Weekly Love Horoscope: ಮಾ 08ರಿಂದ 14; ಈ ವಾರದ ಪ್ರೇಮ-ಪ್ರೀತಿ ಭವಿಷ್ಯ ತಿಳಿಯಿರಿ

Weekly Love Horoscope: ಮಾ 08ರಿಂದ 14; ಈ ವಾರದ ಪ್ರೇಮ-ಪ್ರೀತಿ ಭವಿಷ್ಯ ತಿಳಿಯಿರಿ

ಮಾರ್ಚ್ 08ರಿಂದ ಮಾರ್ಚ್ 14ರವರೆಗೆ ಪ್ರೇಮದಲ್ಲಿ, ದಾಂಪತ್ಯದಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದು. ಸತ್ತ್ವವುಳ್ಳದ್ದು ಉಳಿಯುವುದು. ನಿಸ್ಸತ್ತ್ವ ಅಳಿಯುವುದು. ಎಲ್ಲವೂ ನಿಮ್ಮ ನಡವಳಿಕೆ ಹಾಗೂ ಮಾತನ್ನು ಅವಲಂಬಿಸಿದೆ. ಶುಕ್ರನು ತನ್ನ ಉನ್ನತ ಸ್ಥಾನಕ್ಕೆ ಹೋದ ಕಾರಣ ಹಲವು ಶುಭವನ್ನು ನಿರೀಕ್ಷಿಸಬಹುದು.

ಮೇಷ: ​ಶುಕ್ರನ ಸಂಚಾರವು ಪ್ರೇಮಿಗಳಲ್ಲಿ ಹೊಸ ಉತ್ಸಾಹ ತುಂಬಲಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು, ಆದರೆ ಸಂವಹನದಿಂದ ಬಗೆಹರಿಯಲಿವೆ. ಅವಿವಾಹಿತರಿಗೆ ಮದುವೆಯ ಮಾತುಕತೆಗಳು ಅಂತಿಮವಾಗಬಹುದು. ವಿಚ್ಛೇದನ ಕೋರಿದವರಿಗೆ ನ್ಯಾಯಾಲಯದಿಂದ ಸಮಾಧಾನಕರ ವಾರ್ತೆ ಸಿಗುವ ಸಾಧ್ಯತೆಯಿದೆ.

ವೃಷಭ: ನಿಮ್ಮ ರಾಶ್ಯಾಧಿಪತಿ ಶುಕ್ರನ ಅನುಗ್ರಹದಿಂದ ಪ್ರೇಮ ಜೀವನವು ಮಧುರವಾಗಿರುತ್ತದೆ. ಸಂಗಾತಿಯ ನಡುವೆ ಪರಸ್ಪರ ವಿಶ್ವಾಸ ವೃದ್ಧಿಯಾಗಲಿದೆ. ವಿವಾಹ ಆಕಾಂಕ್ಷಿಗಳಿಗೆ ಉತ್ತಮ ಸಂಬಂಧಗಳು ಹುಡುಕಿ ಬರಲಿವೆ. ಹಳೆಯ ಕಹಿ ನೆನಪುಗಳನ್ನು ಮರೆತು ದಂಪತಿಗಳು ಹೊಸ ಜೀವನ ಆರಂಭಿಸಲು ಇದು ಸುಸಮಯ.

ಮಿಥುನ: ಈ ವಾರ ಪ್ರೀತಿಯ ವಿಷಯದಲ್ಲಿ ಸ್ವಲ್ಪ ಜಾಗರೂಕರಾಗಿರಬೇಕು. ತಪ್ಪು ತಿಳುವಳಿಕೆಯಿಂದ ವಿರಹ ಉಂಟಾಗಬಹುದು. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ವಿಚ್ಛೇದನದ ಹಂತದಲ್ಲಿರುವವರು ಭಾವನಾತ್ಮಕವಾಗಿ ಕುಗ್ಗಬಹುದು. ಶಾಂತವಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವುದು ಒಳಿತು.

ಕರ್ಕಾಟಕ: ​ಪ್ರೀತಿಯಲ್ಲಿರುವವರಿಗೆ ಮನೆಯವರ ಬೆಂಬಲ ಸಿಗಲಿದೆ. ವೈವಾಹಿಕ ಜೀವನದಲ್ಲಿ ಸಾಮರಸ್ಯವಿರುತ್ತದೆ. ಹೊಸ ಪ್ರೇಮ ಸಂಬಂಧಗಳು ಚಿಗುರಲಿವೆ. ವಿಚ್ಛೇದನಕ್ಕಾಗಿ ಕಾಯುತ್ತಿರುವವರಿಗೆ ಪ್ರಕ್ರಿಯೆಗಳು ವೇಗ ಪಡೆಯಬಹುದು. ಒಂಟಿ ಜೀವನ ನಡೆಸುತ್ತಿರುವವರಿಗೆ ಆಪ್ತ ಸ್ನೇಹಿತರಿಂದ ಪ್ರೇಮ ನಿವೇದನೆಯಾಗುವ ಸಾಧ್ಯತೆಯಿದೆ.

ಸಿಂಹ: ​ಸಂಗಾತಿಯೊಂದಿಗೆ ಪ್ರವಾಸಕ್ಕೆ ಹೋಗುವ ಯೋಗವಿದೆ. ಪ್ರೇಮ ಜೀವನದಲ್ಲಿ ಆಕರ್ಷಣೆ ಹೆಚ್ಚಾಗಲಿದೆ. ವಿವಾಹದ ವಿಚಾರದಲ್ಲಿ ಅಡೆತಡೆಗಳು ದೂರವಾಗಲಿವೆ. ವಿಚ್ಛೇದನದ ಪ್ರಕರಣಗಳಲ್ಲಿ ಅಂತಿಮ ತೀರ್ಪು ನಿಮ್ಮ ಪರವಾಗಿ ಬರುವ ಲಕ್ಷಣಗಳಿವೆ. ಒಟ್ಟಾರೆಯಾಗಿ ಸಂಬಂಧಗಳಲ್ಲಿ ಸುಧಾರಣೆ ಕಂಡುಬರಲಿದೆ.

ಕನ್ಯಾ: ​ಕೆಲಸದ ಒತ್ತಡದಿಂದ ಸಂಗಾತಿಗೆ ಸಮಯ ನೀಡಲು ಸಾಧ್ಯವಾಗದಿರಬಹುದು, ಇದು ಅಸಮಾಧಾನಕ್ಕೆ ಕಾರಣವಾಗಬಹುದು. ಮದುವೆ ಸಂಬಂಧಿತ ಮಾತುಕತೆಗಳಲ್ಲಿ ವಿಳಂಬವಾಗಬಹುದು. ಸಂಬಂಧ ಮುರಿಯುವ ಹಂತದಲ್ಲಿದ್ದರೆ ಹಿರಿಯರ ಮಧ್ಯಸ್ಥಿಕೆಯಿಂದ ಸುಧಾರಿಸಿಕೊಳ್ಳಲು ಪ್ರಯತ್ನಿಸಿ. ತಾಳ್ಮೆ ಅತಿ ಅಗತ್ಯ.

ತುಲಾ: ​ಶುಕ್ರನ ಪ್ರಭಾವದಿಂದ ನಿಮ್ಮ ಆಕರ್ಷಣೆ ಹೆಚ್ಚಲಿದೆ. ಪ್ರೀತಿಯ ಪ್ರಸ್ತಾಪಕ್ಕೆ ಇದು ಸಕಾಲ. ದಂಪತಿಗಳ ನಡುವೆ ಪ್ರೀತಿ ಮರುಕಳಿಸಲಿದೆ. ವಿವಾಹ ವಿಳಂಬವಾಗುತ್ತಿದ್ದವರಿಗೆ ಶುಭ ಸುದ್ಧಿ ಸಿಗಲಿದೆ. ವಿಚ್ಛೇದನದ ನಂತರ ಹೊಸ ಜೀವನ ಆರಂಭಿಸಲು ಬಯಸುವವರಿಗೆ ಸೂಕ್ತ ವ್ಯಕ್ತಿಯ ಪರಿಚಯವಾಗಬಹುದು.

ವೃಶ್ಚಿಕ: ​ಗುಪ್ತ ಪ್ರೇಮ ಸಂಬಂಧಗಳಿಂದ ದೂರವಿರುವುದು ಉತ್ತಮ. ದಾಂಪತ್ಯ ಜೀವನದಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ದೊಡ್ಡದಾಗದಂತೆ ನೋಡಿಕೊಳ್ಳಿ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದವರಿಗೆ ಕಾಯುವಿಕೆ ಅನಿವಾರ್ಯವಾಗಬಹುದು. ವಿವಾಹ ಆಕಾಂಕ್ಷಿಗಳು ಆಯ್ಕೆ ಮಾಡುವಾಗ ಎಚ್ಚರಿಕೆ ವಹಿಸಿ.

ಧನು: ​ಈ ವಾರ ರೋಮ್ಯಾಂಟಿಕ್ ಕ್ಷಣಗಳನ್ನು ಕಳೆಯುವಿರಿ. ಪ್ರೇಮಿಗಳಿಗೆ ವಿವಾಹ ಯೋಗವಿದೆ. ವಿಚ್ಛೇದನದ ನಂತರ ಏಕಾಂಗಿಯಾಗಿದ್ದವರಿಗೆ ಹೊಸ ಸಂಬಂಧಗಳು ಹತ್ತಿರವಾಗಲಿವೆ. ಸಂಗಾತಿಯ ಬೆಂಬಲದಿಂದ ದೊಡ್ಡ ಸಮಸ್ಯೆಗಳು ಪರಿಹಾರವಾಗಲಿವೆ. ಕೌಟುಂಬಿಕ ಜೀವನ ಸುಖಮಯವಾಗಿರಲಿದೆ.

ಮಕರ: ​ಸಂಬಂಧಗಳಲ್ಲಿ ಅನಿಶ್ಚಿತತೆ ಕಂಡುಬರಬಹುದು. ಹಳೆ ಪ್ರೇಮಿಯ ಭೇಟಿಯಿಂದ ಗೊಂದಲ ಉಂಟಾಗಬಹುದು. ವಿವಾಹ ಸಂಬಂಧಗಳಲ್ಲಿ ಧನಸಹಾಯದ ನಿರೀಕ್ಷೆಯಿದೆ. ವಿಚ್ಛೇದನ ಪ್ರಕ್ರಿಯೆಗಳಲ್ಲಿ ಆಸ್ತಿ ಹಂಚಿಕೆಯ ವಿಷಯ ಚರ್ಚೆಗೆ ಬರಬಹುದು. ಸಂಗಾತಿಯ ಮಾತುಗಳಿಗೆ ಗೌರವ ನೀಡಿ.

ಕುಂಭ: ​ಶುಕ್ರನ ಬಲವು ನಿಮ್ಮ ಪ್ರೇಮ ಜೀವನಕ್ಕೆ ಬಲ ನೀಡಲಿದೆ. ಬಹುಕಾಲದ ಪ್ರೀತಿಗೆ ಮದುವೆಯ ಮುದ್ರೆ ಬೀಳಲಿದೆ. ವೈವಾಹಿಕ ಜೀವನದಲ್ಲಿನ ಭಿನ್ನಾಭಿಪ್ರಾಯಗಳು ದೂರವಾಗಿ ಹೊಂದಾಣಿಕೆ ಮೂಡಲಿದೆ. ವಿಚ್ಛೇದನ ಬಯಸುವವರಿಗೆ ಕಾನೂನು ಹೋರಾಟದಲ್ಲಿ ಮುನ್ನಡೆ ಸಿಗಲಿದೆ.

ಮೀನ: ​ನಿಮ್ಮ ರಾಶಿಯಲ್ಲಿ ಶುಕ್ರನ ಸಂಚಾರವು ಪ್ರೀತಿಯಲ್ಲಿ ಯಶಸ್ಸನ್ನು ನೀಡಲಿದೆ. ಪ್ರೇಮಿಗಳ ನಡುವೆ ನಂಬಿಕೆ ಹೆಚ್ಚಾಗಲಿದೆ. ಹೊಸದಾಗಿ ವಿವಾಹವಾದವರಿಗೆ ಸಂತಸದ ವಾರ್ತೆ ಸಿಗುವ ಸಾಧ್ಯತೆಯಿದೆ. ವಿಚ್ಛೇದನದ ಆಲೋಚನೆ ಬಿಟ್ಟು ಒಂದಾಗಲು ಇದು ಉತ್ತಮ ಸಮಯ. ಸಂಬಂಧಗಳಲ್ಲಿ ಮಾಧುರ್ಯ ಹೆಚ್ಚಲಿದೆ.

ಲೋಹಿತ ಹೆಬ್ಬಾರ್

Source link

ಮತ್ತೆ ದಕ್ಷಿಣದ ನಿರ್ದೇಶಕನ ಕೈ ಹಿಡಿದ ಸಲ್ಲು, ಈ ಬಾರಿ ರಾಷ್ಟ್ರಪ್ರಶಸ್ತಿ ವಿಜೇತನ ಜೊತೆ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಅವರಿಗೆ ದೊಡ್ಡ ಬಾಕ್ಸ್ ಆಫೀಸ್​​ ಗೆಲುವು ಸಿಕ್ಕೇ ಇಲ್ಲ. ಅತ್ತ ಶಾರುಖ್ ಖಾನ್ ದೊಡ್ಡ ದೊಡ್ಡ ಹಿಟ್ ನೀಡುತ್ತಿದ್ದಾರೆ. ಸಲ್ಲು ಅವರಿಂಗತಲೂ ಕಿರಿಯರಾದ ರಣ್​​ಬೀರ್ ಕಪೂರ್, ರಣ್ವೀರ್ ಸಿಂಗ್, ವಿಕ್ಕಿ ಕೌಶಲ್ ಅವರುಗಳು 1000 ಕೋಟಿ ಕಲೆಕ್ಷನ್ ತೆಗೆಯುತ್ತಿದ್ದಾರೆ ಆದರೆ ಸಲ್ಲು ಸಿನಿಮಾಗಳು ಮಾತ್ರ ಫ್ಲಾಪ್ ಮೇಲೆ ಫ್ಲಾಪ್ ಆಗುತ್ತಿವೆ. ಇದೀಗ ಸೋಲಿನ ಸುಳಿಯಿಂದ ಹೊರಬರಲು ಸಲ್ಮಾನ್ ಖಾನ್ ಮತ್ತೊಮ್ಮೆ ದಕ್ಷಿಣದ ನಿರ್ದೇಶಕನ ಕೈ ಹಿಡಿದಿದ್ದಾರೆ. ಅದೂ ಕೇವಲ ನಿರ್ದೇಶಕ ಮಾತ್ರವಲ್ಲ ನಿರ್ಮಾಪಕರೂ ದಕ್ಷಿಣದವರೇ ಆಗಿದ್ದಾರೆ.

ಸಲ್ಮಾನ್ ಖಾನ್ ಅವರಿಗಾಗಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ ದಕ್ಷಿಣದ ಖ್ಯಾತ ನಿರ್ಮಾಪಕ ದಿಲ್ ರಾಜು. ತೆಲುಗು ಸಿನಿಮಾ ರಂಗದ ದೊಡ್ಡ ನಿರ್ಮಾಪಕರಲ್ಲಿ ಒಬ್ಬರಾಗಿರುವ ದಿಲ್ ರಾಜು ಇದೀಗ ಮೂರನೇ ಹಿಂದಿ ಸಿನಿಮಾಣಕ್ಕೆ ಕೈ ಹಾಕಿದ್ದಾರೆ. ಈ ಹಿಂದೆ ತೆಲುಗಿನ ರೀಮೇಕ್​​ಗಳಾದ ಹಿಂದಿಯ ‘ಜೆರ್ಸಿ’ ಮತ್ತು ‘ಹಿಟ್’ ಸಿನಿಮಾಗಳನ್ನು ದಿಲ್ ರಾಜು ನಿರ್ಮಿಸಿದ್ದರು. ಇದೀಗ ಮೊದಲ ಬಾರಿಗೆ ಹಿಂದಿಯ ಸೂಪರ್ ಸ್ಟಾರ್ ನಟನೊಟ್ಟಿಗೆ ಕೆಲಸ ಮಾಡಲು ಮುಂದಾಗಿದ್ದಾರೆ.

ಸಲ್ಮಾನ್ ಖಾನ್ ಅವರ ಈ ಸಿನಿಮಾಕ್ಕಾಗಿ ದಿಲ್ ರಾಜು, ತೆಲುಗಿನ ಪ್ರತಿಭಾವಂತ ಜೊತೆಗೆ ಕಮರ್ಶಿಯಲ್ ಸಿನಿಮಾ ನಿರ್ದೇಶಕರೂ ಎನಿಸಿಕೊಂಡಿರುವ ವಂಶಿ ಪೈಡಪಲ್ಲಿ ಅವರನ್ನು ಜೊತೆಗೆ ಕರೆದೊಯ್ದಿದ್ದಾರೆ. ಈ ಹಿಂದೆ ‘ಮಹರ್ಶಿ’, ದಳಪತಿ ವಿಜಯ್ ನಟನೆಯ ‘ವಾರಿಸು’, ಜೂ ಎನ್​​ಟಿಆರ್ ನಟನೆಯ ‘ಬೃಂದಾವನಂ’, ರಾಮ್ ಚರಣ್ ನಟನೆಯ ‘ಯೆವುಡು’ ಸಿನಿಮಾಗಳನ್ನು ನಿರ್ದೇಶಿಸಿರುವ ವಂಶಿ ಪೈಡಪಲ್ಲಿ, ಸ್ಟಾರ್ ನಟರಿಗಾಗಿ ಸಾಮಾಜಿಕ ಸಂದೇಶವುಳ್ಳ ಅಥವಾ ಕೌಟುಂಬಿಕ ಕತೆಗಳುಳ್ಳ ಸಿನಿಮಾಗಳನ್ನು ಮಾಡುವುದರಲ್ಲಿ ನಿಸ್ಸೀಮರು. ವಂಶಿ ನಿರ್ದೇಶನದ ಮಹೇಶ್ ಬಾಬು ನಟನೆಯ ‘ಮಹರ್ಷಿ’ ಸಿನಿಮಾಕ್ಕೆ ರಾಷ್ಟ್ರಪ್ರಶಸ್ತಿ ಸಹ ದೊರೆತಿದೆ.

ಇದನ್ನೂ ಓದಿ:ನಾನು ಸ್ಟಾರ್ ಆಗಲು ಸಲ್ಮಾನ್ ಖಾನ್ ತಂದೆ ಕಾರಣ ಎಂದಿದ್ದ ಶಾರುಖ್

ಇದೀಗ ಸಲ್ಮಾನ್ ಖಾನ್ ಅವರಿಗಾಗಿ ಸಾಮಾಜಿಕ ಸಂದೇಶವುಳ್ಳ ಆಕ್ಷನ್ ಸಿನಿಮಾ ಕತೆಯನ್ನು ವಂಶಿ ಪೈಡಪಲ್ಲಿ ಹೆಣೆದಿದ್ದು, ಸಿನಿಮಾದ ಚಿತ್ರೀಕರಣ ಏಪ್ರಿಲ್ ತಿಂಗಳಲ್ಲಿ ಪ್ರಾರಂಭವಾಗಲಿದೆ ಎನ್ನಲಾಗುತ್ತಿದೆ. ಸಲ್ಮಾನ್ ಖಾನ್ ಈ ಹಿಂದೆಯೂ ಸಹ ಹಲವು ದಕ್ಷಿಣದ ನಿರ್ದೇಶಕರ ಜೊತೆಗೆ ಕೆಲಸ ಮಾಡಿದ್ದಾರೆ. ಪ್ರಭುದೇವ ನಿರ್ದೇಶನದ ‘ವಾಂಟೆಡ್’, ‘ರಾಧೆ’, ‘ದಬಂಗ್ 3’ ಸಿನಿಮಾಗಳಲ್ಲಿ ಸಲ್ಲು ನಟಿಸಿದ್ದರು. ಮುರುಗದಾಸ್ ನಿರ್ದೇಶನದ ‘ಸಿಖಂಧರ್’ ಸಿನಿಮಾನಲ್ಲಿ ನಟಿಸಿದರು, ಅದು ಧಾರುಣವಾಗಿ ಫ್ಲಾಪ್ ಆಯ್ತು. ಮಲಯಾಳಂ ನಿರ್ದೇಶಕ ಸಿದ್ಧಿಕ್ ಅವರೊಟ್ಟಿಗೆ ‘ಬಾಡಿಗಾರ್ಡ್’ ಸಿನಿಮಾನಲ್ಲಿ ನಟಿಸಿದರು. ಆ ಸಿನಿಮಾ ಬ್ಲಾಕ್ ಬಸ್ಟರ್ ಆಗಿತ್ತು. ಇದೀಗ ಮತ್ತೊಮ್ಮೆ ದಕ್ಷಿಣದ ನಿರ್ದೇಶಕನ ಜೊತೆಗೆ ಕೆಲಸ ಮಾಡಲಿದ್ದಾರೆ.

ಸಲ್ಮಾನ್ ಖಾನ್ ಇದೀಗ ‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾ ಮುಗಿಸಿದ್ದಾರೆ. ಗಲ್ವಾನ್​​ನಲ್ಲಿ ಚೀನಾ ಮತ್ತು ಭಾರತದ ಸೈನಿಕರ ನಡುವೆ ನಡೆದ ಗಲಾಟೆಯ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದೆ. ಇದಾದ ಬಳಿಕ ರಾಜ್ ಮತ್ತು ಡಿಕೆ ನಿರ್ಮಿಸಿ, ನಿರ್ದೇಶಿಸುತ್ತಿರುವ ಕಾಮಿಡಿ-ಆಕ್ಷನ್ ಸಿನಿಮಾನಲ್ಲಿ ನಟಿಸಲಿದ್ದಾರೆ. ಇದೇ ಸಿನಿಮಾದ ಜೊತೆಗೆ ವೈಂಶಿ ಪೈಡಪಲ್ಲಿಯ ಸಿನಿಮಾ ಸಹ ಚಿತ್ರೀಕರಣಗೊಳ್ಳಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಶಿವರಾಜ್ ಕುಮಾರ್​​ ಬಗ್ಗೆ ವಿಷ್ಣುವರ್ಧನ್​​ಗಿತ್ತು ಅಪಾರ ಪ್ರೀತಿ, ಕೊಟ್ಟಿದ್ದರು ಅಮೂಲ್ಯ ಉಡುಗೊರೆ

ವಿಷ್ಣುವರ್ಧನ್ (Vishnuvardhan), ಕನ್ನಡ ಚಿತ್ರರಂಗದ ಮೇರು ನಟ. ಹಲವಾರು ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಅವರು ಕನ್ನಡಕ್ಕೆ ನೀಡಿದ್ದಾರೆ. ಅಣ್ಣಾವ್ರ ಬಳಿಕ ಅತಿ ಹೆಚ್ಚು ಗೌರವಿಸಲ್ಪಡುವ ನಟ ವಿಷ್ಣುವರ್ಧನ್. ಆದರೆ ಒಂದು ಸಮಯದಲ್ಲಿ ವಿಷ್ಣುವರ್ಧನ್ ಮತ್ತು ರಾಜ್​​ಕುಮಾರ್ ಅವರ ನಡುವೆ ವೈಮನಸ್ಯ ಇದೆ ಎಂದೆಲ್ಲ ಸುದ್ದಿಗಳು ಹರಿದಾಡಿದ್ದವು. ರಾಜ್​​ಕುಮಾರ್ ಅಭಿಮಾನಿಗಳು ವಿಷ್ಣುವರ್ಧನ್ ಮೇಲೆ ದಾಳಿ ಮಾಡಿದ್ದರು, ವಿಷ್ಣುವರ್ಧನ್ ಅಭಿಮಾನಿಗಳು ಸಹ ರಾಜ್​​ಕುಮಾರ್ ಅವರ ಸಿನಿಮಾಗಳ ಸೋಲಿಸಲು ಯತ್ನಿಸಿದ್ದರು ಎಂದೆಲ್ಲ ಹೇಳಲಾಗುತ್ತದೆ. ಆದರೆ ವೈಯಕ್ತಿಕವಾಗಿ ರಾಜ್​​ಕುಮಾರ್ ಮತ್ತು ವಿಷ್ಣುವರ್ಧನ್ ಅವರುಗಳು ಬಲು ಆಪ್ತರಾಗಿದ್ದರು. ರಾಜ್​​ಕುಮಾರ್ ಅವರ ಬಗ್ಗೆ ಅಪಾರ ಗೌರವ ವಿಷ್ಣುವರ್ಧನ್ ಅವರಿಗೆ ಇತ್ತು. ಅಲ್ಲದೆ ಅವರ ಪುತ್ರ ಶಿವರಾಜ್ ಕುಮಾರ್ ಮೇಲೆ ಸಹ ವಿಪರೀತ ಪ್ರೀತಿ ಇತ್ತು. ಇಬ್ಬರ ನಡುವಿನ ಬಾಂಧವ್ಯ ಹೇಗಿತ್ತು ಎಂಬುದನ್ನು ಚಿ ಗುರುದತ್ ಅವರು ವಿವರಿಸಿದ್ದಾರೆ.

ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ ಸಿನಿಮಾದ 25ನೇ ವರ್ಷದ ಸಂಭ್ರಮಾಚರಣೆಯಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಚಿ ಗುರುದತ್ ಅವರು ಶಿವಣ್ಣ ಮತ್ತು ವಿಷ್ಣುವರ್ಧನ್ ನಡುವೆ ಇದ್ದ ಬಂಧದ ಬಗ್ಗೆ ಮಾತನಾಡಿದರು. ತಾವು ಖುದ್ದಾಗಿ ನೋಡಿದ ಘಟನೆಗಳನ್ನೇ ಅವರು ವಿವರಿಸಿದರು. ಎಲ್ಲರಿಗೂ ಗೊತ್ತಿರುವಂತೆ ಗುರುದತ್ ಅವರ ತಂದೆ ಖ್ಯಾತ ಚಿತ್ರಸಾಹಿಸಿ ಚಿ ಉದಯಶಂಕರ್. ಇವರು ಒಮ್ಮೆ ವಿಷ್ಣುವರ್ಧನ್ ಅವರೊಟ್ಟಿಗೆ ಸಿನಿಮಾ ಮಾಡುವ ಯೋಜನೆ ಹಾಕಿದ್ದರಂತೆ. ಅದರಲ್ಲೂ ಶಿವರಾಜ್ ಕುಮಾರ್ ಆ ಸಿನಿಮಾದ ನಾಯಕ, ವಿಷ್ಣುವರ್ಧನ್ ಉಪನಾಯಕ ಎಂದೆನಿಸುವ ರೀತಿಯ ಕತೆ ಅದಾಗಿತ್ತು. ಸಿನಿಮಾದ ಹೆಸರು ‘ಕೃಷ್ಣ-ಅರ್ಜುನ’.

ಇದನ್ನೂ ಓದಿ:ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್

ಉದಯಶಂಕರ್ ಅವರು ಶಿವರಾಜ್ ಕುಮಾರ್ ಅವರ ಬಳಿ ಈ ಸಿನಿಮಾದ ಬಗ್ಗೆ ಕೇಳಿದಾಗ, ವಿಷ್ಣುವರ್ಧನ್ ಅವರು, ‘ಉದಯ ಶಂಕರ್ ಅವರೇ ನಿಮಗೆ ಒಳ್ಳೆಯದಾಗುತ್ತೆ ಎಂದಾದರೆ ಖಂಡಿತ ನಾನು ಸಿನಿಮಾ ಮಾಡುತ್ತೀನಿ’ ಎಂದಿದ್ದರಂತೆ. ಅದಾಗಲೇ ವಿಷ್ಣುವರ್ಧನ್ ಸ್ಟಾರ್ ನಟ, ಆದರೂ ಸಹ ಹೊಸ ನಟನೊಟ್ಟಿಗೆ ನಟಿಸಲು ಒಪ್ಪಿದ್ದರಂತೆ ವಿಷ್ಣುವರ್ಧನ್.

ಒಮ್ಮೆ ಅಶೋಕ ಹೋಟೆಲ್​​ನಲ್ಲಿ ‘ಸತ್ಯಜ್ಯೋತಿ’ ಸಿನಿಮಾದ ಯಶಸ್ಸಿನ ಪಾರ್ಟಿ ಮಾಡುತ್ತಿದ್ದರಂತೆ. ಅಲ್ಲಿಗೆ ಬಂದಿದ್ದ ವಿಷ್ಣುವರ್ಧನ್ ನಾನು ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಬೇಕು ಎಂದರಂತೆ. ಆಗಿನ್ನೂ ಶಿವರಾಜ್ ಕುಮಾರ್ ಅವರ ಮೊದಲ ಸಿನಿಮಾ ಮಾತ್ರವೇ ಬಿಡುಗಡೆ ಆಗಿತ್ತಂತೆ. ಕೂಡಲೇ ಶಿವರಾಜ್ ಕುಮಾರ್ ಅವರನ್ನು ಕರೆದುಕೊಂಡು ಬಂದರಂತೆ ಗುರುದತ್. ಆಗ ವಿಷ್ಣುವರ್ಧನ್ ಅವರು, ‘ನೀನು ಬಹಳ ದೊಡ್ಡ ಸ್ಟಾರ್ ಆಗುತ್ತೀಯ. ನೀನು ಸ್ಟಾರ್ ಆಗಿ ಬೆಳೆಯುವುದನ್ನು ನಾನು ನೋಡುತ್ತೀನಿ. ನೀನು ಸ್ಟಾರ್ ಆದ ದಿನ ನನ್ನ ಪಾಲಿಗೆ ಅತ್ಯಂತ ಸಂತೋಷದ ದಿನ ಆಗಿರುತ್ತದೆ’ ಎಂದರಂತೆ.

ಅಷ್ಟು ಮಾತ್ರವೇ ಅಲ್ಲದೆ, ತಮ್ಮ ಬಳಿ ಇದ್ದ ವಾಚ್ ಒಂದನ್ನು ಶಿವರಾಜ್ ಕುಮಾರ್ ಅವರಿಗೆ ಉಡುಗೊರೆಯಾಗಿ ನೀಡಿದರಂತೆ ವಿಷ್ಣುವರ್ಧನ್. ಅಸಲಿಗೆ ಆ ವಾಚನ್ನು ವಿಷ್ಣುವರ್ಧನ್ ಅವರಿಗೆ ದಿವಂಗತ ತಮಿಳಿನ ಲಿಜೆಂಡರಿ ನಟ ಎಂಜಿಆರ್ ನೀಡಿದ್ದರಂತೆ. ಆ ಅಪರೂಪದ ವಾಚನ್ನು ಯುವಕ ಶಿವಣ್ಣನ ಕೈಗೆ ಕೊಟ್ಟಿದ್ದರಂತೆ ವಿಷ್ಣುವರ್ಧನ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್​ ರಾಜಧಾನಿ ಮೇಲೆ ಇಸ್ರೇಲ್ ವಾಯುದಾಳಿ: ತೈಲ ಡಿಪೋಗಳು ಸ್ಫೋಟ, ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ

ಟೆಹ್ರಾನ್, ಮಾ.8: ಇಸ್ರೇಲ್ ಮತ್ತು ಇರಾನ್ ನಡುವಿನ ಮಹಾಯುದ್ಧವು ಸ್ಫೋಟಕ ರೂಪ ಪಡೆದಿದೆ. ಶನಿವಾರ ರಾತ್ರಿ ಇಸ್ರೇಲ್ ಯುದ್ಧವಿಮಾನಗಳು ಟೆಹ್ರಾನ್‌ನ ಐದು ಪ್ರಮುಖ ತೈಲ ಡಿಪೋಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಭೀಕರ ದಾಳಿಯಿಂದಾಗಿ ಇಡೀ ನಗರವು ಸ್ಫೋಟ ಮತ್ತು ದಟ್ಟವಾದ ಹೊಗೆಯಿಂದ ಆವೃತವಾಗಿದೆ. ತೈಲ ಟ್ಯಾಂಕರ್‌ಗಳಿಂದ ಸೋರಿಕೆಯಾದ ಇಂಧನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ರಸ್ತೆಗಳಲ್ಲಿ “ಬೆಂಕಿಯ ನದಿ” ಹರಿಯುತ್ತಿರುವಂತೆ ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಶಹ್ರಾನ್ ಮತ್ತು ಅಘದಾಸಿಯಾದಂತಹ ಪ್ರಮುಖ ಡಿಪೋಗಳು ಧಗಧಗಿಸಿ ಉರಿಯುತ್ತಿವೆ.

ತೈಲ ಮತ್ತು ಹೊಗೆಯ ಮಿಶ್ರಣದಿಂದಾಗಿ ಟೆಹ್ರಾನ್‌ನಲ್ಲಿ ‘ಕಪ್ಪು ಮಳೆ’ಯಂತೆ ಸುರಿದಿದೆ ಎಂದು ವರದಿಯಾಗಿದೆ. ಸುಟ್ಟ ಇಂಧನದ ವಾಸನೆ ಇಡೀ ನಗರವನ್ನು ಆವರಿಸಿದೆ.ದಾಳಿಯಲ್ಲಿ ಇಬ್ಬರು ಟ್ಯಾಂಕರ್ ಚಾಲಕರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಫೆಬ್ರವರಿ 28 ರಿಂದ ನಡೆಯುತ್ತಿರುವ ಈ ಸಂಘರ್ಷದಲ್ಲಿ ಈವರೆಗೆ ಇರಾನ್‌ನಲ್ಲಿ ಸುಮಾರು 1,200 ನಾಗರಿಕರು ಮೃತಪಟ್ಟಿದ್ದು, 10,000 ಜನರು ಗಾಯಗೊಂಡಿದ್ದಾರೆ.

ಇಲ್ಲಿದೆ ನೋಡಿ ವಿಡಿಯೋ:

ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೂ ದಾಳಿ ನಡೆದಿದ್ದು, ಇರಾನ್‌ನ ಸುಮಾರು 16 ಮಿಲಿಟರಿ ವಿಮಾನಗಳು ಹಾನಿಗೊಳಗಾಗಿವೆ. ಇಸ್ರೇಲ್ ತನ್ನ ಪರ್ಷಿಯನ್ ಭಾಷೆಯ ಸಾಮಾಜಿಕ ಜಾಲತಾಣದ ಮೂಲಕ ಇರಾನ್‌ನ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ (Assembly of Experts) ಗೆ ನೇರ ಎಚ್ಚರಿಕೆ ನೀಡಿದೆ. “ಮುಂದಿನ ಸುಪ್ರೀಂ ಲೀಡರ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವವರನ್ನು ನಾವು ಗುರಿಯಾಗಿಸಿಕೊಳ್ಳುತ್ತೇವೆ, ಇದು ನಿಮಗೆ ಎಚ್ಚರಿಕೆ” ಎಂದು ಇಸ್ರೇಲ್ ಗುಡುಗಿದೆ.

ಇದನ್ನೂ ಓದಿ: “ಸರ್ವೋಚ್ಚ ನಾಯಕ ಯಾರೇ ಆಗಲಿ ಜೀವಂತ ಬಿಡುವುದಿಲ್ಲ” : ಇರಾನ್​​​ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್ ಈ ಯುದ್ಧವನ್ನು ಕನಿಷ್ಠ 6 ತಿಂಗಳ ಕಾಲ ಮುಂದುವರಿಸುವ ಸಾಮರ್ಥ್ಯ ಹೊಂದಿದ್ದೇವೆ ಎಂದು ಹೇಳಿದ್ದಾರೆ. ಈವರೆಗೆ ನಾವು ಹಳೆಯ ಕ್ಷಿಪಣಿಗಳನ್ನು ಮಾತ್ರ ಬಳಸಿದ್ದೇವೆ, ಮುಂದಿನ ದಿನಗಳಲ್ಲಿ ‘ಅತ್ಯಾಧುನಿಕ ಲಾಂಗ್ ರೇಂಜ್’ ಕ್ಷಿಪಣಿಗಳನ್ನು ಬಳಸುವುದಾಗಿ ಇರಾನ್ ಎಚ್ಚರಿಸಿದೆ.

ವಿದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಕಲಬುರಗಿ, ಮಾರ್ಚ್​ 08: ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿಯೇ ಆಗುತ್ತಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇತ್ತು. ಗ್ಯಾರಂಟಿಗಳಿಂದ ರಾಜ್ಯ ಅಭಿವೃದ್ಧಿ ಆಗುತ್ತಿಲ್ಲ ಎಂದು ಬಿಜೆಪಿ ಆರೋಪಗಳ ಸುರಿ ಮಳೆ ಮಾಡ್ತಿತ್ತು. ಅದಕ್ಕೆ ಅಪವಾದ ಎಂಬಂತೆ ಇಂದು ಸಾವಿರಾರು ಕೋಟಿ ರೂ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಚಾಲನೆ ನೀಡಿದ್ದಾರೆ. ಒಂದೇ ಒಂದು ಕ್ಷೇತ್ರಕ್ಕೆ ಸಾವಿರ ಕೋಟಿ ರೂ ಅನುದಾನ ನೀಡಿದ್ದೇವೆ ಅಂತ ಬಿಜೆಪಿಗೆ ಖಡಕ್ ಉತ್ತರ ನೀಡಿದ್ದಾರೆ‌.

ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿ ಜಾರಿಗೆ ತಂದಿತ್ತು. ಯಾವಾಗ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದವೋ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎನ್ನೋ ಆರೋಪ ಕೇಳಿಬರುತ್ತಲೇ ಇದ್ದವು. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ನೆಪದಲ್ಲಿ ರಾಜ್ಯ ಅಭಿವೃದ್ಧಿಯನ್ನೇ ಮರೆತು ಬಿಟ್ಟಿದೆ ಎಂಬ ಆರೋಪವನ್ನ ಬಿಜೆಪಿ ಮಾಡ್ತಿತ್ತು. ಇದ್ರಿಂದ ರಾಜ್ಯ ಸರ್ಕಾರಕ್ಕೂ ತೀವ್ರ ಮುಜುಗರ ಆಗ್ತಿತ್ತು. ಇಂದು ತೀರುಗೇಟು ಎನ್ನುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಬರೋಬ್ಬರಿ 1069 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ನಾಯಕರ ಆರೋಪಕ್ಕೆ ಕಾಂಗ್ರೆಸ್​ ನಾಯಕರ ತಿರುಗೇಟು ನೀಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು 

ಚಿತ್ತಾಪುರ ಪಟ್ಟಣದ ಬಸ್ ಡಿಪೋ ಪಕ್ಕದಲ್ಲಿ ಬೃಹತ್ ಸಾರ್ವಜನಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದ ಸರ್ಕಾರ, ಡಿಸಿಎಂ ಡಿಕೆ ಶಿವಕುಮಾರ್​ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಿಧ ಕಾರ್ಯಕ್ರಮಗಳನ್ನ ಲೋಕಾರ್ಪಣೆ ಮಾಡಿದರು. ನಂತರ ಮಾತಾನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ನಾವು ಚುನಾವಣಾ ಸಮಯದಲ್ಲಿ ನೀಡಿದ ಭರವಸೆಯಂತೆ ನಡೆಯುತ್ತಿದ್ದೇವೆ. ರಾಜ್ಯದ ಮಹಿಳೆಯರಿಗೆ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಇದನ್ನೂ ಓದಿ: ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಮಲ್ಲಿಕಾರ್ಜುನ ಖರ್ಗೆ

ಕೇವಲ ಒಂದೇ ಒಂದು ವಿಧಾನಸಭಾ ಕ್ಷೇತ್ರಕ್ಕೆ ಸಾವಿರ ಕೋಟಿ ರೂ ಅನುದಾನವನ್ನ ಸರ್ಕಾರ ನೀಡಿದೆ.  ಮಹಿಳೆಯರು ಸ್ವಾಭಿಮಾನದಿಂದ ಬದುಕಬೇಕು ಅಂತ ಪ್ರತಿ ತಿಂಗಳು ಎರಡು ಸಾವಿರ ರೂ ಹಾಗೂ ಉಚಿತ ಬಸ್ ನೀಡಿದ್ದೇವೆ. ಆದರೂ ಬಿಜೆಪಿಯವರು ನಮ್ಮ ಬಗ್ಗೆ ಅಪ್ರಚಾರ ಮಾಡುತ್ತಿದ್ದಾರೆ‌.‌ ಅಲ್ಲದೇ ಗ್ಯಾರಂಟಿಗಳನ್ನ ಬಂದ್ ಮಾಡಬೇಕು ಎನ್ನುತ್ತಿದ್ದಾರೆ ಎಂದರು. ನಮ್ಮ ಸರ್ಕಾರ ಜನರ ದುಡ್ಡನ್ನ ಗ್ಯಾರಂಟಿ ಮೂಲಕ ಜನರಿಗೆ ನೀಡ್ತಿದೆ‌. ಆದರೆ ಬಿಜೆಪಿಯವರು ಜನರ ದುಡ್ಡನ್ನ ಲೂಟಿ ಹೊಡೆಯುತ್ತಿದ್ದರು ಎಂದು ಆರೋಪಿಸಿದರು.

ಚಿತ್ತಾಪುರ ಕ್ಷೇತ್ರದ ಜನ ರಾಜ್ಯಕ್ಕೆ ಭವಿಷ್ಯದ ನಾಯಕನನ್ನ ನೀಡಿದ್ದಿರಿ: ಡಿಕೆ ಶಿವಕುಮಾರ್​

ಇನ್ನು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನ ಹೆಚ್ಚಾಗಿ ಮಾಡುತ್ತಿದ್ದೇವೆ. ಚಿತ್ತಾಪುರ ಕ್ಷೇತ್ರದ ಜನ ರಾಜ್ಯಕ್ಕೆ ಭವಿಷ್ಯದ ನಾಯಕನನ್ನ ನೀಡಿದ್ದಿರಿ ಎಂದು ಪರೋಕ್ಷವಾಗಿ ಪ್ರಿಯಾಂರ್​​ ಪರ ಬ್ಯಾಟ್​ ಬೀಸಿದರು.

ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದ ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಬಿಜೆಪಿಗರ ಆರೋಪಕ್ಕೆ ತಿರುಗೇಟು ನೀಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಯಾವ ಕೆಲಸ ಮಾಡುತ್ತಿಲ್ಲ ಎಂದು ಅಪಪ್ರಚಾರ ಮಾಡ್ತಿದ್ದಾರೆ. ಆದರೆ ಇಂದು ದೊಡ್ಡಮಟ್ಟದ ಕೆಲಸಗಳು ಆಗ್ತಿವೆ. ಈ ಮೊದಲು ಚಿತ್ತಾಪುರಕ್ಕೆ ಬರಲು ರಸ್ತೆಯೇ ಇರಲಿಲ್ಲ. ಆದರೆ ಪ್ರಿಯಾಂಕ್ ಖರ್ಗೆ ಇಲ್ಲಿ ಶಾಸಕರಾದ ಮೇಲೆ ಹೈವೇ ಮಾಡಿಸಿದ್ದಾರೆ. ಆದರೂ ಬಿಜೆಪಿಯವರಿಗೆ ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಎಂದರು.

ಪ್ರಿಯಾಂಕ್ ಬಂದ ಮೇಲೆ ಚಿತ್ತಾಪುರದಲ್ಲಿ ಅಭಿವೃದ್ಧಿ ಆಗುತ್ತಿದೆ. ಕೆಲಸ ಮಾಡುವವರಿಗೆ ನೀವು ಬೆಂಬಲ ಕೊಡಿ. ಈ ಭಾಗಕ್ಕೆ ನಾವು 371ಜೆ ಜಾರಿಗೆ ತಂದೆವು. ಅದರಿಂದ ಸಾವಿರಾರು ಕೋಟಿ ರೂ ಅನುದಾನ ಬರುತ್ತಿದೆ. ಅದರ ಲಾಭ ನಾನೊಬ್ಬನೆ ತೆಗೆದುಕೊಳ್ತಿಲ್ಲ, ಇಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಸಿಗುತ್ತೆ. ಆದರೆ ಕೇಂದ್ರ ಸರ್ಕಾರ ಖರ್ಗೆ ಓಡಾಟ ಮಾಡುತ್ತಾರೆ ಅಂತ ವಿಮಾನ ಬಂದ್ ಮಾಡಿದರು. ಅದಕ್ಕೆ ಇಲ್ಲಿನ ಜನ ಹುಷಾರ್ ಆಗಿ ಇರಬೇಕು ಎಂದು ಕಿವಿ ಮಾತು ಹೇಳಿದರು.

ಇದನ್ನೂ ಓದಿ: ಇವಿಎಂ ಬಗ್ಗೆ ಕರ್ನಾಟಕದ ಬಹುಪಾಲು ಜನರಿಗಿದೆ ವಿಶ್ವಾಸ: ಸಿಂ ಸಿದ್ದರಾಮಯ್ಯ, ಖರ್ಗೆ ತವರಲ್ಲೇ ಹೆಚ್ಚು!

ಒಟ್ಟಿನಲ್ಲಿ ಗ್ಯಾರಂಟಿಗಳ ಮಧ್ಯ ಅಭಿವೃದ್ಧಿಯೂ ನಮ್ಮ ಮೂಲ‌ ಮಂತ್ರ ಅಂತ ಕಾಂಗ್ರೆಸ್​ ನಾಯಕರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಸ್ವಾಭಿಮಾನದ ಬದುಕಿನ ಜೊತೆಗೆ ರಾಜ್ಯದ ಅಭಿವೃದ್ಧಿಯೂ ನಮ್ಮ ಸರ್ಕಾರದ ಬದ್ದತೆ ಎಂದು ಕಲಬುರಗಿಯಲ್ಲಿ ಕಾಂಗ್ರೆಸ್​ ಶಕ್ತಿ ಪ್ರದರ್ಶನ‌ ಮಾಡಿದೆ. ಕುರ್ಚಿ ಕಿತ್ತಾಟದ ಮಧ್ಯೆ ಸಿಎಂ ಅನುಪಸ್ಥಿತಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ಮತ್ತಷ್ಟು ಉಹಾಪೋಹಕ್ಕೆ ರೆಕ್ಕೆಪುಕ್ಕ ಬಂದಿದ್ದು ಸುಳ್ಳಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NZ: 18 ಎಸೆತಗಳಲ್ಲಿ ಅರ್ಧಶತಕ; ಫೈನಲ್‌ನಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

Source link

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮಾರ್ಚ್​​ 08: ಅಮೆರಿಕಾ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge)
ವಾಗ್ದಾಳಿ ಮಾಡಿದ್ದಾರೆ.

ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಟ್ರಂಪ್ ನನ್ನ ಸ್ನೇಹಿತ ಅಂತಾ ಪ್ರಧಾನಿ ಮೋದಿ ಹೇಳುತ್ತಾರೆ. ಟ್ರಂಪ್ ಅತಿ ಹೆಚ್ಚು ಟ್ಯಾಕ್ಸ್ ನಮ್ಮ ಮೇಲೆ ಹಾಕುತ್ತಿದ್ದಾರೆ. ಖಮೇನಿ ಹತ್ಯೆ ಮಾಡಿದರೆ ವಿಶ್ವ ಹೇಗೆ ಸುರಕ್ಷಿತ ಆಗುತ್ತೆ? ನೀವು ಎಲ್ಲರನ್ನೂ ಕೊಲ್ಲುತ್ತಾ ಹೋದರೆ ಎಲ್ಲಿ ಶಾಂತಿ ಬರುತ್ತೆ. ಅಮೆರಿಕ ಜೊತೆಗೂಡಿ ನಮ್ಮ ದೇಶವನ್ನು ಹಾಳು ಮಾಡುತ್ತಿದ್ದೀರಿ. ನೀವು ಸ್ವಾಭಿಮಾನ ಬೆಳೆಸಿಕೊಳ್ಳಿ. ಬ್ರಿಟಿಷರನ್ನ ಒದ್ದು ಓಡಿಸಿದ್ದೆವು. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ ಎಂದು ಕಿಡಿಕಾರಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಟ್ವೀಟ್​

ಜವಾಹರ್ ಲಾಲ್ ನೆಹರು ಪ್ರಧಾನಿಯಾಗಿದ್ದಾಗ ‘ನಾನ್ ಅಲೈನ್ ಮೆಂಟ್’ ಸಿದ್ಧಾಂತ ಅಳವಡಿಸಿಕೊಂಡಿದ್ದು ವಿಶ್ವಶಾಂತಿಗೆ ಕಾರಣವಾಗಿತ್ತು. ಆದರೆ, ಮೋದಿ ಈಗ ಮಾಡುತ್ತಿರುವುದೇನು? ಮೋದಿ ಇಸ್ರೇಲ್​ಗೆ ಹೋಗಿ ಬಂದ‌ ನಂತರ ಅದು ಇರಾನ್ ಮೇಲೆ‌ ಬಾಂಬ್ ಹಾಕಿತು. ಇರಾನ್ ದೇಶದ ಮಖ್ಯಸ್ಥ ಖಮೇನಿಯವರನ್ನು ಅಮೆರಿಕದವರು ಹತ್ಯೆ ಮಾಡಿದರು.‌ ಒಂದು ದೇಶದ ಮುಖ್ಯಸ್ಥನನ್ನು ಹತ್ಯೆ ಮಾಡಿದರೆ ಆ ದೇಶ ಶಾಂತಿಯಿಂದ ಇರುತ್ತದಯೇ? ಇದು ವಿಶ್ವ ಶಾಂತಿಯಿಂದ ಇರಲು ಸಾಧ್ಯವಾಗುತ್ತದೆಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಭಾರತ ದೇಶದ 65% ರೈತರು ಕೃಷಿ ಅವಲಂಬಿತರಾಗಿದ್ದರೆ ಅಮೆರಿಕಾದಲ್ಲಿ 3% ಅವಲಂವಿತರಾಗಿದ್ದಾರೆ. ನಮ್ಮ ದೇಶದ ಉತ್ಪನ್ನಗಳಿಗೆ ಅಮೆರಿಕಾದಲ್ಲಿ ಮನಬಂದಂತೆ ತೆರಿಗೆ ಹಾಕಲಾಗುತ್ತಿದೆ. ಆದರೆ, ಅಮೆರಿಕಾದ ಉತ್ಪನ್ನಗಳ ಮೇಲೆ ಯಾವುದೇ ತೆರಿಗೆಯನ್ನು ಭಾರತ ಹೇರುತ್ತಿಲ್ಲ. ಟ್ರಂಪ್ ಜೊತೆ ದಿನಾಲೂ ಮಾತನಾಡುತ್ತಿರುವುದಾಗಿ ಮೋದಿ ಹೇಳುತ್ತಾರೆ. ತೆರಿಗೆ ಹಾಕುವ ಬಗ್ಗೆನೆ ಮಾತನಾಡುತ್ತಾರಾ? ಎಪ್‌ಸ್ಟೀನ್ ಫೈಲ್ಸ್ ಮೋದಿ ಹೆಸರಿದೆ ಎನ್ನಲಾಗುತ್ತಿದೆ. ಅದನ್ನು ಇಟ್ಟುಕೊಂಡೆ ಟ್ರಂಪ್ ಮೋದಿಗೆ ಹೆದರಿಸುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs NZ: ಸೊನ್ನೆ ಸುತ್ತಿದ ನಾಯಕ ಸೂರ್ಯ; 4ನೇ ಫೈನಲ್​ನಲ್ಲೂ ಇತಿಹಾಸ ಬದಲಾಗಲಿಲ್ಲ

ನ್ಯೂಜಿಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 255 ರನ್​ಗಳ ದಾಖಲೆ ಮೊತ್ತ ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ದಾಖಲಾದ ಅತಿ ದೊಡ್ಡ ಮೊತ್ತ ಇದಾಗಿದೆ. ಟೀಂ ಇಂಡಿಯಾ ಈ ದಾಖಲೆ ಬರೆಯುವಲ್ಲಿ ತಂಡದ ಮೂವರು ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳ ತಲಾ ಅರ್ಧಶತಕದ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಅವರ ಅಬ್ಬರದಿಂದಾಗಿ ಟೀಂ ಇಂಡಿಯಾ 200 ರನ್​ಗಳ ದಾಟಿತು. ಆದರೆ ಈ ಮೂವರನ್ನು ಹೊರತುಪಡಿಸಿ ಆ ಬಳಿಕ ಬಂದವರು ಪರಿಣಾಮಕಾರಿಯಾಗಲಿಲ್ಲ. ಅದರಲ್ಲೂ ನಾಯಕ ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿ ನಿರಾಶೆ ಮೂಡಿಸಿದರು. ಈ ಮೂಲಕ ಟಿ20 ವಿಶ್ವಕಪ್ ಫೈನಲ್​ನಲ್ಲಿ ಭಾರತದ ನಾಯಕರ ರನ್ ಬರವನ್ನು ಈ ಪಂದ್ಯದಲ್ಲೂ ಮುಂದುವರೆಸಿದರು.

ವಾಸ್ತವವಾಗಿ ಟೀಂ ಇಂಡಿಯಾ ಇದುವರೆಗೆ ನಾಲ್ಕು ಬಾರಿ ಟಿ20 ವಿಶ್ವಕಪ್ ಫೈನಲ್ ಆಡಿದೆ. ಇದರಲ್ಲಿ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಎರಡು ಫೈನಲ್​ಗಳನ್ನು ಆಡಿದರೆ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಒಂದು ಹಾಗೂ ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಫೈನಲ್ ಪಂದ್ಯವನ್ನು ಆಡುತ್ತಿದೆ. ಆದರೆ ಈ ನಾಲ್ಕು ಫೈನಲ್ ಪಂದ್ಯಗಳಲ್ಲಿ ಟೀಂ ಇಂಡಿಯಾ ನಾಯಕರಿಗೆ ಒಂದಂಕಿ ದಾಟಿ ಮುಂದಕ್ಕೆ ಹೋಗಲು ಸಾಧ್ಯವಾಗಿಲ್ಲ. ಅಂದರೆ ಈ ಮೂವರು ನಾಯಕರು ಟಿ20 ವಿಶ್ವಕಪ್ ಫೈನಲ್​ನಲ್ಲಿ 10 ರನ್​ ಒಳಗೆ ವಿಕೆಟ್ ಒಪ್ಪಿಸಿದ್ದಾರೆ.

ಮೊದಲನೆಯದಾಗಿ, 2007 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಎಂಎಸ್ ಧೋನಿ ಕೇವಲ 6 ರನ್ ಗಳಿಸಿದರೆ, 2014 ರ ಫೈನಲ್‌ನಲ್ಲಿ ಕೇವಲ 4 ರನ್​ ಕಲೆಹಾಕಿದ್ದರು. 2024 ರಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್​ನಲ್ಲಿ ರೋಹಿತ್ ಶರ್ಮಾ ಕೂಡ 9 ರನ್‌ಗಳಿಗೆ ಔಟಾಗಿದ್ದರು. ಆದಾಗ್ಯೂ ಈ ಇಬ್ಬರು ಫೈನಲ್‌ನಲ್ಲಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಈ ಹಿಂದಿನ ಒಂದಂಕಿ ಸರಣಿಯನ್ನು ಮುರಿಯುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಅದರಂತೆ ಕಿವೀಸ್ ವಿರುದ್ಧ ಅವರ ಪ್ರದರ್ಶನವೂ ಅದ್ಭುತವಾಗಿತ್ತು. ಆದರೆ ಸೂರ್ಯನಿಗೆ ಈ ಪಂದ್ಯದಲ್ಲಿ ಖಾತೆಯನ್ನು ತೆರೆಯಲು ಸಾಧ್ಯವಾಗಲಿಲ್ಲ.

ಇದರೊಂದಿಗೆ, ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲ ಎಸೆತದಲ್ಲೇ ಸೊನ್ನೆಗ ಔಟಾದ ನಾಲ್ಕನೇ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅವರಿಗಿಂತ ಮೊದಲು ಪಾಕಿಸ್ತಾನದ ಶಾಹಿದ್ ಅಫ್ರಿದಿ, ವೆಸ್ಟ್ ಇಂಡೀಸ್‌ನ ಆಂಡ್ರೆ ರಸೆಲ್ ಮತ್ತು ವೆಸ್ಟ್ ಇಂಡೀಸ್‌ನ ಲೆಂಡ್ಲ್ ಸಿಮನ್ಸ್ ಶೂನ್ಯಕ್ಕೆ ಔಟಾಗಿದ್ದರು. ಹಾಗೆಯೇ ಇದು ಅಂತರರಾಷ್ಟ್ರೀಯ ಟಿ20 ವೃತ್ತಿಜೀವನದಲ್ಲಿ ಇದು ಸೂರ್ಯಕುಮಾರ್ ಯಾದವ್ ಅವರ ಮೂರನೇ ಗೋಲ್ಡನ್ ಡಕ್ ಸಾಧನೆಯಾಗಿದೆ. ಇದಕ್ಕೂ ಮೊದಲು ಸೂರ್ಯ 42 ತಿಂಗಳ ಹಿಂದೆ ಅಂದರೆ 2022 ರ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಎಸೆತದಲ್ಲೇ ಬಲಿಯಾಗಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮೀಸಲಾತಿ ಅನ್ಯಾಯ ಆರೋಪ: ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದ ಬಿಜೆಪಿ

ಚಿತ್ರದುರ್ಗ, ಮಾರ್ಚ್​ 08: ನಗರದಲ್ಲಿ ಬಿಜೆಪಿಯಿಂದ ಇಂದು ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬಿಜೆಪಿ ಜನಾಂದೋಲನ ಮುಖ್ಯಸ್ಥ ಪಿ. ರಾಜೀವ್ ಅವರು ಮಾತನಾಡಿ, ಮಾರ್ಚ್ 23ರೊಳಗೆ ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟದ ಸ್ವರೂಪ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮದುವೆಗೆ ಸ್ವಲ್ಪ ದಿನ ಬಾಕಿ: ಸಮವಸ್ತ್ರದಲ್ಲೇ ವೀರ ಯೋಧ ಅನುಜ್​ಗೆ​​​​​​ ಅಂತಿಮ ವಿದಾಯ ಸಲ್ಲಿಸಿದ ಭಾವಿ ಪತ್ನಿ!

ದೆಹಲಿ, ಮಾ.8: ದೇಶಸೇವೆಯಲ್ಲಿದ್ದಾಗ ವೀರಮರಣವನ್ನಪ್ಪಿದ ಭಾರತೀಯ ವಾಯುಪಡೆಯ (IAF) ಸ್ಕ್ವಾಡ್ರನ್ ಲೀಡರ್ ಅನುಜ್ ವಶಿಷ್ಠ ಅವರ ಅಂತಿಮ ಸಂಸ್ಕಾರವು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ವೇಳೆ ಅವರ ಭಾವಿ ಪತ್ನಿ, ಸ್ವತಃ ವಾಯುಪಡೆಯ ಪೈಲಟ್ ಆಗಿರುವ ಅಧಿಕಾರಿ ಅಂತಿಮ ನಮನ ಸಲ್ಲಿಸಿದ ದೃಶ್ಯ ಪ್ರತಿಯೊಬ್ಬರ ಕಣ್ಣಾಲಿಗಳನ್ನು ತೇವಗೊಳಿಸಿದೆ. ಸ್ಕ್ವಾಡ್ರನ್ ಲೀಡರ್ ಅನುಜ್ ವಶಿಷ್ಠ ಅವರು ಕರ್ತವ್ಯದ ಅವಧಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾಗಿದ್ದರು. ಅವರ ಪಾರ್ಥಿವ ಶರೀರಕ್ಕೆ ಸಕಲ ಮಿಲಿಟರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಅನುಜ್ ಅವರ ಭಾವಿ ಪತ್ನಿ ಕೂಡ ಭಾರತೀಯ ವಾಯುಪಡೆಯಲ್ಲೇ ಅಧಿಕಾರಿಯಾಗಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖದ ನಡುವೆಯೂ, ಅವರು ತಮ್ಮ ವಾಯುಪಡೆಯ ಸಮವಸ್ತ್ರದಲ್ಲೇ (Uniform) ಬಂದು ಸಲ್ಯೂಟ್ ಮಾಡುವ ಮೂಲಕ ಅಂತಿಮ ವಿದಾಯ ಸಲ್ಲಿಸಿದರು. ಈ ಭಾವುಕ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ದೇಶದಾದ್ಯಂತ ಜನರು ವೀರ ಯೋಧನ ತ್ಯಾಗಕ್ಕೆ ಕಂಬನಿ ಮಿಡಿಯುತ್ತಿದ್ದಾರೆ. ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು “ಅಮರ ರಹೇ” ಘೋಷಣೆಗಳನ್ನು ಕೂಗಿದರು. ಯೋಧನ ಕುಟುಂಬದ ಧೈರ್ಯ ಮತ್ತು ಅವರ ಭಾವಿ ಪತ್ನಿಯ ಕರ್ತವ್ಯ ನಿಷ್ಠೆಗೆ ನೆಟ್ಟಿಗರು ನಮನ ಸಲ್ಲಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version