ಸಿಎಂ ಸಿದ್ದರಾಮಯ್ಯ ಬಣದ ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?: ಇಲ್ಲಿದೆ ಇನ್​​ಸೈಡ್​​ ಮಾಹಿತಿ – Kannada News | CM Siddaramaiahs Team Holds Dinner Meeting in Belagavi, Inside Details

ಡಿನ್ನರ್​​ ಮೀಟಿಂಗ್​​ ಬಂದ ನಾಯಕರು

ಬೆಳಗಾವಿ, ಡಿಸೆಂಬರ್​​ 19: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ಡಿನ್ನರ್​​ ಪಾಲಿಟಿಕ್ಸ್​​ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್​​ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್​​ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್​​ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್​​ ಬುಲಾವ್​​ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ.

ಡಿನ್ನರ್​​ ಮೀಟಿಂಗ್​​ ವೇಳೆ ಏನೆಲ್ಲ ಚರ್ಚೆ?

ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ ನಾಯಕರೆಲ್ಲ ಒಟ್ಟಿಗೆ ಸೇರಿದ್ದರೂ ಹಲವು ರಾಜಕೀಯ ವಿಚಾರಗಳು ಈ ವೇಳೆ ಚರ್ಚೆಯಾಗಿವೆ. ಸಿದ್ದರಾಮಯ್ಯ ದೆಹಲಿಗೆ ಹೋಗುವ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್​​ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಒಂದೊಮ್ಮೆ ಅಂದುಕೊಂಡಂತೆ ಆದ್ರೆ ಯಾವ ರೀತಿಯಾಗಿ ತಾವು ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಅಲ್ಲದೆ ಸಿಎಂ ಸ್ಥಾನ ಬದಲಾವಣೆ ವಿಚಾರ ಬಂದ್ರೆ ಅದನ್ನು ಹೇಗೆ ನಿಭಾಯಿಸಬೇಕು, ಸಿಎಂ ಸ್ಥಾನ ಬದಲಾವಣೆ ಆದರೆ ಅದರಿಂದ ಪಕ್ಷ ಹಾಗೂ ಸರ್ಕಾರಕ್ಕೆ ಯಾವ ರೀತಿ ಡ್ಯಾಮೇಜ್ ಆಗಲಿದೆ ಅನ್ನೋದನ್ನ ಹೇಗೆ ಮನವರಿಕೆ ಮಾಡಬೇಕು ಎಂಬ ಬಗ್ಗೆಯೂ ಮಾತುಕತೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್​​ನಲ್ಲಿ ಮುಂದುವರಿದ ಡಿನ್ನರ್ ಮೀಟಿಂಗ್; ಅನಾರೋಗ್ಯದ ನಡುವೆಯೂ ಸಿಎಂ ಭಾಗಿ

ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಬೇಡಿ. ಸಿಎಂ ಸ್ಥಾನ ಬಿಟ್ಟು ಕೊಟ್ಟರೆ ಸಾಂಪ್ರಾದಾಯಿಕ ಅಹಿಂದಾ ಮತಗಳು ದೂರವಾಗುವ ಸಾಧ್ಯತೆ ಬಗ್ಗೆ ಹೈಕಮಾಂಡ್‌ಗೆ ಮನವರಿಕೆ ಮಾಡಿ. ಅಹಿಂದಾ ಸಚಿವರು, ಬಹುತೇಕ ಶಾಸಕರು ತಮ್ಮ ಪರವಾಗಿದ್ದಾರೆಂದು ಗಟ್ಟಿಯಾಗಿ ಹೇಳಿ ಎಂದು ಸಿದ್ದರಾಮಯ್ಯ ಅವರ ಮೇಲೆ ಬೆಂಬಲಿಗರು ಈ ವೇಳೆ ಒತ್ತಡ ಹೇರಿದ್ದಾರೆ. ರಾಜಣ್ಣರಂತೆ ಇನ್ನುಳಿದ ಅಹಿಂದಾ ನಾಯಕರು ರಾಹುಲ್‌ ಗಾಂಧಿಗೆ ಪತ್ರ ಚಳುವಳಿ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ. ಸಿದ್ದರಾಮಯ್ಯರ ವರ್ಚಸ್ಸು ಹೆಚ್ಚಿಸಲು ಶಕ್ತಿ ಪ್ರದರ್ಶನದಂತಹ ಸಮಾವೇಶ ಆಯೋಜನೆ ಬಗ್ಗೆಯೂ ಚಿಂತಿಸಲಾಗಿದ್ದು, ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಮಾದರಿಯಲ್ಲಿ ಜನವರಿ ವೇಳೆ ಅಹಿಂದಾ ಸಮಾವೇಶ ನಡೆಸುವ ಬಗ್ಗೆ ಚರ್ಚೆಯಾಗಿದೆ. ಈ ಸಮಾವೇಶದಲ್ಲಿ ಲಕ್ಷಾಂತರ ಜನರನ್ನು ಸೇರಿ ರಾಜ್ಯದ ಜನ ಸಿದ್ದರಾಮಯ್ಯ ಪರ ಇದ್ದಾರೆಂಬ ಸಂದೇಶ ರವಾನಿಸುವ ಪ್ಲ್ಯಾನ್ ಮಾಡಲಾಗಿದೆ.

ಮತ್ತೊಂದೆಡೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೂ ಸಿದ್ದರಾಮಯ್ಯ ಬೆಂಬಲಿಗರು ಕಣ್ಣಿಟ್ಟಿದ್ದು, ಸಿಎಂ ಹುದ್ದೆಯ ಜೊತೆಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳಲೂ ಪ್ರಯತ್ನಿಸೋಣ. ಆ ಮೂಲಕ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇಡ್ತಿರುವ ಡಿಕೆಶಿಗೆ ಕೌಂಟರ್‌ ಕೊಡೋಣ ಎಂಬ ಬಗ್ಗೆಯೂ ಮಾತುಕತೆ ನಡೆದಿದ್ದು, ಜನವರಿ ತಿಂಗಳಲ್ಲಿ ಸತೀಶ್ ಜಾರಕಿಹೊಳಿ‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿಸುವ ನಿಟ್ಟಿನಲ್ಲಿ ಒತ್ತಡ ಹಾಕುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 9:14 am, Fri, 19 December 25

Source link

Friday Dos and Don’ts: ಶುಕ್ರವಾರ ತಪ್ಪಿಯೂ ಈ ಕೆಲಸ ಮಾಡಬೇಡಿ; ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು – Kannada News | Friday Dos and Don’ts: Boost Lakshmi’s Blessings and Financial Prosperity

ಹಿಂದೂ ಧರ್ಮದಲ್ಲಿ, ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿರುತ್ತದೆ. ಶುಕ್ರವಾರವನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಗೆ ಸಮರ್ಪಿಸಲಾಗಿದೆ. ಈ ದಿನದಂದು ಲಕ್ಷ್ಮಿ ದೇವಿಗೆ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ. ಉಪವಾಸವನ್ನು ಸಹ ಆಚರಿಸಲಾಗುತ್ತದೆ. ಈ ದಿನವನ್ನು ಶುಕ್ರ ಗ್ರಹಕ್ಕೂ ಸಮರ್ಪಿಸಲಾಗಿದೆ. ಶುಕ್ರನನ್ನು ಭೌತಿಕ ಸಂತೋಷ, ವೈವಾಹಿಕ ಆನಂದ, ಐಷಾರಾಮಿ, ಖ್ಯಾತಿ ಮತ್ತು ಕಲೆಯಲ್ಲಿ ಒಂದು ಅಂಶವೆಂದು ಪರಿಗಣಿಸಲಾಗುತ್ತದೆ. ಶುಕ್ರವಾರದಂದು ಲಕ್ಷ್ಮಿ ದೇವಿಯನ್ನು ಪೂಜಿಸುವುದು ಮತ್ತು ಉಪವಾಸ ಮಾಡುವುದರಿಂದ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಈ ದಿನ ಲಕ್ಷ್ಮಿ ದೇವಿಯನ್ನು ಪೂಜಿಸುವುದು ಮತ್ತು ಉಪವಾಸ ಮಾಡುವುದರಿಂದ ಅವಳ ವಿಶೇಷ ಆಶೀರ್ವಾದವನ್ನು ಪಡೆಯಬಹುದು. ಅದರಂತೆ ಶುಕ್ರವಾರದಂದು ಈ ಐದು ಕೆಲಸಗಳನ್ನು ಎಂದಿಗೂ ಮಾಡಬಾರದು. ಶುಕ್ರವಾರದಂದು ಈ ಕೆಲಸಗಳನ್ನು ಮಾಡುವುದರಿಂದ ಮನೆಗೆ ಬಡತನ ಬರುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ಶುಕ್ರವಾರದಂದು ಮಾಡಬಾರದ ಈ ಐದು ವಿಷಯಗಳ ಬಗ್ಗೆ ಇಲ್ಲಿ ತಿಳಿದುಕೊಳ್ಳಿ.

ಮಾಂಸ ಮತ್ತು ಮದ್ಯ ತಪ್ಪಿಸಿ:

ಶುಕ್ರವಾರದಂದು ಮಾಂಸ ಮತ್ತು ಮದ್ಯ ಸೇವಿಸಬಾರದು. ಇದು ಲಕ್ಷ್ಮಿ ದೇವಿಯನ್ನು ಕೋಪಗೊಳಿಸುತ್ತದೆ ಮತ್ತು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು ಎಂದು ನಂಬಲಾಗಿದೆ.

ಜಗಳವಾಡಬೇಡಿ:

ಶುಕ್ರವಾರದಂದು ಯಾರೊಂದಿಗೂ ಜಗಳವಾಡಬಾರದು. ಹಾಗೆ ಮಾಡುವುದರಿಂದ ಜಾತಕದಲ್ಲಿ ಶುಕ್ರ ಗ್ರಹ ದುರ್ಬಲಗೊಳ್ಳುತ್ತದೆ ಮತ್ತು ಮನೆಯಲ್ಲಿ ಆರ್ಥಿಕ ನಷ್ಟ ಉಂಟಾಗುತ್ತದೆ ಎಂದು ನಂಬಲಾಗಿದೆ.

ಹಣದ ವಹಿವಾಟು ಮಾಡಬೇಡಿ:

ಶುಕ್ರವಾರದಂದು ಹಣದ ವಹಿವಾಟುಗಳನ್ನು ತಪ್ಪಿಸಬೇಕು. ಈ ದಿನದಂದು ಹಣವನ್ನು ಪಡೆಯುವುದು ಅಥವಾ ಸಾಲ ನೀಡುವುದು ಸಹ ಮಾಡಬಾರದು. ನಂಬಿಕೆಗಳ ಪ್ರಕಾರ, ಈ ದಿನದಂದು ಹಣದ ವಹಿವಾಟು ಮಾಡುವುದು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಬಹುದು.

ಆಸ್ತಿ ಖರೀದಿಸಬೇಡಿ:

ಶುಕ್ರವಾರದಂದು ಆಸ್ತಿ ಖರೀದಿಸುವುದನ್ನು ತಪ್ಪಿಸಬೇಕು. ಹಾಗೆ ಮಾಡುವುದರಿಂದ ಸಂಪತ್ತಿನ ಒಳಹರಿವಿಗೆ ಅಡ್ಡಿಯಾಗುತ್ತದೆ ಎಂದು ನಂಬಲಾಗಿದೆ. ಇದಲ್ಲದೇ ಈ ದಿನ ಯಾರನ್ನೂ ಅವಮಾನಿಸಬಾರದು.

ಇದನ್ನೂ ಓದಿ: ವಾಸ್ತು ಪ್ರಕಾರ, ಮನೆಯಲ್ಲಿ ಕಾಮಧೇನುವಿನ ವಿಗ್ರಹ ಇಡುವುದರಿಂದ ಸಿಗುವ ಅದ್ಭುತ ಲಾಭಗಳಿವು!

ಅಡುಗೆಮನೆ ವಸ್ತುಗಳನ್ನು ಖರೀದಿಸಬೇಡಿ:

ಶುಕ್ರವಾರದಂದು ನೀವು ಯಾವುದೇ ಅಡುಗೆಮನೆ ವಸ್ತುಗಳನ್ನು ಖರೀದಿಸಬಾರದು. ನೀವು ಯಾರಿಂದಲೂ ಉಚಿತವಾಗಿ ಏನನ್ನೂ ಸ್ವೀಕರಿಸಬಾರದು. ಹಾಗೆ ಮಾಡುವುದರಿಂದ ನಿಮ್ಮ ಸಾಲ ಹೆಚ್ಚಾಗುತ್ತದೆ.

ಲಕ್ಷ್ಮಿ ದೇವಿಯನ್ನು ಈ ರೀತಿ ಪೂಜಿಸಿ:

ಶುಕ್ರವಾರ ಸಂಜೆ, ಮುಖ್ಯ ದ್ವಾರದಲ್ಲಿ ತುಪ್ಪದ ದೀಪವನ್ನು ಬೆಳಗಿಸಿ. ಲಕ್ಷ್ಮಿ ದೇವಿಗೆ ಕಮಲದ ಹೂವು, ತೆಂಗಿನಕಾಯಿ ಮತ್ತು ಬಿಳಿ ಸಿಹಿತಿಂಡಿಗಳನ್ನು ಅರ್ಪಿಸಿ. ಬಡವರಿಗೆ ಮತ್ತು ನಿರ್ಗತಿಕರಿಗೆ ಹಣ, ಆಹಾರ ಮತ್ತು ಬಿಳಿ ಬಟ್ಟೆಗಳನ್ನು ದಾನ ಮಾಡಿ. ಈ ಎಲ್ಲಾ ಕಾರ್ಯಗಳನ್ನು ಮಾಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸದಾ ನಿಮ್ಮ ಕುಟುಂಬದ ಮೇಲಿರುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬ್ಯಾನ್ ಮಧ್ಯೆಯೂ ‘ಧುರಂಧರ್’ ವೀಕ್ಷಿಸಿದ 20 ಲಕ್ಷ ಪಾಕ್ ಮಂದಿ – Kannada News | Ranveer Singh Starrer Dhurandhar Movie Super Hit In Pakistan Here is how

‘ಧುರಂಧರ್’ ಸಿನಿಮಾದಲ್ಲಿ (Dhurandhar Movie)  ರಣವೀರ್ ಸಿಂಗ್ ಸ್ಪೈ ಪಾತ್ರ ಮಾಡಿದ್ದಾರೆ. ಭಾರತದ ಸೈನಿಕನೋರ್ವ ಪಾಕಿಸ್ತಾನದ ಉಗ್ರ ಸಂಘಟನೆ ಜೊತೆ ಸೇರಿ, ಅಲ್ಲಿಯವರಂತೆ ಬೆರೆತು ಅವರ ಎದೆಯಲ್ಲಿ ಭಯ ಹುಟ್ಟಿಸೋ ಕಥೆಯನ್ನು ಚಿತ್ರ ಹೊಂದಿದೆ. ಪಾಕಿಸ್ತಾನ ಮಾಡಿದ ಕೆಟ್ಟ ಕೆಲಸಗಳನ್ನು ತೋರಿಸಲಾಗಿದೆ. ಈ ಚಿತ್ರ ಪಾಕಿಸ್ತಾನದಲ್ಲಿ ಬ್ಯಾನ್ ಆಗಿದೆ. ಆದರೂ ಸಿನಿಮಾ ಆ ದೇಶದಲ್ಲಿ ಸೂಪರ್ ಹಿಟ್ ಆಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆದಿವೆ.

ಭಾರತದಲ್ಲಿ ಪಾಕ್ ಸಿನಿಮಾಗಳು ಹಾಗೂ ಪಾಕಿಸ್ತಾನದಲ್ಲಿ ಭಾರತದ ಸಿನಿಮಾಗಳು ಥಿಯೇಟರ್​​ನಲ್ಲಿ ಪ್ರದರ್ಶನ ಕಾಣುವುದಿಲ್ಲ. ಮೊದಲು ಹಿಂದಿ ಚಿತ್ರಕ್ಕೆ ಪಾಕಿಸ್ತಾನ ಕೂಡ ಒಂದು ದೊಡ್ಡ ಮಾರುಕಟ್ಟೆ ಆಗಿತ್ತು. ಆದರೆ, ಎರಡೂ ದೇಶಗಳ ಮಧ್ಯೆ ಮೂಡಿರುವ ದ್ವೇಷದ ಕಾರಣಕ್ಕೆ ಭಾರತದ ಸಿನಿಮಾ ಅಲ್ಲಿ ಪ್ರದರ್ಶನ ಕಾಣುತ್ತಿಲ್ಲ. ಆದಾಗ್ಯೂ ಪಾಕ್ ಮಂದಿ ಚಿತ್ರವನ್ನು ವೀಕ್ಷಿಸಿದ್ದಾರೆ.

1999ರ ಖಂದಹಾರ್ ಹೈಜಾಕ್, 26/11ರ ಮುಂಬೈ ದಾಳಿ ಮದಲಾದ ವಿಷಯಗಳನ್ನು ಸಿನಿಮಾದಲ್ಲಿ ತೋರಿಸಲಾಗಿದೆ. ಸಿನಿಮಾ ಭಾರತದಲ್ಲಿ ಸಾಕಷ್ಟು ಹೈಪ್ ಪಡೆದುಕೊಂಡಿದೆ. ಈ ಚಿತ್ರ ಕೇವಲ ಎರಡು ವಾರಗಳಲ್ಲಿ ಪಾಕಿಸ್ತಾನದಲ್ಲಿ ಬರೋಬ್ಬರಿ 20 ಲಕ್ಷ ಬಾರಿ ಅಕ್ರಮವಾಗಿ ಡೌನ್​ಲೋಡ್ ಆದ ಬಗ್ಗೆ ವರದಿ ಆಗಿದೆ. ಅಂದರೆ, ಕನಿಷ್ಠ 20 ಲಕ್ಷ ಪಾಕ್ ಮಂದಿ ಈ ಸಿನಿಮಾನ ವೀಕ್ಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಅತಿ ಹೆಚ್ಚು ಬಾರಿ ಡೌನ್​ಲೋಡ್ ಆದ ಪೈರೇಟೆಡ್ ಸಿನಿಮಾ ಇದಾಗಲಿದೆ.

ಪಾಕಿಸ್ತಾನ ಒಂದು ಉಗ್ರರಾಷ್ಟ್ರ ಎಂದು ಸಿನಿಮಾದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ ನಿರ್ದೇಶಕ ಆದಿತ್ಯ ಧಾರ್. ಸಿನಿಮಾ ಈ ರೀತಿ ವೀಕ್ಷಣೆ ಕಂಡಿರುವುದರಿಂದ ನಿರ್ಮಾಪಕರಿಗೆ 50-60 ಕೋಟಿ ರೂಪಾಯಿ ನಷ್ಟ ಆಗಿದೆ. ಆದರೆ, ನಿರ್ದೇಶಕರು ಪಾಕಿಸ್ತಾನಕ್ಕೆ ತಲುಪಿಸಬೇಕಿದ್ದ ಸಂದೇಶವನ್ನು ಸ್ಪಷ್ಟವಾಗಿ ತಲುಪಿಸಿದ್ದಾರೆ. ಪಾಕಿಸ್ತಾನ ಮಾಡಿದ ಕೆಟ್ಟ ಕೆಲಸಗಳನ್ನು ಸಿನಿಮಾದಲ್ಲಿ ಹೇಳಲಾಗಿದೆ. ಸಿನಿಮಾಗೆ ಸಿಕ್ಕ ಹೈಪ್ ನೋಡಿ ಅಲ್ಲಿನ ಜನರಿಗೆ ತಡೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ, ಸಿನಿಮಾದ ಪೈರಸಿ ಕಾಪಿ ವೀಕ್ಷಿಸಿದ್ದಾರೆ.

ಇದನ್ನೂ ಓದಿ: 167 ಕೋಟಿ ರೂ. ಒಡೆಯ, ಧುರಂಧರ್ ನಟ ಅಕ್ಷಯ್ ಖನ್ನಾ ಮದುವೆ ಆಗಿಲ್ಲ ಯಾಕೆ?

ಧುರಂಧರ್ ಸಿನಿಮಾದ ಗಳಿಕೆ 460 ಕೋಟಿ ರೂಪಾಯಿ ಆಗಿದೆ. ಶನಿವಾರದ ವೇಳೆಗೆ ಸಿನಿಮಾದ ಕಲೆಕ್ಷನ್ 500 ಕೋಟಿ ರೂಪಾಯಿ ತಲುಪಲಿದೆ. ಈ ವರ್ಷದ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಆಗಿ ‘ಧುರಂಧರ್’ ಹೊರ ಹೊಮ್ಮುವ ಸಾಧ್ಯತೆ ಉದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ತನಗೆ ಮರ್ಯಾದೆ ಕೊಡ್ಲಿಲ್ಲ ಅಂತಾ ಹೆಂಡತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತಿ! – Kannada News | Mysore: Husband Hires Killers for Wife Over Disrespect; Arrested in Attempted Murder

ಪತ್ನಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಮಹೇಶ್ ಮತ್ತು ಆತನ ಸ್ನೇಹಿತ ಭಾಸ್ಕರ್

ಮೈಸೂರು, ಡಿಸೆಂಬರ್ 19: ಈಗಿನ ಕಾಲದಲ್ಲಿ ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲ್ಲುವ ಕೇಸ್​ಗಳು ಪದೇ ಪದೇ ಕೇಳಿ ಬರುತ್ತವೆ. ಅನೈತಿಕ ಸಂಬಂಧ ಸೇರಿ ಹತ್ತು ಹಲವು ಕಾರಣಕ್ಕೆ ಈ ರೀತಿಯ ಕೊಲೆಗಳು ನಡೆಯುತ್ತವೆ. ಆದರೆ ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು ಸುಪಾರಿ ಕೊಟ್ಟ ಘಟನೆ ಮೈಸೂರಿನ  (Mysuru) ಬಿ ಎಂ ಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರೂ ಸಾಥ್ ನೀಡಿದ್ದು, ಮಾಹಿತಿ ತಿಳಿದ ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಲೆ ಮಾಡಿ ಅಗ್ನಿ ಅವಘಡವೆಂದು ಬಿಂಬಿಸಲು ಹೊರಟ ಆರೋಪಿಗಳು

ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್​ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್​ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ.

ಆತನ ಪ್ಲಾನ್ ಪ್ರಕಾರವೇ ವಿರಾಜಪೇಟೆ ಮೂಲದ ಭಾಸ್ಕರ್ ಮತ್ತು ಅಭಿಷೇಕ್ ಎನ್ನುವವರಿಬ್ಬರೂ ನಾಗರತ್ನ ಒಬ್ಬರೇ ಇರುವ ಸಮಯ ನೋಡಿಕೊಂಡು ಮನೆಗೆ ಬಂದಿದ್ದರು. ಈ ವೇಳೆ ಮಹಿಳೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದರು. ಹಲ್ಲೆಯ ನಂತರ ಗ್ಯಾಸ್ ಸಿಲಿಂಡರ್‌ಗಳನ್ನು ಸೋರಿಕೆ ಮಾಡಿದ ಆರೋಪಿಗಳು , ಘಟನೆಯನ್ನಯ ಅಗ್ನಿ ಅವಘಡ ಎಂದು ಬಿಂಬಿಸಲು ಯತ್ನಿಸಿದ್ದರು. ಈ ವೇಳೆ ಮನೆಯ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಗಾಯಗೊಂಡ ನಾಗರತ್ನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ತನ್ನದೇ ಸ್ನೇಹಿತರಿಗೆ ಸುಪಾರಿ ಕೊಟ್ಟಿದ್ದ ಮಹೇಶ್ ಸೇರಿದಂತೆ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಮೇಟಗಳ್ಳಿ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಗಂಡನೇ ಪತ್ನಿಯನ್ನು ಕೊಲ್ಲುವಂತೆ ಸುಪಾರಿ ನೀಡಿದ್ದ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ!

ಶಿಶು ವೈದ್ಯರ ಮೇಲೆ ಹಲ್ಲೆ ಮಾಡಿದ ತಂದೆ ಮಗ

ಕ್ಷುಲ್ಲಕ ಕಾರಣಕ್ಕೆ ವೈದ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಸಾತಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಶಿಶು ಆಸ್ಪತ್ರೆಯ ವೈದ್ಯ ಡಾ. ಅನೂಪ್ ಮೇಲೆ ರುಬಿಯಾಜ್ ಷರೀಫ್ ಹಾಗೂ ಆತನ ತಂದೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೂರು ವರ್ಷದ ಮಗುವನ್ನು ಆಸ್ಪತ್ರೆಗೆ ದಾಖಲಾದ ಮಗುವನ್ನು ನೋಡಲು ಬಂದಿದ್ದ ರುಬಿಯಾಜ್ ಷರೀಫ್, ಚಪ್ಪಲಿ ಧರಿಸಿಕೊಂಡೇ ಕ್ಲಿನಿಕ್ ಒಳಗೆ ಪ್ರವೇಶಿಸಿದ್ದನು. ಚಪ್ಪಲಿ ಹೊರಗೆ ಬಿಡುವಂತೆ ವೈದ್ಯರು ಮನವಿ ಮಾಡಿದಾಗ ಮಾತಿನ ಚಕಮಕಿ ನಡೆದಿದ್ದು, ಬಳಿಕ ತಾನೂ ಚಪ್ಪಲಿ ಹೊರಗೆ ಬಿಟ್ಟಿದ್ದನ್ನು ತೋರಿಸಲು ವೈದ್ಯರು ಹೊರಗೆ ಬಂದ ಸಮಯದಲ್ಲಿ ಏಕಾಏಕಿ ಹಲ್ಲೆ ನಡೆಸಲಾಗಿದೆ. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಎಫ್‌ಐಆರ್ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ರವಿಚಂದ್ರನ್ ಎದುರೇ ರಾಜಾರೋಷವಾಗಿ ಸುಳ್ಳು ಹೇಳಿದ ಗಿಲ್ಲಿ; ಕಂಡು ಹಿಡಿದ ಕ್ರೇಜಿಸ್ಟಾರ್ – Kannada News | Ravichandran Exposes Gilli’s Fake Love Story in Bigg Boss: Pyar Promotions

ರವಿಚಂದ್ರನ್ ಅವರು ‘ಪ್ಯಾರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಬಿಗ್ ಬಾಸ್ ಮನೆಯ ರಾಶಿಕಾ ಶೆಟ್ಟಿ ಕೂಡ ಅಭಿನಯಿಸಿದ್ದಾರೆ. ಇಬ್ಬರದ್ದೂ ತಂದೆ-ಮಗಳ ಪಾತ್ರ. ಈ ಸಿನಿಮಾ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದ ಹಾಡು ಡಿಸೆಂಬರ್ 18ರಂದು ರಿಲೀಸ್ ಆಗಿದೆ. ಈ ಸಿನಿಮಾ ಪ್ರಚಾರಕ್ಕಾಗಿ ಬಿಗ್ ಬಾಸ್ (Bigg Boss)​​ ಮನೆಗೆ ಬಂದಿದ್ದಾರೆ ರವಿಚಂದ್ರನ್. ಈ ವೇಳೆ ಅವರು ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾದ ಹೆಸರೇ ಹೇಳುವಂತೆ ‘ಪ್ಯಾರ್’ ಇದೊಂದು ಪಕ್ಕಾ ಲವ್ ಸ್ಟೋರಿ ಹೊಂದಿರೋ ಸಿನಿಮಾ. ಈ ಚಿತ್ರ ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲೇ ತೆರೆಗೆ ಬರುತ್ತಿದೆ. ರಾಶಿಕಾ ಶೆಟ್ಟಿ ಕೂಡ ಸಿನಿಮಾದಲ್ಲಿ ನಟಿಸಿರುವುದರಿಂದ ಚಿತ್ರಕ್ಕೆ ಮೈಲೇಜ್ ಸಿಕ್ಕಿದೆ. ಸಿನಿಮಾದ ಟೈಟಲ್​ಗೆ ತಕ್ಕಂತೆ ಚಟುವಟಿಕೆ ಒಂದನ್ನು ನೀಡಲಾಯಿತು.

ಈ ಚಟುವಟಿಕೆಯ ಅನುಸಾರ ಎಲ್ಲರೂ ತಮ್ಮ ಲವ್​ಸ್ಟೋರಿನ ಸ್ಪರ್ಧಿಗಳ ಎದುರು ಹೇಳಬೇಕಿತ್ತು. ರವಿಚಂದ್ರನ್ ಅವರ ಮೊದಲ ಪ್ರೇಮಕಥೆ ತುಂಬಾನೇ ಸುಂದರವಾಗಿತ್ತು. ನಂತರ ಎಲ್ಲರೂ ತಮ್ಮ ತಮ್ಮ ಪ್ರೇಮಕಥೆಯನ್ನು ಹೇಳಿಕೊಂಡರು. ಈ ಸಂದರ್ಭದಲ್ಲಿ ಗಿಲ್ಲಿ ಅವರು ಸುಳ್ಳು ಹೇಳಿ ರವಿಚಂದ್ರನ್​ ಕೈಲಿ ಸಿಕ್ಕಿ ಬಿದ್ದಿದ್ದಾರೆ.

ಇದನ್ನೂ ಓದಿ: ಕ್ಯಾಪ್ಟನ್ಸಿ ಟಾಸ್ಕ್​​​ಗೆ ನಡೆದಿದೆ ಭಾರೀ ಫೈಟ್; ಗಿಲ್ಲಿನ ಪ್ರಶ್ನೆ ಮಾಡಿದ ಕಾವ್ಯಾ

ಗಿಲ್ಲಿ ಕಾಲೇಜು ಸಮಯದ ಲವ್​​ಸ್ಟೋರಿ ಹೇಳಿದ್ದಾರೆ. ಬಸ್​ ಅಲ್ಲಿ ಹೋಗುವಾಗ ಹುಡುಗಿ ಮೇಲೆ ಲವ್ ಆಗಿದ್ದು, ಅವರ ಹಿಂದೆ ಸುತ್ತಿದ್ದು, ಅವಳನ್ನು ಮಾತನಾಡಿಸಲು ಪ್ರಯತ್ನಿಸಿದ್ದು, ಆ ಬಳಿಕ ಅವಳು ಅಣ್ಣ ಹೇಳಿದ್ದು ಎಲ್ಲವನ್ನೂ ವಿವರಿಸಿದ್ದರು. ಆದರೆ, ಇದು ಸೇಮ್ ಟು ಸೇಮ್ ‘ರಾಜಾಹುಲಿ’ಯಲ್ಲಿ ಬರುವ ಲವ್​​ಸ್ಟೋರಿ ರೀತಿ ಇತ್ತು. ಇದನ್ನು ರವಿಚಂದ್ರನ್ ಸುಲಭದಲ್ಲಿ ಕಂಡು ಹಿಡಿದರು. ಗಿಲ್ಲಿ ನಟ ಅವರು ಸಾಕಷ್ಟು ಸಿನಿಮಾಗಳನ್ನು ವೀಕ್ಷಿಸಿಕೊಂಡು ಬಂದಿದ್ದಾರೆ. ಅವರು ಸಿನಿಮಾದ ಕಥೆಯನ್ನು ಸಿಚ್ಯುವೇಷನ್​ಗೆ ತಕ್ಕಂತೆ ಬಳಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Extreme cold weather in Bengaluru, Yellow alert for 4 districts

ರಾಜ್ಯದೆಲ್ಲೆಡೆ ಚಳಿ, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಡಿಸೆಂಬರ್ 19: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನದಲ್ಲಿ ಬದಲಾವಣೆ ಕಂಡುಬಂದಿದೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಶೀತದ ಪ್ರಮಾಣ ಹೆಚ್ಚಿದ್ದು, ಹವಾಮಾನ ಇಲಾಖೆ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ?

ಬೆಂಗಳೂರಿನಲ್ಲಿ ಚಳಿಯೋ ಚಳಿ

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 26°C ಇರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ – Kannada News | Rakshitha Shetty Make bigg Boss house mess Other Contestants In Shocks

ಬಿಗ್ ಬಾಸ್ ಮನೆಯ ಸ್ಪರ್ಧಿಗಳಾದ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಸೀಕ್ರೆಟ್​ ರೂಂನಲ್ಲಿ ಇಡಲಾಗಿದೆ. ಅವರು ಸೈಲೆಂಟ್ ಆಗಿ ದೊಡ್ಮನೆ ಒಳಗೆ ಬಂದಿದ್ದಾರೆ. ಬಂದು ಇಡೀ ಮನೆಯನ್ನು ಗಲೀಜು ಮಾಡಿದ್ದಾರೆ. ಹಾಗಂತ ಇದು ರಕ್ಷಿತಾ ಅವರ ಸ್ವ ಇಚ್ಛೆಯಿಂದ ಮಾಡಿದ್ದಲ್ಲ. ಇದು ಬಿಗ್ ಬಾಸ್​ನ ಆದೇಶ ಆಗಿತ್ತು. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru: ಫ್ರೀಯಾಗಿ ಪಾನಿಪುರಿ ಕೊಡದಿದ್ದಕ್ಕೆ ವ್ಯಾಪಾರಿ ಮೇಲೆ ಡೆಡ್ಲಿ ಅಟ್ಯಾಕ್​ – Kannada News | Vendor Stabbed for Refusing Free Panipuri in Bengaluru

ಬೆಂಗಳೂರು, ಡಿಸೆಂಬರ್​​ 19: ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ್ದಕ್ಕೆ ರಸ್ತೆಬದಿ ವ್ಯಾಪಾರಿಯೋರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾತ್ರಿ ವೇಳೆ ನಡೆದಿರುವ ಈ ಘಟನೆ ಬೀದಿಬದಿ ವ್ಯಾಪಾರಿಗಳು ಮತ್ತು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.

ಪೊಲೀಸರ ಮಾಹಿತಿಯ ಪ್ರಕಾರ ಬ್ಯಾಟರಾಯನಪುರ ಮುಖ್ಯ ರಸ್ತೆಯಲ್ಲಿರುವ ಪಾಮಿಪುರಿ ಅಂಗಡಿಯಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಘಟನೆ ನಡೆದಿದೆ. ಮದ್ಯಪಾನ ಮಾಡಿದ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವ ಅಂಗಡಿಗೆ ಬಂದಿದ್ದು, ಫ್ರೀಯಾಗಿ ತನಗೆ ಪಾನಿಪುರಿ ನೀಡುವಂತೆ ಡಿಮ್ಯಾಂಡ್​​ ಮಾಡಿದ್ದಾನೆ. ಆದರೆ ತನ್ನ ದೈನಂದಿನ ಜೀವನಕ್ಕೆ ಇದೇ ವ್ಯಾಪಾರ ನಂಬಿಕೊಂಡಿದ್ದ ವ್ಯಾಪಾರಿ, ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವಿಚಾರಕ್ಕೆ ವಾಗ್ವಾದ ಆರಂಭವಾಗಿದ್ದು, ಈ ವೇಳೆ ಏಕಾಕಿ ಆರೋಪಿ ಚಾಕು ತೆಗೆದು ವ್ಯಾಪಾರಿಯ ಹೊಟ್ಟೆಯ ಭಾಗಕ್ಕೆ ಚುಚ್ಚಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಜಾಗದ ವಿಚಾರಕ್ಕೆ ನಡೀತು ಬರ್ಬರ ಕೊಲೆ; ತೋಟದಲ್ಲೇ ಹರಿದ ನೆತ್ತರು

ಘಟನೆಯಿಂದಾಗಿ ಪಾನಿಪುರಿ ಅಂಗಡಿಯ ಬಳಿಯೇ ವ್ಯಾಪಾರಿ ರಕ್ತದ ಮಡುವಲ್ಲಿ ಬಿದ್ದಿದ್ದನ್ನು ಕಂಡವರು ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡುವ ಜೊತೆಗೆ ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಗಾಯಾಳುವನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯದ ಹೊರತಾಗಿಯೂ ಆತನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಸಂಬಂಧ ಪ್ರತ್ಯಕ್ಷದರ್ಶಿಗಳ ಹೇಳಿಕೆ ಮತ್ತು ಸಮೀಪದ ಅಂಗಡಿಗಳ ಸಿಸಿ ಕ್ಯಾಮರಾ ದೃಶ್ಯಗಳನ್ನು ಆಧರಿಸಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:28 am, Fri, 19 December 25

Source link

Video: ಅಮೆರಿಕದ ಉತ್ತರ ಕೆರೊಲಿನಾದಲ್ಲಿ ವಿಮಾನ ಪತನ, ನಾಸ್ಕರ್ ಚಾಲಕನ ಇಡೀ ಕುಟುಂಬವೇ ಬೆಂಕಿಯಲ್ಲಿ ಬೆಂದು ಹೋಯ್ತು – Kannada News | Former NASCAR Driver Greg Biffle Dies With Family in North Carolina Plane Crash

ಕೆರೊಲಿನಾ, ಡಿಸೆಂಬರ್ 19: ಅಮೆರಿಕದ ಉತ್ತರ ಕರೆಲಿನಾದಲ್ಲಿ ಗುರುವಾರ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಏಳು ಜನರು ಸಾವನ್ನಪ್ಪಿದ್ದಾರೆ.ಈ ಅಪಘಾತದಲ್ಲಿ ನಿವೃತ್ತ NASCAR ಚಾಲಕ ಗ್ರೆಗ್ ಬಿಫಲ್, ಅವರ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದ್ದಾರೆ. ಸೆಸ್ನಾ C550 ವಿಮಾನವು ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣದಿಂದ ಹೊರಟಿತು. ವಿಮಾನವು ಫ್ಲೋರಿಡಾಕ್ಕೆ ತೆರಳುತ್ತಿತ್ತು, ಆದರೆ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ, ಪೈಲಟ್ ವಿಮಾನ ನಿಲ್ದಾಣಕ್ಕೆ ಹಿಂದಿರುಗಿಸಲು ಪ್ರಯತ್ನಿಸಿದ್ದಾರೆ. ಗ್ರೆಗ್ ಬಿಫಲ್ ಅವರಿಗೆ 55 ವರ್ಷ ವಯಸ್ಸಾಗಿತ್ತು.

ನಂತರ ವಿಮಾನ ನೆಲಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು. ಷಾರ್ಲೆಟ್‌ನಿಂದ ಉತ್ತರಕ್ಕೆ ಸುಮಾರು 72 ಕಿಲೋಮೀಟರ್ ದೂರದಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ತಕ್ಷಣ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಉತ್ತರ ಕೆರೊಲಿನಾ ರಾಜ್ಯ ಹೆದ್ದಾರಿ ಗಸ್ತು ವರದಿ ಮಾಡಿದೆ. ಅಪಘಾತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.ಗ್ರೆಗ್ ಬಿಫಲ್ ಅವರ ಪತ್ನಿ ಕ್ರಿಸ್ಟಿನಾ, ಐದು ವರ್ಷದ ಮಗ ರೈಡರ್ ಮತ್ತು 14 ವರ್ಷದ ಮಗಳು ಎಮ್ಮಾ ಅವರೊಂದಿಗೆ ವಿಮಾನದಲ್ಲಿದ್ದರು.ಡೆನ್ನಿಸ್ ಡಟ್ಟನ್, ಅವರ ಮಗ ಜ್ಯಾಕ್ ಮತ್ತು ಕ್ರೇಗ್ ವ್ಯಾಡ್ಸ್‌ವರ್ತ್ ಕೂಡ ವಿಮಾನದಲ್ಲಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ! – Kannada News | Chikkaballapur Bus Robbery: Rupees 55 Lakh Belonging to Businessman Stolen

ಚಿಕ್ಕಬಳ್ಳಾಪುರ, ಡಿಸೆಂಬರ್​​ 19: ಬೆಂಗಳೂರಲ್ಲಿ ಎಟಿಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಹಾಡಹಗಲೇ ತಡೆದು ಕೋಟ್ಯಾಂತರ ರೂಪಾಯಿ ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ.

ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57 ಎಫ್​-3911 ಸಂಖ್ಯೆಯ ಬಸ್​​ ನಿಲ್ಲಿಸಲಾಗಿತ್ತು. ಊಟಕ್ಕೆಂದು ಕೆಳಗೆ ಇಳಿದು ಬರೋವಷ್ಟರಲ್ಲಿ ಸೀಟ್​​ನಲ್ಲಿ ಇಟ್ಟಿದ್ದ ಹಣದ ಬ್ಯಾಗ್​​ ನಾಪತ್ತೆಯಾಗಿದೆ. ಕಳುವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ ರಾವ್​ಗೆ ಸೇರಿದ್ದು, ಬೆಂಗಳೂರಿನಲ್ಲಿದ್ದ ಮನೆ ಮಾರಾಟದಿಂದ ಬಂದಿದ್ದ ನಗದನ್ನು ಅವರು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:

ಕ್ಷಣಮಾತ್ರದಲ್ಲಿ ಹಣಕದ್ದು ಎಸ್ಕೇಪ್​​

ಟಾಟಾ ಇಂಡಿಕಾ ಕಾರಿನಲ್ಲಿ ಬಂದಿದ್ದ ವ್ಯಕ್ತಿ ಹಣ ದೋಚಿದ್ದಾನೆ ಎಂದು ಬಸ್​ನಲ್ಲಿದ್ದ ಇತರ ಪ್ರಯಾಣಿಕರು ಮಾಹಿತಿ ನೀಡಿದ್ದಾರೆ. ಕಾರಿನಿಂದ ಇಳಿದು ನೇರವಾಗಿ ಬಸ್​ನೊಳಗೆ ನುಗ್ಗಿದ್ದ ವ್ಯಕ್ತಿ ಸೀಟ್ ನಂ.4ರಲ್ಲಿದ್ದ ಬ್ಯಾಗ್ ತೆಗೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಪೆರೇಸಂದ್ರ ಠಾಣೆಗೆ ಉದ್ಯಮಿ ಕೆ.ವೆಂಕಟೇಶ್ವರ ರಾವ್ ದೂರು ನೀಡಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 7:59 am, Fri, 19 December 25

Source link

Exit mobile version