ಪೊಲೀಸ್​ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿಡಲು ಅಧಿಕಾರ ಕೊಟ್ಟವರ್ಯಾರು? ರೌಡಿಶೀಟರ್​​ ಅರ್ಜಿ ವಜಾ

ಬೆಂಗಳೂರು, ಏಪ್ರಿಲ್​ 01: ರೌಡಿಶೀಟರ್‌ನಿಂದ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿನ ಟ್ರಸ್ಟ್‌ನಡಿ ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನಕಾರ ಎತ್ತಿರುವ ಕರ್ನಾಟಕ  ಹೈಕೋರ್ಟ್ (High Court), ತಡೆ ನೀಡಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ತುಮಕೂರಿನ ತಿಲಕ್‌ಪಾರ್ಕ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿತ್ತು. ಪ್ರಕರಣ ರದ್ದುಪಡಿಸುವಂತೆ ಕೋರಿ  ಮೊಹಮ್ಮದ್ ಖಲಂದರ್, ಗೌಸ್ ಪಾಷಾ ಮತ್ತು ಆಶಿಯಾ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ಮಾಡಿ ರೌಡಿಶೀಟರ್‌…

Read More

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ – Kannada News | Karnataka Governor Thaawarchand Gehlot refuses to address joint session of legislature starting January 22

ಬೆಂಗಳೂರು, (ಜನವರಿ 21): ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 22) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಜಂಟಿ ಅಧಿವೇಶನ (Joint Session) ಆರಂಭಕ್ಕೂ ಒಂದು ದಿನದ ಮುನ್ನವೇ ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ. ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ…

Read More

50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರು ತಮ್ಮ ಅಚಲವಾದ ಫಿಟ್ನೆಸ್ ಶಿಸ್ತಿಗೆ ಹೆಸರುವಾಸಿಯಾಗಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಅವರು ದಿನನಿತ್ಯದ ಯೋಗ, ಜಿಮ್ ವರ್ಕೌಟ್ ಮತ್ತು ಡಯೆಟ್ ಮಾಡುತ್ತಾರೆ. ‘ಆರೋಗ್ಯವಾಗಿರಿ, ಸಂತೋಷವಾಗಿರಿ’ ಎಂಬುದು ಅವರ ಧ್ಯೇಯವಾಕ್ಯ. ಅವರು ತಮ್ಮ ದೈನಂದಿನ ವ್ಯಾಯಾಮದ ದಿನಚರಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಸ್ನಾಯುಗಳ ಬಲವರ್ಧನೆಗೆ ಒತ್ತು ನೀಡುವ ಅತ್ಯಂತ ಕಠಿಣ ಹಾಗೂ ಸವಾಲಿನ ವ್ಯಾಯಾಮಗಳ ಫೋಟೋ ಮತ್ತು ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಆ ಮೂಲಕ ಅಭಿಮಾನಿಗಳಿಗೂ ಸ್ಪೂರ್ತಿ ತುಂಬುತ್ತಾರೆ….

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಹನಿಮೂನ್ ಫೋಟೋ ವೈರಲ್

ದಕ್ಷಿಣ ಭಾರತದ ಖ್ಯಾತ ಸೆಲೆಬ್ರಿಟಿಗಳಾದ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಮದುವೆಯ ಬಳಿಕ ಹನಿಮೂನ್​​ಗೆ ತೆರಳಿದ್ದಾರೆ. ಈ ನವಜೋಡಿಯ ಹನಿಮೂನ್ (Honeymoon) ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉದಯಪುರದಲ್ಲಿ ನಡೆದ ಅದ್ದೂರಿ ಮದುವೆಯ ನಂತರ, ಈ ದಂಪತಿ ಥೈಲ್ಯಾಂಡ್‌ಗೆ ಹಾರಿದ್ದಾರೆ. ಅಲ್ಲಿನ ಸುಂದರ ದ್ವೀಪದಲ್ಲಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಖಾಸಗಿತನವನ್ನು ಕಾಪಾಡಿಕೊಳ್ಳಲು ಯಾವುದೇ ಐಷಾರಾಮಿ ರೆಸಾರ್ಟ್‌ ಬದಲು ವಿಲ್ಲಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈಗ ವೈರಲ್ ಆಗಿರುವ ಫೋಟೋದಲ್ಲಿ, ಪ್ರಕೃತಿಯ ನಡುವೆ…

Read More

ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷರನ್ನ ಭೇಟಿಯಾದ ಸಚಿವ ಮಹದೇವಪ್ಪ: ಸಂಸದ ಸುನಿಲ್ ಬೋಸ್ ಮನೆಯಲ್ಲಿ ಡಿನ್ನರ್ ಮೀಟಿಂಗ್ – Kannada News | Minister HC Mahadevappa Meets NCSC Chairman in Delhi; High Level Dinner Meeting Sparks Political Rumors

ಬೆಂಗಳೂರು/ದೆಹಲಿ, ಏಪ್ರಿಲ್ 29: ಕರ್ನಾಟಕದ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ದೆಹಲಿಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಅಧ್ಯಕ್ಷ ಕಿಶೋರ್ ಮಕ್ವಾನ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ. ವಿಶೇಷವಾಗಿ ಕರ್ನಾಟಕದಲ್ಲಿ ಜಾರಿಗೆ ತರಲಾದ ‘ಒಳ ಮೀಸಲಾತಿ’ ಕುರಿತು ಅವರು ಆಯೋಗಕ್ಕೆ ಮಾಹಿತಿ ನೀಡಿದ್ದು, ಈ ನಿರ್ಧಾರಕ್ಕೆ ಕಿಶೋರ್ ಮಕ್ವಾನ ಸಂತಸ ವ್ಯಕ್ತಪಡಿಸಿದ್ದಾರೆ. ಇತರೆ ರಾಜ್ಯಗಳೂ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ. ಕುತೂಹಲ…

Read More

ಡಿಕೆ ಶಿವಕುಮಾರ್ ಹುಟ್ಟುಹಬ್ಬದಂದು ಹೈಕಮಾಂಡ್​​ ನೀಡಲಿದೆ ಬಿಗ್​​​​ ಗಿಫ್ಟ್​? ಅಂದು ಅಭಿಮಾನಿಗಳಿಗೆ ಡಿಸಿಎಂ ನೀಡಿದ ಖಡಕ್ ಸೂಚನೆ ಏನು? – Kannada News | Karnataka Cabinet Expansion: D.K. Shivakumar and Ministers Await High Commands Decision Amidst Birthday Buzz

ಬೆಂಗಳೂರು, ಏ. 26: ಮೇ 15ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಕುತೂಹಲಕಾರಿ ಚರ್ಚೆಗಳು ನಡೆಯುತ್ತಿವೆ. ಅವರ ಅಭಿಮಾನಿಗಳು ಮತ್ತು ಬೆಂಬಲಿಗ ಶಾಸಕರು, ಈ ದಿನದಂದು ಯಾವುದೇ ಶುಭ ಸುದ್ದಿ ನಿರೀಕ್ಷೆಯಲ್ಲಿ ಇದ್ದಾರೆ. ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರ ಹೊರಬೀಳುವ ಸಾಧ್ಯತೆ ಬಗ್ಗೆ ಮಾಧ್ಯಮಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ. ಆದರೆ, ಡಿಕೆ ಶಿವಕುಮಾರ್ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದು, ತಾನು ಮುಖ್ಯಮಂತ್ರಿ ಹುದ್ದೆಯ ಚರ್ಚೆಯನ್ನು…

Read More

Horoscope Today: ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 28, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಏಕಾದಶಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಈ ಶುಭ ದಿನದಂದು ಸೂರ್ಯ ಭಗವಾನರು ಮೇಷ ರಾಶಿಯ ಭರಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿದ್ದರೆ, ಚಂದ್ರನು ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ…

Read More

ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡ ಯುವತಿ

ತಂದೆ-ತಾಯಿಗೂ ಮಕ್ಕಳು ಮದುವೆಯಾಗಬೇಕು, ಅವರ ಜೀವನವನ್ನು ಅವರು ಕಟ್ಟಿಕೊಳ್ಳಬೇಕೆಂಬ ಕನಸಿರುತ್ತದೆ. ಹಾಗೆಯೇ ಮಕ್ಕಳಿಗೂ ತಮ್ಮ ಕಾಲ ಮೇಲೆ ನಾವು ನಿಲ್ಲಬೇಕು ಚೆನ್ನಾಗಿ ಸಂಪಾದನೆ ಮಾಡಬೇಕು ಮದುವೆ ಏನಿದ್ದರೂ ಆಮೇಲೆ ಎನ್ನುವ ಮನಸ್ಥಿತಿ ಇರುತ್ತದೆ. ಆದರೆ ಮಕ್ಕಳಿಗೆ ಅಪ್ಪ-ಅಮ್ಮನ ನೋಯಿಸಲೂ ಇಷ್ಟ ಇರುವುದಿಲ್ಲ. ಅಂಥಾ ಸಮಯದಲ್ಲಿ ಎಂಥಾ ಆಲೋಚನೆಗಳು ಬರುತ್ತವೆ ನೋಡಿ. ಯುವತಿಯೊಬ್ಬಳು ಮದುವೆ ಒತ್ತಡದಿಂದ ತಪ್ಪಿಸಿಕೊಳ್ಳಲು ತಲೆ ಬೋಳಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ಹೆಣ್ಣುಮಕ್ಕಳ ಮೇಲೆ ಇರಿಸಲಾಗಿರುವ ಸಾಮಾಜಿಕ ನಿರೀಕ್ಷೆಗಳ ಬಗ್ಗೆ ವ್ಯಾಪಕ…

Read More

Earth Hour 2026: ಒಂದು ಗಂಟೆ ದೀಪ ಆರಿಸುವುದರಿಂದ ಪರಿಸರಕ್ಕಷ್ಟೇ ಅಲ್ಲ, ನಿಮ್ಮ ಮೆದುಳಿಗೂ ಇದೆ ಲಾಭ!

ಬೆಂಗಳೂರು, ಮಾ.27: ಪ್ರತಿ ವರ್ಷದಂತೆ ಈ ವರ್ಷವೂ ಮಾರ್ಚ್ ಕೊನೆಯ ಶನಿವಾರದಂದು ವಿಶ್ವದಾದ್ಯಂತ ಲಕ್ಷಾಂತರ ಜನರು ಒಂದು ಗಂಟೆಯ ಕಾಲ ದೀಪಗಳನ್ನು ಆರಿಸುವ ಮೂಲಕ ‘ಅರ್ಥ್ ಅವರ್’ ಆಚರಿಸಲಿದ್ದಾರೆ. 2007ರಲ್ಲಿ ಡಬ್ಲ್ಯೂಡಬ್ಲ್ಯೂಎಫ್ (WWF) ಆರಂಭಿಸಿದ ಈ ಅಭಿಯಾನವು ಇಂದು ವಿಶ್ವದ 190ಕ್ಕೂ ಹೆಚ್ಚು ದೇಶಗಳಲ್ಲಿ ಹರಡಿದ್ದು, ಹವಾಮಾನ ಬದಲಾವಣೆಯ ವಿರುದ್ಧದ ಅತಿದೊಡ್ಡ ಆಂದೋಲನವಾಗಿ ಬೆಳೆದಿದೆ. ನಾವು ನಮ್ಮ ದೇಹವನ್ನು ಹೇಗೆ ನಡೆಸಿಕೊಳ್ಳುತ್ತೇವೆಯೋ, ಪರಿಸರವೂ ಹಾಗೆಯೇ ಇರುತ್ತದೆ. ಅಲ್ಟ್ರಾ-ಪ್ರೊಸೆಸ್ಡ್ ಆಹಾರ, ಅತಿಯಾದ ಸ್ಕ್ರೀನ್ ಟೈಮ್ ಮತ್ತು ದೈಹಿಕ ಚಟುವಟಿಕೆಯ…

Read More

ಕರ್ನಾಟಕ ಹವಾಮಾನ ವರದಿ: ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ – Kannada News | Bengaluru temperature: Dry weather in Karnataka, Clear sky in Bengaluru and raise in temperature

ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ ಬೆಂಗಳೂರು, ಮಾರ್ಚ್​ 05: ಇಂದು ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ (Weather Forecast) ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ…

Read More