ಈ ಆಹಾರಗಳನ್ನು ಸೇವನೆ ಮಾಡುವುದರಿಂದ ಸುಲಭವಾಗಿ ಒತ್ತಡದಿಂದ ಮುಕ್ತಿ ಪಡೆಯಬಹುದು – Kannada News | Foods to eat to relieve stress

ಇತ್ತೀಚಿನ ದಿನಗಳಲ್ಲಿ ಬಹುತೇಕ ಹೆಚ್ಚಿನವರು ಒತ್ತಡದ (stress) ಜೀವನವನ್ನು ನಡೆಸುತ್ತಿದ್ದಾರೆ. ಕೆಲಸ, ವೈಯಕ್ತಿಕ ಚಿಂತೆ, ಕುಟುಂಬದ ಜವಾಬ್ದಾರಿ ಮಾತ್ರವಲ್ಲ ಜೀವನಶೈಲಿ, ಆಹಾರ ಪದ್ಧತಿಗಳು ನಮ್ಮನ್ನು ಮತ್ತಷ್ಟು ಒತ್ತಡಕ್ಕೆ ಸಿಲುಕಿಸುತ್ತವೆ. ಈ ಒತ್ತಡದ ಕಾರಣದಿಂದ ಖುಷಿ ಖುಷಿಯಿಂದ ಜೀವನ ನಡೆಸಲು ಸಾಧ್ಯವಾಗುವುದಿಲ್ಲ. ಅಷ್ಟೇ ಅಲ್ಲದೆ ಈ ಅತಿಯಾದ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಒತ್ತಡದಿಂದ ಮುಕ್ತಿ ಪಡೆದು, ನೆಮ್ಮದಿಯ ಜೀವನ ನಡೆಸಲು ಇಂದಿನಿಂದಲೇ ಈ ಕೆಲವು ಆಹಾರಗಳನ್ನು ಸೇವನೆ ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಆ ಆಹಾರಗಳು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಒತ್ತಡದಿಂದ ಮುಕ್ತಿ ಪಡೆಯಲು ನೀವು ಸೇವನೆ ಮಾಡಬೇಕಾದ ಆಹಾರಗಳಿವು:

ಡಾರ್ಕ್ ಚಾಕೊಲೇಟ್: ಡಾರ್ಕ್ ಚಾಕೊಲೇಟ್ ತಿನ್ನುವುದರಿಂದ ದೇಹದಲ್ಲಿ ಸಂತೋಷದ ಹಾರ್ಮೋನುಗಳು ಬಿಡುಗಡೆಯಾಗುತ್ತವೆ. ಇದು ಮನಸ್ಥಿತಿಯನ್ನು ಸುಧಾರಿಸುತ್ತದೆ. ಇದರಲ್ಲಿ ಒತ್ತಡದ ವಿರುದ್ಧ ಹೋರಾಡಲು ಸಹಾಯ ಮಾಡುವ ಉತ್ಕರ್ಷಣ ನಿರೋಧಕಗಳು ಸಹ ಇರುತ್ತವೆ. ಹೆಚ್ಚು ಡಾರ್ಕ್ ಚಾಕೊಲೇಟ್ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಹಾಗಾಗಿ ಇದನ್ನು ಮಿತವಾಗಿ ಸೇವಿಸಿ.

ಬಾಳೆಹಣ್ಣು: ಬಾಳೆಹಣ್ಣುಗಳು ಸುಲಭವಾಗಿ ಜೀರ್ಣವಾಗುವ ಹಣ್ಣು. ಅಲ್ಲದೆ ಅವು ವಿಟಮಿನ್ ಬಿ6, ಪೊಟ್ಯಾಸಿಯಮ್ ಮತ್ತು ಟ್ರಿಪ್ಟೊಫಾನ್ ಅಂಶವನ್ನು ಒಳಗೊಂಡಿರುತ್ತವೆ, ಇದು ಮನಸ್ಸನ್ನು ಶಾಂತಗೊಳಿಸಲು, ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಒತ್ತಡದಿಂದ ಮುಕ್ತಿ ಪಡೆಯಲು ನೀವು ಬಾಳೆಹಣ್ಣನ್ನು ಸಹ ಸೇವನೆ ಮಾಡಬಹುದು.

ಬಾದಾಮಿ ಮತ್ತು ವಾಲ್ನಟ್ಸ್: ನಟ್ಸ್‌ಗಳು ಉತ್ತಮ ಪ್ರಮಾಣದ ಮೆಗ್ನೀಸಿಯಮ್ ಮತ್ತು ಆರೋಗ್ಯಕರ ಕೊಬ್ಬನ್ನು ಹೊಂದಿರುತ್ತವೆ. ಅವು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ. ವಾಲ್ನಟ್ಸ್ ಮಾನಸಿಕ ಆರೋಗ್ಯಕ್ಕೆ ವಿಶೇಷವಾಗಿ ಪ್ರಯೋಜನಕಾರಿ. ಹಾಗಾಗಿ ನೀವು ಪ್ರತಿನಿತ್ಯ ಬೆಳಗ್ಗೆ ಬಾದಾಮಿ, ವಾಲ್ನಟ್‌ ಸೇವನೆ ಮಾಡಿ.

ಬೆರ್ರಿ  ಹಣ್ಣು: ಬೆರ್ರಿ ಹಣ್ಣುಗಳು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ಹಣ್ಣು. ಅವು ದೇಹವನ್ನು ಒತ್ತಡಗಳಿಂದ ರಕ್ಷಿಸುತ್ತವೆ, ಸಂತೋಷದ ಹಾರ್ಮೋನುಗಳನ್ನು ಸಹ ಬಿಡುಗಡೆ ಮಾಡುತ್ತವೆ. ಆದ್ದರಿಂದ ನಿಯಮಿತವಾಗಿ ಈ ಹಣ್ಣನ್ನು ಸೇವನೆ ಮಾಡಿ.

ಇದನ್ನೂ ಓದಿ: ಸುಲಭವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ ಪ್ರತಿದಿನ ಬೆಳಗ್ಗೆ ನಾಲ್ಕು ಕೆಲಸಗಳನ್ನು ಮಾಡಿ

ಸಿಹಿ ಗೆಣಸು: ಸಿಹಿ ಗೆಣಸಿನಲ್ಲಿ ಗಮನಾರ್ಹ ಪ್ರಮಾಣದ ವಿಟಮಿನ್ ಸಿ ಮತ್ತು ಪೊಟ್ಯಾಸಿಯಮ್ ಇದ್ದು, ಇದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಗ್ರೀನ್‌ ಟೀ: ಗ್ರೀನ್‌ ಟೀ ಎಲ್-ಥಿಯಾನೈನ್ ಎಂಬ ವಿಶಿಷ್ಟ ಸಂಯುಕ್ತವನ್ನು ಹೊಂದಿರುತ್ತದೆ. ಇದು ಮನಸ್ಸನ್ನು ವಿಶ್ರಾಂತಿಗೊಳಿಸಲು ಮತ್ತು ಒತ್ತಡದ ಪರಿಣಾಮಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೆ ಇದರಲ್ಲಿ ಕೆಫೀನ್ ಕೂಡ ಕಡಿಮೆ ಇದ್ದು, ಇದು ನಿಮಗೆ ಉತ್ತಮವಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಸುದೀಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಕೆ ಮತ್ತು ಏಕೆ? – Kannada News | Did Sudeep warns Darshan fans in Hubli program

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಚೆನ್ನೈ ಇನ್ನೂ ಕೆಲವೆಡೆ ಪ್ರಚಾರ ಮುಗಿಸಿರುವ ಸುದೀಪ್ ನಿನ್ನೆ ಹುಬ್ಭಳ್ಳಿಯಲ್ಲಿ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದರು. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಸಿನಿಮಾ ತಂಡವನ್ನು ಕೊಂಡಾಡುವ ಜೊತೆಗೆ ಕೆಲವರಿಗೆ ಎಚ್ಚರಿಕೆ ಸಹ ನೀಡಿದರು. ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧವೊಂದನ್ನು ಸಹ ಮಾಡಬೇಕಿದೆ, ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಮಾತನಾಡಬಾರದು ಎಂದು ಸುಮ್ಮನಿದ್ದೆ, ಆದರೆ ಕೆರಳಿಸಿದರೆ ಸುಮ್ಮನಿರಲ್ಲ’ ಎಂದಿದ್ದಾರೆ.

ಸುದೀಪ್ ಅವರ ಈ ಮಾತುಗಳು ಸಖತ್ ವೈರಲ್ ಆಗಿವೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸುದೀಪ್ ಅವರ ಈ ಮಾತುಗಳಿಗೆ ಅರ್ಥ ಕಲ್ಪಿಸುತ್ತಿದ್ದಾರೆ. ಸುದೀಪ್ ಅವರು ‘45’ ಸಿನಿಮಾದ ಕುರಿತು ಮಾತನಾಡಿದ್ದಾರೆ ಎಂದು ಸಹ ಕೆಲವರು ಹೇಳುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣ ಗಮನಿಸಿದರೆ ಸುದೀಪ್ ಯಾರ ಬಗ್ಗೆ ಮಾತನಾಡಿದ್ದಾರೆ ಎಂಬ ಸುಳಿವು ಸಿಗುತ್ತದೆ.

‘ಮಾರ್ಕ್’ ಸಿನಿಮಾದ ಪ್ರಚಾರ ಆರಂಭವಾದಾಗಿನಿಂದಲೂ ದರ್ಶನ್ ಅಭಿಮಾನಿಗಳು ಸಿನಿಮಾದ ವಿರುದ್ಧ ಕಿತಾಪತಿ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಲೇ ಇದ್ದರು. ‘ಮಾರ್ಕ್’ ಸಿನಿಮಾ ನಿರ್ದೇಶಕ ವಿಜಯ್ ಕಾರ್ತಿಕೇಯ, ‘ಕಾವೇರಿ ತಮಿಳಿಗೆ ಸೇರಬೇಕು’ ಎಂದು ಹೇಳಿದ್ದಾರೆಂದು ನಕಲಿ ಪೋಸ್ಟ್ ತಯಾರಿಸಿ ಹಂಚಿಕೊಂಡು ಸುಳ್ಳು ಸುದ್ದಿ ಹಬ್ಬುವ ಯತ್ನ ಮಾಡಿದ್ದರು. ‘ಡೆವಿಲ್’ ಸಿನಿಮಾದ ಒಂಬತ್ತು ಸಾವಿರ ಪೈರಸಿ ಲಿಂಕ್​​ಗಳನ್ನು ತೆಗೆದು ಹಾಕಿದ್ದೇವೆ, ಈಗ ನಿಮಗೂ ನಾವು ಇದೇ ರೀತಿ ಮಾಡಲಿದ್ದೇವೆ ಎನ್ನುವ ಮೂಲಕ ಪೈರಸಿ ಮಾಡುವ ಬೆದರಿಕೆ ಹಾಕಿದ್ದರು. ಬುಕ್​​ಮೈ ಶೋನಲ್ಲಿ ಸಹ ರೇಟಿಂಗ್ ಕಡಿಮೆ ಮಾಡುವ ಪ್ರಯತ್ನವೂ ನಡೆದಿತ್ತು.

ಇದನ್ನೂ ಓದಿ:ಸುದೀಪ್ ಎದುರೇ ಧ್ರುವಂತ್​​ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ

ಇದೆಲ್ಲವನ್ನೂ ಗಮನಿಸಿದ ಸುದೀಪ್ ಅವರು ಬಹುಷಃ ಹುಬ್ಬಳ್ಳಿಯಲ್ಲಿ ಪರೋಕ್ಷವಾಗಿ ಎಚ್ಚರಿಕೆ ಕೊಟ್ಟಿದ್ದಾರೆ. ಸುದೀಪ್ ಅವರ ಮಾತುಗಳನ್ನೇ ಇರಿಸಿಕೊಂಡು ದರ್ಶನ್ ಅಭಿಮಾನಿಗಳು ಇದೀಗ ಇನ್ನಷ್ಟು ನೆಗೆಟಿವ್ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮಾತ್ರವಲ್ಲದೆ, ‘ಮಾರ್ಕ್’ ಸಿನಿಮಾಕ್ಕೆ ಹಾನಿ ಮಾಡಿಯೇ ಸಿದ್ಧ ಎಂದು ಕೆಲವು ಕಿಡಿಗೇಡಿ ದರ್ಶನ್ ಅಭಿಮಾನಿಗಳು ಪೋಸ್ಟ್​​ಗಳನ್ನು ಹಂಚಿಕೊಂಡಿದ್ದಾರೆ.

Darshan

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಇದೇ ತಿಂಗಳು 11 ರಂದು ಬಿಡುಗಡೆ ಆಗಿತ್ತು. ಮೊದಲ ದಿನ ಉತ್ತಮ ಗಳಿಕೆ ಮಾಡಿದ ‘ಡೆವಿಲ್’ ಆ ನಂತರ ತುಸು ಮಂಕಾಯ್ತು. ಇದೀಗ ಡಿಸೆಂಬರ್ 25ರಂದು ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬುದ್ಧಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅರೆಸ್ಟ್; ಲೈಸನ್ಸ್ ಇಲ್ಲದೆ ಶಾಲೆ ನಡೆಸಿದ್ದ ಶಿಕ್ಷಕರು – Kannada News | Bagalkote: Mentally Challenged Student Assaulted, Divya Jyothi School Teacher Couple arrested

ಬುದ್ದಿಮಾಂದ್ಯ ಮಕ್ಕಳಿಗೆ ಟಾರ್ಚರ್ ಕೊಟ್ಟ ದಂಪತಿ ಅಂದರ್

ಬಾಗಲಕೋಟೆ, ಡಿಸೆಂಬರ್ 21: ಬಾಗಲಕೋಟೆ ನವನಗರದ 54ನೇ ಸೆಕ್ಟರ್​​ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ (Mentally Challenged Student Assaulted) ಬಾಲಕನ ಮೇಲೆ ಶಿಕ್ಷಕ ದಂಪತಿ ಹಲ್ಲೆ ನಡೆಸಿದ ಘಟನೆ ಎಲ್ಲೆಡೆ ಆಕ್ರೋಶ ಹುಟ್ಟಿಹಾಕಿತ್ತು. ದೀಪಕ್ ರಾಠೋಡ್​​(16) ಎಂಬ ಹುಡುಗನ ಮೇಲೆ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ​​ಪತ್ನಿ ಆನಂದಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯವೆಸಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನ ಬಂಧಿಸಿರುವ ಪೊಲೀಸರು, ಸಹ ಶಿಕ್ಷಕರರಾದ ವಿಠಲ್‌ ಮತ್ತು ವಿಶಾಲ್‌ನನ್ನೂ ವಶಕ್ಕೆ ಪಡೆದಿದ್ದಾರೆ.

ದಂಪತಿ ಮೇಲೆ FIR

ಬುದ್ಧಿಮಾಂದ್ಯ ಮಕ್ಕಳ ಮೇಲೆ ಹಿಂಸೆ ನಡೆಸಿ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ದಿವ್ಯಜ್ಯೋತಿ ಬುದ್ಧಿಮಾಂದ್ಯ ರೆಸಿಡೆನ್ಶಿಯಲ್ ಸ್ಕೂಲ್ ಫಾರ್ ಮೆಂಟಲ್ ಚಾಲೆಂಜ್ಡ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನವನಗರ ಪೊಲೀಸ್ ಠಾಣೆಯಲ್ಲಿ ಅಕ್ಷಯ ಹಿಂದೂಲಕರ್, ರವಿಕಾಂತ ಬೂದಿಹಾಳ, ಅಕ್ಷಯ ಪತ್ನಿ ಆನಂದಿ ಹಿಂದೂಲಕರ್ ಹಾಗೂ ವಿಶಾಲ ಬಾಬುರಾವ್ ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಹಲ್ಲೆಗೆ ಒಳಗಾದ ಬುದ್ಧಿಮಾಂದ್ಯ ಬಾಲಕ ದೀಪಕ್ ಅಶೋಕ ರಾಠೋಡನ ತಂದೆ ಅಶೋಕ ರಾಠೋಡ ದೂರು ನೀಡಿದ್ದು, ಭಾರತೀಯ ನ್ಯಾಯ ಸಂಹಿತೆ-2023, ಜೆಜೆ ಕಾಯ್ದೆ, ಆರ್‌ಪಿಡಬ್ಲ್ಯುಡಿ ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ. ಮೂರು ತಿಂಗಳ ಹಿಂದೆ ನಡೆದ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಡಿವೈಎಸ್‌ಪಿ ಗಜಾನನ ಸುತಾರ್ ನೇತೃತ್ವದಲ್ಲಿ ಸ್ಥಳ ಮಹಜರು ಹಾಗೂ ಹಲ್ಲೆಗೆ ಬಳಸಿದ ಸಾಮಗ್ರಿಗಳ ಸೀಜ್ ಕಾರ್ಯ ಕೈಗೊಳ್ಳಲು ಕ್ರಮವಹಿಸಿದ್ದಾರೆ. ಆರೋಪಿಗಳನ್ನು ವಸತಿ ಶಾಲೆಗೆ ಕರೆತಂದು ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದೆ.

ಪರವಾನಗಿ ಇಲ್ಲದೆ ವಸತಿಶಾಲೆ ನಡೆಸುತ್ತಿದ್ದ ದಂಪತಿ

ಈ ಹೇಯ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಗೆ ವಿಕಲಚೇತನ ಕಲ್ಯಾಣಾಧಿಕಾರಿ, ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಭೇಟಿ ನೀಡಿದ್ದಾರೆ.ಈ ವೇಳೆ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ಶಾಲೆ ‌ನಡೆಸಲು ಪರವಾನಗಿ ಪಡೆದಿಲ್ಲವೆಂಬುದು ಗೊತ್ತಾಗಿದೆ. ಶಾಲೆಯಲ್ಲಿ 40 ಮಕ್ಕಳಿದ್ದು ಸದ್ಯ ಎಲ್ರನ್ನೂ ಬಾಲಮಂದಿರಕ್ಕೆ ಶಿಫ್ಟ್‌ ಮಾಡಲಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ

ತಕ್ಷಣವೇ ವಸತಿ ಶಾಲೆ ಮುಚ್ಚಿ- ಲಕ್ಷ್ಮೀ ಹೆಬ್ಬಾಳ್ಕರ್

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ಅತ್ಯಂತ ಅಮಾನವೀಯ ಹಾಗೂ ಸಮಾಜಕ್ಕೆ ಕಳಂಕ ತರುವ ಘಟನೆ ಎಂದು ಹೇಳಿದ್ದಾರೆ. ಸರ್ಕಾರದ ಅನುಮತಿ ಇಲ್ಲದೇ ಅನಧಿಕೃತವಾಗಿ ಶಾಲೆ ನಡೆಸಲಾಗುತ್ತಿದ್ದು, ತಕ್ಷಣವೇ ವಸತಿ ಶಾಲೆ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದರು. ಮಕ್ಕಳ ರಕ್ಷಣಾ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಪೋಷಕರ ಅನುಮತಿ ಮೇರೆಗೆ ಮಕ್ಕಳನ್ನು ಸರ್ಕಾರಿ ಅನುದಾನಿತ ರಕ್ಷಣಾ ನಿಲಯಗಳಿಗೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದ್ದಾರೆ.

ಮಕ್ಕಳನ್ನು ಕರೆದೊಯ್ದ ಪೋಷಕರು

ಶಿಕ್ಷಕ ದಂಪತಿಗಳ ರಾಕ್ಷಸಿ ಕೃತ್ಯ ಬಹಿರಂಗವಾಗುತ್ತಿದ್ದಂತೆ ಶಾಲೆಯಲ್ಲಿದ್ದ ಇತರೆ ಬುದ್ಧಿಮಾಂದ್ಯ ಮಕ್ಕಳ ಪೋಷಕರು ವಿವಿಧ ಊರುಗಳಿಂದ ಆಗಮಿಸಿ ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಒಟ್ಟು 32 ಮಕ್ಕಳಿರುವ ಈ ವಸತಿ ಶಾಲೆಯಿಂದ ಈವರೆಗೆ 11 ಮಕ್ಕಳನ್ನು ಪೋಷಕರೊಂದಿಗೆ ಕಳುಹಿಸಿಕೊಡಲಾಗಿದೆ ಎಂದು ಹೇಳಲಾಗಿದೆ. ಶಾಲೆ ಎದುರು ಜಮಾಯಿಸಿದ ಪೋಷಕರು ಕಣ್ಣೀರು ಹಾಕುತ್ತಾ ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ಕೃತ್ಯಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 12:47 pm, Sun, 21 December 25

Source link

ಮಹಾರಾಷ್ಟ್ರ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿಗೆ ಅಮೋಘ ಮುನ್ನಡೆ – Kannada News | BJP led Mahayuti win big in Maharashtra local bodies elections

ಮುಂಬೈ, ಡಿಸೆಂಬರ್ 21: ಮಹಾರಾಷ್ಟ್ರದ ಸ್ಥಳೀಯ ನಗರ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ಪಡೆದಿದೆ. ಒಟ್ಟು 246 ನಗರ ಪಾಲಿಕೆ ಹಾಗೂ 42 ನಗರ ಪಂಚಾಯಿತಿಗಳಿಗೆ ನಡೆದ ಚುನಾವಣೆಯಲ್ಲಿ (Maharashtra Urban Local Bodies Elections) ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಹೆಚ್ಚಿನ ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿವೆ. ಮಹಾಯುತಿ ಮೈತ್ರಿಕೂಟ (Mahayuti) 214 ಸ್ಥಳೀಯ ಸಂಸ್ಥೆಗಳಲ್ಲಿ ಮುನ್ನಡೆ ಹೊಂದಿದೆ. ವಿಪಕ್ಷಗಳ ಕೂಟವಾದ ಮಹಾ ವಿಕಾಸ್ ಆಘಾಡಿ (MVA) ಮುನ್ನಡೆ ಹೊಂದಿರುವುದು ಕೇವಲ 52 ಸ್ಥಳೀಯ ಸಂಸ್ಥೆಗಳಲ್ಲಿ.

ವಿವಿಧ ನಗರ ಸಂಸ್ಥೆಗಳಲ್ಲಿನ 6,859 ಕ್ಷೇತ್ರಗಳಿಗೆ ಡಿಸೆಂಬರ್ 2 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಇವತ್ತು ಮತ ಎಣಿಕೆ ನಡೆಯುತ್ತಿದ್ದು ಆರಂಭದಿಂದಲೂ ಬಿಜೆಪಿ ನೇತೃತ್ವದ ಮೈತ್ರಿಕೂಟ ಹೆಚ್ಚು ಮುನ್ನಡೆ ಕಾಯ್ದುಕೊಂಡಿದೆ. 6,859 ಸ್ಥಾನಗಳ ಪೈಕಿ 3,120 ಕ್ಷೇತ್ರಗಳಲ್ಲಿ ಬಿಜೆಪಿಯೊಂದೇ ಮುನ್ನಡೆಯಲ್ಲಿದೆ. ಅದರ ಮಿತ್ರ ಪಕ್ಷಗಳಾದ ಶಿವಸೇನೆ ಮತ್ತು ಎನ್​ಸಿಪಿ ಕ್ರಮವಾಗಿ 600 ಮತ್ತು 200 ಸ್ಥಾನಗಳಲ್ಲಿ ಮುನ್ನಡೆ ಹೊಂದಿವೆ. ಅರ್ಧಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಮಹಾಯುತಿ ಮೇಲುಗೈ ಸಾಧಿಸಿದೆ.

ಇದನ್ನೂ ಓದಿ: ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ

ಇನ್ನು, ವಿಪಕ್ಷಗಳಾದ ಶಿವಸೇನಾ (ಉದ್ಭವ್ ಠಾಕ್ರೆ ಬಣ), ಕಾಂಗ್ರೆಸ್ ಹಾಗೂ ಎನ್​ಸಿಪಿ (ಶರದ್ ಪವಾರ್ ಬಣ) ಕ್ರಮವಾಗಿ 145, 105 ಮತ್ತು 122 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳಲು ಯಶಸ್ವಿಯಾಗಿವೆ.

2024ರ ವಿಧಾನಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಮಹಾಯುತಿಯ ಸರ್ಕಾರವು ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿರುವುದಕ್ಕೆ ಈ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ

ಆದರೆ, ಮಹಾರಾಷ್ಟ್ರ ರಾಜ್ಯದಲ್ಲಿ ಕೃಷಿ ಕ್ಷೇತ್ರದಲ್ಲಿ ಬಿಕ್ಕಟ್ಟು ಉದ್ಭವಿಸಿದೆ ಎಂಬುದು, ಹಾಗೂ ಮಹಿಳೆಯರು ಮತ್ತು ರೈತರ ಕಲ್ಯಾಣ ಯೋಜನೆಗಳಿಗೆ ಸರ್ಕಾರದಿಂದ ಸರಿಯಾದ ರೀತಿಯಲ್ಲಿ ಸಹಾಯ ಧನ ಬಿಡುಗಡೆ ಆಗುತ್ತಿಲ್ಲ ಎನ್ನುವ ಆರೋಪಗಳು ಸರ್ಕಾರದ ಜನಪ್ರಿಯತೆಯನ್ನು ಕುಂದಿಸಿರಬಹುದು ಎನ್ನುವ ಭಾವನೆ ಇತ್ತು. ವಿಪಕ್ಷಗಳು ಇದೇ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಿದ್ದವು. ಹೀಗಾಗಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಹಾ ವಿಕಾಸ್ ಆಘಾಡಿ ಪೂರಕ ಗೆಲುವನ್ನು ನಿರೀಕ್ಷಿಸಿತ್ತು. ಆದರೆ, ಈ ನಿರೀಕ್ಷೆ ಈಡೇರಿಲ್ಲ. ಮತದಾರರು ಮತ್ತೊಮ್ಮೆ ಮಯಾಯುತಿ ಕೈಹಿಡಿದಿರುವಂತೆ ಫಲಿತಾಂಶದ ಟ್ರೆಂಡ್ ಇದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಆನೇಕಲ್ ಸರಣಿ ಅಪಘಾತ: 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ – Kannada News | Anekal Container Truck Serial Accident: Drunk Driver Hits more than 20 Vehicles

ಆನೇಕಲ್, ಡಿಸೆಂಬರ್ 21: ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರಿಂದ 14 ಕಿಮೀ ತಪ್ಪಿಸಿಕೊಂಡು ಹೋದ ಲಾರಿ ಚಾಲಕ, ಚಂದಾಪುರದಲ್ಲಿ ಸಾರ್ವಜನಿಕ ಕೈಗೆ ಸಿಕ್ಕಿಬಿದಿದ್ದಾನೆ. ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್​​ನ್ಯೂಸ್​​​: ಮುಂದಿನ ವಾರ ಹಣ ಬಿಡುಗಡೆ ಎಂದ ಸಚಿವೆ ಹೆಬ್ಬಾಳ್ಕರ್ – Kannada News | Good News for Gruha Lakshmi Scheme Beneficiaries: Minister Hebbalkar Says Funds to Be Released Next Week

ಬೆಳಗಾವಿ, ಡಿಸೆಂಬರ್​ 21: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್​ನ್ಯೂಸ್​​ ನೀಡಿದ್ದಾರೆ. ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತು ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿದೆ. ಮುಂದಿನ ವಾರ ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ಆಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಸತ್ತವರ ಖಾತೆ​​ಗೂ ಗೃಹಲಕ್ಷ್ಮೀ ಯೋಜನೆ ಹಣಕ್ಕೆ ಬ್ರೇಕ್​​

ಇನ್ನು ಸತ್ತವರ ಖಾತೆ​​ಗೂ ಗೃಹಲಕ್ಷ್ಮೀ ಯೋಜನೆ ಹಣ ಸಂದಾಯ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಸಿಎಸ್​ ನೇತೃತ್ವದಲ್ಲಿ ಎರಡು ಬಾರಿ ಸಭೆ ಮಾಡಲಾಗಿದೆ. ಸತ್ತವರ ಅಕೌಂಟ್​​ಗೆ ಹಣ ಸಂದಾಯವಾದರೆ ತಕ್ಷಣ ಗೊತ್ತಾಗಲ್ಲ. ಈಗ ಸಾಫ್ಟ್​ವೇರ್​​​ ಅಭಿವೃದ್ಧಿ ಅಳವಡಿಕೆ ಮಾಡಿದ್ದೇವೆ. ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ. ಹೀಗಾಗಿ ಅದನ್ನ ಸದ್ಯಕ್ಕೆ ತಡೆಹಿಡಿದಿದ್ದೇವೆ. ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್​​ಗೆ ಸೂಚನೆ ಕೊಟ್ಟಿದ್ದೇವೆ. ಸಿಎಸ್ ಬ್ಯಾಂಕ್​​ಗೆ ನೋಟಿಸ್ ಕೊಟ್ಟಿದ್ದಾರೆ, ಲೇಟರ್ ಬರೆದಿದ್ದಾರೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ ಇದೆ

ಬೆಳಗಾವಿ ಜಿಲ್ಲಾ ವಿಭಜನೆ ಕೂಗು ತಣ್ಣಗಾಯಿತಾ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಮನಸ್ಸಿನಲ್ಲಿ ಜಿಲ್ಲೆ ವಿಭಜನೆ ಮಾಡಬೇಕು ಅನ್ನೋದು ಇದೆ. ಆಡಳಿತಾತ್ಮಕ, ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆ ಆಗಬೇಕಿದೆ. ಬೆಳಗಾವಿ ತಾಲೂಕಿನಲ್ಲಿ ಹನ್ನೊಂದೂವರೆ ಲಕ್ಷ ಜನಸಂಖ್ಯೆ ಇದೆ. ಇಷ್ಟು ಜನಸಂಖ್ಯೆಗೆ ಒಬ್ಬ ತಹಶೀಲ್ದಾರ್​, ಬಹಳ ತೊಂದರೆ ಆಗುತ್ತೆ ಎಂದರು.

ಇದನ್ನೂ ಓದಿ: ಗೃಹ’ಲಕ್ಷ್ಮೀ’ ವಿವಾದ: ಹಣ ಪಾವತಿ ಆಗದಿರೋದ್ಯಾಕೆ? ಬಾಕಿ ಮೊತ್ತ ಜಮೆ ಯಾವಾಗ?; ಇಲ್ಲಿದೆ ಮಾಹಿತಿ

ಬೆಳಗಾವಿ ಜಿಲ್ಲೆಯಲ್ಲಿ 19 ತಾಲೂಕುಗಳು ಆಗುವ ಸಾಧ್ಯತೆ ಇದೆ. ಜಿಲ್ಲೆ ವಿಭಜನೆ ಘೋಷಣೆ ಮಾಡುವ ಮನಸ್ಸಿನಿಂದಲೇ ಸಿಎಂ ಬಂದಿದ್ದರು. ಬಹಳಷ್ಟು ಜನರು ನಿಯೋಗ ಬಂದಿದ್ದರಿಂದ ಚಿಂತನೆ ಮಾಡಿಲ್ಲ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

Vande Bharat Pilot: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪೈಲಟ್‌ ಸಂಬಳ ಎಷ್ಟು? ಆಯ್ಕೆ ಪ್ರಕ್ರಿಯೆ ಮತ್ತು ಜವಾಬ್ದಾರಿ ತಿಳಿಯಿರಿ – Kannada News | Vande Bharat Pilot Salary: How to Become a High Speed Train Driver

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಈಗ ದೇಶಾದ್ಯಂತ ಓಡುತ್ತಿವೆ. ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಿಸುವ ಈ ಹೈ-ಸ್ಪೀಡ್ ರೈಲುಗಳನ್ನು ಓಡಿಸುವುದು ಸಾಮಾನ್ಯ ಕೆಲಸವಲ್ಲ. ರೈಲ್ವೆ ಈ ಜವಾಬ್ದಾರಿಗಳನ್ನು ಹೆಚ್ಚು ಕೌಶಲ್ಯಪೂರ್ಣ ಮತ್ತು ಅನುಭವಿ ಪೈಲಟ್‌ಗಳಿಗೆ ಮಾತ್ರ ವಹಿಸುತ್ತದೆ. ಆದ್ದರಿಂದ ವಂದೇ ಭಾರತ್ ಪೈಲಟ್‌ನ ಸಂಬಳ ಎಷ್ಟು? ಅವರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ವೃತ್ತಿಜೀವನ ಆರಂಭ:

ಒಬ್ಬ ವ್ಯಕ್ತಿಯು ನೇರವಾಗಿ ವಂದೇ ಭಾರತ್ ರೈಲಿಗೆ ಪೈಲಟ್ ಆಗಲು ಸಾಧ್ಯವಿಲ್ಲ. ಇದಕ್ಕಾಗಿ ಒಂದು ವ್ಯವಸ್ಥಿತ ಪ್ರಕ್ರಿಯೆ ಇದೆ:

  • ಸಹಾಯಕ ಲೋಕೋ ಪೈಲಟ್: ವೃತ್ತಿಜೀವನ ಆರಂಭವಾಗುವುದು ಸಹಾಯಕ ಲೋಕೋ ಪೈಲಟ್ ಆಗಿ. ಅವರು ಹಿರಿಯ ಪೈಲಟ್‌ಗಳಿಗೆ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಾರೆ.
  • ಲೋಕೋ ಪೈಲಟ್ (ಶಂಟಿಂಗ್/ಸರಕು ಸಾಗಣೆ): ಯಾರ್ಡ್‌ಗಳಲ್ಲಿ ರೈಲುಗಳನ್ನು ಸರಿಹೊಂದಿಸಿ ನಂತರ ಸರಕು ರೈಲುಗಳನ್ನು ಓಡಿಸುವ ಮೂಲಕ ಅನುಭವವನ್ನು ಪಡೆಯುತ್ತಾರೆ.
  • ಪ್ರಯಾಣಿಕ – ಎಕ್ಸ್‌ಪ್ರೆಸ್: ದೀರ್ಘಾವಧಿಯ ಅನುಭವದ ನಂತರ, ಪ್ರಯಾಣಿಕ ರೈಲುಗಳನ್ನು ಮತ್ತು ನಂತರ ವಂದೇ ಭಾರತ್‌ನಂತಹ ಪ್ರೀಮಿಯಂ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ಅವಕಾಶ ಸಿಗುತ್ತದೆ.
  • ಮುಖ್ಯ ಲೋಕೋ ಇನ್ಸ್‌ಪೆಕ್ಟರ್: ಇದು ಅತ್ಯುನ್ನತ ಮಟ್ಟ. ಅವರು ರೈಲು ಕಾರ್ಯಾಚರಣೆ ಮತ್ತು ತರಬೇತಿಯನ್ನು ಮೇಲ್ವಿಚಾರಣೆ ಮಾಡುತ್ತಾರೆ.

ವಂದೇ ಭಾರತ್ ಪೈಲಟ್‌ಗಳ ಜವಾಬ್ದಾರಿಗಳು:

ಈ ಪೈಲಟ್‌ಗಳ ಜವಾಬ್ದಾರಿಗಳು ಕೇವಲ ರೈಲು ಪ್ರಾರಂಭಿಸುವುದಲ್ಲ, ಅವರು ಪ್ರಮುಖ ಜವಾಬ್ದಾರಿಗಳನ್ನು ಸಹ ನಿರ್ವಹಿಸುತ್ತಾರೆ.

  • ಆಧುನಿಕ ಲೋಕೋಮೋಟಿವ್ ಮತ್ತು ಗಣಕೀಕೃತ ಎಂಜಿನ್ ವ್ಯವಸ್ಥೆಗಳ ಮೇಲ್ವಿಚಾರಣೆ.
  • ರೈಲಿನ ವೇಗವನ್ನು ನಿಯಂತ್ರಿಸುವುದು ಮತ್ತು ಬ್ರೇಕಿಂಗ್ ವ್ಯವಸ್ಥೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವುದು.
  • ನಿಲ್ದಾಣದ ಸಿಬ್ಬಂದಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕ.
  • ಯಾವುದೇ ತಾಂತ್ರಿಕ ಸಮಸ್ಯೆಗಳಿಗೆ ತಕ್ಷಣ ಪ್ರತಿಕ್ರಿಯಿಸಿ ಮತ್ತು ಸುರಕ್ಷತಾ ನಿರ್ಧಾರಗಳನ್ನು ತೆಗೆದುಕೊಳ್ಳಿ.

ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾದಲ್ಲಿ 514 ಕ್ರೆಡಿಟ್ ಆಫೀಸರ್ ಹುದ್ದೆಗೆ ನೇಮಕಾತಿ

ಸಂಬಳ ಮತ್ತು ಭತ್ಯೆಗಳು:

7ನೇ ವೇತನ ಆಯೋಗದ ಪ್ರಕಾರ, ಲೋಕೋ ಪೈಲಟ್‌ಗಳಿಗೆ ಉತ್ತಮ ಸಂಬಳವಿದೆ.

  • ಹೊಸ ALP: ಆರಂಭಿಕ ಮೂಲ ವೇತನ 19,900 ರೂ.ಗಳಾಗಿದ್ದು, ಒಟ್ಟು ಭತ್ಯೆಗಳು 44,000 ರೂ.ಗಳಿಂದ 51,000 ರೂ.ಗಳವರೆಗೆ ಇರಬಹುದು.
  • ವಂದೇ ಭಾರತ್ ಪೈಲಟ್: ಈ ಪ್ರೀಮಿಯಂ ರೈಲನ್ನು ನಿರ್ವಹಿಸುವ ಹಿರಿಯ ಪೈಲಟ್‌ಗಳ ಮೂಲ ವೇತನವು ರೂ. 65,000 ರಿಂದ ರೂ. 85,000 ವರೆಗೆ ಇರುತ್ತದೆ.
  • ಹಿರಿಯ ಪೈಲಟ್‌ಗಳು: 30 ವರ್ಷಗಳ ಅನುಭವ ಹೊಂದಿರುವವರು ಅಥವಾ ಮುಖ್ಯ ಲೋಕೋ ಇನ್ಸ್‌ಪೆಕ್ಟರ್ (CLI) ಮಟ್ಟದ ಅಧಿಕಾರಿಗಳು ಎಲ್ಲಾ ಭತ್ಯೆಗಳನ್ನು ಒಳಗೊಂಡಂತೆ ತಿಂಗಳಿಗೆ ರೂ. 2,00,000 ದಿಂದ ರೂ. 2,50,000 ವರೆಗೆ ಗಳಿಸುತ್ತಾರೆ.

ಹೆಚ್ಚುವರಿ ಪ್ರಯೋಜನಗಳು:

ರಾತ್ರಿ ಕೆಲಸ ಮಾಡುವವರಿಗೆ ಸಂಬಳದ ಜೊತೆಗೆ ಟಿಎ, ಡಿಎ, ಮನೆ ಬಾಡಿಗೆ ಮತ್ತು ರಾತ್ರಿ ಕರ್ತವ್ಯ ಭತ್ಯೆಗಳನ್ನು ಪಡೆಯುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ, ವಂದೇ ಭಾರತ್‌ನಂತಹ ಪ್ರತಿಷ್ಠಿತ ರೈಲನ್ನು ಓಡಿಸುವುದು ಅವರಿಗೆ ದೊಡ್ಡ ಗೌರವದ ಕೆಲಸವೂ ಕೂಡ ಹೌದು.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು – Kannada News | Gilli Nata friend Kavya Shaiva says Rakshitha Shetty has over confidence in BBK 12

ಈ ಬಾರಿ ಬಿಗ್ ಬಾಸ್ ಗೆಲ್ಲೋದು ಯಾರು ಎಂಬ ಚರ್ಚೆ ಜೋರಾಗಿದೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ವಿನ್ ಆಗುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಕಾಮಿಡಿ ಮೂಲಕ ಅವರು ಎಲ್ಲರನ್ನೂ ರಂಜಿಸುತ್ತಿದ್ದಾರೆ. ವೀಕ್ಷಕರಿಗೆ ಅವರ ಕಾಮಿಡಿ ಇಷ್ಟ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹತ್ತಿರ ಆಗುತ್ತಿರುವಾಗ ಪೈಪೋಟಿ ಹೆಚ್ಚಿದೆ. ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ಅವರಿಗೆ ಕಾವ್ಯ ಶೈವ ಮಾತಿನ ಪಂಚ್ ನೀಡಿದ್ದಾರೆ. ‘ಬಿಗ್ ಬಾಸ್ ಮನೆಯಲ್ಲಿ ಅವಳು ಇಲ್ಲದೇ ಸ್ಪಾರ್ಕ್ ಇರಲ್ಲ ಎಂಬ ಭ್ರಮೆಯಲ್ಲಿ ಇದ್ದಾಳೆ. ಕಾನ್ಫಿಡೆನ್ಸ್ ಇರಬೇಕು. ಆದರೆ ಅವಳಿಗೆ ಓವರ್ ಕಾನ್ಫಿಡೆನ್ಸ್ ಇದೆ’ ಎಂದು ಕಿಚ್ಚ ಸುದೀಪ್ ಎದುರಲ್ಲೇ ಕಾವ್ಯ (Kavya Shaiva) ಅವರು ಹೇಳಿದ್ದಾರೆ. ಭಾನುವಾರದ (ಡಿ.21) ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್ – Kannada News | Sameer Minhas brings up a superb Century Against India

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್ ಫೈನಲ್​ ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಮೀರ್ ಮಿನ್​ಹಾಸ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡಕ್ಕೆ ಸಮೀರ್ ಮಿನ್​ಹಾಸ್ ಉತ್ತಮ ಆರಂಭ ಒದಗಿಸಿದರು.

ಆರಂಭದಿಂದಲೇ ಅತ್ಯುತ್ತಮ ಹೊಡೆತಗಳೊಂದಿಗೆ ಗಮನ ಸೆಳೆದ ಸಮೀರ್ ಮಿನ್​ಹಾಸ್ ಕೇವಲ 71 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದ ಬಳಿಕ ಕೂಡ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ ಸಮೀರ್ 113 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 17 ಫೋರ್​ಗಳೊಂದಿಗೆ 172 ರನ್ ಬಾರಿಸಿದರು.

ಈ ಸ್ಫೋಟಕ ಸೆಂಚುರಿ ನೆರವಿನೊಂದಿಗೆ ಪಾಕಿಸ್ತಾನ್ ತಂಡವು 45 ಓವರ್​ಗಳ ಮುಕ್ತಾಯದ ವೇಳೆಗೆ 6 ವಿಕೆಟ್ ಕಳೆದುಕೊಂಡು 319 ರನ್ ಕಲೆಹಾಕಿದೆ.

ಭಾರತ ಅಂಡರ್-19 ಪ್ಲೇಯಿಂಗ್ 11: ಆಯುಷ್ ಮ್ಹಾತ್ರೆ (ನಾಯಕ),  ವೈಭವ್ ಸೂರ್ಯವಂಶಿ , ಆರೋನ್ ಜಾರ್ಜ್ , ವಿಹಾನ್ ಮಲ್ಹೋತ್ರಾ , ವೇದಾಂತ್ ತ್ರಿವೇದಿ , ಅಭಿಜ್ಞಾನ್ ಕುಂದು (ವಿಕೆಟ್ ಕೀಪರ್) , ಕಾನಿಷ್ಕ್ ಚೌಹಾಣ್ , ಹೆನಿಲ್ ಪಟೇಲ್ , ಖಿಲನ್ ಪಟೇಲ್ , ದೀಪೇಶ್ ದೇವೇಂದ್ರನ್ , ಕಿಶನ್ ಕುಮಾರ್ ಸಿಂಗ್.

ಪಾಕಿಸ್ತಾನ್ ಅಂಡರ್-19 ಪ್ಲೇಯಿಂಗ್ 11: ಸಮೀರ್ ಮಿನ್​ಹಾಸ್,  ಹಮ್ಝ ಝಹೂರ್ (ವಿಕೆಟ್ ಕೀಪರ್) , ಉಸ್ಮಾನ್ ಖಾನ್ ,
ಅಹ್ಮದ್ ಹುಸೇನ್ , ಫರ್ಹಾನ್ ಯೂಸುಫ್ (ನಾಯಕ) , ಹುಜೈಫಾ ಅಹ್ಸಾನ್ , ನಿಖಾಬ್ ಶಫೀಕ್ , ಮೊಹಮ್ಮದ್ ಶಯಾನ್ , ಅಬ್ದುಲ್ ಸುಭಾನ್ , ಮೊಹಮ್ಮದ್ ಸಯ್ಯಮ್ , ಅಲಿ ರಾಝ.

Source link

ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ – Kannada News | Indian Railways hikes fares for long distance travel, revised rates from Dec 26th

ನವದೆಹಲಿ, ಡಿಸೆಂಬರ್ 21: ರೈಲು ಪ್ರಯಾಣ ಮುಂದಿನ ದಿನಗಳಲ್ಲಿ ತುಸು ದುಬಾರಿಯಾಗಲಿದೆ. ರೈಲು ಪ್ರಯಾಣ ಟಿಕೆಟ್ ದರಗಳಲ್ಲಿ ಅಲ್ಪ ಏರಿಕೆ ಮಾಡಲು ಭಾರತೀಯ ರೈಲ್ವೇಸ್ (Indian Railways) ನಿರ್ಧರಿಸಿದೆ. ದೂರ ಪ್ರಯಾಣದ ದರಗಳನ್ನು ಏರಿಕೆ ಮಾಡಲಾಗುತ್ತಿದೆ. ಸಬರ್ಬನ್ ರೈಲುಗಳ ದರಗಳಲ್ಲಿ ಬದಲಾವಣೆ ಇರುವುದಿಲ್ಲ. ಡಿಸೆಂಬರ್ 26ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ.

ವರದಿ ಪ್ರಕಾರ 215 ಕಿಮೀ ದೂರದವರೆಗಿನ ಜನರಲ್ ಕ್ಲಾಸ್ ಕಂಪಾರ್ಟ್ಮೆಂಟ್​ಗಳ ಟಿಕೆಟ್ ಬೆಲೆಗಳಲ್ಲಿ ಬದಲಾವಣೆ ಇರುವುದಿಲ್ಲ. ಅದಕ್ಕೂ ಹೆಚ್ಚಿನ ದೂರದ ಪ್ರಯಾಣವಾದರೆ, 215 ಕಿಮೀ ಮೇಲ್ಪಟ್ಟಿರುವ ಪ್ರತೀ ಒಂದು ಕಿಮೀಗೆ ಒಂದು ಪೈಸೆಯಷ್ಟು ದರ ಏರಿಕೆ ಆಗಲಿದೆ. ಅಂದರೆ ಪ್ರತೀ ನೂರು ಕಿಮೀ ಹೆಚ್ಚುವರಿ ದೂರಕ್ಕೆ ಒಂದು ರೂನಷ್ಟು ಬೆಲೆ ಏರಿಕೆ ಆಗಲಿದೆ. ಇದು ಜನರಲ್ ಕ್ಲಾಸ್ ಟಿಕೆಟ್​ಗಳಿಗೆ ಮಾಡಲಾಗಿರುವ ಏರಿಕೆ.

ಇದನ್ನೂ ಓದಿ: ಮೊಟ್ಟೆ ಸೇವನೆಯಿಂದ ಕ್ಯಾನ್ಸರ್​ ಬರಲ್ಲ: FSSAI ಸ್ಪಷ್ಟನೆ

ಇನ್ನು, ಎಸಿ ಕೋಚ್​ಗಳಿಗೆ ಟಿಕೆಟ್ ದರ ಪ್ರತೀ ಕಿಮೀಗೆ ಎರಡು ಪೈಸೆಯಷ್ಟು ಏರಿಕೆ ಮಾಡಲಾಗಿದೆ. ಮೇಲ್ ಟ್ರೇನ್​ಗಳು ಅಥವಾ ಎಕ್ಸ್​ಪ್ರೆಸ್ ಟ್ರೈನುಗಳಲ್ಲಿನ ನಾನ್ ಎಸಿ ಕೋಚ್​ಗಳಿಗೂ ಟಿಕೆಟ್ ದರ 2 ಪೈಸೆ ಏರಿಕೆ ಮಾಡಲಾಗಿದೆ. ಈ ಕೋಚ್​ಗಳಲ್ಲಿ ಟಿಕೆಟ್ ದರ ಪ್ರತೀ 50 ಕಿಮೀ ದೂರಕ್ಕೆ 1 ಒಂದು ರೂ ಹೆಚ್ಚುವರಿ ದರ ಸೇರ್ಪಡೆಯಾಗುತ್ತದೆ.

ಈ ಪರಿಷ್ಕೃತ ಟಿಕೆಟ್ ದರದ ನಂತರವೂ ಭಾರತದಲ್ಲಿ ರೈಲು ಪ್ರಯಾಣ ಇನ್ನಿತರ ಸಾರಿಗೆ ವ್ಯವಸ್ಥೆಗಿಂತ ಕಡಿಮೆಯೇ ಇರುತ್ತದೆ. ಈ ಅಲ್ಪ ಏರಿಕೆಯಿಂದ ಭಾರತೀಯ ರೈಲ್ವೆಗೆ ವಾರ್ಷಿಕವಾಗಿ 600 ಕೋಟಿ ರೂನಷ್ಟು ಆದಾಯ ಹೆಚ್ಚಳ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಡಾವೋಸ್ ಸಭೆಗೆ ಭಾರತದಿಂದ ಪ್ರಬಲ ತಂಡ; 100ಕ್ಕೂ ಹೆಚ್ಚು ಉದ್ಯಮಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ನಿಯೋಗದಲ್ಲಿ

ರೈಲ್ವೇಸ್​ನ ಹೆಚ್ಚುವರಿ ವೆಚ್ಚ ಸರಿದೂಗಿಸಲು ಟಿಕೆಟ್ ದರ ಏರಿಕೆ

ಭಾರತೀಯ ರೈಲ್ವೇಸ್ ಸಂಸ್ಥೆ ಕಳೆದ ಒಂದು ದಶಕದಲ್ಲಿ ತನ್ನ ಜಾಲವನ್ನು ಸಾಕಷ್ಟು ವಿಸ್ತರಿಸಿದೆ. ಟ್ರೈನುಗಳ ಸಂಖ್ಯೆ ಹೆಚ್ಚಿಸಿದೆ. ಮಾನವ ಸಂಪನ್ಮೂಲಗಳನ್ನೂ ಹೆಚ್ಚಿಸಿದೆ. ಮಾನವ ಸಂಪನ್ಮೂಲ ವೆಚ್ಚ 1,15,000 ಕೋಟಿ ರೂಗೆ ಏರಿದೆ. ಪಿಂಚಣಿ ವೆಚ್ಚ 60,000 ಕೋಟಿ ರೂ ಆಗಿದೆ. 2024-25ರಲ್ಲಿ ಅದರ ಕಾರ್ಯಾಚರಣೆಗಳ ಒಟ್ಟೂ ವೆಚ್ಚ 2.63 ಲಕ್ಷ ಕೋಟಿ ರೂಗೆ ಏರಿದೆ. ಈ ವೆಚ್ಚ ಹೆಚ್ಚಳವನ್ನು ಸರಿದೂಗಿಸಲು ರೈಲ್ವೇಸ್ ಟಿಕೆಟ್ ಪ್ರಯಾಣ ದರವನ್ನು ಏರಿಸುತ್ತಿದೆ. ಜುಲೈ ತಿಂಗಳಲ್ಲೂ ರೈಲ್ವೆ ಟಿಕೆಟ್ ಪ್ರಯಾಣ ದರವನ್ನು ಪರಿಷ್ಕರಿಸಿ ಪೈಸೆ ಲೆಕ್ಕದಲ್ಲಿ ಬೆಲೆ ಏರಿಕೆ ಮಾಡಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Exit mobile version