ಹೊಸ ರಿಯಾಲಿಟಿ ಶೋಗೆ ಹೋಸ್ಟ್ ಆದ ಅಕ್ಷಯ್ ಕುಮಾರ್; ಗೆದ್ದವರಿಗೆ ಕೋಟಿ ಕೋಟಿ ಹಣ? – Kannada News | Akshay Kumar Hosts Wheel of Fortune India: Sony TV’s New Reality Game Show

ವಿಶ್ವಾದ್ಯಂತ ಹಲವು ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಿವೆ. ಇಂಗ್ಲಿಷ್​ನಲ್ಲಿ ಪ್ರಸಾರ ಕಾಣುವ ಅನೇಕ ರಿಯಾಲಿಟಿ ಶೋಗಳನ್ನು ಈಗ ಭಾರತಕ್ಕೆ ತರಲಾಗುತ್ತಿದೆ. ಬಿಗ್ ಬಾಸ್, ಶಾರ್ಕ್ ಟ್ಯಾಂಕ್ ಇಂಡಿಯಾ ಸೇರಿದಂತೆ ಅನೇಕ ರಿಯಾಲಿಟಿ ಶೋಗಳು ಬೇರೆ ದೇಶಗಳಿಂದ ಎರವಲು ಪಡೆದಿದ್ದು. ಈಗ ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ‘ವೀಲ್ಸ್ ಆಫ ಫಾರ್ಚೂನ್’ ಹೆಸರಿನ ರಿಯಾಲಿಟಿ ಶೋ ಆರಂಭಿಸುತ್ತಿದೆ. ಈ ಶೋನ ಅಕ್ಷಯ್ ಕುಮಾರ್ ನಡೆಸಿಕೊಡಲಿದ್ದಾರೆ.

ಸೋನಿ ಪಿಕ್ಚರ್ಸ್​​ನಲ್ಲಿ ‘ಶಾರ್ಕ್ ಟ್ಯಾಂಕ್’ ಪ್ರಸಾರ ಕಂಡಿದೆ. ‘ಕೌನ್ ಬನೇಗಾ ಕರೋಡ್ಪತಿ’ ಕೂಡ ಪ್ರಸಾರ ಕಾಣೋದು ಸೋನಿಯಲ್ಲಿ. ಈಗ ವೀಲ್ಸ್ ಆಫ್ ಫಾರ್ಚೂನ್ ಶೋ ಬರುತ್ತಿದೆ. ಶೋನ ಗೆದ್ದವರಿಗೆ ಕೋಟಿ ರೂಪಾಯಿವರೆಗೆ ಹಣ ಸಿಗೋ ನಿರೀಕ್ಷೆ ಇದೆ. ಈ ಆಟ ಯಾವ ರೀತಿಯಲ್ಲಿ ಇರುತ್ತದೆ ಎಂಬ ಕುತೂಹಲ ಇದೆ.

ವೀಲ್ಸ್ ಆಫ್ ಫಾರ್ಚೂನ್ ಅಮೇರಿಕದ ಗೇಮ್ ಶೋ. ಇದನ್ನು ಮೊದಲು ಬಾರಿಗೆ ಆರಂಭಿಸಿದ್ದು 1975ರಲ್ಲಿ. ಅಲ್ಲಿಂದ ಇಲ್ಲಿಯವರೆಗೂ ಶೋ ವಿವಿಧ ಹಂತದಲ್ಲಿ, ವಿವಿಧ ವಾಹಿನಿಗಳಲ್ಲಿ ಪ್ರಸಾರ ಕಾಣುತ್ತಲೇ ಬರುತ್ತಿದೆ. ಈ ಶೋನ ಭಾರತಕ್ಕೆ ತರಲು ಹೈಗೇಟ್ ಎಂಟರ್ಟೈನ್ಮೆಂಟ್ ಪರವಾನಿಗೆ ಪಡೆದಿದ್ದು, ಇದೇ ಸಂಸ್ಥೆ ಶೋನ ನಿರ್ಮಾಣ ಮಾಡಲಿದೆ.

ಪದಗಳ ಪಜಲ್, ದೈತ್ಯ ಕಾರ್ನಿವಾಲ್ ತಿರುಗಿಸೋದು ಸೇರಿದಂತೆ ವಿವಿಧ ಗೇಮ್​ಗಳನ್ನು ಇದರಲ್ಲಿ ಇರಲಿವೆ. ಇಂಗ್ಲಿಷ್​​ನಲ್ಲಿ ಈಗಾಗಲೇ 8 ಸಾವಿರಕ್ಕೂ ಹೆಚ್ಚು ಎಪಿಸೋಡ್​ಗಳು ಪ್ರಸಾರ ಕಂಡಿರೋದು ಇದರ ಹೆಚ್ಚುಗಾರಿಕೆ. ಭಾರತಕ್ಕೆ ತಕ್ಕಂತೆ ನಿಯಮ ಬದಲಿಸಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಇದು ಸಮಾಜಕ್ಕೂ ಅಪಾಯಕಾರಿ’; ಅಕ್ಷಯ್ ಕುಮಾರ್ ವಿಡಿಯೋ ಬಗ್ಗೆ ಕೋರ್ಟ್ ಕಳವಳ

ಅಂದಹಾಗೆ, ಅಕ್ಷಯ್ ಕುಮಾರ್ ಅವರು ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ದಿನಕ್ಕೆ 2-3 ಸಿನಿಮಾಗಳನ್ನು ಶೂಟ್ ಮಾಡಿದ ಉದಾಹರಣೆ ಕೂಡ ಇದೆ. ಇವುಗಳ ಜೊತೆ ಅವರು ಈಗ ರಿಯಾಲಿಟಿ ಶೋ ಕೂಡ ಒಪ್ಪಿಕೊಂಡಿದ್ದಾರೆ. ಇದಕ್ಕಾಗಿ ಅವರು ಒಂದರಿಂದ ಎರಡು ದಿನ ಮೀಸಲಿಡಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕನಸಿನ ಮನೆ ಕನಸು ಕಂಡವರಿಗೆ ಶಾಕ್: ಉಳ್ಳವರಿಗಾಗಿ ಬಡವರ ಹೊಟ್ಟೆ ಮೇಲೆ ಹೊಡೆದ ಸರ್ಕಾರ – Kannada News | Devanahalli land scam allegation: Officials Allocate Quarry Plots to Poor

ದೇವನಹಳ್ಳಿ, ಡಿಸೆಂಬರ್​ 19: ದೇವರು ಕೊಟ್ಟರು ಪೂಜಾರಿ ಕೊಡಲಿಲ್ಲ ಎನ್ನುವ ಗಾದೆ ಮಾತು ಒಂದಿದೆ. ಈ ಗಾದೆ ಮಾತು ಇದೀಗ ನಗರದ ಹೊರವಲಯದ ಗ್ರಾಮಸ್ಥರಿಗೆ ಅನ್ವಯವಾಗುತ್ತಿದೆ. ದಶಕಗಳ ಕನಸು ನನಸಾಯಿತು ಅಂತ ಖುಷಿ ಪಡುವಷ್ಟರಲ್ಲೇ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಮಾಡಿರುವ ಅದೊಂದು ಎಡವಟ್ಟಿನಿಂದ ಇದೀಗ ಗ್ರಾಮಸ್ಥರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕಲ್ಲು ಕ್ವಾರಿಯಲ್ಲಿ ಜಮೀನು ಮಂಜೂರು

ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಮಾರಗೊಂಡನಹಳ್ಳಿ ಗ್ರಾಮಸ್ಥರು ಕಳೆದ ಹಲವು ವರ್ಷಗಳಿಂದ ಸರ್ಕಾರದಿಂದ ನಿವೇಶನ ಪಡೆಯಲು ಕಾದು ಕುಳಿತಿದ್ದರು. ಜೊತೆಗೆ ಜನರ ಮನವಿಗೆ ಸ್ಪಂದಿಸಿದ ಸ್ಥಳಿಯ ಶಾಸಕ ಹಾಗೂ ಸಚಿವ ಕೆಹೆಚ್ ಮುನಿಯಪ್ಪ ಪಂಚಾಯತಿಗಳಲ್ಲಿ ಭುಮಿ ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ನೀಡಲು ಸೂಚಿಸಿದ್ದರು. ಅದರಂತೆ ನಿವೇಶನಗಳಿಗೆ ಸೂಕ್ತವಾದ ಜಾಗ ನೀಡಬೇಕಾದ ಕಂದಾಯ ಅಧಿಕಾರಿಗಳು ಇದೀಗ ಪಕ್ಕದಲ್ಲೇ ಸಮತಟ್ಟಾದ ಭೂಮಿ ಇದ್ದರು ಕಲ್ಲು ಕ್ವಾರಿಯ ಜಮೀನನ್ನ ಮಂಜೂರು ಮಾಡಿದ್ದಾರಂತೆ.

ಇದನ್ನೂ ಓದಿ: ಅಕ್ರಮ BPL ಕಾರ್ಡ್​​ದಾರರಿಗೆ ಭರ್ಜರಿ ಶಾಕ್​​ ಕೊಟ್ಟ ಸರ್ಕಾರ: 3 ತಿಂಗಳಲ್ಲಿ ರದ್ದಾದ ಪಡಿತರ ಚೀಟಿಗಳೆಷ್ಟು?

ಹೀಗಾಗೆ ಕಲ್ಲು ಕ್ವಾರಿಯ ಜಮೀನಿನಲ್ಲಿ ಯಾವ ರೀತಿ ಮನೆ ಕಟ್ಟಲು ಸದ್ಯವಾಗುತ್ತೆ ಅಂತ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ರೊಚಿಗೆದ್ದಿದ್ದು, ಕಲ್ಲು ಕ್ವಾರಿ ಜಮೀನು ಮಂಜೂರು ಮಾಡಿರುವುದಕ್ಕೆ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರಿಗೆ ಅನುಕೂಲ ಮಾಡಲು ಈ ರೀತಿ ಉತ್ತಮ ಜಾಗ ಬಿಟ್ಟು ಕಲ್ಲುಗಳಿರುವ ಜಾಗ ನೀಡಿದ್ದಾರೆ ಅಂತ ಪಿಡಿಒ ಸೇರಿದಂತೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರಾದ ಗೋವಿಂದರಾಜು ಎನ್ನುವವರು ಆಕ್ರೋಶ ಹೊರಹಾಕಿದ್ದಾರೆ.

ಆಶ್ರಯ ಯೋಜನೆಯಡಿಯಲ್ಲಿ ಬಡ ಜನರಿಗೆ ನಿವೇಶನ ನೀಡಲು ಕಲ್ಲು ಕ್ವಾರಿ ಜಾಗ ಗುರುತಿಸಿರುವುದು ಯಾವ ಮಾನದಂಡದ ಮೇಲೆ ಅಂತ ಇಓ ಮತ್ತು ತಹಶೀಲ್ದಾರ್​​​ಗೆ ಗ್ರಾಮಸ್ಥರು ದೂರು ನೀಡಿದ್ದು, ಕಲ್ಲು ಬಂಡೆ ಜಮೀನು ಹಿಂಪಡೆದು ಸಮತಟ್ಟಾದ ಭೂಮಿ ಮಂಜೂರು ಮಾಡುವಂತೆ ಒತ್ತಾಯಿಸಿದ್ದಾರೆ.

ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಹೇಳಿದ್ದಿಷ್ಟು 

ಇನ್ನು ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಮಾತನಾಡಿದ್ದು, ಕಂದಾಯ ಇಲಾಖೆ ನಮ್ಮ ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡಿದ್ದು, ನಾವು ಆ ಜಮೀನು ಕೊಡುವಂತೆ ಕೇಳಿಲ್ಲ. ಇದೀಗ ಅದು ನಿವೇಶನಗಳಿಗೆ ಯೋಗ್ಯವಾಗದ ಕಾರಣ ಆ ಜಮೀನನ್ನ ವಾಪಸ್ ಪಡೆಯುವಂತೆ ಡಿಸಿ ಅವರಿಗೆ ಪತ್ರ ಬರೆದಿದ್ದು, ಬದಲಿಯಾಗಿ ಯೋಗ್ಯವಾದ ಜಮೀನು ನಿವೇಶನಗಳಿಗೆ ನೀಡುವಂತೆ ಕೇಳಿದ್ದೇವೆ ಎಂದರು.

ಇದನ್ನೂ ಓದಿ: ಮುಡಾ ಕೇಸ್​​ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ: ವಾದ-ಪ್ರತಿವಾದ ಹೇಗಿತ್ತು?

ಒಟ್ಟಿನಲ್ಲಿ ಏರ್ಪೋಟ್ ಬಳಿ ಭೂಮಿ ಬೆಲೆ ಗಗನಕ್ಕೇರುತ್ತಿದ್ದು ಒಂದಿಚ್ಚು ಭೂಮಿ ಬಂಗಾರದ ಬೆಲೆಬಾಳುತ್ತಿದೆ. ಈ ನಡುವೆ ಸರ್ಕಾರದಿಂದ ನಿವೇಶನ ಪಡೆಯುವ ನಿರೀಕ್ಷೆಯಲ್ಲಿದ್ದವರಿಗೆ ಅಧಿಕಾರಿಗಳ ಎಡವಟ್ಟಿನಿಂದ ಆತಂಕ ಶುರುವಾಗಿದೆ. ಸದ್ಯ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಆಶ್ರಯ ಯೋಜನೆಗೆ ಸೂಕ್ತ ಭೂಮಿ ನೀಡುವ ಕೆಲಸ ಮಾಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಚೈತ್ರಾ ಕುಂದಾಪುರ ಮೇಲೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಕೋರ್ಟ್ ಸೂಚನೆ: ಏನಿದು ಕೇಸ್? – Kannada News | Court order against Bigg Boss Kannada Season 12 contestant Chaithra Kundapura

ಸಾಕಷ್ಟು ವಿವಾದಗಳಿಂದ ಸುದ್ದಿಯಾದ ಚೈತ್ರಾ ಕುಂದಾಪುರ ಅವರು ಈಗ ಬಿಗ್ ಬಾಸ್ (Bigg Boss Kannada Season 12) ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರ ವಿರುದ್ಧ ಕೋರ್ಟ್ ಆದೇಶ ಬಂದಿದೆ. ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು ದೂರು ನೀಡಿದ್ದರು. ತಮಗೆ ನ್ಯಾಯ ದೊರಕಿಸಿಕೊಡುವಂತೆ ಬಾಲಕೃಷ್ಣ ಅವರು ಹಿರಿಯ ನಾಗರಿಕರ ನ್ಯಾಯಾಲಯದ ಮೊರೆ ಹೋಗಿದ್ದರು. ಈಗ ಚೈತ್ರಾ ಕುಂದಾಪುರ (Chaithra Kundapura) ವಿರುದ್ಧ ಆದೇಶ ಬಂದಿದೆ. ನಿಯಮಾನುಸಾರ ಕ್ರಮ ಕೈಗೊಳ್ಳಲು ಕುಂದಾಪುರ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ.

ಹಿರಿಯ ನಾಗರಿಕರ ನ್ಯಾಯಾಲಯವು ಚೈತ್ರಾ ಕುಂದಾಪುರ ವಿರುದ್ಧ ಆದೇಶ ನೀಡಿದೆ. ‘ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ದೈಹಿಕ, ಮಾನಸಿಕ ಕಿರುಕುಳ ನೀಡುವಂತಿಲ್ಲ. ಮನೆಯಲ್ಲಿ ನಿರ್ಭೀತಿಯಿಂದ ವಾಸಿಸಲು ಅನುವು ಮಾಡಿಕೊಡಬೇಕು’ ಎಂದು ನ್ಯಾಯಾಲಯ ಆದೇಶ ನೀಡಿದೆ. ಅಲ್ಲದೇ, ಈ ಬಗ್ಗೆ ಚೈತ್ರಾ ಕುಂದಾಪುರ ಅವರಿಂದ ಸೂಕ್ತ ಮುಚ್ಚಳಿಕೆ ಪಡೆಯುವಂತೆ ಸೂಚಿಸಲಾಗಿದೆ.

ಬಾಲಕೃಷ್ಣ ನಾಯ್ಕ್​ ಅವರಿಗೆ ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ನಿಯಮಗಳು ಅಡಿಯಲ್ಲಿ ರಕ್ಷಣೆ ನೀಡಲಾಗಿದೆ. ಇದರ ಅನ್ವಯ ಕುಂದಾಪುರ ಪೊಲೀಸರು ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಿದ್ದಾರೆ. ಇದರಿಂದ ಚೈತ್ರಾ ಕುಂದಾಪುರ ಅವರ ಬಿಗ್ ಬಾಸ್ ಆಟಕ್ಕೆ ತೊಂದರೆ ಆಗುತ್ತಾ ಎಂಬ ಪ್ರಶ್ನೆ ಉದ್ಭವ ಆಗಿದೆ.

ಈ ಮೊದಲು ಚೈತ್ರಾ ಕುಂದಾಪುರ ಮತ್ತು ಅವರ ತಂದೆಯ ನಡುವಿನ ಸಂಘರ್ಷ ತಾರಕಕೇರಿತ್ತು. ಚೈತ್ರಾ ಮದುವೆ ವೇಳೆ ಬಾಲಕೃಷ್ಣ ಅವರ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಸಮಯದಲ್ಲಿ ತಂದೆಯ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಪರೋಕ್ಷವಾಗಿ ಚೈತ್ರಾ ಕುಂದಾಪುರ ಅವರ ಕಿಡಿಕಾರಿದ್ದರು. ಈ ಎಲ್ಲ ಕಾರಣಗಳಿಂದ ಅವರ ಕುಟುಂಬದಲ್ಲಿ ಬಿರುಕು ಮೂಡಿತ್ತು.

ಇದನ್ನೂ ಓದಿ: ಬಾಯಿ ಬಿಟ್ಟರೆ ಬರೀ ಸುಳ್ಳು, ಮೋಸದ ಆಟ: ಚೈತ್ರಾ ಮೇಲೆ ಆರೋಪ; ದೇವರ ಮುಂದೆ ಕಣ್ಣೀರು

ಬಿಗ್ ಬಾಸ್ ಕನ್ನಡ 11ನೇ ಸೀಸನ್​ನಲ್ಲಿ ಚೈತ್ರಾ ಕುಂದಾಪುರ ಅವರು ಸ್ಪರ್ಧಿಸಿದ್ದರು. ಈಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿ ಆಗಿದ್ದಾರೆ. ಕೋರ್ಟ್ ಆದೇಶದ ಪರಿಣಾಮದಿಂದ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬರಬೇಕಾದ ಪ್ರಮೇಯ ಬರುತ್ತಾ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

24 ಗಂಟೆಗಳೊಳಗೆ ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ; ಬಿಸಿಸಿಐ ಅಧಿಕೃತ ಮಾಹಿತಿ – Kannada News | T20 World Cup 2026: India Squad Announcement Date and NZ Series Details Revealed

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. ಅದರಂತೆ ಈ ಮಿನಿ ವಿಶ್ವಕಪ್ ಫೆಬ್ರವರಿ 7 ರಿಂದ ಆರಂಭವಾಗುತ್ತಿದೆ. 9ನೇ ಆವೃತ್ತಿಯ ಟಿ20 ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಕ್ಕೆ (Team India) ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ಅವಕಾಶವಿದೆ. ಇದೆಲ್ಲದರ ನಡುವೆ ಈ ಚುಟುಕು ವಿಶ್ವ ಸಮರಕ್ಕರ ಟೀಂ ಇಂಡಿಯಾವನ್ನು ಯಾವಾಗ ಘೋಷಿಸಲಾಗುತ್ತದೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಬಿಸಿಸಿಐ (BCCI) ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಆ ಪ್ರಕಾರ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಮತ್ತು ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾವನ್ನು ಡಿಸೆಂಬರ್ 20 ರಂದು ಪ್ರಕಟಿಸಲಾಗುತ್ತದೆ ಎಂಬ ಮಾಹಿತ ನೀಡಿದೆ.

ತಂಡವನ್ನು ಯಾವಾಗ ಪ್ರಕಟಿಸಲಾಗುತ್ತದೆ?

2026 ರ ಟಿ20 ವಿಶ್ವಕಪ್ ಮತ್ತು ನ್ಯೂಜಿಲೆಂಡ್ ಸರಣಿಗೆ ಡಿಸೆಂಬರ್ 20 ರಂದು ಟೀಂ ಇಂಡಿಯಾವನ್ನು ಘೋಷಿಸಲಾಗುವುದು ಎಂದು ಈಗಾಗಲೇ ವರದಿಗಳಿದ್ದವು. ಆದಾಗ್ಯೂ, ಬಿಸಿಸಿಐ ಈಗ ಅಧಿಕೃತವಾಗಿ ಸುದ್ದಿಯನ್ನು ದೃಢಪಡಿಸಿದೆ. ಭಾರತೀಯ ತಂಡದ ಆಯ್ಕೆ ಮಧ್ಯಾಹ್ನ 1:30 ಕ್ಕೆ ನಡೆಯಲಿದ್ದು, ನಂತರ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಸರಣಿ ಯಾವಾಗ?

ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ತವರು ನೆಲದಲ್ಲಿ ವೈಟ್-ಬಾಲ್ ಸರಣಿಯನ್ನು ಆಡಲಿದೆ. ಈ ಸರಣಿಯು 2026 ರ ಟಿ20 ವಿಶ್ವಕಪ್ ಪ್ರಾರಂಭವಾಗುವ ಮೊದಲು ನಡೆಯಲಿದೆ. ಈ ಸರಣಿಯು ಮೂರು ಏಕದಿನ ಪಂದ್ಯಗಳು ಮತ್ತು ಐದು ಟಿ20ಪಂದ್ಯಗಳು ಸೇರಿದಂತೆ ಎಂಟು ಪಂದ್ಯಗಳನ್ನು ಒಳಗೊಂಡಿರುತ್ತದೆ. ಏಕದಿನ ಸರಣಿಯು ಜನವರಿ 11, 14 ಮತ್ತು 18 ರಂದು ವಡೋದರಾ, ರಾಜ್‌ಕೋಟ್ ಮತ್ತು ಇಂದೋರ್‌ನಲ್ಲಿ ನಡೆಯಲಿವೆ.

ಏಕದಿನ ಸರಣಿಯ ನಂತರ, ಐದು ಪಂದ್ಯಗಳ ಟಿ20 ಸರಣಿಯು ಜನವರಿ 21 ರಿಂದ 31 ರವರೆಗೆ ನಡೆಯಲಿದ್ದು, ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಎರಡನೇ ಟಿ20 ಜನವರಿ 23 ರಂದು ರಾಯ್‌ಪುರದಲ್ಲಿ, ಮೂರನೇ ಪಂದ್ಯ ಜನವರಿ 25 ರಂದು ಗುವಾಹಟಿಯಲ್ಲಿ ನಡೆಯಲಿದೆ. ನಾಲ್ಕನೇ ಟಿ20 ಜನವರಿ 28 ರಂದು ವೈಜಾಗ್‌ನಲ್ಲಿ ನಡೆಯಲಿದ್ದು, ಕೊನೆಯ ಟಿ20 ಜನವರಿ 31 ರಂದು ತಿರುವನಂತಪುರದಲ್ಲಿ ನಡೆಯಲಿದೆ.

ICC Awards: ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ಶಫಾಲಿ ವರ್ಮಾಗೆ ಐಸಿಸಿ ಪ್ರಶಸ್ತಿ

2026 ರ ಟಿ20 ವಿಶ್ವಕಪ್ ಯಾವಾಗ ನಡೆಯಲಿದೆ?

2026 ರ ಟಿ20 ವಿಶ್ವಕಪ್ ಫೆಬ್ರವರಿ 7 ರಂದು ಪ್ರಾರಂಭವಾಗಿ ಮಾರ್ಚ್ 8 ರವರೆಗೆ ನಡೆಯಲಿದೆ. ಈ ಐಸಿಸಿ ಟೂರ್ನಮೆಂಟ್ ಅನ್ನು ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿವೆ. ಆದ್ದರಿಂದ, ಈ ಟೂರ್ನಮೆಂಟ್‌ನಲ್ಲಿ ಭಾರತ ತಂಡವು ಪ್ರಬಲ ಸ್ಪರ್ಧಿಯಾಗಲಿದೆ.

ಭಾರತ ಸಂಭಾವ್ಯ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Supreme Court Upholds fathers Will expelling Daughter for Marrying Outside the community

ನವದೆಹಲಿ, ಡಿಸೆಂಬರ್ 19: ಒಂದುವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿದೆ. ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ.

ಇದನ್ನೂ ಓದಿ: Supreme Court: ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು; ಸುಪ್ರೀಂ ಕೋರ್ಟ್‌ ಆದೇಶ

ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.

“ಇದು ಆಕೆಯ ತಂದೆ ಸ್ವಇಚ್ಛೆಯಿಂದ ಬರೆದಿರುವ ವಿಲ್. ಇದರಲ್ಲಿ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಲಾಗಿದೆ. ಶೈಲಾ ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲ ಆಸ್ತಿಯನ್ನೂ ಆಕೆಯ ತಂದೆಯ ಇಚ್ಛೆಯ ಪ್ರಕಾರವೇ ಆಕೆಯ ಇತರ ಸಹೋದರರಿಗೆ ಉಯಿಲು (ವಿಲ್) ಮೂಲಕ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ಏರ್ ಇಂಡಿಯಾ ಅಪಘಾತದ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ ಮೊರೆಹೋದ ಮೃತ ಪೈಲಟ್​ನ ತಂದೆ

ಲಿಂಗ ಸಮಾನತೆಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಆ ಪ್ರಕಾರ ಹೇಳುವುದಾದರೆ ಮಹಿಳೆಗೂ ಆಸ್ತಿಯಲ್ಲಿ ಸಮಾನ ಹಕ್ಕಿದೆ. ಆದರೆ, ಈ ಪ್ರಕರಣದಲ್ಲಿ ವಿಲ್ ಬರೆದ ವ್ಯಕ್ತಿಯ ಇಚ್ಛೆ ಮುಖ್ಯವಾಗಿದೆ. ಅವರೇನಾದರೂ ವಿಲ್ ಬರೆಯದೇ ಇದ್ದಿದ್ದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಮಗಳಿಗೂ ಪಾಲು ಇರುತ್ತಿತ್ತು. ಆದರೆ, ಅವರು ಮಗಳಿಗೆ ಆಸ್ತಿ ಸಿಗಬಾರದು ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ವಿಲ್ ಬರೆದಿರುವುದರಿಂದ ಮತ್ತು ಇದು ಅವರ ಕೊನೆಯ ವಿಲ್ ಆಗಿರುವುದರಿಂದ ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಕಾನೂನು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ನ್ಯಾಯಪೀಠವು ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 7:27 pm, Fri, 19 December 25

Source link

ಅಪ್ಪನ ಸಿನಿಮಾ ಮೂಲಕ ವಿತರಕಿ ಆದ ಸುದೀಪ್ ಪುತ್ರಿ – Kannada News | Sudeep’s daughter Saanvi co distributing her father’s movie Mark in Karnataka

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳಷ್ಟೆ ಬಾಕಿ ಇದೆ. ಸಿನಿಮಾನಲ್ಲಿ ನಟಿಸುವ ಜೊತೆಗೆ ಸಿನಿಮಾದ ಸಹ ನಿರ್ಮಾಪಕರೂ ಆಗಿದ್ದಾರೆ ನಟ ಸುದೀಪ್. ಅಂದಹಾಗೆ ಈ ಸಿನಿಮಾ ಮೂಲಕ ಸುದೀಪ್ ಅವರ ಪುತ್ರಿ ಸಾನ್ವಿ ಮತ್ತು ಸುದೀಪ್ ಅವರ ಪತ್ನಿ ಪ್ರಿಯಾ ಅವರು ವಿತರಕಿಯರಾಗುತ್ತಿದ್ದಾರೆ. ಸುದೀಪ್ ಅವರ ಪುತ್ರಿ ಹಾಡುಗಾರ್ತಿಯಾಗಿದ್ದು, ಒಂದೆರಡು ಸಿನಿಮಾ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಆದರೆ ಇದೀಗ ತಂದೆಯ ಸಿನಿಮಾ ಮೂಲಕ ವಿತರಣೆ ಜವಾಬ್ದಾರಿಯನ್ನೂ ಸಹ ಹೆಗಲಿಗೆತ್ತಿಕೊಳ್ಳುತ್ತಿದ್ದಾರೆ.

ಡಿಸೆಂಬರ್ 25 ರಂದು ಬಿಡುಗಡೆ ಆಗುತ್ತಿರುವ ‘ಮಾರ್ಕ್’ ಸಿನಿಮಾವನ್ನು ಕರ್ನಾಟಕದಲ್ಲಿ ಕೆಆರ್​​ಜಿ ವಿತರಣೆ ಮಾಡುತ್ತಿದೆ. ಆದರೆ ಅದರ ಜೊತೆಗೆ ಸಾನ್ವಿ ಅವರು ಸಹ ಸಿನಿಮಾದ ವಿತರಣೆ ಜವಾಬ್ದಾರಿ ಹೊತ್ತಿದ್ದಾರೆ. ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ (ಪ್ರಿಯಾ ಮತ್ತು ಸಾನ್ವಿ) ಹೆಸರಿನ ಸಂಸ್ಥೆ ಮೂಲಕ ವಿತರಣೆ ಮಾಡಲಿದ್ದಾರೆ. ಸುದೀಪ್ ಅವರು ಸಹ ನಿರ್ಮಾಪಕ ಆಗಿರುವ ಕಾರಣ, ಸಾನ್ವಿ ಅವರಿಗೆ ವಿತರಣೆ ಸುಲಭವಾಗುವ ಸಾಧ್ಯತೆ ಇದೆ. ಸಾನ್ವಿ ಅವರು ಮುಂದಿನ ದಿನಗಳಲ್ಲಿ ಸಿನಿಮಾ ನಿರ್ಮಾಣಕ್ಕೆ ಇಳಿದರೂ ಆಶ್ಚರ್ಯ ಇಲ್ಲ.

ಇದನ್ನೂ ಓದಿ:ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು

ಸಾನ್ವಿ ಅವರು ತೆಲುಗಿನಲ್ಲಿ ನಟ ನಾನಿ ನಟಿಸಿರುವ ‘ಹಿಟ್ 3’ ಸಿನಿಮಾಕ್ಕೆ ಹಾಡೊಂದಕ್ಕೆ ದನಿ ನೀಡಿದ್ದರು. ಇದೀಗ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾದ ಮಲೈಕಾ ಹಾಡನ್ನು ಸಹ ಹಾಡಿದ್ದಾರೆ. ಇನ್ನೂ ಸುದೀಪ್ ಅವರ ಸಹೋದರಿಯ ಪುತ್ರನ ‘ಮ್ಯಾಂಗೊ ಪಚ್ಚ’ ಸಿನಿಮಾ ಬಿಡುಗಡೆಗೆ ರೆಡಿಯಾಗುತ್ತಿದೆ. ಆ ಸಿನಿಮಾನಲ್ಲೂ ಸಾನ್ವಿ ಹಾಡಿದ್ದಾರೆ ಎನ್ನಲಾಗುತ್ತಿದೆ. ಮಾತ್ರವಲ್ಲದೆ, ‘ಮ್ಯಾಂಗೊ ಪಚ್ಚ’ ಸಿನಿಮಾವನ್ನೂ ಸಹ ಸಾನ್ವಿ ಅವರು ಸುಪ್ರಿಯಾನ್ವಿ ಸ್ಟುಡಿಯೋಸ್ ಮೂಲಕ ವಿತರಣೆ ಮಾಡುವ ಸಾಧ್ಯತೆ ಇದೆ. ಒಟ್ಟಾರೆ ಚಿತ್ರರಂಗದಲ್ಲಿಯೇ ನೆಲೆ ನಿಲ್ಲುವ ಸುಳಿವನ್ನು ಸಾನ್ವಿ ಸುದೀಪ್ ಅವರು ನೀಡಿದ್ದಾರೆ. ಅವರಿಗೆ ತಂದೆಯ ಮಾರ್ಗದರ್ಶನವೂ ಇದೆ.

ಇನ್ನು ಸುದೀಪ್ ನಟಿಸಿರುವ ‘ಮಾರ್ಕ್’ ಸಿನಿಮಾ ಡಿಸೆಂಬರ್ 25 ರಂದು ಬಿಡುಗಡೆ ಆಗಲಿದೆ. ಕನ್ನಡ ಮಾತ್ರವಲ್ಲದೆ ಬೇರೆ ಕೆಲ ಭಾಷೆಗಳಲ್ಲಿಯೂ ಸಿನಿಮಾ ಬಿಡುಗಡೆ ಆಗಲಿದೆ. ಈ ಸಿನಿಮಾ ಅನ್ನು ವಿಜಯ್ ಕಾರ್ತಿಕೇಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ‘ಮ್ಯಾಕ್ಸ್’ ಸಿನಿಮಾವನ್ನೂ ಸಹ ಅವರೇ ನಿರ್ದೇಶನ ಮಾಡಿದ್ದರು. ‘ಮಾರ್ಕ್’ ಸಿನಿಮಾಕ್ಕೆ ಸುದೀಪ್ ಮತ್ತು ಸತ್ಯಜ್ಯೋತಿ ಫಿಲಮ್ಸ್ ಬಂಡವಾಳ ಹೂಡಿದೆ. ಸಿನಿಮಾಕ್ಕೆ ಅಜನೀಶ್ ಲೋಕನಾಥ್ ಬಂಡವಾಳ ಹೂಡಿದ್ದಾರೆ. ಈ ಸಿನಿಮಾನಲ್ಲಿ ಯೋಗಿ ಬಾಬು, ಶೈನ್ ಟಾಮ್ ಚಾಕೊ, ನವೀನ್ ಚಂದ್ರ ಅಂಥಹ ಪ್ರತಿಭಾವಂತ ಕಲಾವಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಡೇಂಜರ್ ಮಾಲಿನ್ಯ, ಎಲ್ಲೆಲ್ಲೂ ಶೀತ, ಉಸಿರಾಟದ ತೊಂದರೆ; ಇಗೋ ಇಲ್ಲಿದೆ ಆಯುರ್ವೇದ ಪರಿಹಾರ – Kannada News | Patanjali founder Baba Ramdev recommends Ayurvedic solution for cold and cough

ಪತಂಜಲಿ ಸಂಸ್ಥಾಪಕ ಮತ್ತು ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರು ತಮ್ಮ ಆಯುರ್ವೇದ ಮತ್ತು ಪರಿಣಾಮಕಾರಿ ದೇಶೀಯ ಆರೋಗ್ಯ ಪರಿಹಾರಗಳಿಗೆ ಜನಪ್ರಿಯರಾಗಿದ್ದಾರೆ. ಇತ್ತೀಚೆಗೆ ಯೂಟ್ಯೂಬ್​ಗೆ ಅಪ್​ಲೋಡ್ ಮಾಡಿದ ವೀಡಿಯೊವೊಂದರಲ್ಲಿ ಅವರು ಶೀತ ಮತ್ತು ಕೆಮ್ಮಿಗೆ ಚಿಕಿತ್ಸೆಗಳನ್ನು ವಿವರಿಸಿದ್ದಾರೆ. ವಿಶೇಷವಾಗಿ ಮಕ್ಕಳು ಕೆಮ್ಮು ಮತ್ತು ಶೀತಕ್ಕಿಂತ ಹೆಚ್ಚಾಗಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಯೋಗ ಗುರುಗಳ ಪ್ರಕಾರ, ಬಾಲ್ಯದಿಂದಲೂ ಯಾರಿಗಾದರೂ ಶೀತವಿದ್ದರೆ, ಅದು ಯಾವಾಗಲೂ ಕಣ್ಣು, ಮೂಗು, ಕಿವಿ ಮತ್ತು ಗಂಟಲಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತವವಾಗಿ, ದೆಹಲಿ-ಎನ್‌ಸಿಆರ್‌ನಲ್ಲಿ ಹೆಚ್ಚಿದ ಮಾಲಿನ್ಯ (pollution) ಮತ್ತು ಶೀತದಿಂದಾಗಿ, ಉಸಿರಾಟದ ಸಮಸ್ಯೆಗಳ ಅಪಾಯ ಹೆಚ್ಚಾಗಿದೆ. ಬೆಂಗಳೂರಿನಂತಹ ನಗರಗಳಲ್ಲಿ ವಿಪರೀತ ಟ್ರಾಫಿಕ್ ಇರುವುದರಿಂದ ವಾಹನದಿಂದ ಹೊರಬರುವ ಹೊಗೆ ಸಾಕಷ್ಟು ವಾಯುಮಾಲಿನ್ಯ ಸೃಷ್ಟಿಸಿದೆ. ಚಿಕ್ಕವರು ಅಥವಾ ದೊಡ್ಡವರು, ಬಹುತೇಕ ಎಲ್ಲರೂ ಕೆಮ್ಮು ಅಥವಾ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. ದೆಹಲಿ-ಎನ್‌ಸಿಆರ್‌ನಲ್ಲಿ GRAP-4 ಅನ್ನು ಜಾರಿಗೆ ತರಲಾಗಿದೆ ಮತ್ತು ಶಾಲೆಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸಲು ಸೂಚಿಸಲಾಗಿದೆ.

ಮಕ್ಕಳಲ್ಲಿ ಕಣ್ಣಿನ ಕಿರಿಕಿರಿ ಅಥವಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ದೀರ್ಘಕಾಲದ ಶೀತ ಇರುವವರು ಮಾಲಿನ್ಯ ಮತ್ತು ಶೀತದಿಂದಾಗಿ ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ದೀರ್ಘಕಾಲದ ಶೀತಗಳನ್ನು ಗುಣಪಡಿಸಬಲ್ಲ ಬಾಬಾ ರಾಮದೇವ್ ಅವರ ಮನೆಮದ್ದುಗಳನ್ನು ಬಗ್ಗೆ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: ಬಾಬಾ ರಾಮದೇವ್ ಅವರ ದೇಸೀ ಬಾಜ್ರಾ ಪಿಜ್ಜಾ; ಈ ಚಳಿಗಾಲದ ಸೂಪರ್​ಫುಡ್ ತಯಾರಿಸುವ ಕ್ರಮ

ಶೀತಕ್ಕೆ ಪರಿಹಾರ ಸೂಚಿಸುವ ಬಾಬಾ ರಾಮದೇವ್

ಬಾಬಾ ರಾಮದೇವ್ ಅವರ ಪ್ರಕಾರ, ಆಯುರ್ವೇದ ವಿಧಾನಗಳು ದೀರ್ಘಕಾಲದ ಶೀತ, ಕೆಮ್ಮು, ಬ್ರಾಂಕೈಟಿಸ್, ಸೈನುಟಿಸ್ ಮತ್ತು ಅಲರ್ಜಿಗಳನ್ನು ನಿವಾರಿಸುವಲ್ಲಿ ಅಥವಾ ಕಡಿಮೆ ಮಾಡುವಲ್ಲಿ ಅತ್ಯಂತ ಪರಿಣಾಮಕಾರಿ ಎನಿಸುತ್ತವೆ. ಈ ಚಿಕಿತ್ಸೆಗಳಿಗೆ ಔಷಧೀಯ ತೈಲಗಳನ್ನು ಬಳಸಲಾಗುತ್ತದೆ. ಕಾಕರಸಿಂಘಿ, ಲೈಕೋರೈಸ್, ಸಾಸಿವೆ, ಅರಿಶಿನ ಮತ್ತು ಹಸುವಿನ ತುಪ್ಪದ ಮಿಶ್ರಣವನ್ನು ಬಳಸಿಕೊಂಡು ನಶ್ಯ ತಯಾರು ಮಾಡಿ ನೀಡಲು ಬಾಬಾ ರಾಮದೇವ್ ಶಿಫಾರಸು ಮಾಡುತ್ತಾರೆ. ಪತಂಜಲಿಯ ಜ್ಯೋತಿಷ್ಮತಿ ಎಣ್ಣೆಯನ್ನು ಮಿಶ್ರಣಕ್ಕೆ ಸೇರಿಸುವುದರಿಂದ ಎರಡು ಪಟ್ಟು ಪ್ರಯೋಜನಗಳನ್ನು ಪಡೆಯಬಹುದು. ಇದನ್ನು ಉಸಿರಾಡುವ ವಿಧಾನವು ಹುಕ್ಕಾವನ್ನು ಹೋಲಬಹುದಾದರೂ, ಅದು ಅಲ್ಲ. ನೀವು ಒಂದು ಮೂಗಿನ ಹೊಳ್ಳೆಯ ಮೂಲಕ ಹೊಗೆಯನ್ನು ಒಳಗೆ ಎಳೆದುಕೊಳ್ಳುತ್ತೀರಿ, ಮತ್ತು ಇನ್ನೊಂದು ಮೂಗಿನ ಹೊಳ್ಳೆಯ ಮೂಲಕ ಹೊಗೆಯನ್ನು ಹೊರಬಿಡುತ್ತೀರಿ. ಇದು ದೀರ್ಘಕಾಲದ ಶೀತ, ಕಫ, ಬ್ಯಾಕ್ಟೀರಿಯಾ ಮತ್ತು ಫಂಗಸ್ ಅನ್ನು ನಿರ್ಮೂಲನೆ ಮಾಡಬಹುದು.

ಬಾಹ್ಯ ಚಿಕಿತ್ಸೆಗಳನ್ನು ಬಳಸಲು ನೀವು ಬಯಸಿದರೆ, ಅದಕ್ಕೂ ಪರಿಣಾಮಕಾರಿ ಆಯುರ್ವೇದ ವಿಧಾನವಿದೆ ಎಂದು ಅವರು ವಿವರಿಸುತ್ತಾರೆ. ಅರಿಶಿನ, ಶುಂಠಿ, ಬೆಳ್ಳುಳ್ಳಿ ಮತ್ತು ಈರುಳ್ಳಿಯ ಪೇಸ್ಟ್ ಅನ್ನು ಎದೆಗೆ ಹಚ್ಚುವ ಆಯುರ್ವೇದ ಪಾಕವಿಧಾನವನ್ನು ಅವರು ಹಂಚಿಕೊಂಡಿದ್ದಾರೆ. ಅಥವಾ, ನೀವು ಮಗುವಿನ ಎದೆಗೆ ಸೆಲರಿ, ಪುದೀನ, ಕರ್ಪೂರ, ಲವಂಗ ಮತ್ತು ನೀಲಗಿರಿ ಎಣ್ಣೆಯ ಮಿಶ್ರಣವನ್ನು ಸಹ ಹಚ್ಚಬಹುದು. ಈ ಪೇಸ್ಟ್ ಅನ್ನು ಎದೆಗೆ ಹಚ್ಚಿದ ನಂತರ, ಅದನ್ನು ಬೆಚ್ಚಗಿನ ಬಟ್ಟೆಯಿಂದ ಮುಚ್ಚಿ. ಎದೆಯ ಮೇಲೆ ಉದ್ದಿನ ಹಿಟ್ಟಿನಿಂದ ಗಡಿಯನ್ನು ಮಾಡಿ ಅದರ ಮೇಲೆ ಬೆಚ್ಚಗಿನ ಎಣ್ಣೆಯನ್ನು ಸುರಿಯಬೇಕು. ಈ ವಿಧಾನವನ್ನೂ ಬಾಬಾ ರಾಮದೇವ್ ತಮ್ಮ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಜ್ಞಾನ ಭಾರತಂ ಮಿಷನ್​ನ ಕ್ಲಸ್ಟರ್ ಸೆಂಟರ್ ಆಗಿ ಪತಂಜಲಿ ವಿವಿಗೆ ಮಾನ್ಯತೆ

ಹಾಲಿನಲ್ಲಿ ಇವುಗಳನ್ನು ಬೆರೆಸಿ ತಿನ್ನಿರಿ

ಬಾಬಾ ರಾಮದೇವ್ ಅವರ ಪ್ರಕಾರ, ಹಾಲು ಕಫವನ್ನು ಉಂಟುಮಾಡಬಹುದಾದರೂ ಅದನ್ನು ಚಿಕಿತ್ಸೆಗಾಗಿ ಬಳಸಬಹುದು. ಅರಿಶಿನ, ಶಿಲಾಜಿತ್, ಮುಲೇಥಿ, ಅಶ್ವಗಂಧ ಮತ್ತು ಒಣ ಶುಂಠಿಯನ್ನು ತಲಾ ಒಂದು ಗ್ರಾಂ ಬಿಸಿ ಮಾಡಿ ಹಾಲಿಗೆ ಹಾಕಿ ಕುಡಿಯಲು ಕೊಡಬಹುದು. ಕೆಮ್ಮು ಹೆಚ್ಚಾದಾಗ, ತುಪ್ಪ, ಎಣ್ಣೆ, ಬೇಳೆ, ಅನ್ನ ಮತ್ತು ರೊಟ್ಟಿಯನ್ನು ತಪ್ಪಿಸಿ. ಬದಲಾಗಿ, ಕಡಲೆ, ಖರ್ಜೂರ ಮತ್ತು ಬೇಯಿಸಿದ ಸೇಬುಗಳನ್ನು ತಿನ್ನಿರಿ. ನಿಮಗೆ ಹಸಿವಾಗಿದ್ದರೆ, ಚಳಿಗಾಲದಲ್ಲಿ ಬಾಜ್ರಾ ಮತ್ತು ಕಡಲೆ ರೊಟ್ಟಿಗಳನ್ನು ತಿನ್ನಿರಿ. ಹಾಲಿಗೆ ಚ್ಯವನಪ್ರಾಶವನ್ನು ಹಚ್ಚಿ ತಿನ್ನುವುದರಿಂದ ಮತ್ತಷ್ಟು ಪರಿಣಾಮಕಾರಿ ಎನಿಸುತ್ತದೆ.

ಬಾಬಾ ರಾಮದೇವ್ ನೈಸರ್ಗಿಕವಾಗಿ ಮೂಗು ಸ್ವಚ್ಛಗೊಳಿಸಲು ಜಲ ನೇತಿ ಮತ್ತು ಸೂತ್ರ ನೇತಿಯನ್ನು ಶಿಫಾರಸು ಮಾಡುತ್ತಾರೆ. ಜಲ ನೇತಿ ಎಂದರೆ ಒಂದು ಮಡಕೆಯಿಂದ ನೀರನ್ನು ಒಂದು ಮೂಗಿನ ಹೊಳ್ಳೆಗೆ ಸುರಿಯುವುದು ಮತ್ತು ಇನ್ನೊಂದು ಮೂಗಿನ ಹೊಳ್ಳೆಯಿಂದ ನೀರನ್ನು ಹೊರಹಾಕುವುದು. ಇನ್ನು, ಸೂತ್ರ ನೇತಿ ಎಂದರೆ ಮೂಗಿನ ಹೊಳ್ಳೆಯ ಮೂಲಕ ದಾರವನ್ನು ಸೇರಿಸಿ ಬಾಯಿಯ ಮೂಲಕ ಹೊರತೆಗೆಯುವುದು. ಇದು ಮೂಗನ್ನು ಸ್ವಚ್ಛಗೊಳಿಸುತ್ತದೆ ಎಂದು ಸಹ ಹೇಳಲಾಗುತ್ತದೆ.

ಬಾಬಾ ರಾಮದೇವ್ ಅವರ ವಿಡಿಯೋ

ಇನ್ನಷ್ಟು ಆರೋಗ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು! – Kannada News | Hair Loss in Women Over 40: Common Causes & Solutions

ಮಹಿಳೆಯರಾಗಲಿ ಅಥವಾ ಪುರುಷರಾಗಲಿ, ಕೂದಲು ಉದುರುವ ಸಮಸ್ಯೆ (Hair Fall) ಕಂಡುಬರುವುದು ಸಾಮಾನ್ಯ. ಆದರೆ ಮಹಿಳೆಯರಿಗೆ 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಅನೇಕರಲ್ಲಿ ಈ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವೇ ಇಲ್ಲ ಎಂಬುವಷ್ಟರ ಮಟ್ಟಿಗೆ ಕೂದಲು ಉದುರುತ್ತದೆ. ನಿಮ್ಮ ಮನೆಯಲ್ಲಿಯೂ ಯಾರಿಗಾದರೂ ಈ ರೀತಿ ಸಮಸ್ಯೆ ಕಂಡು ಬಂದಿದ್ಯಾ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗಲು ಕಾರಣವೇನು ಎಂದು ಯೋಚಿಸಿದ್ದೀರಾ… ಅನಾರೋಗ್ಯದಿಂದ ಈ ರೀತಿಯಾಗುತ್ತದೆಯೇ ಇದನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಈ ವಿಷಯವಾಗಿ ತಜ್ಞರು ನೀಡಿರುವ ಸಲಹೆ ಸ್ಟೋರಿಯಲ್ಲಿದೆ.

ಮ್ಯಾಕ್ಸ್ ಆಸ್ಪತ್ರೆಯ ಚರ್ಮರೋಗ ವಿಭಾಗದ ಡಾ. ಸೌಮ್ಯ ಸಚ್‌ದೇವ ಅವರು ಹೇಳುವ ಪ್ರಕಾರ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಕಂಡುಬರುವುದಕ್ಕೆ ಹಲವು ಕಾರಣಗಳಿವೆ. ಕೆಲವು ಮಹಿಳೆಯರು ಈ ವಯಸ್ಸಿನಲ್ಲಿ ಋತುಬಂಧಕ್ಕೆ ಒಳಗಾಗುತ್ತಾರೆ ಇದು ಕೂಡ ಒಂದು ಕಾರಣವಾಗಿದೆ. ಅಷ್ಟೇಅಲ್ಲ, ಹಲವಾರು ಹಾರ್ಮೋನುಗಳ ಕೊರತೆ ಕೂಡ ಈ ರೀತಿಯಾಗುವುದಕ್ಕೆ ಕಾರಣವಾಗಿರಬಹುದು. ಜೊತೆಗೆ ಮಹಿಳೆಯರಲ್ಲಿ ಕಂಡುಬರುವ ಕಬ್ಬಿಣದ ಅಂಶ, ವಿಟಮಿನ್ ಡಿ ಮತ್ತು ಬಯೋಟಿನ್ ಕೊರತೆಯಿದ್ದರೆ, ಕೂದಲು ಉದುರುವ ಸಮಸ್ಯೆ ಕಂಡುಬರಬಹುದು.

ಕೂದಲು ಉದುರುವುದಕ್ಕೆ ಮಾನಸಿಕ ಒತ್ತಡವೂ ಕಾರಣವಾಗಿರಬಹುದು;

ಮಹಿಳೆಯರಲ್ಲಿ ಕೂದಲು ಉದುರುವಿಕೆಗೆ ಮಾನಸಿಕ ಒತ್ತಡವೂ ಒಂದು ಪ್ರಮುಖ ಕಾರಣ ಎಂದು ಡಾ. ಸೌಮ್ಯಾ ಹೇಳುತ್ತಾರೆ. ಇತ್ತೀಚಿನ ವರ್ಷಗಳಲ್ಲಿ, ಮಾನಸಿಕ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದ್ದು ಇವು ಕೂದಲಿನ ಮೇಲೂ ಪರಿಣಾಮ ಬೀರುವ ಮೂಲಕ ಕೂದಲಿನ ಬೆಳವಣಿಗೆಗೆ ಅಡ್ಡಿಯಾಗುತ್ತದೆ, ಜೊತೆಗೆ ಉದುರುವಿಕೆಗೆ ಕಾರಣವಾಗುತ್ತದೆ. ಕೆಲವು ಸಂದರ್ಭಗಳಲ್ಲಿ, ಆಟೋಇಮ್ಯೂನ್ ಕಾಯಿಲೆಗಳು ಸಹ ಕೂದಲು ಉದುರುವಿಕೆಗೆ ಕಾರಣವಾಗಬಹುದು. ಈ ಕಾಯಿಲೆಗಳಿಗೆ ಯಾವುದೇ ರೀತಿಯ ಚಿಕಿತ್ಸೆ ಇಲ್ಲ. ಕೆಲವು ಮಹಿಳೆಯರಲ್ಲಿ, ಕೂದಲು ಉದುರುವಿಕೆ ಥೈರಾಯ್ಡ್ ಅಥವಾ ಮಧುಮೇಹದಿಂದಲೂ ಉಂಟಾಗಬಹುದು. ಅಂತಹ ಸಂದರ್ಭಗಳಲ್ಲಿ, ಥೈರಾಯ್ಡ್ ಮತ್ತು ಮಧುಮೇಹವನ್ನು ನಿಯಂತ್ರಿಸಿದರೆ, ಕೂದಲು ಉದುರುವಿಕೆಯನ್ನು ಕೂಡ ನಿಯಂತ್ರಿಸಬಹುದು.

ಇದನ್ನೂ ಓದಿ: ಈ ಆಹಾರಗಳ ಸೇವನೆ ಮಾಡುವುದನ್ನು ಬಿಟ್ಟರೆ ಕೂದಲು ಉದುರುವುದು ಕಡಿಮೆಯಾಗುತ್ತೆ!

ಕೂದಲು ಉದುರುವಿಕೆಯನ್ನು ತಡೆಯಬಹುದೇ?

ಮಹಿಳೆಗೆ ಸ್ವಯಂ ನಿರೋಧಕ ಕಾಯಿಲೆ ಅಥವಾ ಆನುವಂಶಿಕ ಕಾರಣಗಳಿಂದ ಕೂದಲು ಉದುರುವಿಕೆ ಇದ್ದರೆ, ಅದನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ಕಷ್ಟ. ಇತರ ಸಂದರ್ಭಗಳಲ್ಲಿ, ಕೂದಲು ಉದುರುವಿಕೆಯನ್ನು ಈ ಸಲಹೆಗಳನ್ನು ಅನುಸರಿಸುವ ಮೂಲಕ ತಡೆಯಬಹುದು.

  • ಪ್ರೋಟೀನ್, ಕಬ್ಬಿಣ ಮತ್ತು ವಿಟಮಿನ್‌ ಸಮೃದ್ಧವಾಗಿರುವ ಆಹಾರಗಳನ್ನು ಸೇವನೆ ಮಾಡಿ.
  • ಕೂದಲು ಬೆಳವಣಿಗೆಗೆ ವಿಟಮಿನ್ ಡಿ ಹೊಂದಿರುವ ಆಹಾರವನ್ನು ಸೇವಿಸಿ, ಉದಾಹರಣೆಗೆ ಅಣಬೆಗಳು.
  • ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ.
  • ಮಾನಸಿಕ ಒತ್ತಡವನ್ನು ತಪ್ಪಿಸಿ, ಅದನ್ನು ತಡೆಗಟ್ಟಲು ಪ್ರತಿದಿನ ಯೋಗಾಭ್ಯಾಸ ಮಾಡಿ.
  • ನಿಯಮಿತವಾಗಿ ನೆತ್ತಿಯನ್ನು ಮಸಾಜ್ ಮಾಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

40 ವರ್ಷದ ಅಂಕಲ್, 19ರ ಯುವತಿಯ ಪ್ರೀತಿ ಪ್ರೇಮ: ಪ್ರೇಮಲೋಕದಲ್ಲಿ ತೇಲಾಡುವಾಗಲೇ ನಡೆಯಿತು ಘನಘೋರ! – Kannada News | 40 Year Old Kunigal Man Killed Who Loves 19 Year old Young Woman at Ramanagar

ರಾಮನಗರ, (ಡಿಸೆಂಬರ್ 19): ಆತನಿಗೆ 40 ವರ್ಷ. ಆ ಯುವತಿಗೆ 19 ವರ್ಷ. ಇಬ್ಬರ ನಡುವೆ ಪ್ರೀತಿ (Love) ಮೂಡಿತ್ತು. ಹದಿನೈದು ದಿನಗಳ ಕೆಳಗೆ ಇಬ್ಬರು ಓಡಿಹೋಗಿದ್ರು. ಈ ವಿಚಾರ ಯುವತಿಯ ತಂದೆಯನ್ನ ಕೆರಳುವಂತೆ ಮಾಡಿದ್ದು, ತನ್ನ ಮಗಳನ್ನ ಪ್ರೀತಿಸಿದವನನ್ನ ಕಿಡ್ಯಾಪ್ ಮಾಡಿ, ಬಳಿಕ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹೌದು.. ಬಣ್ಣ ಬಣ್ಣದ ಮಾತುಗಳನ್ನ ಆಡಿ ಮಗಳನ್ನ ಬಲೆಗೆ ಬೀಳಿಸಿಕೊಂಡಿದ್ದ ಪ್ರೀಯಕರನೊಬ್ಬನನ್ನ ಯುವತಿಯ ತಂದೆ, ತನ್ನ ಬಾಮೈದರ ಜೊತೆ ಸೇರಿ ಭೀಕರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ‌ಬಳಿ ನಡೆದಿದೆ. ಮೂಲತಃ ಮಾಗಡಿ (Magadi) ತಾಲೂಕಿನ ದೋಣಕುಪ್ಪೆ ಗ್ರಾಮದ ಹಾಲಿ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದಲ್ಲಿ ವಾಸವಾಗಿರುವ ಚಲುವ (40) ಹತ್ಯೆಯಾದ ವ್ಯಕ್ತಿ.

ಓಡಿ ಹೋಗಿದ್ದ ಜೋಡಿ

ಅಂದಹಾಗೆ ಕೊತ್ತಗೆರೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಚಲುವ, ಮಾಗಡಿ ತಾಲೂಕಿನ ದೋಣಕುಪ್ಪೆ ಗ್ರಾಮದ ತನ್ನ ಸಂಬಂಧಿಯೇ ಆದ ಕೆಂಪಣ್ಣ ಎಂಬುವವರ 19 ವರ್ಷದ ಮಗಳನ್ನ ಪ್ರೀತಿಸುತ್ತಿದ್ದ. ಕಳೆದ ಹದಿನೈದು ದಿನಗಳ ಕೆಳಗೆ ಯುವತಿಯನ್ನ ಕರೆದುಕೊಂಡು ಮಂಡ್ಯದ ಕೆಎಂ ದೊಡ್ಡಿಯ ಸಂಬಂಧಿಕರ ಮನೆಯಲ್ಲಿ ಇಟ್ಟಿದ್ದ. ಆನಂತರ ರಾಜೀಪಂಚಾಯತಿ ನಡೆದು ಯುವತಿಯನ್ನ ವಾಪಾಸ್ ಕೆಂಪಣ್ಣ ಮನೆಗೆ ಕರೆತಂದಿದ್ದ.

ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ಕಾಮದ ತೀಟೆ ತೀರಿಸಿಕೊಂಡ ಪ್ರಿಯಕರ: ಸಾಲದಕ್ಕೆ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ

ಮಗಳ ಪ್ರಿಯಕರನ ಕತ್ತು ಕೊಯ್ದು ಹತ್ಯೆ

ಇದಾಗಿ ಮೂರು ದಿನಗಳ ಕೆಳಗೆ ಆಕೆಯನ್ನ ಮನೆಯಲ್ಲಿ ಕೂಡಿ ಹಾಕಿದ್ದಾರೆ‌ ಎಂದು ಚಲುವ ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಹಾಕಿದ್ದ. ಇದರಿಂದ ಕುಪಿತಗೊಂಡ ಕೆಂಪಣ್ಣ, ತನ್ನ ಬಾಮೈದರಾದ ರಾಮಕೃಷ್ಣ, ಮಂಜು ಎಂಬುವರೊಂದಿಗೆ ಸೇರಿ ನಿನ್ನೆ(ಡಿಸೆಂಬರ್ 18) ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ಚಲುವನನ್ನು ಕಿಡ್ಯಾಪ್ ಮಾಡಿದ್ದು, ಆನಂತರ ಸಾಕಷ್ಟು ‌ಕಡೆ ಸುತ್ತಾಡಿಸಿ ಕೊನೆಗೆ ಕಾರಿನಲ್ಲಿಯೇ ಚಲುವನ ಕತ್ತು ಕೊಯ್ದು ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಹೊರವಲಯದ ಹಳ್ಳದ ಬಳಿ ಎಸೆದು ಪರಾರಿಯಾಗಿದ್ದಾರೆ.

ಅಂದಹಾಗೆ ಬೆಳಗ್ಗೆ ಹಳ್ಳದ ಬಳಿ ಮೃತದೇಹವನ್ನು ಕಂಡು ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಮಾಗಡಿ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ಮಾಡಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸಿದಾಗ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿತ್ತು. ಅಲ್ಲದೇ ಆತನನ್ನ ಕಾರಿನಲ್ಲಿ ಕಿಡ್ಯಾಪ್ ಮಾಡಿ ಹತ್ಯೆ ಮಾಡಲಾಗಿದೆ ಎಂಬ ಅಂಶವೂ ಬೆಳಕಿಗೆ ಬಂದಿದೆ. ಆದ್ರೆ, ಇನ್ನು ಚಲುವನನ್ನ ಕುಣಿಗಲ್ ಕಿಡ್ಯಾಪ್ ಮಾಡಿರುವುದರಿಂದ ಮಾಗಡಿ ಪೊಲೀಸರು ಈ ಪ್ರಕರಣವನ್ನ ಕುಣಿಗಲ್ ಠಾಣೆ ವರ್ಗಾವಣೆ ಮಾಡಿದ್ದಾರೆ. ಬಳಿಕ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಚಲುವನನ್ನ ಹತ್ಯೆ ಮಾಡಿದ ಮೂವರನ್ನು ವಶಕ್ಕೆ ಪಡೆದು ತೀವ್ರ ‌ವಿಚಾರಣೆ‌ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

U19 ಏಷ್ಯಾಕಪ್ ಫೈನಲ್​ಗೇರಿದ ಟೀಂ ಇಂಡಿಯಾ; ಫೈನಲ್ ಎದುರಾಳಿ ಯಾರು ಗೊತ್ತಾ?

ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಅಂಡರ್-19 ಏಷ್ಯಾಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರಿಂದ ಪಂದ್ಯವನ್ನು ತಲಾ 20 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 138 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ 18 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಳ್ಳುವ ಮೂಲಕ ಈ ಸವಾಲನ್ನು ಪೂರ್ಣಗೊಳಿಸಿತು. ಈ ಗೆಲುವಿನೊಂದಿಗೆ ಭಾರತ ಫೈನಲ್ ಪ್ರವೇಶಿಸಿದರೆ, ಇತ್ತ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಇಂದೇ ನಡೆದ ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ, ಬಾಂಗ್ಲಾದೇಶವನ್ನು 8 ವಿಕೆಟ್‌ಗಳಿಂದ ಸೋಲಿಸಿ ಫೈನಲ್​ಪ್ರವೇಶಿಸಿದೆ.

Source link

Exit mobile version