Headlines

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ಸಿಎಂ ವಿಜಯ್ – Kannada News | Tamil Nadu CM Vijay meets rebel AIADMK leaders who are Supporting TVK ahead of floor test

ಚೆನ್ನೈ, ಮೇ 12: ತಮಿಳುನಾಡು ವಿಧಾನಸಭೆಯಲ್ಲಿ ನಾಳೆ ನಡೆಯಲಿರುವ ನಿರ್ಣಾಯಕವಾದ ಬಹುಮತ ಸಾಬೀತಿಗೂ ಮುನ್ನ ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ (CM Vijay) ಇಂದು ಎಐಎಡಿಎಂಕೆ ಬಂಡಾಯ ನಾಯಕರಾದ ಸಿ.ವಿ ಷಣ್ಮುಗಂ ಮತ್ತು ಎಸ್‌.ಪಿ ವೇಲುಮಣಿ ಅವರನ್ನು ಭೇಟಿ ಮಾಡಿದ್ದಾರೆ. ಈ ಬಣವು 30 ಶಾಸಕರ ಬೆಂಬಲವನ್ನು ಹೊಂದಿದ್ದು, ಇವರು ನಾಳೆಯ ವಿಶ್ವಾಸಮತಯಾಚನೆ ವೇಳೆ ಟಿವಿಕೆಗೆ ತನ್ನ ಬೆಂಬಲವನ್ನು ನೀಡುವುದಾಗಿ ಘೋಷಿಸಿರುವುದರಿಂದ ಈ ಭೇಟಿ ಹೆಚ್ಚಿನ ರಾಜಕೀಯ ಮಹತ್ವವನ್ನು ಪಡೆದುಕೊಂಡಿದೆ. ಇಂದು ಮೊದಲ ಬಾರಿಗೆ…

Read More

ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್ – Kannada News | Rajinikanth refuses to comment on Vijay becoming Tamil Nadu CM at Chennai airport

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ತಮ್ಮ ರಾಜಕೀಯ ಜೀವನದ ಮೊದಲ ಪ್ರಯತ್ನದಲ್ಲೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಈ ರೀತಿ ಸಾಧನೆ ಮಾಡಿದ ವಿಜಯ್ ಕುರಿತು ಕೇಳಲಾದ ಪ್ರಶ್ನೆಗೆ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಯಾವುದೇ ಉತ್ತರ ನೀಡಿಲ್ಲ. ಬದಲಿಗೆ, ಅವರು ಮೌನಕ್ಕೆ ಶರಣಾಗಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಅವರು ತಮಿಳುನಾಡಿನ…

Read More

ಉತ್ತರ ಭಾರತದತ್ತ ಹೊರಟಿತೇಕೆ ತೆಲುಗು ಚಿತ್ರರಂಗ, ‘ಪುಷ್ಪ’ ಬಳಿಕ ಈಗ ‘ಪೆದ್ದಿ’ – Kannada News | Ram Charan starrer Peddi movie to host grand promotional event at Bhopal

ತೆಲುಗು ಚಿತ್ರರಂಗ (Tollywood), ಭಾರತದ ಅತ್ಯಂತ ಲಾಭದಾಯಕ ಚಿತ್ರರಂಗ. ಇತರೆ ಚಿತ್ರರಂಗಗಳಿಗೆ ಹೋಲಿಸಿದರೆ ಇಲ್ಲಿ ಗೆಲ್ಲುವ ಚಿತ್ರಗಳ ಸರಾಸರಿ ಸಂಖ್ಯೆ ಹೆಚ್ಚು. ತೆಲುಗು ಸಿನಿಮಾಗಳು ಭಾರಿ ದೊಡ್ಡ ಮೊತ್ತದ ಹಣವನ್ನೂ ಸಹ ಗಳಿಕೆ ಮಾಡುತ್ತವೆ. ಮಾತ್ರವಲ್ಲದೆ ತೆಲುಗು ಚಿತ್ರರಂಗ ಹೆಚ್ಚು ವರ್ಸಟೈಲ್ ಚಿತ್ರರಂಗ. ಇಲ್ಲಿ ಎಲ್ಲ ರೀತಿಯ ಸಿನಿಮಾಗಳು ನಿರ್ಮಾಣ ಆಗುತ್ತದೆ. ವಿವಿಧ ಸ್ಥರಗಳ ಟಾಪ್ ನಾಯಕರುಗಳಿದ್ದಾರೆ. ಭಾರಿ ನಿರ್ಮಾಪಕರ ಸಂಖ್ಯೆಯೂ ಸಹ ದೊಡ್ಡದಾಗಿಯೇ ಇದೆ. ಇತ್ತೀಚೆಗೆ ತೆಲುಗು ಚಿತ್ರರಂಗ ನಿಧಾನಕ್ಕೆ ಉತ್ತರ ಭಾರತದತ್ತ ಹೆಜ್ಜೆ ಹಾಕುತ್ತಿದೆ….

Read More

ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆ: ಹಳೆಯ ಜಿಲೆಟಿನ್ ಕಡ್ಡಿಗಳ ಹಿಂದೆ ಇರುವ ಜಾಲ ಯಾವುದು? ಎಫ್‌ಎಸ್‌ಎಲ್ ವರದಿ ನೀಡಿದ ಆತಂಕದ ಮಾಹಿತಿ – Kannada News | PM Modi Route Scare: Bengaluru FSL Reveals Gelatin Sticks Not Explosive

ಬೆಂಗಳೂರು, ಮೇ.12: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಪ್ರಾಥಮಿಕ ವರದಿ ನೀಡಿದ್ದಾರೆ. ತನಿಖೆಯ ವೇಳೆ ಕೃತ್ಯಕ್ಕೆ ಬಳಸಲಾದ ವಸ್ತುಗಳ ಬಗ್ಗೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸುಮಾರು 3 ವರ್ಷಗಳ ಹಿಂದೆ ತಯಾರಾದವುಗಳಾಗಿವೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಸಂಗ್ರಹಿಸದ ಕಾರಣ, ಪತ್ತೆಯಾದ ಸಂದರ್ಭದಲ್ಲಿ ಅವು ಸ್ಫೋಟಗೊಳ್ಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಜಿಲೆಟಿನ್ ಜೊತೆಗಿದ್ದ ವೈರ್…

Read More

GT vs SRH Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಜಿಟಿ, ಎಸ್​ಆರ್​ಹೆಚ್ – Kannada News | GT vs SRH Playing XI Gujarat Titans vs Sunrisers Hyderabad Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ್ದು, ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI):…

Read More

ಟ್ರೆಕ್ಕಿಂಗ್​​ ಪ್ರಿಯರೇ ಗಮನಿಸಿ: ವನ್ಯಜೀವಿ ಓಡಾಟವಿರುವ ಚಾರಣಪಥಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ಬ್ರೇಕ್​​ – Kannada News | Karnataka Trekking Ban: Wildlife Conflict Zones Closed for Safety After Leopard Attack

ಬೆಂಗಳೂರು, ಮೇ 12: ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಿಭಾಗದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ ಬೆನ್ನಲ್ಲೇ ರಾಜ್ಯದಲ್ಲಿ ವನ್ಯಜೀವಿಗಳ ಓಡಾಟವಿರುವ ಎಲ್ಲ ಚಾರಣಪಥಗಳಲ್ಲಿನ ಸಂಚಾರ ಬಂದ್​​ ಮಾಡಿ ಆದೇಶಿಸಲಾಗಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಹುಲಿ, ಆನೆ, ಚಿರತೆ ಸಂಘರ್ಷ ಇರುವ ಪ್ರದೇಶಗಳಲ್ಲಿ ಟ್ರೆಕ್ಕಿಂಗ್​​ಗೆ ಬ್ರೇಕ್ ಹಾಕಲಾಗಿದೆ. ಮುಖ್ಯಾಂಶಗಳು ಎಂ.ಎಂ. ಹಿಲ್ಸ್​​ ವ್ಯಾಪ್ತಿಯಲ್ಲಿ ಚಿರತೆ ದಾಳಿಗೆ ಬಾಲಕ ಬಲಿ ಘಟನೆ ಬೆನ್ನಲ್ಲೇ ಅರಣ್ಯ…

Read More

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ – Kannada News | Diljit Dosanjh sold out his live concert show in Chicago US

ಖ್ಯಾತ ಗಾಯಕ, ನಟ ದಿಲ್ಜೀತ್ ದೊಸ್ಸಾಂಜ್ (Diljit Dosanjh) ತಮ್ಮ ಲೈವ್ ಕಾನ್ಸರ್ಟ್​​ಗಳಿಂದ ಭಾರಿ ಜನಪ್ರಿಯತೆ ಪಡೆಯುತ್ತಿದ್ದಾರೆ. ಅವರ ಕಾನ್ಸರ್ಟ್​​ಗಳು ಹೋದಲ್ಲೆಲ್ಲ ಸೂಪರ್ ಹಿಟ್ ಆಗುತ್ತಿವೆ. ಜನ ಮುಗಿಬಿದ್ದು ಅವರ ಶೋಗೆ ಟಿಕೆಟ್ಟುಗಳನ್ನು ಖರೀದಿಸುತ್ತಿದ್ದಾರೆ. ಇದೀಗ ದಿಲ್ಜೀತ್ ದೊಸ್ಸಾಂಜ್ ಅಮೆರಿಕದಲ್ಲಿ ಶೋ ಮಾಡುತ್ತಿದ್ದು, ಅಮೆರಿಕದ ಶಿಕಾಗೋನಲ್ಲಿ ಫುಲ್ ಪ್ಯಾಕ್ ಶೋ ಮಾಡಿದ್ದಾರೆ. ಭಾರಿ ಜನ ದಿಲ್ಜೀತ್ ಶೋ ನೋಡಲು ಆಗಮಿಸಿದ್ದರು. ಅದರ ಕೆಲ ವಿಡಿಯೋಗಳನ್ನು ದಿಲ್ಜೀತ್ ದೊಸ್ಸಾಂಜ್ ಹಂಚಿಕೊಂಡಿದ್ದು ಅವುಗಳಲ್ಲಿ ಒಂದು ವಿಡಿಯೋ ಇಲ್ಲಿದೆ ನೋಡಿ… ಸಿನಿಮಾ…

Read More

ಮಲೆನಾಡಲ್ಲಿ ವರುಣನ ಆರ್ಭಟ: ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ; ಮಂಜಿನ ನಗರಿಯಾದ ಕಾಫಿನಾಡು! – Kannada News | Heavy Rain Lashes Chikkamagaluru Malenadu; Moodigere, Kalasa Hit Hard, Ghat Travel Caution

ಚಿಕ್ಕಮಗಳೂರು, ಮೇ.12: ಕಾಫಿನಾಡಿನ ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕಳೆದ ಕೆಲವು ಗಂಟೆಗಳಿಂದ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ಮೂಡಿಗೆರೆ ಮತ್ತು ಕಳಸ ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದೆ. ಮಳೆಯ ಕಾರಣದಿಂದಾಗಿ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ದಟ್ಟವಾದ ಮಂಜು ಕವಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಸವಾರರು ದೀಪಗಳನ್ನು ಉರಿಸಿಕೊಂಡೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯಲ್ಪಡುವ ಕೊಟ್ಟಿಗೆಹಾರ ಮತ್ತು ಬಣಕಲ್ ಭಾಗದಲ್ಲಿಯೂ ಸಹ ಧಾರಾಕಾರ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮಲೆನಾಡಿನ…

Read More

ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ದ ಚೀನಾಗೆ ಭಾರತದ ಖಡಕ್ ಸಂದೇಶ – Kannada News | India’s sharp message to China over helping Pakistan during Operation Sindoor

ನವದೆಹಲಿ, ಮೇ 12: ಭಾರತ ಮತ್ತು ಪಾಕ್ ನಡುವಿನ 3 ದಿನಗಳ ಯುದ್ಧದ ಸಮಯದಲ್ಲಿ ಪಾಕಿಸ್ತಾನಕ್ಕೆ (Pakistan) ಚೀನಾ ತಾಂತ್ರಿಕ ಸಹಾಯವನ್ನು ನೀಡಿತ್ತು ಎಂದು ಚೀನಾದ ಅಧಿಕಾರಿಯೊಬ್ಬರು ಹೇಳಿದ್ದರು. ಈ ಮೂಲಕ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ವೇಳೆ ಪಾಕಿಸ್ತಾನದ ಬೆಂಬಲಕ್ಕೆ ಚೀನಾ ನಿಂತಿದ್ದು ಬಹಿರಂಗವಾಗಿತ್ತು. ಇದಕ್ಕೆ ಭಾರತ ಕಟುವಾಗಿ ಪ್ರತಿಕ್ರಿಯೆ ನೀಡಿದೆ. ಭಯೋತ್ಪಾದನೆಯನ್ನು ಹರಡುವ ದೇಶಗಳಿಗೆ ಬೆಂಬಲ ನೀಡುವುದು ತಮ್ಮ ಜಾಗತಿಕ ಸ್ಥಾನಮಾನದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದರ ಕುರಿತು ತಮ್ಮನ್ನು ತಾವು ಜವಾಬ್ದಾರಿಯುತ ರಾಷ್ಟ್ರಗಳೆಂದು…

Read More

GT vs SRH IPL 2026 Live Score: ಟೈಟಾನ್ಸ್​ vs ಸನ್​ರೈಸರ್ಸ್​​

ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ಅಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವು 14 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ ತಂಡವು 14 ಪಾಯಿಂಟ್ಸ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ 16 ಅಂಕಗಳೊಂದಿಗೆ ಅಗ್ರಸ್ಥಾನ ಸ್ವಾಧೀನಪಡಿಸಿಕೊಳ್ಳಲಿದೆ. ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್…

Read More