Headlines

ಬಳ್ಳಾರಿ: ಹಾಸ್ಟಲ್​ನಲ್ಲಿ 9ನೇ ಕ್ಲಾಸ್ ವಿದ್ಯಾರ್ಥಿಯಿಂದ ರಾಡ್​ನಿಂದ ಹಲ್ಲೆ; ಎಸ್​​​ಪಿ ಹೇಳಿದ್ದಿಷ್ಟು

ಬಳ್ಳಾರಿ, ಮಾರ್ಚ್​​ 08: ಹಾಸ್ಟೆಲ್​ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ 9ನೇ ತರಗತಿ ವಿದ್ಯಾರ್ಥಿಯಿಂದ ಹಲವರ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದು ಈ ವೇಳೆ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಘಟನೆ ಕುರಿತು ಬಳ್ಳಾರಿ ಎಸ್‌ಪಿ ಸುಮನ್ ಪನ್ನಕೇರ್​ ಪ್ರತಿಕ್ರಿಯಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು FIR ದಾಖಲಿಸಿದ್ದಾರೆ. ಖಾಸಗಿ ವಿದ್ಯಾಸಂಸ್ಥೆಯಲ್ಲೇ ಇದ್ದ ವಿದ್ಯಾರ್ಥಿಯೊಬ್ಬ ಇತರೆ ವಿದ್ಯಾರ್ಥಿಗಳ ಮೇಲೆ ರಾಡ್​​ನಿಂದ ಹಲ್ಲೆ ಹಲ್ಲೆ ಮಾಡಿದ್ದಾನೆ. ಹಲ್ಲೆಯಲ್ಲಿ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ಕಟಕ ರಾಶಿಗೆ ಈ ವರ್ಷ ಹೇಗಿರಲಿದೆ?

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 2026ರ ಪರಾಭವ ನಾಮ ಸಂವತ್ಸರದ ಕಟಕ ರಾಶಿ ಫಲಾಫಲಗಳನ್ನು ವಿವರಿಸಿದ್ದಾರೆ. ಈ ವರ್ಷ ಕಟಕ ರಾಶಿಯವರಿಗೆ ಮಿಶ್ರ ಫಲಗಳು ಕಂಡುಬರಲಿವೆ. ಗುರು ಒಂದರಿಂದ ಎರಡನೇ ಮನೆಗೆ ಸಾಗಿದರೆ, ಶನಿಗ್ರಹ ವರ್ಷವಿಡೀ ಒಂಬತ್ತನೇ ಮನೆಯಲ್ಲಿ ಸಂಚರಿಸಲಿದೆ. ರಾಹು ಎಂಟರಿಂದ ಏಳಕ್ಕೆ, ಕೇತು ಒಂದರಿಂದ ಎರಡನೇ ಮನೆಗೆ ಚಲಿಸಲಿದೆ. ವರ್ಷದ ಕಡೆಯ ಭಾಗದಲ್ಲಿ ಕೇತು ಗ್ರಹ ಜನ್ಮಕ್ಕೆ ಬರುವುದು ಹೋರಾಟದ ಬದುಕನ್ನು ಸೂಚಿಸುತ್ತದೆ. ಆದಾಯ ಎಂಟು ಪಾಲು ಮತ್ತು ವ್ಯಯ ಎರಡು ಪಾಲು…

Read More

‘ಧುರಂಧರ್ 2’ ಕನ್ನಡ ಟ್ರೇಲರ್: ಕರ್ನಾಟಕದಲ್ಲಿ ಮೋಡಿ ಮಾಡುತ್ತಾ ರಣವೀರ್ ಸಿಂಗ್ ಸಿನಿಮಾ?

ಕಳೆದ ವರ್ಷ ‘ಧುರಂಧರ್’ ಸಿನಿಮಾ ಕೇವಲ ಹಿಂದಿಯಲ್ಲಿ ಬಿಡುಗಡೆ ಆಗಿತ್ತು. ಹಾಗಿದ್ದರೂ ಕೂಡ ಆ ಸಿನಿಮಾಗೆ ದೇಶಾದ್ಯಂತ ಮೆಚ್ಚುಗೆ ಸಿಕ್ಕಿತ್ತು. ಈಗ ಅದರ ಸೀಕ್ವೆಲ್ ಬರುತ್ತಿದೆ. ‘ಧುರಂಧರ್ 2’ (Dhurandhar 2) ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗಲಿದೆ ಎಂಬುದು ವಿಶೇಷ. ಹಿಂದಿ ಜೊತೆಗೆ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಆ ಮೂಲಕ ದಕ್ಷಿಣ ಭಾರತದಲ್ಲಿ ಹೆಚ್ಚು ಪ್ರೇಕ್ಷಕರನ್ನು ಸೆಳೆಯಲು ಪ್ಲ್ಯಾನ್ ಮಾಡಲಾಗಿದೆ. ಮಾರ್ಚ್ 19ರಂದು ಈ ಸಿನಿಮಾ…

Read More

ದ್ವಿಚಕ್ರ ವಾಹನಕ್ಕೆ ಗುದ್ದಿ ಎಳೆದೊಯ್ದ ಕಾರು: ಚಾಲಕ ನಾಪತ್ತೆ; ಮಹಿಳೆ ಸ್ಥಿತಿ ಗಂಭೀರ

ಬೆಂಗಳೂರು, ಮಾರ್ಚ್​​ 08: ಜಯಮಹಲ್‌ ಬಳಿ  ಹಿಟ್ ಆ್ಯಂಡ್​ ರನ್ ಪ್ರಕರಣವೊಂದು ನಡೆದಿದೆ. ಇನ್ನೋವಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ಸುಮಾರು ನಾಲ್ಕರಿಂದ ಐದು ಮೀಟರ್‌ಗಳಷ್ಟು ದೂರ ಎಳೆದುಕೊಂಡು ಹೋಗಿದೆ. ಈ ಭೀಕರ ಅಪಘಾತದ ಪರಿಣಾಮವಾಗಿ ಬೈಕ್‌ನಲ್ಲಿ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬೈಕ್​​ನಲ್ಲಿ ಸಂಚರಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಸಂಭವಿಸಿದ ಕೂಡಲೇ ಇನ್ನೋವಾ ಚಾಲಕ ಮತ್ತು ಕಾರಿನಲ್ಲಿದ್ದ…

Read More

ಇರಾನ್ ಯುದ್ಧ: ಬೆಂಬಲಕ್ಕೆ ಬ್ರಿಟನ್ ಹಿಂದೇಟು; ಇದನ್ನು ಮರೆಯಲ್ಲ ಎಂದ ಟ್ರಂಪ್

ವಾಷಿಂಗ್ಟನ್, ಮಾರ್ಚ್ 8: ಇರಾನ್ ಯುದ್ಧದಲ್ಲಿ ಬ್ರಿಟನ್ ವರ್ತನೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅಸಮಾಧಾನ ಹೊಂದಿದ್ದಾರೆ. ಮಧ್ಯಪ್ರಾಚ್ಯದತ್ತ ಎರಡು ವಿಮಾನ ವಾಹಕಗಳನ್ನು (Aircraft Carrier) ಕಳುಹಿಸಲು ಗಂಭೀರವಾಗಿ ಯೋಚಿಸುತ್ತಿರುವುದಾಗಿ ಬ್ರಿಟನ್ ನೀಡಿರುವ ಹೇಳಿಕೆಯನ್ನು ಟ್ರಂಪ್ ಲೇವಡಿ ಮಾಡಿದ್ದಾರೆ. ಯುದ್ಧವೇ ಮುಗಿಯುತ್ತಿದೆ. ಈಗ್ಯಾಕೆ ಇವರ ನೆರವು. ಇವರ ಈ ಬುದ್ಧಿಯನ್ನು ಯಾವತ್ತೂ ನೆನಪಲ್ಲಿಟ್ಟಿರುತ್ತೇನೆ ಎಂದು ಅಮೆರಿಕ ಅಧ್ಯಕ್ಷರು ಗುಡುಗಿದ್ದಾರೆ. ಕಳೆದ ಕೆಲ ದಿನಗಳಿಂದ ಡೊನಾಲ್ಡ್ ಟ್ರಂಪ್ ಅವರು ಬ್ರಿಟಿಷ್ ಪ್ರಧಾನಿ ಕೇರ್ ಸ್ಟಾರ್ಮರ್…

Read More

Optical Illusion: ಈ ಚಿತ್ರದಲ್ಲಿರುವ ಚುಕ್ಕೆಗಳಿಲ್ಲದ ಶ್ವಾನವನ್ನು ಜಸ್ಟ್ 5 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ

ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ಗೊಂದಲಕ್ಕೀಡು ಮಾಡುವುದು ಸಹಜ. ಕೆಲವೊಮ್ಮೆ ಈ ಒಗಟಿನ ಚಿತ್ರಗಳು ತಲೆಗೆ ಹುಳ ಬಿಡುತ್ತವೆ. ಆದರೆ, ಕೆಲವರು ಕ್ಷರ್ಣಾಧದಲ್ಲಿ ಒಗಟು ಬಿಡಿಸಿ ಉತ್ತರ ಕಂಡು ಕೊಳ್ಳುತ್ತಾರೆ. ಇನ್ನು ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಒಗಟು ಬಿಡಿಸಲು ಸಾಧ್ಯವಾಗಲ್ಲ. ನಿಮಗೂ ಇದೇ ರೀತಿ ಆಗಿರಬಹುದು. ಇದೀಗ ಇಂತಹದ್ದೇ ಕಠಿಣ ಸವಾಲಿನ ಚಿತ್ರದಲ್ಲಿ ಚುಕ್ಕೆಗಳಿಲ್ಲದ ಶ್ವಾನವೊಂದಿದೆ. ನೀವು ಈ ನಿಷ್ಠಾವಂತ ಪ್ರಾಣಿಯನ್ನು ಐದು ಸೆಕೆಂಡುಗಳಲ್ಲಿ ಕಂಡು ಹಿಡಿಯಬೇಕು. ಈ ಚಿತ್ರದಲ್ಲಿ ನಿಮಗೆ…

Read More

W,W,W,W,W: 254 ವರ್ಷಗಳ ಕ್ರಿಕೆಟ್​ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ

254 ವರ್ಷಗಳ ಕ್ರಿಕೆಟ್​ ಇತಿಹಾಸ ಹೊಂದಿರುವ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ 5 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಫಸ್ಟ್​ ಕ್ಲಾಸ್​ ಕ್ರಿಕೆಟ್​ನಲ್ಲಿ ಬೌಲರ್​ರೊಬ್ಬರು 5 ಎಸೆತಗಳಲ್ಲಿ ಸತತ 5 ವಿಕೆಟ್ ಕಬಳಿಸಿದ್ದಾರೆ. ಈ ಸಾಧನೆ ಮಾಡಿದ ಬೌಲರ್ ಹೆಸರು ಬ್ರೆಟ್ ರಾಂಡೆಲ್. ನ್ಯೂಝಿಲೆಂಡ್​ನ ಪ್ಲಂಕೆಟ್ ಶೀಲ್ಡ್  ಪ್ರಥಮ ದರ್ಜೆ ಕ್ರಿಕೆಟ್ ಟೂರ್ನಿಯಲ್ಲಿ ನಡೆದ ಪಂದ್ಯದಲ್ಲಿ ಸೆಂಟ್ರಲ್ ಡಿಸ್ಟ್ರಿಕ್ಟ್ಸ್ ಹಾಗೂ ನಾರ್ದನ್ ಡಿಸ್ಟ್ರಿಕ್ಟ್ಸ್ ತಂಡಗಳು ಮುಖಾಮುಖಿಯಾಗಿದ್ದವು….

Read More

Video: ದೆಹಲಿಯ ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 08: ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ದೆಹಲಿಯ  ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ 33,500 ಕೋಟಿ ರೂ. ಮೌಲ್ಯದ ಇತರ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ಕೊಟ್ಟಿದ್ದಾರೆ. ಪಿಂಕ್ ಲೈನ್‌ನಲ್ಲಿ 12.3 ಕಿಮೀ ಮಜ್ಲಿಸ್ ಪಾರ್ಕ್-ಮೌಜ್‌ಪುರ್-ಬಾಬರ್‌ಪುರ್ ಕಾರಿಡಾರ್ ಮತ್ತು ಮೆಜೆಂಟಾ ಲೈನ್‌ನಲ್ಲಿ 9.9 ಕಿಮೀ ದೀಪಾಲಿ ಚೌಕ್-ಮಜ್ಲಿಸ್ ಪಾರ್ಕ್ ವಿಸ್ತರಣೆಯ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು. ಬುರಾರಿ, ಜಗತ್‌ಪುರ್-ವಜೀರಾಬಾದ್, ಖಜುರಿ ಖಾಸ್, ಭಜನ್‌ಪುರ ಮತ್ತು ಯಮುನಾ ವಿಹಾರ್‌ನಂತಹ ಪ್ರದೇಶಗಳಿಗೆ ಸೇವೆ ಸಲ್ಲಿಸುವ…

Read More

ಪತ್ನಿ 9 ತಿಂಗಳ ತುಂಬು ಗರ್ಭಿಣಿ: ವಿದ್ಯುತ್​​ ಶಾಕ್​​ ತಗುಲಿ ಪತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ತುಮಕೂರು, ಮಾರ್ಚ್​​ 08: ವಿದ್ಯುತ್ ಪರಿವರ್ತಕ ಅಳವಡಿಸುವಾಗ ಶಾಕ್​ ತಗುಲಿ ಲೈನ್​​ಮ್ಯಾನ್​​ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ ಎನ್ನಲಾಗಿದೆ. ಟಿಸಿ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಆರೋಪ ಕೇಳಿಬಂದಿದ್ದು, ಲೈನ್​​ಮ್ಯಾನ್​​ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ…

Read More

ಬೆಂಗಳೂರಿನಲ್ಲಿ ಜೂ. ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ (Jr NTR) ಅವರಿಗೆ ಬೆಂಗಳೂರಿನಲ್ಲೂ ಅಭಿಮಾನಿಗಳು ಇದ್ದಾರೆ. ಇಂದು (ಮಾರ್ಚ್ 8) ಮಹಾದೇವಪುರ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಏನ್​ಟಿಆರ್ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಆಸ್ಪತ್ರೆಯ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು. ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು. ಜೂನಿಯರ್ ಎನ್​ಟಿಆರ್ ಅವರನ್ನು ಹತ್ತಿರದಿಂದ ನೋಡಬೇಕು ಎಂಬ…

Read More