Headlines

ILT20: ಮತ್ತೊಮ್ಮೆ ಫೈನಲ್​ಗೇರಿದ MI ಪಡೆ – Kannada News | MI Emirates in to the final after sealing the game by 7 wickets

ಇಂಟರ್​ನ್ಯಾಷನಲ್ ಲೀಗ್ ಟಿ20 ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಬಲಿಷ್ಠ ಅಬುಧಾಬಿ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಎಂಐ ಎಮಿರೇಟ್ಸ್ ತಂಡವು ಫೈನಲ್​ಗೇರಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಂಐ ಎಮಿರೇಟ್ಸ್ ತಂಡದ ನಾಯಕ ಕೀರನ್ ಪೊಲಾರ್ಡ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಬುಧಾನಿ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 120 ರನ್​ಗಳು ಮಾತ್ರ. 121 ರನ್​​ಗಳ ಸುಲಭ ಗುರಿಯನ್ನು…

Read More

WPL 2026: ಹರ್ಮನ್- ಬ್ರಂಟ್ ಬ್ಯಾಟಿಂಗ್‌ ಸುನಾಮಿಗೆ ತತ್ತಿರಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | Mumbai Indians Secure First WPL 2026 Win: Dominant 50 Run Victory Over Delhi Capitals

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2026 ರ ಮೂರನೇ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು, ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ಕ್ರಿಕೆಟ್ ತಂಡವನ್ನು 50 ರನ್‌ಗಳಿಂದ ಸೋಲಿಸಿ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 195 ರನ್ ಗಳಿಸಿ, ದೆಹಲಿಗೆ ಗೆಲ್ಲಲು 196 ರನ್‌ಗಳ ಗುರಿಯನ್ನು ನೀಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ದೆಹಲಿ 19 ಓವರ್‌ಗಳಲ್ಲಿ 145 ರನ್‌ಗಳಿಗೆ ಆಲೌಟ್…

Read More

ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಟೀಂ ಇಂಡಿಯಾದಲ್ಲಿ ಬದಲಾವಣೆಯ ಗಾಳಿ

2026 ರ ಟಿ20 ವಿಶ್ವಕಪ್ (T20 World Cup) ಗೆದ್ದ ಟೀಂ ಇಂಡಿಯಾಗೆ (Team India) ಬಿಸಿಸಿಐನಿಂದ ಭರ್ಜರಿ ಬಹುಮಾನ ಘೋಷಣೆಯಾಗಿದೆ. ಐಸಿಸಿ ನೀಡಿದ 27.48 ಕೋಟಿ ರೂಗಳ ಜೊತೆಗೆ ಬಿಸಿಸಿಐನಿಂದ 131 ಕೋಟಿ ರೂ. ಬಹುಮಾನ ಸಿಕ್ಕಿದೆ. ಇದೆಲ್ಲದರ ನಡುವೆ ಟೀಂ ಇಂಡಿಯಾ ಪಾಳದಿಂದ ಮಹತ್ವದ ಸುದ್ದಿಯೊಂದು ಹೊರಬಿದ್ದಿದ್ದು, ತಂಡವನ್ನು ವಿಶ್ವ ಚಾಂಪಿಯನ್ ಮಾಡುವಲ್ಲಿ ಪ್ರಮಖ ಪಾತ್ರವಹಿಸಿದ ಫೀಲ್ಡಿಂಗ್ ಕೋಚ್ ಟಿ. ದಿಲೀಪ್ (T. Dilip) ಅವರನ್ನು ಈ ಹುದ್ದೆಯಿಂದ ತೆಗೆದುಹಾಕಬಹುದು ಎಂದು ಹೇಳಲಾಗಲುತ್ತಿದೆ. 2021…

Read More

ಇರಾನ್​​​-ಇಸ್ರೇಲ್​​​ ಯುದ್ಧ: ಯುದ್ಧಭೂಮಿಯಿಂದ ಕನ್ನಡಿಗ ಹೇಳಿದ್ದಿಷ್ಟು

ಬೆಂಗಳೂರು, ಫೆಬ್ರವರಿ 28: ಇಸ್ರೇಲ್ ಮತ್ತು ಇರಾನ್ ನಡುವೆ ಪ್ರಾದೇಶಿಕ ಉದ್ವಿಗ್ನತೆ ಉಲ್ಬಣಗೊಂಡಿದ್ದು, ಇರಾನ್ ಇಸ್ರೇಲ್ ವಿರುದ್ಧ ನಿರೀಕ್ಷಿತವಲ್ಲದ ಪ್ರತಿದಾಳಿ ನಡೆಸಿದೆ. ಟೆಲ್ ಅವಿವ್ ಸೇರಿದಂತೆ ಇಸ್ರೇಲ್‌ನ ಪ್ರಮುಖ ನಗರಗಳ ಮೇಲೆ ಸುಮಾರು 400 ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಸ್ರೇಲ್‌ನ ಹೋಲೋನ್‌ನಲ್ಲಿ ಕ್ಷಿಪಣಿಗಳು ಅಪ್ಪಳಿಸಿದ್ದು, ದಟ್ಟ ಹೊಗೆ ಆವರಿಸಿದೆ. ಇನ್ನು ಈ ಸಂಘರ್ಷ ಇಸ್ರೇಲ್‌ಗೆ ಮಾತ್ರ ಸೀಮಿತವಾಗಿಲ್ಲ. ಇರಾನ್ ಅರಬ್ ರಾಷ್ಟ್ರಗಳಾದ ಬಹರೈನ್, ಕತಾರ್, ಕುವೈತ್, ಸೌದಿ ಅರೇಬಿಯಾ, ಯುಎಇ, ಜೋರ್ಡಾನ್ ಮೇಲೂ ದಾಳಿ ನಡೆಸಿದೆ. ಬಹರೈನ್ ಮತ್ತು…

Read More

10 ಸಾವಿರಕ್ಕೆ ಅಬ್ಬಾ ಎಂದಿದ್ದ ಗಿಲ್ಲಿ ಈಗ 50 ಲಕ್ಷ ಗೆಲ್ಲುವ ಹೊಸ್ತಿಲಲ್ಲಿ – Kannada News | Once 10 thousand was a big amount for Gilli Nata now he is winning 50 lakh rs

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಇಂದು (ಜನವರಿ 18) ನಡೆಯಲಿದೆ. ಗಿಲ್ಲಿ ನಟ ಬಿಗ್​​ಬಾಸ್​ ಫಿನಾಲೆಯ ವಿನ್ನರ್ ಆಗಲಿದ್ದಾರೆ ಎಂದು ಅವರು ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ಪ್ರಾರಂಭ ಮಾಡಿದ್ದಾರೆ. ಗಿಲ್ಲಿಗೆ ರಾಜ್ಯದಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಗಿಲ್ಲಿಯ ಫೋಟೊವನ್ನು ಟ್ಯಾಟೂ ಹಾಕಿಸಿಕೊಳ್ಳುತ್ತಿದ್ದಾರೆ. ಒಂದು ಸಣ್ಣ ಹಳ್ಳಿಯ, ತೀರಾ ಸಾಮಾನ್ಯ ಕುಟುಂಬದಿಂದ ಬಂದ ಗಿಲ್ಲಿ, ಬಿಗ್​​ಬಾಸ್ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. ಇದೀಗ ಬಿಗ್​​ಬಾಸ್ ಗೆಲ್ಲುವ ನೆಚ್ಚಿನ ಸ್ಪರ್ಧಿ ಎನಿಸಿಕೊಂಡಿದ್ದಾರೆ. ಅಂದಹಾಗೆ ಗಿಲ್ಲಿ, ಜೀವನದ ಒಂದು…

Read More

ಐಸ್​​ ಕ್ರೀಂನಲ್ಲಿ ಸಿಕ್ತು ರಬ್ಬರ್​​: ಪ್ರತಿಷ್ಠಿತ ಹೋಟೆಲ್​​ಗೆ ನಗರಸಭೆಯಿಂದ ಭರ್ಜರಿ ದಂಡ

ನೆಲಮಂಗಲ, ಏಪ್ರಿಲ್​​ 12: ರಾಜ್ಯದ ಹಲವೆಡೆ ಶಾಖೆಗಳನ್ನು ಹೊಂದಿರುವ ಪ್ರತಿಷ್ಠಿತ ಉಡುಪಿ ಗ್ರಾಂಡ್ ಹೋಟೆಲ್​​ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೊಂಡಿಕೊಪ್ಪದಲ್ಲಿರುವ ಶಾಖೆಯಲ್ಲಿ ನೈರ್ಮಲ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿದೆ. ಧನಂಜಯ ಎಂಬ ಗ್ರಾಹಕರು ತಮ್ಮ ಊಟದ ನಂತರ ಆರ್ಡರ್ ಮಾಡಿದ ಐಸ್ ಕ್ರೀಮ್‌ನಲ್ಲಿ ರಬ್ಬರ್ ಬ್ಯಾಂಡ್ ಪತ್ತೆಯಾಗಿದೆ. ಐಸ್ ಕ್ರೀಮ್‌ನ ಮಧ್ಯಭಾಗದಲ್ಲಿ ರಬ್ಬರ್ ಬ್ಯಾಂಡ್ ಇದ್ದು, ಇದನ್ನು ಮಕ್ಕಳು ಸೇವಿಸಿದ್ದರೆ ಅಪಾಯವಾಗುವ ಸಾಧ್ಯತೆ ಇತ್ತು ಎಂದು ಗ್ರಾಹಕರು ಆತಂಕ ವ್ಯಕ್ತಪಡಿಸಿದ್ದಾರೆ. ಗ್ರಾಹಕರು ಈ ಬಗ್ಗೆ ಪ್ರಶ್ನಿಸಿದಾಗ…

Read More

ಮಾರ್ಕ್, ಡೆವಿಲ್ ರೀತಿಯೇ ಬುಕ್ ಮೈ ಶೋ ರೇಟಿಂಗ್ ನಿಷೇಧಿಸಿದ ಚಿರಂಜೀವಿ ಸಿನಿಮಾ – Kannada News | Audience rating and review not allowed to Mana Shankara Vara Prasad Garu on Book My Show

ಮೆಗಾ ಸ್ಟಾರ್ ಚಿರಂಜೀವಿ ನಟನೆಯ ‘ಮನ ಶಂಕರ ವರಪ್ರಸಾದ್ ಗಾರು’ (Mana Shankara Vara Prasad Garu) ಸಿನಿಮಾ ಜನವರಿ 12ರಂದು ಬಿಡುಗಡೆ ಆಗುತ್ತಿದೆ. ಸಂಕ್ರಾಂತಿ ಪ್ರಯುಕ್ತ ಈ ಚಿತ್ರವನ್ನು ನೋಡಲು ಚಿರಂಜೀವಿ (Chiranjeevi) ಫ್ಯಾನ್ಸ್ ಕಾತರದಿಂದ ಕಾದಿದ್ದಾರೆ. ಫಸ್ಟ್ ಡೇ ಫಸ್ಟ್ ಶೋ ಈ ಚಿತ್ರವನ್ನು ನೋಡಿ ತಮ್ಮ ಅನಿಸಿಕೆ ತಿಳಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ‘ಬುಕ್ ಮೈ ಶೋ’ (Book My Show) ಮೂಲಕ ಯಾರೂ ಕೂಡ ಈ ಸಿನಿಮಾಗೆ ರೇಟಿಂಗ್ ನೀಡುವಂತಿಲ್ಲ….

Read More

Hindu Rituals: ಆರತಿಯ ಸಮಯದಲ್ಲಿ ಕರ್ಪೂರ ಆರಿಹೋದರೆ ಅಶುಭವೇ? ಜ್ಯೋತಿಷ್ಯ ತಜ್ಞರು ಹೇಳುವುದೇನು? – Kannada News | Aarti’s Deep Spiritual Meaning: Hindu Rituals, Camphor, and Pooja Significance

ಪೂಜೆಯಲ್ಲಿ ಆರತಿಯ ಮಹತ್ವImage Credit source: Pinterest ಹಿಂದೂ ಧರ್ಮದ ಪ್ರತಿಯೊಂದು ಸಂಪ್ರದಾಯದ ಹಿಂದೆ ಒಂದು ವಿಶೇಷವಾದ ಅರ್ಥ ಮತ್ತು ಉದ್ದೇಶವಿರುತ್ತದೆ. ಪೂಜೆಯ ವಿವಿಧ ಹಂತಗಳಾದ ಧೂಪ, ದೀಪ ಮತ್ತು ನೈವೇದ್ಯಗಳ ನಂತರ ಸಮರ್ಪಿಸುವ ಆರತಿಯು ಅತ್ಯಂತ ಪ್ರಮುಖವಾದುದು. ಈ ಆರತಿಯ ಬೆಳಕು ಕೇವಲ ದೃಶ್ಯವಲ್ಲ, ಅದು ಭಕ್ತರ ಪಾಲಿಗೆ ದೇವರ ದಿವ್ಯ ಸಾನ್ನಿಧ್ಯದ ಸಂಕೇತವಾಗಿದೆ. ಆಧ್ಯಾತ್ಮಿಕ ನಂಬಿಕೆಯ ಪ್ರಕಾರ, ಆರತಿಯ ಜ್ಯೋತಿಯು ಮನುಷ್ಯನಲ್ಲಿರುವ ಅಜ್ಞಾನವೆಂಬ ಕತ್ತಲೆಯನ್ನು ಹೋಗಲಾಡಿಸಿ ಜ್ಞಾನದ ಬೆಳಕನ್ನು ಮೂಡಿಸುತ್ತದೆ. ಅಲ್ಲದೆ, ಇದು ಮನಸ್ಸಿನಲ್ಲಿರುವ…

Read More

ನಿಮಗೆ ಸಾಬರಷ್ಟೇ ಓಟ್ ಹಾಕಿದ್ದಾರಾ ಸಿದ್ದರಾಮಯ್ಯ? ಬಾಗಲಕೋಟೆಯಲ್ಲಿ ಗುಡುಗಿದ ಯತ್ನಾಳ್

ಬಾಗಲಕೋಟೆ, ಏಪ್ರಿಲ್ 3: ಬಾಗಲಕೋಟೆಯಲ್ಲಿ ಉಪಚುನಾವಣೆಯ ಕಣ ರಂಗೇರಿದ್ದು, ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ಹಿಂದೂಗಳೆಲ್ಲರೂ ಒಂದಾಗುವಂತೆ ಕರೆ ನೀಡಿದರು. ಶಿವಾಜಿ ಮಹಾರಾಜರು ಇಲ್ಲದಿದ್ದರೆ ಸನಾತನ ಧರ್ಮದ ರಕ್ಷಣೆ ಸಾಧ್ಯವಾಗುತ್ತಿರಲಿಲ್ಲ. ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೆ ಜೆಸಿಬಿ ಪ್ರಯೋಗ ಮಾಡಬೇಕು ಎಂದು ಗುಡುಗಿದರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ…

Read More

ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ – Kannada News | Karikaada Kannada movie releasing on 6 February 2025 in 5 languages

ಟೀಸರ್ ಮೂಲಕ ‘ಕರಿಕಾಡ’ ಸಿನಿಮಾ (Karikada Movie) ಗಮನ ಸೆಳೆದಿದೆ. ಈಗ ಈ ಸಿನಿಮಾ ಬಿಡುಗಡೆ ಸಿದ್ಧವಾಗಿದೆ. 2026ರ ಫೆಬ್ರವರಿ 6ಕ್ಕೆ ಸಿನಿಮಾ ತೆರೆಕಾಣಿಸಲು ಚಿತ್ರತಂಡ ರೆಡಿಯಾಗಿದೆ. ಪಂಚಭಾಷೆಯಲ್ಲಿ ಬಿಡುಗಡೆ ಆಗಲಿದೆ. ಇದೊಂದು ಅಡ್ವೆಂಚರಸ್ ಎಲಿಮೆಂಟ್ಸ್ ಹೊಂದಿರುವ ಸಿನಿಮಾ ಎಂದು ಚಿತ್ರತಂಡ ಹೇಳಿದೆ. ಟೀಸರ್ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾ ಮೇಲೆ ಭರವಸೆ ಹುಟ್ಟಿದೆ. ಆ್ಯಕ್ಷನ್, ಲವ್ ಸ್ಟೋರಿ, ಅದ್ದೂರಿ ಮೇಕಿಂಗ್, ಪ್ರತಿಭಾವಂತ ಕಲಾವಿದರ ಬಳಗ, ಹಿನ್ನೆಲೆ ಸಂಗೀತ ಸೇರಿದಂತೆ ಹಲವು ಅಂಶಗಳು ‘ಕರಿಕಾಡ’ (Karikada)…

Read More