Headlines

ಟಿ20 ವಿಶ್ವಕಪ್ ಫೈನಲ್: ಹರಿಯಲಿದೆ ಮನರಂಜನೆ ಮಹಾಪೂರ, ಯಾರ್ಯಾರು ಬರಲಿದ್ದಾರೆ?

ಕಳೆದ ಕೆಲ ವಾರಗಳಿಂದ ನಡೆಯುತ್ತಿರುವ 2026 ಟಿ20 ವಿಶ್ವಕಪ್ ಇಂದು (ಮಾರ್ಚ್ 08) ಮುಕ್ತಾಯವಾಗಲಿದೆ. ಇಂದು ಅಹಮದಾಬಾದ್​​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಿ20 2026 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ಪಂದ್ಯಕ್ಕಾಗಿ ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಎದುರು ನೋಡುತ್ತಿದ್ದಾರೆ. ಪಂದ್ಯ ಜಿದ್ದಾಜಿದ್ದಿನದ್ದಾಗಿರಲಿದೆ ಎಂಬುದರಲ್ಲಿ ಅನುಮಾನವಿಲ್ಲ, ಆದರೆ ಪಂದ್ಯ ಆರಂಭಕ್ಕೂ ಮುಂಚೆ ಭರಪೂರ ಮನೊರಂಜನೆ ಪ್ರೇಕ್ಷಕರಿಗೆ ದೊರಕಲಿದೆ. ಕೆಲ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಗಾಯಕರುಗಳು ಫೈನಲ್ ಪಂದ್ಯದ ಮುಂಚೆ ಮನರಂಜನಾ…

Read More

ಊಟ ಮಾಡುವಾಗ ಅಥವಾ ಊಟವಾದ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು? ಆಯುರ್ವೇದ ಏನು ಹೇಳುತ್ತದೆ?

ಆಹಾರ ಮತ್ತು ನೀರು (Water) ಎರಡೂ ಕೂಡ ದೇಹದ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ, ಹೇಗೆ ಸೇವನೆ ಮಾಡಬೇಕು ಎಂದು ತಿಳಿದಿರಬೇಕಾಗುತ್ತದೆ. ಇಲ್ಲವಾದಲ್ಲಿ ಈ ರೀತಿಯ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಯುರ್ವೇದದ ಪ್ರಕಾರ, ಆಹಾರ ಸೇವಿಸುವ ಸಮಯ ಮತ್ತು ನೀರು ಕುಡಿಯುವ ಸಮಯವು ಜೀರ್ಣಕ್ರಿಯೆಗೆ (Digestion) ಬಹಳ ಮಹತ್ವದ್ದಾಗಿದ್ದು ಇದು ಸರಿಯಾಗಿ ಆಗದಿದ್ದಲ್ಲಿ ಹೊಟ್ಟೆ ಭಾರವಾಗುವುದು, ಅನಿಲ (ಗ್ಯಾಸ್) ಉಂಟಾಗುವುದು, ಅಜೀರ್ಣ, ಹೊಟ್ಟೆ ಉಬ್ಬುವುದು ಅಥವಾ ಆಸಿಡಿಟಿ ಮುಂತಾದ ಸಮಸ್ಯೆಗಳು…

Read More

‘ಕೋಟಿಗೊಬ್ಬ’ ಸಿನಿಮಾಕ್ಕೆ 25 ವರ್ಷ: ಸಂಭ್ರಮದಲ್ಲಿ ಭಾಗಿಯಾದ ಸೆಲೆಬ್ರಿಟಿಗಳು

ವಿಷ್ಣುವರ್ಧನ್ (Vishnuvardhan) ನಟನೆಯ ಸೂಪರ್ ಹಿಟ್ ಸಿನಿಮಾ ‘ಕೋಟಿಗೊಬ್ಬ’ ಬಿಡುಗಡೆ ಆಗಿ 25 ವರ್ಷಗಳಾಗಿವೆ. ಸಿನಿಮಾ, ವಿಷ್ಣುವರ್ಧನ್ ವೃತ್ತಿ ಜೀವನದಲ್ಲಿ ಮಾತ್ರವೇ ಅಲ್ಲದೆ ಕನ್ನಡ ಚಿತ್ರರಂಗದ ಇತಿಹಾಸದಲ್ಲಿಯೂ ಪ್ರಮುಖವಾದ ಸಿನಿಮಾ ಆಗಿದೆ. ಸಿನಿಮಾ ಬಿಡುಗಡೆ ಆಗಿ 25 ವರ್ಷಗಳಾದ ಕಾರಣ ಚಿತ್ರತಂಡ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಿತ್ತು. ಸಿನಿಮಾನಲ್ಲಿ ನಟಿಸಿದ ಕಲಾವಿದರು, ತಂತ್ರಜ್ಞರ ಜೊತೆಗೆ ಉಪೇಂದ್ರ, ಗಣೇಶ್ ಸೇರಿದಂತೆ ಇನ್ನೂ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಹೂಗಳು ಸಮರ್ಪಿಸುವ ಮೂಲಕ ಕಾರ್ಯಕ್ರಮದ…

Read More

‘ಸಿಎಂ, ಸಿಎಂ’ ಎಂದು ಕೂಗಿದ ಅಭಿಮಾನಿಗಳು, ಜೂ ಎನ್​​ಟಿಆರ್ ಪ್ರತಿಕ್ರಿಯೆ ಏನು?

ಜೂ ಎನ್​​ಟಿಆರ್ (Jr NTR), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕವಂತೂ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಜೂ ಎನ್​​ಟಿಆರ್ ಅವರ ನಂದಮೂರಿ ಕುಟುಂಬ ಹಲವು ದಶಕಗಳಿಂದಲೂ ತೆಲುಗು ಚಿತ್ರರಂಗ ಮತ್ತು ರಾಜಕೀಯದ ಮೇಲೆ ಪ್ರಭಾವ ಬೀರುತ್ತಲೇ ಬಂದಿದೆ. ಸ್ವತಃ ಜೂ ಎನ್​​ಟಿಆರ್ ಸಹ ಕೆಲವು ವರ್ಷಗಳ ಹಿಂದಿನ ವರೆಗೂ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದರು. ತಮ್ಮ ಕುಟುಂಬದ ಪಕ್ಷವಾದ ಟಿಡಿಪಿ (ತೆಲುಗು ದೇಶಂ ಪಾರ್ಟಿ)ಯ ತಾರಾ ಪ್ರಚಾರಕ ಆಗಿದ್ದರು. ಆದರೆ ಇತ್ತೀಚೆಗೆ ಅವರನ್ನು…

Read More

ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್​ ಅನ್ನು ನಾಶಪಡಿಸುತ್ತೆ: ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 08: ಹೊಲಸು ರಾಜಕೀಯ, ದುರಹಂಕಾರ ತೃಣಮೂಲ ಕಾಂಗ್ರೆಸ್​ ಅನ್ನು ನಾಶಪಡಿಸುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಕಿಡಿಕಾರಿದ್ದಾರೆ. ಡಾರ್ಜಿಲಿಂಗ್​ ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗಾದ ಅವಮಾನದ ಬಗ್ಗೆ ಅವರು ಮಾತನಾಡಿದ್ದಾರೆ. ದ್ರೌಪದಿ ಮುರ್ಮು ಭಾಗವಹಿಸಿದ್ದ 9 ನೇ ಅಂತಾರಾಷ್ಟ್ರೀಯ ಸಂತಾಲ್ ಸಮ್ಮೇಳನದಲ್ಲಿ ನಡೆದ ದುರಾಡಳಿತವನ್ನು ಉಲ್ಲೇಖಿಸಿದ ಮೋದಿ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ದುರಹಂಕಾರಿ ಎಂದು ಕರೆದರು. ಪಕ್ಷದ ಅಹಂಕಾರ ಮತ್ತು ಕೊಳಕು ರಾಜಕೀಯವನ್ನು ಬಂಗಾಳದ ಜನರು ಶೀಘ್ರದಲ್ಲೇ ಛಿದ್ರಗೊಳಿಸುತ್ತಾರೆ ಎಂದು…

Read More

ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಸಾವು: ತಡೆಗೋಡೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಯ್ತಾ?

ಕೋಲಾರ, ಮಾರ್ಚ್​ 08: ಅದು ರಾಜ್ಯ ಹೆದ್ದಾರಿ ಜಿಲ್ಲಾ ಕೇಂದ್ರದಿಂದ ಪಕ್ಕದ ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ಆ ರಸ್ತೆಯಲ್ಲಿ ಬರುವ ಅದೊಂದು ದೊಡ್ಡ ಕೆರೆಯ ಎರಡು ಬದಿಯಲ್ಲಿ ತಡೆಗೋಡೆ ಇಲ್ಲದ ಪರಿಣಾಮ ಭೀಕರ ಅವಘಡವೊಂದು (car accident) ನಡೆದಿದ್ದು, ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್​ ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ 1.30 ಸುಮಾರಿನಲ್ಲಿ ಕೋಲಾರ ತಾಲ್ಲೂಕಿನ ತೊರಾಂಡಹಳ್ಳಿ ಗ್ರಾಮದ ಕಡೆಗೆ ಹೋಗುತ್ತಿದ್ದ ವೇಳೆ ಕಾರು ಕೆರೆಗೆ ಬಿದ್ದ ಪರಿಣಾಮ ಕಾರ್​ ನಲ್ಲಿದ್ದ…

Read More

ಈ ವಾರ ಒಟಿಟಿಗೆ ಬರಲಿವೆ ಕೆಲ ಹಿಟ್ ಸಿನಿಮಾಗಳು

ವಿಜಯ್ ಸೇತುಪತಿ, ಅರವಿಂದ ಸ್ವಾಮಿ, ಅದಿತಿ ರಾವ್ ಹೈದರಿ ಸೇರಿದಂತೆ ಹಲವು ಪ್ರತಿಭಾವಂತ ನಟ, ನಟಿಯರು ನಟಿಸಿರುವ ಮೂಕಿ ಸಿನಿಮಾ ‘ಗಾಂಧಿ ಟಾಕ್ಸ್’ ಇದೇ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾವನ್ನು ಜೀ5 ನಲ್ಲಿ ವೀಕ್ಷಿಸಬಹುದಾಗಿದೆ. ‘ಲಾಲೊ: ಕೃಷ್ಣ ಸದಾ ಸಹಾಯತೆ’ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ಸಿನಿಮಾ. ಇದು ಗುಜರಾತಿ ಸಿನಿಮಾ ಆಗಿದ್ದು, ಅತ್ಯಂತ ಕಡಿಮೆ ಬಜೆಟ್​​ನಲ್ಲಿ ನಿರ್ಮಾಣ ಆದ ಈ ಸಿನಿಮಾ ಗಳಿಕೆಯಲ್ಲಿ ದಾಖಲೆಗಳನ್ನು ಬರೆದಿದೆ. ಈ ಸಿನಿಮಾ ಇದೀಗ ಸೋನಿ ಲಿವ್​​ನಲ್ಲಿ…

Read More

ಟ್ರಂಪ್ ಮಗನ ಜತೆಗೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​? ಫೋಟೋ ವೈರಲ್

ಅಂತರಾಷ್ಟ್ರೀಯ ರಾಜಕೀಯದ ಇಬ್ಬರು ಪ್ರಭಾವಿ ವ್ಯಕ್ತಿಗಳ ಮಕ್ಕಳನ್ನು ಜೋಡಿಸಿ ನೆಟ್ಟಿಗರು ಹೊಸದೊಂದು ಡಿಜಿಟಲ್ ಲವ್​​ ಸ್ಟೋರಿಯನ್ನು ಸೃಷ್ಟಿಸಿದ್ದಾರೆ. ಇಬ್ಬರ ಸಿದ್ಧಾಂತಗಳೇ ಬೇರೆ, ಆಡಳಿತ ಕೂಡ ಬೇರೆಯಾಗಿರುವಾಗ ಈ ಮದುವೆ ಹೇಗೆ ಸಾಧ್ಯ ಎಂಬ ಬಗ್ಗೆ ಅನೇಕರು ಪ್ರಶ್ನೆ ಮಾಡಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿರಿಯ ಪುತ್ರ 19 ವರ್ಷದ ಬ್ಯಾರನ್ ಟ್ರಂಪ್ ಮತ್ತು ಕಿಮ್ ಜೊಂಗ್ ಉನ್ ಅವರ ಹದಿಹರೆಯದ ಪುತ್ರಿ ಕಿಮ್ ಜು ಏ ನಡುವೆ ಸಂಬಂಧವಿದೆ ಎಂಬಂತೆ ಬಿಂಬಿಸುವ ಮೀಮ್‌ಗಳು…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ತುಲಾ ರಾಶಿಗೆ ಈ ವರ್ಷ ಹೇಗಿರಲಿದೆ?

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಯುಗಾದಿಯ ಪರಾಭವನಾಮ ಸಂವತ್ಸರದ ತುಲಾ ರಾಶಿಯ ಭವಿಷ್ಯವನ್ನು ವಿವರಿಸಿದ್ದಾರೆ. ಶುಕ್ರ ಅಧಿಪತಿಯಾದ ತುಲಾ ರಾಶಿಯವರಿಗೆ (ಚಿತ್ತಾ, ಸ್ವಾತಿ, ವಿಶಾಖ ನಕ್ಷತ್ರ) ಈ ವರ್ಷ ಬಹಳಷ್ಟು ಅದೃಷ್ಟಗಳು ಕೂಡಿಬರುವ ಸಾಧ್ಯತೆ ಇದೆ. ಆರ್ಥಿಕವಾಗಿ ಅಭಿವೃದ್ಧಿ ಕಾಣುವಿರಿ, ಅನೇಕ ಹೊಸ ಅವಕಾಶಗಳು ಲಭಿಸುತ್ತವೆ. ರೈತರು, ವ್ಯಾಪಾರಸ್ಥರು, ಉದ್ಯೋಗದಲ್ಲಿರುವವರಿಗೆ ಶುಭಫಲಗಳಿವೆ. ಕೆಲವರಿಗೆ ಸರ್ಕಾರಿ ನೌಕರಿ ಮತ್ತು ಬಡ್ತಿ ಲಭಿಸುತ್ತದೆ ಎಂದು ಸಲಹೆ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಮತ್ತು ತಂದೆ-ತಾಯಿಗಳಿಂದ ಆಶೀರ್ವಾದ ಸಿಗಲಿದೆ….

Read More

ಉದ್ಯಮಿ ಮನೆಯಲ್ಲಿ ದರೋಡೆ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಪ್ರಾಣ ಸ್ನೇಹಿತನ ಮನೆಯಲ್ಲೇ ರಾಬರಿ ಮಾಡಿಸಿದ ಸ್ಟಾಂಪ್ ವೆಂಡರ್

ಬೆಂಗಳೂರು, ಮಾರ್ಚ್​​ 08: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿತ್ತು. ಈ ಪ್ರಕರಣವನ್ನು ಭೇದಿಸಿರುವ ಬ್ಯಾಡರಹಳ್ಳಿ ಪೊಲೀಸರು ಈ ಹಿಂದೆ ನಾಗೇಂದ್ರ ಹಾಗೂ ಬಚ್ಚನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ತನಿಖೆ ಮುಂದುವರಿದಾಗ ಅಸಲಿ ಸತ್ಯ ಬಯಲಾಗಿದ್ದು, ಪ್ರಕರಣದ ಹಿಂದಿನ ಮಾಸ್ಟರ್​​ ಮೈಂಡ್​​ ಹೆಸರು…

Read More