನೌ, ಉನ್ನಾವ್, ಸೀತಾಪುರ ಮತ್ತು ಪ್ರಯಾಗ್‌ರಾಜ್ ಸೇರಿದಂತೆ 38 ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಸಿಡಿಲು ಸಹಿತ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮೇ 15 ರಿಂದ ಮತ್ತೆ ತಾಪಮಾನ ಏರಿಕೆಯಾಗಲಿದ್ದು, ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ದಾಟುವ ನಿರೀಕ್ಷೆಯಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಗಾಳಿ ಮಳೆ ಅಬ್ಬರ: ಉನ್ನಾವ್​ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ!

ಮುಖ್ಯಮಂತ್ರಿ ಕಚೇರಿಯು ಜಿಲ್ಲಾಧಿಕಾರಿಗಳಿಗೆ ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಮತ್ತು ಸಂತ್ರಸ್ತರಿಗೆ ತಕ್ಷಣದ ನೆರವು ನೀಡಲು ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅನುಷ್ಕಾ ಶರ್ಮಾ ಸಿನಿಮಾದಿಂದ ದೂರ ಉಳಿದಿರುವುದು ಯಾಕೆ? ಇಲ್ಲಿದೆ ಅಸಲಿ ಕಾರಣ – Kannada News | Anushka Sharma: Why She Quit Bollywood Movies for Family and Kids?

ಬಾಲಿವುಡ್‌ನ ಸ್ಟಾರ್ ನಟಿ ಅನುಷ್ಕಾ ಶರ್ಮಾ ತೆರೆಯ ಮೇಲೆ ಕಾಣಿಸಿಕೊಂಡು ಸುಮಾರು ಎಂಟು ವರ್ಷಗಳೇ ಕಳೆಯುತ್ತಿವೆ. 2018ರಲ್ಲಿ ಬಿಡುಗಡೆಯಾದ ‘ಜೀರೋ’ ಅವರ ಕೊನೆಯ ಸಿನಿಮಾ. ಇತ್ತೀಚೆಗೆ ಜಾಹೀರಾತೊಂದರಲ್ಲಿ ಕಾಣಿಸಿಕೊಂಡ ಅನುಷ್ಕಾ ಅವರನ್ನು ಕಂಡು ಅಭಿಮಾನಿಗಳು ಭಾವುಕರಾಗಿದ್ದಾರೆ ಮತ್ತು ಅವರು ಯಾಕೆ ಸಿನಿಮಾಗಳನ್ನು ಮಾಡುತ್ತಿಲ್ಲ ಎಂಬ ಪ್ರಶ್ನೆ ಎಲ್ಲೆಡೆ ಕೇಳಿಬರುತ್ತಿದೆ.

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಈಗ ಇಬ್ಬರು ಮಕ್ಕಳು. 2021ರಲ್ಲಿ ಪುತ್ರಿ ವಮಿಕಾ ಹಾಗೂ 2024ರಲ್ಲಿ ಪುತ್ರ ಅಕಾಯ್ ಜನಿಸಿದ. ನಂತರ ಅನುಷ್ಕಾ ಸಂಪೂರ್ಣವಾಗಿ ತಮ್ಮ ಕುಟುಂಬದ ಕಡೆಗೆ ಗಮನ ಹರಿಸುತ್ತಿದ್ದಾರೆ. ಈ ಹಿಂದೆ ಸಿಮಿ ಗರೆವಾಲ್ ಅವರ ಶೋನಲ್ಲಿ ಮಾತನಾಡಿದ್ದ ಅನುಷ್ಕಾ, ‘ಮದುವೆ ಮತ್ತು ಮಕ್ಕಳು ಆದ ಮೇಲೆ ಕೆಲಸ ಮಾಡುವುದಕ್ಕಿಂತ ಸಂಸಾರಕ್ಕೆ ಹೆಚ್ಚು ಒತ್ತು ನೀಡಲು ಬಯಸುತ್ತೇನೆ’ ಎಂದು ಹೇಳಿದ್ದರು. ಅದರಂತೆಯೇ ಈಗ ಅವರು ಸಿನಿಮಾಗಿಂತ ಹೆಚ್ಚಾಗಿ ಮಕ್ಕಳ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನುಷ್ಕಾ ಶರ್ಮಾಗೆ ಬರ್ತ್​​​​ಡೇ; ನಟಿಯ ಬಳಿ ಇರೋದು ಒಂದೇ ಬೇಡಿಕೆ 

ಮೂಲಗಳ ಪ್ರಕಾರ, ವಿರಾಟ್ ಮತ್ತು ಅನುಷ್ಕಾ ಸದ್ಯ ಲಂಡನ್‌ನಲ್ಲಿ ನೆಲೆಸಿದ್ದಾರೆ. ಭಾರತದಲ್ಲಿನ ಅತಿಯಾದ ಮಾಧ್ಯಮಗಳ ಗಮನದಿಂದ ದೂರ ಉಳಿದು, ತಮ್ಮ ಮಕ್ಕಳನ್ನು ಸಾಮಾನ್ಯರಂತೆ ಬೆಳೆಸುವ ಉದ್ದೇಶದಿಂದ ಅವರು ವಿದೇಶದಲ್ಲಿ ಸೆಟಲ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಪತಿ ವಿರಾಟ್ ಕೊಹ್ಲಿ ಅವರ ವೃತ್ತಿಜೀವನಕ್ಕೆ ಅನುಷ್ಕಾ ಸದಾ ಬೆನ್ನೆಲುಬಾಗಿ ನಿಲ್ಲುತ್ತಾರೆ. ಐಪಿಎಲ್ ಪಂದ್ಯಗಳ ಸಮಯದಲ್ಲಿ ಅವರು ಮೈದಾನಕ್ಕೆ ಆಗಮಿಸಿ ಕೊಹ್ಲಿಯನ್ನು ಹುರಿದುಂಬಿಸುವುದನ್ನು ನಾವು ಇಂದಿಗೂ ಕಾಣಬಹುದು.

ಚಕ್ದಾ ಎಕ್ಸ್‌ಪ್ರೆಸ್ ಬಿಡುಗಡೆ ಯಾವಾಗ?

ಅನುಷ್ಕಾ ನಟಿಸಿರುವ ಜೂಲನ್ ಗೋಸ್ವಾಮಿ ಅವರ ಬಯೋಪಿಕ್ ‘ಚಕ್ದಾ ಎಕ್ಸ್‌ಪ್ರೆಸ್’ ಚಿತ್ರೀಕರಣ 2022ರಲ್ಲೇ ಪೂರ್ಣಗೊಂಡಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಈ ಸಿನಿಮಾ ನಿರ್ಮಾಣದ ಗುಣಮಟ್ಟ ಅಥವಾ ಬಜೆಟ್ ಕಾರಣಗಳಿಂದಾಗಿ ವಿಳಂಬವಾಗುತ್ತಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಉತ್ತರ ಪ್ರದೇಶದಲ್ಲಿ ಗಾಳಿ ಮಳೆ ಅಬ್ಬರ: ಉನ್ನಾವ್​ನಲ್ಲಿ ವರುಣಾರ್ಭಟದ ರೌದ್ರ ನರ್ತನ ಹೇಗಿತ್ತು ನೋಡಿ! – Kannada News | Uttar Pradesh Rain Fury: many People Dead in Unnao as Severe Storm Lashes the Region

ಲಖನೌ, ಮೇ 14: ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಬುಧವಾರ ಭಾರೀ ಬಿರುಗಾಳಿ ಮತ್ತು ಮಳೆ ಸುರಿದಿದ್ದು, ಪ್ರತ್ಯೇಕ ಘಟನೆಗಳಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ದಹಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾವಿನ ಮರ ಬಿದ್ದು 70 ವರ್ಷದ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಅಸಿವಾನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೀಲಗಿರಿ ಮರ ಬಿದ್ದು ಒಂಬತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ನೋ ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆಯಾಗಿ ರಾಜ್ಯದಾದ್ಯಂತ ಮಳೆಗೆ 74 ಮಂದಿ ಮೃತಪಟ್ಟಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕ್ರಿಸ್​ ಗೇಲ್ ವಿಶ್ವ ದಾಖಲೆಯನ್ನೇ ಧೂಳೀಪಟ ಮಾಡಿದ ಕಿಂಗ್ ಕೊಹ್ಲಿ – Kannada News | IPL 2026: Virat Kohlii Breaks Chris Gayle’s Huge World Record

ವಿರಾಟ್ ಕೊಹ್ಲಿಯ ಬ್ಯಾಟ್​ನಿಂದ ಮತ್ತೊಂದು ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕೊಹ್ಲಿ (Virat Kohli) ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ ಬರೆದಿದ್ದ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL)

Source link

Exit mobile version