11 ಅಂಕಗಳು… ಐಪಿಎಲ್​ನಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್

Source link

2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ! – Kannada News | Brutal Murder in Sirsi: Doctor preparing for 2nd wedding found dead

ಶಿರಸಿ, ಏಪ್ರಿಲ್​ 20: 2ನೇ ಮದುವೆಗೆ ತಯಾರಿ ನಡೆಸಿದ್ದ ವೈದ್ಯನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನ್ಯೂ KHB ಕಾಲೋನಿಯಲ್ಲಿ ನಡೆದಿದೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿಯಾಗಿದ್ದು, ಮನೆಗೆ ನುಗ್ಗಿರುವ ಆರೋಪಿಗಳು ಹತ್ಯೆಗೈದು ಎಸ್ಕೇಪ್​​ ಆಗಿದ್ದಾರೆ. ಪತ್ನಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಇವರು ಮತ್ತೊಂದು ಮದುವೆಗೆ ಸಿದ್ಧತೆ ನಡೆಸಿದ್ದರು. ಅದರಂತೆ 45 ವರ್ಷದ ಅನ್ನಪೂರ್ಣ ಎಂಬ ಮಹಿಳೆಯ ಜೊತೆ ವಿವಾಹಕ್ಕೆ ಶಿರಸಿ ತಾಲೂಕಿನ ಮಂಜಗುಣಿಯ ವೆಂಕಟರಮಣ ದೇವಸ್ಥಾನದಲ್ಲಿ ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ಅಷ್ಟರೊಳಗೆ ಈ ದುರ್ಘಟನೆ ನಡೆದಿದೆ.

ಕೊಲೆಯಾಗಿರುವ ವೈದ್ಯ ರಮೇಶ್​​ ಅವರ ಪತ್ನಿ ಕಳೆದ 8 ತಿಂಗಳ ಹಿಂದೆ ಮೃತಪಟ್ಟಿದ್ದರು. ಈ ದಂಪತಿಗೆ ಎರಡು ಮಕ್ಕಳಿದ್ದು, ಓರ್ವ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರೆ ಮತ್ತೊಬ್ಬ ಪಶ್ಚಿಮ ಬಂಗಾಳದಲ್ಲಿ ವೈದ್ಯನಾಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಶಿರಸಿಯ ನಿವಾಸದಲ್ಲಿ ರಮೇಶ್ ಒಬ್ಬರೇ ವಾಸಿಸುತ್ತಿದ್ದರು. ಶಿರಸಿ ನಗರದಲ್ಲಿ ಪ್ರಸಿದ್ಧ ಆಯುರ್ವೇದ ವೈದ್ಯರಾಗಿದ್ದ ಇವರು ಉತ್ತಮ ಜೀವನ‌ ಸಾಗಿಸುತ್ತಿದ್ದರು. ಮದುವೆಯ ಹಿನ್ನೆಲೆ ತನ್ನ ಮೊದಲ ಪತ್ನಿಯ ಎಲ್ಲ ಒಡವೆಗಳನ್ನ, ಎರಡನೇ ಪತ್ನಿಗೆ ಕೊಡಲೆಂದು ಬ್ಯಾಂಕಿನಿಂದ ತಂದು ಮನೆಯಲ್ಲಿಟ್ಟಿದ್ದರು ಎಂಬ ವಿಚಾರವೂ ಘಟನೆ ಬಳಿಕ ಗೊತ್ತಾಗಿದೆ.

ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಪರಲೋಕಕ್ಕೆ ಕಳುಹಿಸಿದ ಪತ್ನಿ!; ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಕೊಲೆ?

ಇನ್ನು ತಮ್ಮ ಎರಡನೇ ಮದುವೆಗೆಂದು ರಮೇಶ್​​ ತಮ್ಮ ಹಲವು ಸಂಬಂಧಿಕರಿಗೆ ಆಹ್ವಾನ ನೀಡಿದ್ದರು. ಹೀಗಾಗಿ ಮನೆ ಬಳಿ ಬಂದ ನೆಂಟರಿಷ್ಟರು ಎಷ್ಟೇ ಬಾಗಿಲು ತಟ್ಟಿದರೂ ರಮೇಶ್​​ ಡೋರ್​​ ಓಪನ್ ಮಾಡಿರಲಿಲ್ಲ.  ಹೀಗಾಗಿ ಅನುಮಾನಗೊಂಡು ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ ಕೊಲೆ ನಡೆದಿರೋದು ಗೊತ್ತಾಗಿದೆ. ತಲೆಗೆ ತೀವ್ರ ಗಾಯವಾಗಿರುವ ಸ್ಥಿತಿಯಲ್ಲಿ ಬೆಡ್​​ ಮೇಲೆ ರಮೇಶ್​​ ಕಂಡುಬಂದಿದ್ದಾರೆ. ಆರೋಪಿ ಅಕ್ಕಪಕ್ಕದ ಮನೆಯ ಯಾರಿಗೂ ಅನುಮಾನ ಬಾರದಂತೆ ಎಸ್ಕೇಪ್​​ ಆಗಿದ್ದಾನೆ ಎನ್ನಲಾಗಿದ್ದು, ಶಿರಸಿ ಮಾರುಕಟ್ಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಎಸ್ಪಿ ದೀಪನ್, ಸಿಪಿಐ ಶಶಿಕಾಂತ ವರ್ಮಾ ಸೇರಿದಂತೆ ಪೊಲೀಸರ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಕೊಲೆ ಬಳಿಕ ಚಿನ್ನಾಭಾರಣ ದೋಚಿದ್ದಾನಾ? ಇಲ್ಲವಾ? ಎಂಬ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿ ಸಿಗಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Bengaluru Air Quality: ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ! – Kannada News | Bangalore Air Pollution Crisis: Belagavi Air Quality is getting better

ಬೆಳಗಾವಿ, ಹುಬ್ಬಳ್ಳಿ ಸೇರಿ ಹಲವೆಡೆ ವಾಯುಗುಣಮಟ್ಟದಲ್ಲಿ ಸುಧಾರಣೆ!

ಬೆಂಗಳೂರು, ಏಪ್ರಿಲ್ 20: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality)  ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 127ಕ್ಕೆ ತಲುಪಿದೆ. ಕಲಬುರ್ಗಿ ಮತ್ತು ಉಡುಪಿಯ AQI 100ಕ್ಕಿಂತ ಕಡಿಮೆಯಿದ್ದು, ಇಷ್ಟು ದಿನ ಮಾರಕವಾಗಿದ್ದ ಗಾಳಿ ಇಂದು ಉಸಿರಾಟಕ್ಕೆ ಯೋಗ್ಯವಾಗಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 127
  • ಮಂಗಳೂರು-130
  • ಮೈಸೂರು –90
  • ಬೆಳಗಾವಿ – 67
  • ಕಲಬುರ್ಗಿ-119
  • ಶಿವಮೊಗ್ಗ –119
  • ಬಳ್ಳಾರಿ – 143
  • ಹುಬ್ಬಳ್ಳಿ- 80
  • ಉಡುಪಿ –119
  • ವಿಜಯಪುರ – 106

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಮೆರಿಕದ ಲೂಸಿಯಾನದಲ್ಲಿ ಗುಂಡಿನ ದಾಳಿ, 8 ಮಕ್ಕಳು ಸಾವು – Kannada News | Louisiana Tragedy: Young Lives Lost in Devastating Shooting

ವಾಷಿಂಗ್ಟನ್, ಏಪ್ರಿಲ್ 20: ಅಮೆರಿಕದ ಲೂಸಿಯಾನಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ವಯಸ್ಸು ಕೇವಲ 1 ರಿಂದ 14 ವರ್ಷ.  ಒಟ್ಟು 10 ಜನರಿಗೆ ಗುಂಡು ಹಾರಿಸಲಾಗಿದ್ದು, ಅವರಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಶಂಕಿತ ಶೂಟರ್​ನನ್ನು ಪತ್ತೆ ಹಚ್ಚಿ ಪೊಲೀಸರು ಆತನನ್ನು ಕೊಂದಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ಪೊಲೀಸ್ ಅಧಿಕಾರಿಗಳು ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ದುಡ್ಡು ಮಾಡಲು ಅಶ್ಲೀಲ ಫೋಟೋ ಹಂಚಿಕೊಂಡ ನಟಿ? ಅಸಲಿಯತ್ತು ಬೇರೆಯೇ ಇದೆ – Kannada News | Ananya Nagalla Instagram Subscription Controversy: Actress Clarifies Devotional Content

ಅನನ್ಯ ನಾಗಲ್ಲ ಚಿತ್ರರಂಗದಲ್ಲಿ ಈಗತಾನೇ ಹೆಸರು ಮಾಡುತ್ತಿದ್ದಾರೆ. ತೆಲುಗಿನಲ್ಲಿ ಆ್ಯಕ್ಟೀವ್ ಆಗಿರೋ ಅವರು ‘ಮಲ್ಲೇಶಂ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದರು. ‘ವಕೀಲ್ ಸಾಬ್’ ಚಿತ್ರದ ಮೂಲಕ ಹೆಸರನ್ನು ಗಳಿಸಿದರು. ಈಗ ಅವರು ವಿವಿಧ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದಾಗ್ಯೂ, ಪ್ರಸ್ತುತ ಈ ನಟಿ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಯ ವಿಷಯವಾಗಿದ್ದಾರೆ. ಅವರು ಒಂದು ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಅನನ್ಯ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ‘ಚಂದಾದಾರಿಕೆ’ ಆಯ್ಕೆಯನ್ನು ಪ್ರಾರಂಭಿಸಿದರು. ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಕೆಲವರು ಟೀಕಿಸಿದರು. ಅವರು ಈ ವಿಷಯದ ಬಗ್ಗೆ ಗಂಭೀರವಾಗಿ ತಿರುಗೇಟು ನೀಡಿದ್ದಾರೆ.ಈ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಅನನ್ಯಾ ಅವರು ಚಂದಾದಾರಿಕೆ ಹೆಸರಲ್ಲಿ ‘ವಯಸ್ಕ’ ಅಥವಾ ‘ಅಶ್ಲೀಲ’ ವಿಷಯವನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳನ್ನು ಹರಡಲು ಆರಂಭ ಆಗಿದೆ. ಅನನ್ಯಾ ನಾಗಲ್ಲ ಈ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದಾರೆ. ಚಂದಾದಾರಿಕೆ ಯೋಜನೆಯಲ್ಲಿ ಅವರು ಪೋಸ್ಟ್ ಮಾಡುತ್ತಿರುವುದು ಕೇವಲ ಭಕ್ತಿ ವಿಷಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ನನ್ನ ವೈಯಕ್ತಿಕ ಜೀವನದ ವಿವರಗಳ ಜೊತೆಗೆ, ನಾನು ಅಲ್ಲಿ ನನ್ನ ನೆಚ್ಚಿನ ಆಧ್ಯಾತ್ಮಿಕ ವಿಷಯಗಳು ಮತ್ತು ದೇವಾಲಯ ಭೇಟಿ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದೇನೆ. ಅದರಲ್ಲಿ ಯಾವುದೇ ಅಶ್ಲೀಲತೆ ಇಲ್ಲ. ಭಕ್ತಿ ವಿಷಯ ಮಾತ್ರ ಇದೆ’ ಎಂದು ಅವರು ಹೇಳಿದರು.

ಅಂತಹ ವಿಷಯಕ್ಕೆ ಏಕೆ ಹಣ ಪಾವತಿಸಬೇಕು ಎಂದು ಪ್ರಶ್ನಿಸಿದವರಿಗೆ ಪ್ರತಿಕ್ರಿಯಿಸಿದ ಅವರು, ‘ಇದು ಇನ್ಸ್​​ಟಾ ಒದಗಿಸಿರೋ ವೇದಿಕೆ. ಸುಳ್ಳು ಪ್ರಚಾರವನ್ನು ಹರಡುವ ಮೊದಲು ಜನರು ಸತ್ಯಗಳನ್ನು ತಿಳಿದುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.

ಇದನ್ನೂ ಓದಿ: ಆರ್​​ಸಿಬಿ ಹೆಸರು ಬದಲಾವಣೆ ವಿಷಯ; ಅಭಿಮಾನಿಗಳಿಗೆ ಗುಡ್​ನ್ಯೂಸ್ ಕೊಟ್ಟ ಅನನ್ಯಾ ಬಿರ್ಲಾ

ಅನೇಕ ನಟಿಯರು ಸಬ್​​ಸ್ಕ್ರಿಪ್ಶನ್ ಆಯ್ಕೆ ಮೂಲಕ ಹಾಟ್ ಫೋಟೋಗಳನ್ನು ಹಂಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಅವರಿಗೆ ಹಣ ಆಗುತ್ತಿದೆ.  ಅನನ್ಯಾ ಕೂಡ ಹೀಗೆಯೇ ಮಾಡಿರಬಹುದು ಎಂದು ಕೆಲವರು ಭಾವಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ಇಂದು ಹೀಟ್ ವೇವ್ ಜೊತೆಗೆ ಕರಾವಳಿಯಲ್ಲಿ ವರುಣಾರ್ಭಟ! – Kannada News | Karnataka Weather Forecast: Heat wave alert in coastal area, Thunderstorm in south Karnataka

ಇಂದು ಹೀಟ್ ವೇವ್ ಜೊತೆಗೆ ಕರಾವಳಿಯಲ್ಲಿ ವರುಣಾರ್ಭಟ!
Image Credit source: google Gemini

ಬೆಂಗಳೂರು, ಏಪ್ರಿಲ್ 20: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿದ್ದು, ಮುಂದಿನ 2 ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಹೀಟ್ ವೇವ್ ಜೊತೆಗೆ ಗುಡುಗು ಸಹಿತ ಮಳೆ

ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದೂ ಉಷ್ಣ ಅಲೆ ಇರಲಿದ್ದು, ಹೀಟ್ ವೇವ್ ಅಲರ್ಟ್​ ನೀಡಲಾಗಿದ್ದು, ಜೊತೆಗೆ ಗುಡುಗು ಸಹಿತ ಮಳೆಯೂ ಆಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರ್ಗಿ ಮತ್ತು ವಿಜಯಪುರದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಉಷ್ಣಾಘಾತದಿಂದ ರಕ್ಷಣೆ ಹೇಗೆ?

ಮುಂಬರುವ ದಿನಗಳಲ್ಲಿ ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

ಇದನ್ನೂ ಓದಿ ರಾಜ್ಯದಲ್ಲಿ ಬಿಸಿಲ ಬೇಗೆಯ ಜೊತೆಗೆ ವರುಣಾರ್ಭಟ! ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಸಾಧ್ಯತೆ

ಇನ್ನೂ 5 ದಿನ ಇದೇ ವಾತಾವರಣ

ಏಪ್ರಿಲ್ 22 ರವರೆಗೆ ಕರ್ನಾಟಕದ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಅಂತೆಯೇ ದಕ್ಷಿಣ ಒಳನಾಡಿನಲ್ಲಿಯೂ ಗುಡುಗು ಸಹಿತ ಮಳೆಯೊಂದಿಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳವರೆಗೆ ಕರಾವಳಿ ಪ್ರದೇಶಗಳಲ್ಲಿ ಉಷ್ಣ ಅಲೆ ಇರಲಿದ್ದು, ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಇಲಾಖೆ ತಿಳಿಸಿದೆ. ಜೊತೆಗೆ ಏಪ್ರಿಲ್ 21ರ ವರೆಗೆ ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:46 am, Mon, 20 April 26

Source link

ಎರಡು ವರ್ಷಕ್ಕೊಂದು ಅನಿಮೇಟೆಡ್ ಸಿನಿಮಾ; 10 ವರ್ಷದ ಪ್ಲ್ಯಾನ್ ರೆಡಿ ಮಾಡಿದ ಹೊಂಬಾಳೆ – Kannada News | Hombale Films’ Mahavatara Universe: Parashurama and 10 Year Animated Dashavatara Plan

ಕಳೆದ ವರ್ಷ, ‘ಮಹಾವತಾರ ನರಸಿಂಹ’ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಬಾಕ್ಸ್ ಆಫೀಸ್‌ನಲ್ಲಿ ಸಂಚಲನ ಮೂಡಿಸಿತು. ಈ ಅನಿಮೇಟೆಡ್ ಚಿತ್ರದೊಂದಿಗೆ ಹೊಂಬಾಳೆ ಚಿತ್ರಮಂದಿರಗಳಲ್ಲಿ ಹೊಸ ಅಲೆ ಸೃಷ್ಟಿಸಿತು. ಈಗ, ‘ಮಹಾವತಾರ ಸಿನಿಮ್ಯಾಟಿಕ್ ಯೂನಿವರ್ಸ್’ ನ ಭಾಗವಾಗಿ ಮತ್ತೊಂದು ಅದ್ಭುತ ಪ್ರಾಜೆಕ್ಟ್ ಘೋಷಿಸಲಾಗಿದೆ.
ಮೊದಲೇ ಹೇಳಿದಂತೆ ಭಗವಾನ್ ವಿಷ್ಣುವಿನ ಹತ್ತು ಅವತಾರಗಳನ್ನು ತರಲಾಗುತ್ತಿದೆಯಂತೆ. ‘ಮಹಾವತಾರ: ಪರಶುರಾಮ’ ಚಿತ್ರವನ್ನು ಪ್ರೇಕ್ಷಕರ ಎದುರು ತರಲಾಗುತ್ತಿದೆ. ವಿಷ್ಣುವಿನ ಅತ್ಯಂತ ಉಗ್ರ ರೂಪವೆಂದು ಪರಿಗಣಿಸಲಾದ ಪರಶುರಾಮನ ಕಥೆಯನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಲಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಪೋಸ್ಟರ್‌ನಲ್ಲಿ, ಪರಶುರಾಮನು ತನ್ನ ಮುಖ್ಯ ಆಯುಧವಾದ ಪರಶು (ಕೊಡಲಿ) ಹಿಡಿದುಕೊಂಡು ನಡೆಯುತ್ತಿರುವುದನ್ನು ತೋರಿಸಲಾಗಿದೆ.

ಆದರೆ, ಕೇವಲ ಪಾದಗಳನ್ನು ತೋರಿಸುವ ಮೂಲಕ, ನಿರ್ಮಾಪಕರು ಚಿತ್ರದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸಿದ್ದಾರೆ. ‘ಧರ್ಮವನ್ನು ಸೋಲಿಸಿ ಅನ್ಯಾಯ ಹೆಚ್ಚಾದಾಗ, ಪರಶುರಾಮ ಬರುತ್ತಾನೆ’ ಎಂಬ ಅರ್ಥವಿರುವ ಶೀರ್ಷಿಕೆಯು ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಪರಶುರಾಮನ ಕೋಪ ಮತ್ತು ಅವನ ಉಗ್ರ ನೋಟವನ್ನು ಅನಿಮೇಷನ್ ತಂತ್ರಜ್ಞಾನದೊಂದಿಗೆ ಅತ್ಯಂತ ಭವ್ಯವಾದ ರೀತಿಯಲ್ಲಿ ಬೆಳ್ಳಿ ಪರದೆಯ ಮೇಲೆ ತೋರಿಸಲಾಗುವುದು ಎಂದು ತೋರುತ್ತದೆ.

‘ಮಹಾವತಾರ ನರಸಿಂಹ’ ಚಿತ್ರವನ್ನು ಕೇವಲ 6 ಕೋಟಿ ಬಜೆಟ್‌ನಲ್ಲಿ ನಿರ್ಮಿಸಲಾಗಿದ್ದು, 120 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಈ ಯಶಸ್ಸಿನಿಂದ ಉತ್ಸುಕರಾಗಿರುವ ಹೊಂಬಾಳೆ ಫಿಲ್ಮ್ಸ್, ಕ್ಲೀಮ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಬೃಹತ್ ಸರಣಿಯನ್ನು ಯೋಜಿಸಿದೆ. ಇದನ್ನು ಶಿಲ್ಪಾ ಧವನ್, ಕುಶಾಲ್ ದೇಸಾಯಿ ಮತ್ತು ಚೈತನ್ಯ ದೇಸಾಯಿ ಪ್ರಸ್ತುತಪಡಿಸಿದ್ದಾರೆ. ಅಶ್ವಿನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ವಿಶ್ವದ ಭಾಗವಾಗಿ ಮುಂಬರುವ ಚಿತ್ರಗಳ ವಿವರಗಳನ್ನು ಸಹ ತಯಾರಕರು ಘೋಷಿಸಿದ್ದಾರೆ ಎಂದು ತಿಳಿದಿದೆ.

ಮಹಾವತಾರ: ಪರಶುರಾಮ್ (ಡಿಸೆಂಬರ್ 2027)

ಮಹಾವತಾರ: ರಘುನಂದನ್ (2029)

ಮಹಾವತಾರ: ದ್ವಾರಕಾದೀಶ (2031)

ಮಹಾವತಾರ: ಗೋಕುಲಾನಂದ (2033)

ಮಹಾವತಾರ: ಕಲ್ಕಿ (ಭಾಗ 1 & 2 – 2035, 2037)

ಅನಿಮೇಷನ್ ಕ್ಷೇತ್ರದಲ್ಲಿ ಭಾರತೀಯ ಪುರಾಣಗಳನ್ನು ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ತರುವ ಗುರಿಯನ್ನು ತಂಡ ಹೊಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರನ್ನೂ ಆಕರ್ಷಿಸುವಂತೆ ವಿನ್ಯಾಸಗೊಳಿಸಲಾದ ಈ ಚಿತ್ರವು ಡಿಸೆಂಬರ್ 2027 ರಲ್ಲಿ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಕೈಯಲ್ಲಿ ಗನ್ ಹಿಡಿದು ಬೆದರಿಸುತ್ತಾ ಬೈಕ್​​ನಲ್ಲಿ ಮೂವರ ಸವಾರಿ, ಭೀಕರ ಅಪಘಾತ, ಎಲ್ಲರೂ ಸಾವು – Kannada News | Thrill Ride Turns Fatal as Armed Trio Meets Deadly Crash in Bhopal

ಭೋಪಾಲ್, ಏಪ್ರಿಲ್ 20: ಕೈಯಲ್ಲಿ ಗನ್ ಹಿಡಿದು ಮೂವರು ಬೈಕ್​ನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಭೋಪಾಲ್​ನಲ್ಲಿ ನಡೆದಿದೆ. ಬಳಿಕ ಸಂಭವಿಸಿದ ಅಪಘಾತದಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ. ವಿಡಿಯೋದಲ್ಲಿ ಮೂವರು ಸವಾರರು ಟ್ರಕ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿರುವುದನ್ನು ತೋರಿಸಲಾಗಿದೆ. ಆ ಕ್ಷಣದಲ್ಲಿ, ಇಟ್ಟಿಗೆಗಳನ್ನು ತುಂಬಿದ ಟ್ರಾಲಿ ಮುಂದೆ ಕಾಣಿಸಿಕೊಳ್ಳುತ್ತದೆ. ಅತಿ ವೇಗದಲ್ಲಿ ಪ್ರಯಾಣಿಸುತ್ತಿದ್ದಾಗ, ಸವಾ ನಿಯಂತ್ರಣ ಕಳೆದುಕೊಂಡು ಟ್ರಾಲಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಉಪಲಕ್ಷ್ ಕೋಲ್, ಅಮರೀಶ್ ಕೋಲ್ ಮತ್ತು ಹೇಮರಾಜ್ ಕೋಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರೂ ಒಂದೇ ಕುಟುಂಬದವರು. ವಿಡಿಯೋ ರೆಕಾರ್ಡ್​ ಮಾಡುತ್ತಾ ಹೋಗುತ್ತಿದ್ದ ಮತ್ತೊಂದು ಬೈಕ್​ನಲ್ಲಿರುವವರಿಗೂ ಕೂಡ ಅಪಘಾತವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಬಾಬರ್ ಆಝಂ – Kannada News | Babar Azam Creates New World Record with Few Dot Balls Century

ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ಬ್ಯಾಟರ್ ಬಾಬರ್ ಆಝಂ (Babar Azam) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಈ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಡಾಟ್ ಬಾಲ್ ಆಡಿ ಶತಕ ಪೂರೈಸಿದ ವಿಶ್ವ ದಾಖಲೆ ಬಾಬರ್ ಆಝಂ ಪಾಲಾಗಿದೆ.

ಪಾಕಿಸ್ತಾನ್ ಸೂಪರ್ ಲೀಗ್​ನ 29ನೇ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಹಾಗೂ ಕ್ವೆಟ್ಟಾ ಗ್ಲಾಡಿಯೇಟರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ ಆಝಂ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದರು.

ಮೊದಲ ಓವರ್​ನಿಂದಲೇ ರನ್​ ಗಳಿಸುತ್ತಾ ಸಾಗಿದ ಬಾಬರ್ ಆಝಂ ಒಂದೇ ಒಂದೇ ಒಂದು ಡಾಟ್ ಆಡದೇ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಅರ್ಧಶತಕದ ಬಳಿಕ ಬಾಬರ್ ಆಡಿದ್ದ ಒಂದೇ ಡಾಟ್ ಬಾಲ್. ಅಂದರೆ ತಾನೆದುರಿಸಿದ 36ನೇ ಎಸೆತದಲ್ಲಿ ಯಾವುದೇ ರನ್​ಗಳಿಸಿರಲಿಲ್ಲ.

ಇದಾದ ಬಳಿಕ ಸತತವಾಗಿ ಕನಿಷ್ಠ ಒಂದು ರನ್​ಗಳಿಸುತ್ತಾ ಸಾಗಿದ ಬಾಬರ್ ಆಝಂ 52 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಒಂದು ಡಾಟ್ ಬಾಲ್ ಆಡುವ ಮೂಲಕ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇದಕ್ಕೂ ಮುನ್ನ ಇಂತಹದೊಂದು ಭರ್ಜರಿ ದಾಖಲೆ ನ್ಯೂಝಿಲೆಂಡ್​ನ ಫಿನ್ ಅಲೆನ್ ಹೆಸರಿನಲ್ಲಿತ್ತು. ಟಿ20 ವಿಶ್ವಕಪ್​ 2026 ರಲ್ಲಿ ಸೌತ್ ಆಫ್ರಿಕಾ ವಿರುದ್ಧ ಅಲೆನ್ 33 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಈ ವೇಳೆ ಅವರು ಕೇವಲ 4 ಡಾಟ್​ ಬಾಲ್​ಗಳನ್ನು ಮಾತ್ರ ಆಡಿದ್ದರು. ಈ ಮೂಲಕ ಅತೀ ಕಡಿಮೆ ಡಾಟ್​ ಬಾಲ್​ಗಳೊಂದಿಗೆ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು.

ಇದೀಗ ಕೇವಲ 1 ಡಾಟ್ ಬಾಲ್​ನೊಂದಿಗೆ ಶತಕ ಪೂರೈಸುವ ಮೂಲಕ ಬಾಬರ್ ಆಝಂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಡಾಟ್ ಬಾಲ್ ಆಡಿ ಶತಕ ಬಾರಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Published On – 7:42 am, Mon, 20 April 26

Source link

‘ಧುರಂಧರ್ 2’ ಯಶಸ್ಸಿನ ಓಟಕ್ಕೆ ಬ್ರೇಕ್ ಕೊಟ್ಟ ‘ಭೂತ್ ಬಂಗ್ಲ’; ವೀಕೆಂಡ್​​ನಲ್ಲಿ ಭರ್ಜರಿ ಕಲೆಕ್ಷನ್ – Kannada News | Akshay Kumar’s Bhoot Bangala Dethrones Ranveer Singh’s Dhuranthar 2 at Box Office

ರಣವೀರ್ ಸಿಂಗ್ (Ranveer Singh) ಅವರ ‘ಧುರಂಧರ್ 2’ ಸಿನಿಮಾ ಒಳ್ಳೆಯ ರೀತಿಯಲ್ಲಿ ಕಲೆಕ್ಷನ್ ಮಾಡುತ್ತಾ ಸಾಗುತ್ತಾ ಇತ್ತು. ಸಿನಿಮಾ ರಿಲೀಸ್ ಆಗಿ ಸರಿಯಾಗಿ ಒಂದು ತಿಂಗಳು ಕಳೆದಿದೆ. ಆದಾಗ್ಯೂ ಇದರ ಓಟ ನಿಂತಿರಲಿಲ್ಲ. ಆದರೆ, ಈ ವೇಗಕ್ಕೆ ಅಕ್ಷಯ್ ಕುಮಾರ್ ನಟನೆಯ ‘ಭೂತ್ ಬಂಗ್ಲ’ ಸಿನಿಮಾ ಬ್ರೇಕ್ ಹಾಕಿದೆ. ಅಕ್ಷಯ್ ಕುಮಾರ್ ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಾ ಇದೆ. ಒಂದಾದ ಬಳಿಕ ಒಂದು ಗೆಲುವು ಸಿಗುತ್ತಿರುವುದಕ್ಕೆ ಬಾಲಿವುಡ್ ಮಂದಿ ಕೂಡ ಖುಷಿಯಾಗಿದ್ದಾರೆ.

ರಣವೀರ್ ಸಿಂಗ್ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಯಿತು. ಸಿನಿಮಾ ರಿಲೀಸ್ ಆಗಿ 30 ದಿನ ಆಗಿದೆ. ಈ ಸಿನಿಮಾ ವಿಶ್ವ ಮಟ್ಟದಲ್ಲಿ 1756 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಭಾರತದ ಗ್ರಾಸ್ ಕಲೆಕ್ಷನ್ 1,335 ಕೋಟಿ ರೂಪಾಯಿ ಆಗಿದೆ. ಭಾನುವಾರ ಈ ಚಿತ್ರ 4 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದಕ್ಕೂ ಹಿಂದಿನ ಭಾನುವಾರ (ಏಪ್ರಿಲ್ 12) ಸಿನಿಮಾ 17 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದಕ್ಕೆ ಹೋಲಿಕೆ ಮಾಡಿದರೆ ಏಪ್ರಿಲ್ 19ರ ಗಳಿಕೆ ಬಹಳವೇ ಕಡಿಮೆ ಆಗಿದೆ. ಇದಕ್ಕೆ ಕಾರಣ ಆಗಿದ್ದು ಅಕ್ಷಯ್ ಕುಮಾರ್ ಅವರ ‘ಭೂತ್ ಬಂಗ್ಲ’ ಸಿನಿಮಾ.

‘ಧುರಂಧರ್ 2’ ಸಿನಿಮಾ ಅಬ್ಬರದ ಮಧ್ಯೆ ಸಿಕ್ಕಿ ಹಾಕಿಕೊಳ್ಳುವುದು ಬೇಡ ಎಂಬ ಕಾರಣಕ್ಕೆ ‘ಭೂತ್ ಬಂಗ್ಲ’ ಸಿನಿಮಾದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿತ್ತು. ಏಪ್ರಿಲ್ 17ರಂದು ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ಭಾನುವಾರ 23 ಕೋಟಿ ರೂಪಾಯಿ ಗಳಿಕೆ ಮಾಡಿದೆ. ‘ಧುರಂಧರ್ 2’ ಚಿತ್ರಕ್ಕೆ ನೀಡಲಾಗಿದ್ದ ಶೋಗಳ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದನ್ನು ‘ಭೂತ್ ಬಂಗ್ಲ’ಗೆ ನೀಡಲಾಗಿದೆ.

ಇದನ್ನೂ ಓದಿ: ದೀಪಿಕಾ ಪಡುಕೋಣೆ ಮತ್ತೆ ಪ್ರೆಗ್ನೆಂಟ್; 2ನೇ ಮಗುವಿನ ನಿರೀಕ್ಷೆಯಲ್ಲಿ ರಣವೀರ್ ಸಿಂಗ್

ಅಕ್ಷಯ್ ಕುಮಾರ್, ರಾಜ್​ಪಾಲ್ ಯಾದವ್ ಸೇರಿದಂತೆ ಅನೇಕರು ‘ಭೂತ್ ಬಂಗ್ಲ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ವಿಶ್ವ ಮಟ್ಟದ ಗಳಿಕೆ 95 ಕೋಟಿ ರೂಪಾಯಿ ಆಗಿದೆ. ಇದು ‘ಧುರಂಧರ್ 2’ ಯಶಸ್ಸಿನ ಓಟಕ್ಕೆ ಸಣ್ಣ ಬ್ರೇಕ್ ಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version