ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ, ಜನಾರ್ದನ ರೆಡ್ಡಿ ನಿರಾಳ – Kannada News | Anjanadri Temple Gold Row: hyderabad businessman Donates real Gold clarified By gangavathi tahsildar
ಕೊಪ್ಪಳ, (ಮೇ 13): ಜಿಲ್ಲೆಯ ಅಂಜನಾದ್ರಿಯ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರದ ಆಭರಣಗಳ ಕುರಿತು ಹರಿದಾಡುತ್ತಿದ್ದ ವದಂತಿಗೆ ಕೊನೆಗೂ ತೆರೆ ಬಿದ್ದಿದೆ. ಗಂಗಾವತಿ ಶಾಸಕ ಜನಾರ್ದನರೆಡ್ಡಿ ಆಪ್ತ ಉದ್ಯಮಿ ಮಹೇಶ ರೆಡ್ಡಿ ಅವರು ನೀಡಿದ್ದ ಬಂಗಾರ ನಕಲಿ ಎಂದು ಸುದ್ದಿ ಹರಿದಾಡಿದ್ದು, ಇದರ ಬೆನ್ನಲ್ಲೇ ಕೂಲಂಕಷವಾಗಿ ಪರಿಶೀಲನೆ ಮಾಡಲಾಗಿದೆ. ಈ ವೇಳೆ 1400 ಗ್ರಾಂ ಬಂಗಾರದಲ್ಲಿ 1280 ಗ್ರಾಂ ಬಂಗಾರ ಸಂಪೂರ್ಣ ಅಸಲಿ ಎಂದು ಸಾಬೀತಾಗಿದೆ. ಉದ್ಯಮಿ ಮಹೇಶ ರೆಡ್ಡಿ ಒಟ್ಟು 1400 ಗ್ರಾಂ ಬಂಗಾರ ಆಭರಣಗಳು ನೀಡಿದ್ದು,…