Headlines

Weekly Love Horoscope: ಮಾ 08ರಿಂದ 14; ಈ ವಾರದ ಪ್ರೇಮ-ಪ್ರೀತಿ ಭವಿಷ್ಯ ತಿಳಿಯಿರಿ

ಮಾರ್ಚ್ 08ರಿಂದ ಮಾರ್ಚ್ 14ರವರೆಗೆ ಪ್ರೇಮದಲ್ಲಿ, ದಾಂಪತ್ಯದಲ್ಲಿ ಹಲವು ಬದಲಾವಣೆಗಳನ್ನು ಕಾಣಬಹುದು. ಸತ್ತ್ವವುಳ್ಳದ್ದು ಉಳಿಯುವುದು. ನಿಸ್ಸತ್ತ್ವ ಅಳಿಯುವುದು. ಎಲ್ಲವೂ ನಿಮ್ಮ ನಡವಳಿಕೆ ಹಾಗೂ ಮಾತನ್ನು ಅವಲಂಬಿಸಿದೆ. ಶುಕ್ರನು ತನ್ನ ಉನ್ನತ ಸ್ಥಾನಕ್ಕೆ ಹೋದ ಕಾರಣ ಹಲವು ಶುಭವನ್ನು ನಿರೀಕ್ಷಿಸಬಹುದು. ಮೇಷ: ​ಶುಕ್ರನ ಸಂಚಾರವು ಪ್ರೇಮಿಗಳಲ್ಲಿ ಹೊಸ ಉತ್ಸಾಹ ತುಂಬಲಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡಬಹುದು, ಆದರೆ ಸಂವಹನದಿಂದ ಬಗೆಹರಿಯಲಿವೆ. ಅವಿವಾಹಿತರಿಗೆ ಮದುವೆಯ ಮಾತುಕತೆಗಳು ಅಂತಿಮವಾಗಬಹುದು. ವಿಚ್ಛೇದನ ಕೋರಿದವರಿಗೆ ನ್ಯಾಯಾಲಯದಿಂದ ಸಮಾಧಾನಕರ ವಾರ್ತೆ ಸಿಗುವ ಸಾಧ್ಯತೆಯಿದೆ. ​ ವೃಷಭ:…

Read More

ಮತ್ತೆ ದಕ್ಷಿಣದ ನಿರ್ದೇಶಕನ ಕೈ ಹಿಡಿದ ಸಲ್ಲು, ಈ ಬಾರಿ ರಾಷ್ಟ್ರಪ್ರಶಸ್ತಿ ವಿಜೇತನ ಜೊತೆ

ಸಲ್ಮಾನ್ ಖಾನ್ (Salman Khan) ಬಾಲಿವುಡ್​​ನ ಸೂಪರ್ ಸ್ಟಾರ್. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಅವರಿಗೆ ದೊಡ್ಡ ಬಾಕ್ಸ್ ಆಫೀಸ್​​ ಗೆಲುವು ಸಿಕ್ಕೇ ಇಲ್ಲ. ಅತ್ತ ಶಾರುಖ್ ಖಾನ್ ದೊಡ್ಡ ದೊಡ್ಡ ಹಿಟ್ ನೀಡುತ್ತಿದ್ದಾರೆ. ಸಲ್ಲು ಅವರಿಂಗತಲೂ ಕಿರಿಯರಾದ ರಣ್​​ಬೀರ್ ಕಪೂರ್, ರಣ್ವೀರ್ ಸಿಂಗ್, ವಿಕ್ಕಿ ಕೌಶಲ್ ಅವರುಗಳು 1000 ಕೋಟಿ ಕಲೆಕ್ಷನ್ ತೆಗೆಯುತ್ತಿದ್ದಾರೆ ಆದರೆ ಸಲ್ಲು ಸಿನಿಮಾಗಳು ಮಾತ್ರ ಫ್ಲಾಪ್ ಮೇಲೆ ಫ್ಲಾಪ್ ಆಗುತ್ತಿವೆ. ಇದೀಗ ಸೋಲಿನ ಸುಳಿಯಿಂದ ಹೊರಬರಲು ಸಲ್ಮಾನ್ ಖಾನ್ ಮತ್ತೊಮ್ಮೆ ದಕ್ಷಿಣದ ನಿರ್ದೇಶಕನ…

Read More

ಶಿವರಾಜ್ ಕುಮಾರ್​​ ಬಗ್ಗೆ ವಿಷ್ಣುವರ್ಧನ್​​ಗಿತ್ತು ಅಪಾರ ಪ್ರೀತಿ, ಕೊಟ್ಟಿದ್ದರು ಅಮೂಲ್ಯ ಉಡುಗೊರೆ

ವಿಷ್ಣುವರ್ಧನ್ (Vishnuvardhan), ಕನ್ನಡ ಚಿತ್ರರಂಗದ ಮೇರು ನಟ. ಹಲವಾರು ಸೂಪರ್ ಹಿಟ್, ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ಅವರು ಕನ್ನಡಕ್ಕೆ ನೀಡಿದ್ದಾರೆ. ಅಣ್ಣಾವ್ರ ಬಳಿಕ ಅತಿ ಹೆಚ್ಚು ಗೌರವಿಸಲ್ಪಡುವ ನಟ ವಿಷ್ಣುವರ್ಧನ್. ಆದರೆ ಒಂದು ಸಮಯದಲ್ಲಿ ವಿಷ್ಣುವರ್ಧನ್ ಮತ್ತು ರಾಜ್​​ಕುಮಾರ್ ಅವರ ನಡುವೆ ವೈಮನಸ್ಯ ಇದೆ ಎಂದೆಲ್ಲ ಸುದ್ದಿಗಳು ಹರಿದಾಡಿದ್ದವು. ರಾಜ್​​ಕುಮಾರ್ ಅಭಿಮಾನಿಗಳು ವಿಷ್ಣುವರ್ಧನ್ ಮೇಲೆ ದಾಳಿ ಮಾಡಿದ್ದರು, ವಿಷ್ಣುವರ್ಧನ್ ಅಭಿಮಾನಿಗಳು ಸಹ ರಾಜ್​​ಕುಮಾರ್ ಅವರ ಸಿನಿಮಾಗಳ ಸೋಲಿಸಲು ಯತ್ನಿಸಿದ್ದರು ಎಂದೆಲ್ಲ ಹೇಳಲಾಗುತ್ತದೆ. ಆದರೆ ವೈಯಕ್ತಿಕವಾಗಿ ರಾಜ್​​ಕುಮಾರ್ ಮತ್ತು…

Read More

ಇರಾನ್​ ರಾಜಧಾನಿ ಮೇಲೆ ಇಸ್ರೇಲ್ ವಾಯುದಾಳಿ: ತೈಲ ಡಿಪೋಗಳು ಸ್ಫೋಟ, ಬಾನೆತ್ತರಕ್ಕೆ ಚಿಮ್ಮಿದ ಬೆಂಕಿ

ಟೆಹ್ರಾನ್, ಮಾ.8: ಇಸ್ರೇಲ್ ಮತ್ತು ಇರಾನ್ ನಡುವಿನ ಮಹಾಯುದ್ಧವು ಸ್ಫೋಟಕ ರೂಪ ಪಡೆದಿದೆ. ಶನಿವಾರ ರಾತ್ರಿ ಇಸ್ರೇಲ್ ಯುದ್ಧವಿಮಾನಗಳು ಟೆಹ್ರಾನ್‌ನ ಐದು ಪ್ರಮುಖ ತೈಲ ಡಿಪೋಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಭೀಕರ ದಾಳಿಯಿಂದಾಗಿ ಇಡೀ ನಗರವು ಸ್ಫೋಟ ಮತ್ತು ದಟ್ಟವಾದ ಹೊಗೆಯಿಂದ ಆವೃತವಾಗಿದೆ. ತೈಲ ಟ್ಯಾಂಕರ್‌ಗಳಿಂದ ಸೋರಿಕೆಯಾದ ಇಂಧನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ರಸ್ತೆಗಳಲ್ಲಿ “ಬೆಂಕಿಯ ನದಿ” ಹರಿಯುತ್ತಿರುವಂತೆ ಕಂಡುಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ವಿವರಿಸಿದ್ದಾರೆ. ಶಹ್ರಾನ್ ಮತ್ತು ಅಘದಾಸಿಯಾದಂತಹ ಪ್ರಮುಖ ಡಿಪೋಗಳು ಧಗಧಗಿಸಿ ಉರಿಯುತ್ತಿವೆ. ತೈಲ ಮತ್ತು ಹೊಗೆಯ…

Read More

ಪ್ರಿಯಾಂಕ್​ ಖರ್ಗೆ ತವರು ಜಿಲ್ಲೆಯಲ್ಲಿ ಕೋಟ್ಯಂತರ ರೂ ಕಾಮಗಾರಿಗೆ ಚಾಲನೆ: ಬಿಜೆಪಿಗರ ಆರೋಪಗಳಿಗೆ ತಿರುಗೇಟು

ಕಲಬುರಗಿ, ಮಾರ್ಚ್​ 08: ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿಯೇ ಆಗುತ್ತಿಲ್ಲ ಎನ್ನುವ ಆರೋಪ ಕೇಳಿಬರುತ್ತಲೇ ಇತ್ತು. ಗ್ಯಾರಂಟಿಗಳಿಂದ ರಾಜ್ಯ ಅಭಿವೃದ್ಧಿ ಆಗುತ್ತಿಲ್ಲ ಎಂದು ಬಿಜೆಪಿ ಆರೋಪಗಳ ಸುರಿ ಮಳೆ ಮಾಡ್ತಿತ್ತು. ಅದಕ್ಕೆ ಅಪವಾದ ಎಂಬಂತೆ ಇಂದು ಸಾವಿರಾರು ಕೋಟಿ ರೂ ಕಾಮಗಾರಿಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಚಾಲನೆ ನೀಡಿದ್ದಾರೆ. ಒಂದೇ ಒಂದು ಕ್ಷೇತ್ರಕ್ಕೆ ಸಾವಿರ ಕೋಟಿ ರೂ ಅನುದಾನ ನೀಡಿದ್ದೇವೆ ಅಂತ ಬಿಜೆಪಿಗೆ ಖಡಕ್ ಉತ್ತರ ನೀಡಿದ್ದಾರೆ‌. ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ…

Read More

IND vs NZ: 18 ಎಸೆತಗಳಲ್ಲಿ ಅರ್ಧಶತಕ; ಫೈನಲ್‌ನಲ್ಲಿ ವಿಶ್ವ ದಾಖಲೆ ಬರೆದ ಅಭಿಷೇಕ್ ಶರ್ಮಾ

ಇಡೀ ಟಿ20 ವಿಶ್ವಕಪ್​ನಲ್ಲಿ ಮೌನಕ್ಕೆ ಶರಣಾಗಿದ್ದ ಅಭಿಷೇಕ್ ಶರ್ಮಾ ಅವರ ಬ್ಯಾಟ್ ಕೊನೆಗೂ ಸದ್ದು ಮಾಡಿದೆ. ಲೀಗ್ ಹಂತದಿಂದ ಹಿಡಿದು ಫೈನಲ್​ವರೆಗೂ ಅಭಿಷೇಕ್ ಶರ್ಮಾ ಬ್ಯಾಟ್​ನಿಂದ ಸಿಡಿದಿದ್ದು, ಕೇವಲ ಒಂದೇ ಒಂದು ಅರ್ಧಶತಕ ಮಾತ್ರ. ಹೀಗಾಗಿ ಅಭಿಷೇಕ್ ಮೇಲೆ ಇಡೀ ಭಾರತದ ಅಭಿಮಾನಿಗಳು ಅಸಮಾಧಾನಗೊಂಡಿದ್ದರು. ಹೀಗಿದ್ದರೂ ಅಭಿಷೇಕ್​ಗೆ ಫೈನಲ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿತು. ನಾಯಕ ಹಾಗೂ ಆಯ್ಕೆ ಮಂಡಳಿಯ ನಂಬಿಕೆ ಉಳಿಸಿಕೊಳ್ಳಲು ಕೊನೆಯ ಅವಕಾಶ ಪಡೆದಿದ್ದ ಅಭಿಷೇಕ್ ಶರ್ಮಾ ಅವಶ್ಯಕ ಸಮಯದಲ್ಲಿ ಲಯ ಕಂಡುಕೊಂಡಿದ್ದಾರೆ. ನರೇಂದ್ರ…

Read More

ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ ಎಂದ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮಾರ್ಚ್​​ 08: ಅಮೆರಿಕಾ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್ ಒಬ್ಬ ಡಿಕ್ಟೇಟರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗುಲಾಮರಂತೆ ನಡೆದುಕೊಳ್ಳುತ್ತಿದ್ದಾರೆ. ನಮ್ಮನ್ನು ಮತ್ತೆ ಗುಲಾಮಗಿರಿಗೆ ತಳ್ಳುತ್ತಿದ್ದಾರೆ. ರಷ್ಯಾದಿಂದ ಈಗ ಒಂದು ತಿಂಗಳ ಮಾತ್ರ ತೈಲ ಖರೀದಿಗೆ ಅಮೆರಿಕ ಅನುಮತಿ ನೀಡಿದೆ. ಅಮೆರಿಕದವರು ಹೇಳಿದಂತೆ ಮೋದಿ ಕೇಳುತ್ತಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರಿವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿ ಮಾಡಿದ್ದಾರೆ. ಅಮೆರಿಕಾಗೆ ಗುಲಾಮರನ್ನ ಮಾಡುತ್ತಿದ್ದಿರಿ…

Read More

IND vs NZ: ಸೊನ್ನೆ ಸುತ್ತಿದ ನಾಯಕ ಸೂರ್ಯ; 4ನೇ ಫೈನಲ್​ನಲ್ಲೂ ಇತಿಹಾಸ ಬದಲಾಗಲಿಲ್ಲ

ನ್ಯೂಜಿಲೆಂಡ್ ವಿರುದ್ಧದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 255 ರನ್​ಗಳ ದಾಖಲೆ ಮೊತ್ತ ಕಲೆಹಾಕಿತು. ಟಿ20 ವಿಶ್ವಕಪ್ ಫೈನಲ್ ಇತಿಹಾಸದಲ್ಲಿ ದಾಖಲಾದ ಅತಿ ದೊಡ್ಡ ಮೊತ್ತ ಇದಾಗಿದೆ. ಟೀಂ ಇಂಡಿಯಾ ಈ ದಾಖಲೆ ಬರೆಯುವಲ್ಲಿ ತಂಡದ ಮೂವರು ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳ ತಲಾ ಅರ್ಧಶತಕದ ಇನ್ನಿಂಗ್ಸ್ ಪ್ರಮುಖ ಪಾತ್ರವಹಿಸಿತು. ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಅವರ ಅಬ್ಬರದಿಂದಾಗಿ ಟೀಂ ಇಂಡಿಯಾ 200 ರನ್​ಗಳ ದಾಟಿತು. ಆದರೆ…

Read More

ಮೀಸಲಾತಿ ಅನ್ಯಾಯ ಆರೋಪ: ಸರ್ಕಾರದ ವಿರುದ್ಧ ಪಾದಯಾತ್ರೆ ಘೋಷಿಸಿದ ಬಿಜೆಪಿ

ಚಿತ್ರದುರ್ಗ, ಮಾರ್ಚ್​ 08: ನಗರದಲ್ಲಿ ಬಿಜೆಪಿಯಿಂದ ಇಂದು ಎಸ್ಸಿ, ಎಸ್ಟಿ ಜನಾಂದೋಲನ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ. ಮಾರ್ಚ್ 22ರಂದು ಚಿತ್ರದುರ್ಗದಿಂದ ಪಾದಯಾತ್ರೆ ಆರಂಭಿಸಿ, ಮಾರ್ಚ್ 27ರಂದು ಬೆಂಗಳೂರಿನ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಬಿಜೆಪಿ ಜನಾಂದೋಲನ ಮುಖ್ಯಸ್ಥ ಪಿ. ರಾಜೀವ್ ಅವರು ಮಾತನಾಡಿ, ಮಾರ್ಚ್ 23ರೊಳಗೆ ರಾಜ್ಯ ಸರ್ಕಾರ ಹೋರಾಟಕ್ಕೆ ಸ್ಪಂದಿಸಬೇಕು. ಇಲ್ಲವಾದರೆ ಹೋರಾಟದ ಸ್ವರೂಪ ಉಗ್ರವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮತ್ತಷ್ಟು ವಿಡಿಯೋ…

Read More

ಮದುವೆಗೆ ಸ್ವಲ್ಪ ದಿನ ಬಾಕಿ: ಸಮವಸ್ತ್ರದಲ್ಲೇ ವೀರ ಯೋಧ ಅನುಜ್​ಗೆ​​​​​​ ಅಂತಿಮ ವಿದಾಯ ಸಲ್ಲಿಸಿದ ಭಾವಿ ಪತ್ನಿ!

ದೆಹಲಿ, ಮಾ.8: ದೇಶಸೇವೆಯಲ್ಲಿದ್ದಾಗ ವೀರಮರಣವನ್ನಪ್ಪಿದ ಭಾರತೀಯ ವಾಯುಪಡೆಯ (IAF) ಸ್ಕ್ವಾಡ್ರನ್ ಲೀಡರ್ ಅನುಜ್ ವಶಿಷ್ಠ ಅವರ ಅಂತಿಮ ಸಂಸ್ಕಾರವು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಈ ವೇಳೆ ಅವರ ಭಾವಿ ಪತ್ನಿ, ಸ್ವತಃ ವಾಯುಪಡೆಯ ಪೈಲಟ್ ಆಗಿರುವ ಅಧಿಕಾರಿ ಅಂತಿಮ ನಮನ ಸಲ್ಲಿಸಿದ ದೃಶ್ಯ ಪ್ರತಿಯೊಬ್ಬರ ಕಣ್ಣಾಲಿಗಳನ್ನು ತೇವಗೊಳಿಸಿದೆ. ಸ್ಕ್ವಾಡ್ರನ್ ಲೀಡರ್ ಅನುಜ್ ವಶಿಷ್ಠ ಅವರು ಕರ್ತವ್ಯದ ಅವಧಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾಗಿದ್ದರು. ಅವರ ಪಾರ್ಥಿವ ಶರೀರಕ್ಕೆ ಸಕಲ ಮಿಲಿಟರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಅನುಜ್…

Read More