Headlines

Horoscope Today 19 December: ಇಂದು ಈ ರಾಶಿಯವರಿಗೆ ನಿರುದ್ಯೋಗದ ಭಯ ಕಾಡಬಹುದು

ಮೇಷ ರಾಶಿ: ಇಂದು ಕಂಡ ಕನಸುಗಳು ಗಾಢವಾಗಿ ನಿಮ್ಮ ಮೇಲೆ ಪರಿಣಾಮ ಬೀರುವುದು. ನೀವಾಗಿಯೇ ನಿಮ್ಮ ಸ್ಥಾನವನ್ನು ಹೇಳಿ, ಮುಗ್ಗರಿಸುವಿರಿ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಸಮಾನ ಚಿಂತನಶೀಲರ‌ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ಅತಿಯಾದ ಕೋಪವನ್ನು ನಿಯಂತ್ರಿಸಿದ್ದು ನಿಮ್ಮ ಅನುಭವಕ್ಕೆ ಬರಬಹುದು. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು. ಗ್ರಾಹಕರಿಗೆ ನಿಮ್ಮ‌ ಅಸಮಾಧಾನವೂ ಆಗುವುದು. ಇಂದು ಜ್ಞಾನವೃದ್ಧರ ಸೇವೆಗೆ ಅವಕಾಶ ಸಿಗಲಿದೆ. ಅಪಘಾತದಿಂದ‌ ಉಂಟಾದ ನೋವಿನಿಂದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 19ರ ದಿನಭವಿಷ್ಯ – Kannada News | December 19 Numerology Prediction: Your Birth Number’s Daily Fortune and Astrology

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಹಳ ಚಟುವಟಿಕೆಯಿಂದ ಈ ದಿನ ಕಳೆದು ಹೋಗುತ್ತದೆ. ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಗಳಿಗೆ, ಮಾರಾಟ ವಿಭಾಗದಲ್ಲಿ ಕಾರ್ಯ ನಿರ್ವಹಿಸುವವರಿಗೆ, ವ್ಯಾಪಾರ- ವ್ಯವಹಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಯೋಗ ಇದೆ. ನಿಮಗೆ ಹೊಸದಾಗಿ ಪರಿಚಯ ಆಗುವ ವ್ಯಕ್ತಿಗಳ ಮೂಲಕವಾಗಿ ಭವಿಷ್ಯದಲ್ಲಿ ದೊಡ್ಡ ಮಟ್ಟದ ಅನುಕೂಲ ಆಗಲಿದೆ. ಲೇವಾದೇವಿ ವ್ಯವಹಾರ ಮಾಡುವವರಿಗೆ ಕೈ ಸೇರಬೇಕಾದ ದೊಡ್ಡ ಮೊತ್ತ ಬರುವಂಥ…

Read More

ಕಾಂಗ್ರೆಸ್​​ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್: ಅನಾರೋಗ್ಯದ ನಡುವೆಯೂ ಸಿಎಂ ಭಾಗಿ – Kannada News | Minister Satish Jarkiholi hosts dinner meeting In His House at Belagavi, here Is menu

ಬೆಳಗಾವಿ, (ಡಿಸೆಂಬರ್ 18): ಕರ್ನಾಟಕ ಕಾಂಗ್ರೆಸ್​​​ನಲ್ಲಿನ (Karnataka Congress) ಬಣ ರಾಜಕೀಯ ಬ್ರೇಕ್ ಫಾಸ್ಟ್​​ನಿಂದ ಡಿನ್ನರ್ ವರೆಗೂ (dinner meeting) ಬಂದು ನಿಂತಿದೆ. ಹೌದು.. ಸಿಎಂ ಕುರ್ಚಿಗಾಗಿ ಸಿಎಂ -ಡಿಸಿಎಂ ನಡುವೆ ಮುಸುಕಿನ ಗುದ್ದಾಟ ನಡೆದಿದ್ದು, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ (Siddaramaiah) ಬಣದ ಡಿನ್ನರ್ ಪಾಲಿಟಿಕ್ಸ್​​ ಮುಂದುವರೆದಿದೆ. ಬೆಳಗಾವಿ ಅಧಿವೇಶದ ಸಂದರ್ಭದಲ್ಲೂ ಸಹ ಜಿದ್ದಿಗೆ ಬಿದ್ದವರಂತೆ ಉಭಯ ನಾಯಕರ ಬಣದಿಂದ ಒಬ್ಬರಾದ ಮೇಲೆ ಒಬ್ಬರಿಂದ ಡಿನ್ನರ್ ಮೀಟಿಂಗ್ ಆಯೋಜನೆಗೊಳ್ಳುತ್ತಿವೆ. ಇದಕ್ಕೆ ಪೂರಕವೆಂಬಂತೆ ಇಂದು (ಡಿಸೆಂಬರ್ 18)…

Read More

IND vs SA: ಕೊನೆಯ ಟಿ20 ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಭಾರತದ ಪ್ಲೇಯಿಂಗ್ 11? – Kannada News | India vs SA 5th T20: Ahmedabad Decider, Preview, Pitch and Playing XI

ಭಾರತ ಮತ್ತು ದಕ್ಷಿಣ ಆಫ್ರಿಕಾ (India vs South Africa) ನಡುವಿನ ಟಿ20 ಸರಣಿಯ ಐದನೇ ಮತ್ತು ಅಂತಿಮ ಪಂದ್ಯವು ಡಿಸೆಂಬರ್ 19, ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಪ್ರಾರಂಭವಾಗಲಿದೆ. ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪ್ರಸ್ತುತ ಸರಣಿಯ 4ನೇ ಪಂದ್ಯವು ಭಾರೀ ಮಂಜಿನಿಂದಾಗಿ ರದ್ದಾಗಿತ್ತು. ಈ ಟಿ20 ಸರಣಿಯಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 2-1 ಮುನ್ನಡೆ ಸಾಧಿಸಿದೆ….

Read More

ರಘು ಬಳಿಕ ಕಾವ್ಯಾಗೂ ಗೊತ್ತಾಗಿದೆ ಬಿಗ್ ಬಾಸ್ ಸೀಕ್ರೆಟ್ ರೂಮ್ ರಹಸ್ಯ – Kannada News | Kavya Shaiva talks about Bigg Boss Kannada Season 12 secret room Rakshitha Shetty and Dhruvanth

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ರಕ್ಷಿತಾ ಶೆಟ್ಟಿ (Rakshitha Shetty) ಮತ್ತು ಧ್ರುವಂತ್ ಅವರನ್ನು ಸೀಕ್ರೆಟ್ ರೂಮ್​​ನಲ್ಲಿ ಇಡಲಾಗಿದೆ. ಕಳೆದ ವಾರ ಅವರಿಬ್ಬರು ಎಲಿಮಿನೇಟ್ ಆಗಿದ್ದಾರೆ ಎಂದು ತೋರಿಸಲಾಯಿತು. ಆದರೆ ಅವರು ಸೀಕ್ರೆಟ್ ರೂಮ್​​ಗೆ ತೆರಳಿರುವ ವಿಷಯವನ್ನು ಬಿಗ್ ಬಾಸ್ ಮನೆಯೊಳಗಿನ ಸದಸ್ಯರಿಗೆ ತಿಳಿಸಿಲ್ಲ. ಆದರೂ ಕೂಡ ಆ ರಹಸ್ಯ ಲೀಕ್ ಆಗಿದೆ. ಅದಕ್ಕೆ ಕಾರಣ ಇದೆ. ಎಲ್ಲ ಸಂಗತಿಗಳನ್ನು ಸೂಕ್ಷ್ಮವಾಗಿ ಗಮನಿಸುವ ಮೂಲಕ ರಘು ಮತ್ತು ಕಾವ್ಯ ಶೈವ (Kavya…

Read More

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ವಿಶಾಖಪಟ್ಟಣಂ, ಡಿಸೆಂಬರ್ 18: ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್‌ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂಡು ಮೀನುಗಾರರು ಅದನ್ನು ಸಮುದ್ರಕ್ಕೆ ಬಿಡಲು ಪ್ರಯತ್ನಿಸಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ತಿಮಿಂಗಿಲವು ದಡದಲ್ಲಿಯೇ ಸತ್ತುಹೋಯಿತು. ಅದು ಗಾಯಗೊಂಡಿರಬಹುದು ಅಥವಾ ಬಲೆಯಲ್ಲಿ ಸಿಲುಕಿ ಸತ್ತಿರಬಹುದು ಎಂದು ಶಂಕಿಸಲಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಗುದ್ದಿದ ರಭಸಕ್ಕೆ ಕಾರು ಪಲ್ಟಿ – Kannada News | Belagavi: DK Shivakumar PS car involved in accident; biker dies, car overturns on impact

ಬೆಳಗಾವಿ, ಡಿಸೆಂಬರ್ 18: ಡಿಸಿಎಂ ಡಿಕೆ ಶಿವಕುಮಾರ್​ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಸಾವನ್ನಪ್ಪಿರುವ ಬೈಕ್​ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು. ಅತ್ತ ರಾಜೇಂದ್ರ ಪ್ರಸಾದ್ ಕಾರು ಯಲ್ಲಮ್ಮನ ದರ್ಶನ ಪಡೆದು ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರು ಗುದ್ದಿದ ರಭಸಕ್ಕೆ ಮಂಜುನಾಥ್ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲೇ…

Read More

ಕರಾವಳಿಗರು ಬೆಂಕಿ ಹಚ್ಚೋರು ಎಂದ ಸಚಿವ ಭೈರತಿ ಸುರೇಶ್ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | Karavali MLAs Angry On Minister Byrathi Suresh for controversy statement On coastal during hate speech bill

ಬೆಳಗಾವಿ (ಡಿಸೆಂಬರ್ .18): ಕರಾವಳಿ ಭಾಗದ ಬಿಜೆಪಿ ಶಾಸಕರ ವಿರುದ್ಧ ‘ಬೆಂಕಿ ಹಚ್ಚುವವರು’ ಎಂದು ಸಚಿವ ಬೈರತಿ ಸುರೇಶ್ (Byarathi Suresh) ಅವರು ಹೇಳಿರುವುದು ಸದನದಲ್ಲಿ ಕಿಚ್ಚನ್ನು ಹೊತ್ತಿಸಿದೆ. ಸುವರ್ಣಸೌಧದ ವಿಧಾನಸಭೆಯಲ್ಲಿಂದು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕಕ್ಕೆ (Hate Speech Bill) ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಭಾವಿಗಿಳಿದು ಪ್ರತಿಭಟನೆ ನಡೆಸಿದರು. ಹೀಗೆ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಜೋರಾಗಿ ಮಾತಿನ ಸಮರ ನಡೆಯುತ್ತಿರುವಾಗಲೇ ಸಚಿವ…

Read More

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು – Kannada News | Yogaraj Bhat speech in Landlord Kannada movie song release event

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್ ಲಾರ್ಡ್’ (Landlord) ಸಿನಿಮಾದ ‘ನಿಂಗವ್ವ ನಿಂಗವ್ವ..’ ಹಾಡು ರಿಲೀಸ್ ಆಗಿದೆ. ಈ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಪ್ರೇಮ್, ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ತರುಣ್ ಸುಧೀರ್, ಸೋನಲ್ ಮೊಂತೆರೋ ಭಾಗಿ ಆಗಿದ್ದರು. ಅಜನೀಶ್ ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಯೋಗರಾಜ್ ಭಟ್ (Yogaraj Bhat) ಅವರು ಸಾಹಿತ್ಯ ಬರೆದಿದ್ದಾರೆ. ವಿಜಯ್ ಪ್ರಕಾಶ್ ಕಂಠದಲ್ಲಿ ಹಾಡು ಮೂಡಿಬಂದಿದೆ. ಸಾಂಗ್ ರಿಲೀಸ್ ವೇಳೆ ಯೋಗರಾಜ್ ಭಟ್…

Read More

ನಟಿ ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಐಟಿ ದಾಳಿ: 60 ಕೋಟಿ ರೂ. ವಂಚನೆ ಕೇಸ್ – Kannada News | After Bastian pub now IT Raid on Shilpa Shetty Mumbai home in Rs 60 Cr fraud case

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರ ಕುಟುಂಬದ ಮೇಲೆ ಹಲವಾರು ಕೇಸ್​​ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ. ಅವರ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಗುರುವಾರ (ಡಿಸೆಂಬರ್ 18) ಈ ಘಟನೆ ನಡೆದಿದೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ…

Read More