700ಕ್ಕೆ 1163 ಅಂಕ! ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಕಪಟ್ಟಿಯಲ್ಲಿ ಮತ್ತೊಂದು ಎಡವಟ್ಟು

700ಕ್ಕೆ 1163 ಅಂಕ! ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಕಪಟ್ಟಿಯಲ್ಲಿ ಮತ್ತೊಂದು ಎಡವಟ್ಟು

ಬಳ್ಳಾರಿ, ಮಾರ್ಚ್ 7: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (Vijayanagara Sri Krishnadevaraya University) ಮತ್ತೊಂದು ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಗರಿಷ್ಠ 700 ಅಂಕಗಳಿರುವಲ್ಲಿ ಅದನ್ನೂ ಮೀರಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ 996, 1080, 1100, 840 ಮತ್ತು 1163 ಅಂಕಗಳನ್ನು ಮುದ್ರಿಸಿದ್ದು, ಇದನ್ನು ನೋಡಿ ವಿದ್ಯಾರ್ಥಿಗಳೇ ಶಾಕ್ ಆಗಿದ್ದಾರೆ. ಬಿಬಿಎ (BBA) ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಈ ತಪ್ಪು ಕಂಡುಬಂದಿದ್ದು, ಅಂಕಪಟ್ಟಿ ಪಡೆದ ವಿದ್ಯಾರ್ಥಿಗಳು ಹಾಗೂ ಪೋಷಕರು ಇದನ್ನು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಬಿಬಿಎ ಪದವಿ ಕೋರ್ಸ್‌ನಲ್ಲಿ ಏಳು ವಿಷಯಗಳು ಇದ್ದು, ಪ್ರತಿ ವಿಷಯಕ್ಕೂ ಗರಿಷ್ಠ 100 ಅಂಕಗಳಿರುತ್ತವೆ. ಹೀಗಾಗಿ ಒಟ್ಟು ಗರಿಷ್ಠ ಅಂಕ 700 ಮಾತ್ರವಾಗುತ್ತದೆ. ಆದರೆ ಕೆಲ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಗರಿಷ್ಠ ಅಂಕಕ್ಕಿಂತಲೂ ಹೆಚ್ಚು ಅಂಕಗಳನ್ನು ಮುದ್ರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

ಬಳ್ಳಾರಿಯ ಖಾಸಗಿ ಎಸ್​ಜಿಟಿ ಪದವಿ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಈ ಎಡವಟ್ಟು ಮಾಡಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯ ಈ ಖಾಸಗಿ ಕಾಲೇಜಿನ ಎಂಟು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಈ ರೀತಿಯ ಎಡವಟ್ಟು ಕಂಡುಬಂದಿದೆ.

ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಎಡವಟ್ಟು ಇದೇ ಮೊದಲಲ್ಲ!

ಗಮನಾರ್ಹ ಸಂಗತಿ ಎಂದರೆ, ಇದೇ ವಿಶ್ವವಿದ್ಯಾಲಯದಿಂದ ಈ ಹಿಂದೆ ಮಾಕ್‌ ಮಾರ್ಕ್ಸ್ ಕಾರ್ಡ್‌ನಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿಯ ಚಿತ್ರ ಹಾಗೂ ಸಿನಿಮಾ ನಟರ ಫೋಟೋಗಳು ಮುದ್ರಿತವಾಗಿದ್ದ ಘಟನೆ ಕೂಡ ಸುದ್ದಿಯಾಗಿತ್ತು. ಇದೀಗ ಮತ್ತೊಮ್ಮೆ ಅಂಕಪಟ್ಟಿ ಮುದ್ರಣದಲ್ಲಿ ಎಡವಟ್ಟು ಸಂಭವಿಸಿರುವುದು ಪ್ರಶ್ನೆಗಳನ್ನು ಹುಟ್ಟಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಎನ್‌.ಎಂ. ಸಾಲಿ ಅವರು, ‘ತಾಂತ್ರಿಕ ದೋಷದಿಂದ ಈ ಸಮಸ್ಯೆ ಉಂಟಾಗಿದೆ. ಎಂಟು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಈ ರೀತಿಯ ತಪ್ಪು ಕಂಡುಬಂದಿದ್ದು, ಸಮಸ್ಯೆಯನ್ನು ಈಗಾಗಲೇ ಸರಿಪಡಿಸುವ ಕೆಲಸ ನಡೆಯುತ್ತಿದೆ. ಶೀಘ್ರದಲ್ಲೇ ದೋಷಪೂರಿತ ಅಂಕಪಟ್ಟಿಗಳನ್ನು ಮರುಮುದ್ರಿಸಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ: ಅಂಕಪಟ್ಟಿಯಲ್ಲಿ ತನ್ನ ಬದಲಿಗೆ ಸ್ವಾಮೀಜಿ ಫೋಟೋ, ದಂಗಾದ ವಿದ್ಯಾರ್ಥಿ!

ಈ ಘಟನೆ ಈಗ ವಿದ್ಯಾರ್ಥಿಗಳಲ್ಲಿ ಗೊಂದಲ ಮತ್ತು ಆತಂಕ ಉಂಟುಮಾಡಿದ್ದು, ವಿಶ್ವವಿದ್ಯಾಲಯದ ಮೌಲ್ಯಮಾಪನ ಮತ್ತು ಅಂಕಪಟ್ಟಿ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Viral Video: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ಚಿತ್ರಕೂಟ (ಉತ್ತರ ಪ್ರದೇಶ): ಶಾಲೆ ಕೇವಲ ಅಕ್ಷರ ಕಲಿಸುವ ಜಾಗವಲ್ಲ, ಬದಲಾಗಿ ಜ್ಞಾನ ಮತ್ತು ಸಂಸ್ಕಾರವನ್ನು ನೀಡುವ ಪವಿತ್ರ ಸ್ಥಳ. ಇದು ವಿದ್ಯಾರ್ಥಿಗಳಲ್ಲಿ ಶಿಸ್ತು, ಮೌಲ್ಯಗಳು ಮತ್ತು ಒಳ್ಳೆಯ ನಡತೆಯನ್ನು ಬೆಳೆಸುವ ಭವಿಷ್ಯದ ಬುನಾದಿ. ಆದರೆ ಇಂತಹ ಜ್ಞಾನದ ದೇಗುಲದಲ್ಲೇ ಶಿಕ್ಷಕಿಯೊಬ್ಬಳು ತನ್ನ ಅಧಿಕಾರವನ್ನೇ ದುರ್ಬಳಕೆ ಮಾಡಿಕೊಂಡು ಪುಟ್ಟ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

ಏನಿದು ಘಟನೆ?

ಚಿತ್ರಕೂಟ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಈ ನಾಚಿಕೆಗೇಡಿನ ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ಮಧು ರೈ, ಪಾಠ ಮಾಡುವ ಬದಲು, ತರಗತಿಯಲ್ಲಿ ವಿದ್ಯಾರ್ಥಿನಿಯೊಬ್ಬಳಿಂದ ಮಸಾಜ್ ಮಾಡಿಸಿಕೊಂಡಿದ್ದಾಳೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಶಿಕ್ಷಕಿ ಮಧು ರೈ ತರಗತಿಯ ನೆಲದ ಮೇಲೆ ಮಲಗಿದ್ದು, ಸುತ್ತ ಇರುವ ಪುಟ್ಟ ಬಾಲಕಿಯರು ಶಿಕ್ಷಕಿಯ ಕಾಲುಗಳನ್ನು ಒತ್ತುತ್ತಿರುವ ದೃಶ್ಯ ಸೆರೆಯಾಗಿದೆ. ಜ್ಞಾನದ ದೀಪ ಬೆಳಗಬೇಕಾದ ಗುರುವೇ, ಮಕ್ಕಳನ್ನು ಇಂತಹ ಕೀಳು ಕೆಲಸಗಳಿಗೆ ಬಳಸಿಕೊಂಡಿರುವುದು ಪೋಷಕರು ಮತ್ತು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಶಂಖನಾದವು ಕಿವಿಗೆ ಬೀಳುತ್ತಿದ್ದಂತೆ ಗೋಶಾಲೆಯತ್ತ ಓಡೋಡಿ ಬಂದ ಹಸುಗಳು

ಶಿಕ್ಷಣ ಇಲಾಖೆಯ ಕ್ರಮ:
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ, ಕೂಡಲೇ ತನಿಖೆಗೆ ಆದೇಶಿಸಿದೆ. ಚಿತ್ರಕೂಟದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಗಳು (BSA) ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸಲು ಮುಂದಾಗಿರುವುದು ವರದಿಯಾಗಿದೆ.

“ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಘಟನೆಗಳು ನಡೆಯುವುದು ಶಿಕ್ಷಕ ವೃತ್ತಿಗೇ ಅವಮಾನ. ವಿದ್ಯಾರ್ಥಿಗಳ ಮೇಲೆ ಇಂತಹ ಒತ್ತಡ ಹೇರುವುದು ಶಿಕ್ಷಣ ಇಲಾಖೆಯ ನಿಯಮಗಳ ಸ್ಪಷ್ಟ ಉಲ್ಲಂಘನೆ,” ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ, ಶಾಲೆಗೆ ವಿದ್ಯೆಯನ್ನು ಕಲಿಯಲು ಬರುವ ಮಕ್ಕಳನ್ನು ಅಸಹಾಯಕತೆಯಿಂದ ತಮ್ಮ ಸೇವಕರಂತೆ ನಡೆಸಿಕೊಂಡ ಶಿಕ್ಷಕಿಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಧುರಂಧರ್ 2’ ಸಿನಿಮಾ ಟ್ರೇಲರ್ ಚೆನ್ನಾಗಿದ್ದರೂ ಅಭಿಮಾನಿಗಳಿಗೆ ಕಾಣ್ತಿದೆ ಕೊರತೆ

ಬಹು ನಿರೀಕ್ಷಿತ ‘ಧುರಂಧರ್ 2’ ಸಿನಿಮಾ (Dhurandhar 2) ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ. ಈ ಟ್ರೇಲರ್ ಗಮನ ಸೆಳೆದಿದೆ. ಟ್ರೇಲರ್ ಉದ್ದಕ್ಕೂ ಆ್ಯಕ್ಷನ್ ಇದೆ. ರಣವೀರ್ ಸಿಂಗ್ ಅವರು ಟ್ರೇಲರ್ ಅಲ್ಲಿ ರಕ್ತ ಹರಿಸಿದ್ದಾರೆ. ಟ್ರೇಲರ್ ನೋಡಿದರೆ ಸಿನಿಮಾ 2 ಸಾವಿರ ಕೋಟಿ ಕಲೆಕ್ಷನ್ ಮಾಡೋದು ಪಕ್ಕಾ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿವೆ. ಆದರೂ ಒಂದು ಕೊರತೆ ಕಾಣುತ್ತಿದೆ.

‘ಧುರಂಧರ್ 2’ ಸಿನಿಮಾ ಟ್ರೇಲರ್ ಉದ್ದಕ್ಕೂ ಆ್ಯಕ್ಷನ್ ಮೆರೆಯಲಾಗಿದೆ. ಈ ಚಿತ್ರದ ಟ್ರೇಲರ್ ನೋಡಿದವರಿಗೆ ಅದ್ಭುತ ಫೀಲ್ ಆಗಿದೆ. ಹಮ್ಜಾ ಅಲಿ ಮಜಾರಿ ಪಾಕಿಸ್ತಾನದಲ್ಲಿ ರೆಹಮಾನ್ ಡಕಾಯಿತ್​​ನ ಕೊಲೆ ಮಾಡುತ್ತಾನೆ. ಈ ಕೊಲೆ ಬಳಿಕ ಹಮ್ಜಾ ಪಾಕಿಸ್ತಾನದ ಡಾನ್ ಆಗುವ ರೀತಿಯಲ್ಲಿ ತೋರಿಸಲಾಗಿದೆ. ಅಲ್ಲದೆ, ಹಮ್ಜಾನ ಹಿಂದಿನ ಕಥೆಯನ್ನು ಕೂಡ ತೋರಿಸಲಾಗಿದೆ.

ಟ್ರೇಲರ್ ಉದ್ದಕ್ಕೂ ‘ಧುರಂದರ್ 2’ ಚಿತ್ರದಲ್ಲಿ ಆ್ಯಕ್ಷನ್ ಇದೆ. ಇದು ಆ್ಯಕ್ಷನ್ ಪ್ರಿಯರಿಗೆ ಸಾಕಷ್ಟು ಇಷ್ಟ ಆಗುವ ಸಾಧ್ಯತೆ ಇದೆ. ಆದರೆ, ಟ್ರೇಲರ್ ಅಲ್ಲಿ ಎಲ್ಲಿಯೂ ಅಕ್ಷಯ್ ಖನ್ನಾ ಕಾಣಿಸಿಲ್ಲ. ಮೊದಲ ಭಾಗದಲ್ಲಿ ಅವರು ರೆಹಮಾನ್ ಡಕಾಯಿತ್ ಪಾತ್ರ ಮಾಡಿದ್ದರು. ಈ ಪಾತ್ರ ಎಲ್ಲಿಯೂ ತೋರಿಸಿಲ್ಲ. ಇದು ಕೆಲವರ ಬೇಸರಕ್ಕೆ ಕಾರಣ ಆಗಿದೆ. ಕೆಲವು ದೃಶ್ಯಗಳಲ್ಲಿಯಾದರೂ ಅವರು ಕಾಣಿಸಿಕೊಳ್ಳಬೇಕಿತ್ತು ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: ಆ್ಯಕ್ಷನ್, ಆ್ಯಕ್ಷನ್, ಆ್ಯಕ್ಷನ್; ಬೀಸ್ಟ್​ ಮೋಡ್​​​ನಲ್ಲಿ ರಿವೇಂಜ್​ಗೆ ಇಳಿದ ರಣವೀರ್

‘ಧುರಂಧರ್ 2’ ಸಿನಿಮಾಗೆ ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಜಿಯೋ ಸ್ಟುಡಿಯೋ ಜೊತೆ ಆದಿತ್ಯ ಧಾರ್ ಕೂಡ ಸಿನಿಮಾದ ನಿರ್ಮಾಪಕ. ಭಾರತದ ವ್ಯಕ್ತಿಯೋರ್ವ ಪಾಕಿಸ್ತಾನದಲ್ಲಿ ಸ್ಪೈ ಆಗುತ್ತಾನೆ. ಅಲ್ಲಿಯವರ ಜೊತೆ ಸೇರಿ, ಭಾರತದ ಪರವಾಗಿ ಕೆಲಸ ಮಾಡುತ್ತಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಕೋಲಾರ, ಮಾರ್ಚ್​ 07: ಯುಪಿಎಸ್‌ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಸಾಗರ್ ಮೂಲತಃ ಕೋಲಾರ ಜಿಲ್ಲೆಯ ನೆನಮನಹಳ್ಳಿ ನಿವಾಸಿಯಾಗಿದ್ದು, ಅವರ ತಂದೆ-ತಾಯಿ ಇಬ್ಬರೂ ರೈತರು. ಸಾಗರ್ ಅವರು ಈ ಹಿಂದೆ ವಿಧಾನಸೌಧದಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿ ಮೂರು ವರ್ಷ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಸಬ್ ಇನ್ಸ್‌ಪೆಕ್ಟರ್ ಆಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದಾರೆ. ಏಳು ವರ್ಷಗಳ ಕಾಲ ಯುಪಿಎಸ್‌ಸಿ ಪರೀಕ್ಷೆಗೆ ಸತತವಾಗಿ ಅಧ್ಯಯನ ಮಾಡಿದ ಸಾಗರ್, ಇದು ತಮ್ಮ ಆರನೇ ಪ್ರಯತ್ನ ಎಂದು ತಿಳಿಸಿದ್ದಾರೆ. ಹಿಂದಿನ ಐದು ಪ್ರಯತ್ನಗಳಲ್ಲಿ ಪ್ರಿಲಿಮ್ಸ್ ಹಂತವನ್ನು ಸಹ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನ ಮೂರನ್ನೂ ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ. ಈ ಸಾಧನೆಗೆ ಕುಟುಂಬ, ಸ್ನೇಹಿತರು ಮತ್ತು ಮಾರ್ಗದರ್ಶಕರ ಬೆಂಬಲವೂ ಕಾರಣ ಎಂದು ಸಾಗರ್ ಹೇಳಿದ್ದಾರೆ. ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಸಿದ್ಧರಾಗಿರುವ ಸಾಗರ್, ಭವಿಷ್ಯದಲ್ಲಿ ಐಎಎಸ್ ಆಗುವ ಗುರಿ ಹೊಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗ್ರಾಹಕರಿಗೆ ಶಾಕ್ ಮೇಲೆ ಶಾಕ್: ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು, ಮಾರ್ಚ್ 7: ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಸಿಲಿಂಡರ್ ದರ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ದರ 115 ರೂಪಾಯಿ ಏರಿಕೆಯಾಗಿದೆ. ಅಲ್ಲದೆ, ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಸತತ ಮೂರು ತಿಂಗಳಿನಿಂದ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಕಾರ್ಯದರ್ಶಿ ವೀರೇಂದ್ರ ಕಾಮತ್ ಅವರ ಪ್ರಕಾರ, ವಾಣಿಜ್ಯ ಸಿಲಿಂಡರ್‌ಗಳ ದರ ಏರಿಕೆಯ ಜೊತೆಗೆ ಮುಂದಿನ ದಿನಗಳಲ್ಲಿ ಸಿಲಿಂಡರ್ ಅಭಾವ ಉಂಟಾಗುವ ಸಾಧ್ಯತೆ ಇದೆ.

ಕೇಂದ್ರ ಪೆಟ್ರೋಲಿಯಂ ಖಾತೆಯು ಹೊರಡಿಸಿರುವ ಮಾರ್ಗಸೂಚಿಯಂತೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ, ವಾಣಿಜ್ಯ ಸಿಲಿಂಡರ್‌ಗಳಿಗೆ ಅಭಾವ ಉಂಟಾಗಬಹುದು ಎಂದು ಡಿಸ್ಟ್ರಿಬ್ಯೂಟರ್‌ಗಳಿಂದ ಹೋಟೆಲ್ ಅಸೋಸಿಯೇಷನ್‌ಗೆ ಮಾಹಿತಿ ಲಭಿಸಿದೆ. ಬೆಂಗಳೂರು ಸೇರಿದಂತೆ ದೇಶದ 95% ಹೋಟೆಲ್‌ಗಳು ಅಡುಗೆ ಅನಿಲ ಸಿಲಿಂಡರ್‌ಗಳನ್ನೇ ಅವಲಂಬಿಸಿವೆ. ಸಿಲಿಂಡರ್ ಸಿಗದಿದ್ದರೆ ಹೋಟೆಲ್‌ಗಳನ್ನು ನಡೆಸಲು ಸಾಧ್ಯವಿಲ್ಲ. ಇದರಿಂದಾಗಿ ಅನೇಕ ಕಾರ್ಮಿಕರು ಕೆಲಸ ಕಳೆದುಕೊಳ್ಳಬಹುದು ಮತ್ತು ಹೋಟೆಲ್ ಮಾಲೀಕರಿಗೆ ದೊಡ್ಡ ನಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಹೋಟೆಲ್ ಅಸೋಸಿಯೇಷನ್ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಸದ್ಯಕ್ಕೆ ಯಾವುದೇ ದರ ಏರಿಕೆ ನಿರ್ಧಾರ ಕೈಗೊಂಡಿಲ್ಲವಾದರೂ, ಭವಿಷ್ಯದಲ್ಲಿ ಹೊರೆ ಹೆಚ್ಚಾದರೆ ಗ್ರಾಹಕರ ಮೇಲೆ ಬೆಲೆ ಹಾಕುವ ಅನಿವಾರ್ಯತೆ ಬರಬಹುದು ಎಂದು ಕಾಮತ್ ತಿಳಿಸಿದ್ದಾರೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

UPSC Result 2025: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಾದಗಿರಿ ಅಭ್ಯರ್ಥಿಗಳ ಸಾಧನೆ! ವೈದ್ಯ ವೃತ್ತಿ ಬಿಟ್ಟು ಯುಪಿಎಸ್‌ಸಿ ಗೆದ್ದ ಯುವತಿ

ಯಾದಗಿರಿ, ಮಾರ್ಚ್​ 07: ದೇಶದ ಅತ್ಯುನ್ನತ ಯುಪಿಎಸ್‌ಸಿ ಪರೀಕ್ಷೆಯ ಫಲಿತಾಂಶ (UPSC Exam Results) ಪ್ರಕಟವಾಗುತ್ತಿದ್ದಂತೆ ಶೈಕ್ಷಣಿಕವಾಗಿ ಹಿಂದುಳಿದ ಎಂದು ಕರೆಯಲಾಗುವ ಯಾದಗಿರಿ ಜಿಲ್ಲೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲೆಯ ನಾಲ್ವರು ಅಭ್ಯರ್ಥಿಗಳು ಒಂದೇ ವೇಳೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಜಿಲ್ಲೆಯ ಜನರಲ್ಲಿ ಹೆಮ್ಮೆ ಮೂಡಿಸಿದ್ದಾರೆ.

ಒಂದೇ ಜಿಲ್ಲೆಯ ನಾಲ್ವರ ಸಾಧನೆ!

ಯಾದಗಿರಿ ನಗರದ ಸಂದೀಪ್ ಬಾಡದ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 82ನೇ ರ್ಯಾಂಕ್ ಪಡೆದು ರಾಜ್ಯ ಮಟ್ಟದಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ. ಅಲ್ಲದೆ ಯಾದಗಿರಿ ನಗರದ ಡಾ. ನಿವೇದಿತಾ ಬಾವಿಮನಿ 469ನೇ ರ್ಯಾಂಕ್, ಶಹಾಪುರ ನಿವಾಸಿ ಬಸವರಾಜ್ ಜವಳಿ 664ನೇ ರ್ಯಾಂಕ್ ಹಾಗೂ ಚೆನ್ನೂರು ಗ್ರಾಮದ ಚಂದ್ರಶೇಖರ್ 880ನೇ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಡಾ. ನಿವೇದಿತಾ

ಇದರ ನಡುವೆ ಡಾ. ನಿವೇದಿತಾ ಬಾವಿಮನಿ ಅವರ ಮನೆಯಲ್ಲಿ ಸಂತಸದ ವಾತಾವರಣ ಮನೆ ಮಾಡಿದೆ. ಮಗಳು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಂಭ್ರಮಾಚರಣೆ ನಡೆಸಿದ್ದಾರೆ. ಪೋಷಕರು ಮಗಳಿಗೆ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರೆ, ಪೊಲೀಸರು ಸಹ ಮನೆಗೆ ಭೇಟಿ ನೀಡಿ ಶುಭಾಶಯ ಕೋರಿದರು. ನಿವೇದಿತಾ ಅವರ ತಂದೆ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದು, ತಾಯಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನಿವೇದಿತಾ ಏನು ಹೇಳ್ತಾರೆ ಕೇಳಿ

ಇದನ್ನೂ ಓದಿ UPSC Result 2025: UPSC ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ; ಅನುಜ್ ಅಗ್ನಿಹೋತ್ರಿ ದೇಶಕ್ಕೇ ಪ್ರಥಮ

ವೈದ್ಯೆಯಾಗಿದ್ದ ನಿವೇದಿತಾ ಮೂರು ವರ್ಷಗಳ ಹಿಂದೆ ವೈದ್ಯ ವೃತ್ತಿಯನ್ನು ತೊರೆದು ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿದ್ದರು. ಆರಂಭದಿಂದಲೂ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂಬ ಕನಸು ಹೊಂದಿದ್ದ ಅವರು ಸತತ ಪರಿಶ್ರಮ ಮತ್ತು ಕುಟುಂಬದ ಬೆಂಬಲದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಹೇಳಿದ್ದಾರೆ. ಹಿಂದುಳಿದ ಜಿಲ್ಲೆ ಎಂಬ ಹೆಸರು ಇದ್ದರೂ ಪ್ರಯತ್ನ ಪಟ್ಟರೆ ಎಲ್ಲವೂ ಸಾಧ್ಯ ಎಂದು ಅವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯಾಗಬೇಕು ಎಂಬ ಆಸೆಯಿದ್ದು, ಅವಕಾಶ ಸಿಕ್ಕರೆ ಜನಸೇವೆಯಲ್ಲಿ ತೊಡಗಿಕೊಳ್ಳುವ ಉದ್ದೇಶ ಹೊಂದಿದ್ದೇನೆ ಎಂದು ನಿವೇದಿತಾ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮಹದೇವಪುರ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾ. 8ಕ್ಕೆ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಜ್ಯೂನಿಯರ್ ಎನ್‌ಟಿಆರ್ ಭಾಗಿ

ಬೆಂಗಳೂರು, ಮಾರ್ಚ್ 7: ಬೆಂಗಳೂರು ನಗರದಲ್ಲಿ ಆರೋಗ್ಯ ಸೇವೆಗಳ ವಿಸ್ತರಣೆ ನಿಟ್ಟಿನಲ್ಲಿ ಮತ್ತೊಂದು ದೊಡ್ಡ ಹೆಜ್ಜೆ ಇಡಲಾಗಿದ್ದು, ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (KIMS Group of Hospitals) ವತಿಯಿಂದ ನಿರ್ಮಿಸಲಾಗಿರುವ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಮಾರ್ಚ್ 8 ರಂದು ಲೋಕಾರ್ಪಣೆಯಾಗಲಿವೆ. ಮಹದೇವಪುರ ಮತ್ತು ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಿರ್ಮಾಣಗೊಂಡಿರುವ ಈ ಆಸ್ಪತ್ರೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ತೆಲುಗು ಚಿತ್ರರಂಗದ ಖ್ಯಾತ ನಟ ಜ್ಯೂನಿಯರ್ ಎನ್​ಟಿಆರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಆಸ್ಪತ್ರೆಗಳ ಉದ್ಘಾಟನಾ ಸಮಾರಂಭವು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ PES University ಕ್ಯಾಂಪಸ್‌ನ ಎಂಆರ್‌ಡಿ ಆಡಿಟೋರಿಯಂನಲ್ಲಿ ನಡೆಯಲಿದೆ. ಮಹದೇವಪುರದ ಆಸ್ಪತ್ರೆಯಲ್ಲಿ ಬೆಳಗ್ಗೆ 9 ಗಂಟೆಗೆ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ಆಸ್ಪತ್ರೆಯಲ್ಲಿ ಬೆಳಗ್ಗೆ 11 ಗಂಟೆಗೆ ರಿಬ್ಬನ್ ಕಟ್ಟಿಂಗ್ ಮೂಲಕ ಲೋಕಾರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಕಿಮ್ಸ್ ಗ್ರೂಪ್ ಆಫ್ ಹಾಸ್ಪಿಟಲ್​ನ ಎಂಡಿ ಡಾ. ಬಿ ಭಾಸ್ಕರ ರಾವ್, ಸಿಇಒ ಡಾ. ನಿತೀಶ್ ಶೆಟ್ಟಿ ಸೇರಿದಂತೆ ಸಂಸ್ಥೆಯ ಪ್ರಮುಖರು ಭಾಗವಹಿಸಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಆರಂಭವಾಗುತ್ತಿದ್ದು, ಆಧುನಿಕ ವೈದ್ಯಕೀಯ ಸೌಲಭ್ಯಗಳು ಮತ್ತು ತಜ್ಞ ವೈದ್ಯರ ಸೇವೆಗಳನ್ನು ಇಲ್ಲಿ ಒದಗಿಸಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಈ ಕಾರ್ಯಕ್ರಮದಲ್ಲಿ ತೆಲುಗು ಚಿತ್ರರಂಗದ ಜನಪ್ರಿಯ ನಟ ಜ್ಯೂನಿಯರ್ ಎನ್​ಟಿಆರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ವಿಶೇಷ ಆಕರ್ಷಣೆಯಾಗಿರಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಆ್ಯಕ್ಷನ್, ಆ್ಯಕ್ಷನ್, ಆ್ಯಕ್ಷನ್; ಬೀಸ್ಟ್​ ಮೋಡ್​​​ನಲ್ಲಿ ರಿವೇಂಜ್​ಗೆ ಇಳಿದ ರಣವೀರ್

‘ಧುರಂಧರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈಗ ಚಿತ್ರದ ಸೀಕ್ವೆಲ್ ‘ಧುರಂಧರ್ 2’ ರಿಲೀಸ್​​ಗೆ ರೆಡಿ ಆಗುತ್ತಿದೆ. ಮಾರ್ಚ್​ 19ರಂದು ಸಿನಿಮಾ ವಿಶ್ವ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್​​ಗಾಗಿ ಫ್ಯಾನ್ಸ್ ಕಾದಿದ್ದರು. ಇಂದು (ಮಾರ್ಚ್ 7) ಬೆಳಿಗ್ಗೆ 11.1ಕ್ಕೆ ಸಿನಿಮಾದ ಟ್ರೇಲರ್ ಬಿಡುಗಡೆ ಕಂಡಿದೆ. ಈ ಟ್ರೇಲರ್ ನೋಡಿದ ಬಳಿಕ ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ.

‘ಧುರಂಧರ್’ ಚಿತ್ರವನ್ನು ಆದಿತ್ಯ ಧಾರ್ ನಿರ್ದೇಶನ ಮಾಡಿದ್ದಾರೆ. ಮೊದಲ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಸಿನಿಮಾ ಸೀಕ್ವೆಲ್ ಮೊದಲ ಭಾಗಕ್ಕಿಂತಲೂ ಹೆಚ್ಚು ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ‘ಧುರಂಧರ್’ ಸಿನಿಮಾ ಕೇಲವ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿತ್ತು. ಈಗ ‘ಧುರಂದರ್ 2’ ಸಿನಿಮಾ ಹಿಂದಿ ಜೊತೆಗೆ ಕನ್ನಡ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಲಿದೆ.

‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಪಾಕಿಸ್ತಾನಕ್ಕೆ ತೆರಳುತ್ತಾರೆ. ಅಲ್ಲಿ ಪಾಕಿಸ್ತಾನದವರಂತೆ ಇದ್ದು, ಸ್ಪೈ ಆಗಿ ಕೆಲಸ ಮಾಡುತ್ತಾರೆ. ಸಿನಿಮಾ ಭರ್ಜರಿ ಆ್ಯಕ್ಷನ್​​ಗಳನ್ನು ಒಳಗೊಂಡಿತ್ತು. ಕಂದಾಹಾರ್ ಹೈಜ್ಯಾಕ್, ಮುಂಬೈ ದಾಳಿ ಇತ್ಯಾದಿ ವಿಷಯಗಳನ್ನು ಒಳಗೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Hindu Devotional Tips: ಮಹಿಳೆಯರು ಶನಿವಾರದಂದು ತವರು ಮನೆಗೆ ಯಾಕೆ ಹೋಗಬಾರದು? ಜ್ಯೋತಿಷ್ಯ ಸಲಹೆ ಇಲ್ಲಿದೆ

ಮಹಿಳೆಯರು ಶನಿವಾರದಂದು ತವರು ಮನೆಗೆ ಬರುವುದು ಶುಭವೇ ಅಥವಾ ಅಶುಭವೇ? ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾನ್ಯವಾಗಿ, ಹೆಣ್ಣುಮಕ್ಕಳನ್ನು ಅತ್ತೆಯ ಮನೆಗೆ ಕಳುಹಿಸುವಾಗ ಭಾನುವಾರ ಅಥವಾ ಮಂಗಳವಾರದಂತಹ ದಿನಗಳನ್ನು ಪೋಷಕರು ಅಷ್ಟು ಸೂಕ್ತವೆಂದು ಪರಿಗಣಿಸುವುದಿಲ್ಲ. ಅದೇ ರೀತಿ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಹೋಗುವ ಪ್ರಯಾಣವನ್ನು ಅಷ್ಟು ಪ್ರಾಶಸ್ತ್ಯವಲ್ಲ ಎಂದು ಭಾವಿಸಲಾಗುತ್ತದೆ. ಶನಿವಾರವು ಕೆಟ್ಟ ದಿನವಲ್ಲ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮಂತನಿಗೆ ಮೀಸಲಾದ ಪವಿತ್ರ ದಿನ. ಆದರೆ, ವೈಜ್ಞಾನಿಕ ದೃಷ್ಟಿಕೋನದಿಂದ ನೋಡಿದಾಗ, ಶನಿವಾರದಂದು ಮನಸ್ಸು ಸಂಪೂರ್ಣವಾಗಿ ಶಾಂತವಾಗಿರಲು ಸಾಧ್ಯವಾಗದಿರಬಹುದು, ಒಂದಷ್ಟು ಸಂಕುಚಿತ ಭಾವನೆಗಳು ಬರಬಹುದು ಎಂದು ಹೇಳಲಾಗುತ್ತದೆ.

ಗುರೂಜಿಯವರು ಹೇಳುವಂತೆ, ಹಿಂದೂ ಸನಾತನ ಸಂಸ್ಕೃತಿಯಲ್ಲಿ, ಪ್ರತಿ ದಿನವೂ ಒಂದೊಂದು ದೇವರಿಗೆ ಮೀಸಲಾಗಿದೆ. ಭಾನುವಾರ ಸೂರ್ಯನಿಗೆ, ಸೋಮವಾರ ಶಿವನಿಗೆ, ಮಂಗಳವಾರ ಸುಬ್ರಹ್ಮಣ್ಯನಿಗೆ, ಬುಧವಾರ ವಿಷ್ಣು, ಗಣಪತಿ ಅಥವಾ ಕಾಲಭೈರವನಿಗೆ, ಗುರುವಾರ ಗುರು ಗ್ರಹಕ್ಕೆ, ಮತ್ತು ಶುಕ್ರವಾರ ದೇವಿಗೆ ಸಮರ್ಪಿತವಾಗಿದೆ. ಶನಿವಾರದಂದು ವಿಷ್ಣು ಭಕ್ತರು ಉಪವಾಸ ಮತ್ತು ಪೂಜೆಗಳನ್ನು ಆಚರಿಸುತ್ತಾರೆ. ಈ ದಿನ ಉಪವಾಸ ಮತ್ತು ಪೂಜೆಗಳನ್ನು ಮಾಡುವ ಮಹಿಳೆಯರಿಗೆ ದೈಹಿಕವಾಗಿ ಸ್ವಲ್ಪ ತೊಂದರೆಯಾಗಬಹುದು ಎಂಬ ಭಾವನೆ ಇದೆ.

ಇದನ್ನೂ ಓದಿ: ಈ ಒಂದು ವಸ್ತುವನ್ನು ಎಂದಿಗೂ ಯಾರಿಗೂ ಉಡುಗೊರೆಯಾಗಿ ನೀಡಬೇಡಿ; ಅಪಾಯ ತಪ್ಪಿದ್ದಲ್ಲ!

ಕುಟುಂಬಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. “ಗೃಹಿಣಿ ಗೃಹ ಮುಚ್ಯತೇ” ಎಂಬ ಮಾತು ಇದನ್ನೇ ಸೂಚಿಸುತ್ತದೆ. ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಹೋದರೆ ಅತ್ತೆಯ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು ಎಂದು ಪೂರ್ವಿಕರ ಅನುಭವಗಳು ಹೇಳುತ್ತವೆ. ಅಲ್ಲದೆ, ಅತ್ತೆ-ಮಾವ ಅಥವಾ ಕುಟುಂಬದ ಇತರ ಸದಸ್ಯರೊಂದಿಗೆ ಮಾನಸಿಕವಾಗಿ ಕೆಲವು ಉದ್ವಿಗ್ನತೆಗಳು ಉಂಟಾಗಬಹುದು. ಶನಿವಾರದಂದು ತವರು ಮನೆಗೆ ಭೇಟಿ ನೀಡಿದಾಗ, ಕೆಲವೊಮ್ಮೆ ಕುಟುಂಬದ ಸದಸ್ಯರಿಂದ ಮಾನಸಿಕವಾಗಿ ಕೆಲವು ಮಾತುಗಳನ್ನು ಕೇಳಬೇಕಾಗಬಹುದು.

ಧಾರ್ಮಿಕವಾಗಿ, ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಈ ಎಲ್ಲಾ ಅಂಶಗಳನ್ನು ಪರಿಗಣಿಸಿದಾಗ, ಶನಿವಾರದಂದು ಅತ್ತೆಯ ಮನೆಯಿಂದ ತವರು ಮನೆಗೆ ಭೇಟಿ ನೀಡುವುದು ಅಷ್ಟು ಸೂಕ್ತವಲ್ಲ ಎಂಬುದು ನಂಬಿಕೆಯಾಗಿದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ! ಗೂಗಲ್ ಸೇರಿ ಹಲವು ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

ಬೆಂಗಳೂರು, ಮಾರ್ಚ್​ 07: ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ( Justice A.H.M.D. Nawaz) ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಕೇಂದ್ರ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆ, ಗೂಗಲ್ ಇಂಡಿಯಾ, ಗೂಗಲ್ ಇಂಕ್, ಕೊಲಂಬೋ ಟೆಲಿಗ್ರಾಫ್ ಹಾಗೂ ಲಂಕಾ ಇ-ನ್ಯೂಸ್‌ಗೆ ನೋಟಿಸ್ ಜಾರಿ ಮಾಡಿದೆ.

ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವ

ಅರ್ಜಿಯಲ್ಲಿ, 2015 ಮತ್ತು 2020ರಲ್ಲಿ ತಮ್ಮ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಮಾನಹಾನಿ ಸುದ್ದಿಗಳನ್ನು ಪ್ರಕಟಿಸಲಾಗಿದೆ ಎಂದು ನವಾಜ್ ಆರೋಪಿಸಿದ್ದಾರೆ. ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಕಾರಣ ಅಲ್ಲಿನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರೆ ಹಿತಾಸಕ್ತಿ ಸಂಘರ್ಷದ ಪ್ರಶ್ನೆ ಉದ್ಭವಿಸಬಹುದು ಎಂದು ಅವರು ತಿಳಿಸಿದ್ದಾರೆ. ತನ್ನ ಅಹವಾಲಿಗೆ ತಾನೇ ತೀರ್ಪು ನೀಡಬಾರದೆಂಬ ತತ್ವದ ಹಿನ್ನೆಲೆಯಲ್ಲಿ ಭಾರತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಅರ್ಜಿಯಲ್ಲಿ ವಿವರಿಸಲಾಗಿದೆ.

ಇನ್ನು ಆನ್‌ಲೈನ್ ಸುದ್ದಿ ತಾಣಗಳಲ್ಲಿ ತಮ್ಮ ವಿರುದ್ಧ ದುರುದ್ದೇಶಪೂರಿತವಾಗಿ ಸುದ್ದಿಗಳನ್ನು ಹಂಚಲಾಗಿದೆ ಎಂದು ಹೇಳಿರುವ ಅವರು, ಶ್ರೀಲಂಕಾ ಕೋರ್ಟ್ ಆಫ್ ಅಪೀಲ್‌ನ ಮುಖ್ಯಸ್ಥರಾಗಿದ್ದಾಗ ನೀಡಿದ ಕಾನೂನು ಅಭಿಪ್ರಾಯವನ್ನು ತಪ್ಪಾಗಿ ಉಲ್ಲೇಖಿಸಿ ಮಾನಹಾನಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಭಾರತದ ಸಂವಿಧಾನವು ಘನತೆಯಿಂದ ಬದುಕುವ ಹಕ್ಕನ್ನು ವಿದೇಶೀಯರಿಗೂ ವಿಸ್ತರಿಸಿರುವುದರಿಂದ ಈ ಅರ್ಜಿಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ ಶ್ರೀಲಂಕಾ ಕಡೆ ಹೊರಟ ಇರಾನಿನ 2ನೇ ಹಡಗು; ಮತ್ತೆ ದಾಳಿಯ ಭೀತಿಯಲ್ಲಿ ಅಧಿಕಾರಿಗಳು

ನೋಟಿಸ್ ನೀಡಿದರು ಮಾಹಿತಿ ತೆಗೆದು ಹಾಕದ ಗೂಗಲ್!

ಗೂಗಲ್‌ಗೆ ಈ ಕುರಿತು ನೋಟಿಸ್ ನೀಡಿದ್ದರೂ ಸಹ ಸಂಬಂಧಿತ ಸುದ್ದಿಗಳನ್ನು ಆನ್‌ಲೈನ್‌ನಿಂದ ತೆಗೆದುಹಾಕಲಾಗಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಹೀಗಾಗಿ ಅವಹೇಳನಕಾರಿ ಹಾಗೂ ಮಾನಹಾನಿಕರ ವಿಷಯಗಳನ್ನು ತಕ್ಷಣವೇ ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ನ್ಯಾಯಾಲಯವನ್ನು ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version