Headlines

ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ – Kannada News | When is India’s next match? Indian cricket team’ Schedule

ಭಾರತ ಮತ್ತು ಝಿಂಬಾಬ್ವೆ ನಡುವಣ ಸರಣಿ ಮುಕ್ತಾಯಗೊಂಡಿದೆ. ಮೂರು ಮ್ಯಾಚ್​ಗಳ ಈ ಸರಣಿಯನ್ನು ಟೀಮ್ ಇಂಡಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಭಾರತಕ್ಕೆ ಮರಳಲಿದ್ದು, ಮುಂದಿನ ತಿಂಗಳಲ್ಲಿ ಟೆಸ್ಟ್ ಸರಣಿ ಆಡಲಿದೆ. ಇದರ ಬೆನ್ನಲ್ಲೇ ಏಷ್ಯನ್ ಗೇಮ್ಸ್​ನಲ್ಲೂ ಕಣಕ್ಕಿಳಿಯಲಿದೆ. ಹಾಗಿದ್ರೆ ಭಾರತ ತಂಡದ ಮುಂದಿರುವ ಸರಣಿಗಳಾವುವು ಎಂದು ನೋಡುವುದಾದರೆ… ಭಾರತ ತಂಡದ ಶ್ರೀಲಂಕಾ ಪ್ರವಾಸ (ಆಗಸ್ಟ್ 2026): ಭಾರತ ತಂಡವು ಆಗಸ್ಟ್‌ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು…

Read More

Gold Rate: ಚಿನ್ನದ ಬೆಲೆ ಇವತ್ತೂ ಇಳಿಕೆ; ಗ್ರಾಮ್​ಗೆ 75 ರೂ ಅಗ್ಗ

ನವದೆಹಲಿ, ಜೂನ್ 1: ವಾರಾಂತ್ಯದಲ್ಲಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಸೋಮವಾರವೂ ಮುಂದುವರಿದಿದೆ. ಇಂದು ಬಂಗಾರದ ದರ ಗ್ರಾಮ್​ಗೆ 75 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದರೆ, ಇನ್ನೂ ಕೆಲವೆಡೆ ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಎರಡು ವಾರಗಳಿಂದ ಬಹಳ ಸ್ಥಿರವಾಗಿದೆ. ಇವತ್ತು ಅದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ…

Read More

Raichur News: ರಾಯಚೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ತತ್ತರಿಸಿದ ಜನತೆ; 3 ವರ್ಷದ ಬಾಲಕಿಗೆ ಗಂಭೀರ ಗಾಯ! – Kannada News | Raichur Stray Dog Attack: 3 Year Old Girl Injured in Manvi

ರಾಯಚೂರು, ಜುಲೈ 22: ಜಿಲ್ಲೆಯಲ್ಲಿ ಬೀದಿ ನಾಯಿಗಳ (Street Dogs) ಸರಣಿ ದಾಳಿಗೆ ಜನತೆ ಬೆಚ್ಚಿಬಿದ್ದಿದ್ದಾರೆ. ಮೊನ್ನೆಯಷ್ಟೇ ರಾಯಚೂರಿನಲ್ಲಿ ಒಂದೂವರೆ ವರ್ಷದ ಮಗು ನಾಯಿ ದಾಳಿಗೆ ಬಲಿಯಾಗಿತ್ತು. ಹಾಗೂ ನಿನ್ನೆಯಷ್ಟೇ 4 ವರ್ಷದ ಬಾಲಕನೋರ್ವ ಜೀವನ್ಮರಣ ಹೋರಾಟ ನಡೆಸುತ್ತಿರುವ ನಡುವೆಯೇ ಜಿಲ್ಲೆಯಲ್ಲಿ ನಾಯಿಗಳ ಉಪಟಳ ಮುಂದುವರಿದಿದೆ. ಇದೀಗ ಮಾನ್ವಿ ಪಟ್ಟಣದಲ್ಲಿ 3 ವರ್ಷದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ಕ್ರೂರವಾಗಿ ದಾಳಿ ನಡೆಸಿದೆ. ಅದಲ್ಲದೆ ನಗರದಲ್ಲಿ ಮಾರುಕಟ್ಟೆಗೆ ಬಂದಿದ್ದ ವ್ಯಕ್ತಿಯೊಬ್ಬರೂ ನಾಯಿ ಕಡಿತಕ್ಕೊಳಗಾಗಿದ್ದಾರೆ. 3 ವರ್ಷದ ಬಾಲಕಿಯ…

Read More

Daily Devotional: ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ಸನಾತನ ಸಂಪ್ರದಾಯದಲ್ಲಿ, ಹೆಣ್ಣುಮಕ್ಕಳಂತೆ ಗಂಡು ಮಕ್ಕಳಿಗೂ ಕಿವಿ ಚುಚ್ಚಿಸುವ ಪದ್ಧತಿ ಪ್ರಾಚೀನ ಕಾಲದಿಂದಲೂ ರೂಢಿಯಲ್ಲಿದೆ. ಇದನ್ನು ಕರ್ಣವೇದ ಸಂಸ್ಕಾರ ಎಂದು ಕರೆಯಲಾಗುತ್ತದೆ. ಇದು ಕೇವಲ ಅಲಂಕಾರ ಅಥವಾ ಫ್ಯಾಷನ್ ಆಗಿರದೆ, ಅನೇಕ ಆಧ್ಯಾತ್ಮಿಕ, ವೈಜ್ಞಾನಿಕ ಮತ್ತು ಶೈಕ್ಷಣಿಕ ಪ್ರಯೋಜನಗಳನ್ನು ಹೊಂದಿದೆ. ಸಾಮಾನ್ಯವಾಗಿ ಉಪನಯನ ಸಮಯದಲ್ಲಿ ಅಥವಾ 21 ವರ್ಷದ ಒಳಗಿನ ಮಕ್ಕಳಿಗೆ ಕಿವಿ ಚುಚ್ಚಿಸುವುದು…

Read More

ಹಂಪಿ ಉತ್ಸವದಲ್ಲಿ ಅವಘಡ: ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ – Kannada News | Hampi Utsav Inauguration: Fire Breaks Out During CM Puja, Quick Action Saves Day

ಹೊಸಪೇಟೆ ಫೆ.13: ವಿಶ್ವವಿಖ್ಯಾತ ಹಂಪಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾರಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆಯ ಮೇಲೆ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲೇ ಪಟಾಕಿ ಕಿಡಿ ತಾಗಿ ವೇದಿಕೆಯ ಬಲಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಅದ್ಧೂರಿ ‘ಹಂಪಿ ಉತ್ಸವ’ಕ್ಕೆ ಚಾಲನೆ ನೀಡಲಾಗುತ್ತಿತ್ತು. ಮುಖ್ಯ ವೇದಿಕೆಯ ಮೇಲೆ ಮುಖ್ಯಮಂತ್ರಿಗಳು ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಉತ್ಸವಕ್ಕೆ ಚಾಲನೆ ನೀಡುತ್ತಿದ್ದರು. ಈ ವೇಳೆ ಸಿಡಿಸಿದ ಪಟಾಕಿಯ ಕಿಡಿಯೊಂದು ವೇದಿಕೆಯ…

Read More

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (Iran apology missile damage) ಎಂದಿದ್ದಾರೆ. ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು…

Read More

‘ಚಾರ್ಲಿ ಸಿನಿಮಾ ನನಗೆ ತುಂಬಾ ಇಷ್ಟ’; ಮನಬಿಚ್ಚಿ ಮಾತನಾಡಿದ ಪಾರ್ವತಿ

ನಟಿ ಪಾರ್ವತಿ ಅವರು ಇಂಟರ್ವ್ಯೂ ಒಂದರಲ್ಲಿ ಮಾತನಾಡುತ್ತಾ, ತಮ್ಮ ಸಿನಿಮಾಗಳಲ್ಲೇ ತಮಗೆ ಅತ್ಯಂತ ಹತ್ತಿರವಾದ ಕ್ಯಾರೆಕ್ಟರ್ ಎಂದರೆ ಅದು ‘ಚಾರ್ಲಿ’ ಚಿತ್ರದ ಟೆಸ್ಸಾ ಎಂದು ಹೇಳಿದ್ದಾರೆ. ‘ಒಂದು ವಾರದ ಮಟ್ಟಿಗೆ ನಿಮ್ಮ ಸಿನಿಮಾದ ಯಾವ ಪಾತ್ರದ ಬಟ್ಟೆಗಳ ಜೊತೆ ನೀವು ಅದಲು-ಬದಲು ಮಾಡಿಕೊಳ್ಳಲು ಇಷ್ಟಪಡುತ್ತೀರಿ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ತಕ್ಷಣವೇ ಟೆಸ್ಸಾ ಹೆಸರನ್ನು ತೆಗೆದುಕೊಂಡಿದ್ದಾರೆ. ಈ ಪಾತ್ರವು ತಮ್ಮದೇ ಆದ ಸ್ವಂತ ಸ್ಟೈಲ್ ಅನ್ನು ಕದ್ದಂತಿದೆ ಎಂದು ಅವರು ತಮಾಷೆಯಾಗಿ ಅಭಿಪ್ರಾಯಪಟ್ಟಿದ್ದಾರೆ. ಈ ಪಾತ್ರದ ಮೇಲಿನ…

Read More

ಶೃಂಗೇರಿ ಅಂಚೆ ಮತಗಳ ಟ್ಯಾಂಪರಿಂಗ್: ಚುನಾವಣಾಧಿಕಾರಿ ಗೌರವ್ ಕುಮಾರ್ ‌ಶೆಟ್ಟಿ ಹೇಳಿದ್ದೇನು? – Kannada News | Sringeri Postal Vote Recount: Returning Officer Clarifies Process Amidst Tampering Allegations

ಚಿಕ್ಕಮಗಳೂರು, ಮೇ 03: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಆದೇಶದಂತೆ ಪೂರ್ಣಗೊಂಡಿದ್ದು, ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಟ್ಯಾಂಪರಿಂಗ್ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಆ ಆರೋಪಗಳು ಕ್ರಿಮಿನಲ್ ಅಪರಾಧ ವ್ಯಾಪ್ತಿಗೆ ಬರುತ್ತಿದ್ದು, ರಿಟರ್ನಿಂಗ್ ಆಫೀಸರ್ ಆಗಿ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ವ್ಯಾಪ್ತಿ ಕೇವಲ ಅಂಚೆ ಮತಪತ್ರಗಳ ಮರು ಪರಿಶೀಲನೆ ಮತ್ತು ಮರು ಎಣಿಕೆಗೆ ಸೀಮಿತವಾಗಿದೆ ಎಂದು ತಿಳಿಸಿದ್ದಾರೆ….

Read More

Hindu Rituals: ಪೂಜೆ, ಹವನ ಅಥವಾ ಅಭಿಷೇಕಗಳಲ್ಲಿ ಹಸುವಿನ ಹಾಲು ಇರಲೇಬೇಕು ಏಕೆ ಗೊತ್ತಾ?

ಹಿಂದೂ ಧರ್ಮದ ಪೂಜೆ, ಹವನ ಮತ್ತು ಅಭಿಷೇಕಗಳಂತಹ ಧಾರ್ಮಿಕ ವಿಧಿಗಳಲ್ಲಿ ಹಾಲಿಗೆ ವಿಶೇಷ ಸ್ಥಾನವಿದೆ. ನೀರ ಅಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ಅನೇಕ ರೀತಿಯ ಅಭಿಷೇಕಗಳಲ್ಲಿ ಹಾಲು, ಅದರಲ್ಲೂ ಶುದ್ಧವಾದ ಹಸುವಿನ ಹಾಲನ್ನು ಹೆಚ್ಚು ಪ್ರಾಶಸ್ತ್ಯಪೂರ್ಣವೆಂದು ಪರಿಗಣಿಸಲಾಗುತ್ತದೆ. ನಮ್ಮ ಸಂಪ್ರದಾಯಗಳಲ್ಲಿ ಕ್ಷೀರವನ್ನು ಅಮೃತಕ್ಕೆ ಸಮಾನವೆಂದು ಬಣ್ಣಿಸಲಾಗಿದೆ. ಈ ಅಮೃತ ಸಮಾನವಾದ ಹಾಲಿನಲ್ಲಿ ಭಗವಂತನ ಶಕ್ತಿಗಳನ್ನು ಆಕರ್ಷಿಸುವ ಮತ್ತು ಗ್ರಹಿಸುವ ಶಕ್ತಿ ಅಡಗಿದೆ ಎಂಬುದು ಧಾರ್ಮಿಕ ನಂಬಿಕೆ. ಪ್ರತಿನಿತ್ಯದ ಪೂಜೆಯಲ್ಲಿ ಹಾಲಿನ ಅವಶ್ಯಕತೆ ಮತ್ತು ಆಧ್ಯಾತ್ಮಿಕ ಪ್ರಯೋಜನಗಳ ಬಗ್ಗೆ…

Read More

ಅಸ್ಸಾಂನಲ್ಲಿ ಸುಖೋಯ್ Su-30 MKI ಯುದ್ಧ ವಿಮಾನ ನಾಪತ್ತೆ; ಐಎಎಫ್​​ನಿಂದ ಶೋಧ ಕಾರ್ಯಾಚರಣೆ ಆರಂಭ – Kannada News | Sukhoi Su 30 MKI Fighter Jet goes missing in Assam IAF Launches Search Operation

ನವದೆಹಲಿ, ಮಾರ್ಚ್ 5: ಭಾರತೀಯ ವಾಯುಪಡೆಯ (ಐಎಎಫ್) ಸುಖೋಯ್ Su-30 MKI ಫೈಟರ್ ಜೆಟ್ ರಾಡಾರ್‌ನಿಂದ ಕಣ್ಮರೆಯಾಗಿದೆ. ಅದರ ಸ್ಥಳವನ್ನು ಕಂಡುಹಿಡಿಯಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಭಾರತೀಯ ಯುದ್ಧ ವಿಮಾನವಾದ Su-30 MKI ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ಹಾರಾಟ ನಡೆಸುತ್ತಿದ್ದಾಗ ಇಂದು ಸಂಜೆ 7 ಗಂಟೆ ಸುಮಾರಿಗೆ ನಾಪತ್ತೆಯಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಕೆಲವು ವರದಿಗಳು ವಿಮಾನ ಅಪಘಾತಕ್ಕೀಡಾಗಿದೆ ಮತ್ತು ಸ್ಥಳೀಯರು ದೊಡ್ಡ ಸ್ಫೋಟವನ್ನು ಸಹ ಕೇಳಿದ್ದಾರೆ ಎಂದು ಕೂಡ ತಿಳಿಸಿವೆ. ಭಾರತೀಯ ವಾಯುಪಡೆ ಅಥವಾ…

Read More