ಆಸ್ಟ್ರೇಲಿಯಾ ದಾಂಡಿಗರ ಸಿಡಿಲಬ್ಬರ… ಟಿ20 ದಾಖಲೆಗಳು ಧೂಳೀಪಟ – Kannada News | Renshaw, Wildermuth Creates New World Record in T20 Cricket

BBL 2025: ಬಿಗ್ ಬ್ಯಾಷ್​ ಲೀಗ್​ನ 6ನೇ ಪಂದ್ಯವು ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಅದು ಕೂಡ ಟಿ20 ಇತಿಹಾಸದಲ್ಲೇ ಚೇಸಿಂಗ್ ವೇಳೆ ಇಬ್ಬರು ಬ್ಯಾಟರ್​ಗಳು ಶತಕ ಸಿಡಿಸುವ ಮೂಲಕ. ಇದರೊಂದಿಗೆ ಬಿಗ್ ಬ್ಯಾಷ್​ ಲೀಗ್​ನ ಹಲವು ದಾಖಲೆಗಳು ಕೂಡ ಧೂಳೀಪಟವಾಗಿದೆ.

Source link

ಮೆಟ್ರೋ ಪ್ರಯಾಣಿಕರೇ ಗಮನಿಸಿ: ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್ – Kannada News | Bangalore Metro Alert: Yellow Line Services to Start Late Tomorrow, BMRCL Announces

ಬೆಂಗಳೂರು, ಡಿಸೆಂಬರ್ 20: ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಭಾನುವಾರ (ಡಿಸೆಂಬರ್ 21) ಮೆಟ್ರೋ ರೈಲು ಸಂಚಾರ ವಿಳಂಬವಾಗಿ ಶುರುವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ. ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಯೆಲ್ಲೋ ಲೈನ್ ರೈಲುಗಳು 8 ಗಂಟೆಗೆ ಸಂಚಾರವನ್ನು ಪ್ರಾರಂಭಿಸುತ್ತವೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಕಳಪೆ ಏರ್ ಕ್ವಾಲಿಟಿಯಿಂದ ಶುರುವಾಗುತ್ತೆ ಅಸ್ತಮಾ, ಅಲರ್ಜಿ – Kannada News | Bangalore AQI: Bengaluru Air Quality Crosses 190, Asthma, Heart disease can be caused by poor air quality

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ!

ಬೆಂಗಳೂರು, ಡಿಸೆಂಬರ್ 20: ದಿನೇ ದಿನೇ ಹಡಗೆಡುತ್ತಿರುವ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) , ಸಾರ್ವಜನಿಕರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 196ಕ್ಕೆ ತಲುಪಿದೆ. ನಗರದ ಈ ವಾತಾರಣ ದೆಹಲಿಯನ್ನು ನೆನಪಿಸುತ್ತಿದ್ದು, ಇದು ಹೀಗೆ ಮುಂದುವರೆದರೆ ಜನರ ಜೀವಕ್ಕೇ ಕುತ್ತು ಬರುವ ಸಂಭವವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕಳಪೆ ಗುಣಮಟ್ಟದ ಗಾಳಿಯಿಂದ ಶ್ವಾಸಕೋಶ ಸಂಬಂಧಿ ಕಾಯಿಲೆ

ರಾಜ್ಯದೆಲ್ಲೆಡೆ ಉಂಟಾಗುತ್ತಿರುವ ಶೀತದಲೆಯ ಪರಿಣಾಮ ಈಗಾಗಲೇ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರಿಗೂ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ. ಅದರೊಂದಿಗೆ ವಾಯು ಮಾಲಿನ್ಯ ಮತ್ತು ಹದಗೆಟ್ಟ ಗಾಳಿಯೂ ಸೇರಿ ಅನಾರೊಗ್ಯ ಉಂಟುಮಾಡಬಹುದೆಂದು ತಜ್ಞರು ಹೇಳುತ್ತಾರೆ. ಇಂದೂ ಬೆಂಗಳೂರಿನಲ್ಲಿ PM2.5 ಪ್ರಮಾಣ 121ಕ್ಕೆ ತಲುಪಿದ್ದು, PM10 ಪ್ರಮಾಣ 167ಕ್ಕೆ ಇಳಿದಿದೆ.

ಇದರಿಂದಾಗಿ ಅಸ್ತಮಾ, ಅಲರ್ಜಿ ಸೇರಿದಂತೆ ಹೃದಯ ಸಂಬಂಧಿ ಖಾಯಿಲೆಗಳೂ ಎದುರಾಗಬಹುದು. 150ಕ್ಕಿಂತ ಹೆಚ್ಚಿನ ಗಾಳಿಯ ಗುಣಮಟ್ಟ ಜನರಲ್ಲಿ ಅಸ್ತಮಾ ತಂದೊಡ್ಡಬಹುದಾಗಿದ್ದು, ಈ ಸಮಸ್ಯೆಯಿಂದ ಬಚಾವಾಗಲು ಏರ್ ಪ್ಯೂರಿಫೈಯರ್ ಬಳಸುವುದರ ಜೊತೆಗೆ ಆದಷ್ಟು ಮನೆಯಿಂದ ಹೊರಹೋಗದಿರೊ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಉಸಿರಾಡೋದು, ದಿನಕ್ಕೆ ಮೂರು ಸಿಗರೇಟ್ ಸೇದೋದು ಎರಡೂ ಒಂದೇ!

ಕಳೆದ ನಾಲ್ಕು ವರ್ಷಗಳಲ್ಲೇ ಕಳಪೆ ಏರ್ ಕ್ವಾಲಿಟಿ

ಕಳೆದ ನಾಲ್ಕು ವರ್ಷಗಳಿಗಿಂತ ಈ ವರ್ಷವೇ ಗಾಳಿಯ ಗುಣಮಟ್ಟ ಹೆಚ್ಚು ಹದಗೆಟ್ಟಿದೆ. 2025ರಲ್ಲಿ ಸುಮಾರು 90ಕ್ಕೂ ಹೆಚ್ಚು ದಿನಗಳ ಕಾಲ ಬೆಂಗಳೂರಿನ ಏರ್ ಕ್ವಾಲಿಟಿ ಅನಾರೋಗ್ಯಕರವಾಗಿತ್ತು ಎಂದು AQI ತಿಳಿಸಿದೆ. ಉಳಿದಂತೆ 2 ದಿನ ಉತ್ತಮ ಗಾಳಿಯ ಗುಣಮಟ್ಟವಿದ್ದರೆ, 253 ದಿನ ಸಾಧಾರಣ ಏರ್ ಕ್ವಾಲಿಟಿ ಕಂಡು ಬಂದಿದೆ. ಇಂದಿನ ದಿನಗಳಲ್ಲಿ ಶೀತದಲೆಯ ಜೊತೆಗೆ ಕಳಪೆ ಗುಣಮಟ್ಟದ ಗಾಳಿಯೂ ಸೇರಿ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index):

  • ಬೆಂಗಳೂರು –196
  • ಮಂಗಳೂರು – 140
  • ಮೈಸೂರು – 136
  • ಬೆಳಗಾವಿ – 144 ಕ
  • ಲಬುರ್ಗಿ – 94
  • ಶಿವಮೊಗ್ಗ – 73
  • ಬಳ್ಳಾರಿ – 166
  • ಹುಬ್ಬಳ್ಳಿ- 101
  • ಉಡುಪಿ – 111
  • ವಿಜಯಪುರ –68

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ – Kannada News | Chaithra Kundapura Father Alleges her Husband Also gave Harassment

ಚೈತ್ರಾ ಕುಂದಾಪುರ ಅವರ ತಂದೆ ಕೋರ್ಟ್ ಹೋಗಿದ್ದರು ಮತ್ತು ಮಗಳಿಂದ ಕಿರುಕುಳ ಆಗುತ್ತದೆ ಎಂದಿದ್ದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚಿಸಿದೆ. ಈಗ ಚೈತ್ರಾ ತಂದೆ ಮಾತನಾಡಿದ್ದು, ‘ನನಗೆ ಚೈತ್ರಾ ಪತಿ ಶ್ರೀಕಾಂತ್ ಅವರಿಂದಲೂ ಕಿರುಕುಳ ಆಗುತ್ತಿದೆ’ ಎಂದು ಹೇಳಿದನ್ನು ಕಾಣಬಹುದು.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ದೇಶೀಯ ಏಕದಿನ ಟೂರ್ನಿಗೆ ದೆಹಲಿ, ಮುಂಬೈ ತಂಡಗಳು ಪ್ರಕಟ

Source link

‘ಕಿಂಗ್’ ಸಿನಿಮಾ ಬಿಡುಗಡೆಗೂ ಮುನ್ನವೇ ಹಾಡು ಸೋರಿಕೆ? – Kannada News | Shah Rukh Khan And Deepika Padukone King Movie AI Video Goes viral

‘ಕಿಂಗ್’ ಚಿತ್ರದಲ್ಲಿ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ‘ಓಂ ಶಾಂತಿ ಓಂ’, ‘ಚೆನ್ನೈ ಎಕ್ಸ್‌ಪ್ರೆಸ್’, ‘ಪಠಾಣ್’ ಮತ್ತು‘ ಹ್ಯಾಪಿ ನ್ಯೂ ಇಯರ್’ ಚಿತ್ರಗಳಲ್ಲಿ ಇವರು ಒಟ್ಟಿಗೆ ನಟಿಸಿದ್ದಾರೆ.‘ಜವಾನ್’ ಸಿನಿಮಾದಲ್ಲೂ ಶಾರುಖ್-ದೀಪಿಕಾ ಕಾಂಬಿನೇಷನ್ ಇದೆ. ಈ ಜೋಡಿ ‘ಕಿಂಗ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ಚಿತ್ರದ ಹಾಡಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೊ ಕಿಂಗ್ ಚಿತ್ರದ ಸೋರಿಕೆಯಾದ ಹಾಡು ಎಂದು ಹೇಳಲಾಗುತ್ತಿದೆ. ಆದರೆ, ಇದರ ಅಸಲಿಯತ್ತ ಬೇರೆಯೇ ಇದೆ.

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅವರ ರೊಮ್ಯಾಂಟಿಕ್ ಹಾಡು ಗಮನ ಸೆಳೆದಿದೆ. ಇವರು ಡ್ಯಾನ್ಸ್ ಮಾಡುತ್ತಿದ್ದು ಹಿನ್ನೆಲೆಯಲ್ಲಿ ಒಂದು ಹಾಡು ಪ್ಲೇ ಆಗುತ್ತಿದೆ. ಇಬ್ಬರ ನಡುವಿನ ಚುಂಬನ ದೃಶ್ಯವೂ ವೀಡಿಯೊದಲ್ಲಿ ಕಂಡುಬರುತ್ತದೆ. ಈ ಕಾರಣದಿಂದಾಗಿ, ಸೋರಿಕೆಯಾದ ಈ ವೀಡಿಯೊ ನಿಜವಾಗಿಯೂ ‘ಕಿಂಗ್’ ಚಿತ್ರದ್ದೇ ಎಂದು ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ.

ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ ಶಾರುಖ್ ಹಾಗೂ ದೀಪಿಕಾ ರಿಯಲ್ ಎಂಬಂತೆ ಕಾಣಿಸಿಕೊಂಡಿದ್ದಾರೆ. ವೀಡಿಯೊದ ಟೋನ್ ಸಂಪೂರ್ಣವಾಗಿ ಸಿನಿಮೀಯ ಮತ್ತು ರೋಮ್ಯಾಂಟಿಕ್ ಆಗಿದೆ. ಇದು ಕಿಂಗ್ ಚಿತ್ರದ ಸೋರಿಕೆಯಾದ ಹಾಡು ಎಂದು ಹಲವರು ಭಾವಿಸುತ್ತಿದ್ದಾರೆ. ಆದಾಗ್ಯೂ, ಈ ವೀಡಿಯೊ ಯಾವುದೇ ರೀತಿಯಲ್ಲಿ ‘ಕಿಂಗ್’ ಚಿತ್ರದ ಭಾಗವಲ್ಲ. ಇದು AI- ರಚಿತವಾದ ಫ್ಯಾನ್ ಎಡಿಟ್ ಮಾಡಿದ ವೀಡಿಯೊ ಎಂದು ತಿಳಿದುಬಂದಿದೆ. ಇದರಲ್ಲಿ ಶಾರುಖ್ ಖಾನ್ ಅವರ ಸಾಲ್ಟ್ ಆ್ಯಂಡ್ ಪೆಪ್ಪರ್ ಲುಕ್ ‘ಜವಾನ್’ ಚಿತ್ರದಂತೆಯೇ ಕಾಣುತ್ತದೆ. ವೀಡಿಯೊವನ್ನು ನೈಜವಾಗಿ ಕಾಣುವಂತೆ ಮಾಡಲು ತಂತ್ರಜ್ಞಾನವನ್ನು ಬಳಸಿಕೊಂಡು ಇಬ್ಬರ ಮುಖವನ್ನು ಎಡಿಟ್ ಮಾಡಲಾಗಿದೆ.

AI Grok ಸೇರಿದಂತೆ ಹಲವಾರು ಪರಿಕರಗಳು ವೈರಲ್ ವೀಡಿಯೊವನ್ನು ತನಿಖೆ ಮಾಡಿವೆ. ಅವರು ವೀಡಿಯೊ ನಕಲಿ ಮತ್ತು ಅಭಿಮಾನಿಗಳಿಂದ ನಿರ್ಮಿತ ಎಂದು ಹೇಳುತ್ತಾರೆ. ಚಿತ್ರದ ಯಾವುದೇ ಹಾಡುಗಳು ಅಥವಾ ದೃಶ್ಯಗಳು ಸೋರಿಕೆಯಾಗಿಲ್ಲ.

ವೀಡಿಯೊ ಕಾಣಿಸಿಕೊಂಡ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರು ಉತ್ಸಾಹದಿಂದ ಪ್ರತಿಕ್ರಿಯಿಸಿದರು. ಅನೇಕ ಅಭಿಮಾನಿಗಳು ಈ ವೀಡಿಯೊವನ್ನು AI ನಿಂದ ರಚಿಸಲಾಗಿದೆ ಎಂದು ತಕ್ಷಣವೇ ಗುರುತಿಸಿದರು. ಕೆಲವರು ಇದನ್ನು ತಮಾಷೆಯೆಂದು ಕಂಡುಕೊಂಡರೆ, ಇತರರು ಇಂತಹ ನಕಲಿ ವೀಡಿಯೊಗಳ ಬಗ್ಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ತಂತ್ರಜ್ಞಾನದ ಈ ಯುಗದಲ್ಲಿ, ನಿಜವಾದ ಮತ್ತು ನಕಲಿ ನಡುವೆ ವ್ಯತ್ಯಾಸವನ್ನು ಕಂಡುಹಿಡಿಯುವುದು ಹೆಚ್ಚು ಕಷ್ಟಕರವಾಗುತ್ತಿದೆ ಎಂದು ಜನರು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಓಡಿದ ಆರೋಪಿ – Kannada News | Man Flees From Parked Police Van in MP, Video Goes Viral

ಭೋಪಾಲ್, ಡಿಸೆಂಬರ್ 20: ಬಂಧಿತ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಿಂದ ವಿಚಿತ್ರವಾಗಿ ತಪ್ಪಿಸಿಕೊಳ್ಳುವ ವಿಡಿಯೋವೊಂದು ವೈರಲ್ ಆಗಿದೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ. ರಸ್ತೆಯಲ್ಲಿ ಪೊಲೀಸರು ತಮ್ಮ ವಾಹನವನ್ನು ನಿಲ್ಲಿಸಿದ್ದರು. ಆ ವೇಳೆ ಆರೋಪಿ ಓಡಿ ಹೋಗಿದ್ದಾನೆ. ಹಿಂದೆ ಪೊಲೀಸರು ಓಡಿದ್ದಾರೆ ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿಲ್ಲ.ಈ ಘಟನೆ ಯಾವುದೋ ಸಿನಿಮಾದಂತೆ ಕಾಣಿಸುತ್ತದೆ.

ಮಧ್ಯಪ್ರದೇಶದ ಹೋಶಂಗಾಬಾದ್ ಹೊರವಲಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ ಆದರೆ ಸ್ಥಳದ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.ಈ ಕ್ಲಿಪ್ ವಿಡಿಯೋದಲ್ಲಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಪೊಲೀಸ್ ವಾಹನವನ್ನು ತೋರಿಸಲಾಗಿದ್ದು, ಕೆಲವು ಪೊಲೀಸರು ವಾಹನದ ಆಸು ಪಾಸಿನಲ್ಲಿದ್ದರು ಆಗ ವ್ಯಕ್ತಿ ವಾಹನದಿಂದ ಕೆಳಗಿಳಿದು ಓಡಲು ಶುರು ಮಾಡುತ್ತಾನೆ. ಇದು ನಿಜವಾದ ಘಟನೆಯೋ ಅಥವಾ ಮನರಂಜನೆಗಾಗಿ ಸಿದ್ಧಪಡಿಸಿರುವ ಸ್ಕ್ರಿಪ್ಟೋ ಎನ್ನುವ ಮಾಹಿತಿ ಲಭ್ಯವಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತುಂಬಾನೇ ಕೆಳಮಟ್ಟದಲ್ಲಿ ಯೋಚಿಸಿದ್ರಾ ರಕ್ಷಿತಾ ಶೆಟ್ಟಿ? ನೆಟ್ಟಿಗರ ಕ್ಲಾಸ್ – Kannada News | Rakshitha Shetty’s Low Level Big Boss Act: Netizens Slam Makeup Brush Incident

ರಕ್ಷಿತಾ ಶೆಟ್ಟಿ (Rakshita Shetty) ಅವರ ಆಟದಲ್ಲಿ ಸಂಪೂರ್ಣ ಬದಲಾವಣೆ ಕಾಣುತ್ತಿದೆ. ಮೊದಲಿನ ರಕ್ಷಿತಾ ಶೆಟ್ಟಿಗೂ ಈಗಿನ ರಕ್ಷಿತಾ ಶೆಟ್ಟಿಗೂ ತುಂಬಾನೇ ವ್ಯತ್ಯಾಸ ಇದೆ. ಇದನ್ನು ಅನೇಕರು ಗಮನಿಸಿದ್ದಾರೆ. ಈಗ ಅವರು ನಡೆದುಕೊಂಡ ರೀತಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಅನೇಕರು ರಕ್ಷಿತಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ತುಂಬಾನೇ ಕೆಳಮಟ್ಟದಲ್ಲಿ ಯೋಚಿಸುತ್ತಿದ್ದಾರೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ರಕ್ಷಿತಾ ಶೆಟ್ಟಿ ಅವರು ಸದ್ಯ ಸೀಕ್ರೆಟ್ ರೂಂನಲ್ಲಿ ಇದ್ದಾರೆ. ಈ ವಾರ ಅವರು ಮತ್ತೆ ಬಿಗ್ ಬಾಸ್ ಮನೆ ಒಳಗೆ ಪ್ರವೇಶಿಸೋ ಸಾಧ್ಯತೆ ಇದೆ. ಡಿಸೆಂಬರ್ 19ರ ಎಪಿಸೋಡ್​​ನಲ್ಲಿ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್​​ಗೆ ಬಿಗ್ ಬಾಸ್ ಒಂದು ಟಾಸ್ಕ್ ನೀಡಿದರು. ಇದರ ಅನುಸಾರ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಸೀಕ್ರೆಟ್ ರೂಂನಿಂದ ಬಿಗ್ ಬಾಸ್ ಮನೆ ಒಳಗೆ ತೆರಳಿ ಕಸ ಹರಡಿ ಬರಬೇಕು.

ಇದನ್ನು ಕೇಳುತ್ತಿದ್ದಂತೆ ರಕ್ಷಿತಾ ಶೆಟ್ಟಿ ಅವರು ಸಾಕಷ್ಟು ಎಗ್ಸೈಟ್ ಆದರು. ಸಿಕ್ಕಿದ್ದೇ ಚಾನ್ಸ್ ಎಂದು ಇಡೀ ಮನೆಯ ತುಂಬಾ ಥರ್ಮಕೋಲ್ ಚೂರು, ಪೇಪರ್ ಕಸವನ್ನು ಹರಡಿದರು. ಬಿಗ್ ಬಾಸ್ ಕೊಟ್ಟ ಟಾಸ್ಕ್ ಆದ್ದರಿಂದ ಮಾಡಲೇಬೇಕಿತ್ತು. ಆದರೆ, ಅವರು ಕೆಲವು ಮಹಿಳಾ ಸ್ಪರ್ಧಿಗಳ ವೈಯಕ್ತಿಕ ಮೇಕಪ್ ಬ್ರಶ್​​ಗಳನ್ನು ನೆಲಕ್ಕೆ ಹರಡಿದ್ದಾರೆ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ನಿನಗೆ ಮಾನ-ಮಾರ್ಯಾದೆ ಏನೂ ಇಲ್ಲ’; ಗಿಲ್ಲಿಗೆ ಗಂಭೀರವಾಗಿಯೇ ಹೇಳಿದ ಕಾವ್ಯಾ

ಬ್ರಶ್​ಗಳು ನೆಲದ ಮೇಲೆ ಬಿದ್ದಿದ್ದನ್ನು ನೋಡುತ್ತಿದ್ದಂತೆ ರಾಶಿಕಾಗೆ ಸಾಕಷ್ಟು ಬೇಸರ ಆಯಿತು. ‘ಅವೆಲ್ಲ ನನ್ನ ಬ್ರಶ್​​ಗಳು. ಇದನ್ನು ಹೇಗೆ ಮರು ಜೋಡಿಸೋದು’ ಎಂದು ಅವರು ತಮ್ಮನ್ನು ತಾವು ಕೇಳಿಕೊಂಡರು. ಎಲ್ಲಕ್ಕಿಂತ ಮುಖ್ಯವಾಗಿ ಆ ಎಲ್ಲಾ ಬ್ರಶ್​​ಗಳು ಮುಖಕ್ಕೆ ಬಳಕೆ ಮಾಡೋದು. ನೆಲಕ್ಕೆ ಬಿದ್ದಾಗ ಧೂಳು-ಮಣ್ಣುಗಳು ಅದಕ್ಕೆ ಸೇರಿಕೊಳ್ಳಬಹುದು. ನಂತರ ಅದನ್ನು ಮುಖಕ್ಕೆ ಬಳಕೆ ಮಾಡಿದರೆ ಅಲರ್ಜಿ ಆಗಬಹುದು. ಇನ್ನು ಕಷ್ಟ ಪಟ್ಟು ದುಡಿದ ಹಣದಿಂದ ಮೇಕಪ್​ ಕಿಟ್​​ಗಳನ್ನು ಖರೀದಿ ಮಾಡಿರುತ್ತಾರೆ. ಇದನ್ನು ಹಾಳು ಮಾಡೋದು ಎಷ್ಟು ಸರಿ ಎಂದು ಅನೇಕರು ಕೇಳಿದ್ದಾರೆ. ರಕ್ಷಿತಾ ಈ ಕೀಳು ಬುದ್ಧಿಯನ್ನು ಬಿಡಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಪ್ರಾಣಿಗಳ ಮೇಲೆ ಸ್ವಲ್ಪ ದಯೆ ಇರಲಿ, ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ – Kannada News | Prayagraj Incident: Stray Dog Killed at Judge’s Residence, Guard Questioned

ಪ್ರಯಾಗ್​ರಾಜ್, ಡಿಸೆಂಬರ್ 20: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಬೆನಿಗಂಜ್ ಪ್ರದೇಶದಲ್ಲಿ ನ್ಯಾಯಮೂರ್ತಿ ಮನೆ ಎದುರು ಭದ್ರತಾ ಸಿಬ್ಬಂದಿ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದ್ದು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮನೆ ಎದುರು ಹೊಸದಾಗಿ ನಿರ್ಮಿಸಲಾಗುತ್ತಿರುವ ರಸ್ತೆಯ ಮೇಲೆ ನಾಯಿ ನಡೆದಾಡಿದ್ದಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಸಿಸಿಟಿವಿಯಲ್ಲಿ ಭದ್ರತಾ ಸಿಬ್ಬಂದಿ ಬೀದಿ ನಾಯಿಯನ್ನು ಬೆನ್ನಟ್ಟುತ್ತಾ ಬಂದು ಗುಂಡು ಹಾರಿಸಿರುವುದನ್ನು ಕಾಣಬಹುದು.

ನಾಯಿಯನ್ನು ಕೊಲ್ಲುವುದು ಶಿಕ್ಷಾರ್ಹ ಅಪರಾಧ ಮತ್ತು ಇದಕ್ಕೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಹೇಳುವ ಮೂಲಕ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರಾಣಿ ರಕ್ಷಕ ವಿದಿತ್ ಶರ್ಮಾ ಒತ್ತಾಯಿಸಿದ್ದಾರೆ. ಭದ್ರತಾ ಸಿಬ್ಬಂದಿಯನ್ನು ರಾಜೇಂದ್ರ ಪಾಂಡೆ ಎಂದು ಗುರುತಿಸಲಾಗಿದೆ. ಆತ ಅಲಹಾಬಾದ್ ಹೈಕೋರ್ಟ್​​ನ ನ್ಯಾಯಮೂರ್ತಿ ಕೈಲಾಶ್ ನಾಥ್ ಸಿನ್ಹಾ ಅವರ ಮನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಸೂಪರ್ ಶರ್ಮಾ… ಅಭಿಷೇಕ್ ಆರ್ಭಟಕ್ಕೆ ವಿಶ್ವ ದಾಖಲೆ ಉಡೀಸ್ – Kannada News | Abhishek Sharma Breaks Tim David’s World Record

ಟಿ೨೦ ಕ್ರಿಕೆಟ್‌ನಲ್ಲಿ ಅಭಿಷೇಕ್ ಶರ್ಮಾ (Abhishek Sharma) ಆರ್ಭಟ ಮುಂದುವರೆದಿದೆ. ಅದು ಸಹ ಸಿಡಿಲಬ್ಬರದ ಬ್ಯಾಟಿಂಗ್‌ನೊಂದಿಗೆ. ಅಂದರೆ ಅತ್ಯುತ್ತಮ ಸ್ಟ್ರೈಕ್ ರೇಟ್​ನೊಂದಿಗೆ ಇದೀಗ ಅಭಿ, ಟಿಮ್ ಡೇವಿಡ್ ಅವರ ವಿಶ್ವ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.

Source link

Exit mobile version