ಮುಸ್ಲಿಂ ವಿರೋಧಿ ಪ್ರತಿಭಟನೆ, ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು

ಮುಸ್ಲಿಂ ವಿರೋಧಿ ಪ್ರತಿಭಟನೆ, ನ್ಯೂಯಾರ್ಕ್ ಮೇಯರ್​ ಮಮ್ದಾನಿ ಮನೆ ಎದುರು ಸ್ಫೋಟಕಗಳ ಎಸೆದ ಪ್ರತಿಭಟನಾಕಾರರು

ನ್ಯೂಯಾರ್ಕ್​, ಮಾರ್ಚ್​ 08: ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ಮನೆ ಎದುರು ಪ್ರತಿಭಟನಾಕಾರರು ಸ್ಫೋಟಕಗಳನ್ನು ಎಸೆದಿರುವ ಘಟನೆ ನಡೆದಿದೆ. ಮುಸ್ಲಿಂ ವಿರೋಧಿ ಪ್ರತಿಭಟನೆ ವೇಳೆ ಈ ಘಟನೆ ನಡೆದಿದೆ. ಈ ಘಟನೆಯು ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದ ಯಾವುದೇ ಸೂಚನೆಗಳಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೇಯರ್ ಜೊಹ್ರಾನ್ ಮಮ್ದಾನಿ ಅವರ ನಿವಾಸವಾದ ಗ್ರೇಸಿ ಮ್ಯಾನ್ಷನ್ ಮುಂದೆ ಸಾರ್ವಜನಿಕ ಮುಸ್ಲಿಂ ಪ್ರಾರ್ಥನೆ ಕೊನೆಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ 20 ಮಂದಿ ಭಾಗವಹಿಸಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮಹಿಳಾ ದಿನಾಚರಣೆಗೆ ರಂಗೋಲಿ ಸ್ಪರ್ಧೆ! ಮಹಿಳಾ ಪೊಲೀಸರ ಕೈಯಿಂದ ಮೂಡಿದ ಚಿತ್ತಾರ ನೋಡಿ!

Source link

ಮಧ್ಯಪ್ರದೇಶ: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ

ಖಾಂಡ್ವಾ, ಮಾರ್ಚ್​ 08: 90 ವರ್ಷದ ವೃದ್ಧೆ ಮೇಲೆ ನಾಲ್ವರು ಮುಸುಕುಧಾರಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಈ ಘಟನೆ ನಡೆಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ಮಹಿಳೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಅಪಾಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ತನ್ನ ಹಳ್ಳಿಯ ಕೃಷಿ ಹೊಲದಲ್ಲಿ ಗುರುವಾರ ಸಂಜೆ ಮಹಿಳೆ ಒಬ್ಬಂಟಿಯಾಗಿದ್ದಾಗ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಮಹಿಳೆ ಮರುದಿನ ಬೆಳಗ್ಗೆ ಬೇರೆ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ಘಟನೆಯ ಬಗ್ಗೆ ತಿಳಿಸಿದ್ದಾರೆ. ನಂತರ ಅವರು ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಸ್ಪತ್ರೆ ಸಿಬ್ಬಂದಿ ಮಹಿಳೆ ಮತ್ತು ಅವರ ಮಗಳಿಗೆ ಪೊಲೀಸರನ್ನು ಸಂಪರ್ಕಿಸಲು ಸಲಹೆ ನೀಡಿದ್ದಾರೆ ಎಂದು ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರೈ ಪಿಟಿಐಗೆ ತಿಳಿಸಿದ್ದಾರೆ. ದೂರು ಸ್ವೀಕರಿಸಿದ ನಂತರ, ಪೊಲೀಸರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 70 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ರೈ ಹೇಳಿದರು.

ಮತ್ತಷ್ಟು ಓದಿ: ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ ಜೈಲಿನಲ್ಲೇ ಕೊಳೆಯುವ ಶಿಕ್ಷೆ ವಿಧಿಸಿದ ಕೋರ್ಟ್

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ 10,000 ರೂ. ಬಹುಮಾನ ನೀಡುವುದಾಗಿಯೂ ಪೊಲೀಸರು ಘೋಷಿಸಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತೆವಳುತ್ತಾ ಸಾಗಿದ ‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ವೀಕೆಂಡ್​ನಲ್ಲೂ ಏರಿಕೆ ಇಲ್ಲ

ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆಯಾಗಿ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಹೋಲಿಸಿದರೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ (The Kerala Story 2 Collection) ಆಗಿದೆ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಕುಸಿಯುವ ಸೂಚನೆ ಸಿಕ್ಕಿದೆ.

2023ರಲ್ಲಿ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಅದರ ಮುಂದುವರಿದ ಭಾಗವಾಗಿ ‘ದಿ ಕೇರಳ ಸ್ಟೋರಿ 2’ ಈಗ ರಿಲೀಸ್ ಆಗಿದೆ. ಈ ಚಿತ್ರಕ್ಕೆ ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಆದಾಗ ವಿವಾದ ಶುರುವಾಗಿತ್ತು. ಚಿತ್ರದ ವಿರುದ್ಧ ಅನೇಕರು ಕೋರ್ಟ್​ ಮೆಟ್ಟಿಲು ಏರಿದ್ದರು.

ಮೊದಲ ದಿನ ಕೆಲವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದರಿಂದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಅಂದು ಕೇವಲ 75 ಲಕ್ಷ ರೂಪಾಯಿ ಕಲೆಕ್ಷನ್ ಆಗಿತ್ತು. ಎರಡನೇ ದಿನ 4.65 ಕೋಟಿ ರೂಪಾಯಿ ಆದಾಯ ಬಂತು. ಮೂರನೇ ದಿನ 4.74 ಕೋಟಿ ರೂಪಾಯಿ ಆಯಿತು. ಆದರೆ ಮೊದಲ ಸೋಮವಾರ ಬರುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್ ಮತ್ತೆ ಕುಸಿಯುತು.

2ನೇ ವೀಕೆಂಡ್​​ನಲ್ಲಿ ಕಲೆಕ್ಷನ್ ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಕೂಡ ಸಾಧ್ಯವಾಗಿಲ್ಲ. 2ನೇ ಶನಿವಾರ ಅಂದಾಜು 3.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಎಷ್ಟೇ ಪ್ರಚಾರ ಸಿಕ್ಕಿದ್ದರೂ ಒಂದು ದಿನ ಕೂಡ ಈ ಸಿನಿಮಾದ ಕಲೆಕ್ಷನ್ 5 ಕೋಟಿ ರೂಪಾಯಿ ದಾಟಲು ಸಾಧ್ಯವಾಗಿಲ್ಲ. ತೆವಳುತ್ತಾ ಸಾಗುತ್ತಿರುವ ಈ ಸಿನಿಮಾಗೆ ಈವರೆಗೂ ಒಟ್ಟು 30 ಕೋಟಿ ರೂಪಾಯಿ ಆದಾಯ ಬಂದಿದೆ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ

ಈ ಸಿನಿಮಾದಿಂದ ಕೇರಳದ ಪ್ರತಿಷ್ಠೆಗೆ ಧಕ್ಕೆ ಆಗಿದೆ ಎಂಬ ಕಾರಣಕ್ಕೆ ಶೀರ್ಷಿಕೆಯನ್ನು ವಿರೋಧಿಸಲಾಗಿದೆ. ಕೇರಳದಲ್ಲಿ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕಾಗಿ ಜನರು ಕಾದಿದ್ದಾರೆ. ‘ಧುರಂಧರ್ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾ ಹೇಳ ಹೆಸರಿಲ್ಲದಂತೆ ಅಖಾಡದಿಂದ ಹೊರಬೀಳುವುದು ಖಚಿತ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Gold Rates: ಆಭರಣ ಚಿನ್ನದ ಬೆಲೆ 15,000 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 8: ಚಿನ್ನದ ಬೆಲೆಯಲ್ಲಿ (Gold Rates) ತುಸು ಏರಿಳಿತವಾಗುತ್ತಿದೆ. ಈ ವಾರ ಮೊದಲ ಐದು ದಿನ ಸತತವಾಗಿ ಇಳಿಕೆಯಾಗಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ 230 ರೂಗಳಷ್ಟು ಜಿಗಿದಿದೆ. ಆಭರಣ ಚಿನ್ನದ ಬೆಲೆ 15,000 ರೂ ಮುಟ್ಟಿದೆ. ವಿದೇಶಗಳಲ್ಲೂ ಇದೇ ರೀತಿ ಚಿನ್ನದ ಬೆಲೆಯಲ್ಲಿ ಏರಿಳಿತಗಳಾಗಿವೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿಸಿದೆ. ಇಸ್ರೇಲ್ ಇರಾನ್ ಯುದ್ಧ, ತೈಲ ಬಿಕ್ಕಟ್ಟು ಚಿನ್ನ, ಬೆಳ್ಳಿ ಬೆಲೆಗಳ ಮೇಲೆ ಹೆಚ್ಚಿನ ಪರಿಣಾಮ ಬೀರಿದಂತೆ ತೋರುತ್ತಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,63,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,50,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,364 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,000 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,273 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,364 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,000 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,000 ರೂ
  • ಚೆನ್ನೈ: 15,050 ರೂ
  • ಮುಂಬೈ: 15,000 ರೂ
  • ದೆಹಲಿ: 15,015 ರೂ
  • ಕೋಲ್ಕತಾ: 15,000 ರೂ
  • ಕೇರಳ: 15,000 ರೂ
  • ಅಹ್ಮದಾಬಾದ್: 15,005 ರೂ
  • ಜೈಪುರ್: 15,015 ರೂ
  • ಲಕ್ನೋ: 15,015 ರೂ
  • ಭುವನೇಶ್ವರ್: 15,000 ರೂ

ಇದನ್ನೂ ಓದಿ: ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಆಗುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 616 ರಿಂಗಿಟ್ (14,326 ರುಪಾಯಿ)
  • ದುಬೈ: 577.25 ಡಿರಾಮ್ (14,448 ರುಪಾಯಿ)
  • ಅಮೆರಿಕ: 161.50 ಡಾಲರ್ (14,848 ರುಪಾಯಿ)
  • ಸಿಂಗಾಪುರ: 205.60 ಸಿಂಗಾಪುರ್ ಡಾಲರ್ (14,776 ರುಪಾಯಿ)
  • ಕತಾರ್: 572 ಕತಾರಿ ರಿಯಾಲ್ (14,423 ರೂ)
  • ಸೌದಿ ಅರೇಬಿಯಾ: 585 ಸೌದಿ ರಿಯಾಲ್ (14,330 ರುಪಾಯಿ)
  • ಓಮನ್: 61.25 ಒಮಾನಿ ರಿಯಾಲ್ (14,625 ರುಪಾಯಿ)
  • ಕುವೇತ್: 47.13 ಕುವೇತಿ ದಿನಾರ್ (14,151 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 290 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 290 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 290 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬೇಸಿಗೆಯಲ್ಲೂ ಕಾಶ್ಮೀರದಂತೆ ಕಂಡ ಕೊಪ್ಪಳ: ಥೇಟ್​​ ಮಲೆನಾಡಿನ ವೆದರ್​ ಎಂದ ಸಾರ್ವಕನಿಕರು

ಕೊಪ್ಪಳ, ಮಾರ್ಚ್​​ 08: ಜಿಲ್ಲೆಯ ಹಲವೆಡೆ ಬೇಸಿಗೆಯಲ್ಲೂ ಕಾಶ್ಮೀರವನ್ನು ನೆನಪಿಸುವಂತಹ ದಟ್ಟ ಮಂಜು ಕಂಡುಬಂದಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ 36 ರಿಂದ 40 ಡಿಗ್ರಿ ಸೆಲ್ಸಿಯಸ್ ತಾಪಮಾನವಿರುವ ಕೊಪ್ಪಳದಲ್ಲಿ, ಕಂಡುಬಂದ ಚಳಿಯ ವಾತಾವರಣ ಜನರಿಗೆ ಮುದ ನೀಡಿದೆ. ಬೆಳಗ್ಗೆ ಗವಿಮಠದ ಪ್ರದೇಶಕ್ಕೆ ವಾಕಿಂಗ್ ಬಂದ ಜನರು ಮಂಜು ಮುಸುಕಿದ ವಾತಾವರಣದಲ್ಲಿಯೇ ಹೆಜ್ಜೆ ಹಾಕಿದ್ದು, ದಟ್ಟ ಮಂಜಿನಿಂದಾಗಿ ರಸ್ತೆಗಳು ಕಾಣದೆ ವಾಹನ ಸವಾರರು ಪರದಾಡಿದ ಪ್ರಸಂಗವೂ ವರದಿಯಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಸೋಲಿನ ಪಾಠ… ಫೈನಲ್ ಪಂದ್ಯಕ್ಕೆ ಕೆಂಪು ಮತ್ತು ಕಪ್ಪು ಮಣ್ಣಿನ ಪಿಚ್​!

T20 World Cup 2026: ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಿಚ್ ರೆಡಿಯಾಗಿದೆ. ಅದು ಸಹ 70% ಕೆಂಪು ಮಣ್ಣು ಮತ್ತು 30% ಕಪ್ಪು ಮಣ್ಣಿನಿಂದ ಕೂಡಿದ ಪಿಚ್ ಎಂಬುದು ವಿಶೇಷ. ಅಂದರೆ ಈ ಬಾರಿ ಮಿಶ್ರ ಮಣ್ಣಿನ ಪಿಚ್​ನಲ್ಲಿ ಫೈನಲ್ ಪಂದ್ಯವನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅದರಂತೆ ಇದೀಗ ಮಿಶ್ರಿತ ಮಣ್ಣಿನ ಪಿಚ್ ಸಿದ್ಧವಾಗಿದ್ದು, ಈ ಪಿಚ್​ ಕುರಿತಾದ ಸಂಪೂರ್ಣ ವರದಿ ಇಲ್ಲಿದೆ.

ಮಿಶ್ರ ಮಣ್ಣಿನ ಪಿಚ್: ಈ ಪಂದ್ಯಕ್ಕಾಗಿ ಅಹಮದಾಬಾದ್​ನ ಮೈದಾನದ 6ನೇ ಪಿಚ್​ ಅನ್ನು ಬಳಸಲಾಗುತ್ತಿದೆ. ಈ ಪಿಚ್​ ಅನ್ನು ಕೆಂಪು ಮತ್ತು ಕಪ್ಪು ಮಣ್ಣಿನ ಮಿಶ್ರಣದಿಂದ (70% ಕೆಂಪು ಮತ್ತು 30% ಕಪ್ಪು ಮಣ್ಣು) ನಿರ್ಮಿಸಲಾಗಿದೆ.

ವೇಗ ಮತ್ತು ಬೌನ್ಸ್: ಈ ಪಿಚ್​ನಲ್ಲಿ ಶೇ.70 ರಷ್ಟು ಕೆಂಪು ಮಣ್ಣು ಇರುವುದರಿಂದ ಪಿಚ್ ಗಟ್ಟಿಯಾಗಿರುತ್ತದೆ. ಇದರಿಂದ ಚೆಂಡು ವೇಗವಾಗಿ ಮತ್ತು ನಿಖರವಾದ ಬೌನ್ಸ್‌ನೊಂದಿಗೆ ಬ್ಯಾಟ್‌ಗೆ ಬರುತ್ತದೆ. ಇದು ಬ್ಯಾಟರ್‌ಗಳಿಗೆ ಶಾಟ್‌ಗಳನ್ನು ಆಡಲು ತುಂಬಾ ಸುಲಭ ಮಾಡಿಕೊಡುತ್ತದೆ.

ಬ್ಯಾಟಿಂಗ್ ಸ್ವರ್ಗ: ಈ ಪಿಚ್ ಸಂಪೂರ್ಣವಾಗಿ ಬ್ಯಾಟಿಂಗ್‌ಗೆ ಪೂರಕವಾಗಿದ್ದು, ಮುಂಬೈನ ವಾಂಖೆಡೆ ಕ್ರೀಡಾಂಗಣದಂತೆ ಹೈ-ಸ್ಕೋರಿಂಗ್ ಪಂದ್ಯ ನಿರೀಕ್ಷಿಸಲಾಗಿದೆ.

ಪಿಚ್ ಸ್ಥಿರತೆ: ಈ ಪಿಚ್​ನಲ್ಲಿ ಶೇ.30 ರಷ್ಟು ಕಪ್ಪು ಮಣ್ಣು ಬಳಸಿರುವುದರಿಂದ ಪಿಚ್ ಬೇಗನೆ ಬಿರುಕು ಬಿಡುವುದಿಲ್ಲ. ಇದು ಪಂದ್ಯದ ಉದ್ದಕ್ಕೂ ಪಿಚ್ ಒಂದೇ ಸಮನಾಗಿ ಇರುವಂತೆ ನೋಡಿಕೊಳ್ಳುತ್ತದೆ, ಇದರಿಂದ ಬ್ಯಾಟಿಂಗ್ ಮಾಡುವುದು ಎರಡೂ ಇನ್ನಿಂಗ್ಸ್‌ಗಳಲ್ಲಿ ಸುಲಭವಾಗುತ್ತದೆ.

ವೇಗದ ಬೌಲರ್‌ಗಳಿಗೆ ಸಹಕಾರಿ: ಕೆಂಪು ಮಣ್ಣಿನ ಕಾರಣದಿಂದಾಗಿ ಆರಂಭಿಕ ಓವರ್‌ಗಳಲ್ಲಿ ವೇಗದ ಬೌಲರ್‌ಗಳಿಗೆ ಉತ್ತಮ ಸ್ವಿಂಗ್ ಮತ್ತು ಕ್ಯಾರಿ ಸಿಗಲಿದೆ.

ಸ್ಪಿನ್ನರ್‌ಗಳಿಗೆ ಸವಾಲು: ಈ ರೀತಿಯ ಮಿಶ್ರಿತ ಪಿಚ್‌ಗಳಲ್ಲಿ ಚೆಂಡು ಹೆಚ್ಚು ಸ್ಪಿನ್ ಆಗುವುದಿಲ್ಲ. ಹಾಗಾಗಿ ಸ್ಪಿನ್ನರ್‌ಗಳು ವಿಕೆಟ್ ಪಡೆಯಲು ಹೆಚ್ಚು ಶ್ರಮಪಡಬೇಕಾಗುತ್ತದೆ.

ಹೈ-ಸ್ಕೋರಿಂಗ್ ಪಂದ್ಯ: ಫೈನಲ್ ಪಂದ್ಯಕ್ಕೆ ಬ್ಯಾಟ್ಸ್​ಮನ್​ಗಳಿಗೆ ಸಹಕಾರಿಯಾಗುವಂತಹ ಪಿಚ್ ಅನ್ನೇ ನಿರ್ಮಿಸಲಾಗಿದೆ. ಹೀಗಾಗಿ ಈ ಮ್ಯಾಚ್​ನಲ್ಲಿ ರನ್​ ಮಳೆ ನಿರೀಕ್ಷಿಸಬಹುದು. ಅದರಲ್ಳೂ 200+ ಸ್ಕೋರ್​ ಗಳಿಸುವುದು ಇಲ್ಲಿ ಕಷ್ಟವೇನಲ್ಲ.

ಟಾಸ್ ನಿರ್ಣಾಯಕ: ಇಬ್ಬನಿಯ ಪ್ರಭಾವದಿಂದಾಗಿ ಟಾಸ್ ಗೆದ್ದ ತಂಡವು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಹಿಂದಿನ ದಾಖಲೆ: ಅಹಮದಾಬಾದ್​ನಲ್ಲಿ ಆಡಲಾದ ಕೊನೆಯ ಪಂದ್ಯದಲ್ಲಿ ಕೆನಡಾ ವಿರುದ್ಧ ಸೌತ್ ಆಫ್ರಿಕಾ 213 ರನ್ ಗಳನ್ನು ಕಲೆಹಾಕಿದ್ದರು. ಹೀಗಾಗಿ ಮಿಶ್ರಿತ ಮಣ್ಣಿನ ಪಿಚ್​ನಲ್ಲಿ ಈ ಬಾರಿ ಕೂಡ ಬೃಹತ್ ಸ್ಕೋರ್​ ನಿರೀಕ್ಷಿಸಬಹುದು.

ಇದನ್ನೂ ಓದಿ: ಸದ್ದಡಗಿಸುವುದೇ ನಮ್ಮ ಗುರಿ: ಮಿಚೆಲ್ ಸ್ಯಾಂಟ್ನರ್

ಸೋಲಿನ ಪಾಠ: 2023ರ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಬಳಸಿದ ನಿಧಾನಗತಿಯ ಕಪ್ಪು ಮಣ್ಣಿನ ಪಿಚ್‌ಗಿಂತ ಇದು ಭಿನ್ನವಾಗಿದೆ. ಭಾರತೀಯ ಬ್ಯಾಟರ್‌ಗಳ ಆಕ್ರಮಣಕಾರಿ ಆಟಕ್ಕೆ ಪೂರಕವಾಗಲೆಂದೇ ಈ ಬಾರಿ ಕೆಂಪು ಮಣ್ಣಿನ ಮಿಶ್ರಣವನ್ನು ಬಳಸಲಾಗಿದೆ. ಹೀಗಾಗಿ ಈ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ಆಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

Source link

ಜಿಬಿಎಯ 5 ಪಾಲಿಕೆಗಳ ಚುನಾವಣೆ: ವಾರ್ಡ್ ವಾರು ಅಂತಿಮ ಮೀಸಲಾತಿ ಪ್ರಕಟ

ಬೆಂಗಳೂರು, ಮಾರ್ಚ್​​ 08: ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ಪಾಲಿಕೆಗಳ ಚುನಾವಣೆಗೆ ಸಿದ್ಧತೆ ಭರದಿಂದ ನಡೆದಿದ್ದು, ವಾರ್ಡ್ ವಾರು ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 369 ವಾರ್ಡ್​​ಗಳಿಗೆ ನಗರಾಭಿವೃದ್ದಿ ಇಲಾಖೆ ಮೀಸಲಾತಿ ಅಂತಿಮಗೊಳಿಸಿದ್ದು, ಈ ಪೈಕಿ 176 ವಾರ್ಡ್​​ಗಳು ಮಹಿಳೆಯರಿಗೆ ಮೀಸಲಾಗಿವೆ. ಕರಡು ಪಟ್ಟಿಗೆ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಸಲಹೆ ಮತ್ತು ಸೂಚನೆಗಳ ಜೊತೆಗೆ ಸರ್ಕಾರದ ಜೊತೆಗೂ ಕೆಲ ವಿಚಾರಗಳನ್ನು ಚರ್ಚಿಸಿ, ಸೂಕ್ತವಾದವುಗಳನ್ನು ಆಯ್ದುಕೊಂಡು ಈ ಅಂತಿಮ ಮೀಸಲಾತಿಯನ್ನು ನಿಗದಿ ಮಾಡಲಾಗಿದೆ.

ಮೀಸಲಾತಿ ವಿವರ

ಬೆಂಗಳೂರು ಕೇಂದ್ರ ನಗರ ಪಾಲಿಕೆ

  • ಒಟ್ಟು ವಾರ್ಡ್​​ಗಳ ಸಂಖ್ಯೆ – 63
  • SC – 11 (5 ಮಹಿಳೆ)
  • ST – 1
  • ಹಿಂದುಳಿದ ವರ್ಗ(A) – 15 (ಮಹಿಳೆ 7)
  • ಹಿಂದುಳಿದ ವರ್ಗ(B) – 4 (ಮಹಿಳೆ 2)
  • ಸಾಮಾನ್ಯ – 32 (ಮಹಿಳೆ 16)
  • ಮಹಿಳೆಯರಿಗೆ ಒಟ್ಟು 30 ವಾರ್ಡ್​​ಗಳು ಮೀಸಲು

ಇದನ್ನೂ ಓದಿ: ಮೈತ್ರಿ ಪಕ್ಷಗಳ ನಡುವೆ ಲಯ ತಪ್ಪಿದ ತಾಳ ಮೇಳ; ನಾಯಕರ ನಡುವೆ ಇಲ್ವಂತೆ ಸಮನ್ವಯತೆ!

ಬೆಂಗಳೂರು ಪೂರ್ವ ನಗರ ಪಾಲಿಕೆ

  • ಒಟ್ಟು ವಾರ್ಡ್ ಗಳ ಸಂಖ್ಯೆ – 50
  • SC – 7 (ಮಹಿಳೆ 3)
  • ST – 1
  • ಹಿಂದುಳಿದ ವರ್ಗ (A) – 14 (ಮಹಿಳೆ 7)
  • ಹಿಂದುಳಿದ ವರ್ಗ (B) – 3 (ಮಹಿಳೆ 1)
  • ಸಾಮಾನ್ಯ – 25 (ಮಹಿಳೆ 12)
  • ಮಹಿಳೆಯರಿಗೆ ಮೀಸಲಿಟ್ಟ ವಾರ್ಡ್​​ಗಳು – 23

ಬೆಂಗಳೂರು ಪಶ್ಚಿಮ ನಗರ ಪಾಲಿಕೆ

  • ಒಟ್ಟು ವಾರ್ಡ್ ಗಳ ಸಂಖ್ಯೆ – 112
  • SC – 9 (ಮಹಿಳೆ 4)
  • ST – 2 (ಮಹಿಳೆ 1)
  • ಹಿಂದುಳಿದ ವರ್ಗ (A) – 30 (ಮಹಿಳೆ 15)
  • ಹಿಂದುಳಿದ ವರ್ಗ (B) – 7 (ಮಹಿಳೆ 3)
  • ಸಾಮಾನ್ಯ – 64 (ಮಹಿಳೆ 32)
  • ಮಹಿಳೆಯರಿಗೆ ಮೀಸಲಿಟ್ಟ ವಾರ್ಡ್​​ಗಳು – 55

ಬೆಂಗಳೂರು ಉತ್ತರ ನಗರ ಪಾಲಿಕೆ

  • ಒಟ್ಟು ವಾರ್ಡ್ ಗಳ ಸಂಖ್ಯೆ – 72
  • SC – 9 (ಮಹಿಳೆ 4)
  • ST – 2 (ಮಹಿಳೆ 1)
  • ಹಿಂದುಳಿದ ವರ್ಗ (A) – 19(ಮಹಿಳೆ 9)
  • ಹಿಂದುಳಿದ ವರ್ಗ (B) – 5(ಮಹಿಳೆ 2)
  • ಸಾಮಾನ್ಯ – 37 (ಮಹಿಳೆ 18)
  • ಮಹಿಳೆಯರಿಗೆ ಮೀಸಲಿಟ್ಟ ವಾರ್ಡ್​​ಗಳು – 34

ಬೆಂಗಳೂರು ದಕ್ಷಿಣ ನಗರ ಪಾಲಿಕೆ

  • ಒಟ್ಟು ವಾರ್ಡ್ ಗಳ ಸಂಖ್ಯೆ – 72
  • SC – 7 (ಮಹಿಳೆ 3)
  • ST – 1
  • ಹಿಂದುಳಿದ ವರ್ಗ (A) – 19 ( =ಮಹಿಳೆ 9)
  • ಹಿಂದುಳಿದ ವರ್ಗ (B) – 5 (ಮಹಿಳೆ 2)
  • ಸಾಮಾನ್ಯ – 40 (ಮಹಿಳೆ 20)
  • ಮಹಿಳೆಯರಿಗೆ ಮೀಸಲಿಟ್ಟ ವಾರ್ಡ್​​ಗಳು- 34

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

 

Source link

ಕೊನೆಗೂ ಹಿಮೋಫಿಲಿಯಾ ಫೀಡಿತರಿಗೆ ಅಂಗವಿಕಲತೆಯಿಂದ ಮುಕ್ತಿ; 57 ಸಾವಿರ ರೂ. ಇಂಜೆಕ್ಷನ್ ಉಚಿತ!

ದಾವಣಗೆರೆ, ಮಾರ್ಚ್​ 08: ಹಿಮೋಫಿಲಿಯಾ ಎಂಬ ವಿರಳ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಲಭ್ಯವಾಗಿದೆ. ಸುಮಾರು 57 ಸಾವಿರ ರೂ. ಮೌಲ್ಯದ ಎಮಿಸಿಜುಮ್ಯಾಬ್ (ಹೆಮ್ಲಿಬ್ರಾ) ಎಂಬ ಇಂಜೆಕ್ಷನ್ ಅನ್ನು ಇದೀಗ ಉಚಿತವಾಗಿ ನೀಡಲಾಗುತ್ತಿದೆ. ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ಡಾ. ನಾಗೇಂದ್ರಪ್ಪ ಈ ಯೋಜನೆಗೆ ಚಾಲನೆ ನೀಡಿದರು. ರಕ್ತ ಹೆಪ್ಪುಗಟ್ಟದ ಸಮಸ್ಯೆಯಿಂದ ಗಾಯವಾದಾಗ ಮಾತ್ರ ಚಿಕಿತ್ಸೆ ನೀಡುತ್ತಿದ್ದ ಹಿಂದಿನ ವ್ಯವಸ್ಥೆಗೆ ಬದಲಾಗಿ, ಇದೀಗ ಗಾಯವಾಗುವ ಮೊದಲುಲೇ ತಿಂಗಳಿಗೆ ಒಮ್ಮೆ ಈ ಇಂಜೆಕ್ಷನ್ ನೀಡಲಾಗುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ಸುಧಾರಿಸಿ ಅನಾವಶ್ಯಕ ರಕ್ತಸ್ರಾವವನ್ನು ತಡೆಯಲು ಸಹಾಯ ಮಾಡುತ್ತದೆ. ಹಿಮೋಫಿಲಿಯಾ ರೋಗಿಗಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟಾಗುವ ಅಪಾಯವನ್ನು ಕಡಿಮೆ ಮಾಡುವಲ್ಲಿ ಈ ಕ್ರಮ ಮಹತ್ವದ್ದಾಗಿದೆ. ಹಲವು ವರ್ಷಗಳ ಹೋರಾಟದ ನಂತರ ಸರ್ಕಾರದ ಈ ನಿರ್ಧಾರಕ್ಕೆ ರೋಗಿಗಳು ಹಾಗೂ ಅವರ ಕುಟುಂಬಸ್ಥರು ಭಾವುಕರಾಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೈತ್ರಿ ಪಕ್ಷಗಳ ನಡುವೆ ಲಯ ತಪ್ಪಿದ ತಾಳ ಮೇಳ: ನಾಯಕರ ನಡುವೆ ಇಲ್ವಂತೆ ಸಮನ್ವಯತೆ!

ಬೆಂಗಳೂರು, ಮಾರ್ಚ್​​ 08: ಮೈತ್ರಿ ಪಕ್ಷಗಳಾಗಿರು ಬಿಜೆಪಿ ಮತ್ತು ಜೆಡಿಎಸ್​​ ನಡುವೆ ಹಲವು ವಿಚಾರಗಳಲ್ಲಿ ಸಾಬೀತಾಗಿದ್ದ ಸಮನ್ವಯದ ಕೊರತೆ ಮತ್ತೆ ಸದ್ದು ಮಾಡಿದೆ. ನಿನ್ನೆ ಬಜೆಟ್ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟದ ವಿಚಾರದಲ್ಲೂ ಉಭಯ ಪಕ್ಷಗಳ ನಾಯಕರ ನಡುವೆ ಒಮ್ಮತ ಇರಲಿಲ್ಲ. ಬಿಜೆಪಿ ಪ್ರತ್ಯೇಕವಾಗಿ ಹೋರಾಟ ನಡೆಸಿರುವ ಬಗ್ಗೆ ಜೆಡಿಎಸ್ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಬಜೆಟ್ ಖಂಡಿಸಿ ನಿನ್ನೆ ವಿಧಾನಸೌಧದಲ್ಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ ನಡೆಸಿದ್ದರೆ, ಸರ್ಕಾರದ ವಿರುದ್ಧದ ಹೋರಾಟದ ಬಗ್ಗೆ ಬಿಜೆಪಿ ನಾಯಕರು ಯಾವುದೇ ಮಾಹಿತಿ ನೀಡಲಿಲ್ಲ. ಎಲ್ಲವನ್ನೂ ಪ್ಲ್ಯಾನ್​​ ಮಾಡಿ ಕೊನೆ ಕ್ಷಣದಲ್ಲಿ ಹೋರಾಟಕ್ಕೆ ಬನ್ನಿ ಎಂದು ನಾಮಕವಸ್ಥೆಗೆ ಕರೆಯುತ್ತಾರೆ. ಹೀಗಾಗಿ ನಾವು ಪ್ರತಿಭಟನೆಯಲ್ಲಿ ಭಾಗಿಯಾಗುವುದಿಲ್ಲ ಎಂದು ಜೆಡಿಎಸ್ ನಾಯಕರಿಗೆ ದಳ ಶಾಸಕರು ದೂರು ನೀಡಿದ್ದಾರೆ. ಬಳಿಕ ಬಿಜೆಪಿ ಹೋರಾಟದಿಂದ ಅಂತರ ಕಾಯ್ದುಕೊಂಡ ಪ್ರಸಂಗ ನಡೆದಿದೆ.

ಮೈತ್ರಿ ನಾಯಕರ ಮುನಿಸಿನ ನಡುವೆ ಚರ್ಚೆ ಶಾಸಕ ಶರಣಗೌಡ ಕಂದಕೂರು ಹೊಸ ಚರ್ಚೆ ಹುಟ್ಟುಹಾಕಿದ್ದಾರೆ. ಹೆಚ್​​.ಡಿ. ಕುಮಾರಸ್ವಾಮಿ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿದ್ರೆ 140-150 ಸ್ಥಾನ ಬರುತ್ತೆ. ಮೈತ್ರಿ ಇದ್ದರೂ ಇಲ್ಲದಿದ್ದರೂ ನಮ್ಮ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದು ಹೇಳಿದ್ದಾರೆ. ಅಲ್ಲದೆ ಬಿಜೆಪಿಯವರು ನಿಮ್ಮ ಪಕ್ಷದ ಸಿಎಂ ಅಭ್ಯರ್ಥಿ ಯಾರು ಎಂದು ಹೇಳಿ. ನಮ್ಮದು ಒಂದು ಸೈಡ್ ಲವ್ ಆಗಿದೆ. ನಾವು BJPಯವರನ್ನು ಪ್ರೀತಿಸುತ್ತೇವೆ, ಆದರೆ ಅವರು ನಮ್ಮನ್ನ ಪ್ರೀತಿಸ್ತಿಲ್ಲ. ಸಮನ್ವಯತೆಯಿಂದ ಹೋಗಿದ್ದಕ್ಕೆ MP ಚುನಾವಣೆಯಲ್ಲಿ 19 ಸ್ಥಾನ ಗೆದ್ವಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: 10.15ಕ್ಕೇ ಸಿದ್ದರಾಮಯ್ಯ ಬಜೆಟ್ ಮಂಡನೆ ಏಕೆ? ಬಿಜೆಪಿ ಶಾಸಕ ಸುರೇಶ್ ಕುಮಾರ್ ಕೊಟ್ಟರು ಅಚ್ಚರಿಯ ಕಾರಣ! ನಿಜವಿರಬಹುದೇ?

ಇನ್ನು ಅಧಿವೇಶನದ ವೇಳೆ ಸಮನ್ವಯ ಸಭೆ ಮಾಡಿಕೊಂಡು ಬರುತ್ತಿದ್ದೆವು. ಆದರೆ ನಿನ್ನೆಬಿಜೆಪಿ ಕಡೆಯಿಂದ ಸಮನ್ವಯ ಸಭೆ ಮಾಡುವ ಬಗ್ಗೆ ಏನೂ ಬಂದಿಲ್ಲ. ಅರ್ಧ ಗಂಟೆ ಮುಂಚಿತವಾಗಿ ಪ್ರತಿಭಟನೆ ಮಾಡುವುದಾಗಿ ಹೇಳಿದ್ರು. ಬಿಜೆಪಿಯ ರಾಷ್ಟ್ರೀಯ ನಾಯಕರಿಗೆ ನಮ್ಮ ಮೇಲೆ ಪ್ರೀತಿ, ಒಲವು ಇದೆ. ಕೆಲ ಬಿಜೆಪಿ ನಾಯಕರಿಂದ ಅವರೇ ಚಿವುಟಿ, ತೊಟ್ಟಿಲು ತೂಗುವಂತ ಕೆಲಸ ಆಗುತ್ತಿದೆ. ಕುಮಾರಸ್ವಾಮಿ ಸಿಎಂ ಆಗಲಿ ಎಂದು ರಾಜ್ಯದ ಜನ ಬಯಸುತ್ತಿದ್ದಾರೆ. ಅವರನ್ನು ನೋಡಿ ನಮ್ಮ ಪಕ್ಷಕ್ಕೆ ಮತ ಹಾಕುತ್ತಾರೆ. ಸಿಎಂ ಬಗ್ಗೆ ಮೋದಿ ತೀರ್ಮಾನ ಮಾಡ್ತಾರೆಂದು ದೇವೇಗೌಡರು ಹೇಳಿದ್ದಾರೆ. ಆದರೆ ನಾವು ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳುತ್ತೇವೆ. ಸಿಎಂ ಅಭ್ಯರ್ಥಿ ಬಗ್ಗೆ ಸರ್ವೆ ಮಾಡಿಸಿ ಬಿಜೆಪಿಯವರು ತೀರ್ಮಾನಿಸಲಿ ಎಂದು ಶಾಸಕ ಶರಣಗೌಡ ಕಂದಕೂರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Exit mobile version