Headlines

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಇನ್ಮುಂದೆ ರೈಲಿಗೆ ಹೆಚ್ಚು ಹೊತ್ತು ಕಾಯಬೇಕಿಲ್ಲ – Kannada News | Good News for Yellow Line Metro Passengers: Sixth Train to Begin Operations from December 23

ಬೆಂಗಳೂರು, ಡಿಸೆಂಬರ್​ 22: ನಾಳೆಯಿಂದ ಅಂದರೆ ಡಿಸೆಂಬರ್ 23ರಿಂದ 6ನೇ ಹೊಸ ಮೆಟ್ರೋ (Namma Metro) ರೈಲು ಟ್ರ್ಯಾಕಿಗಿಳಿಯಲಿದೆ. ಆ ಮೂಲಕ ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಗುಡ್​ ನ್ಯೂಸ್ ನೀಡಿದೆ. ನಾಳೆ ಬೆಳಗ್ಗೆ 6 ಗಂಟೆಯಿಂದ ಆರನೇ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಹಾಗಾಗಿ ಹೆಚ್ಚು ಹೊತ್ತು ರೈಲಿಗಾಗಿ ಕಾಯುವಿಕೆಗೆ ಬ್ರೇಕ್​​ ಬೀಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್ (BMRCL)​​ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬಿಎಂಆರ್​ಸಿಎಲ್​​ ಮಾಧ್ಯಮ ಪ್ರಕಟಣೆ ಬೆಂಗಳೂರು…

Read More

ಕಡ್ಡಾಯ ಗ್ರಾಮೀಣ ಸೇವೆಯಿಂದ ತಪ್ಪಿಸಿಕೊಂಡ 400ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಶಾಕ್! – Kannada News | Karnataka MBBS students Face 15L Fine for Skipping Compulsory Rural Service

ಪ್ರಾತಿನಿಧಿಕ ಚಿತ್ರImage Credit source: theredpen.in ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಕೋಟಾದ ಅಡಿಯಲ್ಲಿ ಸರ್ಕಾರಿ ಕಾಲೇಜ್ ಅಥವಾ ಖಾಸಗಿ ಕಾಲೇಜ್​​ಗಳಲ್ಲಿ ಪ್ರವೇಶ ಪಡೆದ ಎಂಬಿಬಿಎಸ್​​​ ವಿದ್ಯಾರ್ಥಿಗಳು (MBBS students) ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸಬೇಕು ಎಂಬ ನಿಯಮ ಇದೆ. ಸದ್ಯ ಈ ನಿಯಮದಿಂದ ತಪ್ಪಿಸಿಕೊಂಡ ಎಂಬಿಬಿಎಸ್​​​ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್​ ನೀಡಿದೆ. ಗ್ರಾಮೀಣ ಸೇವೆ ತಪ್ಪಿಸಿದ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 15 ಲಕ್ಷ ರೂ ದಂಡದ (fine) ನೋಟಿಸ್​ ನೀಡಲಾಗಿದೆ. ತಲಾ 15 ಲಕ್ಷ ರೂ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಹೆಚ್ಚಾಯ್ತು ತಾಪಮಾನ; ಉಡುಪಿ, ಉತ್ತರ ಕನ್ನಡದಲ್ಲಿಂದು ಹೀಟ್ ವೇವ್ ಅಲರ್ಟ್​!

ಬೆಂಗಳೂರು, ಏಪ್ರಿಲ್ 11: ಬೆಂಗಳೂರು ಸೇರಿದಂತೆ ಇಂದು ಹಲವು ಜಿಲ್ಲೆಗಳಲ್ಲಿ(Weather Forecast)  ಶುಷ್ಕ ವಾತಾವರಣವಿರಲಿದ್ದು, ಕೆಲ ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ನಿನ್ನೆಯವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯಿತ್ತು ಆದರೆ ಇಂದು ತಾಪಮಾನ ಹೆಚ್ಚಳದ ಸಾಧ್ಯತೆಯಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದೆ. ಇನ್ನುಳಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಹೀಟ್​ ವೇವ್, ಒಣ ಹವೆ? ಕರಾವಳಿಯಲ್ಲಿಂದು 35 ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನವಿರಲಿದ್ದು, ಉತ್ತರ…

Read More

‘ಕಿಲಾಡಿ ಮೇಘ’ ಸಿನಿಮಾದಲ್ಲಿ ದೈವಾರಾಧಕನ ಪಾತ್ರದಲ್ಲಿ ಶಂಕರ್ ಅಶ್ವತ್ಥ್ – Kannada News | Shankar Ashwath Mahalakshmi starrer Kiladi Megha Kannada movie press meet

‘ಡ್ರಾಮಾ ಜೂನಿಯರ್ಸ್’ ಖ್ಯಾತಿಯ ಮಹಾಲಕ್ಷ್ಮಿ ನಟಿಸಿದ ‘ಕಿಲಾಡಿ ಮೇಘ’ (Kiladi Megha) ಸಿನಿಮಾದ ಟೀಸರ್ ಮತ್ತು ಹಾಡುಗಳು ರಿಲೀಸ್ ಆಗಿವೆ. ಮೇಘ ಎಂಬ ಪಾತ್ರದಲ್ಲಿ ಮಹಾಲಕ್ಷ್ಮಿ ಅವರು ನಟಿಸಿದ್ದಾರೆ. ಇದೇ ಸಿನಿಮಾದಲ್ಲಿ ಹಿರಿಯ ನಟ ಶಂಕರ್ ಅಶ್ವಥ್ (Shankar Ashwath) ಅವರು ದೈವಾರಾಧಕನ ಪಾತ್ರ ನಿರ್ವಹಿಸಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಚಿತ್ರತಂಡದವರು ಮಾತನಾಡಿದ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು. ‘ಸುಲೋಚನಾ ಪ್ರೊಡಕ್ಷನ್ಸ್’ ಮೂಲಕ ಸುಲೋಚನಾ ಸುಕುಮಾರ್ ಅವರು ಈ…

Read More

ಕಿವಿಯಲ್ಲಿನ ವಾಕ್ಸ್ ತೆಗೆಯಲು ಸರಿಯಾದ ವಿಧಾನ ಯಾವುದು? ಆರೋಗ್ಯ ತಜ್ಞರು ಈ ಬಗ್ಗೆ ಏನ್ ಹೇಳ್ತಾರೆ ನೋಡಿ – Kannada News | Why Earwax Builds Up & How to Clean Safely

ಕಿವಿಯಲ್ಲಿ (Ear) ಕೊಳಕು ಅಥವಾ ಮೇಣ (Earwax) ಸಂಗ್ರಹವಾದರೆ, ಅದನ್ನು ಬೆರಳಿನಿಂದ ಅಥವಾ ಇಯರ್ ಬಡ್ ಸಹಾಯದಿಂದ ಅದನ್ನು ತೆಗೆಯಲು ಪ್ರಯತ್ನಿಸುತ್ತೇವೆ. ಹಾಗಾದರೆ ಇದು ಕಿವಿಯನ್ನು ಸ್ವಚ್ಛಗೊಳಿಸುತ್ತದೆಯೇ, ಈ ವಿಧಾನ ಒಳ್ಳೆಯದೇ ಎಂದು ಎಂದಾದರೂ ಯೋಚಿಸಿದ್ದೀರಾ… ಆರೋಗ್ಯ ತಜ್ಞರು ಇದು ಸರಿಯಾದ ಮಾರ್ಗವಲ್ಲ ಎಂದು ಹೇಳುತ್ತಾರೆ. ಹಾಗದರೆ ಕಿವಿಯಲ್ಲಿ ಕೊಳಕು ಅಥವಾ ಮೇಣ ಸಂಗ್ರಹವಾಗುವುದಕ್ಕೆ ಕಾರಣವೇನು, ಅದನ್ನು ತೆಗೆಯಲು ಸರಿಯಾದ ವಿಧಾನ ಯಾವುದು ಎಂಬುದನ್ನು ತಿಳಿದುಕೊಳ್ಳಿ. ಈ ಬಗ್ಗೆ ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಇಎನ್‌ಟಿ…

Read More

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಒಳಜಗಳದಿಂದ ಕಾಂಗ್ರೆಸ್​ಗೆ ತಲೆನೋವು, ಖುದ್ದು ಸಿಎಂ ಸಭೆ ನಡೆಸಿದರೂ ಒಮ್ಮತವಿಲ್ಲ

ಬಾಗಲಕೋಟೆ, ಮಾರ್ಚ್ 20: ಬಾಗಲಕೋಟೆ (Bagalkot) ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ (Congress) ಪಕ್ಷದಲ್ಲಿ ಟಿಕೆಟ್ ಬಿಕ್ಕಟ್ಟು ತೀವ್ರಗೊಂಡಿದೆ. ಮಾಜಿ ಸಚಿವ, ಶಾಸಕ ದಿ. ಎಚ್​ವೈ ಮೇಟಿ (HY Meti) ಅವರ ಕ್ಷೇತ್ರದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಗೊಂದಲದಲ್ಲೇ ಉಳಿದಿದೆ. ಈ ಬಿಕ್ಕಟ್ಟನ್ನು ಬಗೆಹರಿಸಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ (Siddaramaiah) ಮುಂದಾಗಿ ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ. ಮೇಟಿ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ಒಮ್ಮತ ಸಾಧಿಸಲು ಸೂಚನೆ ನೀಡಿದರೂ, ಅಂತಿಮ ನಿರ್ಧಾರಕ್ಕೆ ಬರಲಾಗಿಲ್ಲ. ಮೇಟಿ ಕುಟುಂಬದ ಮಕ್ಕಳಾದ…

Read More

ಚಿನ್ನ ಅಡವಿಟ್ಟ ಗ್ರಾಹಕರಿಗೆ ‘ಮಕ್ಮಲ್ ಟೋಪಿ’! ಕೋಟ್ಯಾಂತರ ರೂ. ವಂಚಿಸಿ ಜ್ಯುವೆಲರಿ ಶಾಪ್ ಮಾಲೀಕ ಪರಾರಿ – Kannada News | Bengaluru Gold Fraud: Raghavendra Jewellery Owner Tejas Gowda Cons Customers; FIR Registered

ತೇಜಸ್ ಗೌಡ ಮತ್ತು ಆತನ ಜ್ಯುವೆಲರಿ ಶಾಪ್ ಬೆಂಗಳೂರು, ಮೇ 09: ಜನರು ಕಷ್ಟ ಅಂತ ತಮ್ಮ ಬೆಲೆಬಾಳುವ ಚಿನ್ನಾಭರಣವನ್ನು (Gold Jewellery)ಅಡವಿಟ್ಟರೆ, ಇಲ್ಲೊಬ್ಬ ಜ್ಯುವೆಲರಿ ಶಾಪ್ ಮಾಲೀಕ ಜನರಿಗೇ ಪಂಗನಾಮ ಹಾಕಿದ್ದಾನೆ. ಬೆಂಗಳೂರಿನಲ್ಲಿ ಕಡಿಮೆ ಬಡ್ಡಿಯ ಆಸೆ ತೋರಿಸಿ ಗ್ರಾಹಕರಿಂದ ಚಿನ್ನ ಪಡೆದ ಆಸಾಮಿ ಈಗ ಅಂಗಡಿ ಬಾಗಿಲು ಮುಚ್ಚಿಕೊಂಡು ಪರಾರಿಯಾಗಿದ್ದಾನೆ. ಮುಖ್ಯಾಂಶಗಳು ಕಡಿಮೆ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಮೋಸ ತನ್ನ ಶಾಪ್​ನಲ್ಲೇ ಚಿನ್ನ ಅಡವಿರಿಸಿ ಮೋಸ ಶಾಪ್ ಬಂದ್ ಮಾಡಿ ವ್ಯಕ್ತಿ ಪರಾರಿ…

Read More

ಚುನಾವಣೆ ಹೊಸ್ತಿಲಲ್ಲೇ ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಹತ್ಯೆ, ಕೈ-ಕಾಲುಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಶವ ಪತ್ತೆ – Kannada News | Bangladesh Election Eve: Another Hindu Youth Murdered, Sparks Minority Safety Fears

ಢಾಕಾ, ಫೆಬ್ರವರಿ 12: ಬಾಂಗ್ಲಾದೇಶ(Bangladesh)ದ ಸಾರ್ವತ್ರಿಕ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಾಂಗ್ಲಾದೇಶದ ಮೌಲ್ವಿಬಜಾರ್ ಜಿಲ್ಲೆಯಲ್ಲಿ ಉದ್ವಿಗ್ನತೆ ಭುಗಿಲೆದ್ದಿದೆ. ಬುಧವಾರ 28 ವರ್ಷದ ಹಿಂದೂ ವ್ಯಕ್ತಿಯೊಬ್ಬನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕೈಕಾಲುಗಳನ್ನು ಕಟ್ಟಿಹಾಕಿದ ಸ್ಥಿತಿಯಲ್ಲಿ ಆತನ ದೇಹವು ಪತ್ತೆಯಾಗಿದ್ದು, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಮೂಡಿದೆ. ಮೃತರನ್ನು ರತನ್ ಸಾಹುಕರ್ ಎಂದು ಗುರುತಿಸಲಾಗಿದೆ. ರತನ್ ಚಂಪಾ ಪ್ರದೇಶದ ಚಹಾ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು….

Read More

ತೋಷಖಾನಾ ಪ್ರಕರಣ, ಪಾಕ್ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ ಮತ್ತು ಪತ್ನಿ ಬುಶ್ರಾಗೆ 17 ವರ್ಷಗಳ ಜೈಲು ಶಿಕ್ಷೆ – Kannada News | Pak Court Hands 17 Year Jail Term to Imran Khan and Bushra Bibi in Toshakhana Case

ಇಸ್ಲಾಮಾಬಾದ್, ಡಿಸೆಂಬರ್ 20: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮಾಹಿತಿ…

Read More

ಬೆಂಗಳೂರಲ್ಲಿ 16 ದಿನಗಳ ಶಿಶುವಿಗೆ ರೋಬೋಟಿಕ್ ಮೇದೋಜೀರಕ ಗ್ರಂಥಿ ಶಸ್ತ್ರಚಿಕಿತ್ಸೆ

ಬೆಂಗಳೂರು, ಮಾರ್ಚ್​​ 22: ಜನ್ಮತಃ ಹೈಪರ್‌ಇನ್ಸುಲಿನಿಸಮ್ (Congenital Hyperinsulinism) ಎನ್ನುವ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ 16 ದಿನದ ಶಿಶುವಿಗೆ ರೋಬೋಟಿಕ್​​ ಶಸ್ತ್ರಚಿಕಿತ್ಸೆಯನ್ನು ವೈಟ್‌ಫೀಲ್ಡ್‌ನ ಮಣಿಪಾಲ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ತೀವ್ರ ಹೈಪೋಗ್ಲೈಸೀಮಿಯಾ (ರಕ್ತದಲ್ಲಿ ಶರ್ಕರ ಪ್ರಮಾಣ ಕಡಿಮೆಯಾಗುವುದು) ಪರಿಣಾಮವಾಗಿ ಶಿಶುವಿಗೆ ಶಾಶ್ವತ ಮೆದುಳು ಹಾನಿಯ ಅಪಾಯ ಉಂಟಾಗಿತ್ತು. 4.6 ಕೆ.ಜಿ ತೂಕ ಹೊಂದಿದ್ದ ಈ ನವಜಾತ ಶಿಶುವಿಗೆ ಹೆಚ್ಚಿನ ಪ್ರಮಾಣದ ಇಂಟ್ರಾವೀನಸ್ ಗ್ಲೂಕೋಸ್ ನೀಡುತ್ತಿದ್ದರೂ ರಕ್ತದಲ್ಲಿ ಶರ್ಕರ ಪ್ರಮಾಣ ತೀವ್ರವಾಗಿ ಕುಸಿಯುತ್ತಿತ್ತು. ಈ ಹಿನ್ನೆಲೆ ತುರ್ತು ಚಿಕಿತ್ಸೆ…

Read More