ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಬಿಸಿಲಿನಿಂದ ರಕ್ಷಣೆಗೆ ಆರೋಗ್ಯ ಇಲಾಖೆ ಸೂಚನೆ

ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಬಿಸಿಲಿನಿಂದ ರಕ್ಷಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು, ಮಾರ್ಚ್​​ 14: ರಾಜ್ಯದಲ್ಲಿ ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ಬಿಸಿಲು (Heatwave) ಕಾಡೋದಕ್ಕೆ ಶುರುವಾಗಿದೆ. ಹೇಗೋ ಬಿಸಿಲನ್ನು ತಡೆದುಕೊಂಡು ಇರುವ ಜನರಿಗೆ ಮುಂದಿನ ದಿನದಲ್ಲಿ ಸೂರ್ಯ ಮತಷ್ಟು ಸುಡಲಿದ್ದಾನೆ. ಹೀಗಂತ‌ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಕೂಡ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನದ ಅಲರ್ಟ್

ಈಗಾಗಲೇ ಬೇಸಿಗೆ ಶುರುವಾಗಿದೆ. ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ, ಕಚೇರಿಗಳಲ್ಲಿ ಏರ್ ಕೂಲರ್‌ಗಳನ್ನ ಹಾಕೊಂಡು ಕೂರುವ ಪರಿಸ್ಥಿತಿ ಇದೆ ಬೆಂಗಳೂರಿನಲ್ಲಿ. ಹೀಗಿರುವಾಗ ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ಇರ್ಬೇಕಾ ಅನ್ನೋ ಮಟ್ಟಿಗೆ ಬಿಸಿಲು ಕಾಡಲಿದೆ.

ಇದನ್ನೂ ಓದಿ: ಈ ಭಾಗದ ಜನರಿಗೆ ಬಿಗ್​​​ ಅಲರ್ಟ್​​​ ನೀಡಿದ ಹವಾಮಾನ ಇಲಾಖೆ: ಮಧ್ಯಾಹ್ನ ಹೊರಗೆ ಹೋಗುವ ಮುನ್ನ ಎಚ್ಚರ!

ಸಿಲಿಕಾನ್ ಸಿಟಿ ಜನರೇ ಎಚ್ಚರದಿಂದ ಇರಿ, ಕೂಲ್ ಸಿಟಿ ಅಂತಾನೇ ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು ಸದ್ಯ ಹಾಟ್ ಸಿಟಿಯಾಗಿ ಬದಲಾಗಿದೆ. ಕಳೆದ ಒಂದು ವಾರದಿಂದ ರಾಜಧಾನಿಯಲ್ಲಿ ತಾಪಮಾನ ಏರಿಕೆ ಹಿನ್ನಲೆ ಎಂಥಾ ಸೆಕೆ ಅಂತ ಸಿಟಿ ಜನ ಶಾಪ್ ಹಾಕೋಕ್ಕೆ ಶುರು ಮಾಡಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 33 ರಿಂದ 34 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಯುಗದಿ ಹಬ್ಬದ ಬಳಿಕ ಮಾರ್ಚ್ 3ನೇ ವಾರದ ಬಳಿಕ 38-39 ಡಿಗ್ರಿ ತಲುಪಲಿದೆ ಬೆಂಗಳೂರಿನ ತಾಪಮಾನದ ಏರಿಕೆ. ಈ ಹಿನ್ನೆಲೆ ಹವಮಾನ ಇಲಾಖೆ ಸೂಚನೆ ನೀಡಿದ್ದು, ಸಿಲಿಕಾನ್ ಸಿಟಿ ಜನರಿಗೆ ಬಿಸಿಲು ಕಾಡಲಿದೆ.

ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ಇತ್ತ ಹವಾಮಾನ ಇಲಾಖೆ ಸೂಚನೆ ಬೆನ್ನಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ತಾಪಮಾನ ಏರಿಕೆ ಹಿನ್ನಲೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬಿಸಿಲು ಹೆಚ್ಚಿರುವಾಗ ಏನು ಮಾಡಬೇಕು, ಏನು ಮಾಡಬಾರದು ಅಂತ ಜಾಗೃತಿಗೆ ಗೈಡ್ ಲೈನ್ಸ್ ನೀಡಿದೆ. ಇನ್ನು ಉರಿಯುವ ಬಿಸಿಲಿಗೆ ಹೀಟ್ ಸ್ಟ್ರೋಕ್ ಭೀತಿ ಒಂದು ಕಡೆಯಾದರೆ, ಖಾಯಿಲೆಗಳ ಏರಿಕೆಯ ಆತಂಕ ಶುರುವಾಗಿದೆ. ತಾಪಮಾನ ಏರಿಕೆ ಬೆನ್ನಲ್ಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮುಂದಾಗಿದೆ.

ಹೀಟ್ ಸ್ಟ್ರೋಕ್ ಬಗ್ಗೆ ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ. ಬೆಳಗ್ಗೆ 11 ರಿಂದ ಸಂಜೆ 4 ಗಂಟೆ ಬಗ್ಗೆ ಗಮನ ಇರಲಿ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ಮತ್ತಷ್ಟು ಹಾಟ್ ಆಗಲಿದೆ. ಹೀಗಾಗಿ ಹೈ ಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ನೀಡಲಾಗಿದೆ.

ವೈದ್ಯರ ಸಲಹೆ ಏನು?

ದೇಹದ ಉಷ್ಣತೆಯು 40 C ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟ್ರೋಕ್ ಕೂಡ ಸಾಧ್ಯತೆ ಇದ್ದು, ಇದು ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಹೀಗಾಗಿ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ವೈದ್ಯರು ಸಲಹೆ ನೀಡುತ್ತಿದ್ದಾರೆ. ಜೊತೆಗೆ ಹೆಚ್ಚಾಗಿ ನೀರು, ತಂಪು ಪಾನೀಯಗಳು ಸೇರಿದಂತೆ ನಿರ್ಜಲೀಕರಣ ಆಗದಂತದ ಆಹಾರವನ್ನ ಹೆಚ್ಚಾಗಿ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Bengaluru Air Quality: ಮೈಸೂರಿನಲ್ಲಿ ಮತ್ತಷ್ಟು ಹದಗೆಟ್ಟ ಏರ್ ಕ್ವಾಲಿಟಿ

ಒಟ್ಟಿನಲ್ಲಿ ಈ ವರ್ಷ ಕೂಡ ಬೆಂಗಳೂರು ಮಂದಿಗೆ ಬೇಸಿಗೆಯ ಧಗೆ ಕಾಡಲಿದ್ದು, ಜನರು ಬಿಸಿಲಿನಿಂದ ಉಂಟಾಗುವ ಆರೋಗ್ಯದ ಸಮಸ್ಯೆಯಿಂದ ದೂರ ಇರಲು ಹೆಚ್ಚು ಗಮನ ಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

‘ಧುರಂಧರ್ 2’ ಸಿನಿಮಾಕ್ಕೆ ಸ್ಪರ್ಧೆ ಒಡ್ಡಲು ‘ಉಸ್ತಾದ್ ಭಗತ್ ಸಿಂಗ್’ ಪ್ಲ್ಯಾನ್

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾ ಅದೇ ದಿನ ಬಿಡುಗಡೆ ಆಗಬೇಕಿತ್ತು ಆದರೆ ‘ಟಾಕ್ಸಿಕ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ‘ಧುರಂಧರ್ 2’ಗೆ ಹೆದರಿ ಇನ್ನೂ ಕೆಲವು ಸಿನಿಮಾಗಳು ಬಿಡುಗಡೆ ದಿನಾಂಕ ಮುಂದಕ್ಕೆ ಹಾಕಿಕೊಂಡಿದ್ದವು. ಆದರೆ ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಮಾರ್ಚ್ 19ರಂದೇ ಬಿಡುಗಡೆ ಆಗುತ್ತಿದೆ. ಆದರೆ ‘ಧುರಂಧರ್ 2’ ಸಿನಿಮಾ ಬಿಡುಗಡೆಗೆ ಮುಂಚೆಯೇ ಪವನ್ ಸಿನಿಮಾಕ್ಕೆ ಸ್ಪರ್ಧೆ ಒಡ್ಡುತ್ತಿದೆ. ಆದರೆ ‘ಧುರಂಧರ್ 2’ಗೆ ಪ್ರತಿಸ್ಪರ್ಧೆ ಒಡ್ಡಲು ‘ಭಗತ್ ಸಿಂಗ್’ ತಂಡ ಯೋಜನೆ ಹಾಕಿಕೊಂಡಿದೆ.

‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಸ್ಪೆಷಲ್ ಶೋಗಳನ್ನು ಆಯೋಜಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದ್ದವು ಆದರೆ, ‘ಧುರಂಧರ್ 2’ ಸಿನಿಮಾ ಮುಂಚಿತವಾಗಿಯೇ ಪ್ರೀಮಿಯರ್ ಶೋಗಳನ್ನು ಪ್ರಕಟಿಸಿತು. ಸಿನಿಮಾ ಬಿಡುಗಡೆಗೆ ಹಿಂದಿನ ದಿನ ಅಂದರೆ ಮಾರ್ಚ್ 18ರಂದು ಸಂಜೆ ಐದು ಗಂಟೆಯಿಂದಲೇ ಶೋಗಳನ್ನು ಪ್ರದರ್ಶಿಸುತ್ತಿದೆ. ಇದು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಕ್ಕೆ ಭಾರಿ ಪೆಟ್ಟು ನೀಡಿದೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಸಹ ಪ್ರೀಮಿಯಮ್ ಶೋ ಆಯೋಜಿಸಲು ಯೋಜಿಸಿತ್ತು, ಆದರೆ ‘ಧುರಂಧರ್ 2’ ಕಾರಣಕ್ಕೆ ಅದು ರದ್ದಾಗಿತ್ತು.

ಇದನ್ನೂ ಓದಿ:‘ಕಾಲರ್ ಎತ್ತರ’ ಎಂದು ಕುಣಿದ ಪವನ್ ಕಲ್ಯಾಣ್: ಸ್ಟೆಪ್ಪು ನೋಡಿ

ಆದರೆ ಇದೀಗ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಹೊಸ ಯೋಜನೆಯೊಂದಿಗೆ ಬಂದಿದೆ. ಸಂಜೆ ಪೇಯ್ಡ್ ಪ್ರೀಮಿಯರ್ ಶೋ ಬದಲಿಗೆ ಬೆಳಿಗಿನ ಜಾವ ಬೆನಿಫಿಟ್ ಶೋಗಳನ್ನು ಆಯೋಜಿಸಲು ಮುಂದಾಗಿದೆ. ಆಂಧ್ರ ಮತ್ತು ತೆಲಂಗಾಣಗಳಲ್ಲಿ ಬೆಳಗಿನ ಜಾವ 4 ಮತ್ತು 5 ಗಂಟೆಗೆ ಶೋಗಳನ್ನು ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಅಲ್ಲಿ ಮಾತ್ರವೇ ಅಲ್ಲದೆ ಕರ್ನಾಟಕದಲ್ಲಿಯೂ ಸಹ ಅರ್ಲಿ ಮಾರ್ನಿಂಗ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಸಿನಿಮಾದ ಟಿಕೆಟ್ ದರಗಳು ಸುಮಾರು 500 ರೂಪಾಯಿಗಳು ಆಂಧ್ರ ಮತ್ತು ತೆಲಂಗಾಣದಲ್ಲಿ ಇರಲಿವೆ ಎನ್ನಲಾಗುತ್ತಿದೆ. ಕರ್ನಾಟಕದಲ್ಲಿ ಸಹಜವಾಗಿಯೇ ಟಿಕೆಟ್ ದರ ಹೆಚ್ಚೇ ಇರಲಿದೆ.

‘ಪುಷ್ಪ 2’ ಸಿನಿಮಾದ ಸ್ಪೆಷಲ್ ಶೋನಲ್ಲಿ ಆಗಿದ್ದ ಅನಾಹುತದ ಬಳಿಕ ತೆಲಂಗಾಣದಲ್ಲಿ ಬೆನಿಫಿಟ್ ಶೋ, ಫ್ಯಾನ್ಸ್ ಶೋಗಳನ್ನು ರದ್ದು ಮಾಡಲಾಗಿತ್ತು. ಆಂಧ್ರದಲ್ಲಿಯೂ ಸಹ ಅರ್ಲಿ ಮಾರ್ನಿಂಗ್ ಶೋಗಳನ್ನು ಪ್ರದರ್ಶಿಸಲಾಗುತ್ತಿರಲಿಲ್ಲ. ಆದರೆ ಇದೀಗ ಪವನ್ ಕಲ್ಯಾಣ್ ಸಿನಿಮಾಕ್ಕಾಗಿ ಇದೀಗ ಮತ್ತೆ ಅರ್ಲಿ ಮಾರ್ನಿಂಗ್ ಶೋ ಪ್ರದರ್ಶಿಸಲಾಗುತ್ತಿದೆ. ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ಪವನ್ ಕಲ್ಯಾಣ್ ಜೊತೆಗೆ ಶ್ರೀಲೀಲಾ ಸಹ ನಟಿಸಿದ್ದಾರೆ. ಸಿನಿಮಾದ ಟ್ರೈಲರ್ ಇಂದು (ಮಾರ್ಚ್ 14) ಬಿಡುಗಡೆ ಆಗಿದೆ. ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್​ನ ಕರಾವಳಿ ಮೇಲೆ ಬಾಂಬ್ ಹಾಕುತ್ತೇನೆ; ಹಾರ್ಮುಜ್ ಜಲಸಂಧಿಯನ್ನು ತೆರೆಯುವ ಶಪಥ ಮಾಡಿದ ಟ್ರಂಪ್

ನವದೆಹಲಿ, ಮಾರ್ಚ್ 14: ಇರಾನ್‌ನೊಂದಿಗಿನ ಉದ್ವಿಗ್ನತೆ ಹಾರ್ಮುಜ್ ಜಲಸಂಧಿಯ ಮೇಲೆ ಕೂಡ ಪರಿಣಾಮ ಬೀರಬಹುದು. ಹಾರ್ಮುಜ್ ಜಲಸಂಧಿಯನ್ನು ತೆರೆಯಲು ಯಾವೆಲ್ಲ ರೀತಿಯಲ್ಲಿ ಸಾಧ್ಯವೋ ಆ ಎಲ್ಲ ಪ್ರಯತ್ನ ಮಾಡುತ್ತೇವೆ. ಕರಾವಳಿಯ ಮೇಲೆ ಬಾಂಬ್ ಹಾಕಲು ಕೂಡ ಅಮೆರಿಕ ಸಿದ್ಧವಿದೆ. ನಾವು ಏನು ಮಾಡುತ್ತೇವೆಂದು ನೋಡುತ್ತಿರಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಸಿದ್ದಾರೆ. ಈ ಬಗ್ಗೆ ಅವರು ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇರಾನ್‌ನ ಕರಾವಳಿಯ ಬಳಿ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುತ್ತವೆ. ಈ ಮಾರ್ಗಕ್ಕೆ ಬೆದರಿಕೆ ಹಾಕುವ ಯಾವುದೇ ಇರಾನಿನ ದೋಣಿಗಳು ಅಥವಾ ಹಡಗುಗಳನ್ನು ಉರುಳಿಸುತ್ತವೆ ಎಂದಿರುವ ಟ್ರಂಪ್, “ನಾವು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತ ಮತ್ತು ಮುಕ್ತಗೊಳಿಸುತ್ತೇವೆ” ಎಂದು ಶಪಥ ಮಾಡಿದ್ದಾರೆ.

ಇದನ್ನೂ ಓದಿ: ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ಚೀನಾ, ಫ್ರಾನ್ಸ್, ಜಪಾನ್, ದಕ್ಷಿಣ ಕೊರಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ (ಇಂಗ್ಲೆಂಡ್) ಸೇರಿದಂತೆ ಇತರೆ ದೇಶಗಳು ಹಾರ್ಮುಜ್ ಜಲಸಂಧಿಯ ಪ್ರದೇಶಕ್ಕೆ ಹಡಗುಗಳನ್ನು ಕಳುಹಿಸುವಂತೆ ಟ್ರಂಪ್ ಒತ್ತಾಯಿಸಿದ್ದಾರೆ. ಅಡೆತಡೆಗಳನ್ನು ತಡೆಗಟ್ಟಲು ಮತ್ತು ಜಲಸಂಧಿಯು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ಬಹುರಾಷ್ಟ್ರಗಳು ಅಲ್ಲಿಗೆ ತೆರಳಬೇಕು ಎಂದು ಟ್ರಂಪ್ ಆಗ್ರಹಿಸಿದ್ದಾರೆ.

ಅಮೆರಿಕವು ಇರಾನ್‌ನ 100% ಮಿಲಿಟರಿ ಸಾಮರ್ಥ್ಯವನ್ನು ನಾಶಪಡಿಸಿದೆ ಎಂದು ಟ್ರಂಪ್ ಹೇಳಿಕೊಂಡರೂ, ಇರಾನ್ ಇನ್ನೂ ಡ್ರೋನ್‌ಗಳು, ಅಲ್ಪ-ಶ್ರೇಣಿಯ ಕ್ಷಿಪಣಿಗಳನ್ನು ಬಳಸಿಕೊಂಡು ಸಣ್ಣ ಪ್ರಮಾಣದ ದಾಳಿಗಳನ್ನು ನಡೆಸುವ ಸಾಧ್ಯತೆಯಿದೆ. ಇದು ಹಾರ್ಮುಜ್ ಜಲಸಂಧಿಯಲ್ಲಿ ಹಾದುಹೋಗುವ ಹಡಗುಗಳಿಗೆ ಅಪಾಯವನ್ನುಂಟುಮಾಡಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಾಳಿ ನಡೆಸಲು ಇನ್ನೇನೂ ಉಳಿದಿಲ್ಲ; ಇರಾನ್ ಮೇಲಿನ ಯುದ್ಧ ಬೇಗ ಕೊನೆಯಾಗಲಿದೆ ಎಂದ ಟ್ರಂಪ್

“ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಪ್ರಯತ್ನಿಸಿದ್ದರಿಂದ ಪ್ರಭಾವಿತರಾದ ಅನೇಕ ದೇಶಗಳು, ಜಲಸಂಧಿಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿಡಲು ಅಮೆರಿಕ ಸಂಯುಕ್ತ ಸಂಸ್ಥಾನದೊಂದಿಗೆ ಯುದ್ಧನೌಕೆಗಳನ್ನು ಕಳುಹಿಸಲಿವೆ” ಎಂದು ಟ್ರಂಪ್ ಪೋಸ್ಟ್ ಮಾಡಿದ್ದಾರೆ.

ಹಾರ್ಮುಜ್ ಜಲಸಂಧಿಯು ವಿಶ್ವದ ತೈಲ ಸಾಗಣೆಯ ಗಮನಾರ್ಹ ಭಾಗವು ಹಾದುಹೋಗುವ ಪ್ರಮುಖ ಸಮುದ್ರ ಮಾರ್ಗವಾಗಿದೆ. ಈಗಾಗಲೇ ಭಾರತೀಯ ಹಡಗುಗಳಿಗೆ ಈ ಮಾರ್ಗದಲ್ಲಿ ಸಂಚರಿಸಲು ಇರಾನ್ ಅನುಮತಿ ನೀಡಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ಧ್ರುವ ಸರ್ಜಾ (Dhruva Sarja) ನಟನೆಯ ‘ಕೆಡಿ’ ಸಿನಿಮಾದ ಹಾಡು ಬಿಡುಗಡೆ ಆಗಿದೆ. ನೋರಾ ಫತೇಹಿ ಮತ್ತು ಸಂಜಯ್ ದತ್ ಅವರುಗಳ ಹಾಡು ಇದಾಗಿದ್ದು, ಅದರಲ್ಲೂ ಹಾಡಿನಲ್ಲಿ ಮೇನ್ ಹೈಲೈಟ್ ನೋರಾ ಫತೇಹಿ. ಅದ್ಧೂರಿ ಕಾರ್ಯಕ್ರಮದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದ್ದು ನೋರಾ ಫತೇಹಿ ಸಹ ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ್ದರು. ವಿಶೇಷೆಂದರೆ ಗ್ಲಾಮರ್ ಕ್ವೀನ್ ನೋರಾ ಫತೇಹಿ ರೇಷ್ಮೆ ಸೀರೆಯುಟ್ಟು ಕಾರ್ಯಕ್ರಮಕ್ಕೆ ಬಂದಿದ್ದರು. ಕಾರ್ಯಕ್ರಮದಲ್ಲಿ ನಟ ಪ್ರೇಮ್, ಧ್ರುವ ಸರ್ಜಾ ಇನ್ನೂ ಹಲವರ ಬಗ್ಗೆ ಮಾತನಾಡಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಾಯಿ ಪಲ್ಲವಿಗೆ ಸಿಕ್ಕಿದೆ ಅವರ ಕನಸಿನ ಪಾತ್ರ ಮತ್ತು ನಿರ್ದೇಶಕ

ಸಾಯಿ ಪಲ್ಲವಿ (Sai Pallavi), ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟಿ. ತಮ್ಮ ಸಮಕಾಲೀನ ಇತರೆ ನಟಿಯರಿಗಿಂತಲೂ ಬಹಳ ಭಿನ್ನ ನಟಿ ಸಾಯಿ ಪಲ್ಲವಿ. ತಮ್ಮ ಸಿನಿಮಾಗಳ ಆಯ್ಕೆ, ವ್ಯಕ್ತಿತ್ವ ಇತರೆ ಕಾರಣಗಳಿಂದಾಗಿ ಸಾಯಿ ಪಲ್ಲವಿ ಭಾರಿ ದೊಡ್ಡ ಅಭಿಮಾನಿ ವರ್ಗವನ್ನು ಪಡೆದುಕೊಂಡಿದ್ದಾರೆ. ಇದೀಗ ಸಾಯಿ ಪಲ್ಲವಿ ಬಾಲಿವುಡ್​​ಗೆ ಸಹ ಹಾರಿದ್ದಾರೆ. ಅಲ್ಲಿ ಈಗಾಗಲೇ ಎರಡು ಸಿನಿಮಾಗಳಲ್ಲಿ ನಟಿಸಿದ್ದು, ಇದೀಗ ಮೂರನೇ ಸಿನಿಮಾ ನಟನೆಯ ಅವಕಾಶ ಪಡೆದುಕೊಂಡಿದ್ದು, ಇದು ಒಂದು ರೀತಿ ಅವರ ಡ್ರೀಮ್ ಪ್ರಾಜೆಕ್ಟ್ ಸಹ ಹೌದೆನ್ನಬಹುದು.

ಭಾರತೀಯ ಚಿತ್ರರಂಗದ ಖ್ಯಾತ ತಾರೆ ಮಧುಬಾಲ ಜೀವನ ಆಧರಿಸಿದ ಸಿನಿಮಾ ಬಾಲಿವುಡ್​​ನಲ್ಲಿ ನಿರ್ಮಾಣ ಆಗುತ್ತಿದ್ದು, ನಟಿ ಸಾಯಿ ಪಲ್ಲವಿ, ಮಧುಬಾಲ ಅವರ ಪಾತ್ರದಲ್ಲಿ ನಟಿಸಲಿದ್ದಾರೆ. ಯಾವುದೇ ನಟಿಗಾದರೂ ಮಧುಬಾಲ ಅಂಥಹಾ ಲಿಜೆಂಡರಿ ನಟಿಯ ಪಾತ್ರದಲ್ಲಿ ನಟಿಸುವುದು ಕನಸೇ ಸರಿ. ಇದೀಗ ಸಾಯಿ ಪಲ್ಲವಿಗೆ ಆ ಅವಕಾಶ ಅರಸಿ ಬಂದಿದೆ.

ಸಿನಿಮಾದ ಮತ್ತೊಂದು ವಿಶೇಷವೆಂದರೆ ಲಿಜೆಂಡರಿ ಮಧುಬಾಲ ಜೀವನ ಆಧರಿತ ಸಿನಿಮಾ ನಿರ್ದೇಶಿಸುತ್ತಿರುವುದು ಬಾಲಿವುಡ್​​ ಸ್ಟಾರ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ. ಇವರ ನಿರ್ದೇಶನದ ಸಿನಿಮಾನಲ್ಲಿ ನಟಿಸಲು ಬಾಲಿವುಡ್​ನ ದೊಡ್ಡ ದೊಡ್ಡ ಸೂಪರ್ ಸ್ಟಾರ್ ನಟ-ನಟಿಯರೇ ತುದಿಗಾಲಲ್ಲಿ ಕಾಯುತ್ತಾರೆ ಅಂಥಹುದರಲ್ಲಿ ಸಂಜಯ್ ಲೀಲಾ ಬನ್ಸಾಲಿ ದೊಡ್ಡ ಪ್ರಾಜೆಕ್ಟ್​​ಗೆ ಮತ್ತು ಅಷ್ಟೇ ದೊಡ್ಡ ಪಾತ್ರಕ್ಕೆ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಿರುವುದು ಸಾಮಾನ್ಯ ವಿಷಯವಲ್ಲ. ಈ ಪಾತ್ರಕ್ಕೆ ಕಿಯಾರಾ ಅಡ್ವಾಣಿ ಮತ್ತು ಅನಿತ್ ಪಡ್ಡಾ ಹೆಸರು ಸಹ ಕೇಳಿ ಬಂದಿತ್ತಂತೆ. ಆದರೆ ಸಾಯಿ ಪಲ್ಲವಿಯೇ ಈ ಪಾತ್ರಕ್ಕೆ ಫೈನಲ್ ಆಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಮಧುಬಾಲ ಪಾತ್ರದಲ್ಲಿ ನಟಿಸುತ್ತಿರುವ ಸಾಯಿ ಪಲ್ಲವಿ, ಇದೇ ಸಮಯದಲ್ಲಿ ಕನ್ನಡದ ಖ್ಯಾತ ಗಾಯಕಿ ಎಂಎಸ್ ಸುಬ್ಬಲಕ್ಷ್ಮಿ ಅವರ ಜೀವನ ಆಧರಿಸಿದ ಸಿನಿಮಾನಲ್ಲಿಯೂ ನಟಿಸುತ್ತಿದ್ದಾರೆ. ಒಟ್ಟಿಗೆ ಇಬ್ಬರು ದಿಗ್ಗಜರು ಜೀವನ ಆಧರಿತ ಸಿನಿಮಾನಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಇವುಗಳ ಜೊತೆಗೆ ಸಾಯಿ ಪಲ್ಲವಿ ಈಗಾಗಲೇ ಆಮಿರ್ ಖಾನ್ ಪುತ್ರ ಜುನೈದ್ ಖಾನ್ ಜೊತೆಗೆ ‘ಏಕ್ ದಿನ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಅದರ ಜೊತೆಗೆ ರಣ್​​ಬೀರ್ ಕಪೂರ್-ಯಶ್ ನಟನೆಯ ‘ರಾಮಾಯಣ’ ಸಿನಿಮಾನಲ್ಲಿ ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಯಾದಗಿರಿ: ಗಲ್ಫ್​ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನಲೆ ಅಕ್ಕಿ ರಫ್ತುಗೂ ಬಿತ್ತು ಬ್ರೇಕ್​​: ಉದ್ಯಮಿಗಳು ಕಂಗಾಲು

ಯಾದಗಿರಿ, ಮಾರ್ಚ್​​ 14: ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಗಲ್ಫ್​ ರಾಷ್ಟ್ರಗಳ ಮೇಲಷ್ಟೇ ಅಲ್ಲ, ಯಾದಗಿರಿ (Yadagiri) ಜಿಲ್ಲೆಯ ವ್ಯಾಪಾರ ವಹಿವಾಟಿನ ಮೇಲೂ ಬೀರಲು ಆರಂಭಿಸಿದೆ. ಮೊಟ್ಟೆ ಉದ್ಯಮ, ಅಕ್ಕಿ ರಫ್ತು ಹಾಗೂ ಹೋಟೆಲ್ ಉದ್ಯಮಕ್ಕೂ ಯುದ್ಧದ ಎಫೆಕ್ಟ್ ತಟ್ಟಿದ್ದು, ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೊಟ್ಟೆ ದರ ಕುಸಿತ

ಯಾದಗಿರಿ ಜಿಲ್ಲೆಯಿಂದ ಗಲ್ಫ್​​ ರಾಷ್ಟ್ರಗಳಿಗೆ ಲಕ್ಷಾಂತರ ಮೊಟ್ಟೆಗಳನ್ನು ರಫ್ತು ಮಾಡಲಾಗುತ್ತಿತ್ತು. ಕತಾರ್, ಕುವೈತ್, ಸೌದಿ ಅರೇಬಿಯಾ ಹಾಗೂ ದುಬೈ ಸೇರಿದಂತೆ ಹಲವು ದೇಶಗಳಿಗೆ ವ್ಯಾಪಾರಸ್ಥರು ಕೋಳಿ ಫಾರ್ಮ್‌ಗಳಿಂದ ಮೊಟ್ಟೆ ಖರೀದಿಸಿ ವಿದೇಶಕ್ಕೆ ಕಳುಹಿಸುತ್ತಿದ್ದರು. ಆದರೆ ಯುದ್ಧದ ಪರಿಣಾಮ ರಫ್ತು ಸಂಪೂರ್ಣ ಬಂದ್ ಆಗಿರುವ ಹಿನ್ನೆಲೆ ಮೊಟ್ಟೆ ಮಾರುಕಟ್ಟೆಯಲ್ಲಿ ದರ ಕುಸಿತ ಕಂಡಿದೆ. ಮೊದಲು 6 ರೂಪಾಯಿಗೆ ಒಂದು ಮಾರಾಟವಾಗುತ್ತಿದ್ದ ಮೊಟ್ಟೆ ಈಗ ಕೇವಲ 4 ರೂಪಾಯಿಗೆ ಮಾರಾಟವಾಗುತ್ತಿದೆ. ಹೀಗಾಗಿ ವ್ಯಾಪಾರಸ್ಥರು ಸ್ಥಳೀಯ ಮಾರುಕಟ್ಟೆಯಲ್ಲೇ ಕಡಿಮೆ ದರಕ್ಕೆ ಮೊಟ್ಟೆ ಮಾರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಉತ್ತರ ಕರ್ನಾಟಕದ ಮೊಟ್ಟೆ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ; ಲಕ್ಷಾಂತರ ರೂ. ಮೌಲ್ಯದ ಮೊಟ್ಟೆಗಳು ಮಣ್ಣುಪಾಲು!

ಇನ್ನೊಂದೆಡೆ ಯುದ್ಧದ ಪರಿಣಾಮ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಕೂಡ ಎದುರಾಗಿದೆ. ಯಾದಗಿರಿ ಕೇಂದ್ರ ಬಸ್ ನಿಲ್ದಾಣದ ಪಕ್ಕದಲ್ಲಿರುವ ಗುರುಮೂರ್ತಿ ಖಾನಾವಳಿ ಸಿಲಿಂಡರ್ ಸಿಗದೆ ಬಂದ್ ಆಗಿದೆ. ಕಳೆದ ಎರಡು ದಿನಗಳಿಂದ ಖಾನಾವಳಿಯ ಶೆಟರ್ ಹಾಕಿದ್ದು, ದಿನಕ್ಕೆ ಸುಮಾರು 300ಕ್ಕೂ ಹೆಚ್ಚು ಜನ ಊಟ ಮಾಡುತ್ತಿದ್ದ ಹೋಟೆಲ್ ಈಗ ಸ್ಥಗಿತಗೊಂಡಿದೆ. ದುಪ್ಪಟ್ಟು ಹಣ ಕೊಡ್ತೀವಿ ಅಂದ್ರೂ ಸಿಲಿಂಡರ್ ಸಿಗ್ತಿಲ್ಲ ಎಂದು ಮಾಲೀಕರು ಹೇಳುತ್ತಿದ್ದಾರೆ. ಇದರ ಪರಿಣಾಮ ಕೆಲಸ ಮಾಡುವ ಕಾರ್ಮಿಕರಿಗೆ ಸಂಬಳ ನೀಡುವುದೂ ಕಷ್ಟವಾಗಿದೆ ಎನ್ನುತ್ತಿದ್ದಾರೆ.

ಅಕ್ಕಿ ರಫ್ತುಗೂ ಬಿತ್ತು ಬ್ರೇಕ್

ಇನ್ನೊಂದು ಕಡೆ ಯುದ್ಧದ ಪರಿಣಾಮ ಯಾದಗಿರಿಯ ಅಕ್ಕಿ ಉದ್ಯಮಕ್ಕೂ ತಟ್ಟಿದೆ. ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿದ್ದ ಸೋನಾ ಮಸೂರಿ ಅಕ್ಕಿ ವ್ಯಾಪಾರ ಸ್ಥಗಿತಗೊಂಡ ಹಿನ್ನೆಲೆ ಜಿಲ್ಲೆಯ ಹಲವು ರೈಸ್ ಮಿಲ್‌ಗಳು ಬಂದ್ ಆಗಿವೆ. ಜಿಲ್ಲೆಯಲ್ಲಿ ಒಟ್ಟು 28 ರೈಸ್ ಮಿಲ್‌ಗಳಿಂದ ಪ್ರತಿದಿನ 3 ಸಾವಿರಕ್ಕೂ ಹೆಚ್ಚು ಕ್ವಿಂಟಲ್ ಅಕ್ಕಿ ಗುಜರಾತ್ ಹಾಗೂ ಮಹಾರಾಷ್ಟ್ರ ಮೂಲಕ ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತಿತ್ತು. ಆದರೆ ಕಳೆದ ನಾಲ್ಕೈದು ದಿನಗಳಿಂದ ಮಿಲ್‌ಗಳು ಬಂದ್ ಆಗಿದ್ದು, ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೊತೆಗೆ ವಿದ್ಯುತ್ ಬಿಲ್, ಬ್ಯಾಂಕ್ ಸಾಲ ಹಾಗೂ ರೈತರಿಗೆ ನೀಡಬೇಕಾದ ಹಣ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಿವೆ.

ಇದನ್ನೂ ಓದಿ: Iran-Israel War: ಯುದ್ಧದ ಪರಿಣಾಮ ಯಾದಗಿರಿಯ 28 ರೈಸ್ ಮಿಲ್‌ಗಳಿಗೆ ಭಾರೀ ಹೊಡೆತ!

ಒಟ್ಟಿನಲ್ಲಿ ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ದೂರದ ಯಾದಗಿರಿ ಜಿಲ್ಲೆಯ ವ್ಯಾಪಾರ ವಹಿವಾಟಿನ ಮೇಲೂ ದೊಡ್ಡ ಹೊಡೆತ ಬಿದ್ದಿದ್ದು, ಮೊಟ್ಟೆ ಉದ್ಯಮ, ಹೋಟೆಲ್ ಉದ್ಯಮ ಹಾಗೂ ಅಕ್ಕಿ ರಫ್ತು ಕ್ಷೇತ್ರದಲ್ಲಿ ಸಂಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಉದ್ಯಮಿಗಳು ಮತ್ತಷ್ಟು ನಷ್ಟ ಅನುಭವಿಸುವ ಭೀತಿ ಎದುರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಇಸ್ರೇಲ್ ಪ್ರಧಾನಿ ನೆತನ್ಯಾಹು ಸತ್ತಿದ್ದಾರಾ, ಬದುಕಿದ್ದಾರಾ? ಅನುಮಾನ ಹುಟ್ಟಿಸಿದೆ ಆ 6 ಬೆರಳು!

ನವದೆಹಲಿ, ಮಾರ್ಚ್ 14: ಇರಾನ್- ಇಸ್ರೇಲ್ ನಡುವೆ ದಾಳಿ-ಪ್ರತಿದಾಳಿಗಳು ನಡೆಯುತ್ತಲೇ ಇವೆ. ನಿನ್ನೆ (ಮಾರ್ಚ್ 13) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಮಾತನಾಡಿರುವ ವಿಡಿಯೋವೊಂದು ಅವರು ಸುರಕ್ಷಿತವಾಗಿದ್ದಾರಾ ಎಂಬ ಬಗ್ಗೆ ಅನುಮಾನ ಹುಟ್ಟುಹಾಕಿದೆ. ನೆತನ್ಯಾಹು ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಲಾಗಿತ್ತು. ಹಲವು ದಿನಗಳಿಂದ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಇದ್ದಕ್ಕಿದ್ದಂತೆ ವಿಡಿಯೋ ಸಂದೇಶ ಹರಿಬಿಟ್ಟಿದ್ದು ಒಂದು ಅನುಮಾನವಾದರೆ ಆ ವಿಡಿಯೋದಲ್ಲಿ ನೆತನ್ಯಾಹು ಕೈಯಲ್ಲಿ 6 ಬೆರಳಿರುವುದು ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಈ ವಿಡಿಯೋ ಎಐ (ಕೃತಕ ಬುದ್ಧಿಮತ್ತೆ)ಯದ್ದು ಎಂಬ ಅನುಮಾನವನ್ನು ನೆಟ್ಟಿಗರು ವ್ಯಕ್ತಪಡಿಸಿದ್ದಾರೆ.

ಆ ವಿಡಿಯೋದಲ್ಲಿ ನೆತನ್ಯಾಹು ಅವರ ಒಂದು ಕೈಯಲ್ಲಿ 6 ಬೆರಳುಗಳು ಇರುವಂತೆ ಕಾಣುತ್ತಿದೆ. ಹೀಗಾಗಿ, ಇದು ಎಐನಿಂದ ಎಡಿಟ್ ಮಾಡಲಾದ ವಿಡಿಯೋ ಎಂಬ ಅನುಮಾನವನ್ನು ಹುಟ್ಟುಹಾಕಿತು. ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ನೆತನ್ಯಾಹು ಶುಕ್ರವಾರ ವಿಡಿಯೋವನ್ನು ಹಂಚಿಕೊಂಡಿದ್ದರು. ಇಸ್ರೇಲ್ ಮತ್ತು ಇರಾನ್ ಯುದ್ಧದ ಕುರಿತು ಅವರು ಹೇಳಿಕೆಗಳನ್ನು ನೀಡಿದ್ದರು. ಫೆಬ್ರವರಿ 28ರಂದು ಸಂಘರ್ಷದ ಮೊದಲ ದಿನ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲೊ ಅಲಿ ಖಮೇನಿಯನ್ನು ದಾಳಿಯಲ್ಲಿ ಕೊಲ್ಲಲಾಗಿತ್ತು.

ಇದನ್ನೂ ಓದಿ: ಇರಾನ್-ಇಸ್ರೇಲ್ ಯುದ್ಧ ಯಾವಾಗ ಕೊನೆಗೊಳ್ಳುತ್ತೆ? ಟ್ರಂಪ್ ಹೇಳಿದ್ದೇನು?

ನೆತನ್ಯಾಹು ಅವರ ವಿಡಿಯೋದಲ್ಲಿ ಇಸ್ರೇಲ್ ಪ್ರಧಾನಿಯ ಬಲಗೈಯಲ್ಲಿ 6 ಬೆರಳುಗಳನ್ನು ಹೊಂದಿರುವಂತೆ ತೋರುತ್ತಿದೆ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ‘ಕ್ಲಾಸಿಕ್ AI ಫಿಂಗರ್ ಗ್ಲಿಚ್’, ‘ಅವರ ಕೈಯನ್ನು ಹತ್ತಿರದಿಂದ ನೋಡಿ’ ಎಂಬಂತಹ ಕ್ಯಾಪ್ಷನ್ ಹಾಕಿರುವ ನೆಟ್ಟಿಗರು ಅದು AI ಎಡಿಟೆಡ್ ವಿಡಿಯೋ ಎಂಬ ಅನುಮಾನ ಹೊರಹಾಕಿದ್ದಾರೆ. ಇನ್ನೂ ಕೆಲವರು ಈ ಯುದ್ಧದಲ್ಲಿ ನೆತನ್ಯಾಹು ಸತ್ತಿದ್ದಾರೆ ಎಂದು ಕೂಡ ಕಮೆಂಟ್ ಹಾಕಿದ್ದಾರೆ.

ಇನ್ನು ಕೆಲವರು ಇದು ಆಪ್ಟಿಕಲ್ ಭ್ರಮೆ ಎಂದು ಕಮೆಂಟ್ ಹಾಕುವ ಮೂಲಕ ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಸೋಷಿಯಲ್ ಮೀಡಿಯಾದಲ್ಲಿ ನೆತನ್ಯಾಹು ಅವರ ಈ ವಿಡಿಯೋ ಬಗ್ಗೆ ಚರ್ಚೆಗಳು ಮುಂದುವರೆದಿವೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ, ರಿಷ್ಮಾ ನಾಣಯ್ಯ ನಟಿಸಿರುವ ‘ಕೆಡಿ’ ಸಿನಿಮಾದ ಹಾಡು ಇಂದು (ಮಾರ್ಚ್ 14) ಅದ್ಧೂರಿಯಾಗಿ ಬಿಡುಗಡೆ ಆಗಿದೆ. ನೋರಾ ಫತೇಹಿ ಸಖತ್ ಆಗಿ ಡ್ಯಾನ್ಸ್ ಮಾಡಿರುವ ‘ಸೆರಗು ಸರ್ಸು’ ಹಾಡು ಇಂದು ಬಿಡುಗಡೆ ಆಗಿದೆ. ಹಾಡಿನ ಬಿಡುಗಡೆ ಅದ್ಧೂರಿಯಾಗಿ ನಡೆದಿದ್ದು, ಸಿನಿಮಾದ ನಟರು, ಪ್ರಮುಖ ತಂತ್ರಜ್ಞರು ಭಾಗಿ ಆಗಿದ್ದರು. ನಟಿ ರಕ್ಷಿತಾ ಮಾತನಾಡಿ, ತಮ್ಮ ಸಿನಿಮಾ ಪಯಣ ನೆನಪಿಸಿಕೊಂಡ ಜೊತೆಗೆ ಅರ್ಜುನ್ ಜನ್ಯ, ಇನ್ನೂ ಕೆಲವರ ಸಹಕಾರ ನೆನಪು ಮಾಡಿಕೊಂಡರು. ನೋರಾ ಫತೇಹಿಯನ್ನು ಸಹ ರಕ್ಷಿತಾ ಸಖತ್ ಆಗಿ ಕೊಂಡಾಡಿದ್ದಾರೆ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

PAK vs BAN: ರನೌಟ್ ವಿವಾದ; ಸಲ್ಮಾನ್ ಆಘಾ ವಿರುದ್ಧ ಕಠಿಣ ಕ್ರಮ ಜರುಗಿಸಿದ ಐಸಿಸಿ

ಢಾಕಾದಲ್ಲಿ ನಡೆದ ಬಾಂಗ್ಲಾದೇಶ ಹಾಗೂ ಪಾಕಿಸ್ತಾನ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸಿತು. ಈ ಪಂದ್ಯ ಈ ಫಲಿತಾಂಶದಿಂದ ಸದ್ದು ಮಾಡುವುದಕ್ಕಿಂತ ಪಂದ್ಯದ ಸಮಯದಲ್ಲಿ ನಡೆದ ರನೌಟ್​ನಿಂದ ಕ್ರಿಕೆಟ್​ ಲೋಕದಲ್ಲಿ ಸಂಚಲನ ಸೃಷ್ಟಿಸಿತು. ಬಾಂಗ್ಲಾದೇಶ ಬೌಲರ್​ಗೆ ಸಹಾಯ ಮಾಡಲು ಹೋಗಿ ರನೌಟ್​ಗೆ ಬಲಿಯಾಗಿದ್ದ ಪಾಕಿಸ್ತಾನ ತಂಡದ ಸಲ್ಮಾನ್ ಅಲಿ ಆಘಾ (Salman Agha ) ಮೈದಾನದಲ್ಲಿಯೇ ತಮ್ಮ ಆಕ್ರೋಶ ಹೊರಹಾಕಿದ್ದರು. ಜೊತೆಗೆ ತಮ್ಮ ಹೆಲ್ಮೆಟ್, ಬ್ಯಾಟ್ ಮತ್ತು ಕೈ ಗ್ಲೌಸ್​ಗಳನ್ನು ನೆಲಕ್ಕೆ ಬಿಸಾಡಿ ಐಸಿಸಿ (ICC) ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದರು. ಹೀಗಾಗಿ ಸಲ್ಮಾನ್ ಆಘಾಗೆ ಐಸಿಸಿಯಿಂದ ಶಿಕ್ಷೆ ಖಚಿತವಾಗಿತ್ತು. ಅದರಂತೆ ಪಂದ್ಯ ಮುಗಿದ ಒಂದು ದಿನದ ಬಳಿಕ ಐಸಿಸಿ ಸಲ್ಮಾನ್ ಆಘಾಕ್ಕೆ ಶಿಕ್ಷೆ ವಿಧಿಸಿದೆ.

ಆಘಾಗೆ 1 ಡಿಮೆರಿಂಟ್ ಅಂಕ

ಸಲ್ಮಾನ್ ಆಘಾ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.2 ಅನ್ನು ಉಲ್ಲಂಘಿಸಿರುವುದು ಖಚಿತವಾಗಿದ್ದು, ಪಂದ್ಯದ ಮರುದಿನ, ಐಸಿಸಿ ಸಲ್ಮಾನ್ ಆಘಾಗೆ ಶಿಕ್ಷೆ ವಿಧಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಐಸಿಸಿ, ಪಂದ್ಯದ ನಂತರ ಸಲ್ಮಾನ್ ಆಘಾ, ಮ್ಯಾಚ್ ರೆಫ್ರಿ ನೀಮೂರ್ ರಶೀದ್ ರಾಹುಲ್ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದು, ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಆದಾಗ್ಯೂ, ಐಸಿಸಿ ಆಘಾ ಅವರ ಪಂದ್ಯ ಶುಲ್ಕವನ್ನು ಕಡಿತಗೊಳಿಸದಿರುವುದು ಅಚ್ಚರಿಯ ಸಂಗತಿಯಾಗಿದೆ. ವಾಸ್ತವವಾಗಿ ಈ ರೀತಿಯ ನಿಯಮ ಉಲ್ಲಂಘಿಸುವವರಿಗೆ ಡಿಮೆರಿಂಟ್ ಅಂಕವನ್ನು ನೀಡುವುದರ ಜೊತೆಗೆ ಇಂತಿಷ್ಟು ಪಂದ್ಯ ಶುಲ್ಕವನ್ನು ಸಹ ದಂಡವಾಗಿ ಕಟ್ಟಿಸಲಾಗುತ್ತದೆ. ಆದರೆ ಆಘಾ ವಿಚಾರದಲ್ಲಿ ಅದು ಸಂಭವಿಸಿಲ್ಲ. ಹೀಗಾಗಿ ಆಘಾ ದಂಡದ ಪಾರಾಗಿ ನಿಟ್ಟುಸಿರು ಬಿಟ್ಟಿದ್ದಾರೆ.

ಏನಿದು ವಿವಾದ?

ವಾಸ್ತವವಾಗಿ ಎರಡನೇ ಏಕದಿನ ಪಂದ್ಯದ ಪಾಕಿಸ್ತಾನದ ಇನ್ನಿಂಗ್ಸ್‌ನ 39 ನೇ ಓವರ್‌ ವಿಚಿತ್ರ ರನೌಟ್​ಗೆ ಸಾಕ್ಷಿಯಾಯಿತು​. ಬಾಂಗ್ಲಾದೇಶದ ಬೌಲರ್ ಮೆಹದಿ ಹಸನ್ ಎಸೆದ ಈ ಓವರ್‌ನ ನಾಲ್ಕನೇ ಚೆಂಡನ್ನು ರಿಜ್ವಾನ್ ನೇರವಾಗಿ ಬೌಲರ್ ಕಡೆಗೆ ಆಡಿದರು. ಇತ್ತ ನಾನ್-ಸ್ಟ್ರೈಕರ್ ತುದಿಯಲ್ಲಿ ನಿಂತಿದ್ದ ಸಲ್ಮಾನ್ ಆಘಾ ರನ್​ಗಾಗಿ ತಮ್ಮ ಕ್ರೀಸ್‌ನಿಂದ ಹೊರಬಂದರಾದರೂ ಅಲ್ಲಿ ರನ್ ಇಲ್ಲದಿರುವುದನ್ನು ಗಮನಿಸಿ ಅಲ್ಲಿಯೇ ನಿಂತರು. ಅಷ್ಟರಲ್ಲಿ ರಿಜ್ವಾನ್ ಬಾರಿಸಿದ ಚೆಂಡು ಕೂಡ ಆಘಾ ಕಡೆಗೆ ಬಂತು. ಹೀಗಾಗಿ ಆಘಾ ಚೆಂಡನ್ನು ಹಿಡಿದು ಬೌಲರ್​ ಮೆಹದಿ ಹಸನ್​ಗೆ ರವಾನಿಸಲು ಪ್ರಯತ್ನಿಸಿದರು.

ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಟೂರ್ನಮೆಂಟ್ ತಂಡ ಪ್ರಕಟಿಸಿದ ಐಸಿಸಿ

ಈ ಹಂತದಲ್ಲಿ ಚಾಣಾಕ್ಷತೆ ತೋರಿದ ಮೆಹದಿ ಹಸನ್ ಚೆಂಡನ್ನು ಹಿಡಿದು, ನೇರವಾಗಿ ಸ್ಟಂಪ್​ಗೆ ಎಸೆದರು. ಇದೆಲ್ಲ ನಡೆಯುವಾಗ ಕ್ರೀಸ್​ನಿಂದ ಹೊರಗೆ ನಿಂತಿದ್ದ ಆಘಾ, ಕ್ರೀಸ್ ಒಳಗೆ ಬರುವ ಪ್ರಯತ್ನವನ್ನು ಮಾಡಲಿಲ್ಲ. ಹೀಗಾಗಿ ಚೆಂಡನ್ನು ಸ್ಟಂಪ್​ಗೆ ಎಸೆದ ಕೂಡಲೇ ಮೆಹದಿ ಹಸನ್​ ಔಟ್​ಗಾಗಿ ಅಂಪೈರ್ ಬಳಿ ಮನವಿ ಮಾಡಲಾರಂಬಿಸಿದರು. ಇದನ್ನು ನೋಡಿ ಕಕ್ಕಾಬಿಕ್ಕಿಯಾದ ಆಘಾ, ಹಸನ್ ಜೊತೆಗೆ ವಾದಿಸಲು ಪ್ರಾರಂಭಿಸಿದರು. ಇತ್ತ ಫಿಲ್ಡ್ ಅಂಪೈರ್ ಮೂರನೇ ಅಂಪೈರ್​ ಬಳಿ ಮರುಪರಿಶೀಲನೆಗೆ ಮನವಿ ಮಾಡಿದರು. ಎಲ್ಲವನ್ನು ಕುಲಂಕುಶವಾಗಿ ಪರಿಶೀಲಿಸಿದ ಅಂಪೈರ್, ಸಲ್ಮಾನ್ ಆಘಾ ಔಟೆಂದು ತೀರ್ಪು ನೀಡಿದರು. ಇದರಿಂದ ಇನ್ನಷ್ಟು ಕೆರಳಿದ ಆಘಾ, ತಮ್ಮ ಹೆಲ್ಮೆಟ್ ಮತ್ತು ಕೈಗವಸುಗಳನ್ನು ತೆಗೆದು ನೆಲದ ಮೇಲೆ ಎಸೆದು ಆಕ್ರೋಶ ಹೊರಹಾಕಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಕೊಪ್ಪಳ, ಮಾರ್ಚ್​​ 14: ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದ ಮೂರು ಜೋಡಿಗಳು ಮುನಿಸು ಮರೆತು ನ್ಯಾಯಾಲಯದಲ್ಲಿ ಮತ್ತೆ ಒಂದಾದ ಘಟನೆ ಗಂಗಾವತಿ ಒಂದನೇ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಲೋಕ​ ಅದಾಲತ್​​ನಲ್ಲಿ ನಡೆದಿದೆ. ಒಂದಾದ ಜೋಡಿಗಳಿಗೆ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್, ಗುಂಡಪ್ಪ ಬಸವಣ್ಣೆಪ್ಪ ಹಳ್ಳಾಕಾಯಿ, ನಾಗೇಶ ಪಾಟೀಲ್ ಮೇಘಾ ಸೋಮಣ್ಣವರ ಸಮ್ಮುಖದಲ್ಲಿ ಮರು ಮದುವೆ ಮಾಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version