Headlines

UPSC NDA NA I 2026: ಭೂಸೇನೆ, ನೌಕಾಪಡೆ, ವಾಯುಪಡೆಯಲ್ಲಿ 394 ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು – Kannada News | UPSC NDA NA I 2026 Notification: Apply for Army, Navy, Air Force Officer Posts

ಕೇಂದ್ರ ಲೋಕಸೇವಾ ಆಯೋಗ (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ನೌಕಾ ಅಕಾಡೆಮಿ ಪರೀಕ್ಷೆ (NDA & NA) I, 2026 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಅಧಿಕಾರಿಯಾಗಿ ದೇಶಕ್ಕೆ ಸೇವೆ ಸಲ್ಲಿಸುವ ಕನಸು ಕಾಣುವ ದೇಶದ ಯುವಕರಿಗೆ ಅರ್ಜಿ ಸಲ್ಲಿಸಲು ಇದೊಂದು ಸುವರ್ಣವಕಾಶ. ಈ ಬಾರಿ ಯುಪಿಎಸ್‌ಸಿ ಒಟ್ಟು 394 ಹುದ್ದೆಗಳನ್ನು ಪ್ರಕಟಿಸಿದ್ದು, ಇದರಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ, ಎನ್‌ಡಿಎಯ 157 ನೇ ಕೋರ್ಸ್‌ಗೆ…

Read More

Video: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಅಂಚೆ ಚೀಟಿ ಬಿಡುಗಡೆ, ಸಾಂಪ್ರದಾಯಿಕ ಔಷಧಗಳ ಬಗ್ಗೆ ಪ್ರಧಾನಿ ಮೋದಿ ಮಾತು – Kannada News | Ashwagandha: PM Modi Highlights Traditional Medicine Benefits at WHO Summit

ನವದೆಹಲಿ, ಡಿಸೆಂಬರ್ 20: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಕುರಿತ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಯಿತು. ಅಷ್ಟೇ ಅಲ್ಲದೆ ಸಾಂಪ್ರದಾಯಿಕ ಔಷಧ ಅಶ್ವಗಂಧದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವು ಮಾಹಿತಿಗಳನ್ನು ನೀಡಿದ್ದಾರೆ. ಸಾಂಪ್ರದಾಯಿಕ ಔಷಧಕ್ಕೆ ಅರ್ಹವಾದ ಮನ್ನಣೆ ಸಿಗುತ್ತಿಲ್ಲ ಎಂದು ಹೇಳಿದರು. ತನ್ನ ವ್ಯಾಪ್ತಿಯನ್ನು ವಿಸ್ತರಿಸಲು, ಸಾಂಪ್ರದಾಯಿಕ ಔಷಧವು ವಿಜ್ಞಾನದ ಮೂಲಕ ಸಾರ್ವಜನಿಕ ವಿಶ್ವಾಸವನ್ನು ಗಳಿಸಬೇಕು. ಇದನ್ನು ಶತಮಾನಗಳಿಂದ ನಮ್ಮ ಸಾಂಪ್ರದಾಯಿಕ ವೈದ್ಯಕೀಯ ವ್ಯವಸ್ಥೆಗಳಲ್ಲಿ ಬಳಸಲಾಗುತ್ತಿದೆ. COVID-19 ಸಮಯದಲ್ಲಿ, ಅದರ ಜಾಗತಿಕ ಬೇಡಿಕೆ ವೇಗವಾಗಿ…

Read More

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ದೆಹಲಿ ಭೇಟಿ ಬಗ್ಗೆ ಡಿಕೆಶಿ ಅಚ್ಚರಿಯ ಹೇಳಿಕೆ – Kannada News | High Command Spoke to Me and Siddaramaiah: DK Shivakumar Makes Surprise Statement on Delhi Visit

ಬೆಂಗಳೂರು, ಡಿಸೆಂಬರ್ 20: ಹೈಕಮಾಂಡ್ ನನ್ನ ಪರವಾಗಿದೆ. ಎರಡೂವರೆ ವರ್ಷದ ಅಗ್ರಿಮೆಂಟೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಶುಕ್ರವಾರ ಹೇಳಿದ್ದರು. ಈ ಮಾತು ಸದ್ಯ ಅವರ ಬೆಂಬಲಿಗರಲ್ಲಿ ವಿಶ್ವಾಸ ಹೆಚ್ಚಿಸಿದೆ. ಜೊತೆಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಬಣ ಹಾಗೂ ಹೈಕಮಾಂಡ್​​ಗೂ ಸಂದೇಶ ರವಾನೆ ಆಗಿದೆ. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡುವಂತೆ ಮಾಡಿದೆ. ದೆಹಲಿಗೆ ತೆರಳುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹೈಕಮಾಂಡ್ ನಮ್ಮಿಬ್ಬರಿಗೂ ಏನೋ ಹೇಳಿದೆ. ಹೈಕಮಾಂಡ್…

Read More

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ ಭೂಪ ಅಂದರ್ – Kannada News | Karnataka Minister H.K. Patil Receives Facebook Life Threat; Accused Held

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಗದಗ, ಡಿಸೆಂಬರ್ 20: ಇತ್ತೀಚಿಗೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಕರೆಗಳು, ಇ-ಮೇಲ್​ಗಳು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಕರ್ನಾಟಕದ ಕಾನೂನು ಸಚಿವ ಸಚಿವ ಎಚ್.ಕೆ. ಪಾಟೀಲ್​ಗೆ (H K Patil) ಫೇಸ್​ಬುಕ್​ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಸಚಿವರಿಗೆ ಅವಹೇಳನಕಾರಿ ಪದಗಳಿಂದ ನಿಂದನೆ ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರು, ಗದಗ ಸೇರಿದಂತೆ ಹಲವೆಡೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್​ಗಳು ಬಂದಿದ್ದವು. ಈ ನಡುವೆ…

Read More

HAL Recruitment 2025: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​​ನಲ್ಲಿ 156 ಆಪರೇಟರ್ ಹುದ್ದೆಗಳಿಗೆ ನೇಮಕಾತಿ – Kannada News | HAL Operator Recruitment 2025: 156 ITI Vacancies, Apply Online by Dec 25

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 156 ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಫಿಟ್ಟಿಂಗ್, ಎಲೆಕ್ಟ್ರಾನಿಕ್ಸ್, ಗ್ರೈಂಡಿಂಗ್ ಇನ್ಸ್ಟ್ರುಮೆಂಟ್ ಮೆಕ್ಯಾನಿಕ್/ಇನ್ಸ್ಟ್ರುಮೆಂಟೇಶನ್, ಮೆಷಿನಿಂಗ್, ಟರ್ನಿಂಗ್ ವಿಭಾಗಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 25 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಬಂಧಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

7 ವರ್ಷದ ಮಗಳೆದುರೇ ರಕ್ತ ಬರುವಂತೆ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ಪೈಲಟ್ ಹಲ್ಲೆ – Kannada News | Air India Pilot Assaults Passenger at Delhi Airport: Pilot Suspended After Viral Incident

ನವದೆಹಲಿ, ಡಿಸೆಂಬರ್ 20: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಏರ್ ಇಂಡಿಯಾ ಪೈಲಟ್(Pilot) ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಪೈಲಟ್ ಕ್ಯಾಪ್ಟನ್ ವೀರೇಂದ್ರ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ರಕ್ತಸ್ರಾವವಾಗಿದೆ ಎಂದು ಅಂಕಿತ್ ದಿವಾನ್ ಆರೋಪಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳು ಮತ್ತು ಫೋಟೋಗಳು ಕಾಣಿಸಿಕೊಂಡ ನಂತರ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯು ತನ್ನ ಇಡೀ ರಜೆಯನ್ನು ಹಾಳುಮಾಡಿದೆ ಮತ್ತು ತನ್ನ ಕುಟುಂಬ,…

Read More

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಆಂಧ್ರ ಬಸ್,​ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವು – Kannada News | Pavagada Accident: Andhra Bus and Innova Car Collision Kills Driver Near Kadamalakunte

ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇನ್ನೋವಾ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರನ್ನು ಪಾವಗಡ ತಾಲೂಕಿನ ಐವಾರ್ಲಹಳ್ಳಿ ಗ್ರಾಮದ ರಾಜಶೇಖರ್ ರೆಡ್ಡಿ (40) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಪೆನುಕೊಂಡ ಕಡೆಯಿಂದ ಪಾವಗಡದತ್ತ ಬರುತ್ತಿದ್ದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕ ರಾಜಶೇಖರ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ…

Read More

‘45’ ಸಿನಿಮಾ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್​ಗೆ ಶಾಕ್ – Kannada News | Shivarajkumar Talks about Death in 45 Movie Shooting Says Raj B Shetty

ಶಿವರಾಜ್​ಕುಮಾರ್ ಅವರು ‘45’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಮೊದಲು ಅವರಿಗೆ ಕ್ಯಾನ್ಸರ್ ಕಾಡಿತ್ತು. ಈ ಸಿನಿಮಾ ಶೂಟಿಂಗ್ ಮುಗಿದ ಬಳಿಕ ಅವರು ಆಪರೇಷನ್​​ಗೆ ವಿದೇಶಕ್ಕೆ ತೆರಳಿದ್ದರು. ಅಂದು ಸೆಟ್​​ನಲ್ಲಿ ನಡೆದ ಘಟನೆ ಬಗ್ಗೆ ರಾಜ್ ಹಾಗೂ ಅರ್ಜುನ್ ಜನ್ಯ ಮಾತನಾಡಿದ್ದಾರೆ. ಶಿವಣ್ಣ ಅವರು ಸಾವಿನ ಬಗ್ಗೆ ಮಾತನಾಡಿದ್ದಾರೆಂಬ ವಿಷಯವನ್ನು ಇಬ್ಬರೂ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Video: ಅಬ್ಬಬ್ಬಾ… ಇದೇನಿದು ಅಚ್ಚರಿ; ನಾಯಿ ಮರಿಗಳೊಂದಿಗೆ ಆಟವಾಡಿದ ಸಿಂಹಗಳು – Kannada News | Gujarat: Have you ever seen lions playing with puppies? Watch the video here

ಗುಜರಾತ್‌, ಡಿಸೆಂಬರ್ 20: ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿನತ್ತ ಬರುವುದು ತೀರಾ ಸಾಮಾನ್ಯವಾಗಿಬಿಟ್ಟಿದೆ. ಹೀಗೆ ಆಹಾರವನ್ನರಸುತ್ತಾ ಬರುವ ಆನೆ, ಹುಲಿ, ಚಿರತೆಗಳು ಮನುಷ್ಯರ ಮೇಲೆ ದಾಳಿ ನಡೆಸುತ್ತವೆ. ಅದರಲ್ಲೂ ಹುಲಿ, ಸಿಂಹಗಳಂತೂ (lions) ಬೀದಿಯಲ್ಲಿ ಓಡಾಡುವ ಶ್ವಾನಗಳು,ಇನ್ಯಾವುದೇ ಪ್ರಾಣಿಗಳನ್ನು ಕಂಡರೂ ಬಡೆದು ಬಾಯಿಗೆ ಹಾಕಿಬಿಡುತ್ತವೆ. ಆದ್ರೆ ಗುಜರಾತ್‌ನಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಗ್ರಾಮದೊಳಗೆ ಪ್ರವೇಶಿಸಿದ  ಸಿಂಹಗಳ ಗುಂಪು ದಾಳಿ ನಡೆಸುವ ಬದಲು ಅಲ್ಲಿದ್ದ ನಾಯಿ ಮರಿಗಳೊಂದಿಗೆ ಆಟವಾಡಿ, ನಾಯಿ ಮರಿಗಳಿಗೆ ಯಾವುದೇ ತೊಂದರೆ ಕೊಡದೆ ವಾಪಸ್‌…

Read More

ಶಾಲಾ ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪದ ಆರೋಪ; ಸೆಲ್ಫಿ​ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ – Kannada News | Belagavi Teacher Suspended: Headmistress Surekha Cries for Justice Amidst SDMC Row

ಸೆಲ್ಫಿ​ ವಿಡಿಯೋ ಮಾಡಿ ಕಣ್ಣೀರಿಟ್ಟ ಮುಖ್ಯ ಶಿಕ್ಷಕಿ ಬೆಳಗಾವಿ, ಡಿಸೆಂಬರ್ 20: ಬೆಳಗಾವಿ (Belagavi) ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ರಾಜಕೀಯ ಒತ್ತಡಕ್ಕೆ ಮಣಿದು ಅಮಾನತು ಮಾಡಿದ್ದಾರೆಂದು ಆರೋಪಿಸಿ ಸೆಲ್ಫೀ ವೀಡಿಯೋ ಮಾಡಿ ಕಣ್ಣೀರಿಟ್ಟಿದ್ದಾರೆ. ತನಗೆ ನ್ಯಾಯ ಕೊಡಿಸಿಲ್ಲವಾದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಾವು ಮಾಡಿದ ವೀಡಿಯೋದಲ್ಲಿ ಶಿಕ್ಷಕಿ ಹೇಳಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ಹೆಸರು ಬಳಸಿ ಅನ್ಯಾಯದ ಆರೋಪ ಹರಗಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಸುರೇಖಾ ಬಾಯಣ್ಣವರ್,…

Read More