Headlines

ಹುಬ್ಬಳ್ಳಿಗೆ ಬಾಂಗ್ಲಾ ನುಸುಳುಕೋರರ ಲಗ್ಗೆ? ರೈಲ್ವೆ ಪೊಲೀಸರ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | Illegal Bangladeshi Immigrants Reaching Hubballi; Protest Led by Pramod Muthalik

ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ, ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆImage Credit source: tv9 kannada ಹುಬ್ಬಳ್ಳಿ, ಮೇ 18: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹೆಚ್ಚು ಚರ್ಚೆಯಲ್ಲಿದಿದ್ದು ಅಕ್ರಮ ಬಾಂಗ್ಲಾ ವಲಸಿಗರ (Illegal Bangladeshi migrants) ವಿಚಾರ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಇದೀಗ ಚುನಾವಣೆ ನಂತರ ಬಾಂಗ್ಲಾ ವಲಿಸಿಗರು ಸುರಕ್ಷಿತ ಸ್ಥಳಗಳಾದ ಹುಬ್ಬಳ್ಳಿ (Hubballi) ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳತ್ತ ಮುಖ ಮಾಡುತ್ತಿದ್ದಾರಂತೆ. ಹೀಗಾಗಿ ಅಕ್ರಮ ಬಾಂಗ್ಲಾ ವಲಸಿಗರು ಇತ್ತ ಬಾರದಂತೆ ನೋಡಬೇಕು ಎನ್ನುವ ಆಗ್ರಹ…

Read More

ಶೌಚಾಲಕ್ಕೆಂದು ಬಸ್ಸಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕಂಟೇನರ್; 6 ಜನ ಸ್ಥಳದಲ್ಲೇ ಸಾವು – Kannada News | Tragic Accident on Yamuna Expressway: 6 Killed, 2 Injured in Mathura

ಮಥುರಾ(ಫೆ.07): ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗದ ಚಾಲನೆ ಮತ್ತು ನಿಯಮ ಉಲ್ಲಂಘನೆಯ ಪರಿಣಾಮವಾಗಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಶನಿವಾರ ಬೆಳಗಿನ ಜಾವ 2:45 ರ ಸುಮಾರಿಗೆ ನಡೆದಿದೆ. ಸುರಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲ್‌ಸ್ಟೋನ್ 88 ಬಳಿ ಈ ದುರಂತ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಬೆಳಗಿನ ಜಾವ ಸುಮಾರು 2:45 ರ ಸುಮಾರಿಗೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುತ್ತಿತ್ತು. ಪ್ರಯಾಣದ ಮಧ್ಯೆ ಪ್ರಯಾಣಿಕರು…

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 15th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 15: ಕಳೆದ ಎರಡು ದಿನದಲ್ಲಿ ಗ್ರಾಮ್​ಗೆ 140 ರೂ ಕಡಿಮೆಗೊಂಡಿದ್ದ ಬಂಗಾರದ ದರ (Gold Price) ಇವತ್ತು ಬುಧವಾರ 70 ರೂ ಹೆಚ್ಚಿದೆ. ಇದರ ನಡುವೆಯೂ ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ 1,700 ರೂಗಳಷ್ಟು ಕಡಿಮೆ ಆಗಿದೆ. ಮೇ ಎರಡನೇ ವಾರದಲ್ಲಿ ಆಭರಣ ಚಿನ್ನದ ಬೆಲೆ 14,850 ರೂವರೆಗೂ ಏರಿತ್ತು. ಬೆಳ್ಳಿ ಬೆಲೆ ಇವತ್ತೂ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,900 ರುಪಾಯಿ ಇದೆ….

Read More

ಲೋಕಸಭೆಯಲ್ಲಿ ‘ಜೆನ್ ಝಿ’ ಟ್ರೆಂಡ್: ಸಂಸತ್ತಿನಲ್ಲಿ ಸದ್ದು ಮಾಡಿದ ಬಾನ್ಸುರಿ ಸ್ವರಾಜ್ ಹಾಗೂ ಬಿಜೆಪಿ ನಾಯಕರ ಆಧುನಿಕ ಪದಪುಂಜಗಳು – Kannada News | Gen Z Slang Echoes in Lok Sabha as BJP MPs Add a Modern Twist to Parliament Debate

ನವದೆಹಲಿ, ಜುಲೈ 29: ಲೋಕಸಭೆಯ ಮುಂಗಾರು ಅಧಿವೇಶನದಲ್ಲಿ ನೀಟ್(NEET) ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ 2026 ಕುರಿತು ಚರ್ಚೆಯ ವೇಳೆ, ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರು ಜೆನ್​ ಝಿ ಶೈಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸಿ ಇಡೀ ಗಮನ ಸೆಳೆದಿದ್ದಾರೆ. ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಭಾಷಣದ ಮಧ್ಯೆ ಜೆನ್-ಝಿ ಭಾಷೆಯಲ್ಲಿ ಹೇಳುವುದಾದರೆ, ಈ ಸೂಕ್ತ ಕಾನೂನು ಪರಿಹಾರವನ್ನು ತರುವ ಮೂಲಕ ಮೋದಿಯವರು ಅದನ್ನು…

Read More

ಟ್ಯಾಕ್ಸ್ ಪಾವತಿಯಿಂದ ಹಿಡಿದು ದಾಖಲೆಗಳವರೆಗೆ, ಪಿತ್ರಾರ್ಜಿತ ಆಸ್ತಿ ವರ್ಗಾವಣೆಗೆ ಅಗತ್ಯವಾದವುಗಳು – Kannada News | Inheritance property and the tax rules for heirs in India

ನಿಮ್ಮ ತಂದೆ ಮತ್ತು ತಾಯಿ ನಿಧನದ ನಂತರ, ಅವರ ವಾರಸುದಾರರಾದ ನೀವು ಅವರ ಆಸ್ತಿಪಾಸ್ತಿ ಪಡೆಯಲು ಅರ್ಹರಿರುತ್ತೀರಿ. ಈ ಪಿತ್ರಾರ್ಜಿತ ಆಸ್ತಿ (Inherited property) ಹಲವರಿಗೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಮಾಡಿಕೊಳ್ಳುವ ಮುನ್ನ ಅನುಸರಿಸಬೇಕಾದ ಕೆಲ ವಿಧಾನಗಳು ಮತ್ತು ಬಾಧ್ಯತೆಗಳು ಇವೆ. ಮೃತರ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಿಂದ ಹಿಡಿದು ಆಸ್ತಿಯ ಲಾಭ ಗಳಿಕೆ ಟ್ಯಾಕ್ಸ್​ವರೆಗೂ ನೀವು ತೆಗೆದುಕೊಳ್ಳಬೇಕಾದ ಕ್ರಮಗಳ ವಿವರ ಇಲ್ಲಿದೆ. ಮೃತರ ಐಟಿ ರಿಟರ್ನ್ ಸಲ್ಲಿಕೆ ಮೃತರು ನಿಧನವಾದ ವರ್ಷಕ್ಕೆ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: cold and clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast) ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ…

Read More

Karnataka AQI Update: ರಾಜ್ಯದ ವಾಯು ಗುಣಮಟ್ಟದಲ್ಲಿ ಸುಧಾರಣೆ: ಬೆಂಗಳೂರಿನಲ್ಲಿ ಮಳೆ ತಂದ ತಂಪು, ಶಿವಮೊಗ್ಗದ ಗಾಳಿ ಅತ್ಯಂತ ಸ್ವಚ್ಛ! – Kannada News | Karnataka Air Quality Update: Bengaluru Sees AQI Improvement, Mysuru Excellent

ಬೆಂಗಳೂರು, ಮೇ.6: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಮಟ್ಟದಲ್ಲಿ ಸುಧಾರಣೆಯನ್ನು ಕಂಡಿದೆ. ಬೆಂಗಳೂರಿನಲ್ಲಿ ಮಳೆ ಹಾಗೂ ತಂಪು ವಾತಾವರಣ ಇರುವ ಕಾರಣ ಧೂಳಿನ ಮಟ್ಟ ಕಡಿಮೆ ಇರುತ್ತದೆ. ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (AQI) 96 ರಿಂದ 118 ರ ಆಸುಪಾಸಿನಲ್ಲಿ ದಾಖಲಾಗಿದೆ. ಕೆಲವೊಂದು ಕಡೆ ರಸ್ತೆ ಕಾಮಗಾರಿಗಳು ಆಗುತ್ತಿರುವ ಕಾರಣ ಹಾಗೂ ವಾಹನ ದಟಣೆ ಇರುವ ಕಾರಣ ಗಾಳಿ ಮಟ್ಟದಲ್ಲಿ ಸ್ವಲ್ಪ ಬದಲಾವಣೆ ಕಾಣಬಹುದು. ನಗರದ ಬಹುತೇಕ ಭಾಗಗಳಲ್ಲಿ AQI ಮಟ್ಟವು…

Read More

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು – Kannada News | Tiger Population Rises in Chamarajanagar: Frequent Sightings in Bandipur, BRT and MM Hills Forests Trigger Fear

ಚಾಮರಾಜನಗರ, ಡಿಸೆಂಬರ್ 24: ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ಸಂತತಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವುದು ಅರಣ್ಯ ಇಲಾಖೆ ಗಮನಕ್ಕೆ ಬಂದಿದೆ. ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್, ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಹುಲಿಗಳ ಸಂಖ್ಯೆ ಏರಿಕೆಯಾಗಿದ್ದು, ದಿನಕ್ಕೊಂದು ಕಡೆ ವ್ಯಾಘ್ರಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯ ಮೂಡಿಸುತ್ತಿವೆ. ಇತ್ತೀಚೆಗೆ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ನ ಕೆ.ಗುಡಿ ಸಮೀಪ ಬೃಹತ್ ಗಂಡು ಹುಲಿ ಪ್ರತ್ಯಕ್ಷವಾಗಿದ್ದು, ತನ್ನ ವ್ಯಾಪ್ತಿಯಲ್ಲಿ ಮತ್ತೊಂದು ಹುಲಿ ಓಡಾಟ ನಡೆಸಿದ್ದೇನೋ…

Read More

ಮಗಳ ಮದುವೆಯಲ್ಲಿ ಕನ್ಯಾದಾನ ಮಾಡುವಾಗಲೇ ಹೃದಯಾಘಾತದಿಂದ ಅಪ್ಪ ಸಾವು! – Kannada News | Father dies of heart attack during daughters Kanyadan Wedding Ritual in Buldhana

ನವದೆಹಲಿ, ಮೇ 15: ಮದುವೆ ಮನೆಯ ತುಂಬ ಸಂತೋಷದ ವಾತಾವರಣವಿತ್ತು. ಮನೆ ಮಗಳ ಮದುವೆಯಾದ್ದರಿಂದ ಕುಟುಂಬದವರೆಲ್ಲ ಸಂಭ್ರಮದಲ್ಲಿದ್ದರು. ಆದರೆ, ಕಣ್ಮುಚ್ಚಿ ಬಿಡುವಷ್ಟರಲ್ಲಿ ಆ ಮದುವೆ (Wedding) ಮನೆ ಸೂತಕದ ಮನೆಯಾಗಿಹೋಯಿತು. ಮಹಾರಾಷ್ಟ್ರದ ಸಿಂಧ್‌ಖೇಡ್ ರಾಜಾ ತಾಲ್ಲೂಕಿನ ವರ್ದಾದಿಯಲ್ಲಿ ವಧುವಿನ ಕನ್ಯಾದಾನ ಮಾಡಿದ ತಂದೆ ತಂದೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ವರ್ದಾದಿಯ ಕುರುಮದಾಸ್ ಭೂತೇಕರ್ ಅವರ ಪುತ್ರಿ ನಂದಿನಿ, ಜಲ್ನಾ ಜಿಲ್ಲೆಯ ಮಾಂಥಾದ ಪ್ರದೀಪ್ ನಾನೋಟೆ ಅವರನ್ನು ವಿವಾಹವಾದರು. ಗುರುವಾರ ಸಂಜೆ ಮುಖ್ಯ ವಿವಾಹ ಸಮಾರಂಭ ಪ್ರಾರಂಭವಾಯಿತು. ಅದ್ದೂರಿಯಾಗಿ…

Read More

ನೆಗೆಟಿವ್ ವಿಮರ್ಶೆಗೆ ತತ್ತರಿಸಿ ಹೋದ ‘ಆಲ್ಫಾ’; ಮೊದಲ ದಿನ ಹೀನಾಯ ಕಲೆಕ್ಷನ್ – Kannada News | Alpha Movie Box Office Collection: Alia Bhatt Film Tanks on Day 1 with 9 Cr

ಬಾಲಿವುಡ್‌ನ ಬಹುನಿರೀಕ್ಷಿತ, ಸ್ಟಾರ್ ನಟಿಯರಾದ ಆಲಿಯಾ ಭಟ್ ಮತ್ತು ಶಾರ್ವರಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಆಲ್ಫಾ’ ಸಿನಿಮಾ (Alpha Movie) ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ತೀವ್ರ ಹಿನ್ನಡೆ ಅನುಭವಿಸಿದೆ. ಚಿತ್ರ ಬಿಡುಗಡೆಯಾದ ಮೊದಲ ದಿನವೇ ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಅತ್ಯಂತ ಕೆಟ್ಟ ವಿಮರ್ಶೆಗಳು ಮತ್ತು ನೆಗೆಟಿವ್ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಈ ತೀವ್ರ ನೆಗೆಟಿವ್ ವಿಮರ್ಶೆಗಳ ನೇರ ಪರಿಣಾಮ ಚಿತ್ರದ ಗಳಿಕೆಯ ಮೇಲೆ ಬೀರಿದ್ದು, ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಮಕಾಡೆ ಮಲಗುವ ಸ್ಪಷ್ಟ ಸೂಚನೆಗಳು ಕಾಣಿಸುತ್ತಿವೆ. ಮೊದಲ…

Read More