ಬೈದಿದ್ದಕ್ಕೆ ಕ್ರಿಮಿನಾಶಕ ಸೇವಿಸಿ ಬಾಲಕ ಆತ್ಮಹತ್ಯೆ: ಹೆತ್ತವರು ಬುದ್ಧಿವಾದ ಹೇಳೋದೇ ತಪ್ಪಾ? – Kannada News | Hubballi: Son suicide after parents warn him excessive mobile phone use, urge focus on studies
ಹುಬ್ಬಳ್ಳಿ, ಡಿಸೆಂಬರ್ 19: ಮೊಬೈಲ್ (mobile) ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಮಗ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಅರುಣಗೌಡ ಮೃತ ಯುವಕ. ಮೃತ ಅರುಣಗೌಡ ಪ್ರಥಮ ಪಿಯುಸಿ ಓದುತ್ತಿದ್ದ. ಸದ್ಯ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು? ಅರುಣಗೌಡ ಪೋಷಕರು ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸಲು ಹೇಳಿದ್ದಾರೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ. ಬಳಿಕ…