Headlines

ಈ ವಂದೇ ಭಾರತ್ ರೈಲಿನಲ್ಲಿ ಪುರುಷ ಸಿಬ್ಬಂದಿಯೇ ಇರ್ಲಿಲ್ಲ, ಎಲ್ಲರೂ ಮಹಿಳೆಯರೇ!

ಬೆಂಗಳೂರು, ಮಾರ್ಚ್ 9: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗವು ಮಾರ್ಚ್ 8ರಂದು ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಗಮನ ಸೆಳೆಯಿತು. ಇದರ ಭಾಗವಾಗಿ ಬೆಂಗಳೂರು ಮತ್ತು ಮೈಸೂರು ಮಾರ್ಗದಲ್ಲಿ ಭಾನುವಾರ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ಲೋಕೊ ಪೈಲಟ್, ಟಿಟಿ (ಟಿಕೆಟ್ ಪರಿಶೀಲಕರು) ಸೇರಿದಂತೆ ರೈಲಿನ ಕಾರ್ಯಾಚರಣೆಗೆ ಸಂಬಂಧಿಸಿದ ವಿವಿಧ ಜವಾಬ್ದಾರಿಗಳನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ಮಹಿಳೆಯರ ಸಾಧನೆ ಮತ್ತು ಅವರ ಪಾತ್ರವನ್ನು ಗೌರವಿಸುವ ಉದ್ದೇಶದಿಂದ…

Read More

ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡ ಯುವತಿ

ತಂದೆ-ತಾಯಿಗೂ ಮಕ್ಕಳು ಮದುವೆಯಾಗಬೇಕು, ಅವರ ಜೀವನವನ್ನು ಅವರು ಕಟ್ಟಿಕೊಳ್ಳಬೇಕೆಂಬ ಕನಸಿರುತ್ತದೆ. ಹಾಗೆಯೇ ಮಕ್ಕಳಿಗೂ ತಮ್ಮ ಕಾಲ ಮೇಲೆ ನಾವು ನಿಲ್ಲಬೇಕು ಚೆನ್ನಾಗಿ ಸಂಪಾದನೆ ಮಾಡಬೇಕು ಮದುವೆ ಏನಿದ್ದರೂ ಆಮೇಲೆ ಎನ್ನುವ ಮನಸ್ಥಿತಿ ಇರುತ್ತದೆ. ಆದರೆ ಮಕ್ಕಳಿಗೆ ಅಪ್ಪ-ಅಮ್ಮನ ನೋಯಿಸಲೂ ಇಷ್ಟ ಇರುವುದಿಲ್ಲ. ಅಂಥಾ ಸಮಯದಲ್ಲಿ ಎಂಥಾ ಆಲೋಚನೆಗಳು ಬರುತ್ತವೆ ನೋಡಿ. ಯುವತಿಯೊಬ್ಬಳು ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ಹೆಣ್ಣುಮಕ್ಕಳ ಮೇಲೆ ಇರಿಸಲಾಗಿರುವ ಸಾಮಾಜಿಕ ನಿರೀಕ್ಷೆಗಳ ಬಗ್ಗೆ ವ್ಯಾಪಕ…

Read More

Sanju Samson: ನನ್ನ ಈ ಪ್ರದರ್ಶನಕ್ಕೆ ‘ಅವರೇ’ ಕಾರಣ..!

T20 World Cup 2026: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹಿಂದಿನ ರೂವಾರಿ ಸಂಜು ಸ್ಯಾಮ್ಸನ್. ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದ ಸ್ಯಾಮ್ಸನ್ ನಿರ್ಣಾಯಕ ಹಂತದಲ್ಲಿ ಕಣಕ್ಕಿಳಿದು ಅಬ್ಬರಿಸುವ ಮೂಲಕ ಟೀಮ್ ಇಂಡಿಯಾಗೆ ಚಾಂಪಿಯನ್ ಪಟ್ಟ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಮುಂಬೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಮ್ಯಾಚ್​ನಲ್ಲಿ 89 ರನ್ ಬಾರಿಸಿದ ಸ್ಯಾಮ್ಸನ್, ಫೈನಲ್​​ನಲ್ಲೂ ನ್ಯೂಝಿಲೆಂಡ್ ವಿರುದ್ಧ ಅಬ್ಬರಿಸಿದರು. ಅಹಮದಾಬಾದ್​ನಲ್ಲಿ ನಡೆದ ಈ…

Read More

Bengaluru Air Quality: ಇನ್ನೂ ಕಳಪೆ ಮಟ್ಟಕ್ಕಿಳಿದ ಬೆಂಗಳೂರಿನ ವಾಯು ಗುಣಮಟ್ಟ!

ಬೆಂಗಳೂರು, ಮಾರ್ಚ್​ 09: ರಾಜ್ಯದೆಲ್ಲೆಡೆ ಬಿಸಿಲಿನ ಬೇಗೆ ಹೆಚ್ಚಾಗಿದ್ದು ಈ ತಿಂಗಳು ಪೂರ್ತಿ ಇದೇ ವಾತಾವರಣ ಇರಲಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಕಳಪೆ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರು, ಕಲಬುರ್ಗಿ, ಬಳ್ಳಾರಿ ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150 ದಾಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ…

Read More

ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್

ಟಾಲಿವುಡ್ ನಟ ಜೂನಿಯರ್ ಎನ್​​ಟಿಆರ್ (JR NTR) ಅವರು ಭಾನುವಾರ (ಮಾರ್ಚ್ 8) ಬೆಂಗಳೂರಿಗೆ ಆಗಮಿಸಿದ್ದರು. ಕಿಮ್ಸ್ ಆಸ್ಪತ್ರೆಯ ಹೊಸ ಘಟಕದ ಉದ್ಘಾಟನೆಗಾಗಿ ಅವರು ಇಲ್ಲಿಗೆ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡುವಾಗ ಅಭಿಮಾನಿಗಳು ಇದಕ್ಕೆ ಅವಕಾಶ ಕೊಡಲಿಲ್ಲ. ಒಂದೇ ಸಮನೆ ಕೂಗುತ್ತಿದ್ದರು. ಆಗ ಜೂನಿಯರ್ ಎನ್​​ಟಿಆರ್ ಅವರು ಖಡಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಜೂನಿಯರ್​ ಎನ್​​ಟಿಆರ್ ಕಿಮ್ಸ್ ಘಟಕ ಉದ್ಘಾಟನೆಗೆ ಬರಲು ಒಂದು ಕಾರಣವೂ ಇತ್ತು. 1983ರಲ್ಲಿ ಜೂ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದೂ ಒಣ ಹವೆ, ತಾಪಮಾನದಲ್ಲಿ ಏರಿಕೆ

ಬೆಂಗಳೂರು, ಮಾರ್ಚ್​ 09: ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ (Weather Forecast) ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದು ಬೆಂಗಳೂರಿನಲ್ಲಿ ತಾಪಮಾನದಲ್ಲಿ ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು…

Read More

ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ವಿಶ್ವಕಪ್​ನಲ್ಲೂ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

T20 World Cup 2026: ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಟೀಮ್ ಇಂಡಿಯಾ (Team India) ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ ಒಂದೇ ಬಾರಿ ಮೂರು ದಾಖಲೆಗಳನ್ನು ಬರೆಯುವ ಮೂಲಕ ಎಂಬುದೇ ವಿಶೇಷ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ…

Read More

Daily Devotional: ಶುಭಕಾರ್ಯಗಳಲ್ಲಿ ಗಂಡಸರು ಅಂಗವಸ್ತ್ರ ಯಾಕೆ ಧರಿಸಬೇಕು?

ಬೆಂಗಳೂರು, ಮಾರ್ಚ್​​ 09​​​​​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಶುಭಕಾರ್ಯಗಳಲ್ಲಿ ಗಂಡಸರು ಅಂಗವಸ್ತ್ರ ಯಾಕೆ ಧರಿಸಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಶುಭಕಾರ್ಯಗಳಲ್ಲಿ ಪುರುಷರು ಅಂಗವಸ್ತ್ರ ಧರಿಸುವುದರ ಮಹತ್ವವು ಅನಾದಿಕಾಲದಿಂದಲೂ ಆಚರಣೆಯಲ್ಲಿರುವ ಸಂಪ್ರದಾಯವಾಗಿದೆ. ಪೂಜೆ, ಹೋಮ, ಹವನ, ವಿವಾಹ ಹಾಗೂ ಗೃಹಪ್ರವೇಶದಂತಹ ಸಂದರ್ಭಗಳಲ್ಲಿ ಪುರುಷರು ಭುಜದ ಮೇಲೆ ಅಂಗವಸ್ತ್ರವನ್ನು ಧರಿಸುತ್ತಾರೆ. ಈ ವಸ್ತ್ರವು ಕೇಸರಿ ಅಥವಾ ಬಿಳಿ ಬಣ್ಣದ್ದಾಗಿರಬಹುದು. ಅಂಗವಸ್ತ್ರ ಧರಿಸುವುದು ಕೇವಲ ಸಂಪ್ರದಾಯವಲ್ಲ, ಬದಲಿಗೆ ಸಂಕಲ್ಪ, ವ್ರತ ಹಾಗೂ ಗುರಿಯ ಸಂಕೇತವಾಗಿದೆ. ಇದು ಸೂರ್ಯ ಮತ್ತು…

Read More

Horoscope Today 9​​​​​th​​ March​: ಇಂದು ಈ ರಾಶಿಯವರಿಗೆ ಅಪಾಯಗಳಿಂದ ಮುಕ್ತಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 9​​​​​, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಪಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಷಷ್ಠಿ, ವಿಶಾಖ ನಕ್ಷತ್ರ, ವ್ಯಾಗತ ಯೋಗ ಮತ್ತು ಗಜ ಕರಣ ಇರತಕ್ಕಂತಹ ಈ ದಿನದ ರಾಹುಕಾಲ ಬೆಳಗಿನ 7 ಗಂಟೆ 59 ನಿಮಿಷದಿಂದ 9 ಗಂಟೆ 29 ನಿಮಿಷದವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ…

Read More

ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ರಾಜಕೀಯ ಪ್ರವೇಶ; ಜೆಡಿಯು ಪಕ್ಷಕ್ಕೆ ಸೇರ್ಪಡೆ

ಪಾಟ್ನಾ, ಮಾರ್ಚ್ 8: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮಗ, 50 ವರ್ಷದ ನಿಶಾಂತ್ ಕುಮಾರ್ (Nishant Kumar) ರಾಜಕೀಯ ಪ್ರಯಾಣ ಆರಂಭಿಸಿದ್ದಾರೆ. ಇಂದು ಭಾನುವಾರ ಜೆಡಿಯು ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನಿತೀಶ್ ಕುಮಾರ್ ಅವರು ದಶಕಗಳ ನಂತರ ರಾಜ್ಯ ರಾಜಕಾರಣ ತೊರೆದು ರಾಜ್ಯಸಭೆಗೆ ಹೋಗಲು ಅಣಿಯಾಗಿರುವ ಹೊತ್ತಲ್ಲಿ ಅವರ ಪುತ್ರನ ರಾಜಕೀಯ ಪ್ರವೇಶವಾಗಿದೆ. ‘ಸಕ್ರಿಯ ಸದಸ್ಯನಾಗಿ ಪಕ್ಷವನ್ನು ನೋಡಿಕೊಳ್ಳಲು ಪ್ರಯತ್ನಿಸುತ್ತೇನೆ. ನನ್ನ ತಂದೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ. ಅದನ್ನು…

Read More