ಆಮದು ಮಾಡಿಕೊಳ್ಳದೆ ಚಿನ್ನದ ಬೇಡಿಕೆ ಈಡೇರಿಸುವ ಉಪಾಯಗಳನ್ನು ಮುಂದಿಟ್ಟ ಆಭರಣ ಉದ್ಯಮಿಗಳು – Kannada News | Jewelers proposes 5 points to overcome gold crisis
ನವದೆಹಲಿ, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶದ ವಿದೇಶಿ ವಿನಿಮಯವನ್ನು ಉಳಿಸಲು ಚಿನ್ನದ ಆಮದನ್ನು ಕಡಿಮೆ ಮಾಡುವಂತೆ ಕರೆ ನೀಡಿದ್ದ ಬೆನ್ನಲ್ಲೇ, ಆಭರಣ ವರ್ತಕರು ಮತ್ತು ಅಕ್ಕಸಾಲಿಗರ ಒಕ್ಕೂಟವು (Jewelers and Gold Smith Association) ಸರ್ಕಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ. ಭಾರತದ ಸಂಸ್ಕೃತಿಯಲ್ಲಿ ಚಿನ್ನಕ್ಕೆ (Gold) ಇರುವ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಆಮದು ಕಡಿಮೆ ಮಾಡಿಯೂ ಆರ್ಥಿಕತೆಯನ್ನು ಹೇಗೆ ಸುಧಾರಿಸಬಹುದು ಎಂದು ಐದು ಮಾರ್ಗೋಪಾಯಗಳನ್ನು ಸರ್ಕಾರದ ಮುಂದಿಡಲಾಗಿದೆ. ಚಿನ್ನ ನಗದೀಕರಣ ಸ್ಕೀಮ್ನಿಂದ…