ಇಮ್ರಾನ್ ಜೊತೆ ನಟಿಸಿದ ಸ್ಟಾರ್ ನಟಿ ಈಗ ಕ್ರಿಕೆಟರ್​ ಪತ್ನಿ

ಇಮ್ರಾನ್ ಜೊತೆ ನಟಿಸಿದ ಸ್ಟಾರ್ ನಟಿ ಈಗ ಕ್ರಿಕೆಟರ್​ ಪತ್ನಿ

ಬಾಲಿವುಡ್ ಹೀರೋ ಇಮ್ರಾನ್ ಹಶ್ಮಿ ಬಗ್ಗೆ ಹೇಳಬೇಕಾಗಿಲ್ಲ. ಒಂದು ಕಾಲದಲ್ಲಿ ಅವರು ರೊಮ್ಯಾನ್ಸ್ ಚಿತ್ರಗಳಿಗೆ ಮನೆಮಾತಾಗಿದ್ದರು. ಹಿಂದಿಯಲ್ಲಿ ಅನೇಕ ಹಿಟ್ ಚಿತ್ರಗಳೊಂದಿಗೆ ನಟನಾಗಿ ತಮ್ಮ ಛಾಪು ಮೂಡಿಸಿದರು. ಇಮ್ರಾನ್ ಹಶ್ಮಿಯನ್ನು ಒಂದು ಕಾಲದಲ್ಲಿ ಸೀರಿಯಲ್ ಕಿಸ್ಸರ್ ಎಂದು ಕರೆಯಲಾಗುತ್ತಿತ್ತು. ಆ ಸಮಯದಲ್ಲಿ ಅವರು ತಮ್ಮ ಚಿತ್ರಗಳಿಂದ ಬಹಳ ಜನಪ್ರಿಯರಾದರು. ಈಗ ಅವರು ಕಥೆ ಇಷ್ಟವಾದರೆ ಖಳನಾಯಕನ ಪಾತ್ರಗಳನ್ನು ಮಾಡಲು ಸಿದ್ಧರಾಗಿದ್ದಾರೆ. ವಿಶೇಷವಾಗಿ ಈ ನಾಯಕನೊಂದಿಗೆ ನಟಿಸಿದ ನಂತರ ರಾತ್ರೋರಾತ್ರಿ ಸೆನ್ಸೇಷನ್ ಆಗಿರುವ ಅನೇಕ ನಾಯಕಿಯರಿದ್ದಾರೆ. ಕೆಲವರು ಇನ್ನೂ ಚಲನಚಿತ್ರಗಳಲ್ಲಿ ಸಕ್ರಿಯರಾಗಿದ್ದರೆ. ಇನ್ನು ಕೆಲವರು ಚಲನಚಿತ್ರಗಳಿಂದ ದೂರ ಉಳಿದಿದ್ದಾರೆ. ಇಮ್ರಾನ್ ಹಶ್ಮಿಯೊಂದಿಗೆ ಪರದೆಯನ್ನು ಹಂಚಿಕೊಂಡ ನಟಿ, ಟೀಮ್ ಇಂಡಿಯಾದ ಬೌಲರ್‌ನ ಪತ್ನಿ. ಅವರ ಹೆಸರು ಗೀತಾ ಬಸ್ರಾ.

2006ರಲ್ಲಿ, ಅವರು ಇಮ್ರಾನ್ ಹಶ್ಮಿ ಅವರೊಂದಿಗೆ ‘ಸೋ ದಿಲ್ ದಿಯಾ ಹೈ’ ಚಿತ್ರದಲ್ಲಿ ನಟಿಸಿದರು. ಈ ಚಿತ್ರದೊಂದಿಗೆ ಅವರು ರಾತ್ರೋರಾತ್ರಿ ಜನಪ್ರಿಯರಾದರು. ಗೀತಾ ಮಾರ್ಚ್ 13, 1984ರಂದು ಇಂಗ್ಲೆಂಡ್‌ನ ಪೋರ್ಟ್ಸ್‌ಮೌತ್‌ನಲ್ಲಿರುವ ಪಂಜಾಬಿ ಕುಟುಂಬದಲ್ಲಿ ಜನಿಸಿದರು. ಭಾರತಕ್ಕೆ ಬರುವ ಮೊದಲು, ಅವರು ಕ್ರಿಮಿನಲ್ ಮನಶ್ಶಾಸ್ತ್ರಜ್ಞರಾಗಲು ಬಯಸಿದ್ದರು. ಆದರೆ ಅವರು ಆಕಸ್ಮಿಕವಾಗಿ ಸಿನಿಮಾ ಪ್ರವೇಶಿಸಿದರು.

ಅವರು ‘ದಿ ಟ್ರೈನ್’ (2007), ‘ಜಿಲ್ಲಾ ಘಜಿಯಾಬಾದ್’ (2013), ‘ಮಿಸ್ಟರ್ ಜೋ ಬಿ. ಕಾರ್ವಾಲ್ಹೋ’ (2014) ನಂತಹ ಹಿಂದಿ ಚಿತ್ರಗಳಲ್ಲಿ ನಟಿಸಿದರು. ಆದರೆ ಅವರು ಇಮ್ರಾನ್ ಅವರ ಚಿತ್ರದಿಂದ ಜನಪ್ರಿಯರಾದರು.

ಇದನ್ನೂ ಓದಿ: ಇಮ್ರಾನ್ ಹಶ್ಮಿ ಜೊತೆಗೆ ದಿಶಾ ಪಟಾನಿ ಸಿನಿಮಾ, ತಾಳಲಿದ್ದಾರೆ ಹಾಟ್ ಅವತಾರ

ಗೀತಾ ಬಸ್ರಾ ಅವರು ಭಾರತೀಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರನ್ನು ವಿವಾಹವಾದರು. ದಿ ಟ್ರೈನ್ ಚಿತ್ರದ ವೋ ಅಜ್ನಬಿ ಹಾಡಿನಲ್ಲಿ ಗೀತಾರನ್ನು ನೋಡಿದಾಗ ಹರ್ಭಜನ್ ಇಂಪ್ರೆಸ್ ಆಗುತ್ತಿದ್ದರು. ಯುವರಾಜ್ ಸಿಂಗ್ ಮೂಲಕ ಅವರಿಗೆ ಸಂದೇಶ ಕಳುಹಿಸಿದರು. ಮೊದಲಿಗೆ, ಗೀತಾ ಅವರು ಹರ್ಭಜನ್ ಸಿಂಗ್​ರನ್ನ ನಿರ್ಲಕ್ಷಿಸಿದರು. ಆದರೆ ನಂತರ, ಅವರ ಪರಿಚಯವು ಸ್ನೇಹಕ್ಕೆ ತಿರುಗಿತು.. ಮತ್ತು ನಂತರ ಅದು ಪ್ರೀತಿಗೆ ತಿರುಗಿ ಮದುವೆಯ ಹಂತವನ್ನು ತಲುಪಿತು. ಈಗ ಗೀತಾ ಚಲನಚಿತ್ರಗಳಿಂದ ದೂರವಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಭಾರತವನ್ನು ಹೊರಹಾಕಬಹುದಿತ್ತು, ಸೌತ್ ಆಫ್ರಿಕನ್ನರು ದಡ್ಡರು..!

ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಮಾತಿನಂತೆ ಟಿ20 ವಿಶ್ವಕಪ್ ಕಳೆದು ವಾರವಾದರೂ ಅದರ ಬಗ್ಗೆ ಚರ್ಚೆಗಳು ಮಾತ್ರ ಮುಂದುವರೆದಿದೆ. ಆದರೆ ಈ ಬಾರಿ ಚರ್ಚೆಯ ನಡುವೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಪ್ರಸ್ತಾಪಿಸಿರುವ ವಿಷಯವೇ ದೊಡ್ಡ ಚರ್ಚೆಯಾಗಿ ಮಾರ್ಪಟ್ಟಿದೆ. ಅದು ಸಹ ಟೀಮ್ ಇಂಡಿಯಾವನ್ನು ಟೂರ್ನಿಯಿಂದ ಹೊರಹಾಕಬಹುದಾಗಿದ್ದ ಕುತಂತ್ರವನ್ನು ಪ್ರಸ್ತಾಪಿಸಿ ಮಾತನಾಡಿ ವಾನ್ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.

ಪಾಡ್​ಕಾಸ್ಟ್​ವೊಂದರಲ್ಲಿ ಮಾತನಾಡಿದ ಮೈಕಲ್ ವಾನ್, ಟಿ20 ವಿಶ್ವಕಪ್‌ನ ಸೂಪರ್ 8 ಹಂತದಲ್ಲಿ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಸೋತಿದ್ದರೆ, ಭಾರತ ತಂಡ ಟೂರ್ನಿಯಿಂದ ಹೊರಬೀಳುತ್ತಿತ್ತು ಎಂಬ ವಾದ ಮುಂದಿಟ್ಟಿದ್ದಾರೆ.

ಸೂಪರ್ 8 ಹಂತದ ಆರಂಭದಲ್ಲಿ ಸೌತ್ ಆಫ್ರಿಕಾ ವಿರುದ್ಧ ಭಾರತ ಭಾರಿ ಅಂತರದ ಸೋಲು ಕಂಡಿತ್ತು. ಇದರಿಂದ ಟೀಮ್ ಇಂಡಿಯಾದ ‘ನೆಟ್ ರನ್ ರೇಟ್’ ಕುಸಿದಿತ್ತು.

ಒಂದು ವೇಳೆ ಸೌತ್ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಉದ್ದೇಶಪೂರ್ವಕವಾಗಿ ಸೋತಿದ್ದರೆ, ಅಂಕಪಟ್ಟಿಯ ಲೆಕ್ಕಾಚಾರದಲ್ಲಿ ಭಾರತ ತಂಡಕ್ಕೆ ಸೆಮಿಫೈನಲ್ ತಲುಪಲು ಸಾಧ್ಯವಾಗುತ್ತಿರಲಿಲ್ಲ.

ಭಾರತದಂತಹ ಬಲಿಷ್ಠ ತಂಡವನ್ನು ಟೂರ್ನಿಯಿಂದ ಹೊರಹಾಕುವ ಅವಕಾಶವಿದ್ದರೂ ಅದನ್ನು ಬಳಸಿಕೊಳ್ಳದ ಸೌತ್ ಆಫ್ರಿಕಾವನ್ನು ಮೈಕಲ್ ವಾನ್ “ಮುಠ್ಠಾಳರ ತಂಡ” ಎಂದು ಕರೆದಿದ್ದಾರೆ.

ಸೌತ್ ಆಫ್ರಿಕಾ ಆ ಪಂದ್ಯವನ್ನು ಗೆದ್ದಿದ್ದರಿಂದ ಭಾರತಕ್ಕೆ ಸೆಮಿಫೈನಲ್ ತಲುಪಲು ದಾರಿ ಸುಲಭವಾಯಿತು. ಅಂತಿಮವಾಗಿ ಭಾರತ ವಿಶ್ವಕಪ್ ಗೆದ್ದರೆ, ದಕ್ಷಿಣ ಆಫ್ರಿಕಾ ಸೆಮಿಫೈನಲ್‌ನಲ್ಲಿ ಸೋತು ಹೊರಬಿದ್ದಿತು.

ವಿಶ್ವಕಪ್ ಗೆಲ್ಲಲು ಬಲಿಷ್ಠ ತಂಡಗಳನ್ನು ಮೊದಲೇ ಟೂರ್ನಿಯಿಂದ ಹೊರಹಾಕಬೇಕು ಎನ್ನುವುದು ವಾನ್ ಅವರ ವಾದ. ಒಂದು ವೇಳೆ ಸೌತ್ ಆಫ್ರಿಕಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಸೋತಿದ್ದರೆ, ಟೀಮ್ ಇಂಡಿಯಾಗೆ ಕೊನೆಯ ಮ್ಯಾಚ್​ನಲ್ಲಿ ನೆಟ್ ರನ್ ರೇಟ್​ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಎದುರಾಗುತ್ತಿತ್ತು.

ಇತ್ತ ಸೌತ್ ಆಫ್ರಿಕಾ ತಂಡ ಝಿಂಬಾಬ್ವೆ ವಿರುದ್ಧ ಗೆದ್ದು ಸೆಮಿಫೈನಲ್​ಗೇರಬಹುದಿತ್ತು. ಅತ್ತ ವೆಸ್ಟ್ ಇಂಡೀಸ್ ತಂಡಕ್ಕೂ ಸೆಮಿಫೈನಲ್​ಗೇರುವ ಅವಕಾಶ ದೊರೆಯುತ್ತಿತ್ತು. ಇಲ್ಲಿ ನೆಟ್ ರನ್ ರೇಟ್ ಆಧಾರದ ಮೇಲೆ ಟೀಮ್ ಇಂಡಿಯಾ ಗೆಲ್ಲಬೇಕಾದ ಅನಿವಾರ್ಯ ಎದುರಾಗುವುದರಿಂದ ಅವರು ಟೂರ್ನಿಯಿಂದ ಹೊರಬೀಳುತ್ತಿದ್ದರು.

ಆದರೆ ಸೌತ್ ಆಫ್ರಿಕಾ ಇಡೀ ಟೂರ್ನಿಯ ದಡ್ಡರ ತಂಡ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದರು. ಇದರಿಂದ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಸುಲಭವಾಯಿತು. ಆ ಬಳಿಕ ಸೌತ್ ಆಫ್ರಿಕಾ ಸೆಮಿಫೈನಲ್​ನಲ್ಲಿ ಸೋತರು. ಅತ್ತ ಸೆಮಿಫೈನಲ್​ನಲ್ಲಿ ಗೆದ್ದು ಭಾರತ ತಂಡವು ಇದೀಗ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಒಂದು ವೇಳೆ ಸೌತ್ ಆಫ್ರಿಕಾ ತಂಡ ಸ್ವಲ್ಪ ಬುದ್ಧಿ ಉಪಯೋಗಿಸಿದ್ದರೆ ಟೀಮ್ ಇಂಡಿಯಾವನ್ನು ಹೊರಹಾಕಬಹುದಿತ್ತು ಎಂದು ಮೈಕಲ್ ವಾನ್ ಹೇಳಿದ್ದಾರೆ.

ಕ್ರೀಡಾ ಸ್ಫೂರ್ತಿ ವಿರುದ್ಧ:

ಮೈಕಲ್ ವಾನ್ ಅವರ ಈ ಹೇಳಿಕೆಯು ಕ್ರೀಡಾ ಸ್ಫೂರ್ತಿಗೆ  ವಿರುದ್ಧ. ಏಕೆಂದರೆ  ಪ್ರತಿಯೊಂದು ಪಂದ್ಯವನ್ನೂ ಗೆಲ್ಲುವ ಉದ್ದೇಶದಿಂದಲೇ ಆಡುವುದು ಕ್ರೀಡೆಯ ಮೂಲ ನಿಯಮ. ಉದ್ದೇಶಪೂರ್ವಕವಾಗಿ ಸೋಲುವುದು ಅಭಿಮಾನಿಗಳಿಗೆ ಮತ್ತು ಕ್ರೀಡೆಗೆ ಮಾಡುವ ಅಪಚಾರವೆಂದು ಪರಿಗಣಿಸಲಾಗುತ್ತದೆ.

ಇನ್ನು ಐಸಿಸಿ ನಿಯಮಾವಳಿಗಳ ಪ್ರಕಾರ, ಪಂದ್ಯದ ಫಲಿತಾಂಶವನ್ನು ಮ್ಯಾನಿಪುಲೇಟ್ ಮಾಡುವುದು ಅಥವಾ ಉದ್ದೇಶಪೂರ್ವಕವಾಗಿ ಕಳಪೆ ಪ್ರದರ್ಶನ ನೀಡುವುದು ಶಿಕ್ಷಾರ್ಹ ಅಪರಾಧ. ಹೀಗೆ ಮಾಡಿದರೆ ತಂಡದ ನಾಯಕನಿಗೆ ನಿಷೇಧ ಹೇರುವ ಅವಕಾಶವೂ ಇರುತ್ತದೆ.

ಇದನ್ನೂ ಓದಿ: ಯಾರೂ ಸಹ ಈ ರೀತಿ ರನೌಟ್ ಮಾಡಬೇಡಿ: ಕೈಫ್ ಕಿವಿಮಾತು

ಇತ್ತ ಕ್ರೀಡಾ ಸ್ಫೂರ್ತಿಯಿಂದಲೇ ಆಡಿ ಗೆದ್ದ ಸೌತ್ ಆಫ್ರಿಕಾ ತಂಡವನ್ನು ಮೈಕಲ್ ವಾನ್ ದಡ್ಡರು ಎಂದು ಕರೆದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ ಕ್ರೀಡಾ ಸ್ಫೂರ್ತಿಗೆ ವಿರುದ್ಧವಾಗಿ ಸಲಹೆ ನೀಡಿರುವುದು ಕೂಡ ಇದೀಗ ಚರ್ಚೆಗೆ ಗ್ರಾಸವಾಗಿದೆ.

 

 

Source link

ಫಾರಂಹೌಸ್‌ಗೆ ನುಗ್ಗಿ ನಾಯಿ ಮೇಲೆ ಚಿರತೆ ಅಟ್ಯಾಕ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ನಂಜನಗೂಡು, ಮಾ.14: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊರಳವಾಡಿ ಗೇಟ್ ಬಳಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನವಸತಿ ಪ್ರದೇಶಕ್ಕೆ ನುಗ್ಗಿ ಸಾಕುಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದೆ. ಮಧ್ಯರಾತ್ರಿ ಫಾರಂಹೌಸ್‌ವೊಂದಕ್ಕೆ ನುಗ್ಗಿದ ಚಿರತೆ ನಾಯಿಯನ್ನು ಎಳೆದುಕೊಂಡು ಹೋಗಲು ಯತ್ನಿಸಿದ ಘಟನೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಹೊರಳವಾಡಿ ಗೇಟ್ ಸಮೀಪವಿರುವ ಗಿರೀಶ್ ಎಂಬುವರಿಗೆ ಸೇರಿದ ‘ಅಭಿ ಫಾರಂ ಹೌಸ್’ಗೆ ಮಧ್ಯರಾತ್ರಿ ಚಿರತೆ ನುಗ್ಗಿದೆ. ಅವರು ಸಾಕಿರುವ ನಾಯಿಯ ಮೇಲೆ ಏಕಾಏಕಿ ದಾಳಿ ನಡೆಸಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದೆ. ಚಿರತೆ ದಾಳಿ ಮಾಡುತ್ತಿದ್ದಂತೆ ಫಾರಂಹೌಸ್ ಮಾಲೀಕರು ಮತ್ತು ಸಿಬ್ಬಂದಿ ಜೋರಾಗಿ ಕೂಗಾಡಿದ್ದಾರೆ. ಕಿರುಚಾಟ ಮತ್ತು ಶಬ್ದಕ್ಕೆ ಹೆದರಿದ ಚಿರತೆ ನಾಯಿಯನ್ನು ಬಿಟ್ಟು ಅಲ್ಲಿಂದ ಓಡಿ ಹೋಗಿದೆ. ಚಿರತೆಯು ಫಾರಂಹೌಸ್ ಆವರಣದಲ್ಲಿ ಓಡಾಡುತ್ತಿರುವ ಮತ್ತು ನಾಯಿಯ ಮೇಲೆ ದಾಳಿ ನಡೆಸುತ್ತಿರುವ ದೃಶ್ಯಗಳು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ಹೊರಳವಾಡಿ ಗ್ರಾಮದ ಸುತ್ತಮುತ್ತ ಕಳೆದ ಹಲವು ದಿನಗಳಿಂದ ಚಿರತೆ ಓಡಾಡುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ಹಲವು ಬಾರಿ ದೂರು ನೀಡಿ, ಬೋನು ಇಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಾರಾದರೂ ಪ್ರಾಣ ಕಳೆದುಕೊಂಡ ಮೇಲೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರೆಯೇ?” ಎಂದು ಗ್ರಾಮಸ್ಥರು ಪ್ರಶ್ನಿಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ರೋಗಿಗಳ ಪಾಲಿಗೆ ನರಕಯಾತನೆಯ ತಾಣ: ಬೆಡ್‌ ಇಲ್ಲವೆಂದು ಗಾಯಾಳನ್ನು ಹೊರಗೇ ನಿಲ್ಲಿಸಿದ ಸಿಬ್ಬಂದಿ

ಹುಬ್ಬಳ್ಳಿ, ಮಾ.14: ಉತ್ತರ ಕರ್ನಾಟಕದ ಅತಿದೊಡ್ಡ ಸರ್ಕಾರಿ ಆಸ್ಪತ್ರೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (KIMS) ಈಗ ರೋಗಿಗಳ ಪಾಲಿಗೆ ನರಕಯಾತನೆಯ ತಾಣವಾಗಿ ಮಾರ್ಪಡುತ್ತಿದೆಯೇ ಎಂಬ ಅನುಮಾನ ಮೂಡಿದೆ. ಧಾರವಾಡದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೊಬ್ಬರಿಗೆ ಬೆಡ್‌ ಇಲ್ಲ ಎಂಬ ಕಾರಣ ನೀಡಿ ಚಿಕಿತ್ಸೆ ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ. ಧಾರವಾಡದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಾಣಾಪಾಯದಲ್ಲಿದ್ದ ಅವರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆತರಲಾಯಿತು. ಗಾಯಾಳುವನ್ನು ಆಂಬ್ಯುಲೆನ್ಸ್‌ನಲ್ಲಿ ಕರೆತಂದರೂ, ಆಸ್ಪತ್ರೆಯ ಸಿಬ್ಬಂದಿ “ಬೆಡ್‌ಗಳು ಖಾಲಿ ಇಲ್ಲ” ಎಂದು ಹೇಳಿ ಆಂಬ್ಯುಲೆನ್ಸ್‌ನಿಂದ ಕೆಳಗೆ ಇಳಿಸಿಕೊಳ್ಳಲು ನಿರಾಕರಿಸಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಗಾಯಾಳು ಆಂಬ್ಯುಲೆನ್ಸ್‌ನಲ್ಲೇ ಸಾವು-ಬದುಕಿನ ನಡುವೆ ಹೋರಾಡಬೇಕಾಯಿತು. ಕೊನೆಗೆ ಯಾವುದೇ ದಾರಿ ಕಾಣದೆ, ಗಾಯಾಳುವಿನ ಸಂಬಂಧಿಕರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಿಮ್ಸ್ ಆಸ್ಪತ್ರೆಯ ಈ ಬೇಜವಾಬ್ದಾರಿತನವನ್ನು ಆಂಬ್ಯುಲೆನ್ಸ್ ಚಾಲಕ ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಬೆಡ್‌ ಇಲ್ಲ ಎಂದು ನಿರ್ಲಕ್ಷ್ಯದ ಉತ್ತರ ನೀಡುವ ಸಿಬ್ಬಂದಿಯ ನಡೆಯ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗ್ಯಾಸ್ ಸಿಲಿಂಡರ್ ಕೊರತೆಯಿಂದ ಗ್ರಾಹಕರ ಜೇಬಿಗೂ ಕತ್ತರಿ! ಹೋಟೆಲ್‌ಗಳಲ್ಲಿ ಇಡ್ಲಿ-ದೋಸೆ ಬೆಲೆ ಎಷ್ಟಾಗಿದೆ ಗೊತ್ತಾ?

ಬೆಂಗಳೂರು, ಮಾರ್ಚ್​ 14: ಅಮೇರಿಕಾ, ಇರಾನ್ ಮತ್ತು ಇಸ್ರೇಲ್ ನಡುವಣ ಯುದ್ಧದ ಪರಿಣಾಮವಾಗಿ ದೇಶದೆಲ್ಲೆಡೆ ಎಲ್​ಪಿಜಿ ( LPG) ಗ್ಯಾಸ್ ಸಿಲಿಂಡರ್ ಕೊರತೆ ತೀವ್ರವಾಗಿದ್ದು, ಬೆಂಗಳೂರಿನ ಹೋಟೆಲ್ ಮಾಲೀಕರಿಗೂ ಇದರ ಬಿಸಿ ತಟ್ಟಿರುವುದು ಹೊಸ ವಿಷಯವೇನಲ್ಲ. ಹೀಗಿರುವಾಗ ಹೋಟೆಲ್ ಉದ್ಯಮವನ್ನು ಉಳಿಸಿಕೊಳ್ಳಲು ಕೆಲ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಖರೀದಿಸಲು ಮುಂದಾಗಿದ್ದಾರೆ. ಇದರಿಂದ ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗಿದ್ದು, ಗ್ರಾಹಕ ಜೇಬಿಗೆ ಬಿಸಿ ಮುಟ್ಟಿಸಿವೆ.

ದುಬಾರಿ ಮೊತ್ತದಲ್ಲಿ ಸಿಲಿಂಡರ್ ಮಾರಾಟ

ಯುದ್ಧದ ಪರಿಸ್ಥಿತಿಯಲ್ಲಿ ಸಾಮಾನ್ಯವಾಗಿ ದೊರೆಯುವ ಬೆಲೆಯಿಗಿಂತ ಒನ್ ಟು ಡಬಲ್ ದರ ನೀಡಿ ಸಿಲಿಂಡರ್ ಖರೀದಿಸಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಹೋಟೆಲ್ ಮಾಲೀಕರು ಹೇಳುತ್ತಿದ್ದಾರೆ. ಹೋಟೆಲ್ ವ್ಯವಹಾರವನ್ನು ನಿಲ್ಲಿಸಲು ಸಾಧ್ಯವಿಲ್ಲದ ಕಾರಣ ಹೆಚ್ಚುವರಿ ಹಣ ನೀಡಿ ಗ್ಯಾಸ್ ಖರೀದಿಸಿ ಹೋಟೆಲ್ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಹೆಚ್ಚುವರಿ ಖರ್ಚಿನ ಪರಿಣಾಮವಾಗಿ ಇದೀಗ ಗ್ರಾಹಕರಿಗೂ ಬಿಗ್ ಶಾಕ್ ಎದುರಾಗಿದೆ. ಗ್ಯಾಸ್ ಕೊರತೆಯ ಹಿನ್ನಲೆಯಲ್ಲಿ ಹಲವು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಸಹ ಏರಿಕೆ ಕಂಡಿದೆ.

ವಿಶೇಷವಾಗಿ ಶಿವಾನಂದ ಸರ್ಕಲ್ ಪ್ರದೇಶದಲ್ಲಿರುವ ಬೆಂಗಳೂರು ಕೆಫೆ ಸೇರಿದಂತೆ ಕೆಲವು ಹೋಟೆಲ್‌ಗಳಲ್ಲಿ ತಿಂಡಿ ತಿನಿಸುಗಳ ದರವನ್ನು ಹೆಚ್ಚಿಸಲಾಗಿದೆ. ಎಲ್ಲ ತಿಂಡಿಗಳ ಮೇಲೂ ಸುಮಾರು 10 ರೂಪಾಯಿ ಹೆಚ್ಚುವರಿ ದರ ವಿಧಿಸಲಾಗಿದೆ. ಹೋಟೆಲ್ ಮಾಲೀಕರು ಹಳೆಯ ದರದ ಪಕ್ಕದಲ್ಲೇ ಹೊಸ ದರವನ್ನು ಪ್ರದರ್ಶಿಸಿ ಗ್ರಾಹಕರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

ಹಿಂದಿನ ದರ – ಇಂದಿನ ದರ (ರೂ.ಗಳಲ್ಲಿ)

  • ಇಡ್ಲಿ – 30 -40
  • ವಡೆ – 30 -40
  • ರವಾ ಇಡ್ಲಿ 40-50
  • ಖಾರಾ ಬಾತ್ 30-40
  • ಕೇಸರಿ ಬಾತ್ 30-40
  • ಪಲಾವ್ – 50 -60
  • ಪೂರಿ ಸಾಗು – 60-70
  • ಸೆಟ್ ದೋಸೆ 60-70
  • ಮಸಾಲಾ ದೋಸೆ – 60-70
  • ರೈಸ್ ಸಾಂಬಾರ್ – 70-80
  • ಊಟ – 90 -100
  • ರೋಟಿ 90-100

ಗ್ಯಾಸ್ ಕೊರತೆ ಹಾಗೂ ಹೆಚ್ಚುತ್ತಿರುವ ಖರ್ಚಿನ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಹೋಟೆಲ್ ಮಾಲೀಕರು ತಿಳಿಸಿದ್ದಾರೆ. ಆದರೆ ಬೆಲೆ ಏರಿಕೆಯಿಂದ ಸಾಮಾನ್ಯ ಗ್ರಾಹಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ಯಾಸ್ ಸರಬರಾಜನ್ನು ಶೀಘ್ರದಲ್ಲಿ ಸರಿಪಡಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೋಟೆಲ್ ಮಾಲೀಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಆ ಒಂದು ವಿಷಯದ ಬಗ್ಗೆ ಕಂಪ್ಲೇಂಟ್ ಮಾಡಿದ ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ತಮ್ಮ ಸಿನಿಮಾ ಮೂಲಕ ಗಮನ ಸೆಳೆದವರು. ಅವರು ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಅವರು ಬೇರೆಯದೇ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಮುಂಬೈನಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಅವರ ಪೋಸ್ಟ್ ಚರ್ಚೆ ಹುಟ್ಟುಹಾಕಿದೆ.

ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಅನೇಕ ಕಡೆಗಳಲ್ಲಿ ವಾಯು ಮಾಲಿನ್ಯ ಗುಣಮಟ್ಟ ಕಳಪೆ ಮಟ್ಟ ತಲುಪಿದೆ. ಮುಂಬೈನ ಕಳಪೆ ವಾಯು ಗುಣಮಟ್ಟದ ಸೂಚ್ಯಂಕದ ಬಗ್ಗೆ ದೀಪಿಕಾ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಕಳವಳ ವ್ಯಕ್ತಪಡಿಸಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ನೇರವಾಗಿ ಬಿಎಂಸಿಗೆ ಟ್ಯಾಗ್ ಮಾಡಿ ಈ ವಿಷಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಗುರುವಾರ, ದೀಪಿಕಾ ಪಡುಕೋಣೆ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ AQI ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಆ ಸ್ಕ್ರೀನ್‌ಶಾಟ್‌ನಲ್ಲಿ, ಮುಂಬೈನ ಹಲವು ಭಾಗಗಳಲ್ಲಿ ಮಾಲಿನ್ಯದ ಮಟ್ಟ ಹೆಚ್ಚಾಗಿರುವದು ಕಂಡುಬರುತ್ತದೆ. ಈ ಪೋಸ್ಟ್ ಜೊತೆಗೆ, ದೀಪಿಕಾ, ‘ಈ ನಗರ ಮತ್ತು ಇಲ್ಲಿ ವಾಸಿಸುವ ಜನರು ಉಸಿರುಗಟ್ಟಿಸುತ್ತಿದ್ದಾರೆ. ಇದು ಹೇಗೆ ಸರಿಯಾಗಬಹುದು?’ ಎಂದು ಬರೆದಿದ್ದಾರೆ. ಇದರ ಜೊತೆಗೆ, ಅವರು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ಉಲ್ಲೇಖಿಸಿ, ಈ ಸಮಸ್ಯೆಯ ಬಗ್ಗೆ ಗಮನ ಹರಿಸಬೇಕೆಂದು ಒತ್ತಾಯಿಸಿದರು.

ಮುಂಬೈನಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ವಿಷಯದ ಬಗ್ಗೆ ಕೆಲವು ಕಲಾವಿದರು ಈಗಾಗಲೇ ಧ್ವನಿ ಎತ್ತಿದ್ದಾರೆ. ನಟಿಯರಾದ ಸಯಾಮಿ ಖೇರ್ ಮತ್ತು ರಿಚಾ ಚಡ್ಡಾ ಕೂಡ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು.

ದೀಪಿಕಾ ಪಡುಕೋಣೆ ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು. ಅದಕ್ಕಾಗಿಯೇ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಯಾವಾಗಲೂ ಹೆಚ್ಚು ಚರ್ಚೆ ಆಗುತ್ತವೆ. ಈ ಬಾರಿಯೂ ಅವರು ಹಂಚಿಕೊಂಡ ಪೋಸ್ಟ್ ದೊಡ್ಡ ಪ್ರಮಾಣದಲ್ಲಿ ವೈರಲ್ ಆಗಿದ್ದು, ಅನೇಕ ಜನರು ಅವರ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಮತ್ತೊಂದು ದೊಡ್ಡ ಅವಕಾಶ ಕಳೆದುಕೊಂಡ ದೀಪಿಕಾ ಪಡುಕೋಣೆ

ದೀಪಿಕಾ ಅವರು ನಿರ್ದೇಶಕ ಅಟ್ಲೀ ಅವರ ಮುಂಬರುವ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಏಪ್ರಿಲ್ 8 ರಂದು ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಚಿತ್ರದ ಶೀರ್ಷಿಕೆಯನ್ನು ಘೋಷಿಸಲಾಗುವುದು ಎಂದು ಹೇಳಲಾಗುತ್ತಿದೆ. ಇದಲ್ಲದೆ, ದೀಪಿಕಾ ಶಾರುಖ್ ಖಾನ್ ಅವರ ‘ಕಿಂಗ್’ ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಡಿಸೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಯಾರೂ ಸಹ ಈ ರೀತಿ ರನೌಟ್ ಮಾಡಬೇಡಿ: ಕೈಫ್ ಕಿವಿಮಾತು

ಪಾಕಿಸ್ತಾನ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡದ ನಾಯಕ ಮೆಹಿದಿ ಹಸನ್ ಮಿರಾಝ್ ಅವರು ಸಲ್ಮಾನ್ ಅಲಿ ಅಘಾ ಅವರನ್ನು ರನ್ ಔಟ್ ಮಾಡಿದ ರೀತಿಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಯಾವುದೇ ವಿಕೆಟ್ ಪಡೆಯುವ ಹಪಾಹಪಿಯು ಕ್ರೀಡಾ ಸ್ಫೂರ್ತಿಗಿಂತ ದೊಡ್ಡದಲ್ಲ. ಇದು ವಿಶ್ವಕಪ್ ಫೈನಲ್ ಪಂದ್ಯವಾಗಿದ್ದರೂ ಸಹ ಇಂತಹ ಕೆಲಸ ಮಾಡಬಾರದು. ಯುವ ಕ್ರಿಕೆಟಿಗರು ಇದನ್ನು ಎಂದಿಗೂ ಅನುಕರಿಸಬಾರದು ಎಂದು ಮೊಹಮ್ಮದ್ ಕೈಫ್ ಸೋಷಿಯಲ್ ಮೀಡಿಯಾ ಮೂಲಕ ಕಿವಿಮಾತು ಹೇಳಿದ್ದಾರೆ.

ಘಟನೆ ಹಿನ್ನಲೆ:

ಪಾಕ್ ತಂಡದ ಆಟಗಾರನ ಸಲ್ಮಾನ್ ಅಲಿ ಅಘಾ ಅವರು ಕ್ರೀಸ್‌ನಿಂದ ಸ್ವಲ್ಪ ಹೊರಬಂದು, ಕೆಳಗೆ ಬಿದ್ದಿದ್ದ ಚೆಂಡನ್ನು ಎತ್ತಿ ಬೌಲರ್‌ಗೆ (ಮಿರಾಝ್​) ನೀಡಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಮಿರಾಝ್ ಅವರು ಚೆಂಡನ್ನು ತಕ್ಷಣವೇ ಎತ್ತಿ ಸ್ಟಂಪ್‌ಗೆ ಎಸೆದು ಔಟ್ ಮಾಡಿದ್ದಾರೆ. ಅತ್ತ ಥರ್ಡ್ ಅಂಪೈರ್ ಪರಿಶೀಲಿಸಿದಾಗ ಸಲ್ಮಾನ್ ಅಲಿ ಅಘಾ ಕ್ರೀಸ್​ನಿಂದ ಹೊರಗಿರುವುದು ಕಂಡು ಬಂದಿದೆ. ಹೀಗಾಗಿ ಔಟ್ ಎಂದು ತೀರ್ಪು ನೀಡಿದ್ದಾರೆ.

ಇದರಿಂದ ಆಕ್ರೋಶಗೊಂಡ ಸಲ್ಮಾನ್ ಅಲಿ ಅಘಾ ಅಸಮಾಧಾನ ಹೊರಹಾಕುತ್ತಾ ಮೈದಾನದಿಂದ ತೆರಳಿದ್ದರು. ಇದನ್ನೇ ಪ್ರಸ್ತಾಪಿಸಿ ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್, “ಕ್ರೀಡಾ ಸ್ಫೂರ್ತಿ ಇಲ್ಲದ ಆಟ ಆಟವೇ ಅಲ್ಲ” ಎಂದು ಅವರು ಕಿಡಿಕಾರಿದ್ದಾರೆ.

 

Source link

ಹಮ್ಜಾ ಅಲಿ ಮಜಾರಿಯನ್ನು ಸಾಯಿಸೋದು ಈ ವ್ಯಕ್ತಿ? ಇದೆ ದೊಡ್ಡ ಟ್ವಿಸ್ಟ್

‘ಧುರಂಧರ್ 2’ ಸಿನಿಮಾ (Dhurandhar 2) ರಿಲೀಸ್​​ಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಅಡ್ವಾನ್ಸ್ ಬುಕಿಂಗ್​​​ನಲ್ಲೂ ಚಿತ್ರ ಅಬ್ಬರಿಸುತ್ತಿದೆ. ದೊಡ್ಡ ಚಿತ್ರಗಳು ರಿಲೀಸ್ ಆಗುತ್ತವೆ ಎಂದರೆ ಅದಕ್ಕೆ ತಕ್ಕಂತೆ ಒಂದಷ್ಟು ಥಿಯರಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತವೆ. ಅದೇ ರೀತಿ ‘ಧುರಂಧರ್ 2’ ಸಿನಿಮಾಗೆ ಸಂಬಂಧಿಸಿದ ಒಂದು ದೊಡ್ಡ ಥಿಯರಿ ಹುಟ್ಟಿಕೊಂಡಿದೆ. ತೆರೆಮೇಲೆ ರಣವೀರ್ ಸಿಂಗ್ ಅವರನ್ನು ಕೊಲ್ಲೋದು ಸಾರಾ ಅರ್ಜುನ್ ಎನ್ನಲಾಗಿದೆ. ಈ ಬಗ್ಗೆ ಚರ್ಚೆಗಳು ನಡೆದಿವೆ.

ಈ ಮೊದಲು ‘ಟಾಕ್ಸಿಕ್’ ರಿಲೀಸ್ ಆಗುತ್ತದೆ ಎಂದಾಗ ಒಂದಷ್ಟು ಥಿಯರಿಗಳು ಹೊರ ಬಂದವು.ಕಥೆ ಹಾಗಿರಲಿದೆ, ಹೀಗಿರಲಿದೆ ಎಂದೆಲ್ಲ ಹೇಳಲಾಯಿತು. ಈಗ ‘ಧುರಂಧರ್ 2’ ಸಿನಿಮಾ ಬಗ್ಗೆಯೂ ಇದೇ ರೀತಿಯ ಥಿಯರಿಗಳು ಹುಟ್ಟಿಕೊಳ್ಳುತ್ತಿವೆ. ಹಮ್ಜಾ ಅಲಿ ಮಜಾರಿಯನ್ನು ಯಲಿನಾ ಜಮಾಲಿ ಸಾಯಿಸುತ್ತಾಳಾ ಎಂಬ ಪ್ರಶ್ನೆ ಮೂಡಿದೆ.

ಯಲಿನಾ ರಾಜಕಾರಣಿಯ ಮಗಳು. ಈಕೆಯ ಮೇಲೆ ಹಮ್ಜಾಗೆ ಪ್ರೀತಿ ಮೂಡುತ್ತದೆ. ಇಬ್ಬರೂ ವಿವಾಹ ಆಗುತ್ತಾರೆ.ಈ ಹಮ್ಜಾ ಅಲಿ ಭಾರತದ ಸ್ಪೈ ಎಂಬ ವಿಷಯ ಆಕೆಗೆ ತಿಳಿದಿರೋದಿಲ್ಲ. ಹೀಗಾಗಿ, ಈ ವಿಷಯ ತಿಳಿದ ಬಳಿಕ ಆಕೆ ಹತ್ಯೆ ಮಾಡುತ್ತಾಳೆ ಎಂದು ಹೇಳಲಾಗುತ್ತಾ ಇದೆ. ಇದಕ್ಕೆ ಕಾರಣವೂ ಇದೆ. ಯಲಿನಾ ಗನ್ ಹಿಡಿದು ನಿಲ್ಲೋ ದೃಶ್ಯ ಟ್ರೇಲರ್​​ನಲ್ಲಿ ಬರುತ್ತದೆ. ಇದನ್ನು ನೋಡಿದ ಅನೇಕರು ಹೀಗೊಂದು ಥಿಯರಿಯನ್ನು ಹುಟ್ಟುಹಾಕಿದ್ದಾರೆ.

ಇನ್ನು, ‘ಗೆಹ್ರಾ ಹುವಾ..’ ಹಾಡಿನ ಸಾಲುಗಳು ಕೂಡ ಚರ್ಚೆಯನ್ನು ಹುಟ್ಟುಹಾಕಿದೆ. ಪ್ರೀತಿ ಹಾಗೂ ಮೋಸದ ಕುರಿತು ಈ ಹಾಡಿನ ಸಾಲು ಸಾಗುತ್ತದೆ. ಯಲಿನಾ ಜೊತೆ ಪ್ರೀತಿ ಮಾಡಿದ್ದು, ಹಮ್ಜಾ ತೆಗೆದುಕೊಂಡ ದೊಡ್ಡ ತಪ್ಪು ನಿರ್ಧಾರ ಆಗಿ ಮಾರ್ಪಡಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ ಟಿಕೆಟ್ ಬುಕಿಂಗ್ ವಿಳಂಬ: ಹಲವು ಕಾರಣ

ಇನ್ನು, ಹಮ್ಜಾನ ಯಲಿನಾ ಎಕ್ಸ್​​​ಪೋಸ್ ಮಾಡಬಹುದು ಎಂದು ಕೂಡ ಹೇಳಲಾಗುತ್ತಿದೆ. ಒಟ್ಟಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿವಿಧ ಚರ್ಚೆಗಳು ಜೋರಾಗಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ವಾರಣಾಸಿ’ ಸೆಟ್ ಸೇರಲು ರೆಡಿ ಆದ ಸುದೀಪ್​; ಯಾವಾಗ, ಎಷ್ಟು ದಿನ?

ಖ್ಯಾತ ನಿರ್ದೇಶಕ ಎಸ್​​ಎಸ್​ ರಾಜಮೌಳಿ (SS Rajamouli) ಅವರು ‘ವಾರಣಾಸಿ’ ಸಿನಿಮಾನ ನಿರ್ದೇಶನ ಮಾಡುವುದರಲ್ಲಿ ಬ್ಯುಸಿ ಇದ್ದಾರೆ. ವಿವಿಧ ಹಂತಗಳಲ್ಲಿ ಸಿನಿಮಾದ ಶೂಟ್ ನಡೆಯುತ್ತಿದ್ದು 2027ರ ಏಪ್ರಿಲ್​ನಲ್ಲಿ ಸಿನಿಮಾ ತೆರೆಗೆ ಬರಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಕಥೆ ರಾಮಾಯಣದಿಂದ ಸ್ಫೂರ್ತಿ ಪಡೆದಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಹಾಗೂ ಪೃಥ್ವಿರಾಜ್ ಸುಕುಮಾರನ್ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಈ ಚಿತ್ರದ ಸೆಟ್​​ಗೆ ಸುದೀಪ್ ಸೇರಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರು ‘ವಾರಣಾಸಿ’ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಈ ಮೊದಲು ವರದಿ ಆಗಿತ್ತು. ಈ ವರದಿ ಬಗ್ಗೆ ರಾಜಮೌಳಿ ಆಗಲಿ, ಸುದೀಪ್ ಆಗಲಿ ಅಧಿಕೃತವಾಗಿ ಹೇಳಿಲ್ಲ. ಈಗ ಕೇಳಿ ಬರಿತ್ತಿರುವ ಒಸ ಮಾಹಿತಿ ಎಂದರೆ ಸುದೀಪ್ ಏಪ್ರಿಲ್​​​ನಲ್ಲಿ 15 ದಿನಗಳ ಶೂಟ್​​ನಲ್ಲಿ ಭಾಗಿ ಆಗಲಿದ್ದಾರೆ ಎಂದು ವರದಿ ಆಗಿದೆ. ಇದು ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ. ಅವರ ಪಾತ್ರ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಿದೆ. ಇನ್ನು, ಸದ್ಯಕ್ಕಂತೂ ಈ ಬಗ್ಗೆ ಅವರು ಮಾಹಿತಿ ನೀಡುವುದು ಅನುಮಾನವೇ.

ಸುದೀಪ್ ಹಾಗೂ ರಾಜಮೌಳಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇದಕ್ಕೆ ಕಾರಣ ಆಗಿದ್ದು, ‘ಈಗ’ ಸಿನಿಮಾ. ಈ ಚಿತ್ರವನ್ನು ರಾಜಮೌಳಿ ನಿರ್ದೇಶನ ಮಾಡಿದರೆ, ಸುದೀಪ್ ಅವರು ಇದಕ್ಕೆ ವಿಲನ್. ಈ ಚಿತ್ರದಲ್ಲಿ ಸುದೀಪ್ ಅವರು ಶೋ ವಿನ್ನರ್ ಎನಿಸಿಕೊಂಡರು. ಅವರ ನಟನೆ ಬೇರೆಯದೇ ಲೆವೆಲ್​​​ನಲ್ಲಿ ಇತ್ತು. ಈ ಕಾರಣಕ್ಕೆ ರಾಜಮೌಳಿಗೆ ಸುದೀಪ್ ಎಂದರೆ ಫೇವರಿಟ್. ಈ ಕಾರಣದಿಂದಲೇ ‘ವಾರಣಾಸಿ’ ಸಿನಿಮಾದಲ್ಲಿ ಆಫರ್ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಇದನ್ನೂ ಓದಿ: ‘ನಾನು ಸುದೀಪ್ ಸರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ’; ಉಲ್ಟಾ ಹೊಡೆದ ಸತೀಶ್

ಸುದೀಪ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಮಾರ್ಕ್’ ಚಿತ್ರದಲ್ಲಿ. ಕಳೆದ ವರ್ಷ ಡಿಸೆಂಬರ್​​ನಲ್ಲಿ ಸಿನಿಮಾ ತೆರೆಗೆ ಬಂತು. ಈ ಚಿತ್ರ ಗಮನ ಸೆಳೆಯಿತು. ಇದಾದ ಬಳಿಕ ರೋಮ್​-ಕಾಮ್ ಅಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ತೆಲುಗು ನಿರ್ದೇಶಕ ಸುಕುಮಾರ್ ಅಡಿಯಲ್ಲಿ ಪಳಗಿದ ನಿರ್ದೇಶಕ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಲೋಕಾಯುಕ್ತ ಬಲೆಗೆ ಉಡುಪಿ ಅಬಕಾರಿ ಡಿಸಿ: 8 ಕೋಟಿ 69 ಲಕ್ಷ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಉಡುಪಿ, ಮಾ.14: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ (DC) ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಶ್ರೀನಿವಾಸ್ ಟಿ. ಎಂ. ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು  ಪತ್ತೆ ಮಾಡಿದ್ದಾರೆ.

ಸ್ಥಿರ ಆಸ್ತಿಗಳು ಒಟ್ಟು 6,90,64,716 ರೂ. ಇದರಲ್ಲಿ ವಿವಿಧೆಡೆ 11 ನಿವೇಶನಗಳು ಇವೆ. 6 ಸುಸಜ್ಜಿತ ವಾಸದ ಮನೆಗಳು ಇದೆ. 31 ಎಕರೆ ಕೃಷಿ ಭೂಮಿ ಇದೆ ಎಂದು ಹೇಳಲಾಗಿದೆ. ಚರಾಸ್ತಿಗಳು ಒಟ್ಟು 2,66,90,001 ರೂ. ಇದರಲ್ಲಿ 3,95,941 ಹಣ, 1.47 ಕೋಟಿ ರೂ. ಮೌಲ್ಯದ ಚಿನ್ನದ ಆಭರಣಗಳು, 17 ಲಕ್ಷ ರೂ. ಬೆಲೆಬಾಳುವ ಕಾರುಗಳು, 25.75 ಲಕ್ಷ ರೂ. ನಗದು ಠೇವಣಿ, 72.68 ಲಕ್ಷ ರೂ. ಮೌಲ್ಯದ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿದೆ.

ಅಧಿಕಾರಿ ಶ್ರೀನಿವಾಸ್ ಅವರು ತಮ್ಮ ಆದಾಯದ ಮೂಲಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಪೊಲೀಸರು ಈ ದಾಳಿಯನ್ನು ನಡೆಸಿದ್ದಾರೆ. ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲಕ್ಕೆ ಎರಡು ದಿನಗಳ ಕಾಲ ಈ ಶೋಧ ಕಾರ್ಯ ನಡೆದಿದೆ. ಲೋಕಾಯುಕ್ತ ಪೊಲೀಸರು ಶ್ರೀನಿವಾಸ್ ಟಿ. ಎಂ. ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 13ರ ಹೊತ್ತಿಗೆ ಅವರ ವಿರುದ್ಧ ಅಧಿಕೃತವಾಗಿ ತನಿಖೆ ಆರಂಭವಾಗಿದೆ.

ಇದನ್ನೂ ಓದಿ: ಬಾಗಲಕೋಟೆ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್: ಅನುಮಾನಪಟ್ಟು ಹೊಡೆದು ಕೊಂದ್ರಾ?

ಸಾಮಾನ್ಯವಾಗಿ ಲೋಕಾಯುಕ್ತ ದಾಳಿಯಲ್ಲಿ ಇಷ್ಟು ದೊಡ್ಡ ಮಟ್ಟದ ಅಕ್ರಮ ಆಸ್ತಿ ಪತ್ತೆಯಾದಾಗ, ಸಂಬಂಧಪಟ್ಟ ಇಲಾಖೆಯು (ಅಬಕಾರಿ ಇಲಾಖೆ) ಲೋಕಾಯುಕ್ತ ವರದಿಯನ್ನು ಆಧರಿಸಿ ಅಧಿಕಾರಿಯನ್ನು ಅಮಾನತುಮಾಡುವುದು ವಾಡಿಕೆ. ಶ್ರೀನಿವಾಸ್ ಅವರ ವಿರುದ್ಧದ ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಲೋಕಾಯುಕ್ತರು ಸರ್ಕಾರಕ್ಕೆ ನೀಡುವ ಪ್ರಾಥಮಿಕ ವರದಿಯ ಆಧಾರದ ಮೇಲೆ ಮುಂದಿನ ಒಂದೆರಡು ದಿನಗಳಲ್ಲಿ ಅಮಾನತು ಆದೇಶ ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಸ್ತುತ, ದಾಳಿಯ ವೇಳೆ ಪತ್ತೆಯಾದ 31 ಎಕರೆ ಕೃಷಿ ಜಮೀನು, 6 ಮನೆಗಳು ಮತ್ತು 11 ನಿವೇಶನಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ಈ ಆಸ್ತಿಗಳು ಅವರ ಮತ್ತು ಅವರ ಕುಟುಂಬದ ಹೆಸರಿನಲ್ಲಿ ಹೇಗೆ ಬಂತು ಎಂಬುದಕ್ಕೆ ಶ್ರೀನಿವಾಸ್ ಅವರಿಂದ ಸಮರ್ಥನೆ ಕೇಳಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Exit mobile version