Headlines

ಸರ್ಕಾರ ನೋಟ್ ಪ್ರಿಂಟ್ ಮಾಡಿ ಸಾಲ ತೀರಿಸಬಹುದಲ್ಲ? ಹೆಚ್ಚು ನೋಟ್ ಪ್ರಿಂಟ್ ಮಾಡಿದರೆ ಏನು ಅಪಾಯ? – Kannada News | Know what happens if government prints more money

ಯಾರನ್ನ ನೋಡಿದರೂ ಸಾಲ, ಎಲ್ಲಿ ನೋಡಿದರೂ ಬೆಲೆ ಏರಿಕೆ, ಇದು ದುಬಾರಿ ದುನಿಯಾ ಅನಿಸುತ್ತದೆ. ಸರ್ಕಾರ ಬೇಕಾದಷ್ಟು ನೋಟುಗಳನ್ನು ಮುದ್ರಿಸಿ ಅಗತ್ಯ ಇದ್ದವರಿಗೆ ಹಂಚಬಹುದಲ್ಲ, ಸರ್ಕಾರದ ಸಾಲವನ್ನೂ ತೀರಿಸಬಹುದಲ್ಲ ಎಂದು ಕೆಲವರಿಗಾದರೂ ಅನಿಸಿರಬಹುದು. ವಾಸ್ತವದಲ್ಲಿ, ಹಾಗೆ ಮಾಡಲು ಸಾಧ್ಯ ಇಲ್ಲ. ಒಂದೊಮ್ಮೆ ಹಾಗೆ ಮಾಡಿದರೆ ತನ್ನ ಕುತ್ತಿಗೆ ತಾನೇ ಕುಯ್ದುಕೊಂಡಂತೆ. ವೆನಿಜುವೆಲಾ, ಜಿಂಬಾಬ್ವೆ ಇತ್ಯಾದಿ ಕೆಲವಾರು ದೇಶಗಳು ಹೀಗೆ ಮಾಡಲು ಹೋಗಿ ಈಗಲೂ ಒದ್ದಾಡುತ್ತಿವೆ. ಸಾಲದ ಸುಳಿಗೆ ಸಿಲುಕಿರುವ ಪಾಕಿಸ್ತಾನ (Pakistan), ಶ್ರೀಲಂಕಾದಂತಹ ದೇಶಗಳು ಈ ದುಸ್ಸಾಹಸಕ್ಕೆ…

Read More

ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ – Kannada News | Surendra Dani Centenary: Hubballi Celebrates Kannada Journalism Icon’s Legacy

ಹುಬ್ಬಳ್ಳಿಯಲ್ಲಿ ಡಿ.27ರಂದು ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ಹುಬ್ಬಳ್ಳಿ, ಡಿಸೆಂಬರ್ 19: ಕನ್ನಡ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಟಿಯೇಸ್ಸಾರ್ ಪ್ರಶಸ್ತಿ ಪುರಸ್ಕೃತ ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಕಾರ್ಯಕ್ರಮ ಇದೇ ತಿಂಗಳು 27ರಂದು ಹುಬ್ಬಳ್ಳಿಯ (Hubli) ಸವಾಯಿ ಗಂಧರ್ವ ಹಾಲ್​ನಲ್ಲಿ ನಡೆಯಲಿದೆ.  ಸುರೇಂದ್ರ ದಾನಿ ಜನ್ಮಶತಮಾನೋತ್ಸವ ಸಮಿತಿ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯ ಅದ್ವೈತ ವಿದ್ಯಾಶ್ರಮದ ಶ್ರೀ ಪ್ರಣವಾನಂದ ತೀರ್ಥರು ಸಾನಿಧ್ಯ ವಹಿಸಲಿರುವ ಕಾರ್ಯಕ್ರಮ ಅಧ್ಯಕ್ಷತೆಯನ್ನು ಖ್ಯಾತ ವೈದ್ಯ…

Read More

ರೈತರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ: 1 ಲೀಟರ್ ಹಾಲಿಗೆ ಪ್ರೋತ್ಸಾಧನ 7 ರೂ.ಗೆ ಏರಿಕೆ, ಸಿದ್ದರಾಮಯ್ಯ ಘೋಷಣೆ – Kannada News | Good News for Farmers as CM Siddaramaiah Announces Hike in Milk Incentive to Rs 7 per Litre

ಬೆಳಗಾವಿ, ಡಿಸೆಂಬರ್ 19: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಹಿತದೃಷ್ಟಿಯಿಂದ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ನೀಡಿದರು. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ,…

Read More

ಆಟವಾಡುತ್ತಿದ್ದ ಬಾಲಕನ ಮೇಲೆ ಇದೆಂತಾ ವಿಕೃತಿ?: ವಿಡಿಯೋ ನೋಡಿದ್ರೆ ರಕ್ತ ಕುದಿಯುತ್ತೆ – Kannada News | Assault on Child in Tyagarajanagar, Bengaluru; Accused Arrested

ಬೆಂಗಳೂರು, ಡಿಸೆಂಬರ್​​ 19: ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಡಿ.14ರಂದು ನಡೆದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್​​ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ. ಈ ವೇಳೆ ಬಂದ ರಂಜನ್​​ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್​​ ರೀತಿ ರಂಜನ್​​ ಒದ್ದಿದ್ದ ಕಾರಣ ಬಾಲಕನಿಗೆ ತರಚಿದ ಗಾಯಗಳಾಗಿವೆ. ಬಾಲಕನನ್ನು ರಂಜನ್ ಒದೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ…

Read More

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್​ಗಿಲ್ಲ ರಿಲೀಫ್: ಹೇಬಿಯಸ್ ಕಾರ್ಪಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್ – Kannada News | No Relief for Actress Ranya Rao in Gold Smuggling Case as High Court Dismisses Habeas Corpus Plea

ಬೆಂಗಳೂರು, ಡಿಸೆಂಬರ್ 19: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ (Ranya Rao), ತರುಣ್ ರಾಜ್ ಹಾಗೂ ಸಾಹಿಲ್ ಜೈನ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಅಕ್ರಮ ಬಂಧನವಾಗಿದೆ ಎಂದು ಆರೋಪಿಸಿ ಬಿಡುಗಡೆ ಕೋರಿ ಮೂವರು ಆರೋಪಿಗಳು ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಹಾಗೂ ವಿಜಯ್ ಕುಮಾರ್ ಪಾಟೀಲ್ ಅವರನ್ನೊಳಗೊಂಡ ಪೀಠ, ಅರ್ಜಿದಾರರ ವಾದವನ್ನು ತಳ್ಳಿ ಹಾಕಿದೆ….

Read More

ಚೈತ್ರಾ ಕುಂದಾಪುರ ಕಣ್ಣೀರು ಫೇಕಾ? ಹೌದೆನ್ನಲು ಸಾಕ್ಷಿ ತಂದ ನೆಟ್ಟಿಗರು – Kannada News | Chaitra Kundapura’s Bigg Boss Emotional Drama: Sulli Tag and Viral Crying

ಚೈತ್ರಾ ಕುಂದಾಪುರ ಅವರು ಎರಡನೇ ಬಾರಿಗೆ ಬಿಗ್ ಬಾಸ್ ಮನೆ ಸೇರಿದ್ದಾರೆ. ಈ ಸೀಸನ್​ ಅಲ್ಲಿ ಅತಿಥಿಯಾಗಿ ದೊಡ್ಮನೆಗೆ ತೆರಳಿದ್ದ ಅವರು ನಂತರ ಸ್ಪರ್ಧಿ ಆದರು. ಈಗ ಅವರು ದೊಡ್ಮನೆಯಲ್ಲಿ ಉತ್ತಮವಾಗಿ ಆಟ ಆಡುತ್ತಿದ್ದಾರೆ. ಆದರೆ, ಈ ವಾರ ಅವರು ನಡೆದುಕೊಂಡ ರೀತಿ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋಗಳು ವೈರಲ್ ಆಗಿವೆ. ಕಳೆದ ಸೀಸನ್​ ಆಟವನ್ನೇ ಚೈತ್ರಾ ರಿಪೀಟ್ ಮಾಡುತ್ತಿದ್ದಾರೆ ಎಂದು ಅನೇಕರು ಹೇಳಿದ್ದಾರೆ. ಚೈತ್ರಾ ಕುಂದಾಪುರ ಅವರು ಕಳೆದ ಸೀಸನ್​ ಅಲ್ಲಿ ಅನೇಕ ಬಾರಿ…

Read More

Video: ಹೆಣ್ಣು ಮಗು ಹುಟ್ಟಿತ್ತೆಂದು ಖುಷಿಯಿಂದ ಆಸ್ಪತ್ರೆಯಲ್ಲೇ ಕುಣಿದಾಡಿದ ತಂದೆ – Kannada News | Father dances upon hearing news of baby girl’s arrival

ಪುಣ್ಯವಂತರಿಗೆ ಮಾತ್ರ ಹೆಣ್ಣು ಮಗು (girl baby) ಹುಟ್ಟೋದು. ಹೆಣ್ಣು ಮಕ್ಕಳನ್ನು ಪಡೆಯಲು ನೂರು ಜನ್ಮದ ಪುಣ್ಯ ಮಾಡಿರಬೇಕು, ಹೀಗೆ ನಾನಾ ರೀತಿಯ ಮಾತುಗಳನ್ನು ಹೇಳುವುದನ್ನು ನೀವು ಕೇಳಿರುತ್ತೀರಿ. ಹೀಗಾಗಿ ಮನೆಗೆ ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಮನೆ ಮಂದಿಯೆಲ್ಲಾ ಖುಷಿಯಿಂದಲೇ ಕುಣಿದು ಸಂಭ್ರಮಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಆದರೆ ಇಲ್ಲೊಬ್ಬ ಅಪ್ಪನ (father) ಖುಷಿಯೂ ಎಲ್ಲೇ ಮೀರಿದೆ. ಹೆಣ್ಣು ಮಗುವಿನ ಆಗಮನದ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆಯಲ್ಲೇ ತಂದೆಯೂ ಡ್ಯಾನ್ಸ್ ಮಾಡಿರುವ ವಿಡಿಯೋ…

Read More

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು! – Kannada News | Cricket Gets Green Signal at Chinnaswamy Stadium: Bengaluru Police Issue 17 Point Safety Guidelines

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಬೆಂಗಳೂರು, ಡಿಸೆಂಬರ್ 19: ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಅಂತಿಮವಾಗಿ ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ, ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ…

Read More

ಚಪ್ಪಲಿ ಹೊರಗಡೆ ಬಿಡಿ ಅಂದಿದಷ್ಟೇ: ತಂದೆ-ಮಗನಿಂದ ವೈದ್ಯನ ಮೇಲೆ ಮನಸೋ ಇಚ್ಛೆ ಹಲ್ಲೆ – Kannada News | Mysuru Doctor Attacked by Father and Son for Asking to Remove Footwear

ಮೈಸೂರು, ಡಿಸೆಂಬರ್​​ 19: ಕ್ಷುಲ್ಲಕ ಕಾರಣಕ್ಕೆ ವೈದ್ಯನ ಮೇಲೆ ಅಪ್ಪ, ಮಗ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಕ್ಲಿನಿಕ್ ಹೊರಭಾಗ ಚಪ್ಪಲಿ ಬಿಟ್ಟು ಬನ್ನಿ ಅಂತಾ ಹೇಳಿದಕ್ಕೆ ಶಿಶು ಆಸ್ಪತ್ರೆಯ ವೈದ್ಯ ಡಾ.ಅನೂಪ್ ಮೇಲೆ ಹಲ್ಲೆ ನಡೆಸಲಾಗಿದೆ. ರುಬಿಯಾಜ್ ಷರೀಫ್, ಆತನ ತಂದೆ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ. ರುಬಿಯಾಜ್ ಷರೀಫ್​ರ 3 ವರ್ಷದ ಮಗು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಆಸ್ಪತ್ರೆಗೆ ಆತ ಬಂದಿದ್ದ. ಈ ವೇಳೆ ಚಪ್ಪಲಿ ಧರಿಸಿಯೇ ಒಳಬಂದ ಹಿನ್ನೆಲೆ ಅದನ್ನು…

Read More

ಧರ್ಮೇಂದ್ರ ಕುಟುಂಬ ಹೇಮಾ ಮಾಲಿನಿಯನ್ನು ಒಂಟಿ ಮಾಡಿದೆ; ಕೇಳಿ ಬಂತು ಆರೋಪ – Kannada News | Dharmendra’s Demise: Shobhaa De on Hema Malini’s Dignity Amidst Family Snub

ನಟ ಧರ್ಮೇಂದ್ರ ಮತ್ತು ನಟಿ ಹೇಮಾ ಮಾಲಿನಿ 45 ವರ್ಷಗಳ ಕಾಲ ಒಟ್ಟಿಗೆ ಇದ್ದವರು. ಧರ್ಮೇಂದ್ರ ನವೆಂಬರ್ 24 ರಂದು ಕೊನೆಯುಸಿರೆಳೆದರು. ನಂತರ ನವೆಂಬರ್ 27 ರಂದು, ಡಿಯೋಲ್ ಕುಟುಂಬವು ಹೇಮಾ ಮಾಲಿನಿಯನ್ನು ನಿರ್ಲಕ್ಷಿಸಿ ಸಂತಾಪ ಸೂಚಿಸುವ ಸಭೆಯನ್ನು ಆಯೋಜಿಸಿತು. ಹೇಮಾ ಮಾಲಿನಿ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಸಹ ಸಂತಾಪ ಸೂಚಿಸುವ ಸಭೆಯಲ್ಲಿ ಕಾಣಿಸಲಿಲ್ಲ. ಅಷ್ಟೇ ಅಲ್ಲ, ಅಂತ್ಯಕ್ರಿಯೆ ನಡೆಯುತ್ತಿರುವಾಗ ಹೇಮಾ ಮಾಲಿನಿ ನೇರವಾಗಿ ಸ್ಮಶಾನಕ್ಕೆ ತಲುಪಿದರು. ಧರ್ಮೇಂದ್ರ ಅವರ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯಗಳಿರುವುದಕ್ಕೆ…

Read More