ಸಚಿನ್ ತೆಂಡೂಲ್ಕರ್ ಸೊಸೆ ಸಾನಿಯಾ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಸಾನಿಯಾ ಎಷ್ಟು ಶ್ರೀಮಂತೆ ಗೊತ್ತಾ?

ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್ ಅವರನ್ನು ವಿವಾಹವಾದರು. ಅರ್ಜುನ್ ಹೊಸ ಜೀವನವನ್ನು ಪ್ರಾರಂಭಿಸಿದ್ದಾರೆ. ಅವರ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮದುವೆಯ ನಂತರ ಅರ್ಜುನ್ ಮತ್ತು ಸಾನಿಯಾ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಹಾಗಾದರೆ ಸಚಿನ್ ತೆಂಡೂಲ್ಕರ್ ಅವರ ಸೊಸೆ ಎಷ್ಟು ಕೋಟಿ ಮಾಲೀಕರು ಗೊತ್ತಾ? ಆ ಬಗ್ಗೆ ಇಲ್ಲಿದೆ ವಿವರ.

ಅರ್ಜುನ್ ಪ್ರಸ್ತುತ ಈಗಷ್ಟೇ ಬೌಲರ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ಐಪಿಎಲ್​​ನಲ್ಲಿ ಅವರು ಆಡುತ್ತಿದ್ದಾರೆ. ಅರ್ಜುನ್ ಅವರ ವೈಯಕ್ತಿಕ ಸಂಪತ್ತು ಸುಮಾರು 10-15 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇದಲ್ಲದೆ, ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ತಂದೆ ಸಚಿನ್ ಅವರ 100 ಕೋಟಿ ರೂ. ಮೌಲ್ಯದ ಐಷಾರಾಮಿ ಬಂಗಲೆಯಲ್ಲಿ ವಾಸಿಸುತ್ತಿದ್ದಾರೆ.

ಸಾನಿಯಾ ಚಾಂದೋಕ್ ಯಾರು?

ಅರ್ಜುನ್ ಅವರ ಪತ್ನಿ ಸಾನಿಯಾ ಚಾಂದೋಕ್ ಸಾಮಾನ್ಯ ಹೆಸರಲ್ಲ. ಸಾನಿಯಾ ಭಾರತದ ಖ್ಯಾತ ಕೈಗಾರಿಕೋದ್ಯಮಿ ಮತ್ತು ಗ್ರಾವಿಸ್ ಗ್ರೂಪ್‌ನ ಅಧ್ಯಕ್ಷ ರವಿ ಘಾಯ್ ಅವರ ಮೊಮ್ಮಗಳು. ಸಾನಿಯಾ ವಿದೇಶದಲ್ಲಿಅಧ್ಯಯನ ಮಾಡಿದ್ದಾರೆ ಕುಟುಂಬದ ವ್ಯವಹಾರಗಳಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಇದ್ದಾರೆ. ಸಾನಿಯಾ ಅವರ ಕುಟುಂಬವು ಭಾರತದಲ್ಲಿ ಜನಪ್ರಿಯ ಐಸ್ ಕ್ರೀಮ್ ಬ್ರ್ಯಾಂಡ್ ಬಾಸ್ಕಿನ್-ರಾಬಿನ್ಸ್ ಅನ್ನು ಪ್ರಾರಂಭಿಸಿತು.

ಸಾನಿಯಾ ಬಹಳ ಪ್ರಭಾವಿ ವ್ಯಾಪಾರ ಕುಟುಂಬದಿಂದ ಬಂದವರು. ಅವರ ನಿಖರವಾದ ವೈಯಕ್ತಿಕ ಸಂಪತ್ತು ಸಾರ್ವಜನಿಕವಾಗಿ ತಿಳಿದಿಲ್ಲವಾದರೂ, ಅವರ ಕುಟುಂಬದ ವ್ಯವಹಾರವು ಲಕ್ಷ ಕೋಟಿ ರೂಪಾಯಿಗಳಷ್ಟು ಮೌಲ್ಯದ್ದಾಗಿದೆ ಎಂದು ಅಂದಾಜಿಸಲಾಗಿದೆ. ಇದರರ್ಥ ಸಾನಿಯಾ, ಅರ್ಜುನ್‌ಗಿಂತ ಹೆಚ್ಚಿನ ಸಂಪತ್ತನ್ನು ಹೊಂದಿದ್ದಾರೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿ ಜೊತೆ ವಿವಾಹ ಆದ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್

ಕುಟುಂಬವು ಯಾವಾಗಲೂ ಐಷಾರಾಮಿ ಕಾರುಗಳನ್ನು ಇಷ್ಟಪಡುತ್ತಾರೆ. ಅರ್ಜುನ್ ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅದರಲ್ಲಿ BMW i8, BMW X5 ಮತ್ತು ನಿಸ್ಸಾನ್ GT-R ನಂತಹ ಸೂಪರ್ ಕಾರುಗಳು ಸೇರಿವೆ. ಅರ್ಜುನ್ ಮತ್ತು ಸಾನಿಯಾ ಅವರ ಸಂಬಂಧ ಬಹಳ ಕಾಲ ರಹಸ್ಯವಾಗಿಯೇ ಇತ್ತು. ಅವರ ಆಪ್ತ ಮೂಲಗಳ ಪ್ರಕಾರ, ಇಬ್ಬರೂ ಮೊದಲು ಮುಂಬೈನಲ್ಲಿ ಭೇಟಿಯಾದರು. ಕ್ರಮೇಣ, ಅವರ ಸ್ನೇಹ ಸಂಬಂಧಕ್ಕೆ ತಿರುಗಿತು ಮತ್ತು ಎರಡೂ ಕುಟುಂಬಗಳು ಮದುವೆಗೆ ಅನುಮೋದನೆ ನೀಡಿದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಇಸ್ರೇಲ್-ಇರಾನ್ ಯುದ್ಧ, ಜಾಗತಿಕ ಅನಿಶ್ಚಿತತೆ ನಡುವೆಯೂ ಭಾರತಕ್ಕಿಲ್ಲ ಇಂಧನ ಆತಂಕ: ಈ ಅಂಕಿಅಂಶಗಳೇ ಸಾಕ್ಷಿ

ನವದೆಹಲಿ, ಮಾರ್ಚ್ 7: ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿದ್ದರೂ ಭಾರತದಲ್ಲಿ ಇಂಧನ ವಿಚಾರದಲ್ಲಿ ಯಾವುದೇ ಸಮಸ್ಯೆ ಎದುರಾಗದು. ಭಾರತ ಸದ್ಯ ಇಂಧನ ವಿಚಾರದಲ್ಲಿ ಭದ್ರವಾಗಿದೆ ಎಂಬುದು ಕೇಂದ್ರ ಸರ್ಕಾರದ ಅಧೀನದ ‘ಪೆಟ್ರೋಲಿಯಂ ಪ್ಲಾನಿಂಗ್ ಆ್ಯಂಡ್ ಅನಾಲಿಸಿಸ್ ಸೆಲ್ (PPAC)’ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ. ಮಧ್ಯಪ್ರಾಚ್ಯದ ಉದ್ವಿಗ್ನತೆ, ಸಮುದ್ರ ಮಾರ್ಗಗಳ ಅಡಚಣೆಗಳು ಮತ್ತು ಜಾಗತಿಕ ಬೆಲೆ ಏರಿಳಿತಗಳ ನಡುವೆಯೂ ಭಾರತದಲ್ಲಿ ಇಂಧನ ಪೂರೈಕೆ ಸ್ಥಿರವಾಗಿರುವುದಕ್ಕೆ ಕಳೆದ ದಶಕದಲ್ಲಿ ರೂಪಿಸಿದ ದೀರ್ಘಕಾಲಿಕ ನೀತಿಗಳೇ ಪ್ರಮುಖ ಕಾರಣವೆಂದು ಪಿಪಿಎಸಿ ಅಭಿಪ್ರಾಯಪಟ್ಟಿದೆ.

ದೇಶದಲ್ಲೆಷ್ಟಿದೆ ಕಚ್ಚಾ ತೈಲ, ಪೆಟ್ರೋಲಿಯಂ ಸಂಗ್ರಹ?

ದೇಶದಲ್ಲಿ ಕಚ್ಚಾ ತೈಲ ಮತ್ತು ಸಂಸ್ಕರಿತ ಪೆಟ್ರೋಲಿಯಂ ಉತ್ಪನ್ನಗಳ ಒಟ್ಟು ಸಂಗ್ರಹವು 250 ಮಿಲಿಯನ್ ಬ್ಯಾರೆಲ್‌ಗಳಿಗಿಂತ ಹೆಚ್ಚು, ಅಂದರೆ ಸುಮಾರು 4,000 ಕೋಟಿ ಲೀಟರ್ ಆಗಿದೆ. ಇದು ಸುಮಾರು 7 ರಿಂದ 8 ವಾರಗಳವರೆಗೆ ದೇಶದ ಇಂಧನ ಅವಶ್ಯಕತೆಗಳನ್ನು ಪೂರೈಸಲು ಸಾಕಾಗುವಷ್ಟು ಸಂಗ್ರಹವಾಗಿದೆ ಎಂದು ಪಿಪಿಎಸಿ ವರದಿ ತಿಳಿಸಿದೆ.

ಇದೇ ವೇಳೆ, ಭಾರತವು ವಿಶ್ವದಲ್ಲೇ ನಾಲ್ಕನೇ ಅತಿ ದೊಡ್ಡ ತೈಲ ಶುದ್ಧೀಕರಣ ಸಾಮರ್ಥ್ಯ ಹೊಂದಿರುವ ದೇಶವಾಗಿದ್ದು, ವರ್ಷಕ್ಕೆ 258 ಮಿಲಿಯನ್ ಮೆಟ್ರಿಕ್ ಟನ್ ಸಾಮರ್ಥ್ಯ ಹೊಂದಿದೆ. ದೇಶೀಯ ಬಳಕೆ 210–230 ಮಿಲಿಯನ್ ಮೆಟ್ರಿಕ್ ಟನ್ ಇರುವುದರಿಂದ ಶುದ್ಧೀಕರಣ ಸಾಮರ್ಥ್ಯವು ದೇಶದ ಅವಶ್ಯಕತೆಯಿಗಿಂತಲೂ ಹೆಚ್ಚಾಗಿದೆ.

ಹಾರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ಅವಲಂಬನೆ ಇಲ್ಲ

ಭಾರತ ತನ್ನ ಕಚ್ಚಾ ತೈಲ ಆಮದು ಮೂಲಗಳನ್ನು ಕಳೆದ ಕೆಲವು ವರ್ಷಗಳಲ್ಲಿ ಬಹಳವಾಗಿ ವಿಸ್ತರಿಸಿದೆ. ಹಿಂದೆ ಸುಮಾರು 27 ದೇಶಗಳಿಂದ ತೈಲ ಖರೀದಿಸಲಾಗುತ್ತಿದ್ದರೆ, ಈಗ 40 ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಕಾರಣದಿಂದ ಹಾರ್ಮುಜ್ ಜಲಸಂಧಿಯ ಮೇಲೆ ಸಂಪೂರ್ಣ ಅವಲಂಬನೆ ಇಲ್ಲ.

ಒಟ್ಟು ಕಚ್ಚಾ ತೈಲ ಆಮದುಗಳಲ್ಲಿ ಕೇವಲ ಸುಮಾರು ಶೇ 40 ರಷ್ಟು ಹಾರ್ಮುಜ್ ಮಾರ್ಗದ ಮೂಲಕ ಬರುತ್ತದೆ. ಉಳಿದ ಶೇ 60 ಇತರ ಮಾರ್ಗಗಳಿಂದ ಬರುತ್ತಿರುವುದರಿಂದ ಯಾವುದೇ ಒಂದು ಮಾರ್ಗದಲ್ಲಿ ಅಡಚಣೆ ಉಂಟಾದರೂ ದೇಶದಲ್ಲಿ ಇಂಧನ ಕೊರತೆ ಉಂಟಾಗುವ ಸಾಧ್ಯತೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯೂ ಭಾರತದಲ್ಲೇ ಕಡಿಮೆ

ಜಾಗತಿಕ ಮಟ್ಟದಲ್ಲಿ ಇಂಧನ ಬೆಲೆಗಳು ಕಳೆದ ನಾಲ್ಕು ವರ್ಷಗಳಲ್ಲಿ ಗಣನೀಯವಾಗಿ ಏರಿಕೆಯಾಗಿವೆ. ಉದಾಹರಣೆಗೆ ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ ಸುಮಾರು ಶೇ 55 ರಷ್ಟು ಏರಿಕೆಯಾಗಿದೆ. ಜರ್ಮನಿಯಲ್ಲಿ ಶೇ 21 ಹಾಗೂ ಫ್ರಾನ್ಸ್‌ನಲ್ಲಿ ಶೇ 19 ಏರಿಕೆಯಾಗಿದೆ. ಆದರೆ ಭಾರತದಲ್ಲಿ ಇದೇ ಅವಧಿಯಲ್ಲಿ ಪೆಟ್ರೋಲ್ ಬೆಲೆ ಶೇ 0.67 ಇಳಿಕೆಯಾಗಿದೆ ಮತ್ತು ಡೀಸೆಲ್ ಬೆಲೆ ಸುಮಾರು 1.15% ಮಾತ್ರ ಏರಿಕೆಯಾಗಿದೆ. ಇದು ಇಂಧನ ಬೆಲೆ ಸ್ಥಿರತೆ ಕಾಯ್ದುಕೊಳ್ಳುವಲ್ಲಿ ಭಾರತದ ನೀತಿ ಪರಿಣಾಮಕಾರಿಯಾಗಿದೆ ಎಂಬುದನ್ನು ತೋರಿಸುತ್ತದೆ.

ಎಥೆನಾಲ್ ಮಿಶ್ರಣದಿಂದ ತೈಲ ಅವಲಂಬನೆ ಕಡಿಮೆ

ಭಾರತದಲ್ಲಿ ಶೇ 20 ಎಥೆನಾಲ್ ಮಿಶ್ರಣ ಕಾರ್ಯಕ್ರಮವು ವರ್ಷಕ್ಕೆ ಸುಮಾರು 6 ಮಿಲಿಯನ್ ಟನ್ ಕಚ್ಚಾ ತೈಲ ಬಳಕೆಯನ್ನು ಕಡಿಮೆ ಮಾಡುತ್ತಿದೆ. ಇದು ಆಮದು ಅವಲಂಬನೆಯನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ.

ನೆರೆಯ ದೇಶಗಳಿಗಿಂತ ಕಡಿಮೆ ಎಲ್‌ಪಿಜಿ ಬೆಲೆ

ದೇಶದಲ್ಲಿ ಎಲ್‌ಪಿಜಿ ಬೆಲೆಗಳು ಸಹ ನೆರೆಯ ಹಲವಾರು ರಾಷ್ಟ್ರಗಳಿಗಿಂತ ಕಡಿಮೆ ಇವೆ. ಉದಾಹರಣೆಗೆ, ಭಾರತದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ 14.2 ಕೆಜಿ ಸಿಲಿಂಡರ್ ಬೆಲೆ ಸುಮಾರು 553 ರೂ. ಆಗಿದ್ದರೆ, ಪಾಕಿಸ್ತಾನದಲ್ಲಿ 1,054 ರೂ, ಶ್ರೀಲಂಕಾದಲ್ಲಿ ₹1,239 ಮತ್ತು ನೇಪಾಳದಲ್ಲಿ 1,195 ರೂ. ಇದೆ ಎಂದು ಪಿಪಿಎಸಿ ವರದಿ ತಿಳಿಸಿದೆ.

ಇದನ್ನೂ ಓದಿ: ಇಂಧನಕ್ಕೆ ಯಾವ ತೊಂದರೆ ಇಲ್ಲ, ಸಾಕಷ್ಟು ದಾಸ್ತಾನು ಇದೆ; ದಿನವೂ ಭರಿಸುತ್ತಿದ್ದೇವೆ: ಸರ್ಕಾರದ ಮೂಲಗಳು

ಒಟ್ಟಾರೆ, ಜಾಗತಿಕ ಅನಿಶ್ಚಿತತೆ ನಡುವೆಯೂ ಭಾರತ ತನ್ನ ಇಂಧನ ವ್ಯವಸ್ಥೆಯನ್ನು ಬಲಪಡಿಸಿಕೊಂಡಿದ್ದು, ದೀರ್ಘಕಾಲಿಕ ನೀತಿಗಳ ಪರಿಣಾಮವಾಗಿ ದೇಶದಲ್ಲಿ ಇಂಧನ ಪೂರೈಕೆ ಮತ್ತು ಬೆಲೆ ಸ್ಥಿರತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಿದೆ ಎಂಬುದು ವರದಿಯಿಂದ ದೃಢಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಇರಾನ್ ಜತೆಗೂಡಿ ಟ್ರಂಪ್, ಅಮೆರಿಕ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿತ್ತಾ ಪಾಕ್? ನ್ಯೂಯಾರ್ಕ್ ಕೋರ್ಟ್ ಮಹತ್ವದ ಮಾಹಿತಿ ಬಯಲು

ಬ್ರೂಕ್ಲಿನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇರಿದಂತೆ ಅಮೆರಿಕದ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ, ಪಾಕಿಸ್ತಾನಿ ಪ್ರಜೆ ಆಸಿಫ್ ರಾಜಾ ಮರ್ಚೆಂಟ್ (47) ದೋಷಿ ಎಂದು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯ ತೀರ್ಪು ನೀಡಿದೆ. 2020ರಲ್ಲಿ ಅಮೆರಿಕ ನಡೆಸಿದ ಡ್ರೋನ್ ದಾಳಿಯಲ್ಲಿ ಹತ್ಯೆಯಾದ ಇರಾನ್‌ನ ಕಮಾಂಡರ್ ಖಾಸೆಮ್ ಸೊಲೈಮಾನಿಯ ಸಾವಿಗೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿತ್ತು ಎಂದು ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ.

ಗುರಿಯಲ್ಲಿದ್ದ ಪ್ರಮುಖ ನಾಯಕರು:

ವಿಚಾರಣೆಯ ಸಂದರ್ಭದಲ್ಲಿ ಮರ್ಚೆಂಟ್, ಟೆಹ್ರಾನ್‌ನಲ್ಲಿರುವ ತನ್ನ ಕುಟುಂಬವನ್ನು ಇರಾನಿನ ಕ್ರಾಂತಿಕಾರಿ ಪಡೆಗಳಿಂದ ರಕ್ಷಿಸಿಕೊಳ್ಳಲು ಅನಿವಾರ್ಯವಾಗಿ ಈ ಸಂಚಿನಲ್ಲಿ ಭಾಗಿಯಾಗಿದ್ದಾಗಿ ಹೇಳಿದ್ದಾನೆ. ಇದಲ್ಲದೇ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾನೆ. ತನಗೆ ನೇರವಾಗಿ ಯಾರನ್ನೂ ಕೊಲ್ಲುವ ಆದೇಶ ಇರಲಿಲ್ಲವಾದರೂ, ಇರಾನಿನ ಸಂಪರ್ಕಗಳು ಮೂವರು ಪ್ರಮುಖ ವ್ಯಕ್ತಿಗಳನ್ನು ಅಂದರೆ ಡೊನಾಲ್ಡ್ ಟ್ರಂಪ್, ಜೋ ಬಿಡೆನ್ ಮತ್ತು ನಿಕ್ಕಿ ಹ್ಯಾಲಿ ಹತ್ಯೆ ಮಾಡುವಂತೆ ಸೂಚಿಸಿದ್ದರು ಎಂದು ಆತ ತಿಳಿಸಿದ್ದಾನೆ. ಈ ಪಿತೂರಿಯು ಇರಾನ್ ಆಡಳಿತದ ತಂತ್ರಗಾರಿಕೆಯ ಭಾಗವಾಗಿದೆ ಎಂದು ಅಮೆರಿಕದ ಅಧಿಕಾರಿಗಳು ಬಣ್ಣಿಸಿದ್ದಾರೆ.

ಆಸಿಫ್ ರಾಜಾ ಮರ್ಚೆಂಟ್ ಯಾರು?

ಆಸಿಫ್ ರಾಜಾ ಮರ್ಚೆಂಟ್ ಪಾಕಿಸ್ತಾನದ ಉದ್ಯಮಿಯಾಗಿದ್ದು, ಇರಾನ್‌ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಎಂದು ಅಮೆರಿಕದ ತನಿಖಾ ಸಂಸ್ಥೆಗಳು ಮತ್ತು ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ. 2024ರ ಜುಲೈ 12ರಂದು ಅಮೆರಿಕದಿಂದ ಪಲಾಯನ ಮಾಡಲು ಯತ್ನಿಸುತ್ತಿದ್ದಾಗ ಈತನನ್ನು ಅಮೆರಿಕದ ಅಧಿಕಾರಿಗಳು ಬಂಧಿಸಿದ್ದರು. ನಂತರ ಬ್ರೂಕ್ಲಿನ್‌ನ ಫೆಡರಲ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಅಂತರರಾಷ್ಟ್ರೀಯ ಭಯೋತ್ಪಾದನೆ ಮತ್ತು ಹಣಕ್ಕಾಗಿ ಕೊಲೆ ಸಂಚು ರೂಪಿಸಿದ ಆರೋಪಗಳ ಮೇಲೆ ಈತ ದೋಷಿ ಎಂದು ಸಾಬೀತಾಗಿದೆ.

ಇದನ್ನೂ ಓದಿ: ಇರಾನ್ ಹಾರ್ಮುಜ್ ಜಲಸಂಧಿ ಬಂದ್: ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ!

ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವೆ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಇತ್ತೀಚೆಗಷ್ಟೇ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿರುವ ಬೆನ್ನಲ್ಲೇ ಈ ತೀರ್ಪು ಹೊರಬಿದ್ದಿರುವುದು ಭಾರಿ ಸಂಚಲನ ಮೂಡಿಸಿದೆ. ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಹೊತ್ತಿನಲ್ಲೇ ಈ ಪ್ರಕರಣದಲ್ಲಿ ತೀರ್ಪು ಬಂದಿರುವುದು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

ವಿಜಯ್-ರಶ್ಮಿಕಾ ಒಂದಾಗಲು ಕಾರಣವಾಯ್ತು ಕನ್ನಡದ ಆ ನಟಿ ತೆಗೆದುಕೊಂಡ ನಿರ್ಧಾರ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ (Vijay Devarakonda) ವಿವಾಹ ಆಗಿದ್ದಾರೆ. ಈ ಮದುವೆ ಸಾಕಷ್ಟು ಅದ್ದೂರಿಯಾಗಿ ನಡೆಯಿತು. ರಶ್ಮಿಕಾ ಹಾಗೂ ವಿಜಯ್ ಜೋಡಿ ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಇವರು ಮೊದಲು ನಟಿಸಿದ್ದು, ‘ಗೀತ ಗೋವಿಂದಂ’ ಚಿತ್ರದಲ್ಲಿ. ಇವರಿಬ್ಬರು ಒಂದಾಗಲು ಕನ್ನಡದ ನಟಿಯೊಬ್ಬರು ಕಾರಣ ಎಂಬ ಮಾಹಿತಿ ರಿವೀಲ್ ಆಗಿದೆ. ಈ ವಿಷಯ ಇತ್ತೀಚೆಗೆ ರಿವೀಲ್ ಆಗಿದೆ.

‘ಗೀತ ಗೋವಿಂದಂ’ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಕೆಮಿಸ್ಟ್ರಿ ಸಾಕಷ್ಟು ಗಮನ ಸೆಳೆಯಿತು. ರಶ್ಮಿಕಾ ಮಂದಣ್ಣ ಪಾತ್ರವೇ ಸಿನಿಮಾದಲ್ಲಿ ಹೈಲೈಟ್. ಚಿತ್ರ ಸೂಪರ್ ಹಿಟ್ ಆಗಲು ಅವರು ಕೂಡ ಕಾರಣ. ಇವರ ಮಧ್ಯೆ ಗಾಢ ಆಪ್ತತೆ ಬೆಳೆಯಲು ‘ಗೀತ ಗೋವಿಂದಂ’ ಕಾರಣ ಆಯಿತು ಎಂಬ ಮಾತುಗಳು ಇವೆ. ಒಂದೊಮ್ಮೆ ಕನ್ನಡದ ಆ ನಟಿ ಈ ಚಿತ್ರ ಒಪ್ಪಿ ನಟಿಸಿದ್ದರೆ ವಿಜಯ್ ಹಾಗೂ ರಶ್ಮಿಕಾ ಮಧ್ಯೆ ಇಷ್ಟು ಉತ್ತಮ ಕೆಮಿಸ್ಟ್ರಿ ಬೆಳೆಯುತ್ತಲೇ ಇರಲಿಲ್ಲವೇನೋ.

ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅರ್ಜುನ್ ಅವರಿಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಐಶ್ವರ್ಯಾ ಸರ್ಜಾ ಅವರಿಗೆ ‘ಗೀತ ಗೋವಿಂದಂ’ ಸಿನಿಮಾದ ಆಫರ್ ಹೋಗಿತ್ತಂತೆ.ಆದರೆ, ಈ ಆಫರ್​​ನ ಅವರು ನಿರಾಕರಿಸಿದರು. ಒಂದೊಮ್ಮೆ ಐಶ್ವರ್ಯಾ ಸಿನಿಮಾದಲ್ಲಿ ನಟಿಸಿದ್ದರೆ ವಿಜಯ್ ಹಾಗೂ ರಶ್ಮಿಕಾ ಭೇಟಿ ಅಷ್ಟು ಬೇಗ ಆಗುತ್ತಿರಲಿಲ್ಲ. ಮುಂದೆ ಭೇಟಿ ಆಗಿದ್ದರೂ ಇಬ್ಬರ ಮಧ್ಯೆ ಇಷ್ಟೊಳ್ಳೆಯ ಕೆಮಿಸ್ಟ್ರಿ ಬೆಳೆಯುತ್ತಿತ್ತು ಎಂದು ಹೇಳಲು ಸಾಧ್ಯವಿರಲಿಲ್ಲ.

‘ಗೀತ ಗೋವಿಂದಂ ಆಫರ್ ನನಗೆ ಬಂದಿತ್ತು. ನನ್ನ ಮೊದಲ ಸಿನಿಮಾ ಸೆಟ್ಟೇರುವ ಮೊದಲೇ ಈ ಚಿತ್ರದ ಆಫರ್ ಬಂದಿತ್ತು. ಸಾಕಷ್ಟು ನಟಿಯರಿಗೆ ಈ ಸಿನಿಮಾ ಆಫರ್ ಕೊಡಲಾಗಿತ್ತು. ಆದರೆ, ಸಿನಿಮಾ ಸೂಪರ್ ಹಿಟ್ ಆಯಿತು. ನನಗೆ ಆಫರ್ ಬಂದು, ಅದನ್ನು ನಟಿಸಲಾಗದೆ ಉಳಿದ ಅನೇಕ ಸಿನಿಮಾಗಳು ಸೂಪರ್ ಹಿಟ್ ಆದ ಉದಾಹರಣೆ ಇದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಶ್ಮಿಕಾ-ವಿಜಯ್ ದೇವರಕೊಂಡ ವಿವಾಹಕ್ಕೆ ಅಂತಿಮವಾಗಿ ಖರ್ಚಾಗಿದ್ದೆಷ್ಟು?

ಪರಶುರಾಮ್ ಪೆಟ್ಲಾ ನಿರ್ದೇಶನದ ‘ಗೀತ ಗೋವಿಂದಂ’ ಸಿನಿಮಾ 2018ರಲ್ಲಿ ರಿಲೀಸ್ ಆಯಿತು. 8 ವರ್ಷಗಳ ಹಿಂದೆ ರಿಲೀಸ್ ಆದ ಈ ಚಿತ್ರ ರಶ್ಮಿಕಾ ವೃತ್ತಿ ಜೀವನಕ್ಕೆ ಅತಿ ದೊಡ್ಡ ಗೆಲುವು ತಂದುಕೊಟ್ಟಿತು. ಈ ಸಿನಿಮಾ ರಶ್ಮಿಕಾಗೆ ಸಿಗೋದಕ್ಕೂ ಮೊದಲು ಲಾವಣ್ಯ ತ್ರಿಪಾಠಿ, ರಾಶಿ ಖನ್ನಾ ಹಾಗೂ ಅನು ಎಮ್ಯಾನ್ಯುವೆಲ್​​ಗೂ ಹೋಗಿತ್ತು ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Tomato price down: ಟೊಮ್ಯೊಟೋ ಮಾರ್ಕೆಟ್​ನಲ್ಲಿ ಬೆಲೆ ತೀವ್ರ ಕುಸಿತ! ರೈತರು ಕಂಗಾಲು

ಚಿಕ್ಕಬಳ್ಳಾಪುರ, ಮಾರ್ಚ್​ 07: ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Source link

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು; 200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್!

ಬೆಂಗಳೂರು, ಮಾರ್ಚ್​ 07: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ (Illegal Immigrants) ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ.

ಒಂದೇ ದಿನದಲ್ಲಿ ನೂರಾರು ವಿದೇಶಿ ಪ್ರಜೆಗಳ ಪತ್ತೆ

ಪೊಲೀಸರು ಹೇಳುವಂತೆ ನಗರದಲ್ಲಿ ಒಟ್ಟು 200ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಗುರುತಿಸಲಾಗಿದ್ದು, ನಿನ್ನೆ ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗಿದೆ. ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ತಂಗಿದ್ದ ಈ ವಲಸಿಗರು ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಹೆಚ್ಚಿನವರು ಬಾಂಗ್ಲಾದೇಶ ಮೂಲದವರಾಗಿದ್ದು, ಆಫ್ರಿಕಾ ಸೇರಿದಂತೆ ಇನ್ನೂ ಕೆಲವು ದೇಶಗಳಿಂದ ಬಂದವರೂ ಪತ್ತೆಯಾಗಿದ್ದಾರೆ.

ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಕಾರ್ಯಾಚರಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ FRRO ಅಧಿಕಾರಿಗಳು ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ.

ಇದನ್ನೂ ಓದಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರ ಭರ್ಜರಿ ಬೇಟೆ, ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯ ವಿಚಾರಣೆ

ತನಿಖೆ ವೇಳೆ ಸಿಕ್ತು ದಾಖಲೆ

ಪೊಲೀಸರು ನಡೆಸಿದ ಪರಿಶೀಲನೆ ವೇಳೆ ಕೆಲವರ ಬಳಿ ಆಧಾರ್ ಕಾರ್ಡ್ ಸೇರಿದಂತೆ ಸ್ಥಳೀಯ ದಾಖಲೆಗಳು ಕೂಡ ಪತ್ತೆಯಾಗಿವೆ. ಅವುಗಳ ನೈಜತೆ ಕುರಿತು ಪರಿಶೀಲನೆ ನಡೆಯುತ್ತಿದೆ. ಪತ್ತೆಯಾದ ವಿದೇಶಿ ಪ್ರಜೆಗಳ ವಿವರಗಳನ್ನು ಸಂಬಂಧಿತ ದೇಶಗಳ ಅಧಿಕಾರಿಗಳಿಗೆ ರವಾನಿಸಲಾಗುತ್ತಿದ್ದು, ಅವರ ಗುರುತು ಮತ್ತು ದಾಖಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಈ ಹಿಂದೆ ಪೊಲೀಸ್ ಆಯುಕ್ತರ ಸೂಚನೆಯಂತೆ ವಿವಿಧ ವಿಭಾಗಗಳ ಪೊಲೀಸರು ಅನುಮಾನಾಸ್ಪದ ಪ್ರದೇಶಗಳಲ್ಲಿ ತಲಾಶ್ ನಡೆಸಿ ದಾಖಲೆಗಳ ಪರಿಶೀಲನೆ ವೇಳೆ ಫೆಬ್ರವರಿ 26ರ ಒಂದೇ ದಿನ ಸುಮಾರು 2,000ಕ್ಕೂ ಹೆಚ್ಚು ವಿದೇಶಿಗರು ಪತ್ತೆಯಾಗಿದ್ದರು. ಇದರಲ್ಲಿ ಬಹುತೇಕರು ಸರಿಯಾದ ದಾಖಲೆಗಳಿಲ್ಲದೆ ಅಥವಾ ವೀಸಾ ಅವಧಿ ಮೀರಿಸಿ ನಗರದಲ್ಲಿ ವಾಸಿಸುತ್ತಿರುವುದು ಎಂದು ತಿಳಿದು ಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಎಲ್​ಪಿಜಿ ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್​ ಮಾಲೀಕರಲ್ಲಿ ಆತಂಕ, ಗ್ರಾಹಕರಿಗೆ ತಿಂಡಿಗಳ ಬೆಲೆ ಏರಿಕೆ ಟೆನ್ಶನ್

ಮೈಸೂರು, ಮಾರ್ಚ್ 7: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪ್ರತಿಕೂಲ ಪರಿಣಾಮ ಭಾರತದ ಮೇಲೆ ಬೀರಲು ಪ್ರಾರಂಭವಾಗಿದೆ. ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ವಿಶೇಷವಾಗಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆ 115 ರೂಪಾಯಿ ಹೆಚ್ಚಳವಾಗಿದೆ. ಈ ಬೆಲೆ ಏರಿಕೆ ಮತ್ತು ಸಿಲಿಂಡರ್ ಪೂರೈಕೆಯಲ್ಲಿನ ವ್ಯತ್ಯಯ ಮೈಸೂರಿನ ಹೋಟೆಲ್ ಉದ್ಯಮಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ ದಿಢೀರ್ ಹೆಚ್ಚಳವಾಗಿದ್ದು, ಜೊತೆಗೆ ಅಗತ್ಯಕ್ಕೆ ತಕ್ಕಂತೆ ಪೂರೈಕೆ ಸಹ ಆಗುತ್ತಿಲ್ಲ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೆ ಹೇಳಿದ ತಕ್ಷಣ ಸಿಗುತ್ತಿದ್ದ ಸಿಲಿಂಡರ್‌ಗಳು ಈಗ ವಿಳಂಬವಾಗಿ ತಲುಪುತ್ತಿವೆ. ಯುದ್ಧದ ಪರಿಸ್ಥಿತಿ ಮತ್ತು ಪೂರೈಕೆ ಕೊರತೆಯನ್ನೇ ಇದಕ್ಕೆ ಕಾರಣವಾಗಿ ನೀಡಲಾಗುತ್ತಿದೆ. ಮೈಸೂರಿನಂತಹ ನಗರದಲ್ಲಿ ಹೋಟೆಲ್ ಉದ್ಯಮಕ್ಕೆ ದಿನಕ್ಕೆ 20-25 ಸಾವಿರ ಸಿಲಿಂಡರ್‌ಗಳು ಬೇಕಾಗುತ್ತವೆ. ಗ್ಯಾಸ್ ಪೂರೈಕೆಯಲ್ಲಿನ ವ್ಯತ್ಯಾಸದಿಂದ ಉದ್ಯಮದ ಮೇಲೆ ಅವಲಂಬಿತವಾಗಿರುವ ಲಕ್ಷಾಂತರ ಜನರ ಬದುಕು ಅನಿಶ್ಚಿತತೆಗೆ ಒಳಗಾಗಿದೆ.

ಮತ್ತೊಂದೆಡೆ, ಪದೇಪದೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಹೋಟೆಲ್​ಗಳಲ್ಲಿ ತಿಂಡಿಗಳ ಬೆಲೆ ಏರಿಕೆಯಾಗುವ ಆತಂಕವೂ ಎದುರಾಗಿದೆ. ಒಂದು ವೇಳೆ ಹೀಗಾದರೆ ಗ್ರಾಹಕರ ಜೇಬಿಗೂ ಹೊರೆಯಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಾಮರಾಜನಗರ ಅಣ್ಣೂರುಕೇರಿಯಲ್ಲಿ ಮಾರಿ ಹಬ್ಬದ ವೇಳೆ 100ಕ್ಕೂ ಹೆಚ್ಚು ಕುರಿಗಳ ಬಲಿ: ರಕ್ತ ಹೀರಿದ ಅರ್ಚಕ, ಭಯಾನಕ ವಿಡಿಯೋ ವೈರಲ್

ಚಾಮರಾಜನಗರ, ಮಾರ್ಚ್ 7: ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಅಣ್ಣೂರುಕೇರಿ ಗ್ರಾಮದಲ್ಲಿ ಮಾರಿ ಹಬ್ಬದ ವೇಳೆ ವಿಚಿತ್ರ ಹಾಗೂ ಭಯಾನಕ ಆಚರಣೆ ನಡೆದಿರುವುದು ಬೆಳಕಿಗೆ ಬಂದಿದೆ. ದೇವಿಯ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರು ಹರಕೆ ತೀರಿಸುವ ಸಲುವಾಗಿ 100ಕ್ಕೂ ಹೆಚ್ಚು ಕುರಿಗಳನ್ನು ಬಲಿ ನೀಡಿದ್ದಾರೆ. ಗ್ರಾಮದಲ್ಲಿರುವ ದೊಡ್ಡಮ್ಮ ತಾಯಿ ದೇವಿಯ ಮಾರಿ ಹಬ್ಬದ ಅಂಗವಾಗಿ ಈ ಆಚರಣೆ ನಡೆಯುತ್ತದೆ ಎಂದು ತಿಳಿದುಬಂದಿದೆ. ಹಬ್ಬದ ಸಂದರ್ಭದಲ್ಲಿ ಹರಕೆ ಹೊತ್ತಿರುವ ಗ್ರಾಮಸ್ಥರು ತಮ್ಮ ಕುರಿಗಳನ್ನು ಬಲಿಯಾಗಿ ಅರ್ಪಿಸುತ್ತಾರೆ. ಕುರಿಗಳ ಕತ್ತು ಸೀಳಿ ಹರಿಯುವ ರಕ್ತವನ್ನು ಅರ್ಚಕ ಕುಡಿಯುವ ದೃಶ್ಯಗಳು ಕೂಡ ಕಂಡುಬಂದಿವೆ.

ಕುರಿಗಳ ಕತ್ತು ಸೀಳಿ ಹೊರಬರುವ ರಕ್ತವನ್ನು ಅರ್ಚಕ ಮಾದಶೆಟ್ಟಿ ಎನ್ನುವವರು ನೇರವಾಗಿ ಹೀರಿಕೊಳ್ಳುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಪ್ರತಿವರ್ಷ ಮಾರಿ ಹಬ್ಬದ ಸಂದರ್ಭದಲ್ಲಿ ಇದೇ ರೀತಿಯ ಆಚರಣೆ ನಡೆಯುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯ ಭಯಾನಕ ವಿಡಿಯೋ ತುಣುಕಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಗ್ರಾಮದಲ್ಲಿ ಪೀಳಿಗೆಯಿಂದಲೂ ನಡೆಯುತ್ತಿರುವ ಈ ಆಚರಣೆ ಬಗ್ಗೆ ಕೆಲವರು ಆಶ್ಚರ್ಯ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಇದನ್ನು ದೇವಿಯ ಆರಾಧನೆಯ ಭಾಗವೆಂದು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಗನ್ನಾಥನ ದರ್ಶನ ಪಡೆದ ನಾಗ ಚೈತನ್ಯ-ಶೋಭಿತಾ ದಂಪತಿ

ಅಕ್ಕಿನೇನಿ ನಾಗ ಚೈತನ್ಯ (Naga Chaitanya) ಹಾಗೂ ಅವರ ಪತ್ನಿ ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ನಾಗ ಚೈತನ್ಯ ಅವರು ‘ಯೆ ಮಾಯ ಚೇಸಾವೆ’ ಚಿತ್ರದ ಮೂಲಕ ಸೂಪರ್ ಹಿಟ್ ಆದರು. ಇದಾದ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ‘ವೃಷಕರ್ಮ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಗ್ಲಿಂಪ್ಸ್ ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಕಾರ್ತಿಕ್ ದಂಡು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಚೈತನ್ಯಗೆ ನಾಯಕಿಯಾಗಿ ಮೀನಾಕ್ಷಿ ಚೌಧರಿ ನಟಿಸುತ್ತಿದ್ದಾರೆ. ಈ ಸಿನಿಮಾದ ಗ್ಲಿಂಪ್ಸ್ ರಿಲೀಸ್ ಆದ ಬಳಿಕ ನಾಗ ಚೈತನ್ಯ ಅವರು ದೇವರ ದರ್ಶನ ಪಡೆದಿದ್ದಾರೆ.

ಇತ್ತೀಚೆಗೆ, ನಾಗ ಚೈತನ್ಯ ಮತ್ತು ಶೋಭಿತಾ ಧುಲಿಪಾಲ ಅವರು ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದಂಪತಿ ಭಗವಂತನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ, ಅವರಿಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ನಾಗ ಚೈತನ್ಯ ಹಾಗೂ ಶೋಭಿತಾ 2024ರಲ್ಲಿ ವಿವಾಹ ಆದರು. ಸಮಂತಾ ಜೊತೆ ಬೇರೆ ಆದ ಬಳಿಕ ನಾಗ ಚೈತನ್ಯ ಅವರು ಒಂಟಿಯಾಗಿದ್ದರು. ಆಗ ಅವರಿಗೆ ಶೋಭಿತಾ ಪರಿಚಯ ಆಯಿತು. ಇಬ್ಬರ ಮಧ್ಯೆ ಪ್ರೀತಿ ಮೂಡಿ, ವಿವಾಹ ಆದರು. ಅತ್ತ ಸಮಂತಾ ಕೂಡ ನಿರ್ದೇಶಕ ರಾಜ್ ಜೊತೆ ಹಸೆಮಣೆ ಏರಿದರು.

ಇದನ್ನೂ ಓದಿ: ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?

ಇತ್ತೀಚೆಗೆ ಬಿಡುಗಡೆಯಾದ ‘ವೃಷಕರ್ಮ’ ಗ್ಲಿಂಪ್ಸಸ್ ವಿಷಯಕ್ಕೆ ಬಂದರೆ, ‘ಅಲೌಕಿಕ ಶಕ್ತಿ ಜಾಗೃತವಾದಾಗ, ಸೃಷ್ಟಿ ನಿಯಮ ಉಲ್ಲಂಘಿಸಿದಾಗ, ವಿಧಿ ವೃಷಕರ್ಮನನ್ನು ಆಯ್ಕೆ ಮಾಡಿದಾಗ’ ಎಂಬ ಡೈಲಾಗ್ ಗಮನ ಸೆಳೆದಿದೆ. ನಾಗ ಚೈತನ್ಯ ಅವರು ಸಿನಿಮಾ ಮೂಲಕ ಆ್ಯಕ್ಷನ್ ಮೆರೆಯಲು ರೆಡಿ ಆಗಿದ್ದಾರೆ. ಈ ಚಿತ್ರದ ಕಾರ್ಯಕ್ರಮದ ವೇಳೆ ನಾಗ ಚೈತನ್ಯ ಅವರು ಚೇರ್​​ನಿಂದ ಬಿದ್ದು ಸುದ್ದಿ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Source link

ಟಿವಿ9 ಎಕ್ಸ್​​ಪೋದಲ್ಲಿ ‘ಹಯಗ್ರೀವ’ ಯಶಸ್ಸಿನ ಬಗ್ಗೆ ಮಾತನಾಡಿದ ಧನ್ವೀರ್​-ಸಂಜನಾ

ಟಿವಿ9 ಎಕ್ಸ್​​ಪೋ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯುತ್ತಿದೆ. ಮಾರ್ಚ್ 6, 7, 8 ಮೂರು ದಿನ ಇದು ಇರಲಿದೆ. ಆಟೋಮೊಬೈಲ್, ಲೈಫ್​ಸ್ಟೈಲ್​, ಫರ್ನಿಚರ್​ಗಳ ಮಾರಾಟ ನಡೆಯಲಿದ್ದು, ಒಂದೇ ಸೂರಿನಡಿ ನೂರಾರು ಮಳಿಗೆಗಳ ಸಂಗಮ ಆಗಿದೆ. ಇದಕ್ಕೆ ನಟ ಧನ್ವೀರ್ ಹಾಗೂ ಸಂಜನಾ ಆಗಮಿಸಿದರು. ಈ ವೇಳೆ ಅವರುಗಳು ಟಿವಿ9 ಎಕ್ಸ್​​ಪೋ ಬಗ್ಗೆ ಹಾಗೂ ಹಯಗ್ರೀವ ಸಿನಿಮಾ ಯಶಸ್ಸಿನ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಸಿಗುತ್ತಿರುವ ಅದ್ಭುತ ಪ್ರತಿಕ್ರಿಯೆಗೆ ಅವರು ಖುಷಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Exit mobile version