Headlines

IND vs NZ: ಮೊದಲ ಓವರ್‌ನಲ್ಲಿ ಸಿಕ್ಸರ್; ವಿಶ್ವ ದಾಖಲೆ ಮುರಿದ ಸಂಜು ಸ್ಯಾಮ್ಸನ್

2026 ರ ಟಿ20 ವಿಶ್ವಕಪ್ ಫೈನಲ್‌ (T20 World Cup Final) ಪಂದ್ಯ ನ್ಯೂಜಿಲೆಂಡ್ ಹಾಗೂ ಟೀಂ ಇಂಡಿಯಾ (India vs New Zealand) ನಡುವೆ ಅಹಮದಾಬಾದ್‌ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸಿದರು. ಮೊದಲ ಓವರ್​ನಲ್ಲಿ ಸ್ಟ್ರೈಕ್ ತೆಗೆದುಕೊಂಡ ಸಂಜು ಸ್ಯಾಮ್ಸನ್ (Sanju Samson) ಅದ್ಭುತ ಸಿಕ್ಸರ್ ಬಾರಿಸುವ ಮೂಲಕ ತಮ್ಮ ಖಾತೆ ತೆರೆದರು. ಇದರೊಂದಿಗೆ ವಿಶ್ವ…

Read More

ಬಹರೇನ್​ನ ಅಮೆರಿಕನ್ ಫಿಫ್ತ್ ಫ್ಲೀಟ್ ಮೇಲೆ ಇರಾನ್ ದಾಳಿ; 21 ಸೈನಿಕರ ಹತ್ಯೆ

ಟೆಹರಾನ್, ಮಾರ್ಚ್ 8: ಬಹರೇನ್ ದೇಶದ ಮನಾಮದಲ್ಲಿರುವ ಅಮೆರಿಕದ ಐದನೇ ನೌಕಾಪಡೆ ಅಥವಾ ಫಿಫ್ಟ್ ಫ್ಲೀಟ್ (US 5th Fleet) ಮೇಲೆ ಇರಾನ್ ಮತ್ತೆ ದಾಳಿ ಎಸಗಿದೆ. ಇರಾನ್​ನ ಹಲವಾರು ಕ್ಷಿಪಣಿಗಳು ಮತ್ತು ಡ್ರೋನ್​ಗಳು ಅಮೆರಿಕದ ನೌಕೆಗಳ ಮೇಲೆ ಎರಗಿವೆ. ಈ ದಾಳಿಯಲ್ಲಿ 21 ಸೈನಿಕರು ಬಲಿಯಾಗಿದ್ದಾರೆ. ಕಳೆದ ತಿಂಗಳು, ಫೆಬ್ರುವರಿ 28ರಂದು ಕೂಡ ಇದೇ ಫಿಫ್ತ್ ಫ್ಲೀಟ್ ಹೆಡ್​ಕ್ವಾರ್ಟರ್ಸ್ ಅನ್ನು ಗುರಿಯಾಗಿಸಿಕೊಂಡು ಇರಾನ್ ಬ್ಯಾಲಿಸ್ಟಿಕ್ ಮಿಸೈಲ್​ಗಳು ಮತ್ತು ಶಾಹಿದ್-136 ಡ್ರೋನ್​ಗಳಿಂದ ದಾಳಿ ಮಾಡಲಾಗಿತ್ತು. ರಾಡಾರ್ ಸೌಕರ್ಯಗಳು,…

Read More

IPL 2026: ಈ ದಿನದಿಂದ 19ನೇ ಆವೃತ್ತಿಯ ಐಪಿಎಲ್ ಆರಂಭ; ಬಿಸಿಸಿಐ ಅಧಿಕೃತ ಮಾಹಿತಿ

2026 ರ ಟಿ20 ವಿಶ್ವಕಪ್ ಫೈನಲ್ ನಡುವೆ ಬಿಸಿಸಿಐ, ಕ್ರಿಕೆಟ್ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ವಿಶ್ವ ಕ್ರಿಕೆಟ್​ನ ಅತ್ಯಂತ ಯಶಸ್ವಿ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಆವೃತ್ತಿ ಇದೇ ಮಾಚ್​ 28 ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಿ20 ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದ ನಡುವೆ ಐಪಿಎಲ್​ನ ಅಧಿಕೃತ ಪ್ರಸಾರಕರಾಗಿರುವ ಸ್ಟಾರ್ ಸ್ಪೋರ್ಟ್ಸ್ ತನ್ನ…

Read More

ಸಿಎಂ, ಡಿಸಿಎಂ ಹೆಸರಿನಲ್ಲಿ JDS ಶಾಸಕನಿಂದ ಮಾದಪ್ಪನಿಗೆ ಪೂಜೆ: ವಿಡಿಯೋ ನೋಡಿ

ಚಾಮರಾಜನಗರ, ಮಾರ್ಚ್​ 08: ಬಜೆಟ್​ನಲ್ಲಿ ಉಡುತೊರೆ ಜಲಾಶಯಕ್ಕೆ ನೀರು ತುಂಬಿಸುವ ಯೋಜನೆಗೆ 490 ಕೋಟಿ ರೂ. ನೀರಾವರಿ ಯೋಜನೆಗೆ ಅಸ್ತು ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್​ ಹೆಸರಿನಲ್ಲಿ ಮಾದಪ್ಪನಿಗೆ JDS ಹನೂರು ಶಾಸಕ ಮಂಜುನಾಥ್​​ರಿಂದ ಪೂಜೆ ಸಲ್ಲಿಸಲಾಗಿದೆ. ಉಡುತೊರೆ ಜಲಾಶಯಕ್ಕೆ ನೀರು ತುಂಬಿಸಬೇಕೆಂದು ಒತ್ತಾಯ ಇತ್ತು. 490 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಮಾಡಿಸುವುದಾಗಿ ಬಜೆಟ್​​ನಲ್ಲಿ ಅನುದಾನ ಘೋಷಿಸಲಾಗಿದೆ. ಹಾಗಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರಾದ ಕೆ.ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ ಹೆಸರಲ್ಲೂ ಪೂಜೆ ಮಾಡಿಸಲಾಗಿದೆ. ಮತ್ತಷ್ಟು…

Read More

Video: ವೈದ್ಯರು ಪುಟ್ಟ ಕಂದಮ್ಮನನ್ನು ಕೈಗಿಡುತ್ತಿದ್ದಂತೆ ಎತ್ತಿಕೊಳ್ಳಲು ಹೆದರಿದ ತಂದೆ

ಮನೆಗೆ ಮಗುವಿನ (child) ಆಗಮನವಾಗುತ್ತಿದ್ದಂತೆ ಆ ಖುಷಿಯೇ ಬೇರೆ. ಇನ್ನುಈ ಪುಟ್ಟ ಮಗುವನ್ನು ಹೇಗೆ ಎತ್ತಿಕೊಳ್ಳುವಾಗ ಭಯವಾಗುವುದು ಸಹಜ. ಹೀಗಾಗಿ ನವಜಾತ ಶಿಶುವನ್ನು ಎತ್ತಿಕೊಳ್ಳಲು ಹಿಂದೇಟು ಹಾಕುವುದೇ ಹೆಚ್ಚು. ಇಲ್ಲೊಬ್ಬ ತಂದೆಯದ್ದು (father) ಅದೇ ಕಥೆ. ಆಗ ತಾನೇ ಜನಿಸಿದ ಮಗುವನ್ನು ವೈದ್ಯರು ವ್ಯಕ್ತಿಯ ಕೈಗೆ ಕೊಟ್ಟಿದ್ದು, ಆ ವ್ಯಕ್ತಿ ಮಾತ್ರ ಭಯದಲ್ಲೇ ಹಿಂದೇಟು ಹಾಕಿರುವ ವಿಡಿಯೋ ವೈರಲ್ ಆಗಿದೆ. ತಂದೆಯಾದ ಖುಷಿ ನಡುವೆ ಈ ವ್ಯಕ್ತಿ ನೀಡಿದ ರಿಯಾಕ್ಷನ್‌ಗೆ ನೆಟ್ಟಿಗರು ಶಾಕ್ ಆಗಿದ್ದಾರೆ. ತಮಿಳ್ (Tamil)…

Read More

Chanakya Niti: ಜೀವನದಲ್ಲಿ ಈ ವಿಚಾರಗಳು ಎಂದಿಗೂ ಅತಿಯಾಗಬಾರದು ಎನ್ನುತ್ತಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya)  ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲದೆ, ನಮ್ಮ ಜೀವನಕ್ಕೆ ಸಂಬಂಧಿಸಿದ ಹತ್ತು ಹಲವು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಈ ಬೋಧನೆಗಳನ್ನು ಅನುಸರಿಸುವ ಮೂಲಕ ನೀವು ಸಂತೋಷ, ಸಮೃದ್ಧ ಮತ್ತು ಯಶಸ್ವಿ ಜೀವನವನ್ನು ನಡೆಸಬಹುದು ಮತ್ತು ಸಮಾಜದಲ್ಲಿ ಗೌರವವನ್ನೂ ಪಡೆಯಬಹುದು. ಅದೇ ರೀತಿ ಜೀವನ ಸರ್ವನಾಶವಾಗಬಾರದು ಎಂದರೆ ಈ ಒಂದಷ್ಟು ವಿಷಯಗಳು ಅತಿಯಾಗಬಾರದು ಎಂದೂ ಹೇಳಿದ್ದಾರೆ. ಹೌದು ಬದುಕಿನಲ್ಲಿ ಈ ಕೆಲವೊಂದು ವಿಷಯಗಳ ಬಗ್ಗೆ ಅತಿಯಾಗಿ ಅಹಂಕಾರ ಪಟ್ಟರೆ, ಕೆಲವು ವಿಷಯಗಳು ಅತಿಯಾದರೆ…

Read More

ಟಿ ನರಸೀಪುರದ ಸಿಲ್ಕ್ ಫ್ಯಾಕ್ಟರಿ ಜಾಗದಲ್ಲಿ ಕ್ರೀಡಾಂಗಣ: ಸಚಿವ ಮಹದೇವಪ್ಪ ಭೇಟಿಯಾದ ಪ್ರಮೋದಾದೇವಿ ಒಡೆಯರ್

ಮೈಸೂರು, ಮಾರ್ಚ್​​ 08: ಟಿ.ನರಸೀಪುರದ ಸಿಲ್ಕ್ ಫ್ಯಾಕ್ಟರಿ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರವಾಗಿ ರೈತರು ಸಿಡಿದೆದಿದ್ದಾರೆ. ಟಿ.ನರಸೀಪುರದ ಸಿಲ್ಕ್ ಫ್ಯಾಕ್ಟರಿ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಬಾರದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಸದಸ್ಯರು ಇತ್ತೀಚೆಗೆ ಮೈಸೂರಿನಲ್ಲಿ ಪ್ರತಿಭಟಿಸಿದ್ದರು. ಈ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಒಡೆಯರ್​ (pramoda devi wadiyar) ಅವರು ಸಚಿವ ಹೆಚ್.ಸಿ.ಮಹದೇವಪ್ಪ ಭೇಟಿ ಮಾಡಿದ್ದಾರೆ. ಈ ವೇಳೆ ಟಿ.ನರಸೀಪುರದ ಕೆಎಸ್​ಐಸಿ ಕಾರ್ಖಾನೆ ಮುಚ್ಚುವುದಿಲ್ಲವೆಂದು ಸಚಿವ ಮಹದೇವಪ್ಪ ಭರವಸೆ ನೀಡಿದ್ದಾರೆ. ಇನ್ನು ಸಚಿವರ ಸಕಾರಾತ್ಮಕ ಸ್ಪಂದನೆಗೆ…

Read More

ತಮ್ಮ ಜೀವನದಲ್ಲಿ ಪ್ರಭಾವ ಬೀರಿದ ಮಹಿಳೆಯರನ್ನು ಸ್ಮರಿಸಿದ ಗೌತಮ್ ಅದಾನಿ

ಅಹ್ಮದಾಬಾದ್, ಮಾರ್ಚ್ 8: ತಮ್ಮ ಜೀವನ ಹಾಗೂ ಮೌಲ್ಯಗಳು ರೂಪುಗೊಳ್ಳಲು ಕಾರಣರಾದ ಮಹಿಳೆಯರನ್ನು ಗೌತಮ್ ಅದಾನಿ (Gautam Adani) ಇವತ್ತಿನ ಮಹಿಳೆಯರ ದಿನದಂದು (International Women’s Day) ಸ್ಮರಿಸಿಕೊಂಡಿದ್ದಾರೆ. ತಮ್ಮ ಸಾಕ್ಷಿಪ್ರಜ್ಞೆ ರೂವಾರಿಗಳೆಂದು ಆ ಮಹಿಳೆಯರನ್ನು ಬಣ್ಣಿಸಿದ್ದಾರೆ. ಲಿಂಕ್ಡ್​ಇನ್​ನಲ್ಲಿ ಭಾವುಕವಾದ ಪೋಸ್ಟ್​ವೊಂದನ್ನು ಹಾಕಿರುವ ಗೌತಮ್ ಅದಾನಿ, ತಮ್ಮ ಕುಟುಂಬದಲ್ಲಿನ ಮಹಿಳೆಯರ ಪ್ರಭಾವ ತಮಗೆ ಅದೆಷ್ಟು ಗಾಢವಾಗಿ ಆಗಿತ್ತು ಎಂದು ವಿವರಿಸಿದ್ದಾರೆ. ತಮ್ಮ ಜೀವನ, ಜವಾಬ್ದಾರಿ, ರಾಷ್ಟ್ರ ನಿರ್ಮಾಣ ವಿಚಾರದಲ್ಲಿ ಹೊಸ ದೃಷ್ಟಿಕೋನ ಸಿಗಲು ಇವರ ಪಾತ್ರ ಮಹತ್ವದ್ದೆಂದು…

Read More

ಮುಸ್ಲಿಂ ವ್ಯಕ್ತಿಯನ್ನು ಲವ್ ಮಾಡಿ ಮತಾಂತರಗೊಂಡ ವಿವಾಹಿತ ಮಹಿಳೆ: ಈಗ ಅಸಲಿ ರೂಪ ತೋರಿಸಿದ ಪತಿ

ಬಾಗಲಕೋಟೆ, ಮಾ.8: ಪ್ರೀತಿಸಿ ಮತಾಂತರಗೊಂಡು ಮದುವೆಯಾದ ಪತಿ ತನಗೆ ಚಿತ್ರಹಿಂಸೆ ನೀಡಿ, ಹಣ ಹಾಗೂ ಬಂಗಾರವನ್ನೆಲ್ಲಾ ದೋಚಿ ಬೀದಿಗೆ ಬಿಟ್ಟಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿ ಎದುರು ಕಣ್ಣೀರು ಹಾಕಿದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ನಿವಾಸಿಯಾದ ಶ್ರೀದೇವಿ (ಈಗಿನ ಹೆಸರು ಹಬೀಬಾ) ಮೂಲತಃ ಕುರುಬ ಸಮುದಾಯದವರು. 14 ವರ್ಷಗಳ ಹಿಂದೆ ಇವರಿಗೆ ಸ್ವಜಾತಿಯ ವ್ಯಕ್ತಿಯೊಂದಿಗೆ ಮದುವೆಯಾಗಿ ಮಕ್ಕಳಿದ್ದರು. ಆದರೆ, ಮುಧೋಳದಲ್ಲಿ ಕೆಲಸಕ್ಕೆ ಬಂದಾಗ ಮುಸ್ಲಿಂ ಸಮುದಾಯದ ಸವಿಫ್…

Read More

T20 World Cup 2026: ಎರಡಂಕಿ ಮೊತ್ತ ದಾಖಲಿಸಿ ಇತಿಹಾಸ ಸೃಷ್ಟಿಸುವ ಹೊಸ್ತಿಲಿನಲ್ಲಿ ಸೂರ್ಯ

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ, ಟೀಂ ಇಂಡಿಯಾ ಇತಿಹಾಸ ನಿರ್ಮಿಸಲು ಕೇವಲ ಒಂದು ಹೆಜ್ಜೆ ದೂರದಲ್ಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಲ್ಲಿ ಟೀಂ ಇಂಡಿಯಾ ತನ್ನ ಮೂರನೇ ಟಿ20 ವಿಶ್ವಕಪ್ ಗೆಲ್ಲಲು ಪ್ರಯತ್ನಿಸಲಿದೆ. ಇದರ ಜೊತೆಗೆ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಹೀನಾಯ ದಾಖಲೆಯ ಸರಣಿಯನ್ನು ಮುರಿಯುವ ಇರಾದೆಯಲ್ಲಿದ್ದಾರೆ. ವಾಸ್ತವವಾಗಿ ಭಾರತ ಮೂರು ಬಾರಿ ಟಿ20 ವಿಶ್ವಕಪ್ ಫೈನಲ್‌ ಆಡಿದೆ. ಆದರೆ ಈ ಮೂರು…

Read More