IND vs SA: ಸತತ 19ನೇ ಟಿ20 ಸರಣಿ ಗೆಲುವಿನೊಂದಿಗೆ 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | Ind vs SA T20 Final:India Beats South Africa by 30 Runs, Clinches Series 3 1

ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ 30 ರನ್​ಗಳಿಂದ ಗೆದ್ದುಕೊಳ್ಳುವ ಮೂಲಕ ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 231 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 20 ಓವರ್​ಗಳ ಅಂತ್ಯಕ್ಕೆ…

Read More

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ: ಹೇಗೆ ನಡೆದಿದೆ ನೋಡಿ – Kannada News | Koppal: Tungabhadra Dam crest gate replacement work finally begins; see video

ಕೊಪ್ಪಳ, ಡಿಸೆಂಬರ್​ 19: ಕೊಚ್ಚಿ ಹೋಗಿದ್ದ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್​​ನ್ನು ಒಂದು ವರ್ಷದ ಬಳಿಕ ಅವಳಡಿಸಲಾಗುತ್ತಿದ್ದು, ಗೇಟ್​​ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಸರ್ಕಾರ ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಜಲಾಶಯದ 33 ಗೇಟ್​ಗಳ ಬದಲಾವಣೆಗೆ ಮುಂದಾಗಿದೆ. ಈಗಾಗಲೇ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 33 ಗೇಟ್​ಗಳನ್ನ 10 ಅಡಿಯಷ್ಟು ತೆರವು ಮಾಡಲಾಗಿದೆ. ಗುಜರಾತ್ ಮೂಲದ ಕಂಪನಿ, ತುಂಗಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್​ಗಳನ್ನ ತೆರವು ಮಾಡಿದ್ದು, ಹೊಸ ಗೇಟ್​ಗಳನ್ನ ಅಳವಡಿಸಲು…

Read More

ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು – Kannada News | Thieves stolen gold crown worth 50 lakh Rs in Bihar Thawe Durga Temple

ಪಾಟ್ನಾ, ಡಿಸೆಂಬರ್ 19: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ (Bihar) 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಥಾವೆ ವಾಲಿ ಮಾತಾ’ ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ…

Read More

Pandava Sera Valley: ಪಾಂಡವರು ತಂಗಿದ್ದ ಈ ಜಾಗದಲ್ಲಿ ಇಂದಿಗೂ ಕೂಡ ಭತ್ತ ನೈಸರ್ಗಿಕವಾಗಿ ಬೆಳೆಯುತ್ತಿವೆ! – Kannada News | Pandava Sera Valley: Unveiling Himalayan Mythology and Trekking in Uttarakhand

ಪಾಂಡವ ಸೆರಾ ಕಣಿವೆಯು ಉತ್ತರಾಖಂಡ ರಾಜ್ಯದ ಹಿಮಾಲಯ ಪರ್ವತಶ್ರೇಣಿಗಳ ಮಧ್ಯದಲ್ಲಿರುವ ಒಂದು ಅತ್ಯಂತ ಸುಂದರ ಹಾಗೂ ಪೌರಾಣಿಕ ಮಹತ್ವ ಹೊಂದಿರುವ ಕಣಿವೆಯಾಗಿದೆ. ಹಿಂದೂ ಮಹಾಕಾವ್ಯ ಮಹಾಭಾರತದ ಪ್ರಕಾರ, ಪಾಂಡವರು ವನವಾಸದ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ಕೆಲಕಾಲ ತಂಗಿದ್ದರು ಎಂಬ ನಂಬಿಕೆ ಇದೆ. “ಸೆರಾ” ಎಂದರೆ ತಂಗುದಾಣ ಅಥವಾ ವಾಸಸ್ಥಳ ಎಂಬ ಅರ್ಥ ಬರುತ್ತದೆ. ಆದ್ದರಿಂದ ಪಾಂಡವರು ವಾಸಿಸಿದ್ದ ಸ್ಥಳವೆಂದು ಇದನ್ನು ಪಾಂಡವ ಸೆರಾ ಎಂದು ಕರೆಯಲಾಗಿದೆ. ಧಾರ್ಮಿಕ ಹಾಗೂ ಆಧ್ಯಾತ್ಮಿಕ ಮಹತ್ವ: ಪಾಂಡವ ಸೆರಾ ಕಣಿವೆ ಸುತ್ತಮುತ್ತ…

Read More

150 ಕೋಟಿ ರೂ ಮೌಲ್ಯದ ಸರ್ಕಾರಿ ಭೂಮಿ ದಾಖಲೆ ಫೋರ್ಜರಿ: ಅಧಿಕಾರಿಗಳ ವಿರುದ್ಧ FIR ದಾಖಲಾದ್ರೂ ಕ್ರಮವಿಲ್ಲ – Kannada News | Anekal: 150 crore government land document forgery alleged; no action despite FIR against officials

ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ಆನೇಕಲ್, ಡಿಸೆಂಬರ್​​ 19: 150 ಕೋಟಿ ರೂ. ಮೌಲ್ಯದ ಸರ್ಕಾರಿ ಗೋಮಾಳ ಜಮೀನು (land) ದಾಖಲೆಗಳನ್ನು ತಿದ್ದಿದ್ದ ಪ್ರಕರಣಕ್ಕೆ ಸಂಬಂಧ ಆರೋಪಿತ ಅಧಿಕಾರಿಗಳು ಮತ್ತು ಅವರ ಜೊತೆ ಶಾಮೀಲಾಗಿರುವ ಭೂಗಳ್ಳರನ್ನು ತಿಂಗಳಾದರೂ ಬಂಧಿಸಿಲ್ಲ ಎಂದು ವಕೀಲರು ಸೇರಿದಂತೆ ಸಾರ್ವಜನಿಕರು ತಾಲೂಕು ಕಚೇರಿ ಎದುರು ಪ್ರತಿಭಟನೆ (protest) ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಚೇರಿ ಮುಂಭಾಗ ಸಂವಿಧಾನ ರಕ್ಷಣಾ ವೇದಿಕೆ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ಆನೇಕಲ್ ಪೊಲೀಸ್…

Read More

ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು – Kannada News | Russian Devotees Offer Prayers at Tirupati Srikalahasti Temple Follows Traditional Rahu Ketu Puja

ತಿರುಪತಿ, ಡಿಸೆಂಬರ್ 19: ಆಂಧ್ರಪ್ರದೇಶದ ಶ್ರೀ ಕಾಳಹಸ್ತಿ ದೇವಸ್ಥಾನದಲ್ಲಿ (Srikalahasti Temple) ಡಜನ್​​ಗಟ್ಟಲೆ ರಷ್ಯನ್ನರು ರಾಹು ಕೇತು ಪೂಜೆಯನ್ನು ಮಾಡಿದ್ದಾರೆ. ಈ ವೇಳೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ದೇವಾಲಯದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ್ದಾರೆ. ಶಿಲ್ಪಗಳಿಂದ ಅಲಂಕರಿಸಲ್ಪಟ್ಟ ಐತಿಹಾಸಿಕ ಕಲಾಕೃತಿಗಳನ್ನು ನೋಡಿ ಅವರು ಸಂತೋಷಗೊಂಡಿದ್ದಾರೆ. ಪುರೋಹಿತರಿಂದ ದೇವಾಲಯದ ವಿಶಿಷ್ಟತೆಯ ಬಗ್ಗೆ ತಿಳಿದುಕೊಂಡ ನಂತರ ದೇವರ ಮೇಲಿನ ಅವರ ಭಕ್ತಿ ಮತ್ತು ನಂಬಿಕೆ ಹೆಚ್ಚಾಯಿತು. ರಷ್ಯಾದಿಂದ ಬಂದ ಸುಮಾರು 40 ಭಕ್ತರು ಶಿಲ್ಪಗಳಿಂದ ನಿರ್ಮಿಸಲಾದ…

Read More

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆಯ ಗಂಭೀರ ಆರೋಪ

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋಗೆ ಚೈತ್ರಾ ಕುಂದಾಪುರ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ನೀಡಿ ಆಟ ಆಡುತ್ತಿದ್ದಾರೆ. ಇತ್ತೀಚಿನ ಸಂಚಿಕೆಯಲ್ಲಿ ಅವರು ತಮ್ಮ ಪತಿ ಶ್ರೀಕಾಂತ್ ಬಗ್ಗೆ ಮಾತನಾಡಿದ್ದರು. ಮೊದಲಿನಿಂದಲೂ ಶ್ರೀಕಾಂತ್ ಅವರು ತಮ್ಮ ಬದುಕಿಗೆ ಬೆಂಬಲವಾಗಿ ನಿಂತಿದ್ದರು ಎಂದು ಚೈತ್ರಾ (Chaithra Kundapura) ಹೇಳಿದ್ದರು. ಆದರೆ ಅವರು ಹೇಳಿದ್ದು ಸುಳ್ಳು ಎಂದು ಚೈತ್ರಾ ತಂದೆ ಬಾಲಕೃಷ್ಣ ನಾಯ್ಕ್ ಅವರು ಹೇಳಿದ್ದಾರೆ. ‘ಶ್ರೀಕಾಂತನೇ ತನ್ನ ವಿದ್ಯಾಭ್ಯಾಸಕ್ಕೆ…

Read More

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಕಟ್ಟಿಕೊಂಡ ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ – Kannada News | Husband sketch wife murder over affair with another woman

ಮೈಸೂರು, ಡಿಸೆಂಬರ್​ 19: ಮರ್ಯಾದೆ ಕೊಡದಿದ್ದಕ್ಕೆ ಪತ್ನಿ ಕೊಲೆಗೆ ಪತಿ ಸುಪಾರಿ ಕೊಟ್ಟಿದ್ದ ಘಟನೆ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನಿಗೆ ಕಿಂಚಿತ್ತು ಮರ್ಯಾದೆ ಕೊಡದ ಹಿನ್ನೆಲೆ ಪತ್ನಿ ಕೊಲೆಗೆ ಪತಿ ಸ್ಕೆಚ್ ಹಾಕಿದ್ದ. ಆದರೆ ಆ ಪ್ಲ್ಯಾನ್‌ ಉಲ್ಟಾ ಹೊಡೆದಿದ್ದು, ಸದ್ಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬಗ್ಗೆ ಪೊಲೀಸ್ ಕಮಿಷನರ್‌ ಮೈಸೂರು ಸೀಮಾ ಲಾಟ್ಕರ್ ಮಾತನಾಡಿದ್ದು, ಮದುವೆ ಆಗಿ 10 ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಇವಳು ಸತ್ತರೆ ನಾನು ಅವಳನ್ನ ಮನೆಗೆ ಕರೆದುಕೊಂಡು ಬರ್ತೀನಿ…

Read More

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್ – Kannada News | Relative Talks about Kunigal Man Killed Who Loves 19 Year old Young Woman at Magadi

ರಾಮನಗರ, (ಡಿಸೆಂಬರ್ 19): ಹರಿಹರೆಯದ 19 ವರ್ಷದ ಯುವತಿಯ ಪ್ರೇಮಲೋಕದಲ್ಲಿ ಬಿದ್ದಿದ್ದ 40 ವರ್ಷದ ವ್ಯಕ್ತಿ ಹೆಣವಾಗಿದ್ದಾನೆ. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ‌ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ…

Read More

ನಿಮಗೂ ಗೂಗಲ್, ಯೂಟ್ಯೂಬ್ ಪೇಜ್ ಲೋಡ್ ಆಗುತ್ತಿಲ್ಲವೇ? – Kannada News | YouTube and Google Not Working India and US Users Hit By Major Outage

ನವದೆಹಲಿ, ಡಿಸೆಂಬರ್ 19: ನಿಮಗೂ ಗೂಗಲ್​ನಲ್ಲಿ (Google) ಸರ್ಚ್ ಮಾಡಲು ಕಷ್ಟವಾಗುತ್ತಿದೆಯೇ? ಯೂಟ್ಯೂಬ್ ವಿಡಿಯೋ ಪ್ಲೇ ಆಗುತ್ತಿಲ್ಲವೇ? ಇದು ನಿಮ್ಮ ಸಮಸ್ಯೆ ಮಾತ್ರ ಅಲ್ಲ. ಭಾರತ ಹಾಗೂ ಅಮೆರಿಕದಾದ್ಯಂತ ಬಳಕೆದಾರರು ಇದೇ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ಬಳಕೆದಾರರು ಯೂಟ್ಯೂಬ್, ಗೂಗಲ್ ಸರ್ಚ್ ಮುಂತಾದ ಸೇವೆಗಳಲ್ಲಿ ವ್ಯಾಪಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಯುಎಸ್ ಮೂಲದ ಸರ್ಚ್ ಎಂಜಿನ್ ಗೂಗಲ್ ಸಿಕ್ಕಾಪಟ್ಟೆ ಡೌನ್ ಆಗಿದೆ. ಅನೇಕ ಬಳಕೆದಾರರು ಗೂಗಲ್ ಸರ್ಚ್, ಯೂಟ್ಯೂಬ್ ಮತ್ತು ಯೂಟ್ಯೂಬ್ ಟಿವಿ ಸೇರಿದಂತೆ…

Read More